Homeಮುಖಪುಟಜವಳಿ ಮೇಲಿನ ಜಿಎಸ್‌ಟಿ ಹೆಚ್ಚಳದ ನಿರ್ಧಾರ ಮುಂದೂಡಿಕೆ

ಜವಳಿ ಮೇಲಿನ ಜಿಎಸ್‌ಟಿ ಹೆಚ್ಚಳದ ನಿರ್ಧಾರ ಮುಂದೂಡಿಕೆ

ಒಕ್ಕೂಟ ಸರ್ಕಾರದ ನಿರ್ಧಾರದ ವಿರುದ್ಧ ಜವಳಿ ಉದ್ಯಮ ಮತ್ತು ಹಲವು ರಾಜ್ಯಗಳ ಆಕ್ಷೇಪಣೆ ಎತ್ತಿದ್ದವು

- Advertisement -
- Advertisement -

ಜವಳಿ ಮೇಲಿನ ಜಿಎಸ್‌ಟಿ ಹೆಚ್ಚಳದ ನಿರ್ಧಾರವನ್ನು ಮುಂದೂಡಲು ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್‌ ಅವರ ಅಧ್ಯಕ್ಷತೆಯಲ್ಲಿ ಶುಕ್ರವಾರ ನಡೆದ ಸರಕು ಮತ್ತು ಸೇವಾ ತೆರಿಗೆ (ಜಿಎಸ್‌ಟಿ) ಕೌನ್ಸಿಲ್‌ ಸಭೆಯು ತೀರ್ಮಾನಿಸಿದೆ ಎಂದು ಮೂಲಗಳನ್ನು ಉಲ್ಲೇಖಿಸಿ ಎನ್‌ಡಿಟಿವಿ ವರದಿ ಮಾಡಿದೆ. ಪ್ರಸ್ತುತ ಜವಳಿ ಮೇಲೆ 5% ಜಿಎಸ್‌ಟಿ ವಿಧಿಸಲಾಗುತ್ತಿದ್ದು, ಇದನ್ನು 12% ಕ್ಕೆ ಹೆಚ್ಚಿಸುವ ಬಗ್ಗೆ ಒಕ್ಕೂಟ ಸರ್ಕಾರ ಈ ಹಿಂದೆ ತೀರ್ಮಾನಿಸಿತ್ತು. ಆದರೆ ಈ ತೀರ್ಮಾನದ ವಿರುದ್ದ ಜವಳಿ ಉದ್ಯಮಗಳು ಮತ್ತು ದೇಶದ ಹಲವು ರಾಜ್ಯಗಳು ಆಕ್ಷೇಪ ಎತ್ತಿದ್ದವು.

ಜವಳಿ ಉತ್ಪನ್ನಗಳ ಮೇಲಿನ ತೆರಿಗೆ ದರ ಹೆಚ್ಚಳಕ್ಕೆ ಹಲವು ರಾಜ್ಯಗಳು ಆಕ್ಷೇಪ ವ್ಯಕ್ತಪಡಿಸಿದ್ದು, ದರ ಏರಿಕೆಯನ್ನು ತಡೆಹಿಡಿಯುವಂತೆ ಒತ್ತಾಯಿಸಿದ್ದವು. ಗುಜರಾತ್, ಪಶ್ಚಿಮ ಬಂಗಾಳ, ದೆಹಲಿ, ರಾಜಸ್ಥಾನ ಮತ್ತು ತಮಿಳುನಾಡು ರಾಜ್ಯಗಳು ಈ ವಿಷಯವನ್ನು ಪ್ರಸ್ತಾಪಿಸಿದ್ದವು.

ಇದನ್ನೂ ಓದಿ:‘ಜಿಎಸ್‌ಟಿ 12%’: ಜನವರಿಯಿಂದ ಬಟ್ಟೆಬರೆ ಮತ್ತು ಪಾದರಕ್ಷೆಗಳ ಬೆಲೆ ಏರಿಕೆ!

ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಅವರು ವಿವಿಧ ರಾಜ್ಯಗಳ ವಿತ್ತ ಸಚಿವರ ಬಜೆಟ್ ಪೂರ್ವ ಸಮಾಲೋಚನೆಯ ಸಂದರ್ಭದಲ್ಲಿ ಈ ವಿಷಯವು ಚರ್ಚೆಗೆ ಬಂದಿತ್ತು.

ದೆಹಲಿಯ ಉಪಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಮಾತನಾಡಿ, ಜವಳಿ ಮೇಲಿನ ತೆರಿಗೆ ಹೆಚ್ಚಳವನ್ನು ದೆಹಲಿ ಸರ್ಕಾರ ವಿರೋಧಿಸುತ್ತದೆ. ಸಾಮಾನ್ಯ ಜನರ ಧ್ವನಿಯನ್ನು ಹತ್ತಿಕ್ಕಲು ಸರ್ಕಾರ ಬಿಡುವುದಿಲ್ಲ ಎಂದು ಸಿಸೋಡಿಯಾ ಹೇಳಿದ್ದಾರೆ.

ಜವಳಿ ವ್ಯಾಪಾರಿಗಳು ಜಿಎಸ್‌ಟಿ ದರಗಳ ಹೆಚ್ಚಳವನ್ನು ವಿರೋಧಿಸುತ್ತಿದ್ದಾರೆ ಮತ್ತು ಅವರ ಬೇಡಿಕೆಗಳು ಸಮರ್ಥನೀಯವಾಗಿವೆ, ಆದ್ದರಿಂದ ಆಮ್ ಆದ್ಮಿ ಪಕ್ಷ (ಎಎಪಿ)ದ ಸರ್ಕಾರವು ಅವರ ಬೇಡಿಕೆಗಳ ಪರವಾಗಿದೆ ಎಂದು ಅವರು ಹೇಳಿದ್ದರು.

ಇದನ್ನೂ ಓದಿ:ಅತ್ಯಾಚಾರ, ಕೊಲೆ ಪ್ರಕರಣ: ಜೀವಾವಧಿ ಶಿಕ್ಷೆ ನೀಡಿದ ನ್ಯಾಯಾಧೀಶರ ಮೇಲೆ ಚಪ್ಪಲಿ ಎಸೆದ ಅಪರಾಧಿ

ಪಶ್ಚಿಮ ಬಂಗಾಳದ ಮಾಜಿ ವಿತ್ತ ಸಚಿವ ಅಮಿತ್ ಮಿತ್ರಾ ಅವರು ಒಕ್ಕೂಟ ಸರ್ಕಾರದ ಹಣಕಾಸು ಸಚಿವರಿಗೆ ಜವಳಿ ಮೇಲಿನ ಪ್ರಸ್ತಾವಿತ ಹೆಚ್ಚಳವನ್ನು ಹಿಂತೆಗೆದುಕೊಳ್ಳುವಂತೆ ಒತ್ತಾಯಿಸಿದ್ದರು. ಈ ಹೆಚ್ಚಳದಿಂದಾಗಿ ಸುಮಾರು ಒಂದು ಲಕ್ಷ ಜವಳಿ ಘಟಕಗಳು ಮುಚ್ಚಿಹೋಗುತ್ತದೆ ಮತ್ತು 15 ಲಕ್ಷ ಉದ್ಯೋಗ ನಷ್ಟವಾಗುತ್ತದೆ ಎಂದು ಅವರು ಹೇಳಿದ್ದರು.

ಇಷ್ಟೇ ಅಲ್ಲದೆ, ಕೈಗಾರಿಕಾ ಸಂಸ್ಥೆಗಳು ಕೂಡಾ ತೆರಿಗೆ ಹೆಚ್ಚಿಸುವುದನ್ನು ವಿರೋಧಿಸಿದ್ದವು. ವಿಶೇಷವಾಗಿ ಈ ಹೆಚ್ಚಳದಿಂದ ಅಸಂಘಟಿತ ವಲಯ ಮತ್ತು ಸೂಕ್ಷ್ಮ ಸಣ್ಣ ಮತ್ತು ಮಧ್ಯಮ ಉದ್ಯಮಗಳಿಗೆ (ಎಂಎಸ್‌ಎಂಇ) ಹೆಚ್ಚಿ ಹೊಡೆತ ಬಿದ್ದು, ಬಡವರು ಖರೀದಿಸುವ ಉಡುಪುಗಳ ದರಗಳು ಹೆಚ್ಚಳವಾಗುತ್ತಿತ್ತು.

