Homeಕರೋನಾ ತಲ್ಲಣತಿರುವನಂತಪುರ: ಸಾಮಾಜಿಕ ಅಂತರ ಕಾಪಾಡದ ಪೋಥಿಸ್ ಪರವಾನಗಿ ರದ್ದು!

ತಿರುವನಂತಪುರ: ಸಾಮಾಜಿಕ ಅಂತರ ಕಾಪಾಡದ ಪೋಥಿಸ್ ಪರವಾನಗಿ ರದ್ದು!

- Advertisement -
- Advertisement -

ಸಾಮಾಜಿಕ ಅಂತರದ ಮಾನದಂಡಗಳನ್ನು ಉಲ್ಲಂಘಿಸಿದ ಆರೋಪದ ಮೇಲೆ ತಿರುವನಂತಪುರಂ ಕಾರ್ಪೊರೇಷನ್ ‘ರಾಮಚಂದ್ರನ್ ಮತ್ತು ಪೋಥಿಸ್’ ಅವರ ಶಾಪಿಂಗ್ ಮಾಲ್ ಪರವಾನಗಿಯನ್ನು ರದ್ದುಗೊಳಿಸಿದೆ.

ಈ ಮಳಿಗೆಗಳು ಕೊರೊನಾ ಹರಡುವಿಕೆಯ ಹೆಚ್ಚಳಕ್ಕೆ ಪ್ರಮುಖ ಕಾರಣವಾಗಿವೆ. ಕೊರೊನಾ ಪ್ರೋಟೋಕಾಲ್ ಅನುಸರಿಸುವಂತೆ ಅನೇಕ ಬಾರಿ ಆದೇಶ ನೀಡಲಾಯಿತು. ಆದರೂ ಅವರು ಅದನ್ನು ನಿರ್ಲಕ್ಷಿಸಿದ್ದಾರೆ. ಇದರಿಂದಾಗಿ ರಾಮಚಂದ್ರನ್ ಅವರ 100 ಕ್ಕೂ ಹೆಚ್ಚು ಸಿಬ್ಬಂದಿಗೆ ಸೋಂಕು ದೃಢಪಟ್ಟಿದೆ ಎಂದು ಕಾರ್ಪೋರೇಷನ್ ಅಧಿಕಾರಿಗಳು ತಿಳಿಸಿದ್ದಾರೆ.

ಇದೇ ರೀತಿಯ ಘಟನೆಗಳು ಪೋಥಿಸ್ ನಲ್ಲಿಯೂ ಸಹ ವರದಿಯಾಗಿವೆ. ಪೋಥಿಸ್‌ಗೆ ನಿಗಮದಿಂದ ಹಲವು ಬಾರಿ ಎಚ್ಚರಿಕೆ ನೀಡಲಾಯಿತು. ಆದರೂ ಅನುಸರಿಸಿಲ್ಲ. ಹಾಗಾಗಿ ಮುಂದಿನ ಸೂಚನೆ ಬರುವವರೆಗೂ ಈ ಮಾಲ್ ಗಳ ಪರವಾನಗಿಯನ್ನು ರದ್ದುಪಡಿಸಲಾಗಿದೆ ಎಂದು ತಿರುವನಂತಪುರಂ ಮೇಯರ್ ಕೆ.ಶ್ರೀಕುಮಾರ್ ತಮ್ಮ ಫೇಸ್‌ಬುಕ್ ಪುಟದಲ್ಲಿ ತಿಳಿಸಿದ್ದಾರೆ.

ನಗರದ ಅತ್ಯಂತ ಹಳೆಯ ಉದ್ಯಮಗಳಲ್ಲಿ ಒಂದಾದ ರಾಮಚಂದ್ರನ್ ಅತ್ತಕುಮಂಗರದಲ್ಲಿದೆ. ಬಹುಮಹಡಿ ಮಳಿಗೆಯು ಹೈಪರ್ ಮಾರ್ಕೆಟ್, ಫುಡ್ ಕೋರ್ಟ್ ಅನ್ನು ಒಳಗೊಂಡಿದೆ. ಜವಳಿ, ಮನೆ ಅಲಂಕಾರಿಕ, ಕಟ್ಲರಿ ಮತ್ತು ಪೀಠೋಪಕರಣಗಳನ್ನು ಮಾರಾಟ ಮಾಡುತ್ತದೆ.

