Homeಮುಖಪುಟಜವಳಿ ಮೇಲಿನ ಜಿಎಸ್‌ಟಿ ಹೆಚ್ಚಳದ ನಿರ್ಧಾರ ಮುಂದೂಡಿಕೆ

ಜವಳಿ ಮೇಲಿನ ಜಿಎಸ್‌ಟಿ ಹೆಚ್ಚಳದ ನಿರ್ಧಾರ ಮುಂದೂಡಿಕೆ

ಒಕ್ಕೂಟ ಸರ್ಕಾರದ ನಿರ್ಧಾರದ ವಿರುದ್ಧ ಜವಳಿ ಉದ್ಯಮ ಮತ್ತು ಹಲವು ರಾಜ್ಯಗಳ ಆಕ್ಷೇಪಣೆ ಎತ್ತಿದ್ದವು

- Advertisement -
- Advertisement -

ಜವಳಿ ಮೇಲಿನ ಜಿಎಸ್‌ಟಿ ಹೆಚ್ಚಳದ ನಿರ್ಧಾರವನ್ನು ಮುಂದೂಡಲು ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್‌ ಅವರ ಅಧ್ಯಕ್ಷತೆಯಲ್ಲಿ ಶುಕ್ರವಾರ ನಡೆದ ಸರಕು ಮತ್ತು ಸೇವಾ ತೆರಿಗೆ (ಜಿಎಸ್‌ಟಿ) ಕೌನ್ಸಿಲ್‌ ಸಭೆಯು ತೀರ್ಮಾನಿಸಿದೆ ಎಂದು ಮೂಲಗಳನ್ನು ಉಲ್ಲೇಖಿಸಿ ಎನ್‌ಡಿಟಿವಿ ವರದಿ ಮಾಡಿದೆ. ಪ್ರಸ್ತುತ ಜವಳಿ ಮೇಲೆ 5% ಜಿಎಸ್‌ಟಿ ವಿಧಿಸಲಾಗುತ್ತಿದ್ದು, ಇದನ್ನು 12% ಕ್ಕೆ ಹೆಚ್ಚಿಸುವ ಬಗ್ಗೆ ಒಕ್ಕೂಟ ಸರ್ಕಾರ ಈ ಹಿಂದೆ ತೀರ್ಮಾನಿಸಿತ್ತು. ಆದರೆ ಈ ತೀರ್ಮಾನದ ವಿರುದ್ದ ಜವಳಿ ಉದ್ಯಮಗಳು ಮತ್ತು ದೇಶದ ಹಲವು ರಾಜ್ಯಗಳು ಆಕ್ಷೇಪ ಎತ್ತಿದ್ದವು.

ಜವಳಿ ಉತ್ಪನ್ನಗಳ ಮೇಲಿನ ತೆರಿಗೆ ದರ ಹೆಚ್ಚಳಕ್ಕೆ ಹಲವು ರಾಜ್ಯಗಳು ಆಕ್ಷೇಪ ವ್ಯಕ್ತಪಡಿಸಿದ್ದು, ದರ ಏರಿಕೆಯನ್ನು ತಡೆಹಿಡಿಯುವಂತೆ ಒತ್ತಾಯಿಸಿದ್ದವು. ಗುಜರಾತ್, ಪಶ್ಚಿಮ ಬಂಗಾಳ, ದೆಹಲಿ, ರಾಜಸ್ಥಾನ ಮತ್ತು ತಮಿಳುನಾಡು ರಾಜ್ಯಗಳು ಈ ವಿಷಯವನ್ನು ಪ್ರಸ್ತಾಪಿಸಿದ್ದವು.

ಇದನ್ನೂ ಓದಿ:‘ಜಿಎಸ್‌ಟಿ 12%’: ಜನವರಿಯಿಂದ ಬಟ್ಟೆಬರೆ ಮತ್ತು ಪಾದರಕ್ಷೆಗಳ ಬೆಲೆ ಏರಿಕೆ!

ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಅವರು ವಿವಿಧ ರಾಜ್ಯಗಳ ವಿತ್ತ ಸಚಿವರ ಬಜೆಟ್ ಪೂರ್ವ ಸಮಾಲೋಚನೆಯ ಸಂದರ್ಭದಲ್ಲಿ ಈ ವಿಷಯವು ಚರ್ಚೆಗೆ ಬಂದಿತ್ತು.

