Homeಕರೋನಾ ತಲ್ಲಣತಿರುವನಂತಪುರ: ಸಾಮಾಜಿಕ ಅಂತರ ಕಾಪಾಡದ ಪೋಥಿಸ್ ಪರವಾನಗಿ ರದ್ದು!

ತಿರುವನಂತಪುರ: ಸಾಮಾಜಿಕ ಅಂತರ ಕಾಪಾಡದ ಪೋಥಿಸ್ ಪರವಾನಗಿ ರದ್ದು!

- Advertisement -
- Advertisement -

ಸಾಮಾಜಿಕ ಅಂತರದ ಮಾನದಂಡಗಳನ್ನು ಉಲ್ಲಂಘಿಸಿದ ಆರೋಪದ ಮೇಲೆ ತಿರುವನಂತಪುರಂ ಕಾರ್ಪೊರೇಷನ್ ‘ರಾಮಚಂದ್ರನ್ ಮತ್ತು ಪೋಥಿಸ್’ ಅವರ ಶಾಪಿಂಗ್ ಮಾಲ್ ಪರವಾನಗಿಯನ್ನು ರದ್ದುಗೊಳಿಸಿದೆ.

ಈ ಮಳಿಗೆಗಳು ಕೊರೊನಾ ಹರಡುವಿಕೆಯ ಹೆಚ್ಚಳಕ್ಕೆ ಪ್ರಮುಖ ಕಾರಣವಾಗಿವೆ. ಕೊರೊನಾ ಪ್ರೋಟೋಕಾಲ್ ಅನುಸರಿಸುವಂತೆ ಅನೇಕ ಬಾರಿ ಆದೇಶ ನೀಡಲಾಯಿತು. ಆದರೂ ಅವರು ಅದನ್ನು ನಿರ್ಲಕ್ಷಿಸಿದ್ದಾರೆ. ಇದರಿಂದಾಗಿ ರಾಮಚಂದ್ರನ್ ಅವರ 100 ಕ್ಕೂ ಹೆಚ್ಚು ಸಿಬ್ಬಂದಿಗೆ ಸೋಂಕು ದೃಢಪಟ್ಟಿದೆ ಎಂದು ಕಾರ್ಪೋರೇಷನ್ ಅಧಿಕಾರಿಗಳು ತಿಳಿಸಿದ್ದಾರೆ.

ಇದೇ ರೀತಿಯ ಘಟನೆಗಳು ಪೋಥಿಸ್ ನಲ್ಲಿಯೂ ಸಹ ವರದಿಯಾಗಿವೆ. ಪೋಥಿಸ್‌ಗೆ ನಿಗಮದಿಂದ ಹಲವು ಬಾರಿ ಎಚ್ಚರಿಕೆ ನೀಡಲಾಯಿತು. ಆದರೂ ಅನುಸರಿಸಿಲ್ಲ. ಹಾಗಾಗಿ ಮುಂದಿನ ಸೂಚನೆ ಬರುವವರೆಗೂ ಈ ಮಾಲ್ ಗಳ ಪರವಾನಗಿಯನ್ನು ರದ್ದುಪಡಿಸಲಾಗಿದೆ ಎಂದು ತಿರುವನಂತಪುರಂ ಮೇಯರ್ ಕೆ.ಶ್ರೀಕುಮಾರ್ ತಮ್ಮ ಫೇಸ್‌ಬುಕ್ ಪುಟದಲ್ಲಿ ತಿಳಿಸಿದ್ದಾರೆ.

ನಗರದ ಅತ್ಯಂತ ಹಳೆಯ ಉದ್ಯಮಗಳಲ್ಲಿ ಒಂದಾದ ರಾಮಚಂದ್ರನ್ ಅತ್ತಕುಮಂಗರದಲ್ಲಿದೆ. ಬಹುಮಹಡಿ ಮಳಿಗೆಯು ಹೈಪರ್ ಮಾರ್ಕೆಟ್, ಫುಡ್ ಕೋರ್ಟ್ ಅನ್ನು ಒಳಗೊಂಡಿದೆ. ಜವಳಿ, ಮನೆ ಅಲಂಕಾರಿಕ, ಕಟ್ಲರಿ ಮತ್ತು ಪೀಠೋಪಕರಣಗಳನ್ನು ಮಾರಾಟ ಮಾಡುತ್ತದೆ.

