Homeಕರ್ನಾಟಕಕನ್ನಡ ರಾಜ್ಯೋತ್ಸವದಂದು ‘ಪುನೀತ್ ರಾಜ್‌ಕುಮಾರ್‌‌’ ಅವರಿಗೆ ಮರಣೋತ್ತರ ‘ಕರ್ನಾಟಕ ರತ್ನ’ ಪ್ರಶಸ್ತಿ ಪ್ರದಾನ

ಕನ್ನಡ ರಾಜ್ಯೋತ್ಸವದಂದು ‘ಪುನೀತ್ ರಾಜ್‌ಕುಮಾರ್‌‌’ ಅವರಿಗೆ ಮರಣೋತ್ತರ ‘ಕರ್ನಾಟಕ ರತ್ನ’ ಪ್ರಶಸ್ತಿ ಪ್ರದಾನ

- Advertisement -
- Advertisement -

ಕನ್ನಡ ಚಿತ್ರರಂಗದ ಮೇರುನಟ ದಿವಂಗತ ಡಾ. ಪುನೀತ್ ರಾಜ್‍ಕುಮಾರ್ ಅವರಿಗೆ ‘ಕರ್ನಾಟಕ ರತ್ನ’ ಪ್ರಶಸ್ತಿಯನ್ನು ನವೆಂಬರ್ 1ರಂದು ಪ್ರದಾನ ಮಾಡಲು ರಾಜ್ಯ ಸರ್ಕಾರ ತಿರ್ಮಾನಿಸಿದೆ.

ಈ ಕುರಿತು ಟ್ವೀಟ್ ಮಾಡಿರುವ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು, ಕನ್ನಡ ರಾಜ್ಯೋತ್ಸವದಂದು ಪ್ರಶಸ್ತಿ ಪ್ರದಾನ ಮಾಡುವ ಕುರಿತು ತಿಳಿಸಿದ್ದಾರೆ.

ನಮ್ಮನ್ನಗಲಿದ ನಾಡಿನ ಪ್ರತಿಭಾನ್ವಿತ ನಟ ಪುನೀತ್ ರಾಜ್‌ಕುಮಾರ್‌ ಅವರಿಗೆ ಮರಣೋತ್ತರವಾಗಿ ಪ್ರತಿಷ್ಠಿತ ಕರ್ನಾಟಕ ರತ್ನ ಗೌರವ ನೀಡಬೇಕು ಎಂಬ ಅಭಿಮಾನಿಗಳ ಕೂಗಿಗೆ ರಾಜ್ಯ ಸರ್ಕಾರ ಸಕರಾತ್ಮಕವಾಗಿ ಸ್ಪಂದಿಸಿ, ಪ್ರಶಸ್ತಿ ಘೊಷಣೆ ಮಾಡಿತ್ತು.

’ಪುನೀತ್ ರಾಜ್‌ಕುಮಾರ್‌ಗೆ ಕರ್ನಾಟಕ ರತ್ನ ಪ್ರಶಸ್ತಿ ನೀಡಬೇಕೆಂಬ ಬೇಡಿಕೆ ಚಿತ್ರರಂಗ ಮತ್ತು ಅಭಿಮಾನಿಗಳಿಂದ ಕೇಳಿ ಬಂದಿದೆ. ತಕ್ಷಣಕ್ಕೆ ಈ ಬೇಡಿಕರ ಬಗ್ಗೆ ಏನು ಹೇಳಲಾಗದು. ಈ ಬಗ್ಗೆ ಪ್ರಮುಖರ ಜತೆ ಚರ್ಚಿಸಿ ಸೂಕ್ತ ತೀರ್ಮಾನ ಕೈಗೊಳ್ಳುತ್ತೇವೆ’ ಎಂದು ಈ ಹಿಂದೆ ಬೊಮ್ಮಾಯಿಯವರು ಹೇಳಿದ್ದರು.