ಜಿಎಸ್‌ಟಿ ಕೌನ್ಸಿಲ್‌ನ ಶಿಫಾರಸುಗಳ ಮೇರೆಗೆ ಕೇಂದ್ರೀಯ ಪರೋಕ್ಷ ತೆರಿಗೆಗಳು ಮತ್ತು ಕಸ್ಟಮ್ಸ್ ಮಂಡಳಿ (ಸಿಬಿಐಸಿ), ಜನವರಿ 1, 2022 ರಿಂದ ಜವಳಿ ಮತ್ತು ಪಾದರಕ್ಷೆಗಳ ಮೇಲಿನ ಜಿಎಸ್‌ಟಿ ದರವನ್ನು 5% ರಿಂದ 12% ಕ್ಕೆ ಏರಿಸಲಾಗುವುದು ಎಂದು ಘೋಷಿಸಿತ್ತು.

ಇದನ್ನೂ ಓದಿ:12 ವರ್ಷಗಳಲ್ಲೇ ಗರಿಷ್ಠ ಮಟ್ಟದ ಸಗಟು ಹಣದುಬ್ಬರ ದಾಖಲು

ಜಿಎಸ್‌ಟಿ ಕೌನ್ಸಿಲ್‌ನ 46 ನೇ ಸಭೆ ಇಂದು ದೆಹಲಿಯಲ್ಲಿ ನಡೆಯುತ್ತಿದ್ದು, ಸಭೆಯಲ್ಲಿ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ಹಣಕಾಸು ಸಚಿವರು ಮತ್ತು ಹಿರಿಯ ಅಧಿಕಾರಿಗಳು ಸಹ ಉಪಸ್ಥಿತರಿದ್ದರು.

ಫೆಬ್ರವರಿ 1, 2022 ರಂದು ಸಂಸತ್ತಿನಲ್ಲಿ ಮಂಡನೆಯಾಗಲಿರುವ 2022-23ರ ಒಕ್ಕೂಟ ಸರ್ಕಾರದ ಬಜೆಟ್‌ಗೆ ಮುಂಚಿತವಾಗಿ ಸಭೆ ನಡೆಯುತ್ತಿರುವುದರಿಂದ ಈ ಸಭೆಯು ಮಹತ್ವದ್ದಾಗಿದೆ.

ಕೊರೊನಾದಿಂದಾಗಿ ಜವಳಿ ಉದ್ಯಮಕ್ಕೆ ಕೆಟ್ಟ ಪರಿಣಾಮ ಬೀರಿದೆ. ಈ ಉದ್ಯಮ ವಲಯವು, ಕೃಷಿಯ ನಂತರ ಎರಡನೇ ಅತಿ ದೊಡ್ಡ ಆದಾಯ ಉತ್ಪಾದಿಸುವ ವಲಯವಾಗಿದೆ.

ಇದನ್ನೂ ಓದಿ:ತಮಿಳು ನಾಡಗೀತೆಯು ಪ್ರಾರ್ಥನೆಯಾಗಿದ್ದು, ಅದನ್ನು ಹಾಡುವಾಗ ಎದ್ದುನಿಲ್ಲಬೇಕಾಗಿಲ್ಲ: ಮದ್ರಾಸ್ ಹೈಕೋರ್ಟ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಭಾರತವನ್ನು ಬೆದರಿಸುವಲ್ಲಿ ತಿಂಗಳುಗಟ್ಟಲೆ ಕಳೆದ ಅಮೆರಿಕ ಈಗ ಜಗತ್ತನ್ನ ಬೇಡಿಕೊಳ್ಳುತ್ತಿದೆ’: ರಷ್ಯಾದ ತೈಲ ವಿಚಾರದ ಕುರಿತು ಇರಾನ್ ಟೀಕೆ