ಪೋಥಿಸ್ ಎಂಬ ಬಹುಮಹಡಿ ಜವಳಿ ಅಂಗಡಿಯು ಆಯುರ್ವೇದ ಕಾಲೇಜು ಜಂಕ್ಷನ್ ಬಳಿ ಇದೆ. ಮಾಲ್‌ಗೆ ಪ್ರವೇಶಿಸುವ ಮೊದಲು ಗ್ರಾಹಕರ ತಾಪಮಾನವನ್ನು ಪರಿಶೀಲಿಸಿದೆ. ಕೈ ತೊಳೆಯುವುದು ಮತ್ತು ಸ್ಯಾನಿಟೈಸರ್ ಬಳಸುವುದನ್ನು ಕಡ್ಡಾಯಗೊಳಿಸಿದ್ದರೂ, ಸಾಮಾಜಿಕ ಅಂತರವನ್ನು ಅನುಸರಿಸಲಿಲ್ಲ ಎಂದು ಆರೋಪಿಸಲಾಗಿದೆ.

ರಾಮಚಂದ್ರನ್ ಅವರಲ್ಲೂ ಇದೇ ರೀತಿಯ ಸಮಸ್ಯೆ ವರದಿಯಾಗಿದೆ, ಗ್ರಾಹಕರು ಶಾಪಿಂಗ್ ಮಾಡುವಾಗ ಸಾಮಾಜಿಕ ಅಂತರವನ್ನು ಅನುಸರಿಸಲು ವಿಫಲರಾಗಿದ್ದಾರೆ. ಮಾಲ್ ಅಧಿಕಾರಿಗಳು ಸಾಮಾಜಿಕ ಅಂತರವನ್ನು ಖಚಿತಪಡಿಸಿಕೊಳ್ಳಲು ಯಾವುದೇ ಸೌಲಭ್ಯಗಳನ್ನು ವ್ಯವಸ್ಥೆ ಮಾಡಿರಲಿಲ್ಲ ಎನ್ನಲಾಗಿದೆ.

ಶನಿವಾರ ಜಿಲ್ಲಾಧಿಕಾರಿ ನವಜೋತ್ ಖೋಸಾ ಅವರು ಸೋಂಕು ದೃಢ ಪಟ್ಟ ಜನರು ಕೆಲಸ ಮಾಡಿದ ಸ್ಥಳಗಳ ಪಟ್ಟಿಯನ್ನು ಬಿಡುಗಡೆ ಮಾಡಿದರು. ಇದರಲ್ಲಿ ಪೋಥಿಸ್, ರಾಮಚಂದ್ರನ್ಸ್ ಮತ್ತು ಇತರ 22 ಸ್ಥಳಗಳು ಸೇರಿವೆ. ಈ ಪಟ್ಟಿಯಲ್ಲಿ ಬೇಕರಿಗಳು, ಬ್ಯಾಂಕುಗಳು, ವೈದ್ಯಕೀಯ ಅಂಗಡಿಗಳು, ವಿದ್ಯುತ್ ಅಂಗಡಿಗಳು, ಮಾರುಕಟ್ಟೆಗಳು, ಸೂಪರ್ ರ್ಮಾರ್ಕೆಟ್‌ಗಳು ಇವೆ.

ಕಳೆದ ವಾರ ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಅವರು, ಪ್ರೋಟೋಕಾಲ್ ಉಲ್ಲಂಘಿಸಿ ಭಾರಿ ಹರಡುವಿಕೆಗೆ ಕಾರಣವಾದ ವ್ಯಾಪಾರಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಹೇಳಿದ್ದರು. “ನಾನು ಯಾವುದೇ ನಿರ್ದಿಷ್ಟ ಸ್ಥಳವನ್ನು ಉಲ್ಲೇಖಿಸುತ್ತಿಲ್ಲ. ಆದರೆ ಇದಕ್ಕೆ ಕಾರಣರಾದ ಎಲ್ಲ ವ್ಯಾಪಾರಿಗಳ ಮೇಲೆ ಕಾನೂನಿನಡಿಯಲ್ಲಿ ಪ್ರಕರಣ ದಾಖಲಿಸಲಾಗುವುದು” ಎಂದು ಹೇಳಿದರು.