ದೆಹಲಿಯ ಉಪಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಮಾತನಾಡಿ, ಜವಳಿ ಮೇಲಿನ ತೆರಿಗೆ ಹೆಚ್ಚಳವನ್ನು ದೆಹಲಿ ಸರ್ಕಾರ ವಿರೋಧಿಸುತ್ತದೆ. ಸಾಮಾನ್ಯ ಜನರ ಧ್ವನಿಯನ್ನು ಹತ್ತಿಕ್ಕಲು ಸರ್ಕಾರ ಬಿಡುವುದಿಲ್ಲ ಎಂದು ಸಿಸೋಡಿಯಾ ಹೇಳಿದ್ದಾರೆ.

ಜವಳಿ ವ್ಯಾಪಾರಿಗಳು ಜಿಎಸ್‌ಟಿ ದರಗಳ ಹೆಚ್ಚಳವನ್ನು ವಿರೋಧಿಸುತ್ತಿದ್ದಾರೆ ಮತ್ತು ಅವರ ಬೇಡಿಕೆಗಳು ಸಮರ್ಥನೀಯವಾಗಿವೆ, ಆದ್ದರಿಂದ ಆಮ್ ಆದ್ಮಿ ಪಕ್ಷ (ಎಎಪಿ)ದ ಸರ್ಕಾರವು ಅವರ ಬೇಡಿಕೆಗಳ ಪರವಾಗಿದೆ ಎಂದು ಅವರು ಹೇಳಿದ್ದರು.

ಇದನ್ನೂ ಓದಿ:ಅತ್ಯಾಚಾರ, ಕೊಲೆ ಪ್ರಕರಣ: ಜೀವಾವಧಿ ಶಿಕ್ಷೆ ನೀಡಿದ ನ್ಯಾಯಾಧೀಶರ ಮೇಲೆ ಚಪ್ಪಲಿ ಎಸೆದ ಅಪರಾಧಿ

ಪಶ್ಚಿಮ ಬಂಗಾಳದ ಮಾಜಿ ವಿತ್ತ ಸಚಿವ ಅಮಿತ್ ಮಿತ್ರಾ ಅವರು ಒಕ್ಕೂಟ ಸರ್ಕಾರದ ಹಣಕಾಸು ಸಚಿವರಿಗೆ ಜವಳಿ ಮೇಲಿನ ಪ್ರಸ್ತಾವಿತ ಹೆಚ್ಚಳವನ್ನು ಹಿಂತೆಗೆದುಕೊಳ್ಳುವಂತೆ ಒತ್ತಾಯಿಸಿದ್ದರು. ಈ ಹೆಚ್ಚಳದಿಂದಾಗಿ ಸುಮಾರು ಒಂದು ಲಕ್ಷ ಜವಳಿ ಘಟಕಗಳು ಮುಚ್ಚಿಹೋಗುತ್ತದೆ ಮತ್ತು 15 ಲಕ್ಷ ಉದ್ಯೋಗ ನಷ್ಟವಾಗುತ್ತದೆ ಎಂದು ಅವರು ಹೇಳಿದ್ದರು.

ಇಷ್ಟೇ ಅಲ್ಲದೆ, ಕೈಗಾರಿಕಾ ಸಂಸ್ಥೆಗಳು ಕೂಡಾ ತೆರಿಗೆ ಹೆಚ್ಚಿಸುವುದನ್ನು ವಿರೋಧಿಸಿದ್ದವು. ವಿಶೇಷವಾಗಿ ಈ ಹೆಚ್ಚಳದಿಂದ ಅಸಂಘಟಿತ ವಲಯ ಮತ್ತು ಸೂಕ್ಷ್ಮ ಸಣ್ಣ ಮತ್ತು ಮಧ್ಯಮ ಉದ್ಯಮಗಳಿಗೆ (ಎಂಎಸ್‌ಎಂಇ) ಹೆಚ್ಚಿ ಹೊಡೆತ ಬಿದ್ದು, ಬಡವರು ಖರೀದಿಸುವ ಉಡುಪುಗಳ ದರಗಳು ಹೆಚ್ಚಳವಾಗುತ್ತಿತ್ತು.

