Homeಮುಖಪುಟಜೈಪುರ: ಹಿಂದೂಯೇತರರಿಗೆ ಮನೆಗಳನ್ನು ಮಾರಾಟ ಮಾಡದಂತೆ ಪೋಸ್ಟರ್ ಹಾಕಿದ ಜನ

ಜೈಪುರ: ಹಿಂದೂಯೇತರರಿಗೆ ಮನೆಗಳನ್ನು ಮಾರಾಟ ಮಾಡದಂತೆ ಪೋಸ್ಟರ್ ಹಾಕಿದ ಜನ

- Advertisement -
- Advertisement -

ಜೈಪುರದ ಭಟ್ಟ ಬಸ್ತಿ ಪ್ರದೇಶದ ಶಿವಾಜಿ ನಗರದಲ್ಲಿ ‘ಹಿಂದೂಯೇತರರಿಗೆ’ ಮನೆಗಳನ್ನು ಮಾರಾಟ ಮಾಡಬಾರದು ಎಂಬ ಪೋಸ್ಟರ್‌ಗಳನ್ನು ಕಿಡಿಗೇಡಿಗಳು ಅಂಟಿಸಿದ್ದು, ಹಿಂದೂಗಳ ವಲಸೆಯನ್ನು ತಡೆಯುವಂತೆ ‘ಸನಾತನಿ’ ಜನರಿಗೆ ಮನವಿ ಮಾಡುತ್ತೇವೆ ಎಂದು ಬರೆಯಲಾಗಿದೆ.

ಹಿಂದೂಯೇತರರಿಗೆ ತಮ್ಮ ಮನೆಗಳನ್ನು ಮಾರಾಟ ಮಾಡದಂತೆ ತಮ್ಮ ಪ್ರದೇಶದ ಜನರಿಗೆ ಮನವಿ ಮಾಡಲು ತಮ್ಮ ಸ್ವಂತ ಮನೆಗಳ ಮೇಲೆ ಸ್ವಇಚ್ಛೆಯಿಂದ ಪೋಸ್ಟರ್‌ಗಳನ್ನು ಅಂಟಿಸಿರುವುದಾಗಿ ಕೆಲವು ಸ್ಥಳೀಯರು ಟಿವಿ ಚಾನೆಲ್‌ಗಳಿಗೆ ತಿಳಿಸಿದ್ದಾರೆ.

ಭಟ್ಟ ಬಸ್ತಿ ಪೊಲೀಸ್ ಠಾಣೆಯ ಎಸ್‌ಎಚ್‌ಒ ಕೈಲಾಶ್ ಈ ಕುರಿತ ಬೆಳವಣಿಗೆಯನ್ನು ಖಚಿತಪಡಿಸಿದ್ದಾರೆ. ಜನರು ತಮ್ಮ ಸ್ವಂತ ಮನೆಗಳ ಮೇಲೆ ಪೋಸ್ಟರ್‌ಗಳನ್ನು ಅಂಟಿಸಿದ್ದಾರೆ ಮತ್ತು ಈ ಬಗ್ಗೆ ಯಾವುದೇ ದೂರು ದಾಖಲಾಗಿಲ್ಲ ಎಂದು ಹೇಳಿದ್ದಾರೆ.

‘ಸರ್ವ್ ಹಿಂದೂ ಸಮಾಜ’ ಹೆಸರಿನ ಪೋಸ್ಟರ್‌ನ್ನು ಹಿಂದಿಯಲ್ಲಿ ಹಾಕಲಾಗಿದ್ದು, ವಲಸೆ ನಿಲ್ಲಿಸುವಂತೆ ಸನಾತನಿಗಳಿಗೆ ಮನವಿ, ಎಲ್ಲಾ ಸನಾತನ ಸಹೋದರ ಸಹೋದರಿಯರಿಗೆ ತಮ್ಮ ಮನೆಯನ್ನು ಹಿಂದೂಯೇತರರಿಗೆ ಮಾರಾಟ ಮಾಡದಂತೆ ವಿನಂತಿ ಮಾಡುತ್ತಿದ್ದೇವೆ ಎಂದು ಬರೆಯಲಾಗಿದೆ.