ಇದನ್ನೂ ಓದಿ: ಫ್ಯಾಕ್ಟ್‌ಚೆಕ್: ಈ ಆಕ್ರೋಶ ಭರಿತ ಜನರ ಗುಂಪು ಕೇರಳದ ಮುಸ್ಲಿಮರದ್ದೇ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕರಾವಳಿ ಸಮಸ್ಯೆಗೆ ಶಾಶ್ವತ ಪರಿಹಾರದ ಭರವಸೆ: ಸಚಿವ ಕೆ.ಎಸ್.ಬಸವಂತಪ್ಪ

ರಾಜ್ಯದ ಕರಾವಳಿ ಭಾಗದಲ್ಲಿ ಮೀನುಗಾರಿಕೆ ಕ್ಷೇತ್ರದ ಅಭಿವೃದ್ಧಿ ಕುಂಠಿತವಾಗುತ್ತಿರುವ ಕುರಿತು ಕಳವಳ ವ್ಯಕ್ತವಾಗುತ್ತಿರುವ ಬೆನ್ನಲ್ಲೇ, ಸ್ಥಳೀಯ ಸಮಸ್ಯೆಗಳಿಗೆ ಸ್ಪಂದಿಸಲು ಸರ್ಕಾರ ಮುಂದಾಗಿದೆ. ಕರಾವಳಿ ವ್ಯಾಪ್ತಿಯ ಬಂದರುಗಳು, ಮೀನು ಮಾರುಕಟ್ಟೆಗಳು, ಬ್ರೇಕ್‌ವಾಟರ್‌ಗಳು ಹಾಗೂ ಜೆಟ್ಟಿಗಳಿಗೆ...

SIR ಪ್ರಕ್ರಿಯೆಯಲ್ಲಿ ಯಾರ ಹೆಸರು ಬಿಟ್ಟುಹೋಗಬಾರದು: PRC ನೀಡಲು ವಿಳಂಬ ಬೇಡ ಡಾ. ಜಿ. ಪರಮೇಶ್ವರ್

ಉದ್ಯೋಗ ಅಥವಾ ವಿವಿಧ ಕಾರಣಗಳಿಂದಾಗಿ ತಮ್ಮ ಸ್ವಂತ ಊರು ತೊರೆದು ಬೇರೆಡೆಗೆ ಸ್ಥಳಾಂತರಗೊಂಡು ನೆಲೆಸಿರುವ ರಾಜ್ಯದ ಯಾವುದೇ ನಾಗರಿಕರು ಯಾವುದೇ ಕಾರಣಕ್ಕೂ ಮತದಾರರ ಪಟ್ಟಿಯಿಂದ ಹೊರಗುಳಿಯಬಾರದು ಎಂದು ಉಪಮುಖ್ಯಮಂತ್ರಿ ಹಾಗೂ ಕಂದಾಯ ಸಚಿವರಾದ...

ಬಿಹಾರ ಪ್ರವಾಹದ ನಡುವೆ ಮೋದಿ ಹುಟ್ಟುಹಬ್ಬದ ಪ್ರಯುಕ್ತ ದೀಪೋತ್ಸವ; ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮಕ್ಕೆ ತೇಜಸ್ವಿ ಯಾದವ್ ಆಕ್ಷೇಪ

ಬಿಹಾರದಲ್ಲಿ ಪ್ರವಾಹ ಪರಿಸ್ಥಿತಿ ಮುಂದುವರಿದಿರುವ ನಡುವೆಯೇ ಪ್ರಧಾನಿ ನರೇಂದ್ರ ಮೋದಿ ಅವರ ಹುಟ್ಟುಹಬ್ಬದ ಅಂಗವಾಗಿ ಸೆಪ್ಟೆಂಬರ್ 17ರಂದು ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮ ಆಯೋಜಿಸಿರುವುದು ರಾಜಕೀಯ ಚರ್ಚೆಗೆ ಕಾರಣವಾಗಿದೆ. ರಾಜ್ಯದ 15 ಜಿಲ್ಲೆಗಳಲ್ಲಿ...

