Homeಮುಖಪುಟಬಿಜೆಪಿ, ಮೋದಿ ವಿರುದ್ಧ ಪೋಸ್ಟ್: ಧಾರಾವಾಹಿಯಿಂದ ಮರಾಠಿ ನಟ ಹೊರಕ್ಕೆ, ಗ್ರಾಮದಲ್ಲಿ ಚಿತ್ರೀಕರಣ ಬೇಡ ...

ಬಿಜೆಪಿ, ಮೋದಿ ವಿರುದ್ಧ ಪೋಸ್ಟ್: ಧಾರಾವಾಹಿಯಿಂದ ಮರಾಠಿ ನಟ ಹೊರಕ್ಕೆ, ಗ್ರಾಮದಲ್ಲಿ ಚಿತ್ರೀಕರಣ ಬೇಡ ಎಂದ ಗ್ರಾಮಸ್ಥರು

- Advertisement -
- Advertisement -

ಬಿಜೆಪಿ ಮತ್ತು ಪ್ರಧಾನಿ ಮೋದಿ ವಿರುದ್ಧದ ಸಾಮಾಜಿಕ ಮಾಧ್ಯಮದಲ್ಲಿ ಪೋಸ್ಟ್ ಹಾಕಿದ್ದ ಕಾರಣಕ್ಕೆ ಮರಾಠಿ ನಟ ಕಿರಣ್ ಮಾನೆ ಅವರನ್ನು ಧಾರಾವಾಹಿಯಿಂದ ಕೈಬಿಡಲಾಗಿದೆ ಎಂಬ ಸುದ್ದಿ ಹರಿದಾಡುತ್ತಿದೆ. ಈ ನಿರ್ಧಾರಕ್ಕೆ ಕಿಡಿ ಕಾರಿರುವ ಸತಾರಾ ಜಿಲ್ಲೆಯ ಗುಲುಂಬ್ ಗ್ರಾಮದ ಸರಪಂಚ್, ಪ್ರೊಡಕ್ಷನ್ ಹೌಸ್‌ಗೆ ಗ್ರಾಮದಲ್ಲಿ ಚಿತ್ರೀಕರಣಕ್ಕೆ ಅವಕಾಶ ನೀಡುವುದಿಲ್ಲ ಎಂದು ಬರೆದ ಪತ್ರವು ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿದೆ.

ಮರಾಠಿ ನಟ ಕಿರಣ್ ಮಾನೆ ಅವರು ಪೋಸ್ಟ್‌ಗಳನ್ನು ಆಧರಿಸಿ ಮುಲ್ಗಿ ಝಲಿ ಹೋ (Mulgi Zali Ho) ಧಾರಾವಾಹಿಯಿಂದ ತೆಗೆದುಹಾಕಲಾಗಿದೆ ಎಂದು ನಟ ಹೇಳಿಕೊಂಡಿದ್ದಾರೆ. ಶೋಯಿಂದ ಹೊರಹಾಕಲು ಯಾವುದೇ ಅಧಿಕೃತ ಕಾರಣವನ್ನು ನೀಡಲಾಗಿಲ್ಲ. ಆದರೆ, ಅವರ ಸಾಮಾಜಿಕ ಮಾಧ್ಯಮ ಪೋಸ್ಟ್‌ಗಳಿಂದಾಗಿ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ ಎಂದು ಘಟಕದ ಯಾರೋ ಆಫ್ ದಿ ರೆಕಾರ್ಡ್ ಹೇಳಿದ್ದಾರೆ ಎಂದು ನಟ ಹೇಳಿದ್ದಾರೆ.

ಛತ್ರಪತಿ ಶಿವಾಜಿ ಮಹಾರಾಜ, ಛತ್ರಪತಿ ಶಾಹು ಮಹಾರಾಜ, ಮಹಾತ್ಮ ಫುಲೆ ಹಾಗೂ ಡಾ.ಬಾಬಾ ಸಾಹೇಬ್ ಅಂಬೇಡ್ಕರ್ ಅವರ ವಿಚಾರಧಾರೆಯಲ್ಲಿ ಮಹಾರಾಷ್ಟ್ರ ಪ್ರಜಾಪ್ರಭುತ್ವದ ಮೇಲೆ ಸಾಗುತ್ತಿದೆ ಎಂಬುದನ್ನು ಮರಾಠಿ ಚಿತ್ರರಂಗ ಮರೆಯಬಾರದು ಎಂದು ಸರಪಂಚ್ ಸ್ವಾತಿ ಮಾನೆ ಪತ್ರದಲ್ಲಿ ಬರೆದಿದ್ದಾರೆ.

