Homeಮುಖಪುಟನೀಟ್-ಸ್ನಾತಕೋತ್ತರ (ಪಿಜಿ) ವೈದ್ಯಕೀಯ ಪ್ರವೇಶ ಪರೀಕ್ಷೆ ಮುಂದೂಡಿಕೆ

ನೀಟ್-ಸ್ನಾತಕೋತ್ತರ (ಪಿಜಿ) ವೈದ್ಯಕೀಯ ಪ್ರವೇಶ ಪರೀಕ್ಷೆ ಮುಂದೂಡಿಕೆ

- Advertisement -
- Advertisement -

ಕೋವಿಡ್ ಪ್ರಕರಣಗಳು ಹೆಚ್ಚುತ್ತಿರುವುದನ್ನು ಗಮನದಲ್ಲಿಟ್ಟುಕೊಂಡು ನೀಟ್-ಸ್ನಾತಕೋತ್ತರ (ಪಿಜಿ) ವೈದ್ಯಕೀಯ ಪ್ರವೇಶ ಪರೀಕ್ಷೆ ಮುಂದೂಡಲಾಗಿದೆ ಎಂದು ಕೇಂದ್ರ ಆರೋಗ್ಯ ಸಚಿವ ಡಾ. ಹರ್ಷವರ್ಧನ್‌ ತಿಳಿಸಿದ್ದಾರೆ.

ಅಂದಾಜು 1.7 ಲಕ್ಷ ಎಂಬಿಬಿಎಸ್ ವಿದ್ಯಾರ್ಥಿಗಳು ಮತ್ತು ವೈದ್ಯರು ಈ ಪ್ರಕ್ರಿಯೆಗೆ ನೋಂದಾಯಿಸಿಕೊಖಡಿದ್ದು, ಏಪ್ರಿಲ್ 18 ರಂದು ಪರೀಕ್ಷೆ ನಿಗದಿಪಡಿಸಲಾಗಿತ್ತು. ಆದರೆ ಕೊರೊನಾ ಎರಡನೇ ಅಲೆಯ ಕಾರಣಕ್ಕೆ ಮುಂದೂಡಲಾಗಿದೆ.

“ಕೋವಿಡ್ ಪ್ರಕರಣಗಳು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ, ಈ ಹಿಂದೆ ನಿರ್ಧರಿಸಿದಂತೆ ಏಪ್ರಿಲ್ 18 ರಂದು ನಡೆಯಬೇಕಿದ್ದ ನೀಟ್-ಪಿಜಿ 2021 ಪರೀಕ್ಷೆಯನ್ನು ಮುಂದೂಡಲು ಭಾರತ ಸರ್ಕಾರ ನಿರ್ಧರಿಸಿದೆ. ಮುಂದಿನ ದಿನಾಂಕವನ್ನು ನಂತರ ನಿರ್ಧರಿಸಲಾಗುವುದು. ನಮ್ಮ ಯುವ ವೈದ್ಯಕೀಯ ವಿದ್ಯಾರ್ಥಿಗಳ ಯೋಗಕ್ಷೇಮವನ್ನು ಗಮನದಲ್ಲಿಟ್ಟುಕೊಂಡು ಈ ನಿರ್ಧಾರ ತೆಗೆದುಕೊಳ್ಳಲಾಗಿದೆ” ಎಂದು ಆರೋಗ್ಯ ಸಚಿವರು ಟ್ವೀಟ್ ಮಾಡಿದ್ದಾರೆ.

ಇದಕ್ಕೂ ಮುನ್ನವೇ ದೇಶಾದ್ಯಂತ ಹೊಸ ಕೋವಿಡ್ ಪ್ರಕರಣಗಳ ಹಿನ್ನೆಲೆಯಲ್ಲಿ ನೀಟ್-ಸ್ನಾತಕೋತ್ತರ (ಪಿಜಿ) ವೈದ್ಯಕೀಯ ಪ್ರವೇಶ ಪರೀಕ್ಷೆಯನ್ನು ಮುಂದೂಡಬೇಕೆಂದು ಕೋರಿ ವಿದ್ಯಾರ್ಥಿ- ವೈದ್ಯರ ಗುಂಪೊಂದು ಗುರುವಾರ ಸುಪ್ರೀಂ ಕೋರ್ಟ್ ಮೊರೆ ಹೋಗಿದೆ.