ಉಮರ್ ಖಾಲಿದ್ ಅವರನ್ನು ‘ದೇಶಪ್ರೇಮಿ’ ಎಂದ ಬಿ.ಕೆ. ಹರಿಪ್ರಸಾದ್; ವಿಧಾನಸೌಧ ಪೊಲೀಸ್ ಠಾಣೆಯಲ್ಲಿ ದೂರು ದಾಖಲು

ಬೆಂಗಳೂರಿನ ರಾಷ್ಟ್ರೀಯ ಕಾನೂನು ಶಾಲೆ (ಎನ್‌ಎಲ್‌ಎಸ್‌ಐಯು) ಯೂನಿವರ್ಸಿಟಿಯಲ್ಲಿ ಜೈಲಿನಲ್ಲಿರುವ ಹೋರಾಟಗಾರ ಉಮರ್ ಖಾಲಿದ್ ಕುರಿತಾದ ಸಾಕ್ಷ್ಯಚಿತ್ರಕ್ಕೆ ಸಂಬಂಧಿಸಿದಂತೆ ನಡೆಯುತ್ತಿರುವ ವಿವಾದದ ನಡುವೆ, ಅವರನ್ನು "ರಾಷ್ಟ್ರಪ್ರೇಮಿ" ಎಂದು ಕರೆದಿರುವ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ...

ಇಂದಿರಾ ಗಾಂಧಿಯಂತೆ ನೇರವಾಗಿ ನಿಲ್ಲಿ, ಟ್ರಂಪ್ ಮುಂದೆ ಮಂಡಿಯೂರುತ್ತಿದ್ದೀರಿ: ‘UPI ಟ್ಯಾಕ್ಸ್’ ಬಗ್ಗೆ ಮೋದಿ ವಿರುದ್ಧ ರಾಹುಲ್ ವಾಗ್ದಾಳಿ!

ಯುಪಿಐ (UPI) ವಹಿವಾಟುಗಳಿಗೆ ಸಂಬಂಧಿಸಿದಂತೆ ಜಾರಿಯಾಗುತ್ತಿರುವ ಹೊಸ 'ಮರ್ಚೆಂಟ್ ಡಿಸ್ಕೌಂಟ್ ರೇಟ್' (MDR) ವ್ಯವಸ್ಥೆ ಇದೀಗ ತೀವ್ರ ರಾಜಕೀಯ ಸಂಘರ್ಷಕ್ಕೆ ಕಾರಣವಾಗಿದೆ. ಇದನ್ನು "ಬ್ಯಾಂಕ್‌ಗಳು ವಿಧಿಸುವ ಸೇವಾ ಶುಲ್ಕ" ಎಂದು ಸರ್ಕಾರ ಸಮರ್ಥಿಸಿಕೊಳ್ಳುತ್ತಿದ್ದರೂ,...

ಲಿಯೋನೆಲ್ ಮೆಸ್ಸಿ ಕೇರಳ ಭೇಟಿ ಪ್ರಕರಣ: ಕೊಚ್ಚಿಯ ‘ರಿಪೋರ್ಟರ್ ಟಿವಿ’ ಕಚೇರಿಯಲ್ಲಿ ಪೊಲೀಸರಿಂದ ಶೋಧ

ಮಲಯಾಳಂ ಸುದ್ದಿ ವಾಹಿನಿ 'ರಿಪೋರ್ಟರ್ ಟಿವಿ'ಯ ಕೊಚ್ಚಿ ಪ್ರಧಾನ ಕಚೇರಿಯಲ್ಲಿ ಬುಧವಾರ (ಸೆ.16) ಮುಂಜಾನೆ ಪೊಲೀಸ್ ತಂಡವೊಂದು ಶೋಧ ಕಾರ್ಯ ನಡೆಸಿದ್ದು, ಇದರಿಂದಾಗಿ ತನ್ನ ಸುದ್ದಿ ಪ್ರಸಾರ ಕಾರ್ಯಾಚರಣೆಗೆ ಅಡಚಣೆಯಾಗಿದೆ ಎಂದು ವಾಹಿನಿ...