ಪೋಥಿಸ್ ಎಂಬ ಬಹುಮಹಡಿ ಜವಳಿ ಅಂಗಡಿಯು ಆಯುರ್ವೇದ ಕಾಲೇಜು ಜಂಕ್ಷನ್ ಬಳಿ ಇದೆ. ಮಾಲ್‌ಗೆ ಪ್ರವೇಶಿಸುವ ಮೊದಲು ಗ್ರಾಹಕರ ತಾಪಮಾನವನ್ನು ಪರಿಶೀಲಿಸಿದೆ. ಕೈ ತೊಳೆಯುವುದು ಮತ್ತು ಸ್ಯಾನಿಟೈಸರ್ ಬಳಸುವುದನ್ನು ಕಡ್ಡಾಯಗೊಳಿಸಿದ್ದರೂ, ಸಾಮಾಜಿಕ ಅಂತರವನ್ನು ಅನುಸರಿಸಲಿಲ್ಲ ಎಂದು ಆರೋಪಿಸಲಾಗಿದೆ.

ರಾಮಚಂದ್ರನ್ ಅವರಲ್ಲೂ ಇದೇ ರೀತಿಯ ಸಮಸ್ಯೆ ವರದಿಯಾಗಿದೆ, ಗ್ರಾಹಕರು ಶಾಪಿಂಗ್ ಮಾಡುವಾಗ ಸಾಮಾಜಿಕ ಅಂತರವನ್ನು ಅನುಸರಿಸಲು ವಿಫಲರಾಗಿದ್ದಾರೆ. ಮಾಲ್ ಅಧಿಕಾರಿಗಳು ಸಾಮಾಜಿಕ ಅಂತರವನ್ನು ಖಚಿತಪಡಿಸಿಕೊಳ್ಳಲು ಯಾವುದೇ ಸೌಲಭ್ಯಗಳನ್ನು ವ್ಯವಸ್ಥೆ ಮಾಡಿರಲಿಲ್ಲ ಎನ್ನಲಾಗಿದೆ.

ಶನಿವಾರ ಜಿಲ್ಲಾಧಿಕಾರಿ ನವಜೋತ್ ಖೋಸಾ ಅವರು ಸೋಂಕು ದೃಢ ಪಟ್ಟ ಜನರು ಕೆಲಸ ಮಾಡಿದ ಸ್ಥಳಗಳ ಪಟ್ಟಿಯನ್ನು ಬಿಡುಗಡೆ ಮಾಡಿದರು. ಇದರಲ್ಲಿ ಪೋಥಿಸ್, ರಾಮಚಂದ್ರನ್ಸ್ ಮತ್ತು ಇತರ 22 ಸ್ಥಳಗಳು ಸೇರಿವೆ. ಈ ಪಟ್ಟಿಯಲ್ಲಿ ಬೇಕರಿಗಳು, ಬ್ಯಾಂಕುಗಳು, ವೈದ್ಯಕೀಯ ಅಂಗಡಿಗಳು, ವಿದ್ಯುತ್ ಅಂಗಡಿಗಳು, ಮಾರುಕಟ್ಟೆಗಳು, ಸೂಪರ್ ರ್ಮಾರ್ಕೆಟ್‌ಗಳು ಇವೆ.

ಕಳೆದ ವಾರ ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಅವರು, ಪ್ರೋಟೋಕಾಲ್ ಉಲ್ಲಂಘಿಸಿ ಭಾರಿ ಹರಡುವಿಕೆಗೆ ಕಾರಣವಾದ ವ್ಯಾಪಾರಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಹೇಳಿದ್ದರು. “ನಾನು ಯಾವುದೇ ನಿರ್ದಿಷ್ಟ ಸ್ಥಳವನ್ನು ಉಲ್ಲೇಖಿಸುತ್ತಿಲ್ಲ. ಆದರೆ ಇದಕ್ಕೆ ಕಾರಣರಾದ ಎಲ್ಲ ವ್ಯಾಪಾರಿಗಳ ಮೇಲೆ ಕಾನೂನಿನಡಿಯಲ್ಲಿ ಪ್ರಕರಣ ದಾಖಲಿಸಲಾಗುವುದು” ಎಂದು ಹೇಳಿದರು.