ಈ ಪ್ರದೇಶದಲ್ಲಿ ಕೆಲವರು ಮನೆ ಖರೀದಿಸಿ ಇತರರಿಗೆ ತೊಂದರೆ ಕೊಡುತ್ತಿದ್ದಾರೆ.  ಈ ಪರಿಸ್ಥಿತಿಯಿಂದಾಗಿ, ನಾವು ನಮ್ಮ ಮನೆಗಳ ಹೊರಗೆ ಭಿತ್ತಿಪತ್ರಗಳನ್ನು ಅಂಟಿಸಲು ನಿರ್ಧರಿಸಿದ್ದೇವೆ, ಜನರು ತಮ್ಮ ಮನೆಗಳನ್ನು ಹಿಂದೂಯೇತರರಿಗೆ ಮಾರಾಟ ಮಾಡದಂತೆ ಮನವಿ ಮಾಡುತ್ತೇವೆ. ದಲ್ಲಾಳಿಗಳು ಆಗಾಗ್ಗೆ ನಮ್ಮ ಬಳಿಗೆ ಬರುತ್ತಾರೆ, ನಮ್ಮ ಮನೆಯನ್ನು ಮಾರಾಟ ಮಾಡಲು ನಮಗೆ ಆಸಕ್ತಿ ಇದೆಯೇ ಎಂದು ಕೇಳುತ್ತಾರೆ. ಹಲವು ಮನೆಗಳನ್ನು ಹೊರಗಿನವರಿಗೆ ಮಾರಾಟ ಮಾಡಲಾಗಿದೆ ಮತ್ತು ನಮ್ಮ ಪ್ರದೇಶದಲ್ಲಿ ವಾತಾವರಣವು ಸರಿಯಾಗಿಲ್ಲ ಎಂದು ಸ್ಥಳೀಯ ನಿವಾಸಿಯೊಬ್ಬರು ಟಿವಿ ಚಾನೆಲ್‌ಗೆ ತಿಳಿಸಿದ್ದಾರೆ.

ಈ ಬಗ್ಗೆ ಪೊಲೀಸರಿಗೆ ಯಾವುದೇ ದೂರು ಬಂದಿಲ್ಲ. ಆಸ್ತಿ ಮಾರಾಟ ಮತ್ತು ಖರೀದಿ ವೈಯಕ್ತಿಕ ವಿಷಯವಾಗಿದೆ.  ಈ ಬಗ್ಗೆ ಯಾವುದೇ ವಿವಾದ ಈವರೆಗೆ ಆ ಪ್ರದೇಶದಲ್ಲಿ ಕಂಡು ಬಂದಿಲ್ಲ ಎಂದು ಪೊಲೀಸರು ಹೇಳಿದ್ದಾರೆ.

ಇದನ್ನು ಓದಿ: ರೈತರ ಹತ್ಯೆ ಹೊಣೆಗಾರರಿಗೆ ಕೃಷಿ ಸಚಿವಾಲಯದ ಹೊಣೆ: ರೈತ ಸಂಘಟನೆಗಳಿಂದ ಪ್ರತಿಭಟನೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತೆಲಂಗಾಣ: ಆರು ಜನ ಹಿರಿಯರು ಸೇರಿದಂತೆ 41 ಜನ ನಕ್ಸಲ್ ಕಾರ್ಯಕರ್ತರು ಪೊಲೀಸರಿಗೆ ಶರಣು

ದೇಶದಲ್ಲಿ ಮಾವೋವಾದಿ ವಿರೋಧಿ ಕಾರ್ಯಾಚರಣೆಗಳಲ್ಲಿ ಪ್ರಮುಖ ಬೆಳವಣಿಗೆಯಲ್ಲಿ, ಆರು ಜನ ಹಿರಿಯರು ಸೇರಿದಂತೆ 41 ಜನ ಕಮ್ಯುನಿಸ್ಟ್ ಪಾರ್ಟಿ ಆಫ್ ಇಂಡಿಯಾ (ಮಾವೋವಾದಿ) ಕಾರ್ಯಕರ್ತರು ತೆಲಂಗಾಣ ಪೊಲೀಸರ ಮುಂದೆ ಇಂದು ಶರಣಾಗಿದ್ದಾರೆ. ಶರಣಾಗತಿ ಪ್ರಕ್ರಿಯೆಯ...

