Homeಮುಖಪುಟದೀಪಾವಳಿ: 24 ಗಂಟೆ ಸತತವಾಗಿ ಬೆಳಗಬಲ್ಲ’ಮ್ಯಾಜಿಕ್ ಲ್ಯಾಂಪ್ಸ್’ಗೆ ಭಾರಿ ಬೇಡಿಕೆ!

ದೀಪಾವಳಿ: 24 ಗಂಟೆ ಸತತವಾಗಿ ಬೆಳಗಬಲ್ಲ’ಮ್ಯಾಜಿಕ್ ಲ್ಯಾಂಪ್ಸ್’ಗೆ ಭಾರಿ ಬೇಡಿಕೆ!

24 ರಿಂದ 40 ಗಂಟೆಗಳ ಕಾಲ ನಿರಂತರವಾಗಿ ಬೆಳಗಬಲ್ಲ ಈ ಸಾಂಪ್ರದಾಯಿಕ ದೀಪಗಳಿಗೆ ಭಾರಿ ಬೇಡಿಕೆ ಬಂದಿದೆ ಎಂದು ಕುಂಬಾರ ಅಶೋಕ್ ಹೇಳುತ್ತಾರೆ

- Advertisement -
- Advertisement -

ದೀಪಾವಳಿ ಹಬ್ಬಕ್ಕೆ ಇನ್ನೊಂದೆ ವಾರ ಉಳಿದಿದೆ. ಕೊರೊನಾ ಸಾಂಕ್ರಾಮಿಕ ಹಬ್ಬಗಳ ಖುಷಿಯ ಮೇಲೆ ಪ್ರಭಾವ ಬೀರಿದ್ದರೂ ಸಹ ಕೊರೊನಾ ಹೋಗಿ ಸ್ವಚ್ಛ, ನೆಮ್ಮದಿಯ ಜೀವನ ಆರಂಭವಾಗಲಿ ಎಂದು ಹಬ್ಬ ಆಚರಿಸಲು ಹಲವು ಮಂದಿ ಕಾಯುತ್ತಿದ್ದಾರೆ. ದೀಪಗಳ ಹಬ್ಬಕ್ಕಾಗಿ ವೈವಿಧ್ಯಮಯ ದೀಪಗಳು ಮಾರುಕಟ್ಟೆಗೆ ಲಗ್ಗೆ ಇಟ್ಟಿವೆ, ಇಡುತ್ತಿವೆ.

ಛತ್ತೀಸ್‌ಗಢ ಮೂಲದ ಕುಂಬಾರರೊಬ್ಬರು ಇಡೀ ದಿನ ಬೆಳಗುವ ಮಣ್ಣಿನ ದೀಪವನ್ನು ವಿನ್ಯಾಸಗೊಳಿಸಿದ್ದಾರೆ. ಬಸ್ತರ್ ಜಿಲ್ಲೆಯ ಕೊಂಡಗಾಂವ್ ಎಂಬ ಸಣ್ಣ ಹಳ್ಳಿಯಲ್ಲಿ ವಾಸಿಸುತ್ತಿರುವ ಅಶೋಕ್ ಚಕ್ರಧಾರಿ ಈ ದೀಪಗಳನ್ನು ವಿನ್ಯಾಸಗೊಳಿಸಿದ್ದಾರೆ.

ದೀಪಾವಳಿಯ ಪ್ರಯುಕ್ತ ಈಗಾಗಲೇ ಈ ದೀಪಗಳಿಗೆ ಬೇಡಿಕೆಯ ಪ್ರವಾಹವೇ ಹರಿದು ಬಂದಿದೆ ಎಂದು ದಿ ಬೆಟರ್ ಇಂಡಿಯಾ ವರದಿ ಮಾಡಿದೆ. 24 ರಿಂದ 40 ಗಂಟೆಗಳ ಕಾಲ ನಿರಂತರವಾಗಿ ಬೆಳಗಬಲ್ಲ ಈ ಸಾಂಪ್ರದಾಯಿಕ ದೀಪಗಳು ಮತ್ತು ಕುಂಬಾರ ಅಶೋಕ್ ಚಕ್ರಧಾರಿ ಸಾಮಾಜಿಕ ಮಾಧ್ಯಮದಲ್ಲಿ ಟ್ರೆಂಡ್ ಆಗಿದ್ದಾರೆ.