ಟೆಹ್ರಾನ್: ರಷ್ಯಾದ ತೈಲದ ವಿಷಯದಲ್ಲಿ ಅಮೆರಿಕವು ದ್ವಿಮುಖ ನೀತಿಯನ್ನು ಅನುಸರಿಸುತ್ತಿದೆ ಎಂದು ಇರಾನ್ ಶನಿವಾರ ಆರೋಪಿಸಿದೆ. ವಾಷಿಂಗ್ಟನ್ ಈಗ ಒತ್ತಡ ಮತ್ತು ನಿರ್ಬಂಧಗಳ ಮೂಲಕ ನಿರ್ಬಂಧಿಸಲು ಪ್ರಯತ್ನಿಸಿದ ಅದೇ ಕಚ್ಚಾ ತೈಲವನ್ನು ಖರೀದಿಸಲು...

ಗಾಝಾ ನರಮೇಧ : ಅಂತಾರಾಷ್ಟ್ರೀಯ ನ್ಯಾಯಾಲಯದಲ್ಲಿ ಇಸ್ರೇಲ್‌ ಪರ ಅಮೆರಿಕ ವಕಾಲತ್ತು

ಗಾಝಾ ನರಮೇಧಕ್ಕೆ ಸಂಬಂಧಿಸಿದಂತೆ ಇಸ್ರೇಲ್ ವಿರುದ್ದ ಅಂತಾರಾಷ್ಟ್ರೀಯ ನ್ಯಾಯಾಲಯದಲ್ಲಿ ದಕ್ಷಿಣ ಆಫ್ರಿಕಾ ಹೂಡಿರುವ ಪ್ರಕರಣದಲ್ಲಿ ಅಮೆರಿಕ ಸೇರಿದಂತೆ ಕೆಲ ರಾಷ್ಟ್ರಗಳು ಮಧ್ಯ ಪ್ರವೇಶಿಸಿದ್ದು, ಇಸ್ರೇಲ್ ಪರ ವಕಾಲತ್ತು ವಹಿಸಲು ಮುಂದಾಗಿವೆ ಎಂದು ವರದಿಯಾಗಿದೆ. ದಿ...

ಇರಾನ್‌ನ ಕಿರೀಟ ರತ್ನ ಖಾರ್ಗ್ ದ್ವೀಪದ ಮೇಲೆ ಅಮೆರಿಕದಿಂದ ಬಾಂಬ್ ದಾಳಿ : ಟ್ರಂಪ್ ಹೇಳಿಕೆ

ಇರಾನ್‌ನ ಖಾರ್ಗ್ ದ್ವೀಪದ ಮೇಲೆ ಅಮೆರಿಕ 'ಅತ್ಯಂತ ಶಕ್ತಿಶಾಲಿ ಬಾಂಬ್ ದಾಳಿ' ನಡೆಸಿದೆ ಎಂದು ಅಧ್ಯಕ್ಷ ಡೊನಾಲ್ಡ್ ಟ್ರಂಪ್ ತಿಳಿಸಿದ್ದಾರೆ. ದ್ವೀಪದಲ್ಲಿರುವ ತೈಲ ಮೂಲಸೌಕರ್ಯಗಳನ್ನು ನಾಶಪಡಿಸದೆ ಇರಲು ನಿರ್ಧರಿಸಿದ ಅಮೆರಿಕ ಪಡೆಗಳು, ಅಲ್ಲಿನ ಮಿಲಿಟರಿ ಕೇಂದ್ರಗಳನ್ನು...

ಪಂಜಾಬ್‌| ಎಲ್‌ಪಿಜಿ ಸಿಲಿಂಡರ್‌ಗಾಗಿ ಸರತಿ ಸಾಲಿನಲ್ಲಿ ನಿಂತಿದ್ದಾಗಲೇ ಕುಸಿದು ಬಿದ್ದು ಸಾವನ್ನಪ್ಪಿದ ವೃದ್ಧ

