Homeಕರೋನಾ ತಲ್ಲಣತಿರುವನಂತಪುರ: ಸಾಮಾಜಿಕ ಅಂತರ ಕಾಪಾಡದ ಪೋಥಿಸ್ ಪರವಾನಗಿ ರದ್ದು!

ತಿರುವನಂತಪುರ: ಸಾಮಾಜಿಕ ಅಂತರ ಕಾಪಾಡದ ಪೋಥಿಸ್ ಪರವಾನಗಿ ರದ್ದು!

- Advertisement -
- Advertisement -

ಸಾಮಾಜಿಕ ಅಂತರದ ಮಾನದಂಡಗಳನ್ನು ಉಲ್ಲಂಘಿಸಿದ ಆರೋಪದ ಮೇಲೆ ತಿರುವನಂತಪುರಂ ಕಾರ್ಪೊರೇಷನ್ ‘ರಾಮಚಂದ್ರನ್ ಮತ್ತು ಪೋಥಿಸ್’ ಅವರ ಶಾಪಿಂಗ್ ಮಾಲ್ ಪರವಾನಗಿಯನ್ನು ರದ್ದುಗೊಳಿಸಿದೆ.

ಈ ಮಳಿಗೆಗಳು ಕೊರೊನಾ ಹರಡುವಿಕೆಯ ಹೆಚ್ಚಳಕ್ಕೆ ಪ್ರಮುಖ ಕಾರಣವಾಗಿವೆ. ಕೊರೊನಾ ಪ್ರೋಟೋಕಾಲ್ ಅನುಸರಿಸುವಂತೆ ಅನೇಕ ಬಾರಿ ಆದೇಶ ನೀಡಲಾಯಿತು. ಆದರೂ ಅವರು ಅದನ್ನು ನಿರ್ಲಕ್ಷಿಸಿದ್ದಾರೆ. ಇದರಿಂದಾಗಿ ರಾಮಚಂದ್ರನ್ ಅವರ 100 ಕ್ಕೂ ಹೆಚ್ಚು ಸಿಬ್ಬಂದಿಗೆ ಸೋಂಕು ದೃಢಪಟ್ಟಿದೆ ಎಂದು ಕಾರ್ಪೋರೇಷನ್ ಅಧಿಕಾರಿಗಳು ತಿಳಿಸಿದ್ದಾರೆ.

ಇದೇ ರೀತಿಯ ಘಟನೆಗಳು ಪೋಥಿಸ್ ನಲ್ಲಿಯೂ ಸಹ ವರದಿಯಾಗಿವೆ. ಪೋಥಿಸ್‌ಗೆ ನಿಗಮದಿಂದ ಹಲವು ಬಾರಿ ಎಚ್ಚರಿಕೆ ನೀಡಲಾಯಿತು. ಆದರೂ ಅನುಸರಿಸಿಲ್ಲ. ಹಾಗಾಗಿ ಮುಂದಿನ ಸೂಚನೆ ಬರುವವರೆಗೂ ಈ ಮಾಲ್ ಗಳ ಪರವಾನಗಿಯನ್ನು ರದ್ದುಪಡಿಸಲಾಗಿದೆ ಎಂದು ತಿರುವನಂತಪುರಂ ಮೇಯರ್ ಕೆ.ಶ್ರೀಕುಮಾರ್ ತಮ್ಮ ಫೇಸ್‌ಬುಕ್ ಪುಟದಲ್ಲಿ ತಿಳಿಸಿದ್ದಾರೆ.

ನಗರದ ಅತ್ಯಂತ ಹಳೆಯ ಉದ್ಯಮಗಳಲ್ಲಿ ಒಂದಾದ ರಾಮಚಂದ್ರನ್ ಅತ್ತಕುಮಂಗರದಲ್ಲಿದೆ. ಬಹುಮಹಡಿ ಮಳಿಗೆಯು ಹೈಪರ್ ಮಾರ್ಕೆಟ್, ಫುಡ್ ಕೋರ್ಟ್ ಅನ್ನು ಒಳಗೊಂಡಿದೆ. ಜವಳಿ, ಮನೆ ಅಲಂಕಾರಿಕ, ಕಟ್ಲರಿ ಮತ್ತು ಪೀಠೋಪಕರಣಗಳನ್ನು ಮಾರಾಟ ಮಾಡುತ್ತದೆ.