ಮೇ 4 ರಿಂದ ಪ್ರಾರಂಭವಾಗಬೇಕಿದ್ದ ಸಿಬಿಎಸ್‌ಇ 10 ನೇ ತರಗತಿ ಪರೀಕ್ಷೆಗಳನ್ನು ರದ್ದುಗೊಳಿಸುವ ಮತ್ತು 12 ನೇ ತರಗತಿ ಪರೀಕ್ಷೆಗಳನ್ನು ಮುಂದೂಡುವ ಕೇಂದ್ರದ ನಿರ್ಧಾರವನ್ನೂ ಅವರು ಉಲ್ಲೇಖಿಸಿದ್ದಾರೆ.

ಇಂದು ಡಿಎಂಕೆ ಮುಖ್ಯಸ್ಥ ಎಂ.ಕೆ. ಸ್ಟಾಲಿನ್ ನೀಟ್ ಪರೀಕ್ಷೆ ಈಗ ನಡೆಸುವುದನ್ನು ತೀವ್ರವಾಗಿ ಟೀಕಿಸಿದ್ದಾರೆ. “ಕೊರೊನಾ ಎರಡನೇ ಅಲೆಯಿಂದಾಗಿ ಸಿಬಿಎಸ್‌ಇ ಪರೀಕ್ಷೆಗಳು ಈಗ ರದ್ದಾಗಿವೆ. ಹೆಚ್ಚುತ್ತಿರುವ ಪ್ರಕರಣಗಳು ಮತ್ತು ಸಾವು ನೋವುಗಳೊಂದಿಗೆ, ನಮ್ಮ ವೈದ್ಯರು ರೋಗದ ವಿರುದ್ಧ ತೀವ್ರವಾಗಿ ಹೋರಾಡುತ್ತಿರುವಾಗ, ಪಿಜಿ ಕೋರ್ಸ್‌ಗಳಿಗೆ ನೀಟ್ ಪರೀಕ್ಷೆ‌ ನಡೆಸಲು ಇದು ಸರಿಯಾದ ಸಮಯವೆ?” ಎಂದು ಅವರು ಪ್ರಶ್ನಿಸಿದ್ದಾರೆ.

ಕಾಂಗ್ರೆಸ್ ನ ರಾಹುಲ್ ಗಾಂಧಿ ಮತ್ತು ಪ್ರಿಯಾಂಕಾ ಗಾಂಧಿ ಸೇರಿದಂತೆ ಪ್ರತಿಪಕ್ಷ ನಾಯಕರು ನೀಟ್ ಪರೀಕ್ಷೆಗಳನ್ನು ಮುಂದೂಡಬೇಕೆಂದು ಅಥವಾ ಆನ್‌ಲೈನ್‌ನಲ್ಲಿ ನಡೆಸಬೇಕೆಂದು ಕರೆ ನೀಡಿದ್ದರು.

ಆತಂಕಕ್ಕೊಳಗಾದ ವಿದ್ಯಾರ್ಥಿಗಳು ಮತ್ತು ಪೋಷಕರು ಸಹ ಇದೇ ರೀತಿಯ ಕರೆಗಳನ್ನು ನೀಡಿದ್ದರು, ಅವರು 18 ವರ್ಷದೊಳಗಿನ ಮಕ್ಕಳಿಗೆ ಲಸಿಕೆ ಹಾಕಲು ಸಹ ಅವಕಾಶವಿಲ್ಲ ಎಂಬುದನ್ನು ಒತ್ತಿ ಹೇಳಿದ್ದರು.


