Homeಮುಖಪುಟಜೈಪುರ: ಹಿಂದೂಯೇತರರಿಗೆ ಮನೆಗಳನ್ನು ಮಾರಾಟ ಮಾಡದಂತೆ ಪೋಸ್ಟರ್ ಹಾಕಿದ ಜನ

ಜೈಪುರ: ಹಿಂದೂಯೇತರರಿಗೆ ಮನೆಗಳನ್ನು ಮಾರಾಟ ಮಾಡದಂತೆ ಪೋಸ್ಟರ್ ಹಾಕಿದ ಜನ

- Advertisement -
- Advertisement -

ಜೈಪುರದ ಭಟ್ಟ ಬಸ್ತಿ ಪ್ರದೇಶದ ಶಿವಾಜಿ ನಗರದಲ್ಲಿ ‘ಹಿಂದೂಯೇತರರಿಗೆ’ ಮನೆಗಳನ್ನು ಮಾರಾಟ ಮಾಡಬಾರದು ಎಂಬ ಪೋಸ್ಟರ್‌ಗಳನ್ನು ಕಿಡಿಗೇಡಿಗಳು ಅಂಟಿಸಿದ್ದು, ಹಿಂದೂಗಳ ವಲಸೆಯನ್ನು ತಡೆಯುವಂತೆ ‘ಸನಾತನಿ’ ಜನರಿಗೆ ಮನವಿ ಮಾಡುತ್ತೇವೆ ಎಂದು ಬರೆಯಲಾಗಿದೆ.

ಹಿಂದೂಯೇತರರಿಗೆ ತಮ್ಮ ಮನೆಗಳನ್ನು ಮಾರಾಟ ಮಾಡದಂತೆ ತಮ್ಮ ಪ್ರದೇಶದ ಜನರಿಗೆ ಮನವಿ ಮಾಡಲು ತಮ್ಮ ಸ್ವಂತ ಮನೆಗಳ ಮೇಲೆ ಸ್ವಇಚ್ಛೆಯಿಂದ ಪೋಸ್ಟರ್‌ಗಳನ್ನು ಅಂಟಿಸಿರುವುದಾಗಿ ಕೆಲವು ಸ್ಥಳೀಯರು ಟಿವಿ ಚಾನೆಲ್‌ಗಳಿಗೆ ತಿಳಿಸಿದ್ದಾರೆ.

ಭಟ್ಟ ಬಸ್ತಿ ಪೊಲೀಸ್ ಠಾಣೆಯ ಎಸ್‌ಎಚ್‌ಒ ಕೈಲಾಶ್ ಈ ಕುರಿತ ಬೆಳವಣಿಗೆಯನ್ನು ಖಚಿತಪಡಿಸಿದ್ದಾರೆ. ಜನರು ತಮ್ಮ ಸ್ವಂತ ಮನೆಗಳ ಮೇಲೆ ಪೋಸ್ಟರ್‌ಗಳನ್ನು ಅಂಟಿಸಿದ್ದಾರೆ ಮತ್ತು ಈ ಬಗ್ಗೆ ಯಾವುದೇ ದೂರು ದಾಖಲಾಗಿಲ್ಲ ಎಂದು ಹೇಳಿದ್ದಾರೆ.

‘ಸರ್ವ್ ಹಿಂದೂ ಸಮಾಜ’ ಹೆಸರಿನ ಪೋಸ್ಟರ್‌ನ್ನು ಹಿಂದಿಯಲ್ಲಿ ಹಾಕಲಾಗಿದ್ದು, ವಲಸೆ ನಿಲ್ಲಿಸುವಂತೆ ಸನಾತನಿಗಳಿಗೆ ಮನವಿ, ಎಲ್ಲಾ ಸನಾತನ ಸಹೋದರ ಸಹೋದರಿಯರಿಗೆ ತಮ್ಮ ಮನೆಯನ್ನು ಹಿಂದೂಯೇತರರಿಗೆ ಮಾರಾಟ ಮಾಡದಂತೆ ವಿನಂತಿ ಮಾಡುತ್ತಿದ್ದೇವೆ ಎಂದು ಬರೆಯಲಾಗಿದೆ.

