Homeಚಳವಳಿಪೌರಕಾರ್ಮಿಕರ ದಿನ: ಸಂಭ್ರಮಾಚರಣೆ ಬೇಡ, ಕನಿಷ್ಠ ಸೌಲಭ್ಯ ನೀಡಿ...

ಪೌರಕಾರ್ಮಿಕರ ದಿನ: ಸಂಭ್ರಮಾಚರಣೆ ಬೇಡ, ಕನಿಷ್ಠ ಸೌಲಭ್ಯ ನೀಡಿ…

ರಾಜ್ಯದಲ್ಲಿ ಸುಮಾರು 45 ಸಾವಿರಕ್ಕೂ ಹೆಚ್ಚು ಮಂದಿ ಗುತ್ತಿಗೆ ಪೌರಕಾರ್ಮಿಕರಿದ್ದಾರೆ. ಇವರ ಕೆಲಸ, ಖಾಯಂ ನೌಕರರ ಕೆಲಸ ಒಂದೇ ಆಗಿದ್ದರೂ ಸಂಬಳ ಮಾತ್ರ ಬೇರೆ ಬೇರೆ. ಈ ಬಗ್ಗೆ ಸರ್ಕಾರ ಯಾವುದೇ ಕ್ರಮ ಕೈಗೊಂಡಿಲ್ಲ.

- Advertisement -
- Advertisement -

ಮಳೆ, ಚಳಿ, ಬಿಸಿಲು ಏನೇ ಇರಲಿ ಅಥವಾ ಕೊರೊನಾದಂತಹ ದೊಡ್ಡ ದೊಡ್ಡ ಸಾಂಕ್ರಾಮಿಕ ರೋಗಗಳೆ ಬರಲಿ ಇವರು ಮಾತ್ರ ತಮ್ಮ ಕೆಲಸ ನಿಲ್ಲಿಸುವುದಿಲ್ಲ.. ಮನೆಯೊಳಗೆ ಬೆಚ್ಚಗೆ ಮಲಗುವುದಿಲ್ಲ..ಅದೆಂತಹದ್ದೇ ಪರಿಸ್ಥಿತಿಯಿರಲಿ ಕೈಯಲ್ಲಿ ಪೊರಕೆ ಹಿಡಿದು ರಸ್ತೆಗೆ ಇಳಿಯುತ್ತಾರೆ. ಒಂದು ದಿನ ಇವರ್‍ಯಾರೂ ಕೆಲಸ ಮಾಡದಿದ್ದರೇ, ಬೀದಿಗಿಳಿಯದಿದ್ದರೇ ನಾವ್ಯಾರೂ ರಸ್ತೆಗಳಲ್ಲಿ, ಮಾರ್ಕೆಟ್‌ಗಳಲ್ಲಿ, ಬಸ್ ನಿಲ್ದಾಣಗಳ್ಲಲಿ ಓಡಾಡಲು ಸಾಧ್ಯವೇ ಇಲ್ಲ. ಹೌದು ಇವರೇ ನಮ್ಮ ನಗರಗಳನ್ನು ಸ್ವಚ್ಛಗೊಳಿಸಿ ನಮಗಾಗಿ ತಮ್ಮ ಸುರಕ್ಷತೆಯನ್ನೂ ಬದಿಗಿಟ್ಟ ಪೌರಕಾರ್ಮಿಕರು. ಅರ್ಥಾಥ್ ಸಾಮಾಜಿಕ ವೈದ್ಯರು.

ನಮ್ಮ ನಗರಗಳು, ನಮ್ಮ ಮನೆಯ ಬೀದಿಗಳು, ನಾವು ಓಡಾಡುವ ಸ್ಥಳಗಳು ಸ್ವಚ್ಛವಾಗಿರಲು ಇವರೇ ಪ್ರಮುಖ ಕಾರಣಕರ್ತರು. ಇಂದು ಇವರ ದಿನ. ಅಂದರೆ ಪೌರಕಾರ್ಮಿಕರ ದಿನ. ಈ ದಿನದ ನೆಪದಲ್ಲೊಮ್ಮೆ ಇವರನ್ನ ನೆನಪಿಸಿಕೊಳ್ಳುವ..

ನಾವು ಗಣೇಶ ಹಬ್ಬ, ದೀಪಾವಳಿ ಮಾಡಿ ರಸ್ತೆಗಳಲ್ಲಿ ಕಸ ಎಸೆದು ಮನೆಗೆ ಹೋಗುತ್ತಿವೆ. ಬೆಳಗ್ಗೆ ಆ ಕಸ ಕಾಣಿಸುವುದಿಲ್ಲ ಎಂದರೇ ಅದಕ್ಕೆ ಇವರೆ ಕಾರಣ. ನಾವು ಕೆಲಸಕ್ಕೆ ಹೋಗುತ್ತೇವೆ, ನಮಗೆ ವಾರದ ರಜೆ, ಹಬ್ಬಗಳ ರಜೆ ಎಂಬ ಸವಲತ್ತುಗಳು ಇವೆ ಅಲ್ಲವೇ? ಮಹಿಳಾ ಉದ್ಯೋಗಿಗಳಿಗೆ ಹೆರಿಗೆ ರಜೆಯಾದ್ರೂ ಇರುತ್ತೆ ಅಲ್ಲವೇ.. ಆದ್ರೆ ವಿಪರ್ಯಾಸ ನೋಡಿ ಇವರ್‍ಯಾರಿಗೂ ರಜೆ ಎಂಬುದೇ ಇಲ್ಲ..ರಜೆ ಬೇಕಿದ್ದರೇ ಸಂಬಳ ಕೇಳೋ ಹಾಗಿಲ್ಲ ಅಷ್ಟೆ..

ಇದನ್ನೂ ಓದಿ: ಪೌರಕಾರ್ಮಿಕರಿಗೂ ಕೊರೊನ ಸೋಂಕು; ಸಮುದಾಯದ ನಡುವೆ ಹರಡುವ ಆತಂಕದಲ್ಲಿ ಕುಟುಂಬಗಳು

ಪೌರಕಾರ್ಮಿಕರ ಪರಿಸ್ಥಿತಿ ಹೇಗಿರುತ್ತೇ ಗೊತ್ತಿದ್ಯಾ..? ಬೆಳಗ್ಗೆ 5-6 ಗಂಟೆಗೆ ಕೆಲಸಕ್ಕೆ ಹಾಜರಾಗುವ ಇವರಿಗೆ ಕುಡಿಯಲು ನೀರು, ಬಳಸಲು ಶೌಚಾಲಯ, ಬಟ್ಟೆ ಬದಲಿಸಲು ಒಂದು ಪುಟ್ಟ ಕೊಠಡಿ ಸಹ ಇರಲ್ಲ. ಅದರಲ್ಲೂ ಮಹಿಳಾ ಪೌರಕಾರ್ಮಿಕರ ಪರಿಸ್ಥಿತಿ ಊಹಿಸಲಸಾಧ್ಯ..

PC: eesanje

ಆಶ್ಚರ್ಯದ ವಿಷಯವೆಂದರೇ ಪೌರಕಾರ್ಮಿಕರಿಗೆ ಪೌರಕಾರ್ಮಿಕರ ದಿನ ಇದೆ ಎಂಬುದೇ ಒಂದು ನಗೆಪಾಟಿಲಿನ ಸಂಗತಿ ಎಂದರೆ ನೀವು ನಂಬಲೇಬೇಕು. ನಮಗೆ ಅಂತಾ ದಿನ ಇದ್ಯಾ ಎಂದು ಕೇಳುತ್ತಾರೆ ಈ ಕಾರ್ಮಿಕರು. ಹಾಗಾದ್ರೆ ಈ ಪೌರಕಾರ್ಮಿಕ ಸಂಘಟನೆ ಮುಖಂಡರು ಏನಂತಾರೆ.. ನೀವೇ ಓದಿ

ಈ ಕುರಿತು ನಾನುಗೌರಿ.ಕಾಂ ಎಐಸಿಸಿಟಿಯು ನೇತೃತ್ವದ ಬಿಬಿಎಂಪಿ ಪೌರಕಾರ್ಮಿಕರ ಸಂಘದ ಅಧ್ಯಕ್ಷೆ ನಿರ್ಮಲಾರವರನ್ನು ಮಾತನಾಡಿಸಿತು. “ಪೌರಕಾರ್ಮಿಕರ ದಿನಾಚರಣೆ ಅಂದ್ರೆ ನಮಗೆ ಆಶ್ಚರ್ಯ ಆಗ್ತದೆ. ದಿನ ಕೆಲಸ ಮಾಡಿ ಮನೆಗೆ ಹೋಗುವ ನಮ್ಮ ಕಾರ್ಮಿಕರಿಗೆ ಈ ದಿನವೆಲ್ಲಾ ಗೊತ್ತಿರುವುದಿಲ್ಲ. ಮೇ 1ರ ಕಾರ್ಮಿಕರ ದಿನಾಚರಣೆಯಷ್ಟೇ ನಮ್ಮ ಕಾರ್ಮಿಕರಿಗೆ ಗೊತ್ತಿರುವುದು. ಪೌರಕಾರ್ಮಿಕ ದಿನಾಚರಣೆಗಳು ನಮ್ಮ ಕಾರ್ಮಿಕರ ಬದುಕಿನಲ್ಲಿ ಯಾವ ಬದಲಾವಣೆಯನ್ನು ತಂದಿಲ್ಲ. ಪ್ರಧಾನಿಗಳು ಕಾರ್ಮಿಕರ ದಿನ ಅಂತಾ 4 ಜನ ಪೌರಕಾರ್ಮಿಕರ ಕಾಲು ತೊಳೆದರೆ, ನಾವು ದೇವರಾಗುವುದಿಲ್ಲ ಅಲ್ವಾ..?” ಎಂದು ಪ್ರಶ್ನಿಸುತ್ತಾರೆ.

ಕೊರೊನಾ ಸಮಯದಲ್ಲಿ ಪ್ರತಿದಿನ ಪೌರಕಾರ್ಮಿಕರಿಗೆ 100 ರೂಪಾಯಿ ಬಸ್ ಚಾರ್ಜ್‌ ಕೊಡುವುದಾಗಿ ಬಿಬಿಎಂಪಿ ಭರವಸೆ ನೀಡಿತ್ತು. ಆದ್ರೆ ಅದನ್ನೂ ಕೊಟ್ಟಿಲ್ಲ. ದಿನಪ್ರತಿ ದುಡಿಯುತ್ತಿರುವ ಪೌರಕಾರ್ಮಿಕರ ಆರೋಗ್ಯ ಸಮಸ್ಯೆಗಳು ಹೆಚ್ಚಾಗಿವೆ. ನಾವು ಹಲವು ಬಾರಿ ಹೋರಾಟ ಮಾಡಿದ ಪರಿಣಾಮ ಕೇವಲ ಮಾಸ್ಕ್, ಸ್ಯಾನಿಟೈಜರ್‌ ಕೆಲವರಿಗೆ ಸಿಕ್ಕಿವೆ ಅಷ್ಟೇ. ಕೊರೊನಾ ಹಾಟ್‌ಸ್ಪಾಟ್‌ಗಳಲ್ಲೇ ಇವರಿಗೆ ಪಿಪಿಇ ಕಿಟ್ ಕೊಟ್ಟಿಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದರು.

ಆರ್‌.ಟಿ.ನಗರದಲ್ಲಿ ಪೌರಕಾರ್ಮಿಕರಾಗಿ ಕೆಲಸ ನಿರ್ವಹಿಸುವ ಗಂಗಮ್ಮ ಹೇಳುತ್ತಾರೆ, “ಕೊರೊನಾ ಬಂದಾಗಿನಿಂದ ಎಲ್ಲರು ಭಯಪಟ್ತಿದ್ದಾರೆ. ಆದ್ರೆ ನಮಗೆ ಮಾಸ್ಕ್, ಸ್ಯಾನಿಟೈಜರ್‌, ಪಿಪಿಇ ಕಿಟ್ ಯಾವುದು ಸರಿಯಾಗಿ ಸಿಕ್ಕಿಲ್ಲ. ಕೊಡಿ ಅಂತಾ ಎಷ್ಟೋ ಬಾರಿ ಕೇಳಿದ್ರೂ ಬರಿ ಭರವಸೆ ನೀಡ್ತಾರೆ. ನಮಗೆ ಕೆಲಸ ಮಾಡುವ ಸ್ಥಳದಲ್ಲಿ ವಾಶ್‌ ರೂಂ ಇಲ್ಲ, ಬಟ್ಟೆ ಬದಲಿಸೋಕೆ ಸ್ಥಳ ಇರಲ್ಲ. ಒಂದು ದಿನ ಕೂಡ ರಜೆ ಇಲ್ಲದೆ ಕೆಲಸ ಮಾಡುವವರಿಗೆ ಯಾವ ಸೌಲಭ್ಯ ಕೂಡ ಇಲ್ಲ. ಒಂದು ದಿನ ರಜೆ ತಗೊಂಡರು ಆ ದಿನದ ಸಂಬಳ ಕಟ್ ಮಾಡ್ತಾರೆ ಎಂದು ನೋವು ತೋಡಿಕೊಳ್ಳುತ್ತಾರೆ ಗಂಗಮ್ಮ.

ಇದನ್ನೂ ಓದಿ: ಪೌರಕಾರ್ಮಿಕರನ್ನು ಪರಿಸರದ ಡಾಕ್ಟರುಗಳನ್ನಾಗಿಸಿದ ಶಿಕ್ಷಕ ನಾಗರಾಜ ಬಂಜಾರ

ಪೌರಕಾರ್ಮಿಕರೆಂದರೆ ಹಕ್ಕು ಇಲ್ಲದೆ ಇರುವ ಮನುಷ್ಯರು ಎಂದೇ ಅರ್ಥ ಎನ್ನುತ್ತಾರೆ ಗುತ್ತಿಗೆ ಪೌರ ಕಾರ್ಮಿಕರ ಸಂಘದ ಅಧ್ಯಕ್ಷ ಕಾಮ್ರೆಡ್ ಬಾಲನ್. ಮಹಿಳೆಯರ ಹಕ್ಕು, ಮಾನವ ಹಕ್ಕುಗಳು ಯಾವುದೂ ಇಲ್ಲದೆ ಬರುಕುತ್ತಿರುವ ಕಾರ್ಮಿಕರು ಇವರು. ಖಾಯಂ ನೌಕರರು ಮಾಡುವ ಕೆಲಸವೇ ಗುತ್ತಿಗೆ ನೌಕರರು ಮಾಡುತ್ತಾರೆ ಆದ್ರೆ ಸಂಬಳದಲ್ಲಿ ಮಾತ್ರ ತಾರತಮ್ಯ ಇದೆ. ಅವರನ್ನು ಖಾಯಂ ಮಾಡಲು ಹೈಕೋರ್ಟ್ ಆದೇಶ ನೀಡಿತ್ತು. ಆದ್ರೆ ಸರ್ಕಾರ ಹೈಕೋರ್ಟ್ ಆದೇಶ ಕೂಡ ಜಾರಿಗೊಳಿಸಲಿಲ್ಲ. ದಿನಾಚರಣೆಗಳ ಬದಲು ಅವರಿಗೆ ಇರಲು ಮನೆ ಕೊಡಲಿ, ಅವರ ಕೆಲಸ ಖಾಯಂ ಮಾಡಲಿ, ಹೆರಿಗೆ ರಜೆ ನೀಡಲಿ ಎನ್ನುತ್ತಾರೆ ಕಾಮ್ರೆಡ್ ಬಾಲನ್.

ಇಡೀ ಸಮಾಜವೇ ಇವರನ್ನು ದೂರ ಇಟ್ಟಿದೆ. ಸಮಾಜದ ಜನ ಇವರನ್ನು ಮನುಷ್ಯರು ಎಂದೇ ಪರಿಗಣಿಸುವುದಿಲ್ಲ. 4 ಜನ ಪೌರಕಾರ್ಮಿಕರ ಕಾಲು ತೊಳೆದು ದಿನಾಚರಣೆ ಮಾಡಿದರೇ ಪ್ರತಿ ದಿನ ಹೊಲಸು ಗುಂಡಿಯಲ್ಲಿ ಬೀಳುವುದು ತಪ್ಪುತ್ತದೇಯೇ? ಅವರಿಗೆ ಸೂಕ್ತ ಸೌಲಭ್ಯ ನೀಡಲಿ ಸಾಕು. ಎಲ್ಲಾ ಮಹಿಳೆಯರಿಗೆ ಸಿಗುವ ಕನಿಷ್ಠ ಹೆರಿಗೆ ರಜೆ ಕೂಡ ಇವರಿಗೆ ಇಲ್ಲ. ಸರ್ಕಾರ ಮಾಡುವ ಇಂತಹ ದಿನಾಚರಣೆಗಳು ಬರಿ ಬೋಗಸ್ ಎಂದು ಬಾಲನ್ ಕಿಡಿಕಾರುತ್ತಾರೆ.

PC: ThePrint

ಮಾಜಿ ಮುಖ್ಯಮಂತ್ರಿ ಎಚ್‌.ಡಿ.ಕುಮಾರಸ್ವಾಮಿ ಇಂದು ಪೌರಕಾರ್ಮಿಕರ ದಿನದ ಶುಭಾಷಯ ತಿಳಿಸಿದ್ದಾರೆ. ಸರಣಿ ಟ್ವೀಟ್‌ಗಳನ್ನು ಮಾಡಿರುವ ಕುಮಾರಸ್ವಾಮಿ, ಆರೋಗ್ಯ ಪೂರ್ಣ ಸಮಾಜ ನಿರ್ಮಾಣಕ್ಕೆ ತ್ಯಾಗ, ಸೇವೆ, ಸಮರ್ಪಣೆ, ಕಾರುಣ್ಯದಿಂದ ಸದಾ ಜೀವ ತೇಯುತ್ತಿರುವ ಪೌರಕಾರ್ಮಿಕರನ್ನು ಈ ಸಮಾಜ ಪ್ರತಿಕ್ಷಣವು ತಾಯ್ತನದಿಂದ ಕಾಣುವುದೇ ನಾವು ಅವರಿಗೆ ಸಲ್ಲಿಸಬಹುದಾದ ದೊಡ್ಡ ಕೃತಜ್ಞತೆ ಎಂದಿದ್ದಾರೆ.

 

ರಾಜ್ಯದಲ್ಲಿ ಸುಮಾರು 45 ಸಾವಿರಕ್ಕೂ ಹೆಚ್ಚು ಮಂದಿ ಗುತ್ತಿಗೆ ಪೌರಕಾರ್ಮಿಕರಿದ್ದಾರೆ. ಇವರ ಕೆಲಸ, ಖಾಯಂ ನೌಕರರ ಕೆಲಸ ಒಂದೇ ಆಗಿದ್ದರೂ ಸಂಬಳ ಮಾತ್ರ ಬೇರೆ ಬೇರೆ. ಈ ಬಗ್ಗೆ ಸರ್ಕಾರ ಯಾವುದೇ ಕ್ರಮ ಕೈಗೊಂಡಿಲ್ಲ. ಗುತ್ತಿಗೆದಾರರೂ ಕೂಡ ಗುತ್ತಿಗೆ ಕಾರ್ಮಿಕರಿಗೆ ಸರಿಯಾದ  ಆರೋಗ್ಯ ವ್ಯವಸ್ಥೆ ಮಾಡುವುದಿಲ್ಲ. ಇನ್ನೂ ಸರ್ಕಾರ ಕೊರೊನಾ ಕಾಲದಲ್ಲಿ ಸ್ವಚ್ಛತೆಗೆ ಪ್ರಾಧಾನ್ಯತೆ ನೀಡುವ ಪೌರಕಾರ್ಮಿಕರ ಆರೋಗ್ಯದ ಬಗ್ಗೆ ಗಮನ ಹರಿಸುತ್ತಿಲ್ಲ. ಇವರೆಗೆ 4 ಮಂದಿ ಪೌರಕಾರ್ಮಿಕರು ಕೊರೊನಾಗೆ ಬಲಿಯಾಗಿದ್ದಾರೆ. ಒಂದು ವರದಿಯ ಪ್ರಕಾರ ಪೌರಕಾರ್ಮಿಕರ ಸರಾಸರಿ ವಯಸ್ಸು 40 ವರ್ಷ ಎಂದು ಗುರುತಿಸಲಾಗಿದೆ. ಸರ್ಕಾರ ಈಗಲಾದರೂ ಎಚ್ಚೆತ್ತುಕೊಳ್ಳುವುದೇ?


ಇದನ್ನೂ ಓದಿ: ಕೋವಿಡ್‌ಗೆ ಬಲಿಯಾದ ಪೌರಕಾರ್ಮಿಕರಿಗೆ ಶ್ರದ್ಧಾಂಜಲಿ: ಕಾಳಜಿ ವಹಿಸದ ಸರ್ಕಾರದ ವಿರುದ್ಧ ಪ್ರತಿಭಟನೆಗೆ ನಿರ್ಧಾರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

2026ರ ತಮಿಳುನಾಡು ವಿಧಾನಸಭಾ ಚುನಾವಣೆಯ ಫಲಿತಾಂಶ: ರಾಜಕೀಯ ಸ್ಥಿತ್ಯಂತರಗಳ ಅವಲೋಕನ

"2026ರ ತಮಿಳುನಾಡು ವಿಧಾನಸಭಾ ಚುನಾವಣೆಯು ರಾಜ್ಯದ ರಾಜಕೀಯ ಇತಿಹಾಸದ ಹಾದಿಯನ್ನೇ ಬದಲಿಸಿದೆ. ಟಿವಿಕೆ ಪಕ್ಷದ ನಾಯಕ ಜೋಸೆಫ್ ವಿಜಯ್ ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಪದಗ್ರಹಣ ಮಾಡುವ ಮೂಲಕ ದಶಕಗಳ ಕಾಲ ನಡೆದಿದ್ದ ಡಿಎಂಕೆ-ಎಐಎಡಿಎಂಕೆ...

ಬಂಗಾಳದಲ್ಲಿ ‘ಅಧಿಕಾರಿ’ ಆಡಳಿತ: ಜಾತ್ಯತೀತ ಮುಖವಾಡ ಕಳಚಿ ಹಿಂದುತ್ವದ ಅಸ್ತ್ರ ಹಿಡಿದು ಗದ್ದುಗೆ ಏರಿದ ಸುವೇಂದು! 

ಕೋಲ್ಕತ್ತಾ/ನವದೆಹಲಿ: ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಗಾದಿಗೆ ಸುವೇಂದು ಅಧಿಕಾರಿ ಅವರ ಪದಾರ್ಪಣೆಯು, ಹಳೆಯ ಭ್ರಷ್ಟ ವ್ಯವಸ್ಥೆಯನ್ನು ಗುಡಿಸಿ ಹಾಕಲು ಬಂದ 'ಹೊರಗಿನ' ವ್ಯಕ್ತಿಯ ಕಥೆಯಲ್ಲ. ಬದಲಿಗೆ, ಬಂಗಾಳದ ಹಿಂಸಾತ್ಮಕ, ಬಣ ರಾಜಕೀಯ ಮತ್ತು...

ಬಂಗಾಳ ಚುನಾವಣೆ : SIRನಲ್ಲಿ ಅತಿ ಹೆಚ್ಚು ಹೆಸರು ಅಳಿಸಿದ ಕ್ಷೇತ್ರಗಳು ಬಿಜೆಪಿ ಪಾಲು

ಪಶ್ಚಿಮ ಬಂಗಾಳದ ವಿಧಾನಸಭೆ ಚುನಾವಣೆಯಲ್ಲಿ ಭರ್ಜರಿ ಗೆಲುವು ಸಾಧಿಸಿರುವ ಬಿಜೆಪಿ, ಸರ್ಕಾರ ರಚಿಸಲು ಅಣಿಯಾಗಿದೆ. ಈ ನಡುವೆ ಹಲವು ಪ್ರಶ್ನೆಗಳು, ಗೊಂದಲಗಳು ಹಾಗೆಯೇ ಮುಂದುವರಿದಿದೆ. ಚುನಾವಣೆ ಘೋಷಣೆಗೆ ಮುನ್ನವೇ ಬಂಗಾಳದ ಮತದಾರರ ಪಟ್ಟಿಯ ವಿಶೇಷ...

ತಮಿಳುನಾಡು ರಾಜ್ಯಪಾಲರ ನಡೆ ಎಷ್ಟು ಸಮಂಜಸ?

'ಮಳೆ ನಿಂತರೂ ಮರದ ಹನಿ ನಿಲ್ಲಲ್ಲ' ಎಂಬ ಮಾತಿಗೆ ಅನ್ವರ್ಥದಂತೆ ಚುನಾವಣೆ ಮುಗಿದರೂ ಸರ್ಕಾರ ರಚನೆಯ ಸರ್ಕಸ್ ಮಾತ್ರ ನಿಲ್ಲುವ ಸೂಚನೆ ಕಾಣುತ್ತಿಲ್ಲ. ತಮಿಳುನಾಡಿನ ರಾಜಕೀಯ ವಿದ್ಯಮಾನಗಳನ್ನು ನೋಡುತ್ತಿದ್ದರೆ ಅಲ್ಲಿ ನಡೆಯುತ್ತಿರವ ಬೆಳವಣಿಗೆಗಳು...

ಬಿಜೆಪಿಯಿಂದ ಯಡಿಯೂರಪ್ಪ ಅಭಿಮಾನೋತ್ಸವ: ಲಿಂಗಾಯತ ಮತಕ್ಕಾಗಿ ಮಾಸ್ಟರ್ ಫ್ಲಾನ್…?  

ದಕ್ಷಿಣ ಭಾರತದ ರಾಜಕಾರಣದಲ್ಲಿ ಬಿಜೆಪಿ ಎನ್ನುವುದು ಒಂದು ಕಾಲಕ್ಕೆ ಕೇವಲ ನಗರ ಪ್ರದೇಶಗಳಿಗೆ ಸೀಮಿತವಾಗಿದ್ದ ಪಕ್ಷ. ಆದರೆ, ಅದೇ ಬಿಜೆಪಿಯನ್ನು ಕರ್ನಾಟಕದಲ್ಲಿ ಬೇರೂರುವಂತೆ ಮಾಡಿದ್ದು ಬೂಕನಕೆರೆ ಸಿದ್ದಲಿಂಗಪ್ಪ ಯಡಿಯೂರಪ್ಪ ಅಂದರೆ ಬಿ.ಎಸ್. ಯಡಿಯೂರಪ್ಪ....

ವಿಜಯ್ ಹೇಳಿದ ಭ್ರಷ್ಟಾಚಾರ ನಿರ್ಮೂಲನೆ ಮತ್ತು ಟಿವಿಕೆ ಶಾಸಕರ ಕ್ರಿಮಿನಲ್ ಹಿನ್ನೆಲೆ

ಎರಡು ವರ್ಷಗಳ ಹಿಂದೆ ಅಸ್ತಿತ್ವಕ್ಕೆ ಬಂದ ಟಿವಿಕೆ ಎಂಬ ಪಕ್ಷ, 75 ವರ್ಷಗಳ ಅನುಭವಿ ಪಕ್ಷವಾದ ಡಿಎಂಕೆಯನ್ನು ಸೋಲಿಸಿರುವುದು, ಕಳೆದ ಅರವತ್ತು ವರ್ಷಗಳಲ್ಲಿ ಮೊಟ್ಟ ಮೊದಲ ಬಾರಿಗೆ ದ್ರಾವಿಡ ಚಳುವಳಿ ಹಿನ್ನೆಲೆಯ ಪಕ್ಷವನ್ನು...

ಪಶ್ಚಿಮ ಬಂಗಾಳದಲ್ಲಿ ಮೊದಲ ಬಾರಿಗೆ ಬಿಜೆಪಿ ಗೆಲುವು: ಫಲಿತಾಂಶದ ಬಳಿಕ ಭುಗಿಲೆದ್ದ ಹಿಂಸಾಚಾರ, ಕನಿಷ್ಠ ಐದು ಮಂದಿ ಸಾವು

ಕೊಲ್ಕತ್ತಾ, ಮೇ 8: ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಯಲ್ಲಿ ಭಾರತೀಯ ಜನತಾ ಪಕ್ಷ (ಬಿಜೆಪಿ) ಮೊದಲ ಬಾರಿಗೆ ಬೃಹತ್ ಗೆಲುವು ಸಾಧಿಸಿದ್ದು, ರಾಜ್ಯದ 294 ಸ್ಥಾನಗಳ ಪೈಕಿ 206 ಸ್ಥಾನಗಳನ್ನು ಗೆದ್ದು ಮುಂದಿನ...

ಪಂಚರಾಜ್ಯ ಚುನಾವಣೆಯ ಗೋಜಲುಗಳು

ವಿವಾದಾತ್ಮಕ ಮತ್ತು ಸಂವಿಧಾನ ವಿರೋಧಿ ವಿಶೇಷ ತೀವ್ರ ಪರಿಷ್ಕರಣೆ (ಎಸ್ ಐಆರ್) ಅಡಿಯಲ್ಲಿ ನಡೆದ 2026ರ ಐದು ವಿಧಾನಸಭಾ ಚುನಾವಣೆಯಲ್ಲಿ ಮತದಾರರು ಏಕರೂಪದ ಅಭಿಮತವನ್ನು ವ್ಯಕ್ತಪಡಿಸಲಿಲ್ಲ. ಮತ್ತು ಸಂಕೀರ್ಣವಾದ ಫಲಿತಾಂಶ ಕೊಟ್ಟಿದ್ದಾರೆ. ಪಶ್ಚಿಮ...

ಪ್ರಜಾಸತ್ತೆಯ ಉಳಿವಿಗೆ ಇದು ನಿರ್ಣಾಯಕ ಕ್ಷಣ : ಮಹತ್ವದ ಕಣ್ಣೋಟ

ಚುನಾವಣೆಗಳು ಮತ್ತು ನ್ಯಾಯಾಲಯಗಳು ಇನ್ನು ಪರಿಹಾರವಲ್ಲ ಎಂಬ ಅಭಿಪ್ರಾಯಕ್ಕೆ ಜನರು ಬರಲು ಈ ಬಾರಿಯ ವಿಧಾನಸಭಾ ಚುನಾವಣೆಗಳೇ ಕಾರಣವಾಗಿವೆ. ಇಂದು 'ಭಾರತದ ಪರಿಕಲ್ಪನೆ'ಗೆ (Idea of India) ಸಂಚಕಾರ ಬಂದಿದೆ. ಪ್ರಜಾಪ್ರಭುತ್ವವು ಕೇವಲ...

ಭಾಗ-2: ಎಸ್‌ಐಆರ್ ಜಾರಿಯಿಂದ ಕಾಂಗ್ರೆಸ್‌ ಕಳೆದುಕೊಳ್ಳುವ ಕ್ಷೇತ್ರಗಳೆಷ್ಟು?

30 ಸಾವಿರದಿಂದ ಒಂದು ಸಾವಿರದ ಒಳಗಿನ ಮತಗಳ ಅಂತರದಿಂದ ಗೆದ್ದಿರುವ ಕರ್ನಾಟಕದ 97 ಕ್ಷೇತ್ರಗಳನ್ನು ನಾವು ಪಟ್ಟಿ ಮಾಡಿದ್ದೇವೆ. ಪಶ್ಚಿಮ ಬಂಗಾಳದಲ್ಲಿ ಆದಂತೆಯೇ ರಾಜ್ಯದಲ್ಲಿ ಚುನಾವಣೆ ಸಮೀಪಿಸಿದಾಗ ಎಸ್‌ಐಆರ್ ಜಾರಿಯಾದರೆ ಬಿಜೆಪಿಗೆ ಅನುಕೂಲವಾಗುವ...