Homeಮುಖಪುಟರಾಮಪಥದ 14 ಕಿ.ಮೀ ರಸ್ತೆಯಲ್ಲಿ ಗುಂಡಿ, ಆರು ತಿಂಗಳಲ್ಲೆ ಅಯೋಧ್ಯೆ ದೇಗುಲ ಸೋರಿಕೆ

ರಾಮಪಥದ 14 ಕಿ.ಮೀ ರಸ್ತೆಯಲ್ಲಿ ಗುಂಡಿ, ಆರು ತಿಂಗಳಲ್ಲೆ ಅಯೋಧ್ಯೆ ದೇಗುಲ ಸೋರಿಕೆ

- Advertisement -
- Advertisement -

ಅಯೋಧ್ಯೆಯಲ್ಲಿ ರಾಮ ಮಂದಿರದ ಭವ್ಯ ಉದ್ಘಾಟನೆಯ ಆರು ತಿಂಗಳ ನಂತರ ಸುರಿದ ಅಲ್ಪ ಪ್ರಮಾಣದ ಮಳೆಯು ದೇವಾಲಯದ ಪಟ್ಟಣದಲ್ಲಿ ಭಾರೀ ಜಲಾವೃತ ಸೃಷ್ಟಿಯಾಗಿದೆ. ಅವಸರದ ಕಾಮಗಾರಿ ಮತ್ತು ಬೃಹತ್ ಮೂಲಸೌಕರ್ಯ ಕೂಲಂಕುಷ ಪರೀಕ್ಷೆಯ ಬಗ್ಗೆ ಪ್ರಶ್ನೆಗಳನ್ನು ಹುಟ್ಟುಹಾಕಿದೆ.

ಅಯೋಧ್ಯೆಗೆ ಸಂಪರ್ಕ ಕಲ್ಪಿಸುವ 14 ಕಿ.ಮೀ ವ್ಯಾಪ್ತಿಯ ರಾಂಪಥದಲ್ಲಿ ಗುಂಡಿಗಳು ಬಿದ್ದಿದ್ದು, ಭಕ್ತರಿಗೆ ಯಾವುದೇ ತೊಂದರೆಯಾಗದಂತೆ ಅಧಿಕಾರಿಗಳು ತಕ್ಷಣ ರಸ್ತೆಯನ್ನು ದುರಸ್ತಿಗೊಳಿಸಿದ್ದಾರೆ ಎಂದು ಸರ್ಕಾರ ಹೇಳಿಕೊಂಡಿದೆ. ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಸರ್ಕಾರವು ತೀವ್ರ ನಿರ್ಲಕ್ಷ್ಯ ತೋರಿದ ಆಧಾರದಲ್ಲಿ ಆರು ಅಧಿಕಾರಿಗಳನ್ನು ಅಮಾನತುಗೊಳಿಸಿದೆ ಎಂದು ತಿಳಿದುಬಂದಿದೆ.

ಅಯೋಧ್ಯೆ ಮೇಯರ್ ಗಿರೀಶ್ ಪತಿ ತ್ರಿಪಾಠಿ ಮಾತನಾಡಿ, ನೀರು ತುಂಬಿರುವ ವರದಿಯಾದ ಕೂಡಲೇ ಮಳೆಯ ನೀರನ್ನು ಹೊರಹಾಕುವ ಪ್ರಯತ್ನಗಳನ್ನು ಪ್ರಾರಂಭಿಸಲಾಯಿತು. ಕಳೆದ ಶನಿವಾರ ಮಧ್ಯರಾತ್ರಿ ಸುರಿದ ಭಾರಿ ಮಳೆಗೆ ದೇವಸ್ಥಾನದಲ್ಲೂ ಸೋರಿಕೆ ಉಂಟಾಗಿತ್ತು. ರಾಮಮಂದಿರದ ಮುಖ್ಯ ಅರ್ಚಕರು ಸೋಮವಾರ ದೇವಾಲಯದ ಮೇಲ್ಛಾವಣಿಯಿಂದ ಸೋರುತ್ತಿರುವ ಮಳೆನೀರು ಸಂಕೀರ್ಣದೊಳಗೆ ಸಂಗ್ರಹವಾಗುತ್ತಿದೆ ಎಂದು ಹೇಳಿದ್ದರು. ದೇವಸ್ಥಾನದ ಆವರಣದಲ್ಲಿರುವ ಮಳೆ ನೀರನ್ನು ಹೊರ ಹಾಕಲು ಯಾವುದೇ ವ್ಯವಸ್ಥೆ ಇಲ್ಲ ಎಂದು ದೂರಿದರು.