ಇದನ್ನೂ ಓದಿ: ಕೊರೊನಾ: ದೀಪಾವಳಿ ಮಾರ್ಗಸೂಚಿಗಳನ್ನು ಪ್ರಕಟಿಸಿದ ರಾಜ್ಯ ಸರ್ಕಾರ

ಕುಂಬಾರ ಅಶೋಕ್ ಚಕ್ರಧಾರಿ ಮಾಡಿದ ದೀಪಗಳಲ್ಲಿ ತೈಲವು ಸ್ವಯಂಚಾಲಿತವಾಗಿ ಜಿನುಗುತ್ತದೆ ‘ಮ್ಯಾಜಿಕ್ ಲ್ಯಾಂಪ್ಸ್’ ಎಂದು ಲೇಬಲ್ ಮಾಡಲಾದ ದೀಪಗಳಲ್ಲಿ, ಎಣ್ಣೆಯನ್ನು ಹಿಡಿದಿಡಲು ಗುಮ್ಮಟದ ಆಕಾರ ಮತ್ತು ದೀಪದ ತಳದಲ್ಲಿ ಎಣ್ಣೆ ಹಿಡಿದಿಡಲು ಟ್ಯೂಬ್ ತರಹದ ರಚನೆ ಇರುತ್ತದೆ. ಇದನ್ನು ಅಶೋಕ್ ತಮ್ಮ ಫೇಸ್‌ಬುಕ್ ಖಾತೆಯಲ್ಲಿ ಶೇರ್ ಮಾಡಿದ್ದಾರೆ.

ಯೂಟ್ಯೂಬ್‌ನಲ್ಲಿ ವಿಡಿಯೋ ನೋಡಿದ ನಂತರ ಈ ರೀತಿಯ ದೀಪವನ್ನು ವಿನ್ಯಾಸಗೊಳಿಸುವ ಯೋಜನೆ ಬಂದಿದ್ದಾಗಿ ಅಶೋಕ್ ತಿಳಿಸಿದ್ದಾರೆ. “ನನ್ನ ಕುಂಬಾರಿಕೆ ಕೌಶಲ್ಯಗಳನ್ನು ಪ್ರಶ್ನಿಸುವಂತಹ ಹೊಸ ಆಲೋಚನೆಗಳನ್ನು ನಾನು ಯಾವಾಗಲೂ ಹುಡುಕುತ್ತಿದ್ದೇನೆ ಮತ್ತು ಅವು ನನ್ನ ಸುತ್ತಮುತ್ತಲಿನವರಿಗೆ ಉಪಯುಕ್ತವಾಗುವಗಬೇಕು ಅಂತಹ ಕೆಲಸಗಳನ್ನು ಮಾಡುತ್ತೇನೆ” ಎಂದು 62 ವರ್ಷದ ಅಶೋಕ್ ಹೇಳುತ್ತಾರೆ.

“ನಾನು ಈ ದೀಪವನ್ನು ತಯಾರಿಸಲು ನಾನು ಆನ್‌ಲೈನ್‌ನಲ್ಲಿ ಹಲವಾರು ತಂತ್ರಗಳನ್ನು, ವೀಡಿಯೋಗಳಳನ್ನು ವೀಕ್ಷಿಸಿದ್ದೇನೆ. ಈ ದೀಪಗಳನ್ನು ತಯಾರಿಸಿದ ನನಗೆ ಇನ್ನೂ ಹೆಚ್ಚಿನ ದೀಪಗಳನ್ನು ತಯಾರಿಸಲು ಬೇಡಿಕೆ ಬಮದಿವೆ” ಎಂದಿದ್ದಾರೆ. ಎಎನ್‌ಐ ಹಂಚಿಕೊಂಡ ಫೋಟೋಗಳು ಕುಂಬಾರ ಅಶೋಕ್ ವಿನ್ಯಾಸಗೊಳಿಸಿದ ‘ಮ್ಯಾಜಿಕ್ ಲ್ಯಾಂಪ್‌ಗಳ’ ಒಂದು ದೊಡ್ಡ ಸಂಗ್ರಹವನ್ನೇ ತೋರಿಸುತ್ತವೆ.