ಅಭಿಮಾನಿಗಳಿಂದ ಪ್ರೀತಿಯಿಂದ ಅಪ್ಪು ಎಂದು ಕರೆಸಿಕೊಳ್ಳುವ ಪವರ್‌ ಸ್ಟಾರ್ ಪುನೀತ್ ರಾಜಕುಮಾರ್ ಕನ್ನಡ ಚಿತ್ರರಂಗದ ಪ್ರಮುಖ ನಾಯಕನಟ. ಪುನೀತ್ ರಾಜ್‌ಕುಮಾರ್‌ ನಟರಾಗಿಯಷ್ಟೇ ಅಲ್ಲದೆ ಹಿನ್ನೆಲೆ ಗಾಯಕರಾಗಿ, ನಿರ್ಮಾಪಕರಾಗಿಯೂ ಚಿತ್ರರಂಗಕ್ಕೆ ಕೊಡುಗೆ ನೀಡಿದ್ದಾರೆ.

1976 ರಲ್ಲಿ ತೆರೆಕಂಡ ಡಾ.ರಾಜ್‌ಕುಮಾರ್‌ ಅಭಿನಯದ ‘ಪ್ರೇಮದ ಕಾಣಿಕೆ’ ಚಿತ್ರದ ಮೂಲಕ ತೆರೆಯ ಮೇಲೆ ಕಾಣಿಸಿಕೊಂಡಿದ್ದರು. ಆಗ ಪುನೀತ್ ಆರು ತಿಂಗಳು ಮಗು. ನಂತರ ವಸಂತ ಗೀತ (1980)ಮೂಲಕ ಬಾಲ ನಟನಾಗಿ ಕನ್ನಡ ಚಿತ್ರರಂಗಕ್ಕೆ ಪಾದಾರ್ಪಣೆ ಮಾಡಿದ ಪುನೀತ್‌ ರಾಜ್‌ಕುಮಾರ್, ಸುಮಾರು ನಾಲ್ಕು ದಶಕಗಳ ತಮ್ಮ ಸಿನಿಜೀವನದಲ್ಲಿ ಬಾಲ ಕಲಾವಿದನಾಗಿ 14 ಚಿತ್ರಗಳು ಮತ್ತು ನಾಯಕ ನಟನಾಗಿ 28ಕ್ಕೂ ಹೆಚ್ಚು ಚಿತ್ರಗಳಲ್ಲಿ ನಟಿಸಿದ್ದಾರೆ.

ಕನ್ನಡ ಚಿತ್ರರಂಗಕ್ಕೆ ಅಪಾರ ಕೊಡುಗೆ ನೀಡಿರುವ ಅಣ್ಣಾವ್ರ ಕುಟುಂಬದ ಕುಡಿ ಪುನೀತ್ ರಾಜ್‌ಕುಮಾರ್. 1975 ರ ಮಾರ್ಚ್ 17 ರಂದು ವರನಟ ಡಾ.ರಾಜಕುಮಾರ್ ಮತ್ತು ಪಾರ್ವತಮ್ಮರವರ ಕಿರಿಯ ಪುತ್ರನಾಗಿ ಪುನೀತ್ ರಾಜ್‌ಕುಮಾರ್ ಜನಿಸಿದರು. ಇವರ ಹಿರಿಯ ಸಹೋದರರಾದ ಶಿವರಾಜ ಕುಮಾರ್ ಮತ್ತು ರಾಘವೇಂದ್ರ ರಾಜಕುಮಾರ್ ಕನ್ನಡ ಚಿತ್ರರಂಗದ ಯಶಸ್ವಿ ನಾಯಕನಟರು.

ತಂದೆ ರಾಜ್‌ಕುಮಾರ್ ಅವರ ಚಿತ್ರಗಳನ್ನು ನೋಡುತ್ತಾ, ಅವರ ಶೂಟಿಂಗ್‌ ಸೆಟ್‌ಗಳಿಗೆ ಭೇಟಿ ಕೊಡುತ್ತಿದ್ದ ಅಪ್ಪುಗೆ ಬಾಲ್ಯದಿಂದಲೇ ನಟನೆಯಲ್ಲಿ ಆಸಕ್ತಿಯಿತ್ತು. ಈ ಕಾರಣದಿಂದಲೇ ಬಾಲ ನಟನಾಗಿ ಚಿತ್ರರಂಗದಲ್ಲಿ ಅಳಿಸದ ಹೆಜ್ಜೆಗುರುತು ಮೂಡಿಸಿದ್ದಾರೆ.