‘ವೀಸಾ ಅವಧಿ ಮುಗಿಯುವ ಮೊದಲು ಪಾಕ್ ಮಹಿಳೆಯ ಪೌರತ್ವ ಅರ್ಜಿ ಪರಿಗಣಿಸಿ..’; ಕೇಂದ್ರ ಸರ್ಕಾರಕ್ಕೆ ಕರ್ನಾಟಕ ಹೈಕೋರ್ಟ್‌ ಸೂಚನೆ

ಭಾರತದಲ್ಲಿ ವಾಸಿಸುತ್ತಿರುವ ಪಾಕಿಸ್ತಾನಿ ಪ್ರಜೆಯ ಹೊಸ ಪೌರತ್ವ ಅರ್ಜಿಯನ್ನು ಸಕ್ರಿಯವಾಗಿ ಪರಿಗಣಿಸುವ ಜೊತೆಗೆ ಅವರ ದೀರ್ಘಾವಧಿಯ ವೀಸಾ ಅವಧಿ ಮುಗಿಯುವ ಮೊದಲೇ ಪ್ರಕ್ರಿಯೆಯನ್ನು ಪೂರ್ಣಗೊಳಿಸಬೇಕು ಎಂದು, ವಿದೇಶಾಂಗ ಸಚಿವಾಲಯ, ಗೃಹ ಸಚಿವಾಲಯ ಮತ್ತು...

ಎಚ್‌ಐವಿ ಪಾಸಿಟಿವ್ ಎಂದು ವಜಾಗೊಳಿಸಲಾದ ಬಿಎಸ್‌ಎಫ್ ಯೋಧನನ್ನು ಮತ್ತೆ ನೇಮಿಸುವಂತೆ ಹೈಕೋರ್ಟ್ ಆದೇಶ

ಜುಲೈ 2017 ರಲ್ಲಿ ಎಚ್‌ಐವಿ ಪಾಸಿಟಿವ್ ಎಂಬ ಕಾರಣಕ್ಕೆ ಸೇವೆಯಿಂದ ವಜಾಗೊಳಿಸಲಾದ ಗಡಿ ಭದ್ರತಾ ಪಡೆಯ ಕಾನ್‌ಸ್ಟೆಬಲ್‌ ಒಬ್ಬರನ್ನು ಮರುನೇಮಕ ಮಾಡುವಂತೆ ದೆಹಲಿ ಹೈಕೋರ್ಟ್ ಆದೇಶಿಸಿದೆ.  ನ್ಯಾಯಮೂರ್ತಿಗಳಾದ ಸಿ ಹರಿಶಂಕರ್ ಮತ್ತು ಓಂ ಪ್ರಕಾಶ್...

ವೈದ್ಯೆ ಬುರ್ಖಾ ಎಳೆದ ನಿತೀಶ್‌ಕುಮಾರ್: ಶ್ರೀನಗರದಲ್ಲಿ ದೂರು ದಾಖಲಿಸಿದ ಇಲ್ತಿಜಾ ಮುಫ್ತಿ

ಪಾಟ್ನಾದಲ್ಲಿ ನಡೆದ ಸರ್ಕಾರಿ ಕಾರ್ಯಕ್ರಮದ ಸಂದರ್ಭದಲ್ಲಿ ಮುಸ್ಲಿಂ ಮಹಿಳಾ ವೈದ್ಯರ ನಿಖಾಬ್ (ಬುರ್ಖಾ) ಎಳೆಯುತ್ತಿರುವುದನ್ನು ತೋರಿಸುವ ವೈರಲ್ ವೀಡಿಯೊದ ಕುರಿತು ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ವಿರುದ್ಧ ಎಫ್ಐಆರ್ ದಾಖಲಿಸಲು ಪೀಪಲ್ಸ್ ಡೆಮಾಕ್ರಟಿಕ್...

