Homeಮುಖಪುಟದೀಪಾವಳಿ: 24 ಗಂಟೆ ಸತತವಾಗಿ ಬೆಳಗಬಲ್ಲ’ಮ್ಯಾಜಿಕ್ ಲ್ಯಾಂಪ್ಸ್’ಗೆ ಭಾರಿ ಬೇಡಿಕೆ!

ದೀಪಾವಳಿ: 24 ಗಂಟೆ ಸತತವಾಗಿ ಬೆಳಗಬಲ್ಲ’ಮ್ಯಾಜಿಕ್ ಲ್ಯಾಂಪ್ಸ್’ಗೆ ಭಾರಿ ಬೇಡಿಕೆ!

24 ರಿಂದ 40 ಗಂಟೆಗಳ ಕಾಲ ನಿರಂತರವಾಗಿ ಬೆಳಗಬಲ್ಲ ಈ ಸಾಂಪ್ರದಾಯಿಕ ದೀಪಗಳಿಗೆ ಭಾರಿ ಬೇಡಿಕೆ ಬಂದಿದೆ ಎಂದು ಕುಂಬಾರ ಅಶೋಕ್ ಹೇಳುತ್ತಾರೆ

- Advertisement -
- Advertisement -

ದೀಪಾವಳಿ ಹಬ್ಬಕ್ಕೆ ಇನ್ನೊಂದೆ ವಾರ ಉಳಿದಿದೆ. ಕೊರೊನಾ ಸಾಂಕ್ರಾಮಿಕ ಹಬ್ಬಗಳ ಖುಷಿಯ ಮೇಲೆ ಪ್ರಭಾವ ಬೀರಿದ್ದರೂ ಸಹ ಕೊರೊನಾ ಹೋಗಿ ಸ್ವಚ್ಛ, ನೆಮ್ಮದಿಯ ಜೀವನ ಆರಂಭವಾಗಲಿ ಎಂದು ಹಬ್ಬ ಆಚರಿಸಲು ಹಲವು ಮಂದಿ ಕಾಯುತ್ತಿದ್ದಾರೆ. ದೀಪಗಳ ಹಬ್ಬಕ್ಕಾಗಿ ವೈವಿಧ್ಯಮಯ ದೀಪಗಳು ಮಾರುಕಟ್ಟೆಗೆ ಲಗ್ಗೆ ಇಟ್ಟಿವೆ, ಇಡುತ್ತಿವೆ.

ಛತ್ತೀಸ್‌ಗಢ ಮೂಲದ ಕುಂಬಾರರೊಬ್ಬರು ಇಡೀ ದಿನ ಬೆಳಗುವ ಮಣ್ಣಿನ ದೀಪವನ್ನು ವಿನ್ಯಾಸಗೊಳಿಸಿದ್ದಾರೆ. ಬಸ್ತರ್ ಜಿಲ್ಲೆಯ ಕೊಂಡಗಾಂವ್ ಎಂಬ ಸಣ್ಣ ಹಳ್ಳಿಯಲ್ಲಿ ವಾಸಿಸುತ್ತಿರುವ ಅಶೋಕ್ ಚಕ್ರಧಾರಿ ಈ ದೀಪಗಳನ್ನು ವಿನ್ಯಾಸಗೊಳಿಸಿದ್ದಾರೆ.

ದೀಪಾವಳಿಯ ಪ್ರಯುಕ್ತ ಈಗಾಗಲೇ ಈ ದೀಪಗಳಿಗೆ ಬೇಡಿಕೆಯ ಪ್ರವಾಹವೇ ಹರಿದು ಬಂದಿದೆ ಎಂದು ದಿ ಬೆಟರ್ ಇಂಡಿಯಾ ವರದಿ ಮಾಡಿದೆ. 24 ರಿಂದ 40 ಗಂಟೆಗಳ ಕಾಲ ನಿರಂತರವಾಗಿ ಬೆಳಗಬಲ್ಲ ಈ ಸಾಂಪ್ರದಾಯಿಕ ದೀಪಗಳು ಮತ್ತು ಕುಂಬಾರ ಅಶೋಕ್ ಚಕ್ರಧಾರಿ ಸಾಮಾಜಿಕ ಮಾಧ್ಯಮದಲ್ಲಿ ಟ್ರೆಂಡ್ ಆಗಿದ್ದಾರೆ.

ಇದನ್ನೂ ಓದಿ: ಕೊರೊನಾ: ದೀಪಾವಳಿ ಮಾರ್ಗಸೂಚಿಗಳನ್ನು ಪ್ರಕಟಿಸಿದ ರಾಜ್ಯ ಸರ್ಕಾರ

ಕುಂಬಾರ ಅಶೋಕ್ ಚಕ್ರಧಾರಿ ಮಾಡಿದ ದೀಪಗಳಲ್ಲಿ ತೈಲವು ಸ್ವಯಂಚಾಲಿತವಾಗಿ ಜಿನುಗುತ್ತದೆ ‘ಮ್ಯಾಜಿಕ್ ಲ್ಯಾಂಪ್ಸ್’ ಎಂದು ಲೇಬಲ್ ಮಾಡಲಾದ ದೀಪಗಳಲ್ಲಿ, ಎಣ್ಣೆಯನ್ನು ಹಿಡಿದಿಡಲು ಗುಮ್ಮಟದ ಆಕಾರ ಮತ್ತು ದೀಪದ ತಳದಲ್ಲಿ ಎಣ್ಣೆ ಹಿಡಿದಿಡಲು ಟ್ಯೂಬ್ ತರಹದ ರಚನೆ ಇರುತ್ತದೆ. ಇದನ್ನು ಅಶೋಕ್ ತಮ್ಮ ಫೇಸ್‌ಬುಕ್ ಖಾತೆಯಲ್ಲಿ ಶೇರ್ ಮಾಡಿದ್ದಾರೆ.

