Homeಕರ್ನಾಟಕಕನ್ನಡ ರಾಜ್ಯೋತ್ಸವದಂದು ‘ಪುನೀತ್ ರಾಜ್‌ಕುಮಾರ್‌‌’ ಅವರಿಗೆ ಮರಣೋತ್ತರ ‘ಕರ್ನಾಟಕ ರತ್ನ’ ಪ್ರಶಸ್ತಿ ಪ್ರದಾನ

ಕನ್ನಡ ರಾಜ್ಯೋತ್ಸವದಂದು ‘ಪುನೀತ್ ರಾಜ್‌ಕುಮಾರ್‌‌’ ಅವರಿಗೆ ಮರಣೋತ್ತರ ‘ಕರ್ನಾಟಕ ರತ್ನ’ ಪ್ರಶಸ್ತಿ ಪ್ರದಾನ

- Advertisement -
- Advertisement -

ಕನ್ನಡ ಚಿತ್ರರಂಗದ ಮೇರುನಟ ದಿವಂಗತ ಡಾ. ಪುನೀತ್ ರಾಜ್‍ಕುಮಾರ್ ಅವರಿಗೆ ‘ಕರ್ನಾಟಕ ರತ್ನ’ ಪ್ರಶಸ್ತಿಯನ್ನು ನವೆಂಬರ್ 1ರಂದು ಪ್ರದಾನ ಮಾಡಲು ರಾಜ್ಯ ಸರ್ಕಾರ ತಿರ್ಮಾನಿಸಿದೆ.

ಈ ಕುರಿತು ಟ್ವೀಟ್ ಮಾಡಿರುವ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು, ಕನ್ನಡ ರಾಜ್ಯೋತ್ಸವದಂದು ಪ್ರಶಸ್ತಿ ಪ್ರದಾನ ಮಾಡುವ ಕುರಿತು ತಿಳಿಸಿದ್ದಾರೆ.

ನಮ್ಮನ್ನಗಲಿದ ನಾಡಿನ ಪ್ರತಿಭಾನ್ವಿತ ನಟ ಪುನೀತ್ ರಾಜ್‌ಕುಮಾರ್‌ ಅವರಿಗೆ ಮರಣೋತ್ತರವಾಗಿ ಪ್ರತಿಷ್ಠಿತ ಕರ್ನಾಟಕ ರತ್ನ ಗೌರವ ನೀಡಬೇಕು ಎಂಬ ಅಭಿಮಾನಿಗಳ ಕೂಗಿಗೆ ರಾಜ್ಯ ಸರ್ಕಾರ ಸಕರಾತ್ಮಕವಾಗಿ ಸ್ಪಂದಿಸಿ, ಪ್ರಶಸ್ತಿ ಘೊಷಣೆ ಮಾಡಿತ್ತು.

’ಪುನೀತ್ ರಾಜ್‌ಕುಮಾರ್‌ಗೆ ಕರ್ನಾಟಕ ರತ್ನ ಪ್ರಶಸ್ತಿ ನೀಡಬೇಕೆಂಬ ಬೇಡಿಕೆ ಚಿತ್ರರಂಗ ಮತ್ತು ಅಭಿಮಾನಿಗಳಿಂದ ಕೇಳಿ ಬಂದಿದೆ. ತಕ್ಷಣಕ್ಕೆ ಈ ಬೇಡಿಕರ ಬಗ್ಗೆ ಏನು ಹೇಳಲಾಗದು. ಈ ಬಗ್ಗೆ ಪ್ರಮುಖರ ಜತೆ ಚರ್ಚಿಸಿ ಸೂಕ್ತ ತೀರ್ಮಾನ ಕೈಗೊಳ್ಳುತ್ತೇವೆ’ ಎಂದು ಈ ಹಿಂದೆ ಬೊಮ್ಮಾಯಿಯವರು ಹೇಳಿದ್ದರು.