ಸೋರಿಕೆ ಸುದ್ದಿಯನ್ನು ತಿರಸ್ಕರಿಸಿದ ದೇವಾಲಯದ ಟ್ರಸ್ಟ್‌ನ ಪ್ರಧಾನ ಕಾರ್ಯದರ್ಶಿ ಚಂಪತ್ ರೈ, ಛಾವಣಿಯಿಂದ “ಒಂದು ಹನಿ ನೀರು” ಅಥವಾ ಗರ್ಭಗುಡಿ ಅಥವಾ ‘ಗರ್ಭ ಗೃಹ’ಕ್ಕೆ ಎಲ್ಲಿಂದಲಾದರೂ ನೀರು ಪ್ರವೇಶಿಸಿಲ್ಲ ಎಂದು ಹೇಳಿದರು. ದೇವಸ್ಥಾನದಲ್ಲಿ ಮಳೆ ನೀರು ಹರಿದು ಹೋಗಲು ಉತ್ತಮ ವ್ಯವಸ್ಥೆ ಮಾಡಲಾಗಿದೆ ಎಂದು ತಿಳಿಸಿದರು.

ಮೇಲ್ಛಾವಣಿಯಿಂದ ನೀರು ಸೋರಿಕೆಯಾಗುತ್ತಿದೆ ಎಂದು ಕಂಡುಬಂದರೂ, ದೇವಾಲಯದ ಮೊದಲ ಮಹಡಿಯಲ್ಲಿ ನಡೆಯುತ್ತಿರುವ ನಿರ್ಮಾಣ ಕಾಮಗಾರಿಯಿಂದಾಗಿ ಕೊಳವೆ ಪೈಪ್‌ನಿಂದ ನೀರು ಬರುತ್ತಿದೆ ಎಂದು ರೈ ಹೇಳಿದರು.

ರಾಮಮಂದಿರ ನಿರ್ಮಾಣ ಸಮಿತಿಯ ಅಧ್ಯಕ್ಷ ನೃಪೇಂದ್ರ ಮಿಶ್ರಾ, ರಾಮಮಂದಿರದಲ್ಲಿ ನೀರು ಸೋರಿಕೆಯಾಗುವುದನ್ನು ನಿರೀಕ್ಷಿಸಲಾಗಿತ್ತು. ಏಕೆಂದರೆ, ಗುರು ಮಂಟಪವು ಆಕಾಶಕ್ಕೆ ತೆರೆದುಕೊಂಡಿದೆ. ಆದರೆ ನಿರ್ಮಾಣ ಕಾರ್ಯ ಇನ್ನೂ ನಡೆಯುತ್ತಿದೆ, ಮಳೆ ನೀರು ಗರ್ಭಗುಡಿಗೆ ಪ್ರವೇಶಿಸಲಿಲ್ಲ ಎಂದರು.

ಅಯೋಧ್ಯೆಯಲ್ಲಿ ರಾಮ ಮಂದಿರ ನಿರ್ಮಾಣದಲ್ಲಿ ದೊಡ್ಡ ಪ್ರಮಾಣದ ಭ್ರಷ್ಟಾಚಾರ ನಡೆದಿದೆ ಎಂದು ಆರೋಪಿಸಿ ಪ್ರತಿಪಕ್ಷ ನಾಯಕರು ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದರು. ಪೂಜಾ ಸ್ಥಳಗಳು ಕೂಡ ಬಿಜೆಪಿಗೆ ಲೂಟಿಯ ಮೂಲಗಳಾಗಿವೆ ಎಂದು ಯುಪಿ ಕಾಂಗ್ರೆಸ್ ಅಧ್ಯಕ್ಷ ಅಜಯ್ ರೈ ಹೇಳಿದ್ದಾರೆ.