ಪೋಥಿಸ್ ಎಂಬ ಬಹುಮಹಡಿ ಜವಳಿ ಅಂಗಡಿಯು ಆಯುರ್ವೇದ ಕಾಲೇಜು ಜಂಕ್ಷನ್ ಬಳಿ ಇದೆ. ಮಾಲ್‌ಗೆ ಪ್ರವೇಶಿಸುವ ಮೊದಲು ಗ್ರಾಹಕರ ತಾಪಮಾನವನ್ನು ಪರಿಶೀಲಿಸಿದೆ. ಕೈ ತೊಳೆಯುವುದು ಮತ್ತು ಸ್ಯಾನಿಟೈಸರ್ ಬಳಸುವುದನ್ನು ಕಡ್ಡಾಯಗೊಳಿಸಿದ್ದರೂ, ಸಾಮಾಜಿಕ ಅಂತರವನ್ನು ಅನುಸರಿಸಲಿಲ್ಲ ಎಂದು ಆರೋಪಿಸಲಾಗಿದೆ.

ರಾಮಚಂದ್ರನ್ ಅವರಲ್ಲೂ ಇದೇ ರೀತಿಯ ಸಮಸ್ಯೆ ವರದಿಯಾಗಿದೆ, ಗ್ರಾಹಕರು ಶಾಪಿಂಗ್ ಮಾಡುವಾಗ ಸಾಮಾಜಿಕ ಅಂತರವನ್ನು ಅನುಸರಿಸಲು ವಿಫಲರಾಗಿದ್ದಾರೆ. ಮಾಲ್ ಅಧಿಕಾರಿಗಳು ಸಾಮಾಜಿಕ ಅಂತರವನ್ನು ಖಚಿತಪಡಿಸಿಕೊಳ್ಳಲು ಯಾವುದೇ ಸೌಲಭ್ಯಗಳನ್ನು ವ್ಯವಸ್ಥೆ ಮಾಡಿರಲಿಲ್ಲ ಎನ್ನಲಾಗಿದೆ.

ಶನಿವಾರ ಜಿಲ್ಲಾಧಿಕಾರಿ ನವಜೋತ್ ಖೋಸಾ ಅವರು ಸೋಂಕು ದೃಢ ಪಟ್ಟ ಜನರು ಕೆಲಸ ಮಾಡಿದ ಸ್ಥಳಗಳ ಪಟ್ಟಿಯನ್ನು ಬಿಡುಗಡೆ ಮಾಡಿದರು. ಇದರಲ್ಲಿ ಪೋಥಿಸ್, ರಾಮಚಂದ್ರನ್ಸ್ ಮತ್ತು ಇತರ 22 ಸ್ಥಳಗಳು ಸೇರಿವೆ. ಈ ಪಟ್ಟಿಯಲ್ಲಿ ಬೇಕರಿಗಳು, ಬ್ಯಾಂಕುಗಳು, ವೈದ್ಯಕೀಯ ಅಂಗಡಿಗಳು, ವಿದ್ಯುತ್ ಅಂಗಡಿಗಳು, ಮಾರುಕಟ್ಟೆಗಳು, ಸೂಪರ್ ರ್ಮಾರ್ಕೆಟ್‌ಗಳು ಇವೆ.