ಈ ಪ್ರದೇಶದಲ್ಲಿ ಕೆಲವರು ಮನೆ ಖರೀದಿಸಿ ಇತರರಿಗೆ ತೊಂದರೆ ಕೊಡುತ್ತಿದ್ದಾರೆ.  ಈ ಪರಿಸ್ಥಿತಿಯಿಂದಾಗಿ, ನಾವು ನಮ್ಮ ಮನೆಗಳ ಹೊರಗೆ ಭಿತ್ತಿಪತ್ರಗಳನ್ನು ಅಂಟಿಸಲು ನಿರ್ಧರಿಸಿದ್ದೇವೆ, ಜನರು ತಮ್ಮ ಮನೆಗಳನ್ನು ಹಿಂದೂಯೇತರರಿಗೆ ಮಾರಾಟ ಮಾಡದಂತೆ ಮನವಿ ಮಾಡುತ್ತೇವೆ. ದಲ್ಲಾಳಿಗಳು ಆಗಾಗ್ಗೆ ನಮ್ಮ ಬಳಿಗೆ ಬರುತ್ತಾರೆ, ನಮ್ಮ ಮನೆಯನ್ನು ಮಾರಾಟ ಮಾಡಲು ನಮಗೆ ಆಸಕ್ತಿ ಇದೆಯೇ ಎಂದು ಕೇಳುತ್ತಾರೆ. ಹಲವು ಮನೆಗಳನ್ನು ಹೊರಗಿನವರಿಗೆ ಮಾರಾಟ ಮಾಡಲಾಗಿದೆ ಮತ್ತು ನಮ್ಮ ಪ್ರದೇಶದಲ್ಲಿ ವಾತಾವರಣವು ಸರಿಯಾಗಿಲ್ಲ ಎಂದು ಸ್ಥಳೀಯ ನಿವಾಸಿಯೊಬ್ಬರು ಟಿವಿ ಚಾನೆಲ್‌ಗೆ ತಿಳಿಸಿದ್ದಾರೆ.

ಈ ಬಗ್ಗೆ ಪೊಲೀಸರಿಗೆ ಯಾವುದೇ ದೂರು ಬಂದಿಲ್ಲ. ಆಸ್ತಿ ಮಾರಾಟ ಮತ್ತು ಖರೀದಿ ವೈಯಕ್ತಿಕ ವಿಷಯವಾಗಿದೆ.  ಈ ಬಗ್ಗೆ ಯಾವುದೇ ವಿವಾದ ಈವರೆಗೆ ಆ ಪ್ರದೇಶದಲ್ಲಿ ಕಂಡು ಬಂದಿಲ್ಲ ಎಂದು ಪೊಲೀಸರು ಹೇಳಿದ್ದಾರೆ.

ಇದನ್ನು ಓದಿ: ರೈತರ ಹತ್ಯೆ ಹೊಣೆಗಾರರಿಗೆ ಕೃಷಿ ಸಚಿವಾಲಯದ ಹೊಣೆ: ರೈತ ಸಂಘಟನೆಗಳಿಂದ ಪ್ರತಿಭಟನೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಿಜೆಪಿ ನಿಯೋಗದಿಂದ ಕರ್ನಾಟಕ ರಾಜ್ಯಪಾಲರ ಭೇಟಿ: ‘ದ್ವೇಷ ಭಾಷಣ ತಡೆ’ ಮಸೂದೆಗೆ ಒಪ್ಪಿಗೆ ನೀಡದಂತೆ ಮನವಿ