ಇದನ್ನೂ ಓದಿ: ಇದು ನೀಟ್ ಪರೀಕ್ಷೆ ನಡೆಸಲು ಸರಿಯಾದ ಸಮಯವೆ?: ಕೇಂದ್ರಕ್ಕೆ ಎಂ. ಕೆ. ಸ್ಟಾಲಿನ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಒಳಮೀಸಲಾತಿ ಇಲ್ಲದೆ 56 ಸಾವಿರ ಹುದ್ದೆಗಳ ನೇಮಕಾತಿ ಇಲ್ಲ: ಸಚಿವ ಮುನಿಯಪ್ಪ

“ಒಳಮೀಸಲಾತಿ ಇಲ್ಲದೆ ಒಂದೇ ಒಂದು ಹುದ್ದೆಯನ್ನೂ ನೇಮಕ ಮಾಡಲು ಬಿಡುವುದಿಲ್ಲ, ಮುಖ್ಯಮಂತ್ರಿಗಳು ಈ ಬಗ್ಗೆ ಒಪ್ಪಿಕೊಂಡಿದ್ದಾರೆ. 27ರಂದು ನಡೆಯುವ ಸಚಿವ ಸಂಪುಟ ಸಭೆ ನಮಗೆ ಚಾರಿತ್ರಿಕವಾಗಲಿದೆ. ಮುಖ್ಯಮಂತ್ರಿಗಳ ಮೇಲೆ ವಿಶ್ವಾಸ ಇರಲಿ” ಎಂದು...

ಪಶ್ಚಿಮ ಏಷ್ಯಾ ಸಂಘರ್ಷ| ‘ಈ ಯುದ್ಧವನ್ನು ಕೊನೆಗೊಳಿಸಲು ಒಂದೇ ಮಾರ್ಗ…’: ಮೂರು ಷರತ್ತುಗಳನ್ನು ಮುಂದಿಟ್ಟ ಇರಾನ್

ಇರಾನ್ ಅಧ್ಯಕ್ಷ ಮಸೌದ್ ಪೆಜೆಶ್ಕಿಯಾನ್ ಅವರು ಅಮೆರಿಕ ಮತ್ತು ಇಸ್ರೇಲ್ ಜೊತೆಗಿನ ನಡೆಯುತ್ತಿರುವ ಸಂಘರ್ಷವನ್ನು ಕೊನೆಗೊಳಿಸಲು ಮೂರು ಷರತ್ತುಗಳನ್ನು ನಿಗದಿಪಡಿಸಿದ್ದಾರೆ. ಇದರಲ್ಲಿ ದೇಶವು ಭವಿಷ್ಯದ ದಾಳಿಗಳನ್ನು ಎದುರಿಸುವುದಿಲ್ಲ ಎಂಬ ಖಾತರಿಗಳು ಸೇರಿವೆ. ಬುಧವಾರ ತಮ್ಮ...

ಖಾಸಗಿ ಜಾಗದ ನಮಾಝ್‌ಗೆ ಅಧಿಕಾರಿಗಳಿಂದ ಅಡ್ಡಿ : ಮುಸ್ಲಿಂ ವ್ಯಕ್ತಿಗೆ ಭದ್ರತೆ ಒದಗಿಸಲು ಕೋರ್ಟ್ ಆದೇಶ

ಉತ್ತರ ಪ್ರದೇಶದ ಬರೇಲಿ ಜಿಲ್ಲೆಯ ಮುಸ್ಲಿಂ ವ್ಯಕ್ತಿಯೊಬ್ಬರು ತಮ್ಮ ಖಾಸಗಿ ಜಾಗದಲ್ಲಿ ಇತರರೊಂದಿಗೆ ನಮಾಝ್ ಮಾಡುವುದಕ್ಕೆ ಅಡ್ಡಿಪಡಿಸಲಾಗಿದೆ ಎಂದು ಆರೋಪಿಸಿದ ಹಿನ್ನೆಲೆ, ಅವರಿಗೆ ದಿನದ 24 ಗಂಟೆಯೂ ರಕ್ಷಣೆ ನೀಡಲು ಇಬ್ಬರು ಭದ್ರತಾ...