ಇದನ್ನೂ ಓದಿ: ಫ್ಯಾಕ್ಟ್‌ಚೆಕ್: ಈ ಆಕ್ರೋಶ ಭರಿತ ಜನರ ಗುಂಪು ಕೇರಳದ ಮುಸ್ಲಿಮರದ್ದೇ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಶಬರಿಮಲೆ ಚಿನ್ನ ಕಳವು ಪ್ರಕರಣ: ಎರಡನೇ ಪ್ರಕರಣದಲ್ಲೂ ಜಾಮೀನು ಕೋರಿ ಅರ್ಜಿ ಸಲ್ಲಿಸಿದ ಪ್ರಮುಖ ಆರೋಪಿ ಉನ್ನಿಕೃಷ್ಣನ್ ಪೊಟ್ಟಿ

ಕೊಲ್ಲಂ (ಕೇರಳ): ಶಬರಿಮಲೆ ಚಿನ್ನ ಕಳವು ಪ್ರಕರಣದ ಪ್ರಮುಖ ಆರೋಪಿ ಉನ್ನಿಕೃಷ್ಣನ್ ಪೊಟ್ಟಿ, ತಮ್ಮ ವಿರುದ್ಧ ದಾಖಲಾಗಿರುವ ಎರಡನೇ ಪ್ರಕರಣದಲ್ಲಿ ಶಾಸನಬದ್ಧ ಜಾಮೀನು ಕೋರಿ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದಾರೆ. ದ್ವಾರಪಾಲಕ (ರಕ್ಷಕ ದೇವತೆ) ವಿಗ್ರಹ...

ಆಕಸ್ಮಿಕವಾಗಿ ಗಡಿ ದಾಟಿದ್ದ 7 ಭಾರತೀಯರನ್ನು ಹಸ್ತಾಂತರಿಸಿದ ಪಾಕಿಸ್ತಾನ

2023 ರ ಪ್ರವಾಹದ ಸಮಯದಲ್ಲಿ ಅಜಾಗರೂಕತೆಯಿಂದ ಗಡಿ ದಾಟಿದ ನಂತರ ಬಂಧಿಸಲ್ಪಟ್ಟ ಏಳು ಭಾರತೀಯ ನಾಗರಿಕರನ್ನು ಪಾಕಿಸ್ತಾನ ಶನಿವಾರ ಸ್ವದೇಶಕ್ಕೆ ವಾಪಸ್ ಕಳುಹಿಸಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಪಂಜಾಬ್‌ನ ಅಟ್ಟಾರಿ ಇಂಟಿಗ್ರೇಟೆಡ್ ಚೆಕ್ ಪೋಸ್ಟ್‌ನಲ್ಲಿ...

ಮೀರತ್| ಅಪಹರಣ ಪ್ರಕರಣ ಹಿಂಪಡೆಯುವಂತೆ ಪೊಲೀಸರ ಒತ್ತಡ; ‘ಗೃಹಬಂಧನ’ದಲ್ಲಿ ದಲಿತ ಕುಟುಂಬ

ಜನವರಿ ತಿಂಗಳ ಆರಂಭದಲ್ಲಿ ಉತ್ತರ ಪ್ರದೇಶದ ಮೀರತ್ ಜಿಲ್ಲೆಯ ಕಪ್ಸಾದ್ ಗ್ರಾಮದಲ್ಲಿ ತಾಯಿಯ ಕೊಲೆಯ ನಂತರ ಅಪಹರಿಸಲ್ಪಟ್ಟ ದಲಿತ ಹುಡುಗಿಯ ಕುಟುಂಬ ಸದಸ್ಯರು ತಾವು ಗೃಹಬಂಧನದಲ್ಲಿದ್ದು, ಆರೋಪಿಗಳ ವಿರುದ್ಧ ಪ್ರಕರಣವನ್ನು ಮುಂದುವರಿಸದಂತೆ ಪೊಲೀಸರು...

