Homeಚಳವಳಿಪೌರಕಾರ್ಮಿಕರ ದಿನ: ಸಂಭ್ರಮಾಚರಣೆ ಬೇಡ, ಕನಿಷ್ಠ ಸೌಲಭ್ಯ ನೀಡಿ...

ಪೌರಕಾರ್ಮಿಕರ ದಿನ: ಸಂಭ್ರಮಾಚರಣೆ ಬೇಡ, ಕನಿಷ್ಠ ಸೌಲಭ್ಯ ನೀಡಿ…

ರಾಜ್ಯದಲ್ಲಿ ಸುಮಾರು 45 ಸಾವಿರಕ್ಕೂ ಹೆಚ್ಚು ಮಂದಿ ಗುತ್ತಿಗೆ ಪೌರಕಾರ್ಮಿಕರಿದ್ದಾರೆ. ಇವರ ಕೆಲಸ, ಖಾಯಂ ನೌಕರರ ಕೆಲಸ ಒಂದೇ ಆಗಿದ್ದರೂ ಸಂಬಳ ಮಾತ್ರ ಬೇರೆ ಬೇರೆ. ಈ ಬಗ್ಗೆ ಸರ್ಕಾರ ಯಾವುದೇ ಕ್ರಮ ಕೈಗೊಂಡಿಲ್ಲ.

- Advertisement -
- Advertisement -

ಮಳೆ, ಚಳಿ, ಬಿಸಿಲು ಏನೇ ಇರಲಿ ಅಥವಾ ಕೊರೊನಾದಂತಹ ದೊಡ್ಡ ದೊಡ್ಡ ಸಾಂಕ್ರಾಮಿಕ ರೋಗಗಳೆ ಬರಲಿ ಇವರು ಮಾತ್ರ ತಮ್ಮ ಕೆಲಸ ನಿಲ್ಲಿಸುವುದಿಲ್ಲ.. ಮನೆಯೊಳಗೆ ಬೆಚ್ಚಗೆ ಮಲಗುವುದಿಲ್ಲ..ಅದೆಂತಹದ್ದೇ ಪರಿಸ್ಥಿತಿಯಿರಲಿ ಕೈಯಲ್ಲಿ ಪೊರಕೆ ಹಿಡಿದು ರಸ್ತೆಗೆ ಇಳಿಯುತ್ತಾರೆ. ಒಂದು ದಿನ ಇವರ್‍ಯಾರೂ ಕೆಲಸ ಮಾಡದಿದ್ದರೇ, ಬೀದಿಗಿಳಿಯದಿದ್ದರೇ ನಾವ್ಯಾರೂ ರಸ್ತೆಗಳಲ್ಲಿ, ಮಾರ್ಕೆಟ್‌ಗಳಲ್ಲಿ, ಬಸ್ ನಿಲ್ದಾಣಗಳ್ಲಲಿ ಓಡಾಡಲು ಸಾಧ್ಯವೇ ಇಲ್ಲ. ಹೌದು ಇವರೇ ನಮ್ಮ ನಗರಗಳನ್ನು ಸ್ವಚ್ಛಗೊಳಿಸಿ ನಮಗಾಗಿ ತಮ್ಮ ಸುರಕ್ಷತೆಯನ್ನೂ ಬದಿಗಿಟ್ಟ ಪೌರಕಾರ್ಮಿಕರು. ಅರ್ಥಾಥ್ ಸಾಮಾಜಿಕ ವೈದ್ಯರು.

ನಮ್ಮ ನಗರಗಳು, ನಮ್ಮ ಮನೆಯ ಬೀದಿಗಳು, ನಾವು ಓಡಾಡುವ ಸ್ಥಳಗಳು ಸ್ವಚ್ಛವಾಗಿರಲು ಇವರೇ ಪ್ರಮುಖ ಕಾರಣಕರ್ತರು. ಇಂದು ಇವರ ದಿನ. ಅಂದರೆ ಪೌರಕಾರ್ಮಿಕರ ದಿನ. ಈ ದಿನದ ನೆಪದಲ್ಲೊಮ್ಮೆ ಇವರನ್ನ ನೆನಪಿಸಿಕೊಳ್ಳುವ..

ನಾವು ಗಣೇಶ ಹಬ್ಬ, ದೀಪಾವಳಿ ಮಾಡಿ ರಸ್ತೆಗಳಲ್ಲಿ ಕಸ ಎಸೆದು ಮನೆಗೆ ಹೋಗುತ್ತಿವೆ. ಬೆಳಗ್ಗೆ ಆ ಕಸ ಕಾಣಿಸುವುದಿಲ್ಲ ಎಂದರೇ ಅದಕ್ಕೆ ಇವರೆ ಕಾರಣ. ನಾವು ಕೆಲಸಕ್ಕೆ ಹೋಗುತ್ತೇವೆ, ನಮಗೆ ವಾರದ ರಜೆ, ಹಬ್ಬಗಳ ರಜೆ ಎಂಬ ಸವಲತ್ತುಗಳು ಇವೆ ಅಲ್ಲವೇ? ಮಹಿಳಾ ಉದ್ಯೋಗಿಗಳಿಗೆ ಹೆರಿಗೆ ರಜೆಯಾದ್ರೂ ಇರುತ್ತೆ ಅಲ್ಲವೇ.. ಆದ್ರೆ ವಿಪರ್ಯಾಸ ನೋಡಿ ಇವರ್‍ಯಾರಿಗೂ ರಜೆ ಎಂಬುದೇ ಇಲ್ಲ..ರಜೆ ಬೇಕಿದ್ದರೇ ಸಂಬಳ ಕೇಳೋ ಹಾಗಿಲ್ಲ ಅಷ್ಟೆ..

ಇದನ್ನೂ ಓದಿ: ಪೌರಕಾರ್ಮಿಕರಿಗೂ ಕೊರೊನ ಸೋಂಕು; ಸಮುದಾಯದ ನಡುವೆ ಹರಡುವ ಆತಂಕದಲ್ಲಿ ಕುಟುಂಬಗಳು

ಪೌರಕಾರ್ಮಿಕರ ಪರಿಸ್ಥಿತಿ ಹೇಗಿರುತ್ತೇ ಗೊತ್ತಿದ್ಯಾ..? ಬೆಳಗ್ಗೆ 5-6 ಗಂಟೆಗೆ ಕೆಲಸಕ್ಕೆ ಹಾಜರಾಗುವ ಇವರಿಗೆ ಕುಡಿಯಲು ನೀರು, ಬಳಸಲು ಶೌಚಾಲಯ, ಬಟ್ಟೆ ಬದಲಿಸಲು ಒಂದು ಪುಟ್ಟ ಕೊಠಡಿ ಸಹ ಇರಲ್ಲ. ಅದರಲ್ಲೂ ಮಹಿಳಾ ಪೌರಕಾರ್ಮಿಕರ ಪರಿಸ್ಥಿತಿ ಊಹಿಸಲಸಾಧ್ಯ..

PC: eesanje

ಆಶ್ಚರ್ಯದ ವಿಷಯವೆಂದರೇ ಪೌರಕಾರ್ಮಿಕರಿಗೆ ಪೌರಕಾರ್ಮಿಕರ ದಿನ ಇದೆ ಎಂಬುದೇ ಒಂದು ನಗೆಪಾಟಿಲಿನ ಸಂಗತಿ ಎಂದರೆ ನೀವು ನಂಬಲೇಬೇಕು. ನಮಗೆ ಅಂತಾ ದಿನ ಇದ್ಯಾ ಎಂದು ಕೇಳುತ್ತಾರೆ ಈ ಕಾರ್ಮಿಕರು. ಹಾಗಾದ್ರೆ ಈ ಪೌರಕಾರ್ಮಿಕ ಸಂಘಟನೆ ಮುಖಂಡರು ಏನಂತಾರೆ.. ನೀವೇ ಓದಿ

ಈ ಕುರಿತು ನಾನುಗೌರಿ.ಕಾಂ ಎಐಸಿಸಿಟಿಯು ನೇತೃತ್ವದ ಬಿಬಿಎಂಪಿ ಪೌರಕಾರ್ಮಿಕರ ಸಂಘದ ಅಧ್ಯಕ್ಷೆ ನಿರ್ಮಲಾರವರನ್ನು ಮಾತನಾಡಿಸಿತು. “ಪೌರಕಾರ್ಮಿಕರ ದಿನಾಚರಣೆ ಅಂದ್ರೆ ನಮಗೆ ಆಶ್ಚರ್ಯ ಆಗ್ತದೆ. ದಿನ ಕೆಲಸ ಮಾಡಿ ಮನೆಗೆ ಹೋಗುವ ನಮ್ಮ ಕಾರ್ಮಿಕರಿಗೆ ಈ ದಿನವೆಲ್ಲಾ ಗೊತ್ತಿರುವುದಿಲ್ಲ. ಮೇ 1ರ ಕಾರ್ಮಿಕರ ದಿನಾಚರಣೆಯಷ್ಟೇ ನಮ್ಮ ಕಾರ್ಮಿಕರಿಗೆ ಗೊತ್ತಿರುವುದು. ಪೌರಕಾರ್ಮಿಕ ದಿನಾಚರಣೆಗಳು ನಮ್ಮ ಕಾರ್ಮಿಕರ ಬದುಕಿನಲ್ಲಿ ಯಾವ ಬದಲಾವಣೆಯನ್ನು ತಂದಿಲ್ಲ. ಪ್ರಧಾನಿಗಳು ಕಾರ್ಮಿಕರ ದಿನ ಅಂತಾ 4 ಜನ ಪೌರಕಾರ್ಮಿಕರ ಕಾಲು ತೊಳೆದರೆ, ನಾವು ದೇವರಾಗುವುದಿಲ್ಲ ಅಲ್ವಾ..?” ಎಂದು ಪ್ರಶ್ನಿಸುತ್ತಾರೆ.

ಕೊರೊನಾ ಸಮಯದಲ್ಲಿ ಪ್ರತಿದಿನ ಪೌರಕಾರ್ಮಿಕರಿಗೆ 100 ರೂಪಾಯಿ ಬಸ್ ಚಾರ್ಜ್‌ ಕೊಡುವುದಾಗಿ ಬಿಬಿಎಂಪಿ ಭರವಸೆ ನೀಡಿತ್ತು. ಆದ್ರೆ ಅದನ್ನೂ ಕೊಟ್ಟಿಲ್ಲ. ದಿನಪ್ರತಿ ದುಡಿಯುತ್ತಿರುವ ಪೌರಕಾರ್ಮಿಕರ ಆರೋಗ್ಯ ಸಮಸ್ಯೆಗಳು ಹೆಚ್ಚಾಗಿವೆ. ನಾವು ಹಲವು ಬಾರಿ ಹೋರಾಟ ಮಾಡಿದ ಪರಿಣಾಮ ಕೇವಲ ಮಾಸ್ಕ್, ಸ್ಯಾನಿಟೈಜರ್‌ ಕೆಲವರಿಗೆ ಸಿಕ್ಕಿವೆ ಅಷ್ಟೇ. ಕೊರೊನಾ ಹಾಟ್‌ಸ್ಪಾಟ್‌ಗಳಲ್ಲೇ ಇವರಿಗೆ ಪಿಪಿಇ ಕಿಟ್ ಕೊಟ್ಟಿಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದರು.

ಆರ್‌.ಟಿ.ನಗರದಲ್ಲಿ ಪೌರಕಾರ್ಮಿಕರಾಗಿ ಕೆಲಸ ನಿರ್ವಹಿಸುವ ಗಂಗಮ್ಮ ಹೇಳುತ್ತಾರೆ, “ಕೊರೊನಾ ಬಂದಾಗಿನಿಂದ ಎಲ್ಲರು ಭಯಪಟ್ತಿದ್ದಾರೆ. ಆದ್ರೆ ನಮಗೆ ಮಾಸ್ಕ್, ಸ್ಯಾನಿಟೈಜರ್‌, ಪಿಪಿಇ ಕಿಟ್ ಯಾವುದು ಸರಿಯಾಗಿ ಸಿಕ್ಕಿಲ್ಲ. ಕೊಡಿ ಅಂತಾ ಎಷ್ಟೋ ಬಾರಿ ಕೇಳಿದ್ರೂ ಬರಿ ಭರವಸೆ ನೀಡ್ತಾರೆ. ನಮಗೆ ಕೆಲಸ ಮಾಡುವ ಸ್ಥಳದಲ್ಲಿ ವಾಶ್‌ ರೂಂ ಇಲ್ಲ, ಬಟ್ಟೆ ಬದಲಿಸೋಕೆ ಸ್ಥಳ ಇರಲ್ಲ. ಒಂದು ದಿನ ಕೂಡ ರಜೆ ಇಲ್ಲದೆ ಕೆಲಸ ಮಾಡುವವರಿಗೆ ಯಾವ ಸೌಲಭ್ಯ ಕೂಡ ಇಲ್ಲ. ಒಂದು ದಿನ ರಜೆ ತಗೊಂಡರು ಆ ದಿನದ ಸಂಬಳ ಕಟ್ ಮಾಡ್ತಾರೆ ಎಂದು ನೋವು ತೋಡಿಕೊಳ್ಳುತ್ತಾರೆ ಗಂಗಮ್ಮ.

ಇದನ್ನೂ ಓದಿ: ಪೌರಕಾರ್ಮಿಕರನ್ನು ಪರಿಸರದ ಡಾಕ್ಟರುಗಳನ್ನಾಗಿಸಿದ ಶಿಕ್ಷಕ ನಾಗರಾಜ ಬಂಜಾರ

ಪೌರಕಾರ್ಮಿಕರೆಂದರೆ ಹಕ್ಕು ಇಲ್ಲದೆ ಇರುವ ಮನುಷ್ಯರು ಎಂದೇ ಅರ್ಥ ಎನ್ನುತ್ತಾರೆ ಗುತ್ತಿಗೆ ಪೌರ ಕಾರ್ಮಿಕರ ಸಂಘದ ಅಧ್ಯಕ್ಷ ಕಾಮ್ರೆಡ್ ಬಾಲನ್. ಮಹಿಳೆಯರ ಹಕ್ಕು, ಮಾನವ ಹಕ್ಕುಗಳು ಯಾವುದೂ ಇಲ್ಲದೆ ಬರುಕುತ್ತಿರುವ ಕಾರ್ಮಿಕರು ಇವರು. ಖಾಯಂ ನೌಕರರು ಮಾಡುವ ಕೆಲಸವೇ ಗುತ್ತಿಗೆ ನೌಕರರು ಮಾಡುತ್ತಾರೆ ಆದ್ರೆ ಸಂಬಳದಲ್ಲಿ ಮಾತ್ರ ತಾರತಮ್ಯ ಇದೆ. ಅವರನ್ನು ಖಾಯಂ ಮಾಡಲು ಹೈಕೋರ್ಟ್ ಆದೇಶ ನೀಡಿತ್ತು. ಆದ್ರೆ ಸರ್ಕಾರ ಹೈಕೋರ್ಟ್ ಆದೇಶ ಕೂಡ ಜಾರಿಗೊಳಿಸಲಿಲ್ಲ. ದಿನಾಚರಣೆಗಳ ಬದಲು ಅವರಿಗೆ ಇರಲು ಮನೆ ಕೊಡಲಿ, ಅವರ ಕೆಲಸ ಖಾಯಂ ಮಾಡಲಿ, ಹೆರಿಗೆ ರಜೆ ನೀಡಲಿ ಎನ್ನುತ್ತಾರೆ ಕಾಮ್ರೆಡ್ ಬಾಲನ್.

ಇಡೀ ಸಮಾಜವೇ ಇವರನ್ನು ದೂರ ಇಟ್ಟಿದೆ. ಸಮಾಜದ ಜನ ಇವರನ್ನು ಮನುಷ್ಯರು ಎಂದೇ ಪರಿಗಣಿಸುವುದಿಲ್ಲ. 4 ಜನ ಪೌರಕಾರ್ಮಿಕರ ಕಾಲು ತೊಳೆದು ದಿನಾಚರಣೆ ಮಾಡಿದರೇ ಪ್ರತಿ ದಿನ ಹೊಲಸು ಗುಂಡಿಯಲ್ಲಿ ಬೀಳುವುದು ತಪ್ಪುತ್ತದೇಯೇ? ಅವರಿಗೆ ಸೂಕ್ತ ಸೌಲಭ್ಯ ನೀಡಲಿ ಸಾಕು. ಎಲ್ಲಾ ಮಹಿಳೆಯರಿಗೆ ಸಿಗುವ ಕನಿಷ್ಠ ಹೆರಿಗೆ ರಜೆ ಕೂಡ ಇವರಿಗೆ ಇಲ್ಲ. ಸರ್ಕಾರ ಮಾಡುವ ಇಂತಹ ದಿನಾಚರಣೆಗಳು ಬರಿ ಬೋಗಸ್ ಎಂದು ಬಾಲನ್ ಕಿಡಿಕಾರುತ್ತಾರೆ.

PC: ThePrint

ಮಾಜಿ ಮುಖ್ಯಮಂತ್ರಿ ಎಚ್‌.ಡಿ.ಕುಮಾರಸ್ವಾಮಿ ಇಂದು ಪೌರಕಾರ್ಮಿಕರ ದಿನದ ಶುಭಾಷಯ ತಿಳಿಸಿದ್ದಾರೆ. ಸರಣಿ ಟ್ವೀಟ್‌ಗಳನ್ನು ಮಾಡಿರುವ ಕುಮಾರಸ್ವಾಮಿ, ಆರೋಗ್ಯ ಪೂರ್ಣ ಸಮಾಜ ನಿರ್ಮಾಣಕ್ಕೆ ತ್ಯಾಗ, ಸೇವೆ, ಸಮರ್ಪಣೆ, ಕಾರುಣ್ಯದಿಂದ ಸದಾ ಜೀವ ತೇಯುತ್ತಿರುವ ಪೌರಕಾರ್ಮಿಕರನ್ನು ಈ ಸಮಾಜ ಪ್ರತಿಕ್ಷಣವು ತಾಯ್ತನದಿಂದ ಕಾಣುವುದೇ ನಾವು ಅವರಿಗೆ ಸಲ್ಲಿಸಬಹುದಾದ ದೊಡ್ಡ ಕೃತಜ್ಞತೆ ಎಂದಿದ್ದಾರೆ.

 

ರಾಜ್ಯದಲ್ಲಿ ಸುಮಾರು 45 ಸಾವಿರಕ್ಕೂ ಹೆಚ್ಚು ಮಂದಿ ಗುತ್ತಿಗೆ ಪೌರಕಾರ್ಮಿಕರಿದ್ದಾರೆ. ಇವರ ಕೆಲಸ, ಖಾಯಂ ನೌಕರರ ಕೆಲಸ ಒಂದೇ ಆಗಿದ್ದರೂ ಸಂಬಳ ಮಾತ್ರ ಬೇರೆ ಬೇರೆ. ಈ ಬಗ್ಗೆ ಸರ್ಕಾರ ಯಾವುದೇ ಕ್ರಮ ಕೈಗೊಂಡಿಲ್ಲ. ಗುತ್ತಿಗೆದಾರರೂ ಕೂಡ ಗುತ್ತಿಗೆ ಕಾರ್ಮಿಕರಿಗೆ ಸರಿಯಾದ  ಆರೋಗ್ಯ ವ್ಯವಸ್ಥೆ ಮಾಡುವುದಿಲ್ಲ. ಇನ್ನೂ ಸರ್ಕಾರ ಕೊರೊನಾ ಕಾಲದಲ್ಲಿ ಸ್ವಚ್ಛತೆಗೆ ಪ್ರಾಧಾನ್ಯತೆ ನೀಡುವ ಪೌರಕಾರ್ಮಿಕರ ಆರೋಗ್ಯದ ಬಗ್ಗೆ ಗಮನ ಹರಿಸುತ್ತಿಲ್ಲ. ಇವರೆಗೆ 4 ಮಂದಿ ಪೌರಕಾರ್ಮಿಕರು ಕೊರೊನಾಗೆ ಬಲಿಯಾಗಿದ್ದಾರೆ. ಒಂದು ವರದಿಯ ಪ್ರಕಾರ ಪೌರಕಾರ್ಮಿಕರ ಸರಾಸರಿ ವಯಸ್ಸು 40 ವರ್ಷ ಎಂದು ಗುರುತಿಸಲಾಗಿದೆ. ಸರ್ಕಾರ ಈಗಲಾದರೂ ಎಚ್ಚೆತ್ತುಕೊಳ್ಳುವುದೇ?


ಇದನ್ನೂ ಓದಿ: ಕೋವಿಡ್‌ಗೆ ಬಲಿಯಾದ ಪೌರಕಾರ್ಮಿಕರಿಗೆ ಶ್ರದ್ಧಾಂಜಲಿ: ಕಾಳಜಿ ವಹಿಸದ ಸರ್ಕಾರದ ವಿರುದ್ಧ ಪ್ರತಿಭಟನೆಗೆ ನಿರ್ಧಾರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...

ತಾರತಮ್ಯ ಮುಕ್ತ ಕ್ಯಾಂಪಸ್ ನಿರ್ಮಾಣದತ್ತ ಮಹತ್ವದ ಹೆಜ್ಜೆ; ‘ರೋಹಿತ್ ವೇಮುಲ ಮಸೂದೆ’ಗೆ ಸಚಿವ ಸಂಪುಟ ಅನುಮೋದನೆ

ಕರ್ನಾಟಕ ಸರ್ಕಾರದ ಸಚಿವ ಸಂಪುಟ ಗುರುವಾರ (ಏ.16) ದಂದು ಕರ್ನಾಟಕ ರೋಹಿತ್ ವೇಮುಲ (ಹೊರಗಿಡುವಿಕೆ ಅಥವಾ ಅನ್ಯಾಯ ತಡೆಗಟ್ಟುವಿಕೆ) (ಶಿಕ್ಷಣ ಮತ್ತು ಘನತೆಯ ಹಕ್ಕು) ಮಸೂದೆ’ಗೆ ಅನುಮೋದನೆ ನೀಡಿದೆ. ಹೈದರಾಬಾದ್‌ನ ಕೆಂದ್ರೀಯ ವಿಶ್ವವಿದ್ಯಾಲಯದಲ್ಲಿ...

ಕ್ಷೇತ್ರ ಮರುವಿಂಗಡನೆ : ಗೃಹ ಸಚಿವ ಅಮಿತ್ ಶಾ ಹೇಳಿದ್ದೆಲ್ಲವು ನಿಜವೇ?..ಇಲ್ಲಿದೆ ವಾಸ್ತವಾಂಶ

ದೇಶದ ಗೃಹ ಸಚಿವರು ಸಂಸತ್ತಿನಲ್ಲಿ ಪ್ರಮುಖ ಕಾನೂನಿನ ಬಗ್ಗೆ ವಿವರಿಸುವಾಗ ವಿಷಯ ಸ್ಪಷ್ಟವಾಗಿರಬೇಕು. ಆದರೆ, ಕ್ಷೇತ್ರ ಮರುವಿಂಗಡನೆ ಕುರಿತು ಗೃಹ ಸಚಿವ ಅಮಿತ್ ಶಾ ಮಾತನಾಡಿರುವುದು ಹಾಗಿರಲಿಲ್ಲ. ದಕ್ಷಿಣ ಭಾರತದ ರಾಜ್ಯಗಳು ತಮ್ಮ...

ಮಹಿಳಾ ಮೀಸಲು ಮಸೂದೆ 2023ರಲ್ಲೇ ಗೆದ್ದಿದೆ, ಈಗ ಸೋತಿರುವುದು ಮೋದಿ ಸರ್ಕಾರ

ಮೋದಿ ಸರ್ಕಾರ ಮಂಡಿಸಿದ್ದ ಮಹಿಳಾ ಮೀಸಲಾತಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾಗಿದೆ ಎಂಬುವುದು ದೇಶದಲ್ಲಿ ಪ್ರಸ್ತುತ ದೊಡ್ಡ ಚರ್ಚೆಯ ವಿಷಯವಾಗಿದೆ. ಕಾಂಗ್ರೆಸ್‌ ನೇತೃತ್ವದಲ್ಲಿ ವಿಪಕ್ಷಗಳು ಮಸೂದೆಯನ್ನು ಸೋಲಿಸುವ ಮೂಲಕ ದೇಶದ ಮಹಿಳೆಯರ ಸಬಲೀಕರಣಕ್ಕೆ...

ಕ್ಯಾಂಪಸ್ ಜಾತಿ ತಾರತಮ್ಯ ವಿರುದ್ಧದ ‘ರೋಹಿತ್ ವೇಮುಲ ಮಸೂದೆ’ಗೆ ಸಚಿವ ಸಂಪುಟ ಅನುಮೋದನೆ

ರಾಜ್ಯ ಸಚಿವ ಸಂಪುಟ ಗುರುವಾರ (ಏ.16) ರಂದು ಕರ್ನಾಟಕ ರೋಹಿತ್ ವೇಮುಲ (ಹೊರಗಿಡುವಿಕೆ ಅಥವಾ ಅನ್ಯಾಯ ತಡೆಗಟ್ಟುವಿಕೆ) (ಶಿಕ್ಷಣ ಮತ್ತು ಘನತೆಯ ಹಕ್ಕು) ಮಸೂದೆ'ಗೆ ಅನುಮೋದನೆ ನೀಡಿತು. ಜೊತೆಗೆ, ಪ್ರಮುಖ ಮೂಲಸೌಕರ್ಯ ಮತ್ತು...