ಕಳೆದ ವಾರ ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಅವರು, ಪ್ರೋಟೋಕಾಲ್ ಉಲ್ಲಂಘಿಸಿ ಭಾರಿ ಹರಡುವಿಕೆಗೆ ಕಾರಣವಾದ ವ್ಯಾಪಾರಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಹೇಳಿದ್ದರು. “ನಾನು ಯಾವುದೇ ನಿರ್ದಿಷ್ಟ ಸ್ಥಳವನ್ನು ಉಲ್ಲೇಖಿಸುತ್ತಿಲ್ಲ. ಆದರೆ ಇದಕ್ಕೆ ಕಾರಣರಾದ ಎಲ್ಲ ವ್ಯಾಪಾರಿಗಳ ಮೇಲೆ ಕಾನೂನಿನಡಿಯಲ್ಲಿ ಪ್ರಕರಣ ದಾಖಲಿಸಲಾಗುವುದು” ಎಂದು ಹೇಳಿದರು.


ಇದನ್ನೂ ಓದಿ: ಫ್ಯಾಕ್ಟ್‌ಚೆಕ್: ಈ ಆಕ್ರೋಶ ಭರಿತ ಜನರ ಗುಂಪು ಕೇರಳದ ಮುಸ್ಲಿಮರದ್ದೇ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಶ್ರೀಲಂಕಾ | 2019ರ ಈಸ್ಟರ್ ಬಾಂಬ್ ಸ್ಫೋಟ ಪ್ರಕರಣ: ಇಬ್ಬರು ಮಾಜಿ ಅಧಿಕಾರಿಗಳಿಗೆ ಮರಣದಂಡನೆ ವಿಧಿಸಿದ ಕೋರ್ಟ್

ಬರೋಬ್ಬರಿ 260ಕ್ಕೂ ಹೆಚ್ಚು ಜನರ ಸಾವಿಗೆ ಕಾರಣವಾಗಿದ್ದ 2019ರ ಶ್ರೀಲಂಕಾದ 'ಈಸ್ಟರ್ ಸಂಡೇ' ಬಾಂಬ್ ಸ್ಫೋಟ ಪ್ರಕರಣದಲ್ಲಿ ಕ್ರಿಮಿನಲ್ ನಿರ್ಲಕ್ಷ್ಯ ಆರೋಪ ಸಾಬೀತಾದ ಹಿನ್ನೆಲೆ, ಪೊಲೀಸ್ ಮಾಜಿ ಮುಖ್ಯಸ್ಥ ಮತ್ತು ರಕ್ಷಣಾ ಸಚಿವಾಲಯದ...

ಅಮೆರಿಕ ಓದಿಗೆ ಎಲ್ಲಿಂದ ಬಂತು ಹಣ? CJP ಸ್ಥಾಪಕ ಅಭಿಜೀತ್ ದೀಪ್ಕೆ ತಂದೆಯ ಆಸ್ತಿ ತನಿಖೆಗೆ RTI ಕಾರ್ಯಕರ್ತ ಆಗ್ರಹ

ಕಾಕ್ರೋಚ್ ಜನತಾ ಪಾರ್ಟಿ (CJP) ಸ್ಥಾಪಕ ಅಭಿಜೀತ್ ದೀಪ್ಕೆ ಅವರ ತಂದೆ, ಮಹಾರಾಷ್ಟ್ರ ಸರ್ಕಾರದ ನಿವೃತ್ತ ಉದ್ಯೋಗಿ ಭಗವಾನ್‌ರಾವ್ ದೀಪ್ಕೆ ಅವರ ಆದಾಯ ಮತ್ತು ಅಕ್ರಮ ಆಸ್ತಿ ಗಳಿಕೆ ಕುರಿತು ಸಮಗ್ರ ತನಿಖೆ...