ಉದ್ಯಮಿ ಸಿಜೆ ರಾಯ್ ಮರಣೋತ್ತರ ಪರೀಕ್ಷೆ; ಹೃದಯ-ಶ್ವಾಸಕೋಶದಲ್ಲಿ 6.35 ಎಂಎಂ ಗುಂಡಿನ ಗಾಯ

ಕಾನ್ಫಿಡೆಂಟ್ ಗ್ರೂಪ್ ಅಧ್ಯಕ್ಷ ಸಿಜೆ ರಾಯ್ ಅವರ ಆತ್ಮಹತ್ಯೆಯ ಮರಣೋತ್ತರ ಪರೀಕ್ಷೆಯ ವರದಿಗಯನ್ನು ಬೆಂಗಳೂರಿನ ಬೌರಿಂಗ್ ಆಸ್ಪತ್ರೆಯ ವೈದ್ಯಕೀಯ ಅಧೀಕ್ಷಕ ಡಾ. ಅರವಿಂದ್ ಎಂಎನ್ ವಿವರಿಸಿದ್ದಾರೆ. 6.35 ಎಂಎಂ ಗುಂಡಿನ ದಾಳಿಯು ತಕ್ಷಣದ...

ಮುಂಬೈ| ನಿರ್ದೇಶಕ ರೋಹಿತ್ ಶೆಟ್ಟಿ ಮನೆಯ ಹೊರಗೆ 4 ಸುತ್ತು ಗುಂಡು ಹಾರಿಸಿದ ಅಪರಿಚಿತರು

ಶನಿವಾರ ತಡರಾತ್ರಿ, ಬಾಲಿವುಡ್ ನಿರ್ದೇಶಕ ರೋಹಿತ್ ಶೆಟ್ಟಿ ಅವರ ಮುಂಬೈನ ಜುಹು ನಿವಾಸದ ಹೊರಗೆ ನಾಲ್ಕು ಸುತ್ತು ಗುಂಡು ಹಾರಿಸಲಾಗಿದ್ದು, ಘಟನೆಯಲ್ಲಿ ಯಾವುದೇ ಗಾಯಗಳಾಗಿಲ್ಲ ಎಂದು ವರದಿಯಾಗಿದೆ. ಚಿತ್ರ ನಿರ್ಮಾಪಕ-ನಿರ್ದೇಶಕರ ಕಟ್ಟಡದ ಬಳಿ ಅಪರಿಚಿತ...

ಮಹಾರಾಷ್ಟ್ರದ ಉಪ ಮುಖ್ಯಮಂತ್ರಿಯಾಗಿ ಅಜಿತ್ ಪವಾರ್ ಪತ್ನಿ ಸುನೇತ್ರಾ ಪವಾರ್ ಪ್ರಮಾಣ ವಚನ ಸ್ವೀಕಾರ

ಜನವರಿ 28ರಂದು ವಿಮಾನ ಅಪಘಾತದಲ್ಲಿ ನಿಧನರಾದ ಎನ್‌ಸಿಪಿ ನಾಯಕ ಅಜಿತ್ ಪವಾರ್ ಅವರ ಪತ್ನಿ ಸುನೇತ್ರಾ ಪವಾರ್ ಅವರು ಮಹಾರಾಷ್ಟ್ರದ ಉಪಮುಖ್ಯಮಂತ್ರಿಯಾಗಿ ಶನಿವಾರ (ಜ.31) ಪ್ರಮಾಣವಚನ ಸ್ವೀಕರಿಸಿದರು. ಮುಂಬೈನ ಲೋಕಭವನದಲ್ಲಿ ನಡೆದ ಸರಳ ಸಮಾರಂಭದಲ್ಲಿ...

ಡೊನಾಲ್ಡ್ ಟ್ರಂಪ್, ಎಲಾನ್ ಮಸ್ಕ್‌ನಿಂದ ಬಿಲ್ ಗೇಟ್ಸ್‌ವರೆಗೆ : ಅಂತಿಮ ಎಪ್‌ಸ್ಟೀನ್‌ ಫೈಲ್‌ಗಳಲ್ಲಿ ಹಲವು ಪ್ರಮುಖರ ಹೆಸರು

ಅಮೆರಿಕದ ಸಂಸತ್ತು ಅಂಗೀಕರಿಸಿದ ಎಪ್‌ಸ್ಟೀನ್ ಫೈಲ್ಸ್ ಟ್ರಾನ್ಸ್‌ಪೆರೆನ್ಸಿ ಆಕ್ಟ್ (Epstein Files Transparency Act) ನಿಯಮದಂತೆ ಅಮೆರಿಕದ ನ್ಯಾಯ ಇಲಾಖೆ (ಡಿಒಜಿ) ಲೈಂಗಿಕ ದೌರ್ಜನ್ಯ ಪ್ರಕರಣದ ಅಪರಾಧಿ ಜೆಫ್ರಿ ಎಪ್‌ಸ್ಟೀನ್‌ಗೆ ಸಂಬಂಧಿಸಿದ ಅಂತಿಮ...