ಅಯೋಧ್ಯೆಯಲ್ಲಿ ರಾಮ ಮಂದಿರವನ್ನು ಜನವರಿ 22 ರಂದು ಪ್ರಧಾನಿ ನರೇಂದ್ರ ಮೋದಿ ಅವರು ಉದ್ಘಾಟಿಸಿದರು.

ಇದನ್ನೂ ಓದಿ; ನೀಟ್ ಪೇಪರ್ ಸೋರಿಕೆ ಪ್ರಕರಣ: ಗುಜರಾತ್‌ನ ಏಳು ಸ್ಥಳಗಳಲ್ಲಿ ಸಿಬಿಐ ಶೋಧ, ಪತ್ರಕರ್ತನ ಬಂಧನ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ನಾಲ್ವರು ಬಾಲಕರಿಂದ ಬಾಲಕಿಗೆ ಕಿರುಕುಳ ಆರೋಪ : ‘ಉತ್ತಮ ಸಂಸ್ಕಾರ ಕಲಿಸಿಲ್ಲ’ ಎಂದು ತಾಯಂದಿರನ್ನು ಬಂಧಿಸಿದ ಪೊಲೀಸರು!

ಉತ್ತರ ಪ್ರದೇಶದ ಬದೌನ್ ಜಿಲ್ಲೆಯಲ್ಲಿ ನಾಲ್ವರು ಬಾಲಕರ ವಿರುದ್ಧ ಬಾಲಕಿಗೆ ಕಿರುಕುಳ ನೀಡಿದ ಆರೋಪ ಕೇಳಿ ಬಂದಿದ್ದು, ಪೊಲೀಸರು ಬಾಲಕರ ತಾಯಂದಿರನ್ನು 'ಪ್ರಿವೆಂಟಿವ್ ಅರೆಸ್ಟ್' ಮಾಡಿದ್ದಾರೆ ಎಂದು indianexpress.com ಶನಿವಾರ (ಡಿ.20) ವರದಿ...

ಎಸ್‌ಐಆರ್‌: ಸ್ಟಾಲಿನ್ ಅವರ ಕೊಳತ್ತೂರು ಕ್ಷೇತ್ರದಲ್ಲಿ 1 ಲಕ್ಷ ಮತದಾರ ಹೆಸರು ಕರಡು ಮತದಾರರ ಪಟ್ಟಿಯಲ್ಲಿ ಡಿಲೀಟ್

ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರ ಕೊಳತ್ತೂರು ಕ್ಷೇತ್ರದಿಂದ 1,03,812 ಕ್ಕೂ ಹೆಚ್ಚು ಮತದಾರರ ಹೆಸರು ತೆಗೆದುಹಾಕಲಾಗಿದೆ. ಇದು ತಮಿಳುನಾಡಿನಲ್ಲಿ ರಾಜ್ಯಾದ್ಯಂತ ನಡೆದ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಮತದಾರರ ಪಟ್ಟಿಯಲ್ಲಿನ ಅತಿದೊಡ್ಡ ಮತದಾರರ...

ಅಸ್ಸಾಂ : 15 ಮಂದಿಗೆ 24 ಗಂಟೆಯೊಳಗೆ ದೇಶ ತೊರೆಯಲು ಆದೇಶ : ಮಾಧ್ಯಮಗಳ ಮೂಲಕ ವಿಷಯ ತಿಳಿದುಕೊಂಡ ಕುಟುಂಬಸ್ಥರು

ಅಸ್ಸಾಂನ ನಾಗಾಂವ್ ಜಿಲ್ಲಾಡಳಿತವು 15 ಘೋಷಿತ ವಿದೇಶಿಯರಿಗೆ 24 ಗಂಟೆಗಳ ಒಳಗೆ ರಾಜ್ಯ ತೊರೆಯುವಂತೆ ಆದೇಶಿಸಿದ ಬಗ್ಗೆ ವರದಿಯಾಗಿದೆ. ಬುಧವಾರ (ಡಿ.17) ಜಿಲ್ಲಾಡಳಿತ ಈ ಆದೇಶ ನೀಡಿತ್ತು. ಆದರೆ, ಇದುವರೆಗೆ (ಡಿ.20) ಈ 15...

