Homeಮುಖಪುಟಪ್ರಧಾನಿ ಮೋದಿ ಟೀಕಿಸುವ ಪೋಸ್ಟರ್ ವಿಚಾರ: ದೆಹಲಿಯಲ್ಲಿ 100 ಎಫ್‌ಐಆರ್‌ ದಾಖಲು, 6 ಜನರ ಬಂಧನ

ಪ್ರಧಾನಿ ಮೋದಿ ಟೀಕಿಸುವ ಪೋಸ್ಟರ್ ವಿಚಾರ: ದೆಹಲಿಯಲ್ಲಿ 100 ಎಫ್‌ಐಆರ್‌ ದಾಖಲು, 6 ಜನರ ಬಂಧನ

- Advertisement -
- Advertisement -

ಪ್ರಧಾನಿ ನರೇಂದ್ರ ಮೋದಿ ಟೀಕಿಸುವ ಪೋಸ್ಟರ್‌ಗಳನ್ನು ಅಂಟಿಸಿದ ಆರು ಜನರನ್ನು ದೆಹಲಿ ಪೊಲೀಸರು ಬಂಧಿಸಿದ್ದಾರೆ. ಬಂಧಿತ ನಾಲ್ವರಲ್ಲಿ ಇಬ್ಬರು ಪ್ರಿಂಟಿಂಗ್ ಪ್ರೆಸ್‌ನವರು ಎಂದು ತಿಳಿದುಬಂದಿದೆ. ಈ ವಿಚಾರಕ್ಕೆ ಸಂಬಂಧಿಸಿದಂತೆ ದೆಹಲಿ ಪೊಲೀಸರು ಮಂಗಳವಾರ (ಮಾ.21) 100 ಪ್ರಕರಣಗಳನ್ನು ದಾಖಲಿಸಿಕೊಂಡಿದ್ದಾರೆ.

ದೆಹಲಿ ಪೊಲೀಸರು ಮಂಗಳವಾರದ ನಡೆಸಿದ ಬೃಹತ್ ಕಾರ್ಯಾಚರಣೆಯಲ್ಲಿ ನಗರದ ಹಲವು ಸ್ಥಳಗಳಿಂದ ಸುಮಾರು 2,000 ‘ಮೋದಿ ವಿರೋಧಿ’ ಪೋಸ್ಟರ್‌ಗಳನ್ನು ವಶಪಡಿಸಿಕೊಂಡಿದ್ದಾರೆ. ಈ ಪೋಸ್ಟರ್‌ಗಳಲ್ಲಿ ಹೆಚ್ಚಿನವು ‘ಮೋದಿ ಹಠಾವೋ, ದೇಶ್ ಬಚಾವೋ’ (ಮೋದಿಯನ್ನು ತೆಗೆದುಹಾಕಿ, ದೇಶವನ್ನು ಉಳಿಸಿ) ಎಂಬ ಘೋಷಣೆಗಳನ್ನು ಬರೆಯಲಾಗಿದೆ.

ಈ ಎಲ್ಲ ಪೋಸ್ಟರ್‌ಗಳು ಆಮ್ ಆದ್ಮಿ ಪಕ್ಷದ ಕಚೇರಿಗೆ ತಲುಪಿಸಲಾಗುತ್ತಿತ್ತು ಎಂದು ಹೇಳಲಾಗಿದ್ದು, ಸುಮಾರು 2,000 ಪೋಸ್ಟರ್‌ಗಳನ್ನು ದೆಹಲಿ ಪೊಲೀಸರು ವಶಪಡಿಸಿಕೊಂಡಿದ್ದಾರೆ.

ಇದನ್ನೂ ಓದಿ: ಸಂಸತ್ತಿನ ಮೊದಲ ಮಹಡಿಯಲ್ಲಿ ‘ಮೋದಾನಿ’ ಬ್ಯಾನರ್ ಪ್ರದರ್ಶನ: ಪ್ರತಿಪಕ್ಷಗಳ ವಿನೂತನ ಪ್ರತಿಭಟನೆ

ಪೊಲೀಸರು ಐಪಿ ಎಸ್ಟೇಟ್ ಪ್ರದೇಶದಲ್ಲಿ ವ್ಯಾನ್‌ವೊಂದನ್ನು ಅಡ್ಡಗಟ್ಟಿದಾಗ ಅದರಲ್ಲಿ ಮೋದಿ ವಿರೋಧಿ ಪೋಸ್ಟರ್‌ಗಳು ಕಂಡು ಬಂದಿವೆ. ಈ ಬಗ್ಗೆ ಚಾಲಕನನ್ನು ಪ್ರಶ್ನಿಸಿದಾಗ ಆತ, ಈ ಪೋಸ್ಟರ್‌ಗಳನ್ನು ಎಎಪಿ ಕೇಂದ್ರ ಕಚೇರಿಗೆ ತಲುಪಿಸುವಂತೆ ಸೂಚಿಸಲಾಗಿದೆ ಎಂದು ಪೊಲೀಸರಿಗೆ ತಿಳಿಸಿದ್ದಾರೆ.