ಜಿಎಸ್‌ಟಿ ಕೌನ್ಸಿಲ್‌ನ ಶಿಫಾರಸುಗಳ ಮೇರೆಗೆ ಕೇಂದ್ರೀಯ ಪರೋಕ್ಷ ತೆರಿಗೆಗಳು ಮತ್ತು ಕಸ್ಟಮ್ಸ್ ಮಂಡಳಿ (ಸಿಬಿಐಸಿ), ಜನವರಿ 1, 2022 ರಿಂದ ಜವಳಿ ಮತ್ತು ಪಾದರಕ್ಷೆಗಳ ಮೇಲಿನ ಜಿಎಸ್‌ಟಿ ದರವನ್ನು 5% ರಿಂದ 12% ಕ್ಕೆ ಏರಿಸಲಾಗುವುದು ಎಂದು ಘೋಷಿಸಿತ್ತು.

ಇದನ್ನೂ ಓದಿ:12 ವರ್ಷಗಳಲ್ಲೇ ಗರಿಷ್ಠ ಮಟ್ಟದ ಸಗಟು ಹಣದುಬ್ಬರ ದಾಖಲು

ಜಿಎಸ್‌ಟಿ ಕೌನ್ಸಿಲ್‌ನ 46 ನೇ ಸಭೆ ಇಂದು ದೆಹಲಿಯಲ್ಲಿ ನಡೆಯುತ್ತಿದ್ದು, ಸಭೆಯಲ್ಲಿ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ಹಣಕಾಸು ಸಚಿವರು ಮತ್ತು ಹಿರಿಯ ಅಧಿಕಾರಿಗಳು ಸಹ ಉಪಸ್ಥಿತರಿದ್ದರು.

ಫೆಬ್ರವರಿ 1, 2022 ರಂದು ಸಂಸತ್ತಿನಲ್ಲಿ ಮಂಡನೆಯಾಗಲಿರುವ 2022-23ರ ಒಕ್ಕೂಟ ಸರ್ಕಾರದ ಬಜೆಟ್‌ಗೆ ಮುಂಚಿತವಾಗಿ ಸಭೆ ನಡೆಯುತ್ತಿರುವುದರಿಂದ ಈ ಸಭೆಯು ಮಹತ್ವದ್ದಾಗಿದೆ.

ಕೊರೊನಾದಿಂದಾಗಿ ಜವಳಿ ಉದ್ಯಮಕ್ಕೆ ಕೆಟ್ಟ ಪರಿಣಾಮ ಬೀರಿದೆ. ಈ ಉದ್ಯಮ ವಲಯವು, ಕೃಷಿಯ ನಂತರ ಎರಡನೇ ಅತಿ ದೊಡ್ಡ ಆದಾಯ ಉತ್ಪಾದಿಸುವ ವಲಯವಾಗಿದೆ.

ಇದನ್ನೂ ಓದಿ:ತಮಿಳು ನಾಡಗೀತೆಯು ಪ್ರಾರ್ಥನೆಯಾಗಿದ್ದು, ಅದನ್ನು ಹಾಡುವಾಗ ಎದ್ದುನಿಲ್ಲಬೇಕಾಗಿಲ್ಲ: ಮದ್ರಾಸ್ ಹೈಕೋರ್ಟ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಂಗಾಳ SIR : ನ್ಯಾಯಮಂಡಳಿಗಳಿಂದ ಪರಿಹಾರ ಪಡೆದವರು ಕೇವಲ 0.01% ಜನ

ಪಶ್ಚಿಮ ಬಂಗಾಳದಲ್ಲಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಲ್ಲಿ ಉಂಟಾದ ವಿವಾದಗಳನ್ನು ಬಗೆಹರಿಸಲು ಮೇಲ್ಮನವಿ ನ್ಯಾಯಮಂಡಳಿಗಳನ್ನು ಸ್ಥಾಪಿಸಲಾಗಿದೆ. ಎಸ್‌ಐಆರ್ ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಿಂದ ಹೆಸರುಗಳನ್ನು ಕೈಬಿಟ್ಟಿರುವುದರ ಅಥವಾ...

ಪ.ಬಂಗಾಳ ಎಸ್‌ಐಆರ್‌ : ದೇಶ ಕಾದ ಯೋಧನಿಂದ ತೀರ್ಪು ಕೊಟ್ಟ ನ್ಯಾಯಾಧೀಶರವರೆಗೆ.. ಮತ ಹಕ್ಕು ಕಳೆದುಕೊಂಡ ಲಕ್ಷಾಂತರ ಜನರು

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್‌ ಪೂರ್ತಿಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...