‘ಏಕರೂಪತೆ ಸಮಾನತೆಯಲ್ಲ’: 2029ಕ್ಕೂ ಮುನ್ನ 21 ರಾಜ್ಯಗಳಲ್ಲಿ ಯುಸಿಸಿ ಜಾರಿ ಘೋಷಿಸಿದ ಅಮಿತ್ ಶಾಗೆ ಪ್ರತಿಪಕ್ಷಗಳ ತೀವ್ರ ತಿರುಗೇಟು

ನವದೆಹಲಿ/ಮುಂಬೈ: 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಸರ್ಕಾರಗಳಿರುವ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಜಾರಿಗೆ ತರಲಾಗುವುದು ಎಂಬ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ...

KPSC ಅಧ್ಯಕ್ಷರ ಪುತ್ರಿಯ ನಕಲಿ ಪ್ರಮಾಣಪತ್ರ ಹಗರಣ: ಅಕ್ರಮಕ್ಕೆ ಸಾಥ್ ನೀಡಿದ್ದ ಅಧಿಕಾರಿಯ ಜಾಮೀನು ಅರ್ಜಿ ವಜಾ

ಕೆಪಿಎಸ್‌ಸಿ (KPSC) ಅಧ್ಯಕ್ಷರ ಪುತ್ರಿಗೆ ಅಕ್ರಮವಾಗಿ ನಕಲಿ ಆದಾಯ ಪ್ರಮಾಣಪತ್ರ ನೀಡಿದ ಆರೋಪ ಎದುರಿಸುತ್ತಿರುವ ಕಂದಾಯ ಅಧಿಕಾರಿಯ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಬೆಂಗಳೂರಿನ ನಗರ ಸಿವಿಲ್ ಮತ್ತು ಸೆಷನ್ಸ್ ನ್ಯಾಯಾಲಯ ಮಂಗಳವಾರ ವಜಾಗೊಳಿಸಿದೆ....

ಬಂಗಾಳದಲ್ಲಿ ಬಿಜೆಪಿ ಸರ್ಕಾರದ ನಿರ್ಬಂಧ; ನೆಲಕಚ್ಚಿದ ದನದ ಮಾಂಸ ವ್ಯಾಪಾರ

ಪಶು ಹತ್ಯೆಯ ಕುರಿತು ಮುಖ್ಯಮಂತ್ರಿ ಸುವೇಂಧು ಅಧಿಕಾರಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಸೂಚನೆ ಹೊರಡಿಸಿದ ನಂತರ, ಮಾಂಸದ ವ್ಯಾಪಾರಿ ಮುಷ್ತಾಕ್ ಕಳೆದ ಮೂರು ತಿಂಗಳಿನಿಂದ ಒಂದು ಪೈಸೆಯನ್ನೂ ಗಳಿಸಿಲ್ಲ. "ಚುನಾವಣೆಯ ಕಾರಣದಿಂದ...

ತೀವ್ರಗೊಂಡ ಸೌದಿ-ಹೌತಿ ಸಂಘರ್ಷ : ಮಕ್ಕಾ ಗುರಿಯಾಗಿಸಿದ್ದ ಡ್ರೋನ್ ಹೊಡೆದುರುಳಿಸಿದ್ದೇವೆ ಎಂದ ಸೌದಿ; ತಳ್ಳಿಹಾಕಿದ ಹೌತಿ

ಯೆಮನ್‌ನ ರೆಬೆಲ್ ಗ್ರೂಪ್ ಹೌತಿ ಮತ್ತು ಸೌದಿ ಬೆಂಬಲಿತ ಪಡೆಗಳ ಸಂಘರ್ಷ ತೀವ್ರಗೊಂಡಿದ್ದು, ಇತಿಹಾಸದಲ್ಲೇ ಮೊದಲ ಬಾರಿಗೆ ಮುಸ್ಲಿಮರ ಪವಿತ್ರ ನಗರ ಮಕ್ಕಾದಲ್ಲಿ ಸೌದಿ ಅರೇಬಿಯಾದ ನಾಗರಿಕ ರಕ್ಷಣಾ (ಸಿವಿಲ್ ಡಿಫೆನ್ಸ್) ಇಲಾಖೆಯು...