ಹಿಂದಿನ ದಿನ ಅಂದರೆ ಸೋಮವಾರವೂ ಇದೇ ರೀತಿಯ ಸರಕನ್ನು ತಲುಪಿಸಿರುವುದಾಗಿ ಚಾಲಕ ಪೊಲೀಸರಿಗೆ ಹೇಳಿದ್ದಾನೆ.

ಪೊಲೀಸರು ಕೇಳಿದ ಪ್ರಶ್ನೆಗೆ ಬಂಧಿತ ಪ್ರಿಂಟಿಂಗ್ ಪ್ರೆಸ್‌ನ ಮಾಲೀಕರು ಉತ್ತರಿಸಿದ್ದು, ”50,000 ‘ಮೋದಿ ಹಟಾವೋ, ದೇಶ್ ಬಚಾವೋ’ ಪೋಸ್ಟರ್‌ಗಳನ್ನು ಮುದ್ರಿಸಲು ತಮಗೆ ಆದೇಶ ಬಂದಿದೆ” ಎಂದು ಅವರು ತಿಳಿಸಿದ್ದಾರೆ.

ಪ್ರಿಂಟಿಂಗ್ ಪ್ರೆಸ್ ಆಕ್ಟ್ ಮತ್ತು ಆಸ್ತಿ ವಿರೂಪಗೊಳಿಸುವ ಕಾಯ್ದೆಯ ಸೆಕ್ಷನ್‌ಗಳ ಅಡಿಯಲ್ಲಿ ಎಫ್‌ಐಆರ್‌ಗಳನ್ನು ದಾಖಲಿಸಲಾಗಿದೆ.

ಈ ಬಗ್ಗೆ ಆಮ್‌ ಆದ್ಮಿ ಪಕ್ಷದಿಂದ ಈ ವರೆಗೂ ಯಾವುದೇ ಪ್ರತಿಕ್ರಿಯೆ ಬಂದಿಲ್ಲ.

ಇತ್ತೀಚೆಗೆ ಹೈದರಾಬಾದ್‌ನಲ್ಲಿ ಬಿಆರ್‌ಎಸ್‌ ಕಾರ್ಯಕರ್ತರು ಮೋದಿ ವಿರುದ್ಧ ಪೋಸ್ಟರ್‌ ಅಂಟಿಸಿ ಪ್ರತಿಭಟನೆ ಮಾಡಿದ್ದರು. ಇಲ್ಲಿನ ಗೋಡೆಗಳ ಮೇಲೆ ‘ನರೇಂದ್ರ ಮೋದಿ ಪ್ರಜಾಪ್ರಭುತ್ವದ ಧ್ವಂಸಕ, ಬೂಟಾಟಿಕೆಯ ಪಿತಾಮಹ’ ಎಂಬ ಪೋಸ್ಟರ್‌ ಅಂಟಿಸಿ ವಿರೋಧಿಸಿದರು. ಇದರೊಂದಿಗೆ ಮೋದಿ ಸರ್ಕಾರ ಅವರ ವಿರೋಧಿಗಳ ವಿರುದ್ಧ ಇಂತಹ ಕೇಂದ್ರದ ತನಿಖಾ ಸಂಸ್ಥೆಗಳನ್ನು ಶಸ್ತ್ರವಾಗಿ ಬಳಸುತ್ತಿದೆ ಎಂದು ಪೋಸ್ಟರ್ ಮೂಲಕ ಆರೋಪ ಮಾಡಿದ್ದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇಂದ್ರದ ವಿಬಿ-ಜಿ ರಾಮ್ ಜಿಗೆ ಟಕ್ಕರ್ : ಪ. ಬಂಗಾಳದ ‘ಕರ್ಮಶ್ರೀ’ ಯೋಜನೆಗೆ ಮಹಾತ್ಮ ಗಾಂಧಿ ಹೆಸರಿಡುವುದಾಗಿ ಘೋಷಿಸಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳ ಸರ್ಕಾರದ ಉದ್ಯೋಗ ಖಾತರಿ ಯೋಜನೆ 'ಕರ್ಮಶ್ರೀ'ಯನ್ನು ಮಹಾತ್ಮ ಗಾಂಧಿ ಹೆಸರಿನಲ್ಲಿ ಮರುನಾಮಕರಣ ಮಾಡುವುದಾಗಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಗುರುವಾರ (ಡಿಸೆಂಬರ್ 18) ಘೋಷಿಸಿದ್ದಾರೆ. ನರೇಗಾ ಯೋಜನೆಯಿಂದ ಮಹಾತ್ಮಾ ಗಾಂಧಿಯವರ ಹೆಸರನ್ನು ಕೈಬಿಟ್ಟಿರುವುದಕ್ಕೆ...