ಸಿರಿಯಾದ ಐಸಿಸ್ ಅಡಗುತಾಣಗಳ ಮೇಲೆ ಅಮೆರಿಕ ವಾಯುದಾಳಿ

ಕಳೆದ ವಾರ ಅಮೆರಿಕದ ಸಿಬ್ಬಂದಿ ಮೇಲೆ ನಡೆದ ಮಾರಕ ದಾಳಿಗೆ ಪ್ರತೀಕಾರವಾಗಿ ಅಮೆರಿಕವು ಮಧ್ಯ ಸಿರಿಯಾದಾದ್ಯಂತ ಡಜನ್‌ಗಟ್ಟಲೆ ಇಸ್ಲಾಮಿಕ್ ಸ್ಟೇಟ್ (ಐಎಸ್) ನೆಲೆಗಳ ಮೇಲೆ ವಾಯುದಾಳಿ ನಡೆಸಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. 'ಆಪರೇಷನ್ ಹಾಕೈ...

16 ಲಕ್ಷಕ್ಕೂ ಹೆಚ್ಚು ಕಾರ್ಮಿಕರನ್ನು ‘ಮನರೇಗಾ’ ಪಟ್ಟಿಯಿಂದ ಕೈಬಿಟ್ಟ ಕೇಂದ್ರ ಸರ್ಕಾರ: ವರದಿ

ಯುಪಿಎ ಸರ್ಕಾರದ ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆ (ಮನರೇಗಾ) ಹೆಸರನ್ನು ಬದಲಿಸಲು ಪ್ರಯತ್ನಿಸುವ 'ವಿಕ್ಷಿತ್ ಭಾರತ್ - ಗ್ಯಾರಂಟಿ ಫಾರ್ ರೋಜ್‌ಗಾರ್ ಮತ್ತು ಅಜೀವಿಕಾ ಮಿಷನ್ (ಗ್ರಾಮೀಣ) (ವಿಬಿ–ಜಿ...

ಅಮೆರಿಕದ ಬಹು ನಿರೀಕ್ಷಿತ ‘ಎಪ್‌ಸ್ಟೀನ್ ಫೈಲ್ಸ್’ ಬಿಡುಗಡೆ : ಬಿಲ್ ಕ್ಲಿಂಟನ್, ಮೈಕಲ್ ಜಾಕ್ಸನ್ ಸೇರಿದಂತೆ ಪ್ರಮುಖರ ಫೋಟೋಗಳು ಬಹಿರಂಗ

ಅಮೆರಿಕದ ಸಂಸತ್ತು ಅಂಗೀಕರಿಸಿದ ಎಪ್‌ಸ್ಟೀನ್ ಫೈಲ್ಸ್ ಟ್ರಾನ್ಸ್‌ಪೆರೆನ್ಸಿ ಆಕ್ಟ್ (Epstein Files Transparency Act) ನಿಯಮದಂತೆ ಅಮೆರಿಕದ ನ್ಯಾಯ ಇಲಾಖೆ(ಡಿಒಜಿ) ಲೈಂಗಿಕ ದೌರ್ಜನ್ಯ ಪ್ರಕರಣದ ಅಪರಾಧಿ ಜೆಫ್ರಿ ಎಪ್‌ಸ್ಟೀನ್‌ಗೆ ಸಂಬಂಧಿಸಿದ ಕೆಲ ದಾಖಲೆಗಳನ್ನು...