ಅಭಿಮಾನಿಗಳಿಂದ ಪ್ರೀತಿಯಿಂದ ಅಪ್ಪು ಎಂದು ಕರೆಸಿಕೊಳ್ಳುವ ಪವರ್‌ ಸ್ಟಾರ್ ಪುನೀತ್ ರಾಜಕುಮಾರ್ ಕನ್ನಡ ಚಿತ್ರರಂಗದ ಪ್ರಮುಖ ನಾಯಕನಟ. ಪುನೀತ್ ರಾಜ್‌ಕುಮಾರ್‌ ನಟರಾಗಿಯಷ್ಟೇ ಅಲ್ಲದೆ ಹಿನ್ನೆಲೆ ಗಾಯಕರಾಗಿ, ನಿರ್ಮಾಪಕರಾಗಿಯೂ ಚಿತ್ರರಂಗಕ್ಕೆ ಕೊಡುಗೆ ನೀಡಿದ್ದಾರೆ.

1976 ರಲ್ಲಿ ತೆರೆಕಂಡ ಡಾ.ರಾಜ್‌ಕುಮಾರ್‌ ಅಭಿನಯದ ‘ಪ್ರೇಮದ ಕಾಣಿಕೆ’ ಚಿತ್ರದ ಮೂಲಕ ತೆರೆಯ ಮೇಲೆ ಕಾಣಿಸಿಕೊಂಡಿದ್ದರು. ಆಗ ಪುನೀತ್ ಆರು ತಿಂಗಳು ಮಗು. ನಂತರ ವಸಂತ ಗೀತ (1980)ಮೂಲಕ ಬಾಲ ನಟನಾಗಿ ಕನ್ನಡ ಚಿತ್ರರಂಗಕ್ಕೆ ಪಾದಾರ್ಪಣೆ ಮಾಡಿದ ಪುನೀತ್‌ ರಾಜ್‌ಕುಮಾರ್, ಸುಮಾರು ನಾಲ್ಕು ದಶಕಗಳ ತಮ್ಮ ಸಿನಿಜೀವನದಲ್ಲಿ ಬಾಲ ಕಲಾವಿದನಾಗಿ 14 ಚಿತ್ರಗಳು ಮತ್ತು ನಾಯಕ ನಟನಾಗಿ 28ಕ್ಕೂ ಹೆಚ್ಚು ಚಿತ್ರಗಳಲ್ಲಿ ನಟಿಸಿದ್ದಾರೆ.

ಕನ್ನಡ ಚಿತ್ರರಂಗಕ್ಕೆ ಅಪಾರ ಕೊಡುಗೆ ನೀಡಿರುವ ಅಣ್ಣಾವ್ರ ಕುಟುಂಬದ ಕುಡಿ ಪುನೀತ್ ರಾಜ್‌ಕುಮಾರ್. 1975 ರ ಮಾರ್ಚ್ 17 ರಂದು ವರನಟ ಡಾ.ರಾಜಕುಮಾರ್ ಮತ್ತು ಪಾರ್ವತಮ್ಮರವರ ಕಿರಿಯ ಪುತ್ರನಾಗಿ ಪುನೀತ್ ರಾಜ್‌ಕುಮಾರ್ ಜನಿಸಿದರು. ಇವರ ಹಿರಿಯ ಸಹೋದರರಾದ ಶಿವರಾಜ ಕುಮಾರ್ ಮತ್ತು ರಾಘವೇಂದ್ರ ರಾಜಕುಮಾರ್ ಕನ್ನಡ ಚಿತ್ರರಂಗದ ಯಶಸ್ವಿ ನಾಯಕನಟರು.

ತಂದೆ ರಾಜ್‌ಕುಮಾರ್ ಅವರ ಚಿತ್ರಗಳನ್ನು ನೋಡುತ್ತಾ, ಅವರ ಶೂಟಿಂಗ್‌ ಸೆಟ್‌ಗಳಿಗೆ ಭೇಟಿ ಕೊಡುತ್ತಿದ್ದ ಅಪ್ಪುಗೆ ಬಾಲ್ಯದಿಂದಲೇ ನಟನೆಯಲ್ಲಿ ಆಸಕ್ತಿಯಿತ್ತು. ಈ ಕಾರಣದಿಂದಲೇ ಬಾಲ ನಟನಾಗಿ ಚಿತ್ರರಂಗದಲ್ಲಿ ಅಳಿಸದ ಹೆಜ್ಜೆಗುರುತು ಮೂಡಿಸಿದ್ದಾರೆ.