ಬಾಲ್ಯದಲ್ಲಿ ತನ್ನ ತಂದೆ ರಾಜಕುಮಾರ್ ಅಭಿನಯದ ಚಿತ್ರಗಳಲ್ಲಿ ಬಾಲ್ಯ ನಟನಾಗಿ, ಭಾಗ್ಯವಂತ, ಚಲಿಸುವ ಮೋಡಗಳು, ಎರಡು ನಕ್ಷತ್ರಗಳು, ಪ್ರೇಮದ ಕಾಣಿಕೆ, ಬೆಟ್ಟದ ಹೂವು, ಶಿವ ಮೆಚ್ಚಿದ ಕಣ್ಣಪ್ಪ, ಪರಶುರಾಮ್, ಯಾರಿವನು, ಭಕ್ತ ಪ್ರಹ್ಲಾದ, ವಸಂತ ಗೀತ, ಭೂಮಿಗೆ ಬಂದ ಭಗವಂತ, ಸನಾದಿ ಅಪ್ಪಣ್ಣ, ತಾಯಿಗೆ ತಕ್ಕ ಮಗ ಸೇರಿದಂತೆ ಹಲವು ಚಿತ್ರಗಳ ಮೂಲಕ ಜನರ ಮನಗೆದ್ದಿದ್ದಾರೆ. ಪುನೀತ್ ಅವರ ಮೊದಲು ಹೆಸರು ಮಾ.ಲೋಹಿತ್.

ಪುನೀತ್‌ ನಟನೆಯ 1985ರಲ್ಲಿ ತೆರೆಕಂಡ ಬೆಟ್ಟದ ಹೂವು ಚಿತ್ರದ ರಾಮು ಪಾತ್ರಕ್ಕೆ ರಾಷ್ಟ್ರ ಪ್ರಶಸ್ತಿಯನ್ನು ಪಡೆದಿದ್ದಾರೆ. ‘ಚಲಿಸುವ ಮೋಡಗಳು’ ಹಾಗೂ ‘ಎರಡು ಕನಸು’ ಚಿತ್ರಗಳಿಗಾಗಿ ಅತ್ಯುತ್ತಮ ಬಾಲ ನಟ ವಿಭಾಗದಲ್ಲಿ ರಾಜ್ಯ ಪ್ರಶಸ್ತಿ ಪಡೆದಿದ್ದಾರೆ.

ನಂತರ ಪುನೀತ್ 2002ರ ಅಪ್ಪು ಚಿತ್ರದ ಮೂಲಕ ನಾಯಕ ನಟನಾಗಿ ಬೆಳ್ಳಿತೆರೆಗೆ ಕಾಲಿಟ್ಟರು. ಅವರ ಅಭಿ, ಆಕಾಶ್, ಅರಸು, ಮಿಲನ, ಜಾಕಿ, ಹುಡುಗರು, ಅಣ್ಣಾ ಬಾಂಡ್, ಪವರ್, ಮೌರ್ಯ, ನಮ್ಮ ಬಸವ, ಪೃಥ್ವಿ, ವಂಶಿ, ರಾಜ್‌, ಪರಮಾತ್ಮ, ಯಾರೇ ಕೂಗಾಡಲಿ, ನಟ ಸಾರ್ವಭೌಮ, ರಾಜಕುಮಾರ, ಅಂಜನಿಪುತ್ರ, ರಣವಿಕ್ರಮ, ದೊಡ್ಮನೆ ಹುಡುಗ, ರಾಮ್, ನಿನ್ನಿಂದಲೇ, ಮೈತ್ರಿ, ಚಕ್ರವ್ಯೂಹ, ಯುವರತ್ನ ಸೇರಿದಂತೆ ಹಲವು ಯಶಸ್ವಿ ಚಲನಚಿತ್ರಗಳಲ್ಲಿ ನಟಿಸಿದರು.