ಕಾವೇರಿ ವಿಚಾರದಲ್ಲಿ ರಾಜಕೀಯ ಪಕ್ಕಕ್ಕಿಟ್ಟು ರಾಜ್ಯದ ಹಿತ ಕಾಯೋಣ: ಸರ್ವಪಕ್ಷ ಸಭೆಯಲ್ಲಿ ಸಿಎಂ ಡಿ.ಕೆ. ಶಿವಕುಮಾರ್ ಕರೆ

ಕಾವೇರಿ ನದಿ ನೀರು ಹಂಚಿಕೆ ವಿಚಾರವಾಗಿ ಪರಿಸ್ಥಿತಿ ಸುಧಾರಿಸುವ ಲಕ್ಷಣಗಳು ಕಂಡುಬರುತ್ತಿದ್ದು, ನದಿ ನೀರಿನ ಹಂಚಿಕೆಯಲ್ಲಿ ಸೌಹಾರ್ದಯುತವಾಗಿ ಸಮಸ್ಯೆ ನಿವಾರಿಸುವುದೇ ಸರ್ಕಾರದ ಮೊದಲ ಆದ್ಯತೆಯಾಗಿದೆ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ. ಕಾವೇರಿ...

ಉತ್ತರ ಪ್ರದೇಶ : 33 ವರ್ಷಗಳ ಬಳಿಕ ದೇಶದ್ರೋಹ ಪ್ರಕರಣದಿಂದ ಮುಸ್ಲಿಂ ವ್ಯಕ್ತಿ ಖುಲಾಸೆ

ಪ್ರಾಸಿಕ್ಯೂಷನ್ ಆರೋಪಗಳನ್ನು ಸಾಂದರ್ಭಿಕ ಪುರಾವೆಗಳೊಂದಿಗೆ ಸಾಬೀತುಪಡಿಸಲು ವಿಫಲವಾಗಿದೆ ಮತ್ತು ಆರೋಪಿಯನ್ನು ಕೃತ್ಯಕ್ಕೆ ಲಿಂಕ್ ಮಾಡುವ ಪ್ರಮುಖ ಪುರಾವೆಗಳು ಕಾಣೆಯಾಗಿವೆ ಎಂದು ಅಭಿಪ್ರಾಯಪಟ್ಟ ಲಕ್ನೋದ ವಿಶೇಷ ರಾಷ್ಟ್ರೀಯ ತನಿಖಾ ದಳ (ಎನ್ಐಎ) ನ್ಯಾಯಾಲಯ, ದೇಶದ್ರೋಹ...

‘ಊರು ಕೊಳ್ಳೆ ಹೊಡೆದ ಮೇಲೆ ದಿಡ್ಡಿ ಬಾಗಿಲು ಹಾಕಿದರು’ ಎಂಬಂತೆ NTA ಯಿಂದ ₹7.5 ಕೋಟಿಯ ಬೃಹತ್ ಸೆಕ್ಯೂರಿಟಿ ಟೆಂಡರ್

ನೀಟ್ ಪ್ರಶ್ನೆಪತ್ರಿಕೆ ಸೋರಿಕೆಯಾಗಿ, ಅಮಾಯಕ ವಿದ್ಯಾರ್ಥಿಗಳ ಜೀವ-ಭವಿಷ್ಯ ಹಾಳಾದ ಮೇಲೆ, ಊರು ಕೊಳ್ಳೆ ಹೊಡೆದ ಮೇಲೆ ದಿಡ್ಡಿ ಬಾಗಿಲು ಹಾಕಿದರು ಎಂಬಂತೆ ಈಗ ಎನ್‌ಟಿಎ (NTA) ₹7.5 ಕೋಟಿ ವೆಚ್ಚದ ಭದ್ರತಾ ಟೆಂಡರ್...

SIR: ನಮೂನೆಯೂ ಇಲ್ಲ, ನೋಟಿಸ್‌ ಇಲ್ಲ ಸ್ವಂತ ಮನೆಯಲ್ಲಿದ್ದವರ ಹೆಸರನ್ನೇ ಅಳಿಸಿಹಾಕಿದ ಚುನಾವಣಾ ಆಯೋಗ

ರಾಜ್ಯದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಒಂದಾದ ಮೇಲೊಂದರಂತೆ ಆತಂಕಕಾರಿ ಪ್ರಕರಣಗಳು ಬೆಳಕಿಗೆ ಬರುತ್ತಿವೆ. ಮನೆಮನೆಗೆ ತೆರಳಿ ಎನ್ಯುಮರೇಷನ್ ನಮೂನೆ ವಿತರಿಸುವ ಮೊದಲ ಹಂತದ ಪ್ರಕ್ರಿಯೆ...