ಬಾಲ್ಯದಲ್ಲಿ ತನ್ನ ತಂದೆ ರಾಜಕುಮಾರ್ ಅಭಿನಯದ ಚಿತ್ರಗಳಲ್ಲಿ ಬಾಲ್ಯ ನಟನಾಗಿ, ಭಾಗ್ಯವಂತ, ಚಲಿಸುವ ಮೋಡಗಳು, ಎರಡು ನಕ್ಷತ್ರಗಳು, ಪ್ರೇಮದ ಕಾಣಿಕೆ, ಬೆಟ್ಟದ ಹೂವು, ಶಿವ ಮೆಚ್ಚಿದ ಕಣ್ಣಪ್ಪ, ಪರಶುರಾಮ್, ಯಾರಿವನು, ಭಕ್ತ ಪ್ರಹ್ಲಾದ, ವಸಂತ ಗೀತ, ಭೂಮಿಗೆ ಬಂದ ಭಗವಂತ, ಸನಾದಿ ಅಪ್ಪಣ್ಣ, ತಾಯಿಗೆ ತಕ್ಕ ಮಗ ಸೇರಿದಂತೆ ಹಲವು ಚಿತ್ರಗಳ ಮೂಲಕ ಜನರ ಮನಗೆದ್ದಿದ್ದಾರೆ. ಪುನೀತ್ ಅವರ ಮೊದಲು ಹೆಸರು ಮಾ.ಲೋಹಿತ್.

ಪುನೀತ್‌ ನಟನೆಯ 1985ರಲ್ಲಿ ತೆರೆಕಂಡ ಬೆಟ್ಟದ ಹೂವು ಚಿತ್ರದ ರಾಮು ಪಾತ್ರಕ್ಕೆ ರಾಷ್ಟ್ರ ಪ್ರಶಸ್ತಿಯನ್ನು ಪಡೆದಿದ್ದಾರೆ. ‘ಚಲಿಸುವ ಮೋಡಗಳು’ ಹಾಗೂ ‘ಎರಡು ಕನಸು’ ಚಿತ್ರಗಳಿಗಾಗಿ ಅತ್ಯುತ್ತಮ ಬಾಲ ನಟ ವಿಭಾಗದಲ್ಲಿ ರಾಜ್ಯ ಪ್ರಶಸ್ತಿ ಪಡೆದಿದ್ದಾರೆ.

ನಂತರ ಪುನೀತ್ 2002ರ ಅಪ್ಪು ಚಿತ್ರದ ಮೂಲಕ ನಾಯಕ ನಟನಾಗಿ ಬೆಳ್ಳಿತೆರೆಗೆ ಕಾಲಿಟ್ಟರು. ಅವರ ಅಭಿ, ಆಕಾಶ್, ಅರಸು, ಮಿಲನ, ಜಾಕಿ, ಹುಡುಗರು, ಅಣ್ಣಾ ಬಾಂಡ್, ಪವರ್, ಮೌರ್ಯ, ನಮ್ಮ ಬಸವ, ಪೃಥ್ವಿ, ವಂಶಿ, ರಾಜ್‌, ಪರಮಾತ್ಮ, ಯಾರೇ ಕೂಗಾಡಲಿ, ನಟ ಸಾರ್ವಭೌಮ, ರಾಜಕುಮಾರ, ಅಂಜನಿಪುತ್ರ, ರಣವಿಕ್ರಮ, ದೊಡ್ಮನೆ ಹುಡುಗ, ರಾಮ್, ನಿನ್ನಿಂದಲೇ, ಮೈತ್ರಿ, ಚಕ್ರವ್ಯೂಹ, ಯುವರತ್ನ ಸೇರಿದಂತೆ ಹಲವು ಯಶಸ್ವಿ ಚಲನಚಿತ್ರಗಳಲ್ಲಿ ನಟಿಸಿದರು.