ಪ್ರಶ್ನೆಗಾಗಿ ಕಾಸು ಪ್ರಕರಣ: ಮಹುವಾ ಮೊಯಿತ್ರಾ ವಿರುದ್ಧ ಚಾರ್ಜ್‌ಶೀಟ್‌ ಸಲ್ಲಿಸಲು ಅನುಮತಿಸಿದ್ದ ಲೋಕಪಾಲ್ ಆದೇಶ ರದ್ದು ಪಡಿಸಿದ ದೆಹಲಿ ಹೈಕೋರ್ಟ್

‘ಪ್ರಶ್ನೆಗಾಗಿ ಕಾಸು’ ಪ್ರಕರಣದಲ್ಲಿ ತೃಣಮೂಲ ಕಾಂಗ್ರೆಸ್(ಟಿಎಂಸಿ) ಸಂಸದೆ ಮಹುವಾ ಮೊಯಿತ್ರಾ ವಿರುದ್ಧ ಚಾರ್ಜ್‌ಶೀಟ್ ಸಲ್ಲಿಸಲು ಸಿಬಿಐಗೆ ಅನುಮತಿ ನೀಡಿದ್ದ ಲೋಕಪಾಲ್ ಆದೇಶವನ್ನು ದೆಹಲಿ ಹೈಕೋರ್ಟ್ ಶುಕ್ರವಾರ ರದ್ದುಗೊಳಿಸಿದೆ. ಇದರಿಂದಾಗಿ ಮೊಯಿತ್ರಾ ಅವರಿಗೆ ಈ...

ಜಮ್ಮು-ಕಾಶ್ಮೀರ: ಪತ್ರಕರ್ತನ ಮೊಬೈಲ್ ಫೋನ್ ವಶಪಡಿಸಿಕೊಂಡ ಪೊಲೀಸರು

ಕಿಶ್ತ್ವಾರ್‌ನಲ್ಲಿನ ವಿದ್ಯುತ್ ಯೋಜನೆಯಲ್ಲಿ ಸ್ವಜನಪಕ್ಷಪಾತ ಮತ್ತು ಭ್ರಷ್ಟಾಚಾರದ ಆರೋಪಗಳ ಕುರಿತು ವರದಿ ಮಾಡುತ್ತಿದ್ದಾಗ, ದಿ ವೈರ್ ಸುದ್ದಿ ಪೋರ್ಟಲ್‌ನ ಪತ್ರಕರ್ತ ಜೆಹಾಂಗೀರ್ ಅಲಿ ಅವರ ಮೊಬೈಲ್ ಫೋನ್ ಅನ್ನು ಬುಧವಾರ (ಡಿಸೆಂಬರ್ 17)...

ಕೇರಳದಲ್ಲಿ ಗುಂಪುಹತ್ಯೆ: ಛತ್ತೀಸ್‌ಗಢ ವಲಸೆ ಕಾರ್ಮಿಕನನ್ನು ‘ಕಳ್ಳ’ ಎಂದು ಥಳಿಸಿ ಕೊಂದ ಗುಂಪು 

ಕೇರಳದ ಪಾಲಕ್ಕಾಡ್ ಜಿಲ್ಲೆಯಲ್ಲಿ ಗುರುವಾರ ಛತ್ತೀಸ್‌ಗಢದಿಂದ ಬಂದ ವಲಸೆ ಕಾರ್ಮಿಕನೊಬ್ಬನನ್ನು ಕಳ್ಳನೆಂದು ಶಂಕಿಸಿ ಗುಂಪೊಂದು ಥಳಿಸಿ ಕೊಂದಿದೆ. ಕೊಲೆಯಾದ ವ್ಯಕ್ತಿಯನ್ನು ರಾಮನಾರಾಯಣ್ ಭಯಾರ್ (31) ಎಂದು ಗುರುತಿಸಲಾಗಿದ್ದು, ಕಳೆದ ಒಂದು ತಿಂಗಳಿನಿಂದ ಪಾಲಕ್ಕಾಡ್‌ನ ಕಾಂಜಿಕೋಡ್‌ನಲ್ಲಿರುವ...