ಬೆಂಗಳೂರು: ದ್ವೇಷ ಭಾಷಣ ಮಸೂದೆಯನ್ನು"ವಾಕ್ ಸ್ವಾತಂತ್ರ್ಯದ ಮೇಲಿನ ನೇರ ದಾಳಿ" ಮತ್ತು "ರಾಜಕೀಯ ಸೇಡಿನ ಸಾಧನ" ಎಂದು ಕರೆದಿರುವ ಬಿಜೆಪಿ ನಾಯಕರ ನಿಯೋಗವು ಸೋಮವಾರ ಕರ್ನಾಟಕ ರಾಜ್ಯಪಾಲ ಥಾವರ್‌ಚಂದ್ ಗೆಹ್ಲೋಟ್ ಅವರನ್ನು ಭೇಟಿ...

ಟೆಕ್ಕಿ ಶರ್ಮಿಳಾ ಕೊಲೆ ಪ್ರಕರಣ : ಪಿಯು ವಿದ್ಯಾರ್ಥಿಯನ್ನು ಬಂಧಿಸಿದ ಪೊಲೀಸರು

ಬೆಂಗಳೂರಿನ ರಾಮಮೂರ್ತಿ ನಗರದ ಸುಬ್ರಹ್ಮಣ್ಯ ಬಡಾವಣೆಯಲ್ಲಿ 2026ರ ಜನವರಿ 3ರಂದು ರಾತ್ರಿ ನಡೆದ ಮಂಗಳೂರು ಮೂಲದ ಸಾಫ್ಟ್‌ವೇರ್ ಇಂಜಿನಿಯರ್ ಶರ್ಮಿಳಾ ಕುಶಾಲಪ್ಪ (34) ಅವರ ಕೊಲೆ ಪ್ರಕರಣವನ್ನು ಪೊಲೀಸರು ಬೇಧಿಸಿದ್ದಾರೆ. ಆರಂಭದಲ್ಲಿ, ಫ್ಲ್ಯಾಟ್‌ಗೆ ಬೆಂಕಿ...

ಎಸ್‌ಎಸ್‌ಎಲ್‌ಸಿ ಪ್ರಶ್ನೆ ಪತ್ರಿಕೆ ಸೋರಿಕೆ: ಸಾಮಾಜಿಕ ಮಾಧ್ಯಮದಲ್ಲಿ 200-500 ರೂ.ಗೆ ಮಾರಾಟ: ಆರು ಶಿಕ್ಷಕರು, ಇಬ್ಬರು ಅಪ್ರಾಪ್ತ ವಿದ್ಯಾರ್ಥಿಗಳ ಬಂಧನ

ಬೆಂಗಳೂರು: ಎಸ್‌ಎಸ್‌ಎಲ್‌ಸಿ ಪೂರ್ವಸಿದ್ಧತಾ ಪರೀಕ್ಷೆಯ ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣದ ತನಿಖೆಯ ಸಂದರ್ಭದಲ್ಲಿ ಆಘಾತಕಾರಿ ಮಾಹಿತಿಗಳು ಹೊರಬಿದ್ದಿವೆ. ವಿದ್ಯಾರ್ಥಿಗಳು ಪ್ರಶ್ನೆಪತ್ರಿಕೆಗಳನ್ನು ಸಾಮಾಜಿಕ ಮಾಧ್ಯಮಗಳಲ್ಲಿ ಬಹಿರಂಗವಾಗಿ ಜಾಹೀರಾತು ಮಾಡಿ ಖಾಸಗಿ ಸಂದೇಶಗಳ ಮೂಲಕ 200 ರಿಂದ...