ಲೈಂಗಿಕ ಕಿರುಕುಳ ಪ್ರಕರಣದಲ್ಲಿ ಅಮಾನತುಗೊಂಡಿದ್ದ ಯುಪಿ ಪೊಲೀಸ್ ಕಾನ್‌ಸ್ಟೇಬಲ್; ಮರುನೇಮಕದ ಬೆನ್ನಲ್ಲೇ ಬಾಲಕಿಯ ಅತ್ಯಾಚಾರ, ಕೊಲೆ!

ಹತ್ತು ವರ್ಷದ ಬಾಲಕಿಯ ಮೇಲೆ ಅತ್ಯಾಚಾರಕ್ಕೆ ಯತ್ನಿಸಿ, ಆಕೆಯ ಸಾವಿಗೆ ಕಾರಣನಾದ ಆರೋಪದ ಮೇಲೆ ಬಂಧಿತನಾದ ಉತ್ತರ ಪ್ರದೇಶದ ಪೊಲೀಸ್ ಕಾನ್‌ಸ್ಟೇಬಲ್ ಅಭಿಷೇಕ್ ಯಾದವ್‌ನನ್ನು ವೈದ್ಯಕೀಯ ತಪಾಸಣೆಗಾಗಿ ಗೋರಖ್‌ಪುರದ ಜಿಲ್ಲಾಸ್ಪತ್ರೆಗೆ ಕರೆತಂದಾಗ, ಅಲ್ಲಿನ...

BJP ವಿರುದ್ಧದ ಆಕ್ರೋಶವೇ Gen-Z ಹೋರಾಟದ ಮೂಲ: ವಿಪಕ್ಷಗಳಿಗೆ ಇದು ದೊಡ್ಡ ಪಾಠ

ಜಂತರ್ ಮಂತರ್‌ನಲ್ಲಿ ನಡೆದ ವಿದ್ಯಾರ್ಥಿಗಳ ಹೋರಾಟವನ್ನು ನಿಮ್ಮ ರಾಜಕೀಯ ದೃಷ್ಟಿಕೋನಕ್ಕೆ ತಕ್ಕಂತೆ ನೀವು ಕ್ರಾಂತಿ ಎಂದಾದರೂ ನೋಡಬಹುದು, ಅಥವಾ ಕ್ಷಣಿಕವಾಗಿ ಎದ್ದ ಬಿರುಗಾಳಿ ಎಂದಾದರೂ ಭಾವಿಸಬಹುದು. ಆದರೆ ಇಲ್ಲಿ ನಿಜವಾಗಿಯೂ ಆಗಿದ್ದೇನು ಮತ್ತು...

ಇನ್‌ಸ್ಟಾಗ್ರಾಮ್‌ನಲ್ಲಿ ಕ್ಷಮಿಸಿದರೆ ಸಾಲದು, ವಿದ್ಯಾರ್ಥಿಗಳ ಮೇಲಿನ ಕೇಸ್ ವಾಪಸ್ ಪಡೆಯಿರಿ: ಪ್ರಧಾನಿಗೆ ದೀಪ್ಕೆ ನೇರ ಪ್ರಶ್ನೆ

ಪ್ರಧಾನಿ ನರೇಂದ್ರ ಮೋದಿ ಅವರು ಇನ್‌ಸ್ಟಾಗ್ರಾಮ್ ವಿಡಿಯೋವೊಂದರಲ್ಲಿ ತಮ್ಮ ವಿರುದ್ಧ ನಿಂದನಾತ್ಮಕ ಪದ ಬಳಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಕ್ಷಮಿಸಿದ್ದೇನೆ ಎಂದು ಹೇಳಿರುವುದಕ್ಕೆ ಸಿಜೆಪಿ ಸಂಸ್ಥಾಪಕ ಅಭಿಜೀತ್...

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...