Homeಮುಖಪುಟದೀಪಾವಳಿ: 24 ಗಂಟೆ ಸತತವಾಗಿ ಬೆಳಗಬಲ್ಲ’ಮ್ಯಾಜಿಕ್ ಲ್ಯಾಂಪ್ಸ್’ಗೆ ಭಾರಿ ಬೇಡಿಕೆ!

ದೀಪಾವಳಿ: 24 ಗಂಟೆ ಸತತವಾಗಿ ಬೆಳಗಬಲ್ಲ’ಮ್ಯಾಜಿಕ್ ಲ್ಯಾಂಪ್ಸ್’ಗೆ ಭಾರಿ ಬೇಡಿಕೆ!

24 ರಿಂದ 40 ಗಂಟೆಗಳ ಕಾಲ ನಿರಂತರವಾಗಿ ಬೆಳಗಬಲ್ಲ ಈ ಸಾಂಪ್ರದಾಯಿಕ ದೀಪಗಳಿಗೆ ಭಾರಿ ಬೇಡಿಕೆ ಬಂದಿದೆ ಎಂದು ಕುಂಬಾರ ಅಶೋಕ್ ಹೇಳುತ್ತಾರೆ

- Advertisement -
- Advertisement -

ದೀಪಾವಳಿ ಹಬ್ಬಕ್ಕೆ ಇನ್ನೊಂದೆ ವಾರ ಉಳಿದಿದೆ. ಕೊರೊನಾ ಸಾಂಕ್ರಾಮಿಕ ಹಬ್ಬಗಳ ಖುಷಿಯ ಮೇಲೆ ಪ್ರಭಾವ ಬೀರಿದ್ದರೂ ಸಹ ಕೊರೊನಾ ಹೋಗಿ ಸ್ವಚ್ಛ, ನೆಮ್ಮದಿಯ ಜೀವನ ಆರಂಭವಾಗಲಿ ಎಂದು ಹಬ್ಬ ಆಚರಿಸಲು ಹಲವು ಮಂದಿ ಕಾಯುತ್ತಿದ್ದಾರೆ. ದೀಪಗಳ ಹಬ್ಬಕ್ಕಾಗಿ ವೈವಿಧ್ಯಮಯ ದೀಪಗಳು ಮಾರುಕಟ್ಟೆಗೆ ಲಗ್ಗೆ ಇಟ್ಟಿವೆ, ಇಡುತ್ತಿವೆ.

ಛತ್ತೀಸ್‌ಗಢ ಮೂಲದ ಕುಂಬಾರರೊಬ್ಬರು ಇಡೀ ದಿನ ಬೆಳಗುವ ಮಣ್ಣಿನ ದೀಪವನ್ನು ವಿನ್ಯಾಸಗೊಳಿಸಿದ್ದಾರೆ. ಬಸ್ತರ್ ಜಿಲ್ಲೆಯ ಕೊಂಡಗಾಂವ್ ಎಂಬ ಸಣ್ಣ ಹಳ್ಳಿಯಲ್ಲಿ ವಾಸಿಸುತ್ತಿರುವ ಅಶೋಕ್ ಚಕ್ರಧಾರಿ ಈ ದೀಪಗಳನ್ನು ವಿನ್ಯಾಸಗೊಳಿಸಿದ್ದಾರೆ.

ದೀಪಾವಳಿಯ ಪ್ರಯುಕ್ತ ಈಗಾಗಲೇ ಈ ದೀಪಗಳಿಗೆ ಬೇಡಿಕೆಯ ಪ್ರವಾಹವೇ ಹರಿದು ಬಂದಿದೆ ಎಂದು ದಿ ಬೆಟರ್ ಇಂಡಿಯಾ ವರದಿ ಮಾಡಿದೆ. 24 ರಿಂದ 40 ಗಂಟೆಗಳ ಕಾಲ ನಿರಂತರವಾಗಿ ಬೆಳಗಬಲ್ಲ ಈ ಸಾಂಪ್ರದಾಯಿಕ ದೀಪಗಳು ಮತ್ತು ಕುಂಬಾರ ಅಶೋಕ್ ಚಕ್ರಧಾರಿ ಸಾಮಾಜಿಕ ಮಾಧ್ಯಮದಲ್ಲಿ ಟ್ರೆಂಡ್ ಆಗಿದ್ದಾರೆ.