ನೋಯ್ಡಾ ಪೊಲೀಸ್ ಠಾಣೆಯೊಳಗೆ ವಕೀಲೆ ಮೇಲೆ ಲೈಂಗಿಕ ದೌರ್ಜನ್ಯ ಆರೋಪ; ಸಿಸಿಟಿವಿ ದೃಶ್ಯಾವಳಿ ಕೇಳಿದ ಸುಪ್ರೀಂ ಕೋರ್ಟ್

ಮಹಿಳಾ ವಕೀಲೆಯೊಬ್ಬರನ್ನು 14 ಗಂಟೆಗಳ ಕಾಲ ಅಕ್ರಮವಾಗಿ ಬಂಧಿಸಿ ಪೊಲೀಸರು ಲೈಂಗಿಕ ದೌರ್ಜನ್ಯ esgi, ಕಸ್ಟಡಿಯಲ್ಲಿ ಚಿತ್ರಹಿಂಸೆ ನೀಡಿದ ಆರೋಪದ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿರುವ ಸುಪ್ರೀಂ ಕೋಡರ್ಟ್, ಮುಚ್ಚಿದ ಕವರ್‌ನಲ್ಲಿ ಸಿಸಿಟಿವಿ ದೃಶ್ಯಾವಳಿಗಳನ್ನು...

ಹಾಲು ಉತ್ಪಾದಕರಿಗೆ 1 ಲೀಟರ್ ಹಾಲಿನ ಪ್ರೋತ್ಸಾಹಧನ 5 ರಿಂದ 7 ರೂಗೆ ಏರಿಕೆ: ಅಧಿವೇಶನದಲ್ಲಿ ಸಿದ್ದರಾಮಯ್ಯ ಘೋಷಣೆ

ರೈತರ ಹಿತದೃಷ್ಠಿಯಿಂದ 1 ಲೀಟರ್ ಹಾಲಿಗೆ ಪ್ರೋತ್ಸಾಹಧನವನ್ನು 7 ರೂಪಾಯಿಗೆ ಏರಿಕೆ ಮಾಡುತ್ತೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದ್ದಾರೆ. ಡಿಸೆಂಬರ್ 19ರಂದು ಬೆಳಗಾವಿ ಅಧಿವೇಶನದ ಕೊನೆಯ ದಿನ ಮಾತನಾಡಿದ ಅವರು, ರೈತರಿಗೆ ಹಸುಗಳನ್ನು ಸಾಕಿ...

ಬಾಂಗ್ಲಾ ದಂಗೆ: ಮಾಧ್ಯಮ ಸಂಸ್ಥೆಗಳಿಗೆ ಬೆಂಕಿ ಹಚ್ಚಿದ ಪ್ರತಿಭಟನಾಕಾರರು, ಉರಿಯುತ್ತಿದ್ದ ಕಚೇರಿಗಳಿಂದ 25 ಕ್ಕೂ ಹೆಚ್ಚು ಪತ್ರಕರ್ತರ ರಕ್ಷಣೆ

ಜುಲೈ ದಂಗೆಯ ನಾಯಕ ಷರೀಫ್ ಉಸ್ಮಾನ್ ಹಾದಿ ಅವರ ನಿಧನದ ಸುದ್ದಿ ಕೇಳಿದ ಬೆನ್ನಲ್ಲೇ ಶುಕ್ರವಾರ ಬಾಂಗ್ಲಾದೇಶದ ವಿವಿಧ ಭಾಗಗಳಲ್ಲಿ ತೀವ್ರ ಪ್ರತಿಭಟನೆಗಳು ಆರಂಭವಾಗಿದ್ದು ಹಿಂಸಾಚಾರಕ್ಕೆ ನಾಂದಿ ಹಾಡಿವೆ. ಅನೇಕ ಪ್ರತಿಭಟನಾಕಾರರು ಬೀದಿಗಿಳಿದಿದ್ದು,...