ಪಂಜಾಬ್‌ನ ಬರ್ನಾಲಾ ಜಿಲ್ಲೆಯಲ್ಲಿ, ಎಲ್‌ಪಿಜಿ ಸಿಲಿಂಡರ್‌ಗಾಗಿ ಸರತಿ ಸಾಲಿನಲ್ಲಿ ಕಾಯುತ್ತಿದ್ದಾಗ 66 ವರ್ಷದ ವ್ಯಕ್ತಿಯೊಬ್ಬರು ಹೃದಯಾಘಾತದಿಂದ ಕುಸಿದು ಬಿದ್ದು ಸಾವನ್ನಪ್ಪಿರುವ ಘಟನೆ ಶುಕ್ರವಾರ ನಡೆದಿದೆ. ದೇಶದಲ್ಲಿ ಪ್ರಸ್ತುತ ನಡೆಯುತ್ತಿರುವ ಅನಿಲ ಕೊರತೆಯಿಂದ ಉಂಟಾಗುತ್ತಿರುವ...

ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಪದಚ್ಯುತಿಗೆ ಉಭಯ ಸದನಗಳಲ್ಲಿ ನೋಟಿಸ್ ಸಲ್ಲಿಸಿದ ವಿಪಕ್ಷಗಳು

ನವದೆಹಲಿ: ಮುಖ್ಯ ಚುನಾವಣಾ ಆಯುಕ್ತ (ಸಿಇಸಿ) ಜ್ಞಾನೇಶ್ ಕುಮಾರ್ ಅವರನ್ನು ಪದಚ್ಯುತಗೊಳಿಸುವಂತೆ ಕೋರಿ ವಿರೋಧ ಪಕ್ಷದ ಸಂಸದರು ಸಂಸತ್ತಿನ ಉಭಯ ಸದನಗಳಲ್ಲಿ ನೋಟಿಸ್ ಸಲ್ಲಿಸಿರುವುದಾಗಿ ಶುಕ್ರವಾರ ವರದಿಯಾಗಿದೆ.  ಈ ನೋಟಿಸ್‌ಗೆ 130 ಲೋಕಸಭಾ ಸದಸ್ಯರು...

ಹಿಂದೂಯೇತರರಿಗೆ ದೇಗುಲ ಪ್ರವೇಶಕ್ಕೆ ನಿಷೇಧ ಹೇರಿದ ಬದರೀನಾಥ್-ಕೇದಾರನಾಥ ದೇವಾಲಯಗಳ ಸಮಿತಿ

ಮುಂಬರುವ ತೀರ್ಥಯಾತ್ರೆಯ ಋತುವಿನಿಂದ ಜಾರಿಗೆ ಬರುವಂತೆ ಬದರೀನಾಥ್ ಮತ್ತು ಕೇದಾರನಾಥ ದೇವಾಲಯಗಳು ಸೇರಿದಂತೆ ಅದರ ವ್ಯಾಪ್ತಿಯಲ್ಲಿರುವ 47 ಇತರ ದೇವಾಲಯಗಳಿಗೆ ಹಿಂದೂಯೇತರರ ಪ್ರವೇಶವನ್ನು ನಿಷೇಧಿಸುವ ನಿರ್ಣಯವನ್ನು ಸರ್ವಾನುಮತದಿಂದ ದೇವಾಲಯ ಸಮಿತಿಯು ಅಂಗೀಕರಿಸಿದೆ. ಬಿಕೆಟಿಸಿ ಅಧ್ಯಕ್ಷ...

‘ಮಹಿಳೆಯರನ್ನು ಯಾರೂ ಕೆಲಸಕ್ಕೆ ನೇಮಿಸಿಕೊಳ್ಳುವುದಿಲ್ಲ..’; ಕಡ್ಡಾಯ ಮುಟ್ಟಿನ ರಜೆ ಕುರಿತ ಅರ್ಜಿ ತಿರಸ್ಕರಿಸಿದ ಸುಪ್ರೀಂ ಕೋರ್ಟ್ 

ಮಹಿಳೆಯರಿಗೆ ಕಡ್ಡಾಯ ಮುಟ್ಟಿನ ರಜೆ 'ಅವರ ಉದ್ಯೋಗದ ಮೇಲೆ ಪ್ರತಿಕೂಲ ಪರಿಣಾಮ ಬೀರಬಹುದು'. ಏಕೆಂದರೆ, ನಾವು ಅಂತಹ ಕಾನೂನನ್ನು ಜಾರಿಗೆ ತಂದರೆ ಉದ್ಯೋಗದಾತರು ಮಹಿಳೆಯರನ್ನು ಕೆಲಸಕ್ಕೆ ನೇಮಿಸಿಕೊಳ್ಳುವುದಿಲ್ಲ' ಎಂದು ಸುಪ್ರೀಂ ಕೋರ್ಟ್‌ ಮುಖ್ಯ...