ಇದನ್ನೂ ಓದಿ: ಕೊರೊನಾ: ದೀಪಾವಳಿ ಮಾರ್ಗಸೂಚಿಗಳನ್ನು ಪ್ರಕಟಿಸಿದ ರಾಜ್ಯ ಸರ್ಕಾರ

ಕುಂಬಾರ ಅಶೋಕ್ ಚಕ್ರಧಾರಿ ಮಾಡಿದ ದೀಪಗಳಲ್ಲಿ ತೈಲವು ಸ್ವಯಂಚಾಲಿತವಾಗಿ ಜಿನುಗುತ್ತದೆ ‘ಮ್ಯಾಜಿಕ್ ಲ್ಯಾಂಪ್ಸ್’ ಎಂದು ಲೇಬಲ್ ಮಾಡಲಾದ ದೀಪಗಳಲ್ಲಿ, ಎಣ್ಣೆಯನ್ನು ಹಿಡಿದಿಡಲು ಗುಮ್ಮಟದ ಆಕಾರ ಮತ್ತು ದೀಪದ ತಳದಲ್ಲಿ ಎಣ್ಣೆ ಹಿಡಿದಿಡಲು ಟ್ಯೂಬ್ ತರಹದ ರಚನೆ ಇರುತ್ತದೆ. ಇದನ್ನು ಅಶೋಕ್ ತಮ್ಮ ಫೇಸ್‌ಬುಕ್ ಖಾತೆಯಲ್ಲಿ ಶೇರ್ ಮಾಡಿದ್ದಾರೆ.

ಯೂಟ್ಯೂಬ್‌ನಲ್ಲಿ ವಿಡಿಯೋ ನೋಡಿದ ನಂತರ ಈ ರೀತಿಯ ದೀಪವನ್ನು ವಿನ್ಯಾಸಗೊಳಿಸುವ ಯೋಜನೆ ಬಂದಿದ್ದಾಗಿ ಅಶೋಕ್ ತಿಳಿಸಿದ್ದಾರೆ. “ನನ್ನ ಕುಂಬಾರಿಕೆ ಕೌಶಲ್ಯಗಳನ್ನು ಪ್ರಶ್ನಿಸುವಂತಹ ಹೊಸ ಆಲೋಚನೆಗಳನ್ನು ನಾನು ಯಾವಾಗಲೂ ಹುಡುಕುತ್ತಿದ್ದೇನೆ ಮತ್ತು ಅವು ನನ್ನ ಸುತ್ತಮುತ್ತಲಿನವರಿಗೆ ಉಪಯುಕ್ತವಾಗುವಗಬೇಕು ಅಂತಹ ಕೆಲಸಗಳನ್ನು ಮಾಡುತ್ತೇನೆ” ಎಂದು 62 ವರ್ಷದ ಅಶೋಕ್ ಹೇಳುತ್ತಾರೆ.

“ನಾನು ಈ ದೀಪವನ್ನು ತಯಾರಿಸಲು ನಾನು ಆನ್‌ಲೈನ್‌ನಲ್ಲಿ ಹಲವಾರು ತಂತ್ರಗಳನ್ನು, ವೀಡಿಯೋಗಳಳನ್ನು ವೀಕ್ಷಿಸಿದ್ದೇನೆ. ಈ ದೀಪಗಳನ್ನು ತಯಾರಿಸಿದ ನನಗೆ ಇನ್ನೂ ಹೆಚ್ಚಿನ ದೀಪಗಳನ್ನು ತಯಾರಿಸಲು ಬೇಡಿಕೆ ಬಮದಿವೆ” ಎಂದಿದ್ದಾರೆ. ಎಎನ್‌ಐ ಹಂಚಿಕೊಂಡ ಫೋಟೋಗಳು ಕುಂಬಾರ ಅಶೋಕ್ ವಿನ್ಯಾಸಗೊಳಿಸಿದ ‘ಮ್ಯಾಜಿಕ್ ಲ್ಯಾಂಪ್‌ಗಳ’ ಒಂದು ದೊಡ್ಡ ಸಂಗ್ರಹವನ್ನೇ ತೋರಿಸುತ್ತವೆ.

