Homeಮುಖಪುಟದೀಪಾವಳಿ: 24 ಗಂಟೆ ಸತತವಾಗಿ ಬೆಳಗಬಲ್ಲ’ಮ್ಯಾಜಿಕ್ ಲ್ಯಾಂಪ್ಸ್’ಗೆ ಭಾರಿ ಬೇಡಿಕೆ!

ದೀಪಾವಳಿ: 24 ಗಂಟೆ ಸತತವಾಗಿ ಬೆಳಗಬಲ್ಲ’ಮ್ಯಾಜಿಕ್ ಲ್ಯಾಂಪ್ಸ್’ಗೆ ಭಾರಿ ಬೇಡಿಕೆ!

24 ರಿಂದ 40 ಗಂಟೆಗಳ ಕಾಲ ನಿರಂತರವಾಗಿ ಬೆಳಗಬಲ್ಲ ಈ ಸಾಂಪ್ರದಾಯಿಕ ದೀಪಗಳಿಗೆ ಭಾರಿ ಬೇಡಿಕೆ ಬಂದಿದೆ ಎಂದು ಕುಂಬಾರ ಅಶೋಕ್ ಹೇಳುತ್ತಾರೆ

- Advertisement -
- Advertisement -

ದೀಪಾವಳಿ ಹಬ್ಬಕ್ಕೆ ಇನ್ನೊಂದೆ ವಾರ ಉಳಿದಿದೆ. ಕೊರೊನಾ ಸಾಂಕ್ರಾಮಿಕ ಹಬ್ಬಗಳ ಖುಷಿಯ ಮೇಲೆ ಪ್ರಭಾವ ಬೀರಿದ್ದರೂ ಸಹ ಕೊರೊನಾ ಹೋಗಿ ಸ್ವಚ್ಛ, ನೆಮ್ಮದಿಯ ಜೀವನ ಆರಂಭವಾಗಲಿ ಎಂದು ಹಬ್ಬ ಆಚರಿಸಲು ಹಲವು ಮಂದಿ ಕಾಯುತ್ತಿದ್ದಾರೆ. ದೀಪಗಳ ಹಬ್ಬಕ್ಕಾಗಿ ವೈವಿಧ್ಯಮಯ ದೀಪಗಳು ಮಾರುಕಟ್ಟೆಗೆ ಲಗ್ಗೆ ಇಟ್ಟಿವೆ, ಇಡುತ್ತಿವೆ.

ಛತ್ತೀಸ್‌ಗಢ ಮೂಲದ ಕುಂಬಾರರೊಬ್ಬರು ಇಡೀ ದಿನ ಬೆಳಗುವ ಮಣ್ಣಿನ ದೀಪವನ್ನು ವಿನ್ಯಾಸಗೊಳಿಸಿದ್ದಾರೆ. ಬಸ್ತರ್ ಜಿಲ್ಲೆಯ ಕೊಂಡಗಾಂವ್ ಎಂಬ ಸಣ್ಣ ಹಳ್ಳಿಯಲ್ಲಿ ವಾಸಿಸುತ್ತಿರುವ ಅಶೋಕ್ ಚಕ್ರಧಾರಿ ಈ ದೀಪಗಳನ್ನು ವಿನ್ಯಾಸಗೊಳಿಸಿದ್ದಾರೆ.

ದೀಪಾವಳಿಯ ಪ್ರಯುಕ್ತ ಈಗಾಗಲೇ ಈ ದೀಪಗಳಿಗೆ ಬೇಡಿಕೆಯ ಪ್ರವಾಹವೇ ಹರಿದು ಬಂದಿದೆ ಎಂದು ದಿ ಬೆಟರ್ ಇಂಡಿಯಾ ವರದಿ ಮಾಡಿದೆ. 24 ರಿಂದ 40 ಗಂಟೆಗಳ ಕಾಲ ನಿರಂತರವಾಗಿ ಬೆಳಗಬಲ್ಲ ಈ ಸಾಂಪ್ರದಾಯಿಕ ದೀಪಗಳು ಮತ್ತು ಕುಂಬಾರ ಅಶೋಕ್ ಚಕ್ರಧಾರಿ ಸಾಮಾಜಿಕ ಮಾಧ್ಯಮದಲ್ಲಿ ಟ್ರೆಂಡ್ ಆಗಿದ್ದಾರೆ.

