Homeಮುಖಪುಟಆರ್ಥಿಕ ಕುಸಿತದಿಂದ ಬಡತನ ನಿವಾರಣೆಯ ಮೇಲೆ ಪ್ರತಿಕೂಲ ಪರಿಣಾಮ: ಅಭಿಜಿತ್‌ ಬ್ಯಾನರ್ಜಿ

ಆರ್ಥಿಕ ಕುಸಿತದಿಂದ ಬಡತನ ನಿವಾರಣೆಯ ಮೇಲೆ ಪ್ರತಿಕೂಲ ಪರಿಣಾಮ: ಅಭಿಜಿತ್‌ ಬ್ಯಾನರ್ಜಿ

- Advertisement -
- Advertisement -

ಆರ್ಥಿಕ ಕುಸಿತ ದೇಶಕ್ಕೆ ಹಲವಾರು ಗಂಭೀರ ಸವಾಲುಗಳನ್ನು ಒಡ್ಡಿದ್ದು, ಬಡತನ ನಿವಾರಣೆಯ ಮೇಲೆ ಪ್ರತಿಕೂಲ ಪರಿಣಾಮ ಬೀರಬಹುದು ಎಂದು ನೊಬೆಲ್‌ ವಿಜೇತ ಅರ್ಥಶಾಸ್ತ್ರಜ್ಞ ಅಭಿಜಿತ್‌ ಬ್ಯಾನರ್ಜಿ ಹೇಳಿದ್ದಾರೆ.

ಜೈಪುರ ಸಾಹಿತ್ಯೋತ್ಸವದಲ್ಲಿ “ಕಳಪೆ ಅರ್ಥಶಾಸ್ತ್ರ: ಜಾಗತಿಕ ಬಡತನದ ವಿರುದ್ಧ ಹೋರಾಡುವುದು” ಎಂಬ ವಿಷಯದ ಕುರಿತು ಮಾತನಾಡಿದ ಅವರು, ನಗರ ಮತ್ತು ಗ್ರಾಮೀಣ ವಲಯಗಳು ಉದ್ಯೋಗ ಸೃಷ್ಟಿಗೆ ಮತ್ತು ಕಡಿಮೆ ನುರಿತ ಕಾರ್ಮಿಕರ ಲಭ್ಯತೆಗಾಗಿ ಪರಸ್ಪರ ಅವಲಂಬಿಸಿವೆ. “ಭಾರತದಲ್ಲಿ ಆವರಿಸಿರುವ ಆರ್ಥಿಕ ಕುಸಿತ ಸದ್ಯದಲ್ಲಿ ಅಂತ್ಯವಾಗುವ ಲಕ್ಷಣಗಳಿಲ್ಲ” ಎಂದು ಹೇಳಿದ್ದಾರೆ.

ಆರ್ಥಿಕತೆಯನ್ನು ಸುಧಾರಿಸಲು ಸಾಕಷ್ಟು ಹಣವಿಲ್ಲದ ಕಾರಣ, ಕಷ್ಟಕರ ಪರಿಸ್ಥಿತಿಯಿಂದ ಹೊರಬರಲು ಬಹಳ ಸಮಯ ತೆಗೆದುಕೊಳ್ಳಬಹುದು. “ಕ್ರಮೇಣ ಹಲವಾರು ವಿಷಯಗಳಲ್ಲಿ ಕೆಲಸ ಮಾಡುವ ಅವಶ್ಯಕತೆಯಿದೆ. ನಮಗೆ ಹೆಚ್ಚಿನ ಬೇಡಿಕೆಯ ಕೊರತೆಯಿದೆ … ಜನರು ವಿಶ್ವಾಸ ಹೊಂದಿಲ್ಲದ ಕಾರಣ ಖರ್ಚು ಮಾಡದಿರುವುದೇ ಸಮಸ್ಯೆಗೆ ಕಾರಣವಾಗಿದೆ ಎಂದು ಹೇಳಿದ್ದಾರೆ.

2019 ರಲ್ಲಿ ಇತರ ಇಬ್ಬರ ಜೊತೆಯಲ್ಲಿ ನೊಬೆಲ್ ಅರ್ಥಶಾಸ್ತ್ರ ಪ್ರಶಸ್ತಿಯನ್ನು ಗೆದ್ದ ಭಾರತೀಯ-ಅಮೆರಿಕನ್ ಅರ್ಥಶಾಸ್ತ್ರಜ್ಞ ಬ್ಯಾನರ್ಜಿ, ನಗರ ವಲಯದಲ್ಲಿನ ಮಂದಗತಿಯು ಇಡೀ ಆರ್ಥಿಕತೆಗೆ ಋಣಾತ್ಮಕ ಪರಿಣಾಮಗಳನ್ನು ಉಂಟುಮಾಡುತ್ತಿದೆ. ಅಲ್ಲದೆ, ಬ್ಯಾಂಕಿಂಗ್ ಕ್ಷೇತ್ರಕ್ಕೆ ಒತ್ತು ನೀಡಲಾಗಿದ್ದು, ಜಾಮೀನು ನೀಡುವ ಸ್ಥಿತಿಯಲ್ಲಿ ಸರ್ಕಾರ ಇಲ್ಲ ಎಂದು ಅವರು ಹೇಳಿದ್ದಾರೆ.

ಬಡತನ ನಿವಾರಣೆಗೆ ಬಹುಮುಖಿ ವಿಧಾನಕ್ಕೆ ಒತ್ತು ನೀಡಿದ ಡಾ. ಬ್ಯಾನರ್ಜಿ, ಈ ಸಮಸ್ಯೆಯನ್ನು ಎದುರಿಸಲು “ಒಂದೇ ಬೆಳ್ಳಿಯ ಗುಂಡಿಗೆ ಬದಲಾಗಿ ಅನೇಕ ಬೆಳ್ಳಿ ಹಲಗೆಗಳ” ಅಗತ್ಯವಿದೆ. ಬಡವರಿಗೆ ಸಹಾಯಧನ ಮುಖ್ಯವಾಗಿದೆ ಮತ್ತು ಅದನ್ನು ನಿಲ್ಲಿಸಬಾರದು. ಅಸಹ್ಯ ಬಡತನದಲ್ಲಿ ವಾಸಿಸುವ ಜನರಿಗೆ ಕೆಲವು ಸವಲತ್ತುಗಳನ್ನು ನೀಡಬೇಕು. ಇದು ಪ್ರಯತ್ನವನ್ನು ಮುಂದುವರಿಸಲು ಮತ್ತು ಹೆಚ್ಚು ಶ್ರಮಿಸಲು ಪ್ರೋತ್ಸಾಹಿಸುತ್ತದೆ. ಆದರೆ ಅಗತ್ಯವಿಲ್ಲದವರಿಗೆ ಸಬ್ಸಿಡಿ ನೀಡಿದಾಗ ಗೊಂದಲ ಉಂಟಾಗುತ್ತದೆ ಎಂದು ಅವರು ಹೇಳಿದ್ದಾರೆ.

ಪರಿಣಾಮಕಾರಿ ಆಡಳಿತಕ್ಕಾಗಿ ದೇಶಕ್ಕೆ “ಉತ್ತಮ ವಿರೋಧ” ಬೇಕು ಎಂದ ಅವರು “ಪ್ರತಿಪಕ್ಷಗಳು ದುರ್ಬಲವಾಗಿದ್ದಾಗ, ಏನು ಬೇಕಾದರೂ ಮಾಡಬಹುದು ಎಂದು ಸರ್ಕಾರ ಭಾವಿಸುವಂತಹ ಪರಿಸ್ಥಿತಿಗೆ ಕಾರಣವಾಗುತ್ತದೆ ಎಂದಿದ್ದಾರೆ.

ಆಡಳಿತ ಪಕ್ಷ ತಮ್ಮ ಆಡಳಿತವನ್ನು ದಕ್ಷವಾಗಿ ನಿರ್ವಹಿಸಬೇಕಾದರೆ ಉತ್ತಮ ವಿರೋಧ ಪಕ್ಷವಿರಬೇಕು. ಆಗ ಆಡಳಿತ ಪಕ್ಷ ತನ್ನ ಸರಿತಪ್ಪಗಳನ್ನು ಅರ್ಥ ಮಾಡಿಕೊಳ್ಳಲು ಸಹಾಯವಾಗುತ್ತದೆ.  ಸರ್ವಾಧಿಕಾರ ಮತ್ತು ಆರ್ಥಿಕ ಯಶಸ್ಸಿನ ನಡುವಿನ ಸಂಪರ್ಕವು ಅನೇಕವೇಳೆ ಭ್ರಮೆ ಎಂದ ಅವರು, ಸರ್ಕಾರವು ವಿಶ್ವಾಸಾರ್ಹ ಡೇಟಾವನ್ನು ಒದಗಿಸಲು ವಿಫಲವಾದರೆ ವಿದೇಶಿ ಹೂಡಿಕೆದಾರರು ಆತಂಕಕ್ಕೊಳಗಾಗುತ್ತಾರೆ. ವಿಶ್ವಾಸಾರ್ಹ ಡೇಟಾ ಕೊಟ್ಟಿದ್ದೇ ಆದರಲ್ಲಿ ಇದು ಹೆಚ್ಚಿನ ಹೂಡಿಕೆಗಳಿಗೆ ಸಹಾಯ ಮಾಡುತ್ತದೆ ಮತ್ತು ಜಾಗತಿಕ ಭಾಗವಹಿಸುವಿಕೆಯನ್ನು ಖಚಿತಪಡಿಸುತ್ತದೆ ಎಂದು ಅವರು ಹೇಳಿದರು.

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಸಂವಿಧಾನ-ಪ್ರಜಾಪ್ರಭುತ್ವವನ್ನು ರಕ್ಷಿಸುವ ಹೋರಾಟ ಇಂದಿನಿಂದ ಆರಂಭ: ಮಲ್ಲಿಕಾರ್ಜುನ ಖರ್ಗೆ

0
2024ರ ಲೋಕಸಭೆ ಚುನಾವಣೆಯ ಮೊದಲ ಹಂತದ ಮತದಾನ ಇಂದಿನಿಂದ ಆರಂಭಗೊಂಡಿದ್ದು, ಮತದಾರರು ಎಚ್ಚರಿಕೆಯಿಂದ ಮತದಾನ ಮಾಡುವಂತೆ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಮನವಿ ಮಾಡಿದ್ದಾರೆ. "ಆರ್ಥಿಕ ಸಬಲೀಕರಣ ಮತ್ತು ಸಮಾನ ಅವಕಾಶಗಳ ಹೊಸ...