PC: ANI

ಕೊರೊನಾ ಸಾಂಕ್ರಾಮಿಕ ಎಷ್ಟೋ ಉದ್ಯಮಗಳನ್ನು ನೆಲಕಚ್ಚುವಂತೆ ಮಾಡಿದೆ. ಲಾಕ್‌ಡೌನ್‌ನಿಂದ ಸಂಕಷ್ಟಕ್ಕೆ ಒಳಗಾದವರೂ ಇನ್ನು ಚೇತರಿಸಿಕೊಳ್ಳುವ ನಿಟ್ಟಿನಲ್ಲಿದ್ದಾರೆ. ಇಂತಹ ಸಮಯದಲ್ಲಿ ತೀವ್ರ ತೊಂದರೆಗೆ ಈಡಾಗಿರುವ ದೇಶದ ಕರಕುಶಲಕರ್ಮಿಗಳಿಗೆ ನೆರವಿನ ಅಗತ್ಯತೆ ಇದೆ. ದೇಶದಲ್ಲಿ ಹಲವು ರಾಜ್ಯಗಳು ಪಟಾಕಿಯನ್ನು ಬ್ಯಾನ್ ಮಾಡಿರುವ ಈ ಸಂದರ್ಭದಲ್ಲಿ ದೀಪಗಳಿಗೆ ಬೇಡಿಕೆ ಹೆಚ್ಚಾಗಿದ್ದು, ಹಲವು ಕರಕುಶಲಕರ್ಮಿಗಳಿಗೆ ಕೆಲಸ ಸಿಕ್ಕಂತಾಗಿದೆ.


ಇದನ್ನೂ ಓದಿ: ಚಿತ್ರಕಲಾ ಪರಿಷತ್ತಿನಲ್ಲಿ ಕರಕುಶಲಕರ್ಮಿಗಳ ದೀಪಗಳ ಪ್ರದರ್ಶನ, ಮಾರಾಟ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ಇಂತಹ ‌ಕುಶಲಕರ್ಮಿಗಳಿಗೆ ಸರ್ಕಾರ ಮತ್ತು ಸಮಾಜ ಪ್ರೋತ್ಸಾಹ ಕೊಡಬೇಕು.

LEAVE A REPLY

Please enter your comment!
Please enter your name here

- Advertisment -

ಐ-ಪ್ಯಾಕ್ ಮೇಲೆ ದಾಳಿ ಪ್ರಕರಣ: ಮಮತಾ ಬ್ಯಾನರ್ಜಿ ದೂರಿನ ಬೆನ್ನಲ್ಲೇ ಜಾರಿ ನಿರ್ದೇಶನಾಲಯದ ವಿರುದ್ಧ ಎಫ್‌ಐಆರ್

ಕೋಲ್ಕತ್ತಾ: ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ ನಡೆಸಿದ ದಾಳಿಗೆ ಸಂಬಂಧಿಸಿದಂತೆ ಟಿಎಂಸಿ ಅಧ್ಯಕ್ಷೆ ಮಮತಾ ಬ್ಯಾನರ್ಜಿ...

‘ಭ್ರಷ್ಟ ಜನತಾ ಪಾರ್ಟಿ’: ಬಿಜೆಪಿ ಡಬಲ್ ಎಂಜಿನ್ ಆಡಳಿತದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

ನವದೆಹಲಿ: ವಿವಿಧ ರಾಜ್ಯಗಳಲ್ಲಿ ಬಿಜೆಪಿಯ ಡಬಲ್ ಎಂಜಿನ್ ಸರ್ಕಾರಗಳ ವಿರುದ್ಧ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.  ತಮ್ಮ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ರಾಹುಲ್, ಉತ್ತರಾಖಂಡದಲ್ಲಿ ಅಂಕಿತ...