ಇದನ್ನೂ ಓದಿ: ಕೊರೊನಾ: ದೀಪಾವಳಿ ಮಾರ್ಗಸೂಚಿಗಳನ್ನು ಪ್ರಕಟಿಸಿದ ರಾಜ್ಯ ಸರ್ಕಾರ

ಕುಂಬಾರ ಅಶೋಕ್ ಚಕ್ರಧಾರಿ ಮಾಡಿದ ದೀಪಗಳಲ್ಲಿ ತೈಲವು ಸ್ವಯಂಚಾಲಿತವಾಗಿ ಜಿನುಗುತ್ತದೆ ‘ಮ್ಯಾಜಿಕ್ ಲ್ಯಾಂಪ್ಸ್’ ಎಂದು ಲೇಬಲ್ ಮಾಡಲಾದ ದೀಪಗಳಲ್ಲಿ, ಎಣ್ಣೆಯನ್ನು ಹಿಡಿದಿಡಲು ಗುಮ್ಮಟದ ಆಕಾರ ಮತ್ತು ದೀಪದ ತಳದಲ್ಲಿ ಎಣ್ಣೆ ಹಿಡಿದಿಡಲು ಟ್ಯೂಬ್ ತರಹದ ರಚನೆ ಇರುತ್ತದೆ. ಇದನ್ನು ಅಶೋಕ್ ತಮ್ಮ ಫೇಸ್‌ಬುಕ್ ಖಾತೆಯಲ್ಲಿ ಶೇರ್ ಮಾಡಿದ್ದಾರೆ.

ಯೂಟ್ಯೂಬ್‌ನಲ್ಲಿ ವಿಡಿಯೋ ನೋಡಿದ ನಂತರ ಈ ರೀತಿಯ ದೀಪವನ್ನು ವಿನ್ಯಾಸಗೊಳಿಸುವ ಯೋಜನೆ ಬಂದಿದ್ದಾಗಿ ಅಶೋಕ್ ತಿಳಿಸಿದ್ದಾರೆ. “ನನ್ನ ಕುಂಬಾರಿಕೆ ಕೌಶಲ್ಯಗಳನ್ನು ಪ್ರಶ್ನಿಸುವಂತಹ ಹೊಸ ಆಲೋಚನೆಗಳನ್ನು ನಾನು ಯಾವಾಗಲೂ ಹುಡುಕುತ್ತಿದ್ದೇನೆ ಮತ್ತು ಅವು ನನ್ನ ಸುತ್ತಮುತ್ತಲಿನವರಿಗೆ ಉಪಯುಕ್ತವಾಗುವಗಬೇಕು ಅಂತಹ ಕೆಲಸಗಳನ್ನು ಮಾಡುತ್ತೇನೆ” ಎಂದು 62 ವರ್ಷದ ಅಶೋಕ್ ಹೇಳುತ್ತಾರೆ.

“ನಾನು ಈ ದೀಪವನ್ನು ತಯಾರಿಸಲು ನಾನು ಆನ್‌ಲೈನ್‌ನಲ್ಲಿ ಹಲವಾರು ತಂತ್ರಗಳನ್ನು, ವೀಡಿಯೋಗಳಳನ್ನು ವೀಕ್ಷಿಸಿದ್ದೇನೆ. ಈ ದೀಪಗಳನ್ನು ತಯಾರಿಸಿದ ನನಗೆ ಇನ್ನೂ ಹೆಚ್ಚಿನ ದೀಪಗಳನ್ನು ತಯಾರಿಸಲು ಬೇಡಿಕೆ ಬಮದಿವೆ” ಎಂದಿದ್ದಾರೆ. ಎಎನ್‌ಐ ಹಂಚಿಕೊಂಡ ಫೋಟೋಗಳು ಕುಂಬಾರ ಅಶೋಕ್ ವಿನ್ಯಾಸಗೊಳಿಸಿದ ‘ಮ್ಯಾಜಿಕ್ ಲ್ಯಾಂಪ್‌ಗಳ’ ಒಂದು ದೊಡ್ಡ ಸಂಗ್ರಹವನ್ನೇ ತೋರಿಸುತ್ತವೆ.