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ: ಶಾಸಕ ಕುಣಿಗಲ್ ರಂಗನಾಥ್ ವಿರುದ್ಧ ಕೆ.ಎನ್. ರಾಜಣ್ಣ ವಾಗ್ದಾಳಿ

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ ಮಾಡುವುದನ್ನು ಮಾಜಿ ಸಹಕಾರಿ ಸಚಿವ ಕೆ.ಎನ್. ರಾಜಣ್ಣ ಗುರುವಾರ ಬಲವಾಗಿ ಸಮರ್ಥಿಸಿಕೊಂಡಿದ್ದಾರೆ. ಆಡಳಿತ ಪಕ್ಷದೊಳಗಿನ ಸಾರ್ವಜನಿಕ ಭಿನ್ನಾಭಿಪ್ರಾಯದ ನಡುವೆಯೂ, "ಸಂಘಗಳಿಗೆ ವಿತರಿಸಲಾದ ನಿಧಿ ಠೇವಣಿದಾರರ ಹಣ,...

ತನ್ನದೇ ಶಾಸಕರ ಅನರ್ಹತೆ ಕೋರಿ ಬಿಆರ್‌ಎಸ್‌ ಅರ್ಜಿ : ತಿರಸ್ಕರಿಸಿದ ತೆಲಂಗಾಣ ಸ್ಪೀಕರ್

ಆಡಳಿತಾರೂಢ ಕಾಂಗ್ರೆಸ್‌ಗೆ ನಿಷ್ಠೆ ಬದಲಾಯಿಸಿದ್ದಾರೆಂದು ಹೇಳಲಾದ ಹತ್ತು ಬಿಆರ್‌ಎಸ್ ಶಾಸಕರನ್ನು ಅನರ್ಹಗೊಳಿಸುವಂತೆ ಕೋರಿದ್ದ ಅರ್ಜಿಗಳ ಪೈಕಿ ಐದು ಅರ್ಜಿಗಳನ್ನು ತೆಲಂಗಾಣ ವಿಧಾನಸಭೆಯ ಸ್ಪೀಕರ್ ಗದ್ದಂ ಪ್ರಸಾದ್ ಕುಮಾರ್ ಬುಧವಾರ (ಡಿಸೆಂಬರ್ 18) ತಿರಸ್ಕರಿಸಿದ್ದಾರೆ....

ಸಾಮಾಜಿಕ ಬಹಿಷ್ಕಾರ, ದ್ವೇಷ ಭಾಷಣ ತಡೆ ವಿಧೇಯಕಗಳು ವಿಧಾನಸಭೆಯಲ್ಲಿ ಅಂಗೀಕಾರ

ಕರ್ನಾಟಕ ಸಾಮಾಜಿಕ ಬಹಿಷ್ಕಾರ (ಪ್ರತಿಬಂಧ, ನಿಷೇಧ ಮತ್ತು ಪರಿಹಾರ) ವಿಧೇಯಕ-2025 ಗುರುವಾರ (ಡಿ.18) ವಿಧಾನಸಭೆಯಲ್ಲಿ ಸರ್ವಾನುಮತದ ಅಂಗೀಕಾರಗೊಂಡಿತು. ಬೆಳಗಾವಿ ಸುವರ್ಣ ಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ವಿಧಾನಮಂಡಲ ಅಧಿವೇಶನದ ವಿಧಾನಸಭೆ ಕಲಾಪದಲ್ಲಿ ಸಮಾಜ ಕಲ್ಯಾಣ ಇಲಾಖೆ...

ಆಕ್ರಮಿತ ಪೂರ್ವ ಜೆರುಸಲೆಮ್ ವಸಾಹತು ಪ್ರದೇಶದಲ್ಲಿ 9000 ವಸತಿ ಘಟಕಗಳ ಯೋಜನೆ ಮುಂದಿಟ್ಟ ಇಸ್ರೇಲ್ 

ಆಕ್ರಮಿತ ಪೂರ್ವ ಜೆರುಸಲೆಮ್‌ನಲ್ಲಿರುವ ಕೈಬಿಟ್ಟ ಖಲಾಂಡಿಯಾ ವಿಮಾನ ನಿಲ್ದಾಣದ ಸ್ಥಳ ಬಳಿ ಅಕ್ರಮ ವಸಾಹತು ಪ್ರದೇಶದಲ್ಲಿ ಸುಮಾರು 9,000 ಹೊಸ ವಸತಿ ಘಟಕಗಳನ್ನು ನಿರ್ಮಿಸಲು ಇಸ್ರೇಲಿ ಆಕ್ರಮಿತ ಅಧಿಕಾರಿಗಳು ಯೋಜನೆಗಳನ್ನು ರೂಪಿಸಲು ಸಜ್ಜಾಗಿದ್ದಾರೆ....

ವಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಲೋಕಸಭೆಯಲ್ಲಿ ‘ವಿಬಿ-ಜಿ ರಾಮ್ ಜಿ ಮಸೂದೆ’ ಅಂಗೀಕಾರ

ಪ್ರತಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಗುರುವಾರ (ಡಿ.18) ಲೋಕಸಭೆಯಲ್ಲಿ 'ವಿಕ್ಷಿತ್ ಭಾರತ್ ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ್ ) (ವಿಬಿ-ಜಿ ರಾಮ್ ಜಿ) ಮಸೂದೆ ಅಂಗೀಕಾರಗೊಂಡಿತು. ಈ ಮಸೂದೆ 2005ರಲ್ಲಿ...

ರಾಹುಲ್ ಗಾಂಧಿ ಆಪ್ತ ಸಹಾಯಕನ ಪತ್ನಿ ಪ್ರಜ್ಞಾ ಸತವ್ ಕಾಂಗ್ರೆಸ್ ಎಂಎಲ್‌ಸಿ ಸ್ಥಾನಕ್ಕೆ ರಾಜೀನಾಮೆ; ಬಿಜೆಪಿ ಸೇರುವ ನಿರೀಕ್ಷೆ

ಕಾಂಗ್ರೆಸ್ಸಿಗ ಮತ್ತು ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿಯವರ ಆಪ್ತರಾಗಿದ್ದ ದಿವಂಗತ ರಾಜೀವ್ ಸತವ್ ಅವರ ಪತ್ನಿ ಸತವ್ ಬಿಜೆಪಿಗೆ ಸೇರುವ ನಿರೀಕ್ಷೆಯಿದೆ. ಮಹಾರಾಷ್ಟ್ರದ ಕಾಂಗ್ರೆಸ್ ನಾಯಕಿ ಪ್ರಜ್ಞಾ ಸತವ್ ಅವರು ಗುರುವಾರ...

ಭೂ ಕಬಳಿಕೆ ಆರೋಪ : ಸದನದಲ್ಲಿ ಚರ್ಚೆಗೆ ಸಿದ್ದ ಎಂದ ಸಚಿವ ಕೃಷ್ಣ ಬೈರೇಗೌಡ

"ಸದನದ ಸದಸ್ಯನಾಗಿ ನನ್ನ ಹಕ್ಕನ್ನು ಬಿಟ್ಟುಕೊಡಲು ಸಿದ್ದನಿದ್ದೇನೆ. ನನ್ನ ಬಗ್ಗೆ ಎತ್ತಿರುವ ವೈಯಕ್ತಿಕ ಆರೋಪದ ಬಗ್ಗೆ ಚರ್ಚೆಗೆ ಸಿದ್ದ" ಎಂದು ಸಚಿವ ಕೃಷ್ಣ ಬೈರೇಗೌಡ ಹೇಳಿದರು. ಗುರುವಾರ (ಡಿ.18) ವಿಧಾನಸಭೆಯ ಶೂನ್ಯ ವೇಳೆಯಲ್ಲಿ, ವಿಧಾನಪರಿಷತ್...

ಡಿಸೆಂಬರ್ 15 ರ ಪ್ರತಿಭಟನೆಯಲ್ಲಿ ಭಾಗವಹಿಸಿದ್ದಕ್ಕಾಗಿ ಜಾಮಿಯಾ ಮಿಲಿಯಾ ವಿದ್ಯಾರ್ಥಿಗಳಿಗೆ ವಿಶ್ವವಿದ್ಯಾಲಯದಿಂದ ಶೋಕಾಸ್ ನೋಟಿಸ್‌

2019 ರಲ್ಲಿ ವಿದ್ಯಾರ್ಥಿಗಳ ಮೇಲಿನ ಹಿಂಸಾಚಾರ ನಡೆದು ಆರು ವರ್ಷಗಳು ತುಂಬಿದ್ದು, ಅದರ ವಾರ್ಷಿಕ ನೆನಪಿನಲ್ಲಿ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿದ್ಯಾರ್ಥಿಗಳು ಡಿಸೆಂಬರ್ 15 ರಂದು ಕ್ಯಾಂಪಸ್ ಒಳಗೆ ದೊಡ್ಡ ಪ್ರತಿಭಟನೆ ನಡೆಸಿದ್ದರು....

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...