ಇದನ್ನೂ ಓದಿ: ಪುನೀತ್ ರಾಜಕುಮಾರ್ ನುಡಿನಮನ; ಮುಗ್ಧ ನಗುವೊಂದರ ಕಣ್ಮರೆ

ಪುನೀತ್‌ ರಾಜ್‌ಕುಮಾರ್ ಚಿತ್ರ ನಿರ್ಮಾಪಕರಾಗಿ`ಕವಲುದಾರಿ’, `ಮಾಯಾಬಜಾರ್’, ಫ್ರೆಂಚ್ ಬಿರಿಯಾನಿ, ಲಾ, ಫ್ಯಾಮಿಲಿ ಪ್ಯಾಕ್ ಎಂಬ ಚಿತ್ರಗಳನ್ನು ಪಿಆರ್‌ಕೆ ಪ್ರೊಡಕ್ಷನ್‌ ಎಂಬ ತಮ್ಮ ಹೋಮ್ ಬ್ಯಾನರ್ನಲ್ಲಿ ನಿರ್ಮಿಸಿದ್ದಾರೆ. ಜೊತೆಗೆ ಪ್ರೊಡಕ್ಷನ್‌ ಹೌಸ್ ಮೂಲಕ ಕಿರುತೆರೆ ಧಾರಾವಾಹಿಗಳನ್ನು ಕೂಡ ನಿರ್ಮಿಸಿದ್ದಾರೆ. ತಾಯಿಯ ನೆನಪಿನಲ್ಲಿ `ಪಿ.ಆರ್.ಕೆ ‘ ಆಡಿಯೋ ಕಂಪನಿಯೊಂದನ್ನು ಸ್ಥಾಪಿಸಿದ್ದಾರೆ.

ಇದರ ಜೊತೆಗೆ ಪ್ರಸಿದ್ಧ ಟಿವಿ ಕಾರ್ಯಕ್ರಮ ಕನ್ನಡದ ಕೋಟ್ಯಧಿಪತಿ, ಫ್ಯಾಮಿಲಿ ಪವರ್ ಶೋ ಗಳನ್ನು ನಿರೂಪಣೆ ಮಾಡಿದ್ದಾರೆ. ಚಿತ್ರನಟ ,ಹಿನ್ನೆಲೆ ಗಾಯಕ ಮತ್ತು ದೂರದರ್ಶನ ನಿರೂಪಕರೂ ಆಗಿದ್ದ ಪುನೀತ್‌ ರಾಜ್‌ಕುಮಾರ್, ನಾಯಕ ನಟರಾಗಿ ನಟಿಸಿದ್ದ ಮಿಲನ ಮತ್ತು ಜಾಕಿ ಚಿತ್ರಗಳಿಗೆ ಕರ್ನಾಟಕ ರಾಜ್ಯ ಚಲನಚಿತ್ರ ಪ್ರಶಸ್ತಿಯ ಉತ್ತಮ ನಟ ಪ್ರಶಸ್ತಿ ತನ್ನದಾಗಿಸಿಕೊಂಡಿದ್ದರು. ಅಲ್ಲದೆ, ಹುಡುಗರು, ಯಾರೇ ಕೂಗಾಡಲಿ, ರಣ ವಿಕ್ರಮ, ರಾಜಕುಮಾರ ಸಿನಿಮಾಗಳಿಗೆ ದಕ್ಷಿಣ ಭಾರತ ಅಂತಾರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ ಪಡೆದುಕೊಂಡಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇಂದ್ರದ ವಿಬಿ-ಜಿ ರಾಮ್ ಜಿಗೆ ಟಕ್ಕರ್ : ಪ. ಬಂಗಾಳದ ‘ಕರ್ಮಶ್ರೀ’ ಯೋಜನೆಗೆ ಮಹಾತ್ಮ ಗಾಂಧಿ ಹೆಸರಿಡುವುದಾಗಿ ಘೋಷಿಸಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳ ಸರ್ಕಾರದ ಉದ್ಯೋಗ ಖಾತರಿ ಯೋಜನೆ 'ಕರ್ಮಶ್ರೀ'ಯನ್ನು ಮಹಾತ್ಮ ಗಾಂಧಿ ಹೆಸರಿನಲ್ಲಿ ಮರುನಾಮಕರಣ ಮಾಡುವುದಾಗಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಗುರುವಾರ (ಡಿಸೆಂಬರ್ 18) ಘೋಷಿಸಿದ್ದಾರೆ. ನರೇಗಾ ಯೋಜನೆಯಿಂದ ಮಹಾತ್ಮಾ ಗಾಂಧಿಯವರ ಹೆಸರನ್ನು ಕೈಬಿಟ್ಟಿರುವುದಕ್ಕೆ...