PC: ANI

ಕೊರೊನಾ ಸಾಂಕ್ರಾಮಿಕ ಎಷ್ಟೋ ಉದ್ಯಮಗಳನ್ನು ನೆಲಕಚ್ಚುವಂತೆ ಮಾಡಿದೆ. ಲಾಕ್‌ಡೌನ್‌ನಿಂದ ಸಂಕಷ್ಟಕ್ಕೆ ಒಳಗಾದವರೂ ಇನ್ನು ಚೇತರಿಸಿಕೊಳ್ಳುವ ನಿಟ್ಟಿನಲ್ಲಿದ್ದಾರೆ. ಇಂತಹ ಸಮಯದಲ್ಲಿ ತೀವ್ರ ತೊಂದರೆಗೆ ಈಡಾಗಿರುವ ದೇಶದ ಕರಕುಶಲಕರ್ಮಿಗಳಿಗೆ ನೆರವಿನ ಅಗತ್ಯತೆ ಇದೆ. ದೇಶದಲ್ಲಿ ಹಲವು ರಾಜ್ಯಗಳು ಪಟಾಕಿಯನ್ನು ಬ್ಯಾನ್ ಮಾಡಿರುವ ಈ ಸಂದರ್ಭದಲ್ಲಿ ದೀಪಗಳಿಗೆ ಬೇಡಿಕೆ ಹೆಚ್ಚಾಗಿದ್ದು, ಹಲವು ಕರಕುಶಲಕರ್ಮಿಗಳಿಗೆ ಕೆಲಸ ಸಿಕ್ಕಂತಾಗಿದೆ.


ಇದನ್ನೂ ಓದಿ: ಚಿತ್ರಕಲಾ ಪರಿಷತ್ತಿನಲ್ಲಿ ಕರಕುಶಲಕರ್ಮಿಗಳ ದೀಪಗಳ ಪ್ರದರ್ಶನ, ಮಾರಾಟ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ಇಂತಹ ‌ಕುಶಲಕರ್ಮಿಗಳಿಗೆ ಸರ್ಕಾರ ಮತ್ತು ಸಮಾಜ ಪ್ರೋತ್ಸಾಹ ಕೊಡಬೇಕು.

LEAVE A REPLY

Please enter your comment!
Please enter your name here

- Advertisment -

ವಾಣಿಜ್ಯ ಎಲ್‌ಪಿಜಿ ದರ 195.50 ರೂ. ಏರಿಕೆ : ಜನ ಸಾಮಾನ್ಯರಿಗೆ ಗಾಯದ ಮೇಲೆ ಬರೆ

ಪಶ್ಚಿಮ ಏಷ್ಯಾ ಸಂಘರ್ಷದಿಂದಾಗಿ ಜಾಗತಿಕ ತೈಲ ಬೆಲೆಗಳು ಏರುತ್ತಿರುವ ನಡುವೆ, ವಾಣಿಜ್ಯ ಎಲ್‌ಪಿಜಿ ದರವನ್ನು ಬುಧವಾರ (ಏ.1) 195.50 ರೂ. ಹೆಚ್ಚಿಸಲಾಗಿದೆ. ಸರ್ಕಾರಿ ಸ್ವಾಮ್ಯದ ತೈಲ ಕಂಪನಿಗಳ ಪ್ರಕಾರ, ಬೆಲೆ ಏರಿಕೆ ಬಳಿಕ...

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿಯಿದೆ : ಅಖಿಲೇಶ್ ಯಾದವ್ ವ್ಯಂಗ್ಯ

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿ ನಡೆಯುತ್ತಿದೆ ಎಂದು ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ವ್ಯಂಗ್ಯವಾಡಿದ್ದಾರೆ. ಬಿಜೆಪಿ ನಾಯಕರು ಹಾಗೂ ಅವರ ಸಹವರ್ತಿಗಳ ಭ್ರಷ್ಟಾಚಾರ ಮತ್ತು ದುರ್ನಡತೆಯ ಪ್ರಕರಣಗಳು...

ಅಂತರ್ಧರ್ಮೀಯ ‘ಲಿವ್-ಇನ್’ ಸಂಬಂಧ ಅಪರಾಧವಲ್ಲ: ಅಲಹಾಬಾದ್ ಹೈಕೋರ್ಟ್

ಅಂತರ್ಧರ್ಮೀಯ ಲಿವ್-ಇನ್ ಸಂಬಂಧವನ್ನು ನಿಷೇಧಿಸಲಾಗಿಲ್ಲ ಅಥವಾ ಯಾವುದೇ ಕಾನೂನಿನ ಅಡಿಯಲ್ಲಿ ಅಪರಾಧವಲ್ಲಎಂದು ತೀರ್ಪು ನೀಡಿರುವ ಅಲಹಾಬಾದ್ ಹೈಕೋರ್ಟ್, ಮಹಿಳೆಯ ಕುಟುಂಬದಿಂದ ಬೆದರಿಕೆ ಎದುರಿಸುತ್ತಿರುವ ದಂಪತಿಗಳಿಗೆ ರಕ್ಷಣೆ ನೀಡಿದೆ. ಸೋನ್‌ಭದ್ರಾದ ಕಾಜಲ್ ಪ್ರಜಾಪತಿ ಮತ್ತು ಅವರ...