ಯೂಟ್ಯೂಬ್‌ನಲ್ಲಿ ವಿಡಿಯೋ ನೋಡಿದ ನಂತರ ಈ ರೀತಿಯ ದೀಪವನ್ನು ವಿನ್ಯಾಸಗೊಳಿಸುವ ಯೋಜನೆ ಬಂದಿದ್ದಾಗಿ ಅಶೋಕ್ ತಿಳಿಸಿದ್ದಾರೆ. “ನನ್ನ ಕುಂಬಾರಿಕೆ ಕೌಶಲ್ಯಗಳನ್ನು ಪ್ರಶ್ನಿಸುವಂತಹ ಹೊಸ ಆಲೋಚನೆಗಳನ್ನು ನಾನು ಯಾವಾಗಲೂ ಹುಡುಕುತ್ತಿದ್ದೇನೆ ಮತ್ತು ಅವು ನನ್ನ ಸುತ್ತಮುತ್ತಲಿನವರಿಗೆ ಉಪಯುಕ್ತವಾಗುವಗಬೇಕು ಅಂತಹ ಕೆಲಸಗಳನ್ನು ಮಾಡುತ್ತೇನೆ” ಎಂದು 62 ವರ್ಷದ ಅಶೋಕ್ ಹೇಳುತ್ತಾರೆ.

“ನಾನು ಈ ದೀಪವನ್ನು ತಯಾರಿಸಲು ನಾನು ಆನ್‌ಲೈನ್‌ನಲ್ಲಿ ಹಲವಾರು ತಂತ್ರಗಳನ್ನು, ವೀಡಿಯೋಗಳಳನ್ನು ವೀಕ್ಷಿಸಿದ್ದೇನೆ. ಈ ದೀಪಗಳನ್ನು ತಯಾರಿಸಿದ ನನಗೆ ಇನ್ನೂ ಹೆಚ್ಚಿನ ದೀಪಗಳನ್ನು ತಯಾರಿಸಲು ಬೇಡಿಕೆ ಬಮದಿವೆ” ಎಂದಿದ್ದಾರೆ. ಎಎನ್‌ಐ ಹಂಚಿಕೊಂಡ ಫೋಟೋಗಳು ಕುಂಬಾರ ಅಶೋಕ್ ವಿನ್ಯಾಸಗೊಳಿಸಿದ ‘ಮ್ಯಾಜಿಕ್ ಲ್ಯಾಂಪ್‌ಗಳ’ ಒಂದು ದೊಡ್ಡ ಸಂಗ್ರಹವನ್ನೇ ತೋರಿಸುತ್ತವೆ.

PC: ANI

ಕೊರೊನಾ ಸಾಂಕ್ರಾಮಿಕ ಎಷ್ಟೋ ಉದ್ಯಮಗಳನ್ನು ನೆಲಕಚ್ಚುವಂತೆ ಮಾಡಿದೆ. ಲಾಕ್‌ಡೌನ್‌ನಿಂದ ಸಂಕಷ್ಟಕ್ಕೆ ಒಳಗಾದವರೂ ಇನ್ನು ಚೇತರಿಸಿಕೊಳ್ಳುವ ನಿಟ್ಟಿನಲ್ಲಿದ್ದಾರೆ. ಇಂತಹ ಸಮಯದಲ್ಲಿ ತೀವ್ರ ತೊಂದರೆಗೆ ಈಡಾಗಿರುವ ದೇಶದ ಕರಕುಶಲಕರ್ಮಿಗಳಿಗೆ ನೆರವಿನ ಅಗತ್ಯತೆ ಇದೆ. ದೇಶದಲ್ಲಿ ಹಲವು ರಾಜ್ಯಗಳು ಪಟಾಕಿಯನ್ನು ಬ್ಯಾನ್ ಮಾಡಿರುವ ಈ ಸಂದರ್ಭದಲ್ಲಿ ದೀಪಗಳಿಗೆ ಬೇಡಿಕೆ ಹೆಚ್ಚಾಗಿದ್ದು, ಹಲವು ಕರಕುಶಲಕರ್ಮಿಗಳಿಗೆ ಕೆಲಸ ಸಿಕ್ಕಂತಾಗಿದೆ.


ಇದನ್ನೂ ಓದಿ: ಚಿತ್ರಕಲಾ ಪರಿಷತ್ತಿನಲ್ಲಿ ಕರಕುಶಲಕರ್ಮಿಗಳ ದೀಪಗಳ ಪ್ರದರ್ಶನ, ಮಾರಾಟ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ಇಂತಹ ‌ಕುಶಲಕರ್ಮಿಗಳಿಗೆ ಸರ್ಕಾರ ಮತ್ತು ಸಮಾಜ ಪ್ರೋತ್ಸಾಹ ಕೊಡಬೇಕು.

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...