ಇಂದೋರ್‌ನಲ್ಲಿ ಕಲುಷಿತ ನೀರಿಗೆ 8 ಮಂದಿ ಬಲಿ: ಆರ್‌ಎಸ್‌ಎಸ್ ಕಚೇರಿಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್: ಭುಗಿಲೆದ್ದ ವಿವಾದ

ಇಂದೋರ್: ಆರ್‌ಎಸ್‌ಎಸ್ ಕಚೇರಿಯಲ್ಲಿ ಬುಧವಾರ ತಡರಾತ್ರಿ ನಡೆದ ಸಭೆಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್ ಭಾಗವಹಿಸಿದ್ದು ಕಂಡುಬಂದ ನಂತರ ಗುರುವಾರ ಇಂದೋರ್‌ನಲ್ಲಿ ರಾಜಕೀಯ ವಿವಾದ ಭುಗಿಲೆದ್ದಿದೆ.  ಕನಿಷ್ಠ ಎಂಟು ಮಂದಿ ಜೀವಗಳನ್ನು ಬಲಿ ಪಡೆದಿರುವ ಕಲುಷಿತ...

ಐ-ಪ್ಯಾಕ್ ಮೇಲೆ ಇಡಿ ದಾಳಿ: ಕೋಲ್ಕತ್ತಾದಲ್ಲಿ ಮಮತಾ ಪ್ರತಿಭಟನೆ: ಅಮಿತ್ ಶಾ ಕಚೇರಿಯ ಹೊರಗೆ ಪ್ರತಿಭಟಿಸುತ್ತಿದ್ದ ಟಿಎಂಸಿ ಶಾಸಕರ ಬಂಧನ

ಗುರುವಾರ (ಜ.8) ಬೆಳಿಗ್ಗೆ ಕೋಲ್ಕತ್ತಾದ ಸಾಲ್ಟ್ ಲೇಕ್‌ನಲ್ಲಿರುವ ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ನಡೆಸಿದ...

ಮಹಾರಾಷ್ಟ್ರ ಜಲ್ನಾ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣದ ಪ್ರಮುಖ ಆರೋಪಿ ಸ್ಪರ್ಧೆ!

ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆಯ ಆರೋಪಿ ಶ್ರೀಕಾಂತ್ ಪಂಗಾರ್ಕರ್ ಮುಂಬರುವ ಜಲ್ನಾ ಮುನ್ಸಿಪಲ್ ಕಾರ್ಪೊರೇಷನ್ ಚುನಾವಣೆಯಲ್ಲಿ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿದ್ದಾರೆ ಎಂಬ ಸುದ್ದಿ  ಹಲವು ರಾಷ್ಟ್ರೀಯ ಮಾಧ್ಯಮಗಳಲ್ಲಿ ವರದಿಯಾಗಿದೆ.  ಗೌರಿ ಲಂಕೇಶ್ ಹತ್ಯೆ ಸೇರಿದಂತೆ...

‘ಮೋದಿ ಟ್ರಂಪ್‌ಗೆ ಕರೆ ಮಾಡದ ಕಾರಣ ಭಾರತ-ಯುಎಸ್ ವ್ಯಾಪಾರ ಒಪ್ಪಂದ ನಡೆಯಲಿಲ್ಲ’: ಹೊವಾರ್ಡ್ ಲುಟ್ನಿಕ್ 

ಪ್ರಧಾನಿ ನರೇಂದ್ರ ಮೋದಿ ಅವರು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರಿಗೆ ಸರಿಯಾದ ಸಮಯಕ್ಕೆ ಕರೆ ಮಾಡದ ಕಾರಣ ಭಾರತದೊಂದಿಗಿನ ವ್ಯಾಪಾರ ಒಪ್ಪಂದ ನಡೆಯಲಿಲ್ಲ ಎಂದು ಅಮೆರಿಕದ ವಾಣಿಜ್ಯ ಕಾರ್ಯದರ್ಶಿ ಹೊವಾರ್ಡ್ ಲುಟ್ನಿಕ್...

‘ರೈಲ್ವೆ ಸಚಿವಾಲಯವನ್ನು ವೈಯಕ್ತಿಕ ಆಸ್ತಿಯಾಗಿ ಬಳಸಿಕೊಳ್ಳಲಾಗಿದೆ’: ಲಾಲು ಮತ್ತು ಕುಟುಂಬದ ವಿರುದ್ಧ ದೆಹಲಿ ನ್ಯಾಯಾಲಯ ಆರೋಪ

ನವದೆಹಲಿ: ಉದ್ಯೋಗಕ್ಕಾಗಿ ಭೂಮಿ ಹಗರಣದಲ್ಲಿ ಆರ್‌ಜೆಡಿ ಮುಖ್ಯಸ್ಥ ಮತ್ತು ಮಾಜಿ ರೈಲ್ವೆ ಸಚಿವ ಲಾಲು ಪ್ರಸಾದ್ ಯಾದವ್, ಅವರ ಕುಟುಂಬದ ಸದಸ್ಯರು ಮತ್ತು ಇತರರ ವಿರುದ್ಧ ದೆಹಲಿ ನ್ಯಾಯಾಲಯ ಗಂಭೀರ ಆರೋಪಗಳನ್ನು ಮಾಡಿದೆ.  ಯಾದವ್...