‘ವೇತನ ಸಹಿತ ಪಿತೃತ್ವ ರಜೆಯನ್ನು ಕಾನೂನುಬದ್ಧಗೊಳಿಸಬೇಕು’; ರಾಜ್ಯಸಭೆಯಲ್ಲಿ ಎಎಪಿ ಸಂಸದ ರಾಘವ್ ಚಡ್ಡಾ ಒತ್ತಾಯ

ಭಾರತದಲ್ಲಿ ವೇತನ ಸಹಿತ ಪಿತೃತ್ವ ರಜೆಯನ್ನು ಕಾನೂನುಬದ್ಧ ಹಕ್ಕನ್ನಾಗಿ ಮಾಡಲು, ಹಂಚಿಕೆಯ ಆರೈಕೆ ಜವಾಬ್ದಾರಿಗಳನ್ನು ಒತ್ತಿಹೇಳಲು ಕಾನೂನನ್ನು ಜಾರಿಗೆ ತರಬೇಕೆಂದು ಎಎಪಿ ಸಂಸದ ರಾಘವ್ ಚಡ್ಡಾ ಒತ್ತಾಯಿಸಿದ್ದಾರೆ. ರಾಜ್ಯಸಭೆಯಲ್ಲಿ ಮಾತನಾಡಿದ ಅವರು, ತಂದೆ ಉದ್ಯೋಗ...

ಬಿಜೆಪಿ ಇತರ ರಾಜ್ಯಗಳ ಅಕ್ರಮ ಮತದಾರರನ್ನು ಸೇರಿಸುತ್ತಿದೆ : ಮಮತಾ ಬ್ಯಾನರ್ಜಿ ಆರೋಪ

ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಮಂಗಳವಾರ (ಮಾ.31) ಬಿಜೆಪಿ ಬಿಹಾರ, ರಾಜಸ್ಥಾನ, ಹರಿಯಾಣ ಮತ್ತು ಉತ್ತರ ಪ್ರದೇಶದ ಅಕ್ರಮ ಮತದಾರರನ್ನು ರಾಜ್ಯದ ಮತದಾರರ ಪಟ್ಟಿಯಲ್ಲಿ ಸೇರಿಸಲು ಪ್ರಯತ್ನಿಸುತ್ತಿದೆ ಎಂದು ಆರೋಪಿಸಿದರು. ಪಶ್ಚಿಮ...

ಬಿಹಾರ: ವಿವಾಹಿತ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರಕ್ಕೆ ಯತ್ನ; ಹಲ್ಲೆ ಮಾಡಿ ವಿಡಿಯೋ ಹರಿಬಿಟ್ಟ ದುಷ್ಟರು: ಇಬ್ಬರ ಬಂಧನ 

ಬಿಹಾರದ ನಳಂದ ಜಿಲ್ಲೆಯಲ್ಲಿ ನಾಚಿಕೆಗೇಡಿನ ಮತ್ತು ಆತಂಕಕಾರಿ ಘಟನೆಯೊಂದು ಬೆಳಕಿಗೆ ಬಂದಿದೆ. ನೂರ್ಸರಾಯ್ ಪೊಲೀಸ್ ಠಾಣೆ ವ್ಯಾಪ್ತಿಯ ಹಳ್ಳಿಯೊಂದರಲ್ಲಿ ಮೂವರು ಪುರುಷರು ವಿವಾಹಿತ ಮಹಿಳೆಯ ಮೇಲೆ ಸಾರ್ವಜನಿಕವಾಗಿ ಸಾಮೂಹಿಕ ಅತ್ಯಾಚಾರಕ್ಕೆ ಯತ್ನಿಸಿದ್ದಾರೆ. ದೌರ್ಜನ್ಯ ವಿರೋಧಿಸಿ...