ಇದನ್ನೂ ಓದಿ: ‘ಧೀರ ಭಗತ್ ರಾಯ್‌’ ಮೂಲಕ ಮೀಸಲು ಕ್ಷೇತ್ರದ ರಾಜಕೀಯ ಕಥೆಯನ್ನು ಹೇಳಲು ಹೊರಟಿರುವ ನಿರ್ದೇಶಕ ಕರ್ಣನ್

ಆದರೆ ಈ ಬಗ್ಗೆ ಮಾತನಡಿರು ಪ್ರೊಡಕ್ಷನ್ ಹೌಸ್, ’ಪ್ರೊಡಕ್ಷನ್ ಹೌಸ್ ಮಾತನ್ನು ಕೇಳದೆ ಅಜಾಗರೂಕತೆಯಿಂದ ಪತ್ರವನ್ನು ನೀಡಲಾಗಿದೆ. ಇನ್ನೂ ಗ್ರಾಮದಲ್ಲಿ ಚಿತ್ರೀಕರಣ ನಡೆಯುತ್ತಿದೆ’ ಎಂದಿದೆ. ಜೊತೆಗೆ ನಟನನ್ನು ಅವರ ರಾಜಕೀಯ ದೃಷ್ಟಿಕೋನಗಳಿಂದಲ್ಲ, ಆದರೆ ಸಹ-ನಟರೊಂದಿಗಿನ ವೃತ್ತಿಪರ ನಡವಳಿಕೆಯಿಂದಾಗಿ ಕೈಬಿಡಲಾಗಿದೆ ಎಂದು ಹೇಳಿಕೊಂಡಿದೆ.

ವರದಿಗಳ ಪ್ರಕಾರ, ಮರಾಠಿ ಕಿರಣ್ ಮಾನೆ ಶನಿವಾರ ಶರದ್ ಪವಾರ್ ಅವರನ್ನು ಭೇಟಿಯಾದರು. ಎನ್‌ಸಿಪಿ ನಾಯಕರಾದ ಡಾ ಜಿತೇಂದ್ರ ಅವದ್, ಧನಂಜಯ್ ಮುಂಡೆ ಅವರು ಕಿರಣ್ ಮಾನೆ ಅವರನ್ನು ಬೆಂಬಲಿಸಿ ಟ್ವೀಟ್ ಮಾಡಿದ್ದಾರೆ. ನಟ ತನ್ನ ಅಭಿವ್ಯಕ್ತಿ ಸ್ವಾತಂತ್ರ್ಯವನ್ನು ಬಳಸಿಕೊಂಡಿದ್ದಾನೆ ಆದರೆ ರಾಜಕೀಯ ಒತ್ತಡದಲ್ಲಿ ಅವರನ್ನು ಕೈಬಿಡುವುದು ಸಾಂಸ್ಕೃತಿಕ ಭಯೋತ್ಪಾದನೆಯ ಸಂಕೇತವಾಗಿದೆ ಎಂದು ಧನಂಜಯ್ ಮುಂಡೆ ಹೇಳಿದ್ದಾರೆ.

ಸಾಮಾಜಿಕ ಮಾಧ್ಯಮ ಬಳಕೆದಾರರು ಕಿರಣ್ ಮಾನೆ ಹಲವಾರು ಸಂದರ್ಭಗಳಲ್ಲಿ ಮಾಡಿದ ಕಾಮೆಂಟ್‌ಗಳ ಸ್ಕ್ರೀನ್‌ಶಾಟ್‌ಗಳನ್ನು ಹಂಚಿಕೊಂಡಿದ್ದಾರೆ. ಪಂಜಾಬ್‌ನಲ್ಲಿ ಪ್ರಧಾನಿ ಮೋದಿಯವರ ಭದ್ರತಾ ಉಲ್ಲಂಘನೆಯ ನಂತರ, ಅವರು ಪಿಎಂ ಮೋದಿಯವರನ್ನು ಹೆಸರಿಸದೆ, ಘಟನೆಯನ್ನು ಉಲ್ಲೇಖಿಸದೆ ಕಾಮೆಂಟ್ ಒಂದನ್ನು ಪೋಸ್ಟ್ ಮಾಡಿದ್ದರು.


