Homeಮುಖಪುಟದೀಪಾವಳಿ: 24 ಗಂಟೆ ಸತತವಾಗಿ ಬೆಳಗಬಲ್ಲ’ಮ್ಯಾಜಿಕ್ ಲ್ಯಾಂಪ್ಸ್’ಗೆ ಭಾರಿ ಬೇಡಿಕೆ!

ದೀಪಾವಳಿ: 24 ಗಂಟೆ ಸತತವಾಗಿ ಬೆಳಗಬಲ್ಲ’ಮ್ಯಾಜಿಕ್ ಲ್ಯಾಂಪ್ಸ್’ಗೆ ಭಾರಿ ಬೇಡಿಕೆ!

24 ರಿಂದ 40 ಗಂಟೆಗಳ ಕಾಲ ನಿರಂತರವಾಗಿ ಬೆಳಗಬಲ್ಲ ಈ ಸಾಂಪ್ರದಾಯಿಕ ದೀಪಗಳಿಗೆ ಭಾರಿ ಬೇಡಿಕೆ ಬಂದಿದೆ ಎಂದು ಕುಂಬಾರ ಅಶೋಕ್ ಹೇಳುತ್ತಾರೆ

- Advertisement -
- Advertisement -

ದೀಪಾವಳಿ ಹಬ್ಬಕ್ಕೆ ಇನ್ನೊಂದೆ ವಾರ ಉಳಿದಿದೆ. ಕೊರೊನಾ ಸಾಂಕ್ರಾಮಿಕ ಹಬ್ಬಗಳ ಖುಷಿಯ ಮೇಲೆ ಪ್ರಭಾವ ಬೀರಿದ್ದರೂ ಸಹ ಕೊರೊನಾ ಹೋಗಿ ಸ್ವಚ್ಛ, ನೆಮ್ಮದಿಯ ಜೀವನ ಆರಂಭವಾಗಲಿ ಎಂದು ಹಬ್ಬ ಆಚರಿಸಲು ಹಲವು ಮಂದಿ ಕಾಯುತ್ತಿದ್ದಾರೆ. ದೀಪಗಳ ಹಬ್ಬಕ್ಕಾಗಿ ವೈವಿಧ್ಯಮಯ ದೀಪಗಳು ಮಾರುಕಟ್ಟೆಗೆ ಲಗ್ಗೆ ಇಟ್ಟಿವೆ, ಇಡುತ್ತಿವೆ.

ಛತ್ತೀಸ್‌ಗಢ ಮೂಲದ ಕುಂಬಾರರೊಬ್ಬರು ಇಡೀ ದಿನ ಬೆಳಗುವ ಮಣ್ಣಿನ ದೀಪವನ್ನು ವಿನ್ಯಾಸಗೊಳಿಸಿದ್ದಾರೆ. ಬಸ್ತರ್ ಜಿಲ್ಲೆಯ ಕೊಂಡಗಾಂವ್ ಎಂಬ ಸಣ್ಣ ಹಳ್ಳಿಯಲ್ಲಿ ವಾಸಿಸುತ್ತಿರುವ ಅಶೋಕ್ ಚಕ್ರಧಾರಿ ಈ ದೀಪಗಳನ್ನು ವಿನ್ಯಾಸಗೊಳಿಸಿದ್ದಾರೆ.

ದೀಪಾವಳಿಯ ಪ್ರಯುಕ್ತ ಈಗಾಗಲೇ ಈ ದೀಪಗಳಿಗೆ ಬೇಡಿಕೆಯ ಪ್ರವಾಹವೇ ಹರಿದು ಬಂದಿದೆ ಎಂದು ದಿ ಬೆಟರ್ ಇಂಡಿಯಾ ವರದಿ ಮಾಡಿದೆ. 24 ರಿಂದ 40 ಗಂಟೆಗಳ ಕಾಲ ನಿರಂತರವಾಗಿ ಬೆಳಗಬಲ್ಲ ಈ ಸಾಂಪ್ರದಾಯಿಕ ದೀಪಗಳು ಮತ್ತು ಕುಂಬಾರ ಅಶೋಕ್ ಚಕ್ರಧಾರಿ ಸಾಮಾಜಿಕ ಮಾಧ್ಯಮದಲ್ಲಿ ಟ್ರೆಂಡ್ ಆಗಿದ್ದಾರೆ.

ಇದನ್ನೂ ಓದಿ: ಕೊರೊನಾ: ದೀಪಾವಳಿ ಮಾರ್ಗಸೂಚಿಗಳನ್ನು ಪ್ರಕಟಿಸಿದ ರಾಜ್ಯ ಸರ್ಕಾರ

ಕುಂಬಾರ ಅಶೋಕ್ ಚಕ್ರಧಾರಿ ಮಾಡಿದ ದೀಪಗಳಲ್ಲಿ ತೈಲವು ಸ್ವಯಂಚಾಲಿತವಾಗಿ ಜಿನುಗುತ್ತದೆ ‘ಮ್ಯಾಜಿಕ್ ಲ್ಯಾಂಪ್ಸ್’ ಎಂದು ಲೇಬಲ್ ಮಾಡಲಾದ ದೀಪಗಳಲ್ಲಿ, ಎಣ್ಣೆಯನ್ನು ಹಿಡಿದಿಡಲು ಗುಮ್ಮಟದ ಆಕಾರ ಮತ್ತು ದೀಪದ ತಳದಲ್ಲಿ ಎಣ್ಣೆ ಹಿಡಿದಿಡಲು ಟ್ಯೂಬ್ ತರಹದ ರಚನೆ ಇರುತ್ತದೆ. ಇದನ್ನು ಅಶೋಕ್ ತಮ್ಮ ಫೇಸ್‌ಬುಕ್ ಖಾತೆಯಲ್ಲಿ ಶೇರ್ ಮಾಡಿದ್ದಾರೆ.

ಯೂಟ್ಯೂಬ್‌ನಲ್ಲಿ ವಿಡಿಯೋ ನೋಡಿದ ನಂತರ ಈ ರೀತಿಯ ದೀಪವನ್ನು ವಿನ್ಯಾಸಗೊಳಿಸುವ ಯೋಜನೆ ಬಂದಿದ್ದಾಗಿ ಅಶೋಕ್ ತಿಳಿಸಿದ್ದಾರೆ. “ನನ್ನ ಕುಂಬಾರಿಕೆ ಕೌಶಲ್ಯಗಳನ್ನು ಪ್ರಶ್ನಿಸುವಂತಹ ಹೊಸ ಆಲೋಚನೆಗಳನ್ನು ನಾನು ಯಾವಾಗಲೂ ಹುಡುಕುತ್ತಿದ್ದೇನೆ ಮತ್ತು ಅವು ನನ್ನ ಸುತ್ತಮುತ್ತಲಿನವರಿಗೆ ಉಪಯುಕ್ತವಾಗುವಗಬೇಕು ಅಂತಹ ಕೆಲಸಗಳನ್ನು ಮಾಡುತ್ತೇನೆ” ಎಂದು 62 ವರ್ಷದ ಅಶೋಕ್ ಹೇಳುತ್ತಾರೆ.

“ನಾನು ಈ ದೀಪವನ್ನು ತಯಾರಿಸಲು ನಾನು ಆನ್‌ಲೈನ್‌ನಲ್ಲಿ ಹಲವಾರು ತಂತ್ರಗಳನ್ನು, ವೀಡಿಯೋಗಳಳನ್ನು ವೀಕ್ಷಿಸಿದ್ದೇನೆ. ಈ ದೀಪಗಳನ್ನು ತಯಾರಿಸಿದ ನನಗೆ ಇನ್ನೂ ಹೆಚ್ಚಿನ ದೀಪಗಳನ್ನು ತಯಾರಿಸಲು ಬೇಡಿಕೆ ಬಮದಿವೆ” ಎಂದಿದ್ದಾರೆ. ಎಎನ್‌ಐ ಹಂಚಿಕೊಂಡ ಫೋಟೋಗಳು ಕುಂಬಾರ ಅಶೋಕ್ ವಿನ್ಯಾಸಗೊಳಿಸಿದ ‘ಮ್ಯಾಜಿಕ್ ಲ್ಯಾಂಪ್‌ಗಳ’ ಒಂದು ದೊಡ್ಡ ಸಂಗ್ರಹವನ್ನೇ ತೋರಿಸುತ್ತವೆ.

PC: ANI

ಕೊರೊನಾ ಸಾಂಕ್ರಾಮಿಕ ಎಷ್ಟೋ ಉದ್ಯಮಗಳನ್ನು ನೆಲಕಚ್ಚುವಂತೆ ಮಾಡಿದೆ. ಲಾಕ್‌ಡೌನ್‌ನಿಂದ ಸಂಕಷ್ಟಕ್ಕೆ ಒಳಗಾದವರೂ ಇನ್ನು ಚೇತರಿಸಿಕೊಳ್ಳುವ ನಿಟ್ಟಿನಲ್ಲಿದ್ದಾರೆ. ಇಂತಹ ಸಮಯದಲ್ಲಿ ತೀವ್ರ ತೊಂದರೆಗೆ ಈಡಾಗಿರುವ ದೇಶದ ಕರಕುಶಲಕರ್ಮಿಗಳಿಗೆ ನೆರವಿನ ಅಗತ್ಯತೆ ಇದೆ. ದೇಶದಲ್ಲಿ ಹಲವು ರಾಜ್ಯಗಳು ಪಟಾಕಿಯನ್ನು ಬ್ಯಾನ್ ಮಾಡಿರುವ ಈ ಸಂದರ್ಭದಲ್ಲಿ ದೀಪಗಳಿಗೆ ಬೇಡಿಕೆ ಹೆಚ್ಚಾಗಿದ್ದು, ಹಲವು ಕರಕುಶಲಕರ್ಮಿಗಳಿಗೆ ಕೆಲಸ ಸಿಕ್ಕಂತಾಗಿದೆ.


ಇದನ್ನೂ ಓದಿ: ಚಿತ್ರಕಲಾ ಪರಿಷತ್ತಿನಲ್ಲಿ ಕರಕುಶಲಕರ್ಮಿಗಳ ದೀಪಗಳ ಪ್ರದರ್ಶನ, ಮಾರಾಟ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ಇಂತಹ ‌ಕುಶಲಕರ್ಮಿಗಳಿಗೆ ಸರ್ಕಾರ ಮತ್ತು ಸಮಾಜ ಪ್ರೋತ್ಸಾಹ ಕೊಡಬೇಕು.

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...