‘ಕೇರಳದ ಮಲಯಾಳಂ ಮಸೂದೆಯನ್ನು ವಿರೋಧಿಸಲು ಸಾಧ್ಯವಿರುವ ಎಲ್ಲವನ್ನೂ ಮಾಡುತ್ತೇವೆ’: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಕನ್ನಡ ಮಾಧ್ಯಮ ಶಾಲೆಗಳಲ್ಲಿಯೂ ಮಲಯಾಳಂ ಅನ್ನು ಪ್ರಥಮ ಭಾಷೆಯನ್ನಾಗಿ ಮಾಡುವ ಕೇರಳದ ಪ್ರಸ್ತಾವಿತ ಕಾನೂನನ್ನು ವಿರೋಧಿಸಲು ಕರ್ನಾಟಕ "ಸಾಧ್ಯವಾದಷ್ಟು ಪ್ರಯತ್ನಿಸುತ್ತದೆ" ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.   ಪ್ರಸ್ತಾವಿತ ಮಲಯಾಳಂ ಭಾಷಾ ಮಸೂದೆಯು "ಕೇರಳದ...

ಜಾರ್ಖಂಡ್‌ನಲ್ಲಿ ಮತ್ತೊಂದು ಗುಂಪುಹತ್ಯೆ: ದನ ಕಳ್ಳತನದ ಶಂಕೆಯಲ್ಲಿ ಮುಸ್ಲಿಂ ವ್ಯಕ್ತಿಯನ್ನು ಥಳಿಸಿ ಕೊಂದ ಗುಂಪು

ಜಾರ್ಖಂಡ್‌ನ ಗೊಡ್ಡಾ ಜಿಲ್ಲೆಯಲ್ಲಿ ಬುಧವಾರ ದನಗಳನ್ನು ಕದ್ದಿದ್ದಾನೆ ಎಂಬ ಶಂಕೆಯಲ್ಲಿ 45 ವರ್ಷದ ಮುಸ್ಲಿಂ ವ್ಯಕ್ತಿಯನ್ನು ಅಪರಿಚಿತ ಜನರ ಗುಂಪೊಂದು ಹೊಡೆದು ಕೊಂದಿದೆ ಎಂದು ಪಿಟಿಐ ವರದಿ ಮಾಡಿದೆ. ಪೊಲೀಸ್ ಅಧಿಕಾರಿಗಳನ್ನು ಉಲ್ಲೇಖಿಸಿ ವರದಿ...

ನ್ಯಾಷನಲ್ ಹೆರಾಲ್ಡ್ ಜಾಹೀರಾತು ವಿವಾದ: ಹಣಕಾಸಿನ ದಾಖಲೆ ಕೇಳಿ ಡಿಕೆ ಸಹೋದರರಿಗೆ ನೋಟಿಸ್  

ಕಾಂಗ್ರೆಸ್ ನೇತೃತ್ವದ ಕರ್ನಾಟಕ ಸರ್ಕಾರದಿಂದ ನ್ಯಾಷನಲ್ ಹೆರಾಲ್ಡ್ ಪತ್ರಿಕೆಗೆ ಬೇರೆ ಯಾವುದೇ ರಾಷ್ಟ್ರೀಯ ದಿನಪತ್ರಿಕೆಗಿಂತ ಹೆಚ್ಚಿನ ಜಾಹೀರಾತು ನಿಧಿ ದೊರೆತಿದೆ ಎಂದು ವರದಿಯಾಗಿದೆ, ಇದು ಸಾರ್ವಜನಿಕ ಹಣದ ಬಳಕೆಯ ಬಗ್ಗೆ ಪ್ರಶ್ನೆಗಳನ್ನು ಹುಟ್ಟುಹಾಕಿದೆ....