ಲಂಚ ಪ್ರಕರಣ : ಎಸ್‌ಇಸಿ ಸಮನ್ಸ್ ಸ್ವೀಕರಿಸಲು ಅದಾನಿ ಒಪ್ಪಿಗೆ

ಲಂಚ ಪ್ರಕರಣದಲ್ಲಿ ಅಮೆರಿಕದ ಸೆಕ್ಯುರಿಟೀಸ್ ಆ್ಯಂಡ್ ಎಕ್ಸ್‌ಚೇಂಜ್ ಕಮಿಷನ್ (ಎಸ್‌ಇಸಿ) ನ ಸಮನ್ಸ್‌ಗಳನ್ನು ಸ್ವೀಕರಿಸಲು ಉದ್ಯಮಿ ಗೌತಮ್ ಅದಾನಿ ಮತ್ತು ಅವರ ಸೋದರಳಿಯ ಸಾಗರ್ ಅದಾನಿ ಒಪ್ಪಿಕೊಂಡಿದ್ದಾರೆ ಎಂದು ವರದಿಯಾಗಿದೆ. ನ್ಯೂಯಾರ್ಕ್‌ನ ಬ್ರೂಕ್ಲಿನ್‌ನಲ್ಲಿರುವ ಫೆಡರಲ್...

ಬೀದರ್‌ : ಮೊಳಕೇರಾ ಗ್ರಾಮದಲ್ಲಿ ಸ್ಫೋಟ ಪ್ರಕರಣ ; ಸಮಗ್ರ ತನಿಖೆಗೆ ಸಚಿವ ಈಶ್ವರ್ ಖಂಡ್ರೆ ಆದೇಶ

ಬೀದರ್ ಜಿಲ್ಲೆ ಹುಮನಾಬಾದ್ ತಾಲೂಕಿನ ಮೊಳಕೇರಾ ಗ್ರಾಮದ ಮೋಳಗಿ ಮಾರಯ್ಯ ದೇವಸ್ಥಾನ ರಸ್ತೆಯಲ್ಲಿ ಅನುಮಾನಾಸ್ಪದ ವಸ್ತು ಸ್ಫೋಟಗೊಂಡು, ಶಾಲೆಗೆ ತೆರಳುತ್ತಿದ್ದ ಮಕ್ಕಳೂ ಸೇರಿ 6 ಜನರು ಗಾಯಗೊಂಡಿರುವ ಘಟನೆ ಬಗ್ಗೆ ಆಘಾತ ವ್ಯಕ್ತಪಡಿಸಿರುವ...

ಜೈಲಿನಲ್ಲಿರುವ ಹೋರಾಟಗಾರ ಸೋನಮ್ ವಾಂಗ್‌ಚುಕ್‌ಗೆ ಅನಾರೋಗ್ಯ : ಜೋಧ್‌ಪುರದ ಏಮ್ಸ್‌ನಲ್ಲಿ ವೈದ್ಯಕೀಯ ಪರೀಕ್ಷೆ

ನ್ಯಾಯಾಂಗ ಬಂಧನದಲ್ಲಿರುವ ಲಡಾಖ್‌ನ ಹೋರಾಟಗಾರ ಹಾಗೂ ವಿಜ್ಞಾನಿ ಸೋನಮ್ ವಾಂಗ್‌ಚುಕ್ ಅವರ ಆರೋಗ್ಯ ಹದೆಗೆಟ್ಟಿದ್ದು, ಸುಪ್ರೀಂ ಕೋರ್ಟ್ ನಿರ್ದೇಶನ ಅನುಸಾರ ಜೋಧ್‌ಪುರದ ಏಮ್ಸ್‌ನಲ್ಲಿ ಅವರಿಗೆ ವೈದ್ಯಕೀಯ ಪರೀಕ್ಷೆ ನಡೆಸಲಾಗಿದೆ. ಪೊಲೀಸರು ವಾಂಗ್‌ಚುಕ್ ಅವರನ್ನು ಜೋಧ್‌ಪುರ...