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ: ಶಾಸಕ ಕುಣಿಗಲ್ ರಂಗನಾಥ್ ವಿರುದ್ಧ ಕೆ.ಎನ್. ರಾಜಣ್ಣ ವಾಗ್ದಾಳಿ

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ ಮಾಡುವುದನ್ನು ಮಾಜಿ ಸಹಕಾರಿ ಸಚಿವ ಕೆ.ಎನ್. ರಾಜಣ್ಣ ಗುರುವಾರ ಬಲವಾಗಿ ಸಮರ್ಥಿಸಿಕೊಂಡಿದ್ದಾರೆ. ಆಡಳಿತ ಪಕ್ಷದೊಳಗಿನ ಸಾರ್ವಜನಿಕ ಭಿನ್ನಾಭಿಪ್ರಾಯದ ನಡುವೆಯೂ, "ಸಂಘಗಳಿಗೆ ವಿತರಿಸಲಾದ ನಿಧಿ ಠೇವಣಿದಾರರ ಹಣ,...

ತನ್ನದೇ ಶಾಸಕರ ಅನರ್ಹತೆ ಕೋರಿ ಬಿಆರ್‌ಎಸ್‌ ಅರ್ಜಿ : ತಿರಸ್ಕರಿಸಿದ ತೆಲಂಗಾಣ ಸ್ಪೀಕರ್

ಆಡಳಿತಾರೂಢ ಕಾಂಗ್ರೆಸ್‌ಗೆ ನಿಷ್ಠೆ ಬದಲಾಯಿಸಿದ್ದಾರೆಂದು ಹೇಳಲಾದ ಹತ್ತು ಬಿಆರ್‌ಎಸ್ ಶಾಸಕರನ್ನು ಅನರ್ಹಗೊಳಿಸುವಂತೆ ಕೋರಿದ್ದ ಅರ್ಜಿಗಳ ಪೈಕಿ ಐದು ಅರ್ಜಿಗಳನ್ನು ತೆಲಂಗಾಣ ವಿಧಾನಸಭೆಯ ಸ್ಪೀಕರ್ ಗದ್ದಂ ಪ್ರಸಾದ್ ಕುಮಾರ್ ಬುಧವಾರ (ಡಿಸೆಂಬರ್ 18) ತಿರಸ್ಕರಿಸಿದ್ದಾರೆ....

ಸಾಮಾಜಿಕ ಬಹಿಷ್ಕಾರ, ದ್ವೇಷ ಭಾಷಣ ತಡೆ ವಿಧೇಯಕಗಳು ವಿಧಾನಸಭೆಯಲ್ಲಿ ಅಂಗೀಕಾರ

ಕರ್ನಾಟಕ ಸಾಮಾಜಿಕ ಬಹಿಷ್ಕಾರ (ಪ್ರತಿಬಂಧ, ನಿಷೇಧ ಮತ್ತು ಪರಿಹಾರ) ವಿಧೇಯಕ-2025 ಗುರುವಾರ (ಡಿ.18) ವಿಧಾನಸಭೆಯಲ್ಲಿ ಸರ್ವಾನುಮತದ ಅಂಗೀಕಾರಗೊಂಡಿತು. ಬೆಳಗಾವಿ ಸುವರ್ಣ ಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ವಿಧಾನಮಂಡಲ ಅಧಿವೇಶನದ ವಿಧಾನಸಭೆ ಕಲಾಪದಲ್ಲಿ ಸಮಾಜ ಕಲ್ಯಾಣ ಇಲಾಖೆ...

ಆಕ್ರಮಿತ ಪೂರ್ವ ಜೆರುಸಲೆಮ್ ವಸಾಹತು ಪ್ರದೇಶದಲ್ಲಿ 9000 ವಸತಿ ಘಟಕಗಳ ಯೋಜನೆ ಮುಂದಿಟ್ಟ ಇಸ್ರೇಲ್ 

ಆಕ್ರಮಿತ ಪೂರ್ವ ಜೆರುಸಲೆಮ್‌ನಲ್ಲಿರುವ ಕೈಬಿಟ್ಟ ಖಲಾಂಡಿಯಾ ವಿಮಾನ ನಿಲ್ದಾಣದ ಸ್ಥಳ ಬಳಿ ಅಕ್ರಮ ವಸಾಹತು ಪ್ರದೇಶದಲ್ಲಿ ಸುಮಾರು 9,000 ಹೊಸ ವಸತಿ ಘಟಕಗಳನ್ನು ನಿರ್ಮಿಸಲು ಇಸ್ರೇಲಿ ಆಕ್ರಮಿತ ಅಧಿಕಾರಿಗಳು ಯೋಜನೆಗಳನ್ನು ರೂಪಿಸಲು ಸಜ್ಜಾಗಿದ್ದಾರೆ....

ವಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಲೋಕಸಭೆಯಲ್ಲಿ ‘ವಿಬಿ-ಜಿ ರಾಮ್ ಜಿ ಮಸೂದೆ’ ಅಂಗೀಕಾರ

ಪ್ರತಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಗುರುವಾರ (ಡಿ.18) ಲೋಕಸಭೆಯಲ್ಲಿ 'ವಿಕ್ಷಿತ್ ಭಾರತ್ ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ್ ) (ವಿಬಿ-ಜಿ ರಾಮ್ ಜಿ) ಮಸೂದೆ ಅಂಗೀಕಾರಗೊಂಡಿತು. ಈ ಮಸೂದೆ 2005ರಲ್ಲಿ...

ರಾಹುಲ್ ಗಾಂಧಿ ಆಪ್ತ ಸಹಾಯಕನ ಪತ್ನಿ ಪ್ರಜ್ಞಾ ಸತವ್ ಕಾಂಗ್ರೆಸ್ ಎಂಎಲ್‌ಸಿ ಸ್ಥಾನಕ್ಕೆ ರಾಜೀನಾಮೆ; ಬಿಜೆಪಿ ಸೇರುವ ನಿರೀಕ್ಷೆ

ಕಾಂಗ್ರೆಸ್ಸಿಗ ಮತ್ತು ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿಯವರ ಆಪ್ತರಾಗಿದ್ದ ದಿವಂಗತ ರಾಜೀವ್ ಸತವ್ ಅವರ ಪತ್ನಿ ಸತವ್ ಬಿಜೆಪಿಗೆ ಸೇರುವ ನಿರೀಕ್ಷೆಯಿದೆ. ಮಹಾರಾಷ್ಟ್ರದ ಕಾಂಗ್ರೆಸ್ ನಾಯಕಿ ಪ್ರಜ್ಞಾ ಸತವ್ ಅವರು ಗುರುವಾರ...

ಭೂ ಕಬಳಿಕೆ ಆರೋಪ : ಸದನದಲ್ಲಿ ಚರ್ಚೆಗೆ ಸಿದ್ದ ಎಂದ ಸಚಿವ ಕೃಷ್ಣ ಬೈರೇಗೌಡ

"ಸದನದ ಸದಸ್ಯನಾಗಿ ನನ್ನ ಹಕ್ಕನ್ನು ಬಿಟ್ಟುಕೊಡಲು ಸಿದ್ದನಿದ್ದೇನೆ. ನನ್ನ ಬಗ್ಗೆ ಎತ್ತಿರುವ ವೈಯಕ್ತಿಕ ಆರೋಪದ ಬಗ್ಗೆ ಚರ್ಚೆಗೆ ಸಿದ್ದ" ಎಂದು ಸಚಿವ ಕೃಷ್ಣ ಬೈರೇಗೌಡ ಹೇಳಿದರು. ಗುರುವಾರ (ಡಿ.18) ವಿಧಾನಸಭೆಯ ಶೂನ್ಯ ವೇಳೆಯಲ್ಲಿ, ವಿಧಾನಪರಿಷತ್...

ಡಿಸೆಂಬರ್ 15 ರ ಪ್ರತಿಭಟನೆಯಲ್ಲಿ ಭಾಗವಹಿಸಿದ್ದಕ್ಕಾಗಿ ಜಾಮಿಯಾ ಮಿಲಿಯಾ ವಿದ್ಯಾರ್ಥಿಗಳಿಗೆ ವಿಶ್ವವಿದ್ಯಾಲಯದಿಂದ ಶೋಕಾಸ್ ನೋಟಿಸ್‌

2019 ರಲ್ಲಿ ವಿದ್ಯಾರ್ಥಿಗಳ ಮೇಲಿನ ಹಿಂಸಾಚಾರ ನಡೆದು ಆರು ವರ್ಷಗಳು ತುಂಬಿದ್ದು, ಅದರ ವಾರ್ಷಿಕ ನೆನಪಿನಲ್ಲಿ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿದ್ಯಾರ್ಥಿಗಳು ಡಿಸೆಂಬರ್ 15 ರಂದು ಕ್ಯಾಂಪಸ್ ಒಳಗೆ ದೊಡ್ಡ ಪ್ರತಿಭಟನೆ ನಡೆಸಿದ್ದರು....

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...