‘ಹಿಂದುತ್ವ ಉಗ್ರವಾದವನ್ನು ಏಕೆ ನಿರ್ಲಕ್ಷಿಸಬೇಕು..?’; ಸಂಸತ್ತಿನಲ್ಲಿ ಪ್ರಶ್ನಿಸಿದ ರುಹುಲ್ಲಾ ಮೆಹದಿ

"ದೇಶದಲ್ಲಿ ಹೆಚ್ಚುತ್ತಿರುವ ಬಲಪಂಥೀಯ ಉಗ್ರವಾದವನ್ನು ನಿರ್ಲಕ್ಷಿಸಿ ಎಡಪಂಥೀಯ ಬೆದರಿಕೆಗಳ ಮೇಲೆ ಮಾತ್ರ ಗಮನಹರಿಸಲಾಗುತ್ತಿದೆ" ಎಂದು ಲೋಕಸಭೆಯಲ್ಲಿ ಜಮ್ಮು-ಕಾಶ್ಮೀರದ ಶ್ರೀನಗರ ಸಂಸದ ಆಗಾ ಸೈಯದ್ ರುಹುಲ್ಲಾ ಮೆಹದಿ ನರೇಂದ್ರ ಮೋದಿ ನೇತೃತ್ವದ ಸರ್ಕಾರದ ಮೇಲೆ...

ವಿರೋಧದ ನಡುವೆಯೂ ಟ್ರಾನ್ಸ್‌ಜೆಂಡರ್ ತಿದ್ದುಪಡಿ ಮಸೂದೆಗೆ ರಾಷ್ಟ್ರಪತಿ ಅಂಕಿತ

ತೀವ್ರ ವಿರೋಧಗಳ ನಡುವೆಯೂ ಟ್ರಾನ್ಸ್‌ಜೆಂಡರ್‌ ವ್ಯಕ್ತಿಗಳ (ಹಕ್ಕುಗಳ ರಕ್ಷಣೆ) ತಿದ್ದುಪಡಿ ಮಸೂದೆಗೆ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಅಂಕಿತ ಹಾಕಿದ್ದಾರೆ ಎಂದು ಕೇಂದ್ರ ಕಾನೂನು ಸಚಿವಾಲಯ ಸೋಮವಾರ (ಮಾ. 30) ಗೆಜೆಟ್ ಅಧಿಸೂಚನೆಯಲ್ಲಿ...

ಮಶಾದ್ ವಿಮಾನ ನಿಲ್ದಾಣದ ಮೇಲೆ ಅಮೆರಿಕ ದಾಳಿ: ದೆಹಲಿಗೆ ತೆರಳುತ್ತಿದ್ದ ನೆರವು ವಿಮಾನಕ್ಕೆ ಡಿಕ್ಕಿ: ಇದು ‘ಯುದ್ಧ ಅಪರಾಧ’ ಎಂದ ಇರಾನ್ 

ಇರಾನ್‌ನ ಮಶಾದ್ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಅಮೆರಿಕದ ವಾಯುದಾಳಿಯ ಸಂದರ್ಭದಲ್ಲಿ ನವದೆಹಲಿಗೆ ಹಾರಲು ನಿಗದಿಯಾಗಿದ್ದ ಮಹಾನ್ ಏರ್ ವಿಮಾನವು ಡಿಕ್ಕಿ ಹೊಡೆದಿದೆ ಎಂದು ವರದಿಯಾಗಿದೆ.  ಈ ವಿಮಾನವು ಔಷಧಿಗಳು ಸೇರಿದಂತೆ ಮಾನವೀಯ ನೆರವು ಸಾಗಣೆಗೆ...

ಪ್ಯಾಲೆಸ್ತೀನಿಯರಿಗೆ ಮರಣದಂಡನೆ ವಿಧಿಸುವ ಕಾನೂನು ಅಂಗೀಕಾರ : ಇಸ್ರೇಲ್ ಕ್ರಮಕ್ಕೆ ಜಾಗತಿಕ ಖಂಡನೆ

ಮಾರಣಾಂತಿಕ ದಾಳಿಗಳ ಅಪರಾಧ ಸಾಬೀತಾದ ಪ್ಯಾಲೆಸ್ತೀನಿಯರಿಗೆ ಮರಣದಂಡನೆಯನ್ನು ಕಡ್ಡಾಯ ಶಿಕ್ಷೆಯನ್ನಾಗಿ ನಿಗದಿಪಡಿಸಿದ ಇಸ್ರೇಲ್‌ನ ಹೊಸ ಕಾನೂನನ್ನು ಮಾನವ ಹಕ್ಕುಗಳ ಸಂಘಟನೆಗಳು, ವಿವಿಧ ರಾಷ್ಟ್ರಗಳ ನಾಯಕರು ಸೇರಿದಂತೆ ಜಾಗತಿಕ ಸಮುಯದಾಯ ತೀವ್ರವಾಗಿ ವಿರೋಧಿಸಿದೆ. ಈ...