‘ಒಳಮೀಸಲಾತಿ ಜಾರಿಗೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಬಿಡುತ್ತಿಲ್ಲ’: ಮಂದಕೃಷ್ಣ ಮಾದಿಗ ಆರೋಪ

‘ಒಳಮೀಸಲಾತಿ ಜಾರಿಗೆ ತರುತ್ತೇವೆಂದು ಹೇಳಿದ್ದ ಕಾಂಗ್ರೆಸ್, ಈಗ ಒಳಮೀಸಲಾತಿ ಅನುಷ್ಠಾನದಲ್ಲಿ ಮೀನಾಮೇಷ ಎಣಿಸುತ್ತಿದೆ. ಕಾಂಗ್ರೆಸ್ ನ ಹೈಕಮಾಂಡ್ ಸೋನಿಯಾ ಗಾಂಧಿ, ರಾಹುಲ್ ಗಾಂಧಿ ಹಾಗೂ ಪ್ರಿಯಾಂಕಾ ಗಾಂಧಿ. ಈ ಮೂವರನ್ನು ನಿಯಂತ್ರಿಸುವವರು ಕಾಂಗ್ರೆಸ್...

ಸಾವರ್ಕರ್ ಕುರಿತು ಹೇಳಿಕೆ : ರಾಹುಲ್ ಗಾಂಧಿ ವಿರುದ್ಧದ ಮಾನನಷ್ಟ ಮೊಕದ್ದಮೆ ರದ್ದು

ಭಾರತ್ ಜೋಡೋ ಯಾತ್ರೆಯ ಸಂದರ್ಭದಲ್ಲಿ (2022ರಲ್ಲಿ) ಹಿಂದುತ್ವ ಸಿದ್ಧಾಂತವಾದಿ ವಿನಾಯಕ ದಾಮೋದರ್ ಸಾವರ್ಕರ್ ಕುರಿತು ನೀಡಿದ್ದ ಹೇಳಿಕೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿದ್ದ ಮಾನನಷ್ಟ ಮೊಕದ್ದಮೆಯನ್ನು...

‘ಒಳಮೀಸಲಾತಿ ಜಾರಿಯಲ್ಲಿ ಸರ್ಕಾರ ನಿರ್ಲಕ್ಷ್ಯ ಧೋರಣೆ ತೋರಿದರೆ ಹೋರಾಟ ವಿಧಾನಸೌಧಕ್ಕೆ ಸ್ಥಳಾಂತರವಾಗುತ್ತದೆ’: ಮಾದರ ಚೆನ್ನಯ್ಯ ಸ್ವಾಮೀಜಿ

ಕಳೆದ 35 ವರ್ಷಗಳಿಂದ ಹಲವಾರು ಹೋರಾಟಗಾರರು ತಮ್ಮ ಜೀವ-ಜೀವನವನ್ನು ಅರ್ಪಿಸಿ, ಮನೆ-ಮಠವನ್ನು ಬಿಟ್ಟು ಒಳಮೀಸಲಾತಿ ಹೋರಾಟವನ್ನು ಅಂತಿಮ ಘಟ್ಟಕ್ಕೆ ತಂದಿದ್ದಾರೆ. ಅನೇಕರು ಬದುಕನ್ನು ಮಾತ್ರವಲ್ಲ, ಪ್ರಾಣವನ್ನೂ ಕಳೆದುಕೊಂಡಿದ್ದಾರೆ. ಇದು 2ನೇ ಸ್ವಾತಂತ್ರ್ಯ ಹೋರಾಟವಾಗಿದೆ....

ಎಸ್‌ಎನ್‌ಡಿಪಿ ಪ್ರಧಾನ ಕಾರ್ಯದರ್ಶಿ ಹುದ್ದೆಯಿಂದ ವೆಳ್ಳಾಪ್ಪಳ್ಳಿ ನಟೇಶನ್ ಅನರ್ಹ

ಶ್ರೀ ನಾರಾಯಣ ಧರ್ಮ ಪರಿಪಾಲನ ಯೋಗಂ (ಎಸ್‌ಎನ್‌ಡಿಪಿ ಯೋಗಂ) ನ ಪ್ರಧಾನ ಕಾರ್ಯದರ್ಶಿ ಮತ್ತು ಮತ್ತು ಎಸ್‌ಎನ್ ಟ್ರಸ್ಟ್‌ನ ಕಾರ್ಯದರ್ಶಿ ಸ್ಥಾನದಿಂದ ವೆಳ್ಳಾಪ್ಪಳ್ಳಿ ನಟೇಶನ್ ಅವರನ್ನು ಕೇರಳ ಹೈಕೋರ್ಟ್ ಗುರುವಾರ (ಮಾ.12) ಅನರ್ಹಗೊಳಿಸಿದ್ದು,...