ಕೋಮು ಸಾಮರಸ್ಯಕ್ಕಾಗಿ ಭಾರತದ ಮುಸ್ಲಿಮರು ಸಾಮೂಹಿಕ ಪ್ರಯತ್ನಗಳೊಂದಿಗೆ ಮುಂದೆ ಬರಬೇಕು: ಜಮಾಅತ್ ಅಧ್ಯಕ್ಷ

'ಭಾರತದ ಮುಸ್ಲಿಮರು, ದೇಶದಲ್ಲಿ ಕೋಮು ಸಾಮರಸ್ಯಕ್ಕಾಗಿ ವೈಯಕ್ತಿಕ ಮತ್ತು ಸಾಮೂಹಿಕ ಪ್ರಯತ್ನಗಳೊಂದಿಗೆ ಮುಂದೆ ಬರಬೇಕು' ಎಂದು ಜಮಾಅತೆ-ಇ-ಇಸ್ಲಾಮಿ ಹಿಂದ್ ಅಧ್ಯಕ್ಷ ಸೈಯದ್ ಸಾದತುಲ್ಲಾ ಹುಸೈನಿ ಅವರು ಒತ್ತಾಯಿಸಿದರು. ಕೋಮು ಸಾಮರಸ್ಯ ಇಲಾಖೆಯು ಆಯೋಜಿಸಿದ್ದ 'ಅಖಿಲ...

3 ವರ್ಷಗಳಲ್ಲಿ ರಷ್ಯಾ ಸೇನೆ ಸೇರಿದ 200 ಕ್ಕೂ ಹೆಚ್ಚು ಭಾರತೀಯರು; 26 ಮಂದಿ ಸಾವು: ವಿದೇಶಾಂಗ ಸಚಿವಾಲಯ

2022 ರಿಂದ ಕನಿಷ್ಠ 202 ಭಾರತೀಯ ಪ್ರಜೆಗಳು ರಷ್ಯಾದ ಸಶಸ್ತ್ರ ಪಡೆಗಳಿಗೆ ಸೇರಿದ್ದಾರೆ ಎಂದು ವರದಿಯಾಗಿದೆ. ಇದರಲ್ಲಿ 26 ಮಂದಿ ಸಾವನ್ನಪ್ಪಿದ್ದು, ಇಬ್ಬರನ್ನು ರಷ್ಯಾದಲ್ಲಿ ಅಂತ್ಯಕ್ರಿಯೆ ಮಾಡಲಾಗಿದೆ ಎಂದು ವಿದೇಶಾಂಗ ಸಚಿವಾಲಯ (ಎಂಇಎ)...

ಎಸ್‌ಐಆರ್‌ ಬಳಿಕ ಕರಡು ಮತದಾರರ ಪಟ್ಟಿ ಪ್ರಕಟ : ತಮಿಳುನಾಡಿನಲ್ಲಿ 97 ಲಕ್ಷ, ಗುಜರಾತ್‌ನಲ್ಲಿ 73 ಲಕ್ಷ ಹೆಸರು ಡಿಲೀಟ್

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಬಳಿಕ ತಮಿಳುನಾಡು ಮತ್ತು ಗುಜರಾತ್‌ನ ಕರಡು ಮತದಾರರ ಪಟ್ಟಿಯನ್ನು ಭಾರತೀಯ ಚುನಾವಣಾ ಆಯೋಗ (ಇಸಿಐ) ಪ್ರಕಟಿಸಿದ್ದು, ಕ್ರಮವಾಗಿ 97.3 ಮತ್ತು 73.7 ಲಕ್ಷ ಮತದಾರರ...

ಅಸ್ಸಾಂ | ರಾಜಧಾನಿ ಎಕ್ಸ್ ಪ್ರೆಸ್ ರೈಲು ಢಿಕ್ಕಿ : 8 ಆನೆಗಳು ಸಾವು

ಶನಿವಾರ (ಡಿಸೆಂಬರ್ 20, 2025) ಬೆಳಗಿನ ಜಾವ ಅಸ್ಸಾಂನ ಹೊಜೈ ಜಿಲ್ಲೆಯಲ್ಲಿ ಸಾಯಿರಂಗ್-ನವದೆಹಲಿ ರಾಜಧಾನಿ ಎಕ್ಸ್‌ಪ್ರೆಸ್‌ ರೈಲು ಡಿಕ್ಕಿ ಹೊಡೆದ ಪರಿಣಾಮ ಎಂಟು ಆನೆಗಳು ಸಾವನ್ನಪ್ಪಿದ್ದು, ಒಂದು ಗಾಯಗೊಂಡಿದೆ ಎಂದು ವರದಿಯಾಗಿದೆ. ಘಟನೆಯಲ್ಲಿ ಐದು...