ಕರೂರ್ ಕಾಲ್ತುಳಿತ : ಸಿಬಿಐ ಮುಂದೆ ವಿಚಾರಣೆಗೆ ಹಾಜರಾದ ನಟ ವಿಜಯ್

ಕರೂರ್ ಕಾಲ್ತುಳಿತ ಘಟನೆಗೆ ಸಂಬಂಧಪಟ್ಟಂತೆ ನಟ ಹಾಗೂ ತಮಿಳಗ ವೆಟ್ರಿ ಕಳಗಂ (ಟಿವಿಕೆ) ಪಕ್ಷದ ಮುಖ್ಯಸ್ಥ ವಿಜಯ್ ಸೋಮವಾರ (ಜ.12) ದೆಹಲಿಯ ಕೇಂದ್ರ ತನಿಖಾ ದಳ (ಸಿಬಿಐ) ಕಚೇರಿಗೆ ವಿಚಾರಣೆಗೆ ಹಾಜರಾಗಿದ್ದಾರೆ. ಚಾರ್ಟರ್ಡ್ ವಿಮಾನದಲ್ಲಿ...

ಜೂನ್‌ ಅಂತ್ಯದೊಳಗೆ ಜಿಬಿಎ ವ್ಯಾಪ್ತಿಯ ಪಾಲಿಕೆಗಳಿಗೆ ಚುನಾವಣೆ : ಗಡುವು ವಿಧಿಸಿದ ಸುಪ್ರೀಂ ಕೋರ್ಟ್

ಗ್ರೇಟರ್ ಬೆಂಗಳೂರು ಪ್ರಾಧಿಕಾರ (ಜಿಬಿಎ) ವ್ಯಾಪ್ತಿಯ ಐದು ನಗರ ಪಾಲಿಕೆಗಳಿಗೆ ಜೂನ್ ಅಂತ್ಯದೊಳಗೆ ಚುನಾವಣೆ ನಡೆಸುವಂತೆ ರಾಜ್ಯ ಸರ್ಕಾರಕ್ಕೆ ಸುಪ್ರೀಂ ಕೋರ್ಟ್ ಸೋಮವಾರ (ಜ.12) ನಿರ್ದೇಶನ ನೀಡಿದೆ. ಮುಖ್ಯ ನ್ಯಾಯಮೂರ್ತಿ ಸೂರ್ಯ ಕಾಂತ್ ಮತ್ತು...

ಐ-ಪ್ಯಾಕ್ ಮೇಲೆ ಇಡಿ ದಾಳಿ: ಸುಪ್ರೀಂ ಕೋರ್ಟ್ ನಲ್ಲಿ ಮಮತಾ ವಿರುದ್ಧ ಎಫ್‌ಐಆರ್ ದಾಖಲಿಸಲು ನಿರ್ದೇಶನ ಕೋರಿ ಅರ್ಜಿ ಸಲ್ಲಿಸಿದ ಇಡಿ

ನವದೆಹಲಿ: ಐ-ಪಿಎಸಿ ವಿರುದ್ಧದ ಬಹು-ರಾಜ್ಯ ಹಣ ವರ್ಗಾವಣೆ ಪ್ರಕರಣದಲ್ಲಿ ತನಿಖೆಗೆ ಅಡ್ಡಿಪಡಿಸಿದ, ಸಾಕ್ಷ್ಯಗಳನ್ನು ತಿರುಚಿದ ಮತ್ತು ನಾಶಪಡಿಸಿದ ಆರೋಪದ ಮೇಲೆ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ, ಡಿಜಿಪಿ ಮತ್ತು ಕೋಲ್ಕತ್ತಾ ಪೊಲೀಸ್...

ಭಾರತಕ್ಕಿಂತ ಯಾವುದೇ ಪಾಲುದಾರ ದೇಶ ಮುಖ್ಯವಲ್ಲ, ವ್ಯಾಪಾರ ಮಾತುಕತೆ ಪುನರಾರಂಭ: ಅಮೆರಿಕ ರಾಯಭಾರಿ ಸೆರ್ಗಿಯೊ ಗೋರ್

"ವಾಷಿಂಗ್ಟನ್‌ಗೆ ಭಾರತಕ್ಕಿಂತ ಅಗತ್ಯವಾದ ದೇಶ ಇನ್ನೊಂದಿಲ್ಲ ಮತ್ತು ಎರಡೂ ಕಡೆಯವರು ವ್ಯಾಪಾರ ಒಪ್ಪಂದವನ್ನು ದೃಢೀಕರಿಸುವಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡಿದ್ದಾರೆ" ಎಂದು ಅಮೆರಿಕದ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್ ಸೋಮವಾರ ಹೇಳಿದ್ದಾರೆ. ಅಮೆರಿಕ ರಾಯಭಾರ ಕಚೇರಿಯ ನೌಕರರು...