ಇದನ್ನೂ ಓದಿ: ಪುನೀತ್ ರಾಜಕುಮಾರ್ ನುಡಿನಮನ; ಮುಗ್ಧ ನಗುವೊಂದರ ಕಣ್ಮರೆ

ಪುನೀತ್‌ ರಾಜ್‌ಕುಮಾರ್ ಚಿತ್ರ ನಿರ್ಮಾಪಕರಾಗಿ`ಕವಲುದಾರಿ’, `ಮಾಯಾಬಜಾರ್’, ಫ್ರೆಂಚ್ ಬಿರಿಯಾನಿ, ಲಾ, ಫ್ಯಾಮಿಲಿ ಪ್ಯಾಕ್ ಎಂಬ ಚಿತ್ರಗಳನ್ನು ಪಿಆರ್‌ಕೆ ಪ್ರೊಡಕ್ಷನ್‌ ಎಂಬ ತಮ್ಮ ಹೋಮ್ ಬ್ಯಾನರ್ನಲ್ಲಿ ನಿರ್ಮಿಸಿದ್ದಾರೆ. ಜೊತೆಗೆ ಪ್ರೊಡಕ್ಷನ್‌ ಹೌಸ್ ಮೂಲಕ ಕಿರುತೆರೆ ಧಾರಾವಾಹಿಗಳನ್ನು ಕೂಡ ನಿರ್ಮಿಸಿದ್ದಾರೆ. ತಾಯಿಯ ನೆನಪಿನಲ್ಲಿ `ಪಿ.ಆರ್.ಕೆ ‘ ಆಡಿಯೋ ಕಂಪನಿಯೊಂದನ್ನು ಸ್ಥಾಪಿಸಿದ್ದಾರೆ.

ಇದರ ಜೊತೆಗೆ ಪ್ರಸಿದ್ಧ ಟಿವಿ ಕಾರ್ಯಕ್ರಮ ಕನ್ನಡದ ಕೋಟ್ಯಧಿಪತಿ, ಫ್ಯಾಮಿಲಿ ಪವರ್ ಶೋ ಗಳನ್ನು ನಿರೂಪಣೆ ಮಾಡಿದ್ದಾರೆ. ಚಿತ್ರನಟ ,ಹಿನ್ನೆಲೆ ಗಾಯಕ ಮತ್ತು ದೂರದರ್ಶನ ನಿರೂಪಕರೂ ಆಗಿದ್ದ ಪುನೀತ್‌ ರಾಜ್‌ಕುಮಾರ್, ನಾಯಕ ನಟರಾಗಿ ನಟಿಸಿದ್ದ ಮಿಲನ ಮತ್ತು ಜಾಕಿ ಚಿತ್ರಗಳಿಗೆ ಕರ್ನಾಟಕ ರಾಜ್ಯ ಚಲನಚಿತ್ರ ಪ್ರಶಸ್ತಿಯ ಉತ್ತಮ ನಟ ಪ್ರಶಸ್ತಿ ತನ್ನದಾಗಿಸಿಕೊಂಡಿದ್ದರು. ಅಲ್ಲದೆ, ಹುಡುಗರು, ಯಾರೇ ಕೂಗಾಡಲಿ, ರಣ ವಿಕ್ರಮ, ರಾಜಕುಮಾರ ಸಿನಿಮಾಗಳಿಗೆ ದಕ್ಷಿಣ ಭಾರತ ಅಂತಾರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ ಪಡೆದುಕೊಂಡಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...

ತಾರತಮ್ಯ ಮುಕ್ತ ಕ್ಯಾಂಪಸ್ ನಿರ್ಮಾಣದತ್ತ ಮಹತ್ವದ ಹೆಜ್ಜೆ; ‘ರೋಹಿತ್ ವೇಮುಲ ಮಸೂದೆ’ಗೆ ಸಚಿವ ಸಂಪುಟ ಅನುಮೋದನೆ

ಕರ್ನಾಟಕ ಸರ್ಕಾರದ ಸಚಿವ ಸಂಪುಟ ಗುರುವಾರ (ಏ.16) ದಂದು ಕರ್ನಾಟಕ ರೋಹಿತ್ ವೇಮುಲ (ಹೊರಗಿಡುವಿಕೆ ಅಥವಾ ಅನ್ಯಾಯ ತಡೆಗಟ್ಟುವಿಕೆ) (ಶಿಕ್ಷಣ ಮತ್ತು ಘನತೆಯ ಹಕ್ಕು) ಮಸೂದೆ’ಗೆ ಅನುಮೋದನೆ ನೀಡಿದೆ. ಹೈದರಾಬಾದ್‌ನ ಕೆಂದ್ರೀಯ ವಿಶ್ವವಿದ್ಯಾಲಯದಲ್ಲಿ...