Homeಮುಖಪುಟದೀಪಾವಳಿ: 24 ಗಂಟೆ ಸತತವಾಗಿ ಬೆಳಗಬಲ್ಲ’ಮ್ಯಾಜಿಕ್ ಲ್ಯಾಂಪ್ಸ್’ಗೆ ಭಾರಿ ಬೇಡಿಕೆ!

ದೀಪಾವಳಿ: 24 ಗಂಟೆ ಸತತವಾಗಿ ಬೆಳಗಬಲ್ಲ’ಮ್ಯಾಜಿಕ್ ಲ್ಯಾಂಪ್ಸ್’ಗೆ ಭಾರಿ ಬೇಡಿಕೆ!

24 ರಿಂದ 40 ಗಂಟೆಗಳ ಕಾಲ ನಿರಂತರವಾಗಿ ಬೆಳಗಬಲ್ಲ ಈ ಸಾಂಪ್ರದಾಯಿಕ ದೀಪಗಳಿಗೆ ಭಾರಿ ಬೇಡಿಕೆ ಬಂದಿದೆ ಎಂದು ಕುಂಬಾರ ಅಶೋಕ್ ಹೇಳುತ್ತಾರೆ

- Advertisement -
- Advertisement -

ದೀಪಾವಳಿ ಹಬ್ಬಕ್ಕೆ ಇನ್ನೊಂದೆ ವಾರ ಉಳಿದಿದೆ. ಕೊರೊನಾ ಸಾಂಕ್ರಾಮಿಕ ಹಬ್ಬಗಳ ಖುಷಿಯ ಮೇಲೆ ಪ್ರಭಾವ ಬೀರಿದ್ದರೂ ಸಹ ಕೊರೊನಾ ಹೋಗಿ ಸ್ವಚ್ಛ, ನೆಮ್ಮದಿಯ ಜೀವನ ಆರಂಭವಾಗಲಿ ಎಂದು ಹಬ್ಬ ಆಚರಿಸಲು ಹಲವು ಮಂದಿ ಕಾಯುತ್ತಿದ್ದಾರೆ. ದೀಪಗಳ ಹಬ್ಬಕ್ಕಾಗಿ ವೈವಿಧ್ಯಮಯ ದೀಪಗಳು ಮಾರುಕಟ್ಟೆಗೆ ಲಗ್ಗೆ ಇಟ್ಟಿವೆ, ಇಡುತ್ತಿವೆ.

ಛತ್ತೀಸ್‌ಗಢ ಮೂಲದ ಕುಂಬಾರರೊಬ್ಬರು ಇಡೀ ದಿನ ಬೆಳಗುವ ಮಣ್ಣಿನ ದೀಪವನ್ನು ವಿನ್ಯಾಸಗೊಳಿಸಿದ್ದಾರೆ. ಬಸ್ತರ್ ಜಿಲ್ಲೆಯ ಕೊಂಡಗಾಂವ್ ಎಂಬ ಸಣ್ಣ ಹಳ್ಳಿಯಲ್ಲಿ ವಾಸಿಸುತ್ತಿರುವ ಅಶೋಕ್ ಚಕ್ರಧಾರಿ ಈ ದೀಪಗಳನ್ನು ವಿನ್ಯಾಸಗೊಳಿಸಿದ್ದಾರೆ.

ದೀಪಾವಳಿಯ ಪ್ರಯುಕ್ತ ಈಗಾಗಲೇ ಈ ದೀಪಗಳಿಗೆ ಬೇಡಿಕೆಯ ಪ್ರವಾಹವೇ ಹರಿದು ಬಂದಿದೆ ಎಂದು ದಿ ಬೆಟರ್ ಇಂಡಿಯಾ ವರದಿ ಮಾಡಿದೆ. 24 ರಿಂದ 40 ಗಂಟೆಗಳ ಕಾಲ ನಿರಂತರವಾಗಿ ಬೆಳಗಬಲ್ಲ ಈ ಸಾಂಪ್ರದಾಯಿಕ ದೀಪಗಳು ಮತ್ತು ಕುಂಬಾರ ಅಶೋಕ್ ಚಕ್ರಧಾರಿ ಸಾಮಾಜಿಕ ಮಾಧ್ಯಮದಲ್ಲಿ ಟ್ರೆಂಡ್ ಆಗಿದ್ದಾರೆ.

ಇದನ್ನೂ ಓದಿ: ಕೊರೊನಾ: ದೀಪಾವಳಿ ಮಾರ್ಗಸೂಚಿಗಳನ್ನು ಪ್ರಕಟಿಸಿದ ರಾಜ್ಯ ಸರ್ಕಾರ

ಕುಂಬಾರ ಅಶೋಕ್ ಚಕ್ರಧಾರಿ ಮಾಡಿದ ದೀಪಗಳಲ್ಲಿ ತೈಲವು ಸ್ವಯಂಚಾಲಿತವಾಗಿ ಜಿನುಗುತ್ತದೆ ‘ಮ್ಯಾಜಿಕ್ ಲ್ಯಾಂಪ್ಸ್’ ಎಂದು ಲೇಬಲ್ ಮಾಡಲಾದ ದೀಪಗಳಲ್ಲಿ, ಎಣ್ಣೆಯನ್ನು ಹಿಡಿದಿಡಲು ಗುಮ್ಮಟದ ಆಕಾರ ಮತ್ತು ದೀಪದ ತಳದಲ್ಲಿ ಎಣ್ಣೆ ಹಿಡಿದಿಡಲು ಟ್ಯೂಬ್ ತರಹದ ರಚನೆ ಇರುತ್ತದೆ. ಇದನ್ನು ಅಶೋಕ್ ತಮ್ಮ ಫೇಸ್‌ಬುಕ್ ಖಾತೆಯಲ್ಲಿ ಶೇರ್ ಮಾಡಿದ್ದಾರೆ.

ಯೂಟ್ಯೂಬ್‌ನಲ್ಲಿ ವಿಡಿಯೋ ನೋಡಿದ ನಂತರ ಈ ರೀತಿಯ ದೀಪವನ್ನು ವಿನ್ಯಾಸಗೊಳಿಸುವ ಯೋಜನೆ ಬಂದಿದ್ದಾಗಿ ಅಶೋಕ್ ತಿಳಿಸಿದ್ದಾರೆ. “ನನ್ನ ಕುಂಬಾರಿಕೆ ಕೌಶಲ್ಯಗಳನ್ನು ಪ್ರಶ್ನಿಸುವಂತಹ ಹೊಸ ಆಲೋಚನೆಗಳನ್ನು ನಾನು ಯಾವಾಗಲೂ ಹುಡುಕುತ್ತಿದ್ದೇನೆ ಮತ್ತು ಅವು ನನ್ನ ಸುತ್ತಮುತ್ತಲಿನವರಿಗೆ ಉಪಯುಕ್ತವಾಗುವಗಬೇಕು ಅಂತಹ ಕೆಲಸಗಳನ್ನು ಮಾಡುತ್ತೇನೆ” ಎಂದು 62 ವರ್ಷದ ಅಶೋಕ್ ಹೇಳುತ್ತಾರೆ.

“ನಾನು ಈ ದೀಪವನ್ನು ತಯಾರಿಸಲು ನಾನು ಆನ್‌ಲೈನ್‌ನಲ್ಲಿ ಹಲವಾರು ತಂತ್ರಗಳನ್ನು, ವೀಡಿಯೋಗಳಳನ್ನು ವೀಕ್ಷಿಸಿದ್ದೇನೆ. ಈ ದೀಪಗಳನ್ನು ತಯಾರಿಸಿದ ನನಗೆ ಇನ್ನೂ ಹೆಚ್ಚಿನ ದೀಪಗಳನ್ನು ತಯಾರಿಸಲು ಬೇಡಿಕೆ ಬಮದಿವೆ” ಎಂದಿದ್ದಾರೆ. ಎಎನ್‌ಐ ಹಂಚಿಕೊಂಡ ಫೋಟೋಗಳು ಕುಂಬಾರ ಅಶೋಕ್ ವಿನ್ಯಾಸಗೊಳಿಸಿದ ‘ಮ್ಯಾಜಿಕ್ ಲ್ಯಾಂಪ್‌ಗಳ’ ಒಂದು ದೊಡ್ಡ ಸಂಗ್ರಹವನ್ನೇ ತೋರಿಸುತ್ತವೆ.

PC: ANI

ಕೊರೊನಾ ಸಾಂಕ್ರಾಮಿಕ ಎಷ್ಟೋ ಉದ್ಯಮಗಳನ್ನು ನೆಲಕಚ್ಚುವಂತೆ ಮಾಡಿದೆ. ಲಾಕ್‌ಡೌನ್‌ನಿಂದ ಸಂಕಷ್ಟಕ್ಕೆ ಒಳಗಾದವರೂ ಇನ್ನು ಚೇತರಿಸಿಕೊಳ್ಳುವ ನಿಟ್ಟಿನಲ್ಲಿದ್ದಾರೆ. ಇಂತಹ ಸಮಯದಲ್ಲಿ ತೀವ್ರ ತೊಂದರೆಗೆ ಈಡಾಗಿರುವ ದೇಶದ ಕರಕುಶಲಕರ್ಮಿಗಳಿಗೆ ನೆರವಿನ ಅಗತ್ಯತೆ ಇದೆ. ದೇಶದಲ್ಲಿ ಹಲವು ರಾಜ್ಯಗಳು ಪಟಾಕಿಯನ್ನು ಬ್ಯಾನ್ ಮಾಡಿರುವ ಈ ಸಂದರ್ಭದಲ್ಲಿ ದೀಪಗಳಿಗೆ ಬೇಡಿಕೆ ಹೆಚ್ಚಾಗಿದ್ದು, ಹಲವು ಕರಕುಶಲಕರ್ಮಿಗಳಿಗೆ ಕೆಲಸ ಸಿಕ್ಕಂತಾಗಿದೆ.


ಇದನ್ನೂ ಓದಿ: ಚಿತ್ರಕಲಾ ಪರಿಷತ್ತಿನಲ್ಲಿ ಕರಕುಶಲಕರ್ಮಿಗಳ ದೀಪಗಳ ಪ್ರದರ್ಶನ, ಮಾರಾಟ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ಇಂತಹ ‌ಕುಶಲಕರ್ಮಿಗಳಿಗೆ ಸರ್ಕಾರ ಮತ್ತು ಸಮಾಜ ಪ್ರೋತ್ಸಾಹ ಕೊಡಬೇಕು.

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...