Homeಮುಖಪುಟಆರ್ಥಿಕ ಕುಸಿತದಿಂದ ಬಡತನ ನಿವಾರಣೆಯ ಮೇಲೆ ಪ್ರತಿಕೂಲ ಪರಿಣಾಮ: ಅಭಿಜಿತ್‌ ಬ್ಯಾನರ್ಜಿ

ಆರ್ಥಿಕ ಕುಸಿತದಿಂದ ಬಡತನ ನಿವಾರಣೆಯ ಮೇಲೆ ಪ್ರತಿಕೂಲ ಪರಿಣಾಮ: ಅಭಿಜಿತ್‌ ಬ್ಯಾನರ್ಜಿ

- Advertisement -
- Advertisement -

ಆರ್ಥಿಕ ಕುಸಿತ ದೇಶಕ್ಕೆ ಹಲವಾರು ಗಂಭೀರ ಸವಾಲುಗಳನ್ನು ಒಡ್ಡಿದ್ದು, ಬಡತನ ನಿವಾರಣೆಯ ಮೇಲೆ ಪ್ರತಿಕೂಲ ಪರಿಣಾಮ ಬೀರಬಹುದು ಎಂದು ನೊಬೆಲ್‌ ವಿಜೇತ ಅರ್ಥಶಾಸ್ತ್ರಜ್ಞ ಅಭಿಜಿತ್‌ ಬ್ಯಾನರ್ಜಿ ಹೇಳಿದ್ದಾರೆ.

ಜೈಪುರ ಸಾಹಿತ್ಯೋತ್ಸವದಲ್ಲಿ “ಕಳಪೆ ಅರ್ಥಶಾಸ್ತ್ರ: ಜಾಗತಿಕ ಬಡತನದ ವಿರುದ್ಧ ಹೋರಾಡುವುದು” ಎಂಬ ವಿಷಯದ ಕುರಿತು ಮಾತನಾಡಿದ ಅವರು, ನಗರ ಮತ್ತು ಗ್ರಾಮೀಣ ವಲಯಗಳು ಉದ್ಯೋಗ ಸೃಷ್ಟಿಗೆ ಮತ್ತು ಕಡಿಮೆ ನುರಿತ ಕಾರ್ಮಿಕರ ಲಭ್ಯತೆಗಾಗಿ ಪರಸ್ಪರ ಅವಲಂಬಿಸಿವೆ. “ಭಾರತದಲ್ಲಿ ಆವರಿಸಿರುವ ಆರ್ಥಿಕ ಕುಸಿತ ಸದ್ಯದಲ್ಲಿ ಅಂತ್ಯವಾಗುವ ಲಕ್ಷಣಗಳಿಲ್ಲ” ಎಂದು ಹೇಳಿದ್ದಾರೆ.

ಆರ್ಥಿಕತೆಯನ್ನು ಸುಧಾರಿಸಲು ಸಾಕಷ್ಟು ಹಣವಿಲ್ಲದ ಕಾರಣ, ಕಷ್ಟಕರ ಪರಿಸ್ಥಿತಿಯಿಂದ ಹೊರಬರಲು ಬಹಳ ಸಮಯ ತೆಗೆದುಕೊಳ್ಳಬಹುದು. “ಕ್ರಮೇಣ ಹಲವಾರು ವಿಷಯಗಳಲ್ಲಿ ಕೆಲಸ ಮಾಡುವ ಅವಶ್ಯಕತೆಯಿದೆ. ನಮಗೆ ಹೆಚ್ಚಿನ ಬೇಡಿಕೆಯ ಕೊರತೆಯಿದೆ … ಜನರು ವಿಶ್ವಾಸ ಹೊಂದಿಲ್ಲದ ಕಾರಣ ಖರ್ಚು ಮಾಡದಿರುವುದೇ ಸಮಸ್ಯೆಗೆ ಕಾರಣವಾಗಿದೆ ಎಂದು ಹೇಳಿದ್ದಾರೆ.

2019 ರಲ್ಲಿ ಇತರ ಇಬ್ಬರ ಜೊತೆಯಲ್ಲಿ ನೊಬೆಲ್ ಅರ್ಥಶಾಸ್ತ್ರ ಪ್ರಶಸ್ತಿಯನ್ನು ಗೆದ್ದ ಭಾರತೀಯ-ಅಮೆರಿಕನ್ ಅರ್ಥಶಾಸ್ತ್ರಜ್ಞ ಬ್ಯಾನರ್ಜಿ, ನಗರ ವಲಯದಲ್ಲಿನ ಮಂದಗತಿಯು ಇಡೀ ಆರ್ಥಿಕತೆಗೆ ಋಣಾತ್ಮಕ ಪರಿಣಾಮಗಳನ್ನು ಉಂಟುಮಾಡುತ್ತಿದೆ. ಅಲ್ಲದೆ, ಬ್ಯಾಂಕಿಂಗ್ ಕ್ಷೇತ್ರಕ್ಕೆ ಒತ್ತು ನೀಡಲಾಗಿದ್ದು, ಜಾಮೀನು ನೀಡುವ ಸ್ಥಿತಿಯಲ್ಲಿ ಸರ್ಕಾರ ಇಲ್ಲ ಎಂದು ಅವರು ಹೇಳಿದ್ದಾರೆ.

ಬಡತನ ನಿವಾರಣೆಗೆ ಬಹುಮುಖಿ ವಿಧಾನಕ್ಕೆ ಒತ್ತು ನೀಡಿದ ಡಾ. ಬ್ಯಾನರ್ಜಿ, ಈ ಸಮಸ್ಯೆಯನ್ನು ಎದುರಿಸಲು “ಒಂದೇ ಬೆಳ್ಳಿಯ ಗುಂಡಿಗೆ ಬದಲಾಗಿ ಅನೇಕ ಬೆಳ್ಳಿ ಹಲಗೆಗಳ” ಅಗತ್ಯವಿದೆ. ಬಡವರಿಗೆ ಸಹಾಯಧನ ಮುಖ್ಯವಾಗಿದೆ ಮತ್ತು ಅದನ್ನು ನಿಲ್ಲಿಸಬಾರದು. ಅಸಹ್ಯ ಬಡತನದಲ್ಲಿ ವಾಸಿಸುವ ಜನರಿಗೆ ಕೆಲವು ಸವಲತ್ತುಗಳನ್ನು ನೀಡಬೇಕು. ಇದು ಪ್ರಯತ್ನವನ್ನು ಮುಂದುವರಿಸಲು ಮತ್ತು ಹೆಚ್ಚು ಶ್ರಮಿಸಲು ಪ್ರೋತ್ಸಾಹಿಸುತ್ತದೆ. ಆದರೆ ಅಗತ್ಯವಿಲ್ಲದವರಿಗೆ ಸಬ್ಸಿಡಿ ನೀಡಿದಾಗ ಗೊಂದಲ ಉಂಟಾಗುತ್ತದೆ ಎಂದು ಅವರು ಹೇಳಿದ್ದಾರೆ.

ಪರಿಣಾಮಕಾರಿ ಆಡಳಿತಕ್ಕಾಗಿ ದೇಶಕ್ಕೆ “ಉತ್ತಮ ವಿರೋಧ” ಬೇಕು ಎಂದ ಅವರು “ಪ್ರತಿಪಕ್ಷಗಳು ದುರ್ಬಲವಾಗಿದ್ದಾಗ, ಏನು ಬೇಕಾದರೂ ಮಾಡಬಹುದು ಎಂದು ಸರ್ಕಾರ ಭಾವಿಸುವಂತಹ ಪರಿಸ್ಥಿತಿಗೆ ಕಾರಣವಾಗುತ್ತದೆ ಎಂದಿದ್ದಾರೆ.

ಆಡಳಿತ ಪಕ್ಷ ತಮ್ಮ ಆಡಳಿತವನ್ನು ದಕ್ಷವಾಗಿ ನಿರ್ವಹಿಸಬೇಕಾದರೆ ಉತ್ತಮ ವಿರೋಧ ಪಕ್ಷವಿರಬೇಕು. ಆಗ ಆಡಳಿತ ಪಕ್ಷ ತನ್ನ ಸರಿತಪ್ಪಗಳನ್ನು ಅರ್ಥ ಮಾಡಿಕೊಳ್ಳಲು ಸಹಾಯವಾಗುತ್ತದೆ.  ಸರ್ವಾಧಿಕಾರ ಮತ್ತು ಆರ್ಥಿಕ ಯಶಸ್ಸಿನ ನಡುವಿನ ಸಂಪರ್ಕವು ಅನೇಕವೇಳೆ ಭ್ರಮೆ ಎಂದ ಅವರು, ಸರ್ಕಾರವು ವಿಶ್ವಾಸಾರ್ಹ ಡೇಟಾವನ್ನು ಒದಗಿಸಲು ವಿಫಲವಾದರೆ ವಿದೇಶಿ ಹೂಡಿಕೆದಾರರು ಆತಂಕಕ್ಕೊಳಗಾಗುತ್ತಾರೆ. ವಿಶ್ವಾಸಾರ್ಹ ಡೇಟಾ ಕೊಟ್ಟಿದ್ದೇ ಆದರಲ್ಲಿ ಇದು ಹೆಚ್ಚಿನ ಹೂಡಿಕೆಗಳಿಗೆ ಸಹಾಯ ಮಾಡುತ್ತದೆ ಮತ್ತು ಜಾಗತಿಕ ಭಾಗವಹಿಸುವಿಕೆಯನ್ನು ಖಚಿತಪಡಿಸುತ್ತದೆ ಎಂದು ಅವರು ಹೇಳಿದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇಂದ್ರದ ವಿಬಿ-ಜಿ ರಾಮ್ ಜಿಗೆ ಟಕ್ಕರ್ : ಪ. ಬಂಗಾಳದ ‘ಕರ್ಮಶ್ರೀ’ ಯೋಜನೆಗೆ ಮಹಾತ್ಮ ಗಾಂಧಿ ಹೆಸರಿಡುವುದಾಗಿ ಘೋಷಿಸಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳ ಸರ್ಕಾರದ ಉದ್ಯೋಗ ಖಾತರಿ ಯೋಜನೆ 'ಕರ್ಮಶ್ರೀ'ಯನ್ನು ಮಹಾತ್ಮ ಗಾಂಧಿ ಹೆಸರಿನಲ್ಲಿ ಮರುನಾಮಕರಣ ಮಾಡುವುದಾಗಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಗುರುವಾರ (ಡಿಸೆಂಬರ್ 18) ಘೋಷಿಸಿದ್ದಾರೆ. ನರೇಗಾ ಯೋಜನೆಯಿಂದ ಮಹಾತ್ಮಾ ಗಾಂಧಿಯವರ ಹೆಸರನ್ನು ಕೈಬಿಟ್ಟಿರುವುದಕ್ಕೆ...

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ: ಶಾಸಕ ಕುಣಿಗಲ್ ರಂಗನಾಥ್ ವಿರುದ್ಧ ಕೆ.ಎನ್. ರಾಜಣ್ಣ ವಾಗ್ದಾಳಿ

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ ಮಾಡುವುದನ್ನು ಮಾಜಿ ಸಹಕಾರಿ ಸಚಿವ ಕೆ.ಎನ್. ರಾಜಣ್ಣ ಗುರುವಾರ ಬಲವಾಗಿ ಸಮರ್ಥಿಸಿಕೊಂಡಿದ್ದಾರೆ. ಆಡಳಿತ ಪಕ್ಷದೊಳಗಿನ ಸಾರ್ವಜನಿಕ ಭಿನ್ನಾಭಿಪ್ರಾಯದ ನಡುವೆಯೂ, "ಸಂಘಗಳಿಗೆ ವಿತರಿಸಲಾದ ನಿಧಿ ಠೇವಣಿದಾರರ ಹಣ,...

ತನ್ನದೇ ಶಾಸಕರ ಅನರ್ಹತೆ ಕೋರಿ ಬಿಆರ್‌ಎಸ್‌ ಅರ್ಜಿ : ತಿರಸ್ಕರಿಸಿದ ತೆಲಂಗಾಣ ಸ್ಪೀಕರ್

ಆಡಳಿತಾರೂಢ ಕಾಂಗ್ರೆಸ್‌ಗೆ ನಿಷ್ಠೆ ಬದಲಾಯಿಸಿದ್ದಾರೆಂದು ಹೇಳಲಾದ ಹತ್ತು ಬಿಆರ್‌ಎಸ್ ಶಾಸಕರನ್ನು ಅನರ್ಹಗೊಳಿಸುವಂತೆ ಕೋರಿದ್ದ ಅರ್ಜಿಗಳ ಪೈಕಿ ಐದು ಅರ್ಜಿಗಳನ್ನು ತೆಲಂಗಾಣ ವಿಧಾನಸಭೆಯ ಸ್ಪೀಕರ್ ಗದ್ದಂ ಪ್ರಸಾದ್ ಕುಮಾರ್ ಬುಧವಾರ (ಡಿಸೆಂಬರ್ 18) ತಿರಸ್ಕರಿಸಿದ್ದಾರೆ....

ಸಾಮಾಜಿಕ ಬಹಿಷ್ಕಾರ, ದ್ವೇಷ ಭಾಷಣ ತಡೆ ವಿಧೇಯಕಗಳು ವಿಧಾನಸಭೆಯಲ್ಲಿ ಅಂಗೀಕಾರ

ಕರ್ನಾಟಕ ಸಾಮಾಜಿಕ ಬಹಿಷ್ಕಾರ (ಪ್ರತಿಬಂಧ, ನಿಷೇಧ ಮತ್ತು ಪರಿಹಾರ) ವಿಧೇಯಕ-2025 ಗುರುವಾರ (ಡಿ.18) ವಿಧಾನಸಭೆಯಲ್ಲಿ ಸರ್ವಾನುಮತದ ಅಂಗೀಕಾರಗೊಂಡಿತು. ಬೆಳಗಾವಿ ಸುವರ್ಣ ಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ವಿಧಾನಮಂಡಲ ಅಧಿವೇಶನದ ವಿಧಾನಸಭೆ ಕಲಾಪದಲ್ಲಿ ಸಮಾಜ ಕಲ್ಯಾಣ ಇಲಾಖೆ...

ಆಕ್ರಮಿತ ಪೂರ್ವ ಜೆರುಸಲೆಮ್ ವಸಾಹತು ಪ್ರದೇಶದಲ್ಲಿ 9000 ವಸತಿ ಘಟಕಗಳ ಯೋಜನೆ ಮುಂದಿಟ್ಟ ಇಸ್ರೇಲ್ 

ಆಕ್ರಮಿತ ಪೂರ್ವ ಜೆರುಸಲೆಮ್‌ನಲ್ಲಿರುವ ಕೈಬಿಟ್ಟ ಖಲಾಂಡಿಯಾ ವಿಮಾನ ನಿಲ್ದಾಣದ ಸ್ಥಳ ಬಳಿ ಅಕ್ರಮ ವಸಾಹತು ಪ್ರದೇಶದಲ್ಲಿ ಸುಮಾರು 9,000 ಹೊಸ ವಸತಿ ಘಟಕಗಳನ್ನು ನಿರ್ಮಿಸಲು ಇಸ್ರೇಲಿ ಆಕ್ರಮಿತ ಅಧಿಕಾರಿಗಳು ಯೋಜನೆಗಳನ್ನು ರೂಪಿಸಲು ಸಜ್ಜಾಗಿದ್ದಾರೆ....

ವಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಲೋಕಸಭೆಯಲ್ಲಿ ‘ವಿಬಿ-ಜಿ ರಾಮ್ ಜಿ ಮಸೂದೆ’ ಅಂಗೀಕಾರ

ಪ್ರತಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಗುರುವಾರ (ಡಿ.18) ಲೋಕಸಭೆಯಲ್ಲಿ 'ವಿಕ್ಷಿತ್ ಭಾರತ್ ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ್ ) (ವಿಬಿ-ಜಿ ರಾಮ್ ಜಿ) ಮಸೂದೆ ಅಂಗೀಕಾರಗೊಂಡಿತು. ಈ ಮಸೂದೆ 2005ರಲ್ಲಿ...

ರಾಹುಲ್ ಗಾಂಧಿ ಆಪ್