‘ಫಾರೂಕ್ ಅಬ್ದುಲ್ಲಾರನ್ನು ಕೊಲ್ಲುವುದು ಸರ್ಕಾರದ ಉದ್ದೇಶವೇ?’..ರಾಜ್ಯ ಸಭೆಯಲ್ಲಿ ಖರ್ಗೆ ಪ್ರಶ್ನೆ

ಜಮ್ಮು ಕಾಶ್ಮೀರದ ಮಾಜಿ ಮುಖ್ಯಮಂತ್ರಿ ಹಾಗೂ ನ್ಯಾಷನಲ್ ಕಾನ್ಫರೆನ್ಸ್ (ಎನ್‌ಸಿ) ಪಕ್ಷದ ಮುಖ್ಯಸ್ಥ ಫಾರೂಕ್ ಅಬ್ದುಲ್ಲಾ ಅವರ ಹತ್ಯೆ ಯತ್ನ ವಿಚಾರವನ್ನು ವಿಪಕ್ಷ ಸದಸ್ಯರು ಗುರುವಾರ (ಮಾ.12) ರಾಜ್ಯಸಭೆಯಲ್ಲಿ ಪ್ರಸ್ತಾಪಿಸಿದರು. ಘಟನೆ ಬಗ್ಗೆ...

56 ಸಾವಿರ ಹುದ್ದೆಗಳ ನೇಮಕಾತಿಯಲ್ಲಿ ಒಳಮೀಸಲಾತಿ ಅನ್ವಯಕ್ಕೆ ಆಗ್ರಹಿಸಿ ಎಡಗೈ ಸಮುದಾಯದಿಂದ ಬೃಹತ್ ಪ್ರತಿಭಟನೆ 

ಸರ್ಕಾರವು ಒಳ ಮೀಸಲಾತಿಯನ್ನು ತಪ್ಪಿಸುವ ಹುನ್ನಾರದಿಂದ ತರಾತುರಿಯಲ್ಲಿ 56,432 ಹುದ್ದೆಗಳ ನೇಮಕಾತಿಗೆ ಆದೇಶ ಹೊರಡಿಸಿದೆ. ನೇಮಕಾತಿಯಲ್ಲಿ ಒಳಮೀಸಲಾತಿ ಅಳವಡಿಸದೆ, ಎಡಗೈ ಸಮುದಾಯಗಳಿಗೆ ಸರ್ಕಾರ ಮತ್ತೆ ವಂಚಿಸುತ್ತಿದೆ ಎಂದು ‘ಒಳಮೀಸಲಾತಿ ಹೋರಾಟ ಸಮಿತಿ’ ಆರೋಪಿಸಿದೆ....

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧದ ಅವಿಶ್ವಾಸ ನಿರ್ಣಯಕ್ಕೆ ಸೋಲು

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧ ವಿರೋಧ ಪಕ್ಷಗಳು ಮಂಡಿಸಿದ್ದ ಅವಿಶ್ವಾಸ ನಿರ್ಣಯವು ಬುಧವಾರ (ಮಾ.11) ಧ್ವನಿ ಮತದ ಮೂಲಕ ತಿರಸ್ಕಾರಗೊಂಡಿದೆ. ಸದನದಲ್ಲಿ ವಿರೋಧ ಪಕ್ಷಗಳ ತೀವ್ರ ಗದ್ದಲ ಮತ್ತು ಘೋಷಣೆಗಳ ನಡುವೆಯೇ ಸ್ಪೀಕರ್...