Homeಚಳವಳಿಪೌರಕಾರ್ಮಿಕರ ದಿನ: ಸಂಭ್ರಮಾಚರಣೆ ಬೇಡ, ಕನಿಷ್ಠ ಸೌಲಭ್ಯ ನೀಡಿ...

ಪೌರಕಾರ್ಮಿಕರ ದಿನ: ಸಂಭ್ರಮಾಚರಣೆ ಬೇಡ, ಕನಿಷ್ಠ ಸೌಲಭ್ಯ ನೀಡಿ…

ರಾಜ್ಯದಲ್ಲಿ ಸುಮಾರು 45 ಸಾವಿರಕ್ಕೂ ಹೆಚ್ಚು ಮಂದಿ ಗುತ್ತಿಗೆ ಪೌರಕಾರ್ಮಿಕರಿದ್ದಾರೆ. ಇವರ ಕೆಲಸ, ಖಾಯಂ ನೌಕರರ ಕೆಲಸ ಒಂದೇ ಆಗಿದ್ದರೂ ಸಂಬಳ ಮಾತ್ರ ಬೇರೆ ಬೇರೆ. ಈ ಬಗ್ಗೆ ಸರ್ಕಾರ ಯಾವುದೇ ಕ್ರಮ ಕೈಗೊಂಡಿಲ್ಲ.

- Advertisement -
- Advertisement -

ಮಳೆ, ಚಳಿ, ಬಿಸಿಲು ಏನೇ ಇರಲಿ ಅಥವಾ ಕೊರೊನಾದಂತಹ ದೊಡ್ಡ ದೊಡ್ಡ ಸಾಂಕ್ರಾಮಿಕ ರೋಗಗಳೆ ಬರಲಿ ಇವರು ಮಾತ್ರ ತಮ್ಮ ಕೆಲಸ ನಿಲ್ಲಿಸುವುದಿಲ್ಲ.. ಮನೆಯೊಳಗೆ ಬೆಚ್ಚಗೆ ಮಲಗುವುದಿಲ್ಲ..ಅದೆಂತಹದ್ದೇ ಪರಿಸ್ಥಿತಿಯಿರಲಿ ಕೈಯಲ್ಲಿ ಪೊರಕೆ ಹಿಡಿದು ರಸ್ತೆಗೆ ಇಳಿಯುತ್ತಾರೆ. ಒಂದು ದಿನ ಇವರ್‍ಯಾರೂ ಕೆಲಸ ಮಾಡದಿದ್ದರೇ, ಬೀದಿಗಿಳಿಯದಿದ್ದರೇ ನಾವ್ಯಾರೂ ರಸ್ತೆಗಳಲ್ಲಿ, ಮಾರ್ಕೆಟ್‌ಗಳಲ್ಲಿ, ಬಸ್ ನಿಲ್ದಾಣಗಳ್ಲಲಿ ಓಡಾಡಲು ಸಾಧ್ಯವೇ ಇಲ್ಲ. ಹೌದು ಇವರೇ ನಮ್ಮ ನಗರಗಳನ್ನು ಸ್ವಚ್ಛಗೊಳಿಸಿ ನಮಗಾಗಿ ತಮ್ಮ ಸುರಕ್ಷತೆಯನ್ನೂ ಬದಿಗಿಟ್ಟ ಪೌರಕಾರ್ಮಿಕರು. ಅರ್ಥಾಥ್ ಸಾಮಾಜಿಕ ವೈದ್ಯರು.

ನಮ್ಮ ನಗರಗಳು, ನಮ್ಮ ಮನೆಯ ಬೀದಿಗಳು, ನಾವು ಓಡಾಡುವ ಸ್ಥಳಗಳು ಸ್ವಚ್ಛವಾಗಿರಲು ಇವರೇ ಪ್ರಮುಖ ಕಾರಣಕರ್ತರು. ಇಂದು ಇವರ ದಿನ. ಅಂದರೆ ಪೌರಕಾರ್ಮಿಕರ ದಿನ. ಈ ದಿನದ ನೆಪದಲ್ಲೊಮ್ಮೆ ಇವರನ್ನ ನೆನಪಿಸಿಕೊಳ್ಳುವ..

ನಾವು ಗಣೇಶ ಹಬ್ಬ, ದೀಪಾವಳಿ ಮಾಡಿ ರಸ್ತೆಗಳಲ್ಲಿ ಕಸ ಎಸೆದು ಮನೆಗೆ ಹೋಗುತ್ತಿವೆ. ಬೆಳಗ್ಗೆ ಆ ಕಸ ಕಾಣಿಸುವುದಿಲ್ಲ ಎಂದರೇ ಅದಕ್ಕೆ ಇವರೆ ಕಾರಣ. ನಾವು ಕೆಲಸಕ್ಕೆ ಹೋಗುತ್ತೇವೆ, ನಮಗೆ ವಾರದ ರಜೆ, ಹಬ್ಬಗಳ ರಜೆ ಎಂಬ ಸವಲತ್ತುಗಳು ಇವೆ ಅಲ್ಲವೇ? ಮಹಿಳಾ ಉದ್ಯೋಗಿಗಳಿಗೆ ಹೆರಿಗೆ ರಜೆಯಾದ್ರೂ ಇರುತ್ತೆ ಅಲ್ಲವೇ.. ಆದ್ರೆ ವಿಪರ್ಯಾಸ ನೋಡಿ ಇವರ್‍ಯಾರಿಗೂ ರಜೆ ಎಂಬುದೇ ಇಲ್ಲ..ರಜೆ ಬೇಕಿದ್ದರೇ ಸಂಬಳ ಕೇಳೋ ಹಾಗಿಲ್ಲ ಅಷ್ಟೆ..

ಇದನ್ನೂ ಓದಿ: ಪೌರಕಾರ್ಮಿಕರಿಗೂ ಕೊರೊನ ಸೋಂಕು; ಸಮುದಾಯದ ನಡುವೆ ಹರಡುವ ಆತಂಕದಲ್ಲಿ ಕುಟುಂಬಗಳು

ಪೌರಕಾರ್ಮಿಕರ ಪರಿಸ್ಥಿತಿ ಹೇಗಿರುತ್ತೇ ಗೊತ್ತಿದ್ಯಾ..? ಬೆಳಗ್ಗೆ 5-6 ಗಂಟೆಗೆ ಕೆಲಸಕ್ಕೆ ಹಾಜರಾಗುವ ಇವರಿಗೆ ಕುಡಿಯಲು ನೀರು, ಬಳಸಲು ಶೌಚಾಲಯ, ಬಟ್ಟೆ ಬದಲಿಸಲು ಒಂದು ಪುಟ್ಟ ಕೊಠಡಿ ಸಹ ಇರಲ್ಲ. ಅದರಲ್ಲೂ ಮಹಿಳಾ ಪೌರಕಾರ್ಮಿಕರ ಪರಿಸ್ಥಿತಿ ಊಹಿಸಲಸಾಧ್ಯ..

PC: eesanje

ಆಶ್ಚರ್ಯದ ವಿಷಯವೆಂದರೇ ಪೌರಕಾರ್ಮಿಕರಿಗೆ ಪೌರಕಾರ್ಮಿಕರ ದಿನ ಇದೆ ಎಂಬುದೇ ಒಂದು ನಗೆಪಾಟಿಲಿನ ಸಂಗತಿ ಎಂದರೆ ನೀವು ನಂಬಲೇಬೇಕು. ನಮಗೆ ಅಂತಾ ದಿನ ಇದ್ಯಾ ಎಂದು ಕೇಳುತ್ತಾರೆ ಈ ಕಾರ್ಮಿಕರು. ಹಾಗಾದ್ರೆ ಈ ಪೌರಕಾರ್ಮಿಕ ಸಂಘಟನೆ ಮುಖಂಡರು ಏನಂತಾರೆ.. ನೀವೇ ಓದಿ

ಈ ಕುರಿತು ನಾನುಗೌರಿ.ಕಾಂ ಎಐಸಿಸಿಟಿಯು ನೇತೃತ್ವದ ಬಿಬಿಎಂಪಿ ಪೌರಕಾರ್ಮಿಕರ ಸಂಘದ ಅಧ್ಯಕ್ಷೆ ನಿರ್ಮಲಾರವರನ್ನು ಮಾತನಾಡಿಸಿತು. “ಪೌರಕಾರ್ಮಿಕರ ದಿನಾಚರಣೆ ಅಂದ್ರೆ ನಮಗೆ ಆಶ್ಚರ್ಯ ಆಗ್ತದೆ. ದಿನ ಕೆಲಸ ಮಾಡಿ ಮನೆಗೆ ಹೋಗುವ ನಮ್ಮ ಕಾರ್ಮಿಕರಿಗೆ ಈ ದಿನವೆಲ್ಲಾ ಗೊತ್ತಿರುವುದಿಲ್ಲ. ಮೇ 1ರ ಕಾರ್ಮಿಕರ ದಿನಾಚರಣೆಯಷ್ಟೇ ನಮ್ಮ ಕಾರ್ಮಿಕರಿಗೆ ಗೊತ್ತಿರುವುದು. ಪೌರಕಾರ್ಮಿಕ ದಿನಾಚರಣೆಗಳು ನಮ್ಮ ಕಾರ್ಮಿಕರ ಬದುಕಿನಲ್ಲಿ ಯಾವ ಬದಲಾವಣೆಯನ್ನು ತಂದಿಲ್ಲ. ಪ್ರಧಾನಿಗಳು ಕಾರ್ಮಿಕರ ದಿನ ಅಂತಾ 4 ಜನ ಪೌರಕಾರ್ಮಿಕರ ಕಾಲು ತೊಳೆದರೆ, ನಾವು ದೇವರಾಗುವುದಿಲ್ಲ ಅಲ್ವಾ..?” ಎಂದು ಪ್ರಶ್ನಿಸುತ್ತಾರೆ.

ಕೊರೊನಾ ಸಮಯದಲ್ಲಿ ಪ್ರತಿದಿನ ಪೌರಕಾರ್ಮಿಕರಿಗೆ 100 ರೂಪಾಯಿ ಬಸ್ ಚಾರ್ಜ್‌ ಕೊಡುವುದಾಗಿ ಬಿಬಿಎಂಪಿ ಭರವಸೆ ನೀಡಿತ್ತು. ಆದ್ರೆ ಅದನ್ನೂ ಕೊಟ್ಟಿಲ್ಲ. ದಿನಪ್ರತಿ ದುಡಿಯುತ್ತಿರುವ ಪೌರಕಾರ್ಮಿಕರ ಆರೋಗ್ಯ ಸಮಸ್ಯೆಗಳು ಹೆಚ್ಚಾಗಿವೆ. ನಾವು ಹಲವು ಬಾರಿ ಹೋರಾಟ ಮಾಡಿದ ಪರಿಣಾಮ ಕೇವಲ ಮಾಸ್ಕ್, ಸ್ಯಾನಿಟೈಜರ್‌ ಕೆಲವರಿಗೆ ಸಿಕ್ಕಿವೆ ಅಷ್ಟೇ. ಕೊರೊನಾ ಹಾಟ್‌ಸ್ಪಾಟ್‌ಗಳಲ್ಲೇ ಇವರಿಗೆ ಪಿಪಿಇ ಕಿಟ್ ಕೊಟ್ಟಿಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದರು.

ಆರ್‌.ಟಿ.ನಗರದಲ್ಲಿ ಪೌರಕಾರ್ಮಿಕರಾಗಿ ಕೆಲಸ ನಿರ್ವಹಿಸುವ ಗಂಗಮ್ಮ ಹೇಳುತ್ತಾರೆ, “ಕೊರೊನಾ ಬಂದಾಗಿನಿಂದ ಎಲ್ಲರು ಭಯಪಟ್ತಿದ್ದಾರೆ. ಆದ್ರೆ ನಮಗೆ ಮಾಸ್ಕ್, ಸ್ಯಾನಿಟೈಜರ್‌, ಪಿಪಿಇ ಕಿಟ್ ಯಾವುದು ಸರಿಯಾಗಿ ಸಿಕ್ಕಿಲ್ಲ. ಕೊಡಿ ಅಂತಾ ಎಷ್ಟೋ ಬಾರಿ ಕೇಳಿದ್ರೂ ಬರಿ ಭರವಸೆ ನೀಡ್ತಾರೆ. ನಮಗೆ ಕೆಲಸ ಮಾಡುವ ಸ್ಥಳದಲ್ಲಿ ವಾಶ್‌ ರೂಂ ಇಲ್ಲ, ಬಟ್ಟೆ ಬದಲಿಸೋಕೆ ಸ್ಥಳ ಇರಲ್ಲ. ಒಂದು ದಿನ ಕೂಡ ರಜೆ ಇಲ್ಲದೆ ಕೆಲಸ ಮಾಡುವವರಿಗೆ ಯಾವ ಸೌಲಭ್ಯ ಕೂಡ ಇಲ್ಲ. ಒಂದು ದಿನ ರಜೆ ತಗೊಂಡರು ಆ ದಿನದ ಸಂಬಳ ಕಟ್ ಮಾಡ್ತಾರೆ ಎಂದು ನೋವು ತೋಡಿಕೊಳ್ಳುತ್ತಾರೆ ಗಂಗಮ್ಮ.

ಇದನ್ನೂ ಓದಿ: ಪೌರಕಾರ್ಮಿಕರನ್ನು ಪರಿಸರದ ಡಾಕ್ಟರುಗಳನ್ನಾಗಿಸಿದ ಶಿಕ್ಷಕ ನಾಗರಾಜ ಬಂಜಾರ

ಪೌರಕಾರ್ಮಿಕರೆಂದರೆ ಹಕ್ಕು ಇಲ್ಲದೆ ಇರುವ ಮನುಷ್ಯರು ಎಂದೇ ಅರ್ಥ ಎನ್ನುತ್ತಾರೆ ಗುತ್ತಿಗೆ ಪೌರ ಕಾರ್ಮಿಕರ ಸಂಘದ ಅಧ್ಯಕ್ಷ ಕಾಮ್ರೆಡ್ ಬಾಲನ್. ಮಹಿಳೆಯರ ಹಕ್ಕು, ಮಾನವ ಹಕ್ಕುಗಳು ಯಾವುದೂ ಇಲ್ಲದೆ ಬರುಕುತ್ತಿರುವ ಕಾರ್ಮಿಕರು ಇವರು. ಖಾಯಂ ನೌಕರರು ಮಾಡುವ ಕೆಲಸವೇ ಗುತ್ತಿಗೆ ನೌಕರರು ಮಾಡುತ್ತಾರೆ ಆದ್ರೆ ಸಂಬಳದಲ್ಲಿ ಮಾತ್ರ ತಾರತಮ್ಯ ಇದೆ. ಅವರನ್ನು ಖಾಯಂ ಮಾಡಲು ಹೈಕೋರ್ಟ್ ಆದೇಶ ನೀಡಿತ್ತು. ಆದ್ರೆ ಸರ್ಕಾರ ಹೈಕೋರ್ಟ್ ಆದೇಶ ಕೂಡ ಜಾರಿಗೊಳಿಸಲಿಲ್ಲ. ದಿನಾಚರಣೆಗಳ ಬದಲು ಅವರಿಗೆ ಇರಲು ಮನೆ ಕೊಡಲಿ, ಅವರ ಕೆಲಸ ಖಾಯಂ ಮಾಡಲಿ, ಹೆರಿಗೆ ರಜೆ ನೀಡಲಿ ಎನ್ನುತ್ತಾರೆ ಕಾಮ್ರೆಡ್ ಬಾಲನ್.

ಇಡೀ ಸಮಾಜವೇ ಇವರನ್ನು ದೂರ ಇಟ್ಟಿದೆ. ಸಮಾಜದ ಜನ ಇವರನ್ನು ಮನುಷ್ಯರು ಎಂದೇ ಪರಿಗಣಿಸುವುದಿಲ್ಲ. 4 ಜನ ಪೌರಕಾರ್ಮಿಕರ ಕಾಲು ತೊಳೆದು ದಿನಾಚರಣೆ ಮಾಡಿದರೇ ಪ್ರತಿ ದಿನ ಹೊಲಸು ಗುಂಡಿಯಲ್ಲಿ ಬೀಳುವುದು ತಪ್ಪುತ್ತದೇಯೇ? ಅವರಿಗೆ ಸೂಕ್ತ ಸೌಲಭ್ಯ ನೀಡಲಿ ಸಾಕು. ಎಲ್ಲಾ ಮಹಿಳೆಯರಿಗೆ ಸಿಗುವ ಕನಿಷ್ಠ ಹೆರಿಗೆ ರಜೆ ಕೂಡ ಇವರಿಗೆ ಇಲ್ಲ. ಸರ್ಕಾರ ಮಾಡುವ ಇಂತಹ ದಿನಾಚರಣೆಗಳು ಬರಿ ಬೋಗಸ್ ಎಂದು ಬಾಲನ್ ಕಿಡಿಕಾರುತ್ತಾರೆ.

PC: ThePrint

ಮಾಜಿ ಮುಖ್ಯಮಂತ್ರಿ ಎಚ್‌.ಡಿ.ಕುಮಾರಸ್ವಾಮಿ ಇಂದು ಪೌರಕಾರ್ಮಿಕರ ದಿನದ ಶುಭಾಷಯ ತಿಳಿಸಿದ್ದಾರೆ. ಸರಣಿ ಟ್ವೀಟ್‌ಗಳನ್ನು ಮಾಡಿರುವ ಕುಮಾರಸ್ವಾಮಿ, ಆರೋಗ್ಯ ಪೂರ್ಣ ಸಮಾಜ ನಿರ್ಮಾಣಕ್ಕೆ ತ್ಯಾಗ, ಸೇವೆ, ಸಮರ್ಪಣೆ, ಕಾರುಣ್ಯದಿಂದ ಸದಾ ಜೀವ ತೇಯುತ್ತಿರುವ ಪೌರಕಾರ್ಮಿಕರನ್ನು ಈ ಸಮಾಜ ಪ್ರತಿಕ್ಷಣವು ತಾಯ್ತನದಿಂದ ಕಾಣುವುದೇ ನಾವು ಅವರಿಗೆ ಸಲ್ಲಿಸಬಹುದಾದ ದೊಡ್ಡ ಕೃತಜ್ಞತೆ ಎಂದಿದ್ದಾರೆ.

 

ರಾಜ್ಯದಲ್ಲಿ ಸುಮಾರು 45 ಸಾವಿರಕ್ಕೂ ಹೆಚ್ಚು ಮಂದಿ ಗುತ್ತಿಗೆ ಪೌರಕಾರ್ಮಿಕರಿದ್ದಾರೆ. ಇವರ ಕೆಲಸ, ಖಾಯಂ ನೌಕರರ ಕೆಲಸ ಒಂದೇ ಆಗಿದ್ದರೂ ಸಂಬಳ ಮಾತ್ರ ಬೇರೆ ಬೇರೆ. ಈ ಬಗ್ಗೆ ಸರ್ಕಾರ ಯಾವುದೇ ಕ್ರಮ ಕೈಗೊಂಡಿಲ್ಲ. ಗುತ್ತಿಗೆದಾರರೂ ಕೂಡ ಗುತ್ತಿಗೆ ಕಾರ್ಮಿಕರಿಗೆ ಸರಿಯಾದ  ಆರೋಗ್ಯ ವ್ಯವಸ್ಥೆ ಮಾಡುವುದಿಲ್ಲ. ಇನ್ನೂ ಸರ್ಕಾರ ಕೊರೊನಾ ಕಾಲದಲ್ಲಿ ಸ್ವಚ್ಛತೆಗೆ ಪ್ರಾಧಾನ್ಯತೆ ನೀಡುವ ಪೌರಕಾರ್ಮಿಕರ ಆರೋಗ್ಯದ ಬಗ್ಗೆ ಗಮನ ಹರಿಸುತ್ತಿಲ್ಲ. ಇವರೆಗೆ 4 ಮಂದಿ ಪೌರಕಾರ್ಮಿಕರು ಕೊರೊನಾಗೆ ಬಲಿಯಾಗಿದ್ದಾರೆ. ಒಂದು ವರದಿಯ ಪ್ರಕಾರ ಪೌರಕಾರ್ಮಿಕರ ಸರಾಸರಿ ವಯಸ್ಸು 40 ವರ್ಷ ಎಂದು ಗುರುತಿಸಲಾಗಿದೆ. ಸರ್ಕಾರ ಈಗಲಾದರೂ ಎಚ್ಚೆತ್ತುಕೊಳ್ಳುವುದೇ?


ಇದನ್ನೂ ಓದಿ: ಕೋವಿಡ್‌ಗೆ ಬಲಿಯಾದ ಪೌರಕಾರ್ಮಿಕರಿಗೆ ಶ್ರದ್ಧಾಂಜಲಿ: ಕಾಳಜಿ ವಹಿಸದ ಸರ್ಕಾರದ ವಿರುದ್ಧ ಪ್ರತಿಭಟನೆಗೆ ನಿರ್ಧಾರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿಯಿದೆ : ಅಖಿಲೇಶ್ ಯಾದವ್ ವ್ಯಂಗ್ಯ

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿ ನಡೆಯುತ್ತಿದೆ ಎಂದು ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ವ್ಯಂಗ್ಯವಾಡಿದ್ದಾರೆ. ಬಿಜೆಪಿ ನಾಯಕರು ಹಾಗೂ ಅವರ ಸಹವರ್ತಿಗಳ ಭ್ರಷ್ಟಾಚಾರ ಮತ್ತು ದುರ್ನಡತೆಯ ಪ್ರಕರಣಗಳು...

ಅಂತರ್ಧರ್ಮೀಯ ‘ಲಿವ್-ಇನ್’ ಸಂಬಂಧ ಅಪರಾಧವಲ್ಲ: ಅಲಹಾಬಾದ್ ಹೈಕೋರ್ಟ್

ಅಂತರ್ಧರ್ಮೀಯ ಲಿವ್-ಇನ್ ಸಂಬಂಧವನ್ನು ನಿಷೇಧಿಸಲಾಗಿಲ್ಲ ಅಥವಾ ಯಾವುದೇ ಕಾನೂನಿನ ಅಡಿಯಲ್ಲಿ ಅಪರಾಧವಲ್ಲಎಂದು ತೀರ್ಪು ನೀಡಿರುವ ಅಲಹಾಬಾದ್ ಹೈಕೋರ್ಟ್, ಮಹಿಳೆಯ ಕುಟುಂಬದಿಂದ ಬೆದರಿಕೆ ಎದುರಿಸುತ್ತಿರುವ ದಂಪತಿಗಳಿಗೆ ರಕ್ಷಣೆ ನೀಡಿದೆ. ಸೋನ್‌ಭದ್ರಾದ ಕಾಜಲ್ ಪ್ರಜಾಪತಿ ಮತ್ತು ಅವರ...

‘ವೇತನ ಸಹಿತ ಪಿತೃತ್ವ ರಜೆಯನ್ನು ಕಾನೂನುಬದ್ಧಗೊಳಿಸಬೇಕು’; ರಾಜ್ಯಸಭೆಯಲ್ಲಿ ಎಎಪಿ ಸಂಸದ ರಾಘವ್ ಚಡ್ಡಾ ಒತ್ತಾಯ

ಭಾರತದಲ್ಲಿ ವೇತನ ಸಹಿತ ಪಿತೃತ್ವ ರಜೆಯನ್ನು ಕಾನೂನುಬದ್ಧ ಹಕ್ಕನ್ನಾಗಿ ಮಾಡಲು, ಹಂಚಿಕೆಯ ಆರೈಕೆ ಜವಾಬ್ದಾರಿಗಳನ್ನು ಒತ್ತಿಹೇಳಲು ಕಾನೂನನ್ನು ಜಾರಿಗೆ ತರಬೇಕೆಂದು ಎಎಪಿ ಸಂಸದ ರಾಘವ್ ಚಡ್ಡಾ ಒತ್ತಾಯಿಸಿದ್ದಾರೆ. ರಾಜ್ಯಸಭೆಯಲ್ಲಿ ಮಾತನಾಡಿದ ಅವರು, ತಂದೆ ಉದ್ಯೋಗ...

ಬಿಜೆಪಿ ಇತರ ರಾಜ್ಯಗಳ ಅಕ್ರಮ ಮತದಾರರನ್ನು ಸೇರಿಸುತ್ತಿದೆ : ಮಮತಾ ಬ್ಯಾನರ್ಜಿ ಆರೋಪ

ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಮಂಗಳವಾರ (ಮಾ.31) ಬಿಜೆಪಿ ಬಿಹಾರ, ರಾಜಸ್ಥಾನ, ಹರಿಯಾಣ ಮತ್ತು ಉತ್ತರ ಪ್ರದೇಶದ ಅಕ್ರಮ ಮತದಾರರನ್ನು ರಾಜ್ಯದ ಮತದಾರರ ಪಟ್ಟಿಯಲ್ಲಿ ಸೇರಿಸಲು ಪ್ರಯತ್ನಿಸುತ್ತಿದೆ ಎಂದು ಆರೋಪಿಸಿದರು. ಪಶ್ಚಿಮ...

ಬಿಹಾರ: ವಿವಾಹಿತ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರಕ್ಕೆ ಯತ್ನ; ಹಲ್ಲೆ ಮಾಡಿ ವಿಡಿಯೋ ಹರಿಬಿಟ್ಟ ದುಷ್ಟರು: ಇಬ್ಬರ ಬಂಧನ 

ಬಿಹಾರದ ನಳಂದ ಜಿಲ್ಲೆಯಲ್ಲಿ ನಾಚಿಕೆಗೇಡಿನ ಮತ್ತು ಆತಂಕಕಾರಿ ಘಟನೆಯೊಂದು ಬೆಳಕಿಗೆ ಬಂದಿದೆ. ನೂರ್ಸರಾಯ್ ಪೊಲೀಸ್ ಠಾಣೆ ವ್ಯಾಪ್ತಿಯ ಹಳ್ಳಿಯೊಂದರಲ್ಲಿ ಮೂವರು ಪುರುಷರು ವಿವಾಹಿತ ಮಹಿಳೆಯ ಮೇಲೆ ಸಾರ್ವಜನಿಕವಾಗಿ ಸಾಮೂಹಿಕ ಅತ್ಯಾಚಾರಕ್ಕೆ ಯತ್ನಿಸಿದ್ದಾರೆ. ದೌರ್ಜನ್ಯ ವಿರೋಧಿಸಿ...

‘ಹಿಂದುತ್ವ ಉಗ್ರವಾದವನ್ನು ಏಕೆ ನಿರ್ಲಕ್ಷಿಸಬೇಕು..?’; ಸಂಸತ್ತಿನಲ್ಲಿ ಪ್ರಶ್ನಿಸಿದ ರುಹುಲ್ಲಾ ಮೆಹದಿ

"ದೇಶದಲ್ಲಿ ಹೆಚ್ಚುತ್ತಿರುವ ಬಲಪಂಥೀಯ ಉಗ್ರವಾದವನ್ನು ನಿರ್ಲಕ್ಷಿಸಿ ಎಡಪಂಥೀಯ ಬೆದರಿಕೆಗಳ ಮೇಲೆ ಮಾತ್ರ ಗಮನಹರಿಸಲಾಗುತ್ತಿದೆ" ಎಂದು ಲೋಕಸಭೆಯಲ್ಲಿ ಜಮ್ಮು-ಕಾಶ್ಮೀರದ ಶ್ರೀನಗರ ಸಂಸದ ಆಗಾ ಸೈಯದ್ ರುಹುಲ್ಲಾ ಮೆಹದಿ ನರೇಂದ್ರ ಮೋದಿ ನೇತೃತ್ವದ ಸರ್ಕಾರದ ಮೇಲೆ...

ವಿರೋಧದ ನಡುವೆಯೂ ಟ್ರಾನ್ಸ್‌ಜೆಂಡರ್ ತಿದ್ದುಪಡಿ ಮಸೂದೆಗೆ ರಾಷ್ಟ್ರಪತಿ ಅಂಕಿತ

ತೀವ್ರ ವಿರೋಧಗಳ ನಡುವೆಯೂ ಟ್ರಾನ್ಸ್‌ಜೆಂಡರ್‌ ವ್ಯಕ್ತಿಗಳ (ಹಕ್ಕುಗಳ ರಕ್ಷಣೆ) ತಿದ್ದುಪಡಿ ಮಸೂದೆಗೆ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಅಂಕಿತ ಹಾಕಿದ್ದಾರೆ ಎಂದು ಕೇಂದ್ರ ಕಾನೂನು ಸಚಿವಾಲಯ ಸೋಮವಾರ (ಮಾ. 30) ಗೆಜೆಟ್ ಅಧಿಸೂಚನೆಯಲ್ಲಿ...

ಮಶಾದ್ ವಿಮಾನ ನಿಲ್ದಾಣದ ಮೇಲೆ ಅಮೆರಿಕ ದಾಳಿ: ದೆಹಲಿಗೆ ತೆರಳುತ್ತಿದ್ದ ನೆರವು ವಿಮಾನಕ್ಕೆ ಡಿಕ್ಕಿ: ಇದು ‘ಯುದ್ಧ ಅಪರಾಧ’ ಎಂದ ಇರಾನ್ 

ಇರಾನ್‌ನ ಮಶಾದ್ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಅಮೆರಿಕದ ವಾಯುದಾಳಿಯ ಸಂದರ್ಭದಲ್ಲಿ ನವದೆಹಲಿಗೆ ಹಾರಲು ನಿಗದಿಯಾಗಿದ್ದ ಮಹಾನ್ ಏರ್ ವಿಮಾನವು ಡಿಕ್ಕಿ ಹೊಡೆದಿದೆ ಎಂದು ವರದಿಯಾಗಿದೆ.  ಈ ವಿಮಾನವು ಔಷಧಿಗಳು ಸೇರಿದಂತೆ ಮಾನವೀಯ ನೆರವು ಸಾಗಣೆಗೆ...

ಪ್ಯಾಲೆಸ್ತೀನಿಯರಿಗೆ ಮರಣದಂಡನೆ ವಿಧಿಸುವ ಕಾನೂನು ಅಂಗೀಕಾರ : ಇಸ್ರೇಲ್ ಕ್ರಮಕ್ಕೆ ಜಾಗತಿಕ ಖಂಡನೆ

ಮಾರಣಾಂತಿಕ ದಾಳಿಗಳ ಅಪರಾಧ ಸಾಬೀತಾದ ಪ್ಯಾಲೆಸ್ತೀನಿಯರಿಗೆ ಮರಣದಂಡನೆಯನ್ನು ಕಡ್ಡಾಯ ಶಿಕ್ಷೆಯನ್ನಾಗಿ ನಿಗದಿಪಡಿಸಿದ ಇಸ್ರೇಲ್‌ನ ಹೊಸ ಕಾನೂನನ್ನು ಮಾನವ ಹಕ್ಕುಗಳ ಸಂಘಟನೆಗಳು, ವಿವಿಧ ರಾಷ್ಟ್ರಗಳ ನಾಯಕರು ಸೇರಿದಂತೆ ಜಾಗತಿಕ ಸಮುಯದಾಯ ತೀವ್ರವಾಗಿ ವಿರೋಧಿಸಿದೆ. ಈ...

ಬರೇಲಿ: ಮುಸ್ಲಿಂ ಯುವಕರ ಮೇಲೆ ಹಲ್ಲೆ, ಹಿಂದುತ್ವ ಘೋಷಣೆಗಳನ್ನು ಪಠಿಸುವಂತೆ ಬಲವಂತ; ಪ್ರಮುಖ ಆರೋಪಿ ಬಂಧನ

ಉತ್ತರ ಪ್ರದೇಶದ ಬರೇಲಿಯಲ್ಲಿ ಮುಸ್ಲಿಂ ಯುವಕನ ಮೇಲೆ ಹಲ್ಲೆ, ಅವಮಾನ ಮತ್ತು ಹಿಂದುತ್ವ ಘೋಷಣೆಗಳನ್ನು ಪಠಿಸುವಂತೆ ಒತ್ತಾಯಿಸಲಾಗಿದೆ ಎಂದು ಆರೋಪಿಸಲಾಗಿದೆ. ಪ್ರಮುಖ ಆರೋಪಿ ರಿಷಭ್ ಠಾಕೂರ್ ನನ್ನು ಪೊಲೀಸರು ಬಂಧಿಸಿದ್ದು, ಮತ್ತಷ್ಟು ಬಂಧನಗಳು ನಡೆಯುವ...