Homeಮುಖಪುಟದೀಪಾವಳಿ: 24 ಗಂಟೆ ಸತತವಾಗಿ ಬೆಳಗಬಲ್ಲ’ಮ್ಯಾಜಿಕ್ ಲ್ಯಾಂಪ್ಸ್’ಗೆ ಭಾರಿ ಬೇಡಿಕೆ!

ದೀಪಾವಳಿ: 24 ಗಂಟೆ ಸತತವಾಗಿ ಬೆಳಗಬಲ್ಲ’ಮ್ಯಾಜಿಕ್ ಲ್ಯಾಂಪ್ಸ್’ಗೆ ಭಾರಿ ಬೇಡಿಕೆ!

24 ರಿಂದ 40 ಗಂಟೆಗಳ ಕಾಲ ನಿರಂತರವಾಗಿ ಬೆಳಗಬಲ್ಲ ಈ ಸಾಂಪ್ರದಾಯಿಕ ದೀಪಗಳಿಗೆ ಭಾರಿ ಬೇಡಿಕೆ ಬಂದಿದೆ ಎಂದು ಕುಂಬಾರ ಅಶೋಕ್ ಹೇಳುತ್ತಾರೆ

- Advertisement -
- Advertisement -

ದೀಪಾವಳಿ ಹಬ್ಬಕ್ಕೆ ಇನ್ನೊಂದೆ ವಾರ ಉಳಿದಿದೆ. ಕೊರೊನಾ ಸಾಂಕ್ರಾಮಿಕ ಹಬ್ಬಗಳ ಖುಷಿಯ ಮೇಲೆ ಪ್ರಭಾವ ಬೀರಿದ್ದರೂ ಸಹ ಕೊರೊನಾ ಹೋಗಿ ಸ್ವಚ್ಛ, ನೆಮ್ಮದಿಯ ಜೀವನ ಆರಂಭವಾಗಲಿ ಎಂದು ಹಬ್ಬ ಆಚರಿಸಲು ಹಲವು ಮಂದಿ ಕಾಯುತ್ತಿದ್ದಾರೆ. ದೀಪಗಳ ಹಬ್ಬಕ್ಕಾಗಿ ವೈವಿಧ್ಯಮಯ ದೀಪಗಳು ಮಾರುಕಟ್ಟೆಗೆ ಲಗ್ಗೆ ಇಟ್ಟಿವೆ, ಇಡುತ್ತಿವೆ.

ಛತ್ತೀಸ್‌ಗಢ ಮೂಲದ ಕುಂಬಾರರೊಬ್ಬರು ಇಡೀ ದಿನ ಬೆಳಗುವ ಮಣ್ಣಿನ ದೀಪವನ್ನು ವಿನ್ಯಾಸಗೊಳಿಸಿದ್ದಾರೆ. ಬಸ್ತರ್ ಜಿಲ್ಲೆಯ ಕೊಂಡಗಾಂವ್ ಎಂಬ ಸಣ್ಣ ಹಳ್ಳಿಯಲ್ಲಿ ವಾಸಿಸುತ್ತಿರುವ ಅಶೋಕ್ ಚಕ್ರಧಾರಿ ಈ ದೀಪಗಳನ್ನು ವಿನ್ಯಾಸಗೊಳಿಸಿದ್ದಾರೆ.

ದೀಪಾವಳಿಯ ಪ್ರಯುಕ್ತ ಈಗಾಗಲೇ ಈ ದೀಪಗಳಿಗೆ ಬೇಡಿಕೆಯ ಪ್ರವಾಹವೇ ಹರಿದು ಬಂದಿದೆ ಎಂದು ದಿ ಬೆಟರ್ ಇಂಡಿಯಾ ವರದಿ ಮಾಡಿದೆ. 24 ರಿಂದ 40 ಗಂಟೆಗಳ ಕಾಲ ನಿರಂತರವಾಗಿ ಬೆಳಗಬಲ್ಲ ಈ ಸಾಂಪ್ರದಾಯಿಕ ದೀಪಗಳು ಮತ್ತು ಕುಂಬಾರ ಅಶೋಕ್ ಚಕ್ರಧಾರಿ ಸಾಮಾಜಿಕ ಮಾಧ್ಯಮದಲ್ಲಿ ಟ್ರೆಂಡ್ ಆಗಿದ್ದಾರೆ.