ಪ್ಯಾಲೆಸ್ತೀನಿಯನ್ ಬಂಧಿತನ ಮೇಲೆ ಲೈಂಗಿಕ ದೌರ್ಜನ್ಯ; ಇಸ್ರೇಲ್ ಸೈನಿಕರ ವಿರುದ್ಧದ ಆರೋಪ ಕೈಬಿಟ್ಟ ಸೇನೆ

ಕ್ಯಾಮೆರಾದಲ್ಲಿ ಭಾಗಶಃ ಸೆರೆಹಿಡಿಯಲಾದ ಹಲ್ಲೆಯಲ್ಲಿ, ಬಂಧಿತ ಪ್ಯಾಲೆಸ್ತೀನಿಯನ್ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪ ಹೊತ್ತಿರುವ ಐದು ಸೈನಿಕರ ವಿರುದ್ಧದ ಆರೋಪಗಳನ್ನು ಕೈಬಿಡುತ್ತಿರುವುದಾಗಿ ಇಸ್ರೇಲ್ ಸೇನೆ (ಮಾರ್ಚ್ 12) ತಿಳಿಸಿದೆ. ಈ ಘೋಷಣೆಯನ್ನು ಪ್ರಧಾನಿ...

‘ಇರಾನ್ ಸರ್ವೋಚ್ಚ ನಾಯಕ ಜೀವಂತವಾಗಿರಬಹುದು, ಆದರೆ ಗಂಭೀರವಾಗಿ ಗಾಯಗೊಂಡಿದ್ದಾರೆ’: ಡೊನಾಲ್ಡ್ ಟ್ರಂಪ್

ಇರಾನ್‌ನ ಸರ್ವೋಚ್ಚ ನಾಯಕ ಅಯತೊಲ್ಲಾ ಮೊಜ್ತಬಾ ಖಮೇನಿ(56) "ಬಹುಶಃ ಜೀವಂತವಾಗಿದ್ದಾರೆ ಆದರೆ ಗಂಭೀರವಾಗಿ ಗಾಯಗೊಂಡಿದ್ದಾರೆ" ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹೇಳಿದ್ದಾರೆ. ಶುಕ್ರವಾರ ಪ್ರಸಾರವಾದ ಫಾಕ್ಸ್ ನ್ಯೂಸ್ ರೇಡಿಯೋದ ಬ್ರಿಯಾನ್ ಕಿಲ್ಮೀಡ್ ಅವರ...

ಬಾಗಲಕೋಟೆ| ಜನರ ಮೇಲೆ ಕಲ್ಲು ಎಸೆದ ಆರೋಪ; ಸಾವಳಗಿಯಲ್ಲಿ ದಲಿತ ಯುವಕನನ್ನು ಕೊಂದ ಗುಂಪು

ಬಾಗಲಕೋಟೆ ಜಿಲ್ಲೆಯ ಜಮಖಂಡಿ ತಾಲ್ಲೂಕಿನ ಸಾವಳಗಿ ಗ್ರಾಮದಲ್ಲಿ ದಲಿತ ದೌರ್ಜನ್ಯದ ಆಘಾತಕಾರಿ ಘಟನೆಯೊಂದು ನಡೆದಿದೆ. ಶಾಲಾ ಕಾರ್ಯಕ್ರಮವೊಂದರಲ್ಲಿ ಜನರ ಮಲೆ ಸಣ್ಣ ಕಲ್ಲು ಎಸೆದ ಎಂಬ ಆರೋಪದ ಮೇಲೆ ದಲಿತ ಯುವಕನನ್ನು ಕ್ರೂರವಾಗಿ...