PC: ANI

ಕೊರೊನಾ ಸಾಂಕ್ರಾಮಿಕ ಎಷ್ಟೋ ಉದ್ಯಮಗಳನ್ನು ನೆಲಕಚ್ಚುವಂತೆ ಮಾಡಿದೆ. ಲಾಕ್‌ಡೌನ್‌ನಿಂದ ಸಂಕಷ್ಟಕ್ಕೆ ಒಳಗಾದವರೂ ಇನ್ನು ಚೇತರಿಸಿಕೊಳ್ಳುವ ನಿಟ್ಟಿನಲ್ಲಿದ್ದಾರೆ. ಇಂತಹ ಸಮಯದಲ್ಲಿ ತೀವ್ರ ತೊಂದರೆಗೆ ಈಡಾಗಿರುವ ದೇಶದ ಕರಕುಶಲಕರ್ಮಿಗಳಿಗೆ ನೆರವಿನ ಅಗತ್ಯತೆ ಇದೆ. ದೇಶದಲ್ಲಿ ಹಲವು ರಾಜ್ಯಗಳು ಪಟಾಕಿಯನ್ನು ಬ್ಯಾನ್ ಮಾಡಿರುವ ಈ ಸಂದರ್ಭದಲ್ಲಿ ದೀಪಗಳಿಗೆ ಬೇಡಿಕೆ ಹೆಚ್ಚಾಗಿದ್ದು, ಹಲವು ಕರಕುಶಲಕರ್ಮಿಗಳಿಗೆ ಕೆಲಸ ಸಿಕ್ಕಂತಾಗಿದೆ.


ಇದನ್ನೂ ಓದಿ: ಚಿತ್ರಕಲಾ ಪರಿಷತ್ತಿನಲ್ಲಿ ಕರಕುಶಲಕರ್ಮಿಗಳ ದೀಪಗಳ ಪ್ರದರ್ಶನ, ಮಾರಾಟ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ಇಂತಹ ‌ಕುಶಲಕರ್ಮಿಗಳಿಗೆ ಸರ್ಕಾರ ಮತ್ತು ಸಮಾಜ ಪ್ರೋತ್ಸಾಹ ಕೊಡಬೇಕು.

LEAVE A REPLY

Please enter your comment!
Please enter your name here

- Advertisment -

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...

ವಿಧಾನಸಭೆಯಲ್ಲಿ ‘ಗೃಹಲಕ್ಷ್ಮಿ’ ಗದ್ದಲ : ಬಿಜೆಪಿ ಸದಸ್ಯರಿಂದ ಸಭಾತ್ಯಾಗ, ಕ್ಷಮೆ ಕೋರಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಗೃಹಲಕ್ಷಿ ಯೋಜನೆಯ ಹಣ ಬಿಡುಗಡೆ ಸಂಬಂಧ ಸಚಿವರು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ವಿಚಾರ ಇಂದು (ಡಿ.17 ಬುಧವಾರ) ವಿಧಾನಸಭೆಯಲ್ಲಿ ದೊಡ್ಡ ಮಟ್ಟದ ವಾಗ್ವಾದ, ಆರೋಪ-ಪ್ರತ್ಯಾರೋಪ, ಗದ್ದಲ, ಪ್ರತಿಭಟನೆ, ಸಭಾತ್ಯಾಗ ಮತ್ತು...

ತಂಪು ಪಾನೀಯದಲ್ಲಿ ಮತ್ತು ಬರುವ ಔಷಧ ಬೆರೆಸಿ ಅಪ್ರಾಪ್ತ ಬಾಲಕಿಯರ ಮೇಲೆ ಅತ್ಯಾಚಾರ: ಆರೋಪಿ ಬಂಧನ

ಮುಂಬೈ ನಗರವನ್ನೇ ಬೆಚ್ಚಿಬೀಳಿಸಿದ ಆಘಾತಕಾರಿ ಘಟನೆಯಲ್ಲಿ, ವಕ್ತಿಯೋರ್ವ ಮತ್ತು ಬರುವ ತಂಪು ಪಾನೀಯ ನೀಡಿ ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಅಪರಾಧದ ಅಶ್ಲೀಲ ವೀಡಿಯೊಗಳನ್ನು ರೆಕಾರ್ಡ್ ಮಾಡಿ, ನಂತರ ವೀಡಿಯೊಗಳನ್ನು...

ಮನರೇಗಾ ಬದಲು ವಿಬಿ-ಜಿ ರಾಮ್ ಜಿ : ಲೋಕಸಭೆಯಲ್ಲಿ ಮಸೂದೆ ಅಂಗೀಕಾರದ ವೇಳೆ ಸಭಾತ್ಯಾಗಕ್ಕೆ ನಿರ್ಧರಿಸಿದ ವಿಪಕ್ಷಗಳು

ನರೇಗಾ ಬದಲು ತಂದಿರುವ ವಿಕಸಿತ್ ಭಾರತ್-ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕಾ ಮಿಷನ್ (ಗ್ರಾಮೀಣ್) ಮಸೂದೆ, 2025 (ವಿಬಿ–ಜಿ ರಾಮ್ ಜಿ ಮಸೂದೆ) ಲೋಕಸಭೆಯಲ್ಲಿ ಅಂಗೀಕಾರದ ವೇಳೆ ಸಹಕರಿಸದಿರಲು ವಿರೋಧ ಪಕ್ಷಗಳ ಸಂಸದರು...

ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಆರೋಪ: ಮ್ಯೂಸಿಕ್ ಮೈಲಾರಿ ಮೇಲೆ ಪೋಕ್ಸೋ ಪ್ರಕರಣ ದಾಖಲು 

ಬೆಂಗಳೂರು: ಉತ್ತರ ಕರ್ನಾಟಕದ ಜನಪದ ಗಾಯಕ ಹಾಗೂ ಯೂಟ್ಯೂಬ್ ಸ್ಟಾರ್ ಎಂದೇ ಖ್ಯಾತಿ ಪಡೆದಿದ್ದ ‘ಮ್ಯೂಸಿಕ್ ಮೈಲಾರಿ’ಎಂಬಾತನನ್ನು ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಡಿ ಮಹಾಲಿಂಗಪುರ ಪೊಲೀಸರು ಬಂಧಿಸಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮೈಲಾರಿ...

ಇಂಧನ ಖರೀದಿಗೆ ‘ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ’ ಕಡ್ಡಾಯಗೊಳಿಸಿದ ದೆಹಲಿ ಸರ್ಕಾರ

ರಾಷ್ಟ್ರ ರಾಜಧಾನಿ ದೆಹಲಿಯ ವಾಹನ ಮಾಲೀಕರು ಕಟ್ಟುನಿಟ್ಟಾದ ಆದೇಶ ಎದುರಿಸುತ್ತಾರೆ. ಡಿಸೆಂಬರ್ 18 ರಿಂದ ನಗರದಾದ್ಯಂತದ ಪೆಟ್ರೋಲ್ ಬಂಕ್‌ಗಳಲ್ಲಿ ಇಂಧನ ಖರೀದಿಗೆ ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ (ಪಿಯುಸಿ) ಕಡ್ಡಾಯಗೊಳಿಸಲಾಗಿದೆ. ದೆಹಲಿ ಪರಿಸರ ಸಚಿವ ಮಂಜಿಂದರ್...

ವೈದ್ಯೆಯ ಹಿಜಾಬ್ ಎಳೆದ ಬಿಹಾರ ಸಿಎಂ, ಅವಹೇಳನ ಮಾಡಿದ ಯುಪಿ ಸಚಿವನ ವಿರುದ್ದ ದೂರು ದಾಖಲು

ವೈದ್ಯೆಯ ಹಿಜಾಬ್ ಎಳೆದ ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್ ಮತ್ತು ಈ ಘಟನೆಯ ಕುರಿತು ಮಾತನಾಡುವಾಗ ಮಹಿಳೆಯನ್ನು ಅವಮಾನಿಸಿದ ಉತ್ತರ ಪ್ರದೇಶದ ಸಂಪುಟ ಸಚಿವ ಸಂಜಯ್ ನಿಶಾದ್ ವಿರುದ್ದ ಲಕ್ನೋದ ಕೈಸರ್‌ಬಾಗ್ ಪೊಲೀಸ್...

1 ಲಕ್ಷ ರೂಪಾಯಿ ಸಾಲ 74 ಲಕ್ಷ ರೂಪಾಯಿಗೆ ಏರಿಕೆ, ಸಾಲ ತೀರಿಸಲು ಕಿಡ್ನಿ ಮಾರಿದ ರೈತ 

ಅಕ್ರಮವಾಗಿ ಸಾಲ ನೀಡುವವರಿಂದ 1 ಲಕ್ಷ ಸಾಲ ಪಡೆದಿದ್ದು, ಅದಕ್ಕೆ ಹೆಚ್ಚಿನ ದಿನದ ಬಡ್ಡಿ ಸೇರಿ 75 ಲಕ್ಷ ಸಾಲ ಏರಿಕೆಯಾದ ಕಾರಣ ವ್ಯಕ್ತಿಯೊಬ್ಬ ತನ್ನ ಕಿಡ್ನಿಯನ್ನೇ ಮಾರಾಟ ಮಾಡಿರುವ ಘಟನೆ ಮಹಾರಾಷ್ಟ್ರದಲ್ಲಿ...