ಇದನ್ನೂ ಓದಿ: ಕೊರೊನಾ: ದೀಪಾವಳಿ ಮಾರ್ಗಸೂಚಿಗಳನ್ನು ಪ್ರಕಟಿಸಿದ ರಾಜ್ಯ ಸರ್ಕಾರ

ಕುಂಬಾರ ಅಶೋಕ್ ಚಕ್ರಧಾರಿ ಮಾಡಿದ ದೀಪಗಳಲ್ಲಿ ತೈಲವು ಸ್ವಯಂಚಾಲಿತವಾಗಿ ಜಿನುಗುತ್ತದೆ ‘ಮ್ಯಾಜಿಕ್ ಲ್ಯಾಂಪ್ಸ್’ ಎಂದು ಲೇಬಲ್ ಮಾಡಲಾದ ದೀಪಗಳಲ್ಲಿ, ಎಣ್ಣೆಯನ್ನು ಹಿಡಿದಿಡಲು ಗುಮ್ಮಟದ ಆಕಾರ ಮತ್ತು ದೀಪದ ತಳದಲ್ಲಿ ಎಣ್ಣೆ ಹಿಡಿದಿಡಲು ಟ್ಯೂಬ್ ತರಹದ ರಚನೆ ಇರುತ್ತದೆ. ಇದನ್ನು ಅಶೋಕ್ ತಮ್ಮ ಫೇಸ್‌ಬುಕ್ ಖಾತೆಯಲ್ಲಿ ಶೇರ್ ಮಾಡಿದ್ದಾರೆ.

ಯೂಟ್ಯೂಬ್‌ನಲ್ಲಿ ವಿಡಿಯೋ ನೋಡಿದ ನಂತರ ಈ ರೀತಿಯ ದೀಪವನ್ನು ವಿನ್ಯಾಸಗೊಳಿಸುವ ಯೋಜನೆ ಬಂದಿದ್ದಾಗಿ ಅಶೋಕ್ ತಿಳಿಸಿದ್ದಾರೆ. “ನನ್ನ ಕುಂಬಾರಿಕೆ ಕೌಶಲ್ಯಗಳನ್ನು ಪ್ರಶ್ನಿಸುವಂತಹ ಹೊಸ ಆಲೋಚನೆಗಳನ್ನು ನಾನು ಯಾವಾಗಲೂ ಹುಡುಕುತ್ತಿದ್ದೇನೆ ಮತ್ತು ಅವು ನನ್ನ ಸುತ್ತಮುತ್ತಲಿನವರಿಗೆ ಉಪಯುಕ್ತವಾಗುವಗಬೇಕು ಅಂತಹ ಕೆಲಸಗಳನ್ನು ಮಾಡುತ್ತೇನೆ” ಎಂದು 62 ವರ್ಷದ ಅಶೋಕ್ ಹೇಳುತ್ತಾರೆ.

“ನಾನು ಈ ದೀಪವನ್ನು ತಯಾರಿಸಲು ನಾನು ಆನ್‌ಲೈನ್‌ನಲ್ಲಿ ಹಲವಾರು ತಂತ್ರಗಳನ್ನು, ವೀಡಿಯೋಗಳಳನ್ನು ವೀಕ್ಷಿಸಿದ್ದೇನೆ. ಈ ದೀಪಗಳನ್ನು ತಯಾರಿಸಿದ ನನಗೆ ಇನ್ನೂ ಹೆಚ್ಚಿನ ದೀಪಗಳನ್ನು ತಯಾರಿಸಲು ಬೇಡಿಕೆ ಬಮದಿವೆ” ಎಂದಿದ್ದಾರೆ. ಎಎನ್‌ಐ ಹಂಚಿಕೊಂಡ ಫೋಟೋಗಳು ಕುಂಬಾರ ಅಶೋಕ್ ವಿನ್ಯಾಸಗೊಳಿಸಿದ ‘ಮ್ಯಾಜಿಕ್ ಲ್ಯಾಂಪ್‌ಗಳ’ ಒಂದು ದೊಡ್ಡ ಸಂಗ್ರಹವನ್ನೇ ತೋರಿಸುತ್ತವೆ.