ಬಿಷಪ್ ಫ್ರಾಂಕೊ ಮುಲಕ್ಕಲ್ ಅತ್ಯಾಚಾರ ಪ್ರಕರಣ : ಒಂಬತ್ತು ವರ್ಷಗಳ ಬಳಿಕ ಮೌನ ಮುರಿದ ಸಂತ್ರಸ್ತೆ, ಕಾನೂನು ಹೋರಾಟ ಮುಂದುವರಿಸುವುದಾಗಿ ಹೇಳಿಕೆ

ಬಿಷಪ್ ಫ್ರಾಂಕೊ ಮುಲಕ್ಕಲ್ ವಿರುದ್ದದ ಅತ್ಯಾಚಾರ ಪ್ರಕರಣದ ಸಂತ್ರಸ್ತೆ ಕ್ರೈಸ್ತ ಸನ್ಯಾಸಿನಿ ಒಂಬತ್ತು ವರ್ಷಗಳ ನಂತರ ಮೊದಲ ಬಾರಿಗೆ ಸಾರ್ವಜನಿಕವಾಗಿ ಮಾತನಾಡಿದ್ದು, ಫ್ರಾಂಕೊ ಮುಲಕ್ಕಲ್ ಅವರನ್ನು ನ್ಯಾಯಾಲಯ ಖುಲಾಸೆಗೊಳಿಸಿದ್ದಕ್ಕೆ ನಾನು ದಂಗಾಗಿದ್ದೇನೆ. ನ್ಯಾಯಕ್ಕಾಗಿ...

‘ವೆನೆಜುವೆಲಾದ ಹಂಗಾಮಿ ಅಧ್ಯಕ್ಷ’ ಎಂದು ಘೋಷಿಸಿಕೊಂಡ ಡೊನಾಲ್ಡ್ ಟ್ರಂಪ್ 

ಸೋಮವಾರ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಟ್ರುತ್ ಸೋಶಿಯಲ್‌ನಲ್ಲಿ ತಮ್ಮದೇ ಆದ ವಿಕಿಪೀಡಿಯಾ ಪುಟದ ಫೋಟೋವನ್ನು ಪೋಸ್ಟ್ ಮಾಡಿದ್ದಾರೆ, ಅದರಲ್ಲಿ "ವೆನೆಜುವೆಲಾದ ಹಂಗಾಮಿ ಅಧ್ಯಕ್ಷ" ಎಂಬ ಹುದ್ದೆಯನ್ನು ಹೊಂದಿರುವ ಅವರ ಚಿತ್ರವಿದೆ. ಪೋಸ್ಟ್‌ನಲ್ಲಿ ಟ್ರಂಪ್...

ಪೊಲೀಸ್ ತುರ್ತು ವಾಹನದ ಚಾಲಕ ಸೇರಿ ಐವರಿಂದ ಯುವತಿ ಮೇಲೆ ಅತ್ಯಾಚಾರ!

ಪೊಲೀಸ್ ತುರ್ತು ಸೇವೆ (112) ವಾಹನದ ಚಾಲಕ ಸೇರಿದಂತೆ ಐವರು ಪುರುಷರು 19 ವರ್ಷದ ಯುವತಿ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿರುವ ಘಟನೆ ಛತ್ತೀಸ್‌ಗಢದ ಕೋರ್ಬಾ ಜಿಲ್ಲೆಯ ಬಂಕಿಮೊಂಗ್ರ ಪ್ರದೇಶದಲ್ಲಿ ನಡೆದಿದೆ. ಜನವರಿ...