ಇದನ್ನೂ ಓದಿ: ಲೈಂಗಿಕ ದೌರ್ಜನ್ಯ ಪ್ರಕರಣ: ’ಸಂತ್ರಸ್ತೆಯಾಗಿ ಬದುಕುವುದು ಸುಲಭವಲ್ಲ’ 5 ವರ್ಷಗಳ ಪ್ರಯಾಣ ನೆನಪಿಸಿಕೊಂಡ ನಟಿ ಭಾವನಾ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಬೆದರಿಕೆ, ಚಿತ್ರಹಿಂಸೆ, ಅತ್ಯಾಚಾರ ‘: ಇಸ್ರೇಲ್‌ ಜೈಲಿನ ದೌರ್ಜನ್ಯ ಬಿಚ್ಚಿಟ್ಟ ಪ್ಯಾಲೆಸ್ತೀನ್ ಪತ್ರಕರ್ತರು

ಇಸ್ರೇಲ್ ಜೈಲುಗಳಲ್ಲಿ ಬಂಧಿತರಾಗಿರುವ ಪ್ಯಾಲೆಸ್ತೀನ್ ಪತ್ರಕರ್ತರು ತೀವ್ರವಾದ ದೌರ್ಜನ್ಯಗಳನ್ನು ಎದುರಿಸುತ್ತಿದ್ದಾರೆ ಎಂದು ಅಂತಾರಾಷ್ಟ್ರೀಯ ಪತ್ರಕರ್ತರ ರಕ್ಷಣಾ ಸಮಿತಿ (ಸಿಪಿಜೆ) ಹೇಳಿದೆ. ಬಂಧನದಿಂದ ಬಿಡುಗಡೆಯಾಗಿರುವ ಪತ್ರಕರ್ತರನ್ನು ಸಂದರ್ಶಿಸಿರುವ ಸಿಪಿಜೆ, ಜೈಲಿನಲ್ಲಿರುವ ಪತ್ರಕರ್ತರು ನಿರಂತರವಾಗಿ ದೈಹಿಕ...

ಪಾಕಿಸ್ತಾನದ ಕರಾಚಿಯಲ್ಲಿ ಶಂಕಿತ ಅನಿಲ ಸೋರಿಕೆ: ಮಕ್ಕಳು ಸೇರಿದಂತೆ 16 ಮಂದಿ ಸಾವು

ಕರಾಚಿ: ಪಾಕಿಸ್ತಾನದ ಕರಾಚಿಯಲ್ಲಿ ಗುರುವಾರ ಬೆಳಿಗ್ಗೆ ವಸತಿ ಕಟ್ಟಡವೊಂದರಲ್ಲಿ ಶಂಕಿತ ಅನಿಲ ಸೋರಿಕೆಯಿಂದಾಗಿ ಸ್ಫೋಟ ಸಂಭವಿಸಿ, ಮಕ್ಕಳು ಸೇರಿದಂತೆ ಕನಿಷ್ಠ 16 ಜನರು ಸಾವನ್ನಪ್ಪಿದ್ದು, 14 ಜನರು ಗಾಯಗೊಂಡಿದ್ದಾರೆ. "ಓಲ್ಡ್ ಸೋಲ್ಜರ್ ಬಜಾರ್...

ಮಹಾರಾಷ್ಟ್ರ| 10 ದಿನಗಳ ಮಗುವಿನೊಂದಿಗೆ 12 ನೇ ತರಗತಿ ಪರೀಕ್ಷೆ ಬರೆದ ಮಹಿಳೆ

ಮಹಾರಾಷ್ಟ್ರದ ನಾಂದೇಡ್ ನಗರದಲ್ಲಿ 12 ನೇ ತರಗತಿಯ ಮಹಾರಾಷ್ಟ್ರ ಬೋರ್ಡ್ ಪರೀಕ್ಷೆಗೆ ಹಾಜರಾದ ಮಹಿಳೆಯೊಬ್ಬರು ತನ್ನ 10 ದಿನಗಳ ಮಗುವನ್ನು ಪರೀಕ್ಷಾ ಕೇಂದ್ರಕ್ಕೆ ಕರೆತಂದಿದ್ದಾರೆ. ಮಹಿಳೆ ಪರೀಕ್ಷೆ ಬರೆಯುವ ಕಾರಣಕ್ಕೆ ಕೇಂದ್ರದ ವಿಶೇಷ...

ಒಡಿಶಾ| ದಲಿತರು ವಾಸಿಸುವ ಪ್ರದೇಶಕ್ಕೆ ಕುಡಿಯುವ ನೀರು-ವಿದ್ಯುತ್ ಸಂಪರ್ಕ ಕಡಿತ

ಒಡಿಶಾದ ಬಲಂಗೀರ್ ಜಿಲ್ಲೆಯಲ್ಲಿ ಜಾತಿ ಆಧಾರಿತ ತಾರತಮ್ಯವಿದೆ ಎಂದು ಸ್ಥಳೀಯ ನಿವಾಸಿಗಳು ಆರೋಪಿಸಿದ್ದಾರೆ. ಆದರೆ, ಗ್ರಾಮದ ಅಧಿಕಾರಿಯೊಬ್ಬರು ಈ ಅಡಚಣೆಗೆ ಸ್ಥಳೀಯ ಕಲಹ ಕಾರಣ ಎಂದು ಆರೋಪಿಸಿದ್ದಾರೆ. ಜಿಲ್ಲೆಯ ತುರೆಕೆಲಾ ಬ್ಲಾಕ್‌ನ ಡುಮೆರ್ಚುವಾನ್ ಗ್ರಾಮದಲ್ಲಿ...

ತಮಿಳುನಾಡು ವಿಧಾನಸಭಾ ಚುನಾವಣೆ: ಡಿಎಂಕೆ ನೇತೃತ್ವದ ಮೈತ್ರಿಕೂಟಕ್ಕೆ ಡಿಎಂಡಿಕೆ ಸೇರ್ಪಡೆ

ಚೆನ್ನೈ: ದಿವಂಗತ ನಟ ವಿಜಯಕಾಂತ್ ಅವರ ದೇಶೀಯ ಮುರ್ಪೋಕ್ಕು ದ್ರಾವಿಡ ಕಳಗಂ (ಡಿಎಂಡಿಕೆ) ಗುರುವಾರ ದ್ರಾವಿಡ ಮುನ್ನೇತ್ರ ಕಳಗಂ ನೇತೃತ್ವದ ಜಾತ್ಯತೀತ ಪ್ರಗತಿಪರ ಒಕ್ಕೂಟ (ಎಸ್‌ಪಿಎ)ವನ್ನು 21ವರ್ಷಗಳ ಅಸ್ತಿತ್ವದ ನಂತರ ಮೊದಲ ಬಾರಿಗೆ...

ಟ್ರಕ್ ಚಾಲಕ ರಸ್ತೆಯಲ್ಲಿ ನಮಾಝ್ ಮಾಡಿದ್ದರಿಂದ ಟ್ರಾಫಿಕ್ ಜಾಮ್ ಎಂದು ಸುಳ್ಳು ಸುದ್ದಿ ಪ್ರಸಾರ : ಝೀ ನ್ಯೂಸ್‌ಗೆ 1 ಲಕ್ಷ ರೂ. ದಂಡ

ಮುಸ್ಲಿಂ ವ್ಯಕ್ತಿಯೊಬ್ಬರು ನಮಾಝ್ ಮಾಡಲು ಹೆದ್ದಾರಿ ಮಧ್ಯೆ ಟ್ರಕ್‌ ನಿಲ್ಲಿಸಿದ್ದರಿಂದ ಟ್ರಾಫಿಕ್ ಜಾಮ್‌ ಉಂಟಾಗಿದೆ ಎಂದು ಸುಳ್ಳು ಸುದ್ದಿ ಹಬ್ಬಿದ ಝೀ ನ್ಯೂಸ್‌ ಚಾನೆಲ್‌ಗೆ ಸುದ್ದಿ ಪ್ರಸಾರಕರು ಮತ್ತು ಡಿಜಿಟಲ್ ಮಾನದಂಡಗಳ ಪ್ರಾಧಿಕಾರ(ಎನ್‌ಬಿಡಿಎಸ್‌ಎ)...

ಗುಜರಾತ್‌| ಜಾತಿ ಆಧಾರಿತ ಜಗಳದಲ್ಲಿ ದಲಿತ ಯುವಕನ ಮೇಲೆ ಚಾಕುವಿನಿಂದ ದಾಳಿ

ಶನಿವಾರ ತಡರಾತ್ರಿ ರಾಣಿಪ್‌ನಲ್ಲಿ ನಡೆದ ಸಣ್ಣ ಭಿನ್ನಾಭಿಪ್ರಾಯವೊಂದು ಹಿಂಸಾಚಾರಕ್ಕೆ ತಿರುಗಿದ್ದು, 25 ವರ್ಷದ ದಲಿತ ಯುವಕ ಸಾಹಿಲ್ ವಘೇಲಾ ಮೇಲೆ ಚಾಕುವಿನಿಂದ ಹಲ್ಲೆ ನಡೆಸಲಾಗಿದೆ. ಯುವಕ ಗಂಭೀರವಾಗಿ ಗಾಯಗೊಂಡಿದ್ದು, ಘಟನೆಯು ಈ ಪ್ರದೇಶದಲ್ಲಿ...

ಮುಂಬೈ| ಬುರ್ಖಾ ಧರಿಸಿ ಲೋಕಲ್‌ ಟ್ರೈನ್‌ನ ಮಹಿಳಾ ಬೋಗಿಯಲ್ಲಿ ಪ್ರಯಾಣಿಸಿದ ವ್ಯಕ್ತಿ ಬಂಧನ

ಮುಂಬೈನ ಉಪನಗರ ರೈಲಿನ ಮಹಿಳಾ ಬೋಗಿಯಲ್ಲಿ ಬುರ್ಖಾ ಧರಿಸಿ ಪ್ರಯಾಣಿಸುತ್ತಿದ್ದ ಆರೋಪದ ಮೇಲೆ ನಾಸಿಕ್‌ನ 57 ವರ್ಷದ ವ್ಯಕ್ತಿಯನ್ನು ಬಂಧಿಸಲಾಗಿದೆ ಎಂದು ಅಧಿಕಾರಿಗಳು ಬುಧವಾರ ತಿಳಿಸಿದ್ದಾರೆ. ಈ ಘಟನೆ ಫೆಬ್ರವರಿ 6 ರಂದು ಘಾಟ್ಕೋಪರ್...

ಎಪ್‌ಸ್ಟೀನ್‌ ಫೈಲ್ಸ್ ಜನಾಕ್ರೋಶ : ಎಐ ಶೃಂಗಸಭೆಯಿಂದ ದೂರ ಉಳಿದ ಬಿಲ್‌ ಗೇಟ್ಸ್‌

ಎಪ್‌ಸ್ಟೀನ್‌ ಫೈಲ್ಸ್‌ ಮುಂದಿಟ್ಟುಕೊಂಡು ಜನರು ತೀವ್ರ ವಿರೋಧ ವ್ಯಕ್ತಪಡಿಸಿದ ಬೆನ್ನಲ್ಲೇ, 'ಇಂಡಿಯಾ ಎಐ ಇಂಪ್ಯಾಕ್ಟ್ ಶೃಂಗಸಭೆ'ಯಿಂದ ಮೈಕ್ರೋಸಾಫ್ಟ್‌ ಸಹ-ಸಂಸ್ಥಾಪಕ ಬಿಲ್ ಗೇಟ್ಸ್ ದೂರ ಉಳಿದಿದ್ದಾರೆ. ಈ ಕುರಿತು ಗೇಟ್ಸ್ ಫೌಂಡೇಶನ್ ಇಂಡಿಯಾ ಗುರುವಾರ...

ಬೆಂಗಳೂರಿನಲ್ಲಿ ರಂಜಾನ್ ಆಹಾರ ಮೇಳ ನಡೆಸದಂತೆ ಹೋಟೆಲ್‌ಗಳಿಗೆ ಎಚ್ಚರಿಕೆ

ಬೆಂಗಳೂರು: ಫ್ರೇಸರ್ ಟೌನ್ ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿನ ಎಂಎಂ ರಸ್ತೆಯಲ್ಲಿ ರಂಜಾನ್ ಆಹಾರ ಮೇಳ ನಡೆಸದಂತೆ ಹೋಟೆಲ್ ಮಾಲೀಕರಿಗೆ ಸ್ಥಳೀಯ ನಿವಾಸಿಗಳು ಎಚ್ಚರಿಕೆ ನೀಡಿದ್ದಾರೆ. ರಂಜಾನ್ ಆಹಾರ ಮೇಳದಿಂದ ಸಂಚಾರ ದಟ್ಟಣೆ. ಅವ್ಯವಸ್ಥೆಯ ಜೊತೆಗೆ...