PC: ANI

ಕೊರೊನಾ ಸಾಂಕ್ರಾಮಿಕ ಎಷ್ಟೋ ಉದ್ಯಮಗಳನ್ನು ನೆಲಕಚ್ಚುವಂತೆ ಮಾಡಿದೆ. ಲಾಕ್‌ಡೌನ್‌ನಿಂದ ಸಂಕಷ್ಟಕ್ಕೆ ಒಳಗಾದವರೂ ಇನ್ನು ಚೇತರಿಸಿಕೊಳ್ಳುವ ನಿಟ್ಟಿನಲ್ಲಿದ್ದಾರೆ. ಇಂತಹ ಸಮಯದಲ್ಲಿ ತೀವ್ರ ತೊಂದರೆಗೆ ಈಡಾಗಿರುವ ದೇಶದ ಕರಕುಶಲಕರ್ಮಿಗಳಿಗೆ ನೆರವಿನ ಅಗತ್ಯತೆ ಇದೆ. ದೇಶದಲ್ಲಿ ಹಲವು ರಾಜ್ಯಗಳು ಪಟಾಕಿಯನ್ನು ಬ್ಯಾನ್ ಮಾಡಿರುವ ಈ ಸಂದರ್ಭದಲ್ಲಿ ದೀಪಗಳಿಗೆ ಬೇಡಿಕೆ ಹೆಚ್ಚಾಗಿದ್ದು, ಹಲವು ಕರಕುಶಲಕರ್ಮಿಗಳಿಗೆ ಕೆಲಸ ಸಿಕ್ಕಂತಾಗಿದೆ.


ಇದನ್ನೂ ಓದಿ: ಚಿತ್ರಕಲಾ ಪರಿಷತ್ತಿನಲ್ಲಿ ಕರಕುಶಲಕರ್ಮಿಗಳ ದೀಪಗಳ ಪ್ರದರ್ಶನ, ಮಾರಾಟ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ಇಂತಹ ‌ಕುಶಲಕರ್ಮಿಗಳಿಗೆ ಸರ್ಕಾರ ಮತ್ತು ಸಮಾಜ ಪ್ರೋತ್ಸಾಹ ಕೊಡಬೇಕು.

LEAVE A REPLY

Please enter your comment!
Please enter your name here

- Advertisment -

ಉತ್ತರ ಪ್ರದೇಶ| ರಸ್ತೆ ಗುಂಡಿಗೆ ಇಳಿದ ಆಂಬ್ಯುಲೆನ್ಸ್; ಮರುಜೀವ ಪಡೆದ ಮೆದುಳು ನಿಷ್ಕ್ರಿಯಗೊಂಡಿದ್ದ ಮಹಿಳೆ!

ಉತ್ತರ ಪ್ರದೇಶದ ಬರೇಲಿಯ ಖಾಸಗಿ ಆಸ್ಪತ್ರೆಯೊಂದರ ವೈದ್ಯರು ಮೆದುಳು ನಿಷ್ಕ್ರಿಯ ಎಂದು ಘೋಷಿಸಿದ್ದು, ಮಹಿಳೆಯೊಬ್ಬರ ಮೃತದೇಹವನ್ನು ಅಂತ್ಯಕ್ರಿಯೆಗಾಗಿ ಮನೆಗೆ ಸಾಗಿಸುತ್ತಿದ್ದಾಗ ಆಂಬ್ಯುಲೆನ್ಸ್ ರಸ್ತೆಯ ಗುಂಡಿಗೆ ಇಳಿದ ನಂತರ ಆಕೆ ಜೀವಂತವಾಗಿರುವ ಲಕ್ಷಣಗಳು ಕಂಡುಬಂದು...

ಪಶ್ಚಿಮ ಏಷ್ಯಾ ಸಂಘರ್ಷ: ದುಬೈ ವಿಮಾನ ನಿಲ್ದಾಣದ ಮೇಲೆ ಇರಾನ್​ ಡ್ರೋನ್​ ದಾಳಿ; ಭಾರತೀಯ ಪ್ರಜೆ ಸೇರಿ ನಾಲ್ವರಿಗೆ ಗಾಯ

ದುಬೈ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಬಳಿ ಇರಾನಿನ ಎರಡು ಡ್ರೋಣಗಳಿಂದ ದಾಳಿ ನಡೆದಿದೆ. ಈ ದಾಳಿಯಲ್ಲಿ ಓರ್ವ ಭಾರತೀಯ ಸೇರಿದಂತೆ ನಾಲ್ವರು ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಅಲ್ಲಿನ ಸರ್ಕಾರದ ಪರವಾಗಿ ಪ್ರಕಟಣೆ ಹೊರಡಿಸಿರುವ...

ಜಾರ್ಖಂಡ್| ಆಂಬ್ಯುಲೆನ್ಸ್ ನಿರಾಕರಿಸಿದ ಆಸ್ಪತ್ರೆ ಸಿಬ್ಬಂದಿ; ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿದ ತಂದೆ

ಆಸ್ಪತ್ರೆ ಸಿಬ್ಬಂದಿ ಆಂಬ್ಯುಲೆನ್ಸ್ ನಿರಾಕರಿಸಿದ್ದರಿಂದ ಕೂಲಿಕಾರ ತಂದೆಯೊಬ್ಬ ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿರುವ ಹೃದಯವಿದ್ರಾವಕ ಘಟನೆಯೊಂದು ಜಾರ್ಖಂಡ್‌ನ ಪಶ್ಚಿಮ ಸಿಂಗ್ಭೂಮ್ ಜಿಲ್ಲೆಯಲ್ಲಿ ಬೆಳಕಿಗೆ ಬಂದಿದೆ. ಕಳೆದ ಶನಿವಾರ ನಡೆದಿದೆ ಎನ್ನಲಾದ...

ಮಧುರಾಂತಕಂ ಬಳಿ 14 ವರ್ಷದ ಬಾಲಕಿಯ ಮೇಲೆ ಸಾಮೂಹಿಕ ಅತ್ಯಾಚಾರ: ಪೋಕ್ಸೋ ಪ್ರಕರಣದಡಿ ಓರ್ವ ರೌಡಿ ಶೀಟರ್ ಬಂಧನ

ಚೆನ್ನೈ (ಚೆಂಗಲ್ಪಟ್ಟು): ಸೋಮವಾರ ರಾತ್ರಿ ಮಧುರಾಂಟಕಂ ಬಳಿಯ ಜಲಮೂಲದ ದಡದಲ್ಲಿ 14 ವರ್ಷದ ಬಾಲಕಿಯ ಮೇಲೆ ರೌಡಿ ಶೀಟರ್ ಮತ್ತು ಆತನ ಸಹಚರರು ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ ಎಂದು ವರದಿಯಾಗಿದೆ. ಪ್ರಕರಣ ಸಂಬಂಧ ಪೋಕ್ಸೋ...

ಮುಸ್ಲಿಂ ಮಹಿಳೆಯರ ವಿರುದ್ಧದ ಷರಿಯಾ ಕಾನೂನಿಗೆ ಏಕರೂಪ ನಾಗರಿಕ ಸಂಹಿತೆ ಪರಿಹಾರ: ಸುಪ್ರೀಂ ಕೋರ್ಟ್

"ಮುಸ್ಲಿಂ ವೈಯಕ್ತಿಕ ಕಾನೂನಿನಡಿಯಲ್ಲಿ ತಾರತಮ್ಯದ ಆನುವಂಶಿಕ ನಿಬಂಧನೆಗಳನ್ನು ಪರಿಹರಿಸಲು ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಅತ್ಯಂತ ಪರಿಣಾಮಕಾರಿ ಪರಿಹಾರ ಎಂದು ಸುಪ್ರೀಂ ಕೋರ್ಟ್ ಮಂಗಳವಾರ (ಮಾ.20) ಹೇಳಿದೆ. ಮುಖ್ಯ ನ್ಯಾಯಮೂರ್ತಿ ಸೂರ್ಯ...

ಮುಂಬೈ: ಬಜೆಟ್ ಅಧಿವೇಶನದ ನಡುವೆ ವಿಧಾನ ಭವನದ ಬಳಿ ವ್ಯಕ್ತಿಯೊಬ್ಬನಿಂದ ಆತ್ಮಹತ್ಯೆಗೆ ಯತ್ನ: ವಶಕ್ಕೆ ಪಡೆದ ಪೊಲೀಸರು

ಮುಂಬೈ: ಮಾರ್ಚ್ 11, ಬುಧವಾರ ಮಹಾರಾಷ್ಟ್ರ ವಿಧಾನ ಭವನದ ಹೊರಗೆ ವ್ಯಕ್ತಿಯೊಬ್ಬರು ಆತ್ಮಾಹುತಿ ಮಾಡಿಕೊಳ್ಳಲು ಯತ್ನಿಸಿರುವುದಾಗಿ ವರದಿಯಾಗಿದೆ. ತಕ್ಷಣವೇ ಮುಂಬೈ ಪೊಲೀಸರು ಆತನನ್ನು ಬಂಧಿಸಿದ್ದಾರೆ.  2026 ರ ಮಹಾರಾಷ್ಟ್ರ ಬಜೆಟ್ ಅಧಿವೇಶನ ವಿಧಾನ ಭವನದಲ್ಲಿ...

ಕೋವಿಡ್ ಲಸಿಕೆ ಕೆಲ ಸಾವುಗಳಿಗೆ ಕಾರಣವಾಗಿದೆ ಎಂದು ಅಧಿಕೃತ ದತ್ತಾಂಶ ತೋರಿಸಿದೆ, ಸರ್ಕಾರ ಜವಾಬ್ದಾರಿಯಿಂದ ನುಣುಚಿಕೊಳ್ಳಲು ಸಾಧ್ಯವಿಲ್ಲ : ಸುಪ್ರೀಂ ಕೋರ್ಟ್

ಸರ್ಕಾರದ ಅಧೀನದ ಸಾರ್ವಜನಿಕ ಆರೋಗ್ಯ ವ್ಯವಸ್ಥೆಯ ಮೂಲಕ ಕೋವಿಡ್ ಲಸಿಕೆಯನ್ನು ವಿತರಿಸಲಾಗಿದೆ. ಕೋವಿಡ್ ಲಸಿಕೆ ಪಡೆದ ಬಳಿಕ ಕೆಲ ಸಾವುಗಳು ಸಂಭವಿಸಿರುವುದನ್ನು ಅಧಿಕೃತ ದತ್ತಾಂಶಗಳೇ ದೃಢಪಡಿಸಿವೆ. ಹೀಗಿರುವಾಗ, ಲಸಿಕೆ ಹಾಕಿಸಿಕೊಂಡ ನಂತರ ಸಾವು...

ತಮಿಳುನಾಡು| ಪೊಲೀಸ್ ದೌರ್ಜನ್ಯದಿಂದ ಎರಡು ತಿಂಗಳಲ್ಲಿ ನಾಲ್ವರು ದಲಿತರು ಸಾವು

ವಿಧಾನಸಭೆ ಚುನಾವಣೆ ಹೊಸ್ತಿಲಲ್ಲಿರುವ ತಮಿಳುನಾಡಿನಲ್ಲಿ ಕಾನೂನು ಸುವ್ಯವಸ್ಥೆ ಹದಗೆಡುತ್ತಿರುವುದನ್ನು ಪ್ರತಿಬಿಂಬಿಸುವ ಆತಂಕಕಾರಿ ವಿಚಾರವೊಂದು ಮುನ್ನಲೆಗೆ ಬಂದಿದ್ದು, ಪೊಲೀಸ್ ಹಿಂಸಾಚಾರದಿಂದಾಗಿ ಎರಡು ತಿಂಗಳ ಅವಧಿಯಲ್ಲಿ ನಾಲ್ವರು ದಲಿತರು ಸಾವನ್ನಪ್ಪಿದ್ದಾರೆ. ಈ ಸಾವುಗಳಲ್ಲಿ, ಎರಡು ಪ್ರಕರಣಗಳನ್ನು...

ಪಶ್ಚಿಮ ಏಷ್ಯಾ ಸಂಘರ್ಷ| ಹಾರ್ಮುಜ್ ಜಲಸಂಧಿಯಲ್ಲಿ ಇರಾನಿನ 16 ಹಡಗುಗಳನ್ನು ನಾಶಪಡಿಸಿದ್ದಾಗಿ ವಿಡಿಯೋ ಹಂಚಿಕೊಂಡ ಅಮೆರಿಕ ಸೇನೆ

ಪಶ್ಚಿಮ ಏಷ್ಯಾದಿಂದ ತೈಲ ರಫ್ತನ್ನು ತಡೆಯಲು ಇರಾನ್ ಪ್ರಯತ್ನಿಸುತ್ತಿರುವುದರಿಂದ ಹಾರ್ಮುಜ್ ಜಲಸಂಧಿಯಲ್ಲಿ ಇರಾನಿನ 16 ಹಡಗುಗಳನ್ನು ನಾಶಪಡಿಸಿರುವುದಾಗಿ ಅಮೆರಿಕ ಸೇನೆ ಹೇಳಿಕೊಂಡಿದೆ.  ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಈ ಹಿಂದೆ ಇರಾನ್ ಜಲಸಂಧಿಯಲ್ಲಿ ಗಣಿಗಳನ್ನು...

13 ವರ್ಷಗಳಿಂದ ಕೋಮಾದಲ್ಲಿರುವ ಯುವಕನ ದಯಾಮರಣಕ್ಕೆ ಸುಪ್ರೀಂ ಕೋರ್ಟ್ ಅನುಮತಿ

ಕಳೆದ 13 ವರ್ಷಗಳಿಂದ ಕೋಮಾದಲ್ಲಿರುವ 32 ವರ್ಷದ ಹರೀಶ್ ರಾಣಾ ಎಂಬ ಯುವಕನ ಪರೋಕ್ಷ (ನಿಷ್ಕ್ರಿಯ) ದಯಾಮರಣಕ್ಕೆ ಸುಪ್ರೀಂ ಕೋರ್ಟ್ ಬುಧವಾರ (ಮಾ.11) ಅನುಮತಿ ನೀಡಿದೆ ಎಂದು livelaw.in ವರದಿ ಮಾಡಿದೆ. ದೆಹಲಿ ಮೂಲದ ಹರೀಶ್...