Homeಚಳವಳಿಪೌರಕಾರ್ಮಿಕರ ದಿನ: ಸಂಭ್ರಮಾಚರಣೆ ಬೇಡ, ಕನಿಷ್ಠ ಸೌಲಭ್ಯ ನೀಡಿ...

ಪೌರಕಾರ್ಮಿಕರ ದಿನ: ಸಂಭ್ರಮಾಚರಣೆ ಬೇಡ, ಕನಿಷ್ಠ ಸೌಲಭ್ಯ ನೀಡಿ…

ರಾಜ್ಯದಲ್ಲಿ ಸುಮಾರು 45 ಸಾವಿರಕ್ಕೂ ಹೆಚ್ಚು ಮಂದಿ ಗುತ್ತಿಗೆ ಪೌರಕಾರ್ಮಿಕರಿದ್ದಾರೆ. ಇವರ ಕೆಲಸ, ಖಾಯಂ ನೌಕರರ ಕೆಲಸ ಒಂದೇ ಆಗಿದ್ದರೂ ಸಂಬಳ ಮಾತ್ರ ಬೇರೆ ಬೇರೆ. ಈ ಬಗ್ಗೆ ಸರ್ಕಾರ ಯಾವುದೇ ಕ್ರಮ ಕೈಗೊಂಡಿಲ್ಲ.

- Advertisement -
- Advertisement -

ಮಳೆ, ಚಳಿ, ಬಿಸಿಲು ಏನೇ ಇರಲಿ ಅಥವಾ ಕೊರೊನಾದಂತಹ ದೊಡ್ಡ ದೊಡ್ಡ ಸಾಂಕ್ರಾಮಿಕ ರೋಗಗಳೆ ಬರಲಿ ಇವರು ಮಾತ್ರ ತಮ್ಮ ಕೆಲಸ ನಿಲ್ಲಿಸುವುದಿಲ್ಲ.. ಮನೆಯೊಳಗೆ ಬೆಚ್ಚಗೆ ಮಲಗುವುದಿಲ್ಲ..ಅದೆಂತಹದ್ದೇ ಪರಿಸ್ಥಿತಿಯಿರಲಿ ಕೈಯಲ್ಲಿ ಪೊರಕೆ ಹಿಡಿದು ರಸ್ತೆಗೆ ಇಳಿಯುತ್ತಾರೆ. ಒಂದು ದಿನ ಇವರ್‍ಯಾರೂ ಕೆಲಸ ಮಾಡದಿದ್ದರೇ, ಬೀದಿಗಿಳಿಯದಿದ್ದರೇ ನಾವ್ಯಾರೂ ರಸ್ತೆಗಳಲ್ಲಿ, ಮಾರ್ಕೆಟ್‌ಗಳಲ್ಲಿ, ಬಸ್ ನಿಲ್ದಾಣಗಳ್ಲಲಿ ಓಡಾಡಲು ಸಾಧ್ಯವೇ ಇಲ್ಲ. ಹೌದು ಇವರೇ ನಮ್ಮ ನಗರಗಳನ್ನು ಸ್ವಚ್ಛಗೊಳಿಸಿ ನಮಗಾಗಿ ತಮ್ಮ ಸುರಕ್ಷತೆಯನ್ನೂ ಬದಿಗಿಟ್ಟ ಪೌರಕಾರ್ಮಿಕರು. ಅರ್ಥಾಥ್ ಸಾಮಾಜಿಕ ವೈದ್ಯರು.

ನಮ್ಮ ನಗರಗಳು, ನಮ್ಮ ಮನೆಯ ಬೀದಿಗಳು, ನಾವು ಓಡಾಡುವ ಸ್ಥಳಗಳು ಸ್ವಚ್ಛವಾಗಿರಲು ಇವರೇ ಪ್ರಮುಖ ಕಾರಣಕರ್ತರು. ಇಂದು ಇವರ ದಿನ. ಅಂದರೆ ಪೌರಕಾರ್ಮಿಕರ ದಿನ. ಈ ದಿನದ ನೆಪದಲ್ಲೊಮ್ಮೆ ಇವರನ್ನ ನೆನಪಿಸಿಕೊಳ್ಳುವ..

ನಾವು ಗಣೇಶ ಹಬ್ಬ, ದೀಪಾವಳಿ ಮಾಡಿ ರಸ್ತೆಗಳಲ್ಲಿ ಕಸ ಎಸೆದು ಮನೆಗೆ ಹೋಗುತ್ತಿವೆ. ಬೆಳಗ್ಗೆ ಆ ಕಸ ಕಾಣಿಸುವುದಿಲ್ಲ ಎಂದರೇ ಅದಕ್ಕೆ ಇವರೆ ಕಾರಣ. ನಾವು ಕೆಲಸಕ್ಕೆ ಹೋಗುತ್ತೇವೆ, ನಮಗೆ ವಾರದ ರಜೆ, ಹಬ್ಬಗಳ ರಜೆ ಎಂಬ ಸವಲತ್ತುಗಳು ಇವೆ ಅಲ್ಲವೇ? ಮಹಿಳಾ ಉದ್ಯೋಗಿಗಳಿಗೆ ಹೆರಿಗೆ ರಜೆಯಾದ್ರೂ ಇರುತ್ತೆ ಅಲ್ಲವೇ.. ಆದ್ರೆ ವಿಪರ್ಯಾಸ ನೋಡಿ ಇವರ್‍ಯಾರಿಗೂ ರಜೆ ಎಂಬುದೇ ಇಲ್ಲ..ರಜೆ ಬೇಕಿದ್ದರೇ ಸಂಬಳ ಕೇಳೋ ಹಾಗಿಲ್ಲ ಅಷ್ಟೆ..

ಇದನ್ನೂ ಓದಿ: ಪೌರಕಾರ್ಮಿಕರಿಗೂ ಕೊರೊನ ಸೋಂಕು; ಸಮುದಾಯದ ನಡುವೆ ಹರಡುವ ಆತಂಕದಲ್ಲಿ ಕುಟುಂಬಗಳು

ಪೌರಕಾರ್ಮಿಕರ ಪರಿಸ್ಥಿತಿ ಹೇಗಿರುತ್ತೇ ಗೊತ್ತಿದ್ಯಾ..? ಬೆಳಗ್ಗೆ 5-6 ಗಂಟೆಗೆ ಕೆಲಸಕ್ಕೆ ಹಾಜರಾಗುವ ಇವರಿಗೆ ಕುಡಿಯಲು ನೀರು, ಬಳಸಲು ಶೌಚಾಲಯ, ಬಟ್ಟೆ ಬದಲಿಸಲು ಒಂದು ಪುಟ್ಟ ಕೊಠಡಿ ಸಹ ಇರಲ್ಲ. ಅದರಲ್ಲೂ ಮಹಿಳಾ ಪೌರಕಾರ್ಮಿಕರ ಪರಿಸ್ಥಿತಿ ಊಹಿಸಲಸಾಧ್ಯ..

PC: eesanje

ಆಶ್ಚರ್ಯದ ವಿಷಯವೆಂದರೇ ಪೌರಕಾರ್ಮಿಕರಿಗೆ ಪೌರಕಾರ್ಮಿಕರ ದಿನ ಇದೆ ಎಂಬುದೇ ಒಂದು ನಗೆಪಾಟಿಲಿನ ಸಂಗತಿ ಎಂದರೆ ನೀವು ನಂಬಲೇಬೇಕು. ನಮಗೆ ಅಂತಾ ದಿನ ಇದ್ಯಾ ಎಂದು ಕೇಳುತ್ತಾರೆ ಈ ಕಾರ್ಮಿಕರು. ಹಾಗಾದ್ರೆ ಈ ಪೌರಕಾರ್ಮಿಕ ಸಂಘಟನೆ ಮುಖಂಡರು ಏನಂತಾರೆ.. ನೀವೇ ಓದಿ

ಈ ಕುರಿತು ನಾನುಗೌರಿ.ಕಾಂ ಎಐಸಿಸಿಟಿಯು ನೇತೃತ್ವದ ಬಿಬಿಎಂಪಿ ಪೌರಕಾರ್ಮಿಕರ ಸಂಘದ ಅಧ್ಯಕ್ಷೆ ನಿರ್ಮಲಾರವರನ್ನು ಮಾತನಾಡಿಸಿತು. “ಪೌರಕಾರ್ಮಿಕರ ದಿನಾಚರಣೆ ಅಂದ್ರೆ ನಮಗೆ ಆಶ್ಚರ್ಯ ಆಗ್ತದೆ. ದಿನ ಕೆಲಸ ಮಾಡಿ ಮನೆಗೆ ಹೋಗುವ ನಮ್ಮ ಕಾರ್ಮಿಕರಿಗೆ ಈ ದಿನವೆಲ್ಲಾ ಗೊತ್ತಿರುವುದಿಲ್ಲ. ಮೇ 1ರ ಕಾರ್ಮಿಕರ ದಿನಾಚರಣೆಯಷ್ಟೇ ನಮ್ಮ ಕಾರ್ಮಿಕರಿಗೆ ಗೊತ್ತಿರುವುದು. ಪೌರಕಾರ್ಮಿಕ ದಿನಾಚರಣೆಗಳು ನಮ್ಮ ಕಾರ್ಮಿಕರ ಬದುಕಿನಲ್ಲಿ ಯಾವ ಬದಲಾವಣೆಯನ್ನು ತಂದಿಲ್ಲ. ಪ್ರಧಾನಿಗಳು ಕಾರ್ಮಿಕರ ದಿನ ಅಂತಾ 4 ಜನ ಪೌರಕಾರ್ಮಿಕರ ಕಾಲು ತೊಳೆದರೆ, ನಾವು ದೇವರಾಗುವುದಿಲ್ಲ ಅಲ್ವಾ..?” ಎಂದು ಪ್ರಶ್ನಿಸುತ್ತಾರೆ.

ಕೊರೊನಾ ಸಮಯದಲ್ಲಿ ಪ್ರತಿದಿನ ಪೌರಕಾರ್ಮಿಕರಿಗೆ 100 ರೂಪಾಯಿ ಬಸ್ ಚಾರ್ಜ್‌ ಕೊಡುವುದಾಗಿ ಬಿಬಿಎಂಪಿ ಭರವಸೆ ನೀಡಿತ್ತು. ಆದ್ರೆ ಅದನ್ನೂ ಕೊಟ್ಟಿಲ್ಲ. ದಿನಪ್ರತಿ ದುಡಿಯುತ್ತಿರುವ ಪೌರಕಾರ್ಮಿಕರ ಆರೋಗ್ಯ ಸಮಸ್ಯೆಗಳು ಹೆಚ್ಚಾಗಿವೆ. ನಾವು ಹಲವು ಬಾರಿ ಹೋರಾಟ ಮಾಡಿದ ಪರಿಣಾಮ ಕೇವಲ ಮಾಸ್ಕ್, ಸ್ಯಾನಿಟೈಜರ್‌ ಕೆಲವರಿಗೆ ಸಿಕ್ಕಿವೆ ಅಷ್ಟೇ. ಕೊರೊನಾ ಹಾಟ್‌ಸ್ಪಾಟ್‌ಗಳಲ್ಲೇ ಇವರಿಗೆ ಪಿಪಿಇ ಕಿಟ್ ಕೊಟ್ಟಿಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದರು.

ಆರ್‌.ಟಿ.ನಗರದಲ್ಲಿ ಪೌರಕಾರ್ಮಿಕರಾಗಿ ಕೆಲಸ ನಿರ್ವಹಿಸುವ ಗಂಗಮ್ಮ ಹೇಳುತ್ತಾರೆ, “ಕೊರೊನಾ ಬಂದಾಗಿನಿಂದ ಎಲ್ಲರು ಭಯಪಟ್ತಿದ್ದಾರೆ. ಆದ್ರೆ ನಮಗೆ ಮಾಸ್ಕ್, ಸ್ಯಾನಿಟೈಜರ್‌, ಪಿಪಿಇ ಕಿಟ್ ಯಾವುದು ಸರಿಯಾಗಿ ಸಿಕ್ಕಿಲ್ಲ. ಕೊಡಿ ಅಂತಾ ಎಷ್ಟೋ ಬಾರಿ ಕೇಳಿದ್ರೂ ಬರಿ ಭರವಸೆ ನೀಡ್ತಾರೆ. ನಮಗೆ ಕೆಲಸ ಮಾಡುವ ಸ್ಥಳದಲ್ಲಿ ವಾಶ್‌ ರೂಂ ಇಲ್ಲ, ಬಟ್ಟೆ ಬದಲಿಸೋಕೆ ಸ್ಥಳ ಇರಲ್ಲ. ಒಂದು ದಿನ ಕೂಡ ರಜೆ ಇಲ್ಲದೆ ಕೆಲಸ ಮಾಡುವವರಿಗೆ ಯಾವ ಸೌಲಭ್ಯ ಕೂಡ ಇಲ್ಲ. ಒಂದು ದಿನ ರಜೆ ತಗೊಂಡರು ಆ ದಿನದ ಸಂಬಳ ಕಟ್ ಮಾಡ್ತಾರೆ ಎಂದು ನೋವು ತೋಡಿಕೊಳ್ಳುತ್ತಾರೆ ಗಂಗಮ್ಮ.

ಇದನ್ನೂ ಓದಿ: ಪೌರಕಾರ್ಮಿಕರನ್ನು ಪರಿಸರದ ಡಾಕ್ಟರುಗಳನ್ನಾಗಿಸಿದ ಶಿಕ್ಷಕ ನಾಗರಾಜ ಬಂಜಾರ

ಪೌರಕಾರ್ಮಿಕರೆಂದರೆ ಹಕ್ಕು ಇಲ್ಲದೆ ಇರುವ ಮನುಷ್ಯರು ಎಂದೇ ಅರ್ಥ ಎನ್ನುತ್ತಾರೆ ಗುತ್ತಿಗೆ ಪೌರ ಕಾರ್ಮಿಕರ ಸಂಘದ ಅಧ್ಯಕ್ಷ ಕಾಮ್ರೆಡ್ ಬಾಲನ್. ಮಹಿಳೆಯರ ಹಕ್ಕು, ಮಾನವ ಹಕ್ಕುಗಳು ಯಾವುದೂ ಇಲ್ಲದೆ ಬರುಕುತ್ತಿರುವ ಕಾರ್ಮಿಕರು ಇವರು. ಖಾಯಂ ನೌಕರರು ಮಾಡುವ ಕೆಲಸವೇ ಗುತ್ತಿಗೆ ನೌಕರರು ಮಾಡುತ್ತಾರೆ ಆದ್ರೆ ಸಂಬಳದಲ್ಲಿ ಮಾತ್ರ ತಾರತಮ್ಯ ಇದೆ. ಅವರನ್ನು ಖಾಯಂ ಮಾಡಲು ಹೈಕೋರ್ಟ್ ಆದೇಶ ನೀಡಿತ್ತು. ಆದ್ರೆ ಸರ್ಕಾರ ಹೈಕೋರ್ಟ್ ಆದೇಶ ಕೂಡ ಜಾರಿಗೊಳಿಸಲಿಲ್ಲ. ದಿನಾಚರಣೆಗಳ ಬದಲು ಅವರಿಗೆ ಇರಲು ಮನೆ ಕೊಡಲಿ, ಅವರ ಕೆಲಸ ಖಾಯಂ ಮಾಡಲಿ, ಹೆರಿಗೆ ರಜೆ ನೀಡಲಿ ಎನ್ನುತ್ತಾರೆ ಕಾಮ್ರೆಡ್ ಬಾಲನ್.

ಇಡೀ ಸಮಾಜವೇ ಇವರನ್ನು ದೂರ ಇಟ್ಟಿದೆ. ಸಮಾಜದ ಜನ ಇವರನ್ನು ಮನುಷ್ಯರು ಎಂದೇ ಪರಿಗಣಿಸುವುದಿಲ್ಲ. 4 ಜನ ಪೌರಕಾರ್ಮಿಕರ ಕಾಲು ತೊಳೆದು ದಿನಾಚರಣೆ ಮಾಡಿದರೇ ಪ್ರತಿ ದಿನ ಹೊಲಸು ಗುಂಡಿಯಲ್ಲಿ ಬೀಳುವುದು ತಪ್ಪುತ್ತದೇಯೇ? ಅವರಿಗೆ ಸೂಕ್ತ ಸೌಲಭ್ಯ ನೀಡಲಿ ಸಾಕು. ಎಲ್ಲಾ ಮಹಿಳೆಯರಿಗೆ ಸಿಗುವ ಕನಿಷ್ಠ ಹೆರಿಗೆ ರಜೆ ಕೂಡ ಇವರಿಗೆ ಇಲ್ಲ. ಸರ್ಕಾರ ಮಾಡುವ ಇಂತಹ ದಿನಾಚರಣೆಗಳು ಬರಿ ಬೋಗಸ್ ಎಂದು ಬಾಲನ್ ಕಿಡಿಕಾರುತ್ತಾರೆ.

PC: ThePrint

ಮಾಜಿ ಮುಖ್ಯಮಂತ್ರಿ ಎಚ್‌.ಡಿ.ಕುಮಾರಸ್ವಾಮಿ ಇಂದು ಪೌರಕಾರ್ಮಿಕರ ದಿನದ ಶುಭಾಷಯ ತಿಳಿಸಿದ್ದಾರೆ. ಸರಣಿ ಟ್ವೀಟ್‌ಗಳನ್ನು ಮಾಡಿರುವ ಕುಮಾರಸ್ವಾಮಿ, ಆರೋಗ್ಯ ಪೂರ್ಣ ಸಮಾಜ ನಿರ್ಮಾಣಕ್ಕೆ ತ್ಯಾಗ, ಸೇವೆ, ಸಮರ್ಪಣೆ, ಕಾರುಣ್ಯದಿಂದ ಸದಾ ಜೀವ ತೇಯುತ್ತಿರುವ ಪೌರಕಾರ್ಮಿಕರನ್ನು ಈ ಸಮಾಜ ಪ್ರತಿಕ್ಷಣವು ತಾಯ್ತನದಿಂದ ಕಾಣುವುದೇ ನಾವು ಅವರಿಗೆ ಸಲ್ಲಿಸಬಹುದಾದ ದೊಡ್ಡ ಕೃತಜ್ಞತೆ ಎಂದಿದ್ದಾರೆ.

 

ರಾಜ್ಯದಲ್ಲಿ ಸುಮಾರು 45 ಸಾವಿರಕ್ಕೂ ಹೆಚ್ಚು ಮಂದಿ ಗುತ್ತಿಗೆ ಪೌರಕಾರ್ಮಿಕರಿದ್ದಾರೆ. ಇವರ ಕೆಲಸ, ಖಾಯಂ ನೌಕರರ ಕೆಲಸ ಒಂದೇ ಆಗಿದ್ದರೂ ಸಂಬಳ ಮಾತ್ರ ಬೇರೆ ಬೇರೆ. ಈ ಬಗ್ಗೆ ಸರ್ಕಾರ ಯಾವುದೇ ಕ್ರಮ ಕೈಗೊಂಡಿಲ್ಲ. ಗುತ್ತಿಗೆದಾರರೂ ಕೂಡ ಗುತ್ತಿಗೆ ಕಾರ್ಮಿಕರಿಗೆ ಸರಿಯಾದ  ಆರೋಗ್ಯ ವ್ಯವಸ್ಥೆ ಮಾಡುವುದಿಲ್ಲ. ಇನ್ನೂ ಸರ್ಕಾರ ಕೊರೊನಾ ಕಾಲದಲ್ಲಿ ಸ್ವಚ್ಛತೆಗೆ ಪ್ರಾಧಾನ್ಯತೆ ನೀಡುವ ಪೌರಕಾರ್ಮಿಕರ ಆರೋಗ್ಯದ ಬಗ್ಗೆ ಗಮನ ಹರಿಸುತ್ತಿಲ್ಲ. ಇವರೆಗೆ 4 ಮಂದಿ ಪೌರಕಾರ್ಮಿಕರು ಕೊರೊನಾಗೆ ಬಲಿಯಾಗಿದ್ದಾರೆ. ಒಂದು ವರದಿಯ ಪ್ರಕಾರ ಪೌರಕಾರ್ಮಿಕರ ಸರಾಸರಿ ವಯಸ್ಸು 40 ವರ್ಷ ಎಂದು ಗುರುತಿಸಲಾಗಿದೆ. ಸರ್ಕಾರ ಈಗಲಾದರೂ ಎಚ್ಚೆತ್ತುಕೊಳ್ಳುವುದೇ?


ಇದನ್ನೂ ಓದಿ: ಕೋವಿಡ್‌ಗೆ ಬಲಿಯಾದ ಪೌರಕಾರ್ಮಿಕರಿಗೆ ಶ್ರದ್ಧಾಂಜಲಿ: ಕಾಳಜಿ ವಹಿಸದ ಸರ್ಕಾರದ ವಿರುದ್ಧ ಪ್ರತಿಭಟನೆಗೆ ನಿರ್ಧಾರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಂವಿಧಾನದ ಬುಡಕ್ಕೆ ಕೊಡಲಿ ಏಟು: ಆರ್‌ಎಸ್‌ಎಸ್-ಬಿಜೆಪಿಯ ಷಡ್ಯಂತ್ರ ಸೋಲಿಸಲು ಎರಡನೇ ಸ್ವಾತಂತ್ರ್ಯ ಸಂಗ್ರಾಮ ಅನಿವಾರ್ಯ – ಬಿ.ಕೆ. ಹರಿಪ್ರಸಾದ್

ಎಸ್‌ಐಆರ್ (SIR) ವಿರೋಧಿ ಹೋರಾಟದಲ್ಲಿ ನಮ್ಮ ಪಕ್ಷ ನಿಮ್ಮ ಜೊತೆಗಿದೆ ಎಂದು ಹೇಳಲು ಸರ್ಕಾರದ ಪ್ರತಿನಿಧಿಯಾಗಿ ನಾನು ಇಲ್ಲಿ ಬಂದಿದ್ದೇನೆ. ನೀವು ಮಂಡಿಸಿರುವ ಹಕ್ಕೊತ್ತಾಯಗಳ ಕುರಿತು ನೂತನ ಮುಖ್ಯಮಂತ್ರಿಗಳು, ಸಿದ್ದರಾಮಯ್ಯ ಸೇರಿದಂತೆ ಪಕ್ಷದ...

ಮತದಾರರ ಪಟ್ಟಿಯಿಂದ 65 ಲಕ್ಷ ಜನರನ್ನು ಹೊರಹಾಕಿದ್ದು ಯಾರು? ಈ ಅಕ್ರಮಕ್ಕೆ ಚುನಾವಣಾ ಆಯೋಗವೇ ಉತ್ತರಿಸಬೇಕು: ಮೊಹಮ್ಮದ್ ಯೂಸುಫ್ ಕನ್ನಿ

"ಬ್ರಿಟಿಷರ ವಿರುದ್ಧ ಹೋರಾಡಿ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟಿದ್ದೇವೆ. 1952ರ ಮೊದಲ ಚುನಾವಣೆಯ ಸಂದರ್ಭದಲ್ಲಿ ಸುಮಾರು 17.32 ಕೋಟಿ ಮತದಾರರಿದ್ದರು. 1955ರಲ್ಲಿ ಸಿಟಿಜನ್‌ಶಿಪ್ ಆಕ್ಟ್ ಜಾರಿಯಾದ ಬಳಿಕ ನಡೆದ 1957ರ ಚುನಾವಣೆಯಲ್ಲಿ ಈ ಸಂಖ್ಯೆ...

ಸರ್ಕಾರ-ನ್ಯಾಯಾಂಗ ವ್ಯವಸ್ಥೆ ಕೈಬಿಟ್ಟರೆ ರಾಜ್ಯದ ಜನ ಅನಾಥರಾಗುತ್ತಾರೆ : ಹಿರಿಯ ಸಾಹಿತಿ ಬಿ.ಟಿ. ಲಲಿತಾ ನಾಯ್ಕ್

ಎಸ್‌ಐಆರ್‌ ವಿಚಾರದಲ್ಲಿ ಇಂದು ನಾಡಿನ ಜನತೆ ಭೀಕರ ಸಂಕಷ್ಟದಲ್ಲಿದ್ದಾರೆ. ಈ ಗೊಂದಲವನ್ನು ಉಂಟು ಮಾಡಿದವರು ಯಾರು? ಕೇಂದ್ರ ಸರ್ಕಾರವೋ ಅಥವಾ ಕರ್ನಾಟಕ ಸರ್ಕಾರದ ಅಲಕ್ಷ್ಯ ಇದಕ್ಕೆ ಕಾರಣವೇ? ಅಥವಾ ನಮಗೆ ಸಂಬಂಧವೇ ಇಲ್ಲ...

ಎಸ್ಐಆರ್ ಹೆಸರಿನಲ್ಲಿ ನಡೆಯುತ್ತಿರುವ ಜನವಿರೋಧಿ ಹುನ್ನಾರಗಳನ್ನು ಸೋಲಿಸಬೇಕಿದೆ: ಎಸ್. ವರಲಕ್ಷ್ಮಿ

ಬೆಂಗಳೂರು: ರಾಜ್ಯಾದ್ಯಂತ ಎಸ್ಐಆರ್ (SIR) ವಿರುದ್ಧ ನಡೆಯುತ್ತಿರುವ ಸಮಾವೇಶವು ಆಕ್ರಮಣಕಾರಿ ಧೋರಣೆಯ ವಿರುದ್ಧದ ಬೃಹತ್ ಪ್ರತಿರೋಧವಾಗಿದೆ ಎಂದು ಸಿಐಟಿಯು ರಾಜ್ಯ ಪ್ರಧಾನ ಕಾರ್ಯದರ್ಶಿ ಎಸ್. ವರಲಕ್ಷ್ಮಿ ತಿಳಿಸಿದರು. ಎಸ್ಐಆರ್ ಸಮಸ್ಯೆಯಲ್ಲ ಎಂದು ಬಿಂಬಿಸುವ ಸಂಘಪರಿವಾರದವರ...

ಮತದಾನ ನಮ್ಮ ಜನ್ಮಸಿದ್ದ ಹಕ್ಕು, ಎಸ್‌ಐಆರ್ ಕುರಿತು ಜನ ಜಾಗೃತಿ ಅಗತ್ಯ: ಪೀಟರ್ ಮಚಾಡೋ

'ಮತದಾನ ನಮ್ಮ ಜನ್ಮಸಿದ್ದ ಹಕ್ಕು ಅದನ್ನು ನಾವು ಬಿಟ್ಟು ಕೊಡುವುದಿಲ್ಲ' ಎಂದು ಕರ್ನಾಟಕ ಕ್ರೈಸ್ತ ಸಮುದಾಯದ ಮಹಾ ಧರ್ಮಾಧ್ಯಕ್ಷ ರೆವೆಂಡರ್ ಫಾದರ್ ಪೀಟರ್ ಮಚಾಡೋ ಹೇಳಿದರು. ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ...

ಸುರಿವ ಮಳೆಯಲ್ಲಿಯೂ ಎಸ್‌ಐಆರ್ ವಿರೋಧಿ ಜಾಥಾಕ್ಕೆ ಜೊತೆಯಾದ ಮಳವಳ್ಳಿ, ಮದ್ದೂರು, ಮಂಡ್ಯ ಜನತೆ

ಮಂಡ್ಯ: ಮಳವಳ್ಳಿಯ ಬಸ್ ನಿಲ್ದಾಣದ ಬಳಿ ಸುರಿವ ಮಳೆಯಲ್ಲಿಯೂ 'ಎಸ್‌ಐಆರ್ (SIR) ವಿರೋಧಿ ಕರ್ನಾಟಕ' ಜಾಥಾಕ್ಕೆ ಹೋರಾಟಗಾರರು, ಬರಹಗಾರರು, ಜನಚಳವಳಿಗಳ ಮುಖಂಡರು ಹಾಗೂ ಪ್ರಗತಿಪರರು ಬೆಂಬಲ ವ್ಯಕ್ತಪಡಿಸಿದರು‌. ಈ ವೇಳೆ ಎಸ್‌ಐಆರ್ ಕುರಿತು ಮಾತನಾಡಿದ...

ಚಿತ್ರದುರ್ಗದಲ್ಲಿ ಸಮಾರೋಪಗೊಂಡ ಮಾರ್ಗ -3 SIR ವಿರೋಧಿ ಜನಜಾಗೃತಿ ಜಾಥ: ಜೂನ್ 20ರ ಸಮಾವೇಶದ ಯಶಸ್ಸಿಗೆ ಕರೆ

ಚುನಾವಣಾ ಆಯೋಗ ಜಾರಿಗೆ ತರಲು ಹೊರಟಿರುವ ಎಸ್‌ಐಆರ್ (SIR) ವ್ಯವಸ್ಥೆಯನ್ನು ವಿರೋಧಿಸಿ ಹಮ್ಮಿಕೊಳ್ಳಲಾಗಿದ್ದ ‘ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾ’ವು ದಾವಣಗೆರೆಯಲ್ಲಿ ಪ್ರಚಾರ ಮುಗಿಸಿ ಚಿತ್ರದುರ್ಗವನ್ನು ತಲುಪಿದ್ದು, ಇಲ್ಲಿ ಯಶಸ್ವಿಯಾಗಿ ಸಮಾರೋಪಗೊಂಡಿದೆ. ಎದ್ದೇಳು ಕರ್ನಾಟಕ,...

ಗದಗ | ಮನುವಾದದ ಜಾರಿಗೆ ಎಸ್‌ಐಆರ್‌ ಹೇರಿಕೆ : ಡಾ.ಇಸಾಬೆಲ್ಲ ಝೇವಿಯರ್

ದೇಶದಲ್ಲಿ ಮನುವಾದ ಜಾರಿಗೆ ತರುವುದು ಆರ್‌ಎಸ್‌ಎಸ್‌-ಸಂಘಪರಿವಾರದ ಮೂಲ ಉದ್ದೇಶ, ಅದಕ್ಕಾಗಿ ಜನರ ಮೇಲೆ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಯಂತಹ ಹೊಸ ಹೊಸ ಪ್ರಕ್ರಿಯೆಗಳನ್ನು ಹೇರಲಾಗುತ್ತಿದೆ ಎಂದು ಸಾಮಾಜಿಕ ಹೋರಾಟಗಾರ್ತಿ...

ಸಂವಿಧಾನ ವಿರೋಧಿ ‘SIR’ಗೆ ಹರಿಹರದಲ್ಲಿ ತೀವ್ರ ವಿರೋಧ: ಜನಜಾಗೃತಿ ಜಾಥಾದ ಮೂಲಕ ಕೇಂದ್ರ ಸರ್ಕಾರದ ವಿರುದ್ಧ ನಾಗರಿಕರ ಆಕ್ರೋಶ

ದಾವಣಗೆರೆ ಜಿಲ್ಲೆಯ ಹರಿಹರ ತಾಲ್ಲೂಕಿನಲ್ಲಿ ಇತ್ತೀಚೆಗೆ ಕೇಂದ್ರ ಚುನಾವಣಾ ಆಯೋಗದ 'SIR' (ವಿಶೇಷ ಗುರುತಿನ ಪರಿಶೀಲನೆ/ಮರುಪರಿಶೀಲನಾ ಕ್ರಮ) ಯೋಜನೆ ವಿರುದ್ಧ ಬೃಹತ್ ಜನಜಾಗೃತಿ ಜಾಥಾ ಯಶಸ್ವಿಯಾಗಿ ಸಂಚರಿಸಿತು. ಸಾರ್ವಜನಿಕರಲ್ಲಿ ಈ ಯೋಜನೆಯ ಕುರಿತು...

“ಎಸ್ಐಆರ್ ಮೂಲಕ ಮನುವಾದದ ಜಾರಿಗೆ ಕುತಂತ್ರ ರೂಪಿಸುತ್ತಿರುವ ಬಿಜೆಪಿ ಗೆಲ್ಲಲು ಬಿಡುವುದಿಲ್ಲ”:  ಮೈಸೂರಿನಲ್ಲಿ ಜನಾಕ್ರೋಶ

2026 ಜೂನ್ 16 ರಂದು ಹುಣುಸೂರು, ಹೆಚ್.ಡಿ ಕೋಟೆ, ಮೈಸೂರಿನಲ್ಲಿ ಸಾಗಿದ ಎಸ್ಐಆರ್ ವಿರೋಧಿ ಕರ್ನಾಟಕ ಜಾಥಾಕ್ಕೆ ಹುಣುಸೂರಿನ ಸಂವಿಧಾನ ಸರ್ಕಲ್ ನಿಂದ ಅಭೂತಪೂರ್ವ ಬೆಂಬಲ ಸಿಕ್ಕಿತು. ಬೆಳಗ್ಗೆ 8 ಗಂಟೆ ಸುಮಾರಿಗೆ ಎಸ್ಐಆರ್...