Homeಮುಖಪುಟಜವಳಿ ಮೇಲಿನ ಜಿಎಸ್‌ಟಿ ಹೆಚ್ಚಳದ ನಿರ್ಧಾರ ಮುಂದೂಡಿಕೆ

ಜವಳಿ ಮೇಲಿನ ಜಿಎಸ್‌ಟಿ ಹೆಚ್ಚಳದ ನಿರ್ಧಾರ ಮುಂದೂಡಿಕೆ

ಒಕ್ಕೂಟ ಸರ್ಕಾರದ ನಿರ್ಧಾರದ ವಿರುದ್ಧ ಜವಳಿ ಉದ್ಯಮ ಮತ್ತು ಹಲವು ರಾಜ್ಯಗಳ ಆಕ್ಷೇಪಣೆ ಎತ್ತಿದ್ದವು

- Advertisement -
- Advertisement -

ಜವಳಿ ಮೇಲಿನ ಜಿಎಸ್‌ಟಿ ಹೆಚ್ಚಳದ ನಿರ್ಧಾರವನ್ನು ಮುಂದೂಡಲು ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್‌ ಅವರ ಅಧ್ಯಕ್ಷತೆಯಲ್ಲಿ ಶುಕ್ರವಾರ ನಡೆದ ಸರಕು ಮತ್ತು ಸೇವಾ ತೆರಿಗೆ (ಜಿಎಸ್‌ಟಿ) ಕೌನ್ಸಿಲ್‌ ಸಭೆಯು ತೀರ್ಮಾನಿಸಿದೆ ಎಂದು ಮೂಲಗಳನ್ನು ಉಲ್ಲೇಖಿಸಿ ಎನ್‌ಡಿಟಿವಿ ವರದಿ ಮಾಡಿದೆ. ಪ್ರಸ್ತುತ ಜವಳಿ ಮೇಲೆ 5% ಜಿಎಸ್‌ಟಿ ವಿಧಿಸಲಾಗುತ್ತಿದ್ದು, ಇದನ್ನು 12% ಕ್ಕೆ ಹೆಚ್ಚಿಸುವ ಬಗ್ಗೆ ಒಕ್ಕೂಟ ಸರ್ಕಾರ ಈ ಹಿಂದೆ ತೀರ್ಮಾನಿಸಿತ್ತು. ಆದರೆ ಈ ತೀರ್ಮಾನದ ವಿರುದ್ದ ಜವಳಿ ಉದ್ಯಮಗಳು ಮತ್ತು ದೇಶದ ಹಲವು ರಾಜ್ಯಗಳು ಆಕ್ಷೇಪ ಎತ್ತಿದ್ದವು.

ಜವಳಿ ಉತ್ಪನ್ನಗಳ ಮೇಲಿನ ತೆರಿಗೆ ದರ ಹೆಚ್ಚಳಕ್ಕೆ ಹಲವು ರಾಜ್ಯಗಳು ಆಕ್ಷೇಪ ವ್ಯಕ್ತಪಡಿಸಿದ್ದು, ದರ ಏರಿಕೆಯನ್ನು ತಡೆಹಿಡಿಯುವಂತೆ ಒತ್ತಾಯಿಸಿದ್ದವು. ಗುಜರಾತ್, ಪಶ್ಚಿಮ ಬಂಗಾಳ, ದೆಹಲಿ, ರಾಜಸ್ಥಾನ ಮತ್ತು ತಮಿಳುನಾಡು ರಾಜ್ಯಗಳು ಈ ವಿಷಯವನ್ನು ಪ್ರಸ್ತಾಪಿಸಿದ್ದವು.

ಇದನ್ನೂ ಓದಿ:‘ಜಿಎಸ್‌ಟಿ 12%’: ಜನವರಿಯಿಂದ ಬಟ್ಟೆಬರೆ ಮತ್ತು ಪಾದರಕ್ಷೆಗಳ ಬೆಲೆ ಏರಿಕೆ!

ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಅವರು ವಿವಿಧ ರಾಜ್ಯಗಳ ವಿತ್ತ ಸಚಿವರ ಬಜೆಟ್ ಪೂರ್ವ ಸಮಾಲೋಚನೆಯ ಸಂದರ್ಭದಲ್ಲಿ ಈ ವಿಷಯವು ಚರ್ಚೆಗೆ ಬಂದಿತ್ತು.

ದೆಹಲಿಯ ಉಪಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಮಾತನಾಡಿ, ಜವಳಿ ಮೇಲಿನ ತೆರಿಗೆ ಹೆಚ್ಚಳವನ್ನು ದೆಹಲಿ ಸರ್ಕಾರ ವಿರೋಧಿಸುತ್ತದೆ. ಸಾಮಾನ್ಯ ಜನರ ಧ್ವನಿಯನ್ನು ಹತ್ತಿಕ್ಕಲು ಸರ್ಕಾರ ಬಿಡುವುದಿಲ್ಲ ಎಂದು ಸಿಸೋಡಿಯಾ ಹೇಳಿದ್ದಾರೆ.

ಜವಳಿ ವ್ಯಾಪಾರಿಗಳು ಜಿಎಸ್‌ಟಿ ದರಗಳ ಹೆಚ್ಚಳವನ್ನು ವಿರೋಧಿಸುತ್ತಿದ್ದಾರೆ ಮತ್ತು ಅವರ ಬೇಡಿಕೆಗಳು ಸಮರ್ಥನೀಯವಾಗಿವೆ, ಆದ್ದರಿಂದ ಆಮ್ ಆದ್ಮಿ ಪಕ್ಷ (ಎಎಪಿ)ದ ಸರ್ಕಾರವು ಅವರ ಬೇಡಿಕೆಗಳ ಪರವಾಗಿದೆ ಎಂದು ಅವರು ಹೇಳಿದ್ದರು.

ಇದನ್ನೂ ಓದಿ:ಅತ್ಯಾಚಾರ, ಕೊಲೆ ಪ್ರಕರಣ: ಜೀವಾವಧಿ ಶಿಕ್ಷೆ ನೀಡಿದ ನ್ಯಾಯಾಧೀಶರ ಮೇಲೆ ಚಪ್ಪಲಿ ಎಸೆದ ಅಪರಾಧಿ

ಪಶ್ಚಿಮ ಬಂಗಾಳದ ಮಾಜಿ ವಿತ್ತ ಸಚಿವ ಅಮಿತ್ ಮಿತ್ರಾ ಅವರು ಒಕ್ಕೂಟ ಸರ್ಕಾರದ ಹಣಕಾಸು ಸಚಿವರಿಗೆ ಜವಳಿ ಮೇಲಿನ ಪ್ರಸ್ತಾವಿತ ಹೆಚ್ಚಳವನ್ನು ಹಿಂತೆಗೆದುಕೊಳ್ಳುವಂತೆ ಒತ್ತಾಯಿಸಿದ್ದರು. ಈ ಹೆಚ್ಚಳದಿಂದಾಗಿ ಸುಮಾರು ಒಂದು ಲಕ್ಷ ಜವಳಿ ಘಟಕಗಳು ಮುಚ್ಚಿಹೋಗುತ್ತದೆ ಮತ್ತು 15 ಲಕ್ಷ ಉದ್ಯೋಗ ನಷ್ಟವಾಗುತ್ತದೆ ಎಂದು ಅವರು ಹೇಳಿದ್ದರು.

ಇಷ್ಟೇ ಅಲ್ಲದೆ, ಕೈಗಾರಿಕಾ ಸಂಸ್ಥೆಗಳು ಕೂಡಾ ತೆರಿಗೆ ಹೆಚ್ಚಿಸುವುದನ್ನು ವಿರೋಧಿಸಿದ್ದವು. ವಿಶೇಷವಾಗಿ ಈ ಹೆಚ್ಚಳದಿಂದ ಅಸಂಘಟಿತ ವಲಯ ಮತ್ತು ಸೂಕ್ಷ್ಮ ಸಣ್ಣ ಮತ್ತು ಮಧ್ಯಮ ಉದ್ಯಮಗಳಿಗೆ (ಎಂಎಸ್‌ಎಂಇ) ಹೆಚ್ಚಿ ಹೊಡೆತ ಬಿದ್ದು, ಬಡವರು ಖರೀದಿಸುವ ಉಡುಪುಗಳ ದರಗಳು ಹೆಚ್ಚಳವಾಗುತ್ತಿತ್ತು.

ಜಿಎಸ್‌ಟಿ ಕೌನ್ಸಿಲ್‌ನ ಶಿಫಾರಸುಗಳ ಮೇರೆಗೆ ಕೇಂದ್ರೀಯ ಪರೋಕ್ಷ ತೆರಿಗೆಗಳು ಮತ್ತು ಕಸ್ಟಮ್ಸ್ ಮಂಡಳಿ (ಸಿಬಿಐಸಿ), ಜನವರಿ 1, 2022 ರಿಂದ ಜವಳಿ ಮತ್ತು ಪಾದರಕ್ಷೆಗಳ ಮೇಲಿನ ಜಿಎಸ್‌ಟಿ ದರವನ್ನು 5% ರಿಂದ 12% ಕ್ಕೆ ಏರಿಸಲಾಗುವುದು ಎಂದು ಘೋಷಿಸಿತ್ತು.

ಇದನ್ನೂ ಓದಿ:12 ವರ್ಷಗಳಲ್ಲೇ ಗರಿಷ್ಠ ಮಟ್ಟದ ಸಗಟು ಹಣದುಬ್ಬರ ದಾಖಲು

ಜಿಎಸ್‌ಟಿ ಕೌನ್ಸಿಲ್‌ನ 46 ನೇ ಸಭೆ ಇಂದು ದೆಹಲಿಯಲ್ಲಿ ನಡೆಯುತ್ತಿದ್ದು, ಸಭೆಯಲ್ಲಿ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ಹಣಕಾಸು ಸಚಿವರು ಮತ್ತು ಹಿರಿಯ ಅಧಿಕಾರಿಗಳು ಸಹ ಉಪಸ್ಥಿತರಿದ್ದರು.

ಫೆಬ್ರವರಿ 1, 2022 ರಂದು ಸಂಸತ್ತಿನಲ್ಲಿ ಮಂಡನೆಯಾಗಲಿರುವ 2022-23ರ ಒಕ್ಕೂಟ ಸರ್ಕಾರದ ಬಜೆಟ್‌ಗೆ ಮುಂಚಿತವಾಗಿ ಸಭೆ ನಡೆಯುತ್ತಿರುವುದರಿಂದ ಈ ಸಭೆಯು ಮಹತ್ವದ್ದಾಗಿದೆ.

ಕೊರೊನಾದಿಂದಾಗಿ ಜವಳಿ ಉದ್ಯಮಕ್ಕೆ ಕೆಟ್ಟ ಪರಿಣಾಮ ಬೀರಿದೆ. ಈ ಉದ್ಯಮ ವಲಯವು, ಕೃಷಿಯ ನಂತರ ಎರಡನೇ ಅತಿ ದೊಡ್ಡ ಆದಾಯ ಉತ್ಪಾದಿಸುವ ವಲಯವಾಗಿದೆ.

ಇದನ್ನೂ ಓದಿ:ತಮಿಳು ನಾಡಗೀತೆಯು ಪ್ರಾರ್ಥನೆಯಾಗಿದ್ದು, ಅದನ್ನು ಹಾಡುವಾಗ ಎದ್ದುನಿಲ್ಲಬೇಕಾಗಿಲ್ಲ: ಮದ್ರಾಸ್ ಹೈಕೋರ್ಟ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಉಪಚುನಾವಣೆ : ಬಿಹಾರದ ಬಂಕಿಪುರದಲ್ಲಿ ಪ್ರಶಾಂತ್ ಕಿಶೋರ್‌ಗೆ ಐತಿಹಾಸಿಕ ಗೆಲುವು; ಇನ್ನೆರಡು ಕ್ಷೇತ್ರಗಳು ಕಾಂಗ್ರೆಸ್-ಬಿಜೆಪಿ ಪಾಲು

ಬಿಹಾರದ ಬಂಕಿಪುರ, ಗುಜರಾತ್‌ನ ಮಂಜಲ್‌ಪುರ ಮತ್ತು ಮಧ್ಯಪ್ರದೇಶದ ದಾಟಿಯಾ ವಿಧಾನಸಭಾ ಕ್ಷೇತ್ರಗಳಿಗೆ ಜುಲೈ 30ರಂದು ನಡೆದ ಉಪಚುನಾವಣೆಯ ಫಲಿತಾಂಶ ಸೋಮವಾರ (ಆ.3) ಹೊರಬಿದ್ದಿದ್ದಿದೆ. ಬಿಜೆಪಿಯ ಭದ್ರಕೋಟೆ ಎನಿಸಿಕೊಂಡಿದ್ದ, ಕಳೆದ 31 ವರ್ಷಗಳಿಂದ ಬಿಜೆಪಿಯೇ...

‘ಪಂಕ್ಚರ್-ತಲಾ ಬನಾನೆ ವಾಲೆಗಳೇ ಹೆಚ್ಚು’: ನೀಟ್ ಅಕ್ರಮಗಳ ವಿರುದ್ಧ ಪ್ರತಿಭಟಿಸಿದವರ ವಿರುದ್ಧ ನಾಲಿಗೆ ಹರಿಬಿಟ್ಟ ಬಿಜೆಪಿ ನಾಯಕ ರಮೇಶ್ ಬಿಧು

ದೆಹಲಿಯ ಜಂತರ್ ಮಂತರ್‌ನಲ್ಲಿ ‘ನೀಟ್’ (NEET) ಪರೀಕ್ಷೆಯ ಅಕ್ರಮಗಳ ವಿರುದ್ಧ ಧ್ವನಿಯೆತ್ತಿದ ಯುವಜನತೆ ಮತ್ತು ವಿದ್ಯಾರ್ಥಿಗಳ ಹೋರಾಟವನ್ನು ದಮನ ಮಾಡಲು ಯತ್ನಿಸುತ್ತಿರುವ ಬಿಜೆಪಿ, ಈಗ ಅವರ ವಿರುದ್ಧವೇ ಅತ್ಯಂತ ಕೀಳುಮಟ್ಟದ ಇಸ್ಲಾಮೋಫೋಬಿಕ್ ಮತ್ತು...

ಲೈಂಗಿಕ ಕಿರುಕುಳ ಪ್ರಕರಣದಲ್ಲಿ ಖುಲಾಸೆ : ಇಡೀ ವ್ಯವಸ್ಥೆಯೇ ಬ್ರಿಜ್ ಭೂಷಣ್‌ರನ್ನು ರಕ್ಷಿಸಿತು ಎಂದ ವಿನೇಶ್ ಫೋಗಟ್; ಮೇಲ್ಮನವಿ ಸಲ್ಲಿಸಲು ಮಹಿಳಾ ಕುಸ್ತಿಪಟುಗಳ ನಿರ್ಧಾರ

ಮಹಿಳಾ ಕುಸ್ತಿಪಟುಗಳಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪ ಎದುರಿಸುತ್ತಿದ್ದ ಭಾರತೀಯ ಕುಸ್ತಿ ಫೆಡರೇಶನ್ (WFI) ಮಾಜಿ ಅಧ್ಯಕ್ಷ ಹಾಗೂ ಬಿಜೆಪಿ ಮಾಜಿ ಸಂಸದ ಬ್ರಿಜ್ ಭೂಷಣ್ ಶರಣ್ ಸಿಂಗ್ ಅವರನ್ನು ದೆಹಲಿಯ ರೋಸ್...

ಕರ್ನಾಟಕದಲ್ಲಿ SIR ಬಿಹಾರ-ಬಂಗಾಳಕ್ಕಿಂತ ಭೀಕರ: ಆಗಸ್ಟ್ 4 ರಂದು ಜನಪರ ಸಂಘಟನೆಗಳಿಂದ ಮಹತ್ವದ ಮಾಧ್ಯಮಗೋಷ್ಠಿ

ಬೆಂಗಳೂರು: ಕರ್ನಾಟಕದಲ್ಲಿ ನಡೆಯುತ್ತಿರುವ ಎಸ್‌ಐಆರ್ (SIR) ಪ್ರಕ್ರಿಯೆಯು ಬಿಹಾರ ಮತ್ತು ಪಶ್ಚಿಮ ಬಂಗಾಳ ರಾಜ್ಯಗಳಿಗಿಂತಲೂ ಅತ್ಯಂತ ಭೀಕರ ರೂಪ ಪಡೆದುಕೊಳ್ಳುತ್ತಿದೆ ಎಂದು 'SIR ವಿರೋಧಿ ಜಾತ್ಯತೀತ ಪಕ್ಷಗಳು ಮತ್ತು ಜನಪರ ಸಂಘಟನೆಗಳ ಒಕ್ಕೂಟ'...

“ನೈರ್ಮಲ್ಯ ಕಾರ್ಮಿಕರು ಕೆಲಸ ಬಿಡಲು ಸಾಧ್ಯವಿಲ್ಲ”: ದೇಶಾದ್ಯಂತ ಪ್ರತಿಭಟನೆಗೆ DASAM ಬೆಂಬಲ, ಉದ್ಯೋಗ ಖಾಯಂಗೊಳಿಸಲು ತೀವ್ರ ಒತ್ತಾಯ

ನವದೆಹಲಿ: ಉದ್ಯೋಗ ಕ್ರಮಬದ್ಧಗೊಳಿಸುವಿಕೆ (ಖಾಯಂಗೊಳಿಸುವುದು), ನ್ಯಾಯಯುತ ವೇತನ, ಸಾಮಾಜಿಕ ಭದ್ರತೆ, ಸುರಕ್ಷಿತ ಕೆಲಸದ ವಾತಾವರಣ ಮತ್ತು ಕೆಲಸದ ಸ್ಥಳದಲ್ಲಿ ಮಾನವ ಘನತೆಯನ್ನು ಎತ್ತಿಹಿಡಿಯುವಂತೆ ಒತ್ತಾಯಿಸಿ ದೇಶದ ನಾನಾ ಭಾಗಗಳಲ್ಲಿ ನೈರ್ಮಲ್ಯ ಕಾರ್ಮಿಕರು ನಡೆಸುತ್ತಿರುವ...

ದ್ವೇಷ ಭಾಷಣ ಪ್ರಕರಣ: ಬಿಜೆಪಿ ನಾಯಕರಾದ ಅನುರಾಗ್‌ ಠಾಕೂರ್‌, ಪರ್ವೇಶ್‌ ವರ್ಮಾಗೆ ಕ್ಲೀನ್ ಚೀಟ್: ಪುನರ್ ಪರಿಶೀಲನಾ ಅರ್ಜಿ ವಜಾಗೊಳಿಸಿದ ಸುಪ್ರೀಂ

ನವದೆಹಲಿ: 2020ರ ದೆಹಲಿಯಲ್ಲಿ ನಡೆದ ಪೌರತ್ವ ತಿದ್ದುಪಡಿ ಕಾಯ್ದೆ (ಸಿಎಎ) ವಿರೋಧಿ ಪ್ರತಿಭಟನೆಗಳ ಸಂದರ್ಭದಲ್ಲಿ ಉದ್ರೇಕಕಾರಿ ಹಾಗೂ ದ್ವೇಷಪೂರಿತ ಭಾಷಣ ಮಾಡಿದ ಆರೋಪ ಹೊತ್ತಿದ್ದ ಬಿಜೆಪಿ ನಾಯಕರಾದ ಅನುರಾಗ್ ಠಾಕೂರ್ ಮತ್ತು ಪರ್ವೇಶ್‌...

ಕರ್ನಾಟಕ ಸಚಿವ ಸಂಪುಟ ವಿಸ್ತರಣೆ: ನೂತನ ಸಚಿವರ ಪಟ್ಟಿಗೆ ವರಿಷ್ಠರ ಅನುಮೋದನೆ: ಇಂದು ಸಂಜೆ 4:05 ಕ್ಕೆ ಪ್ರಮಾಣ ವಚನ

ಬಹುನಿರೀಕ್ಷಿತ ಕರ್ನಾಟಕ ರಾಜ್ಯ ಸಚಿವ ಸಂಪುಟ ವಿಸ್ತರಣೆಗೆ ಕೊನೆಗೂ ಮುಹೂರ್ತ ನಿಗದಿಯಾಗಿದ್ದು, ಕಾಂಗ್ರೆಸ್ ಹೈಕಮಾಂಡ್ ನೂತನ ಸಚಿವರ ಪಟ್ಟಿಗೆ ಅಧಿಕೃತ ಅನುಮೋದನೆ ನೀಡಿದೆ. ಇದರೊಂದಿಗೆ ಕಳೆದ ಕೆಲವು ದಿನಗಳಿಂದ ರಾಜ್ಯ ರಾಜಕಾರಣದಲ್ಲಿ ತೀವ್ರ...

ಮಹಿಳಾ ಕುಸ್ತಿಪಟುಗಳಿಗೆ ಲೈಂಗಿಕ ಕಿರುಕುಳ ಪ್ರಕರಣ : WFI ಮಾಜಿ ಅಧ್ಯಕ್ಷ ಬ್ರಿಜ್ ಭೂಷಣ್‌ ಸಿಂಗ್‌ ಖುಲಾಸೆ

ದೆಹಲಿ ನ್ಯಾಯಾಲಯವು ಸೋಮವಾರ (ಆ.3) ಭಾರತೀಯ ಕುಸ್ತಿ ಫೆಡರೇಶನ್ (WFI) ಮಾಜಿ ಅಧ್ಯಕ್ಷ ಮತ್ತು ಬಿಜೆಪಿ ನಾಯಕ ಬ್ರಿಜ್ ಭೂಷಣ್ ಸಿಂಗ್ ಅವರನ್ನು ಮಹಿಳಾ ಕುಸ್ತಿಪಟುಗಳಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದ ಪ್ರಕರಣದಿಂದ...

ಪ್ರಶ್ನೆ ಪತ್ರಿಕೆ ಸೋರಿಕೆ : ಫಾಸ್ಟ್‌ ಟ್ರ್ಯಾಕ್ ಕೋರ್ಟ್ ನ್ಯಾಯಾಧೀಶೆ ಒಂದೇ ವಾರದಲ್ಲಿ ವರ್ಗಾವಣೆ

ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣಗಳ ವಿಚಾರಣೆಗಾಗಿ ಸ್ಥಾಪಿಸಲಾದ ತ್ವರಿತಗತಿ (ಫಾಸ್ಟ್‌ ಟ್ರ್ಯಾಕ್) ನ್ಯಾಯಾಲಯದ ನೇತೃತ್ವ ವಹಿಸಲು ನೇಮಕಗೊಂಡ ಕೇವಲ ಒಂದು ವಾರದ ನಂತರ, ದೆಹಲಿ ಹೈಕೋರ್ಟ್ ಶನಿವಾರ (ಆಗಸ್ಟ್ 1) ವಿಶೇಷ ನ್ಯಾಯಾಧೀಶರಾದ...

ಶ್ರೀಲಂಕಾ | 2019ರ ಈಸ್ಟರ್ ಬಾಂಬ್ ಸ್ಫೋಟ ಪ್ರಕರಣ: ಇಬ್ಬರು ಮಾಜಿ ಅಧಿಕಾರಿಗಳಿಗೆ ಮರಣದಂಡನೆ ವಿಧಿಸಿದ ಕೋರ್ಟ್

ಬರೋಬ್ಬರಿ 260ಕ್ಕೂ ಹೆಚ್ಚು ಜನರ ಸಾವಿಗೆ ಕಾರಣವಾಗಿದ್ದ 2019ರ ಶ್ರೀಲಂಕಾದ 'ಈಸ್ಟರ್ ಸಂಡೇ' ಬಾಂಬ್ ಸ್ಫೋಟ ಪ್ರಕರಣದಲ್ಲಿ ಕ್ರಿಮಿನಲ್ ನಿರ್ಲಕ್ಷ್ಯ ಆರೋಪ ಸಾಬೀತಾದ ಹಿನ್ನೆಲೆ, ಪೊಲೀಸ್ ಮಾಜಿ ಮುಖ್ಯಸ್ಥ ಮತ್ತು ರಕ್ಷಣಾ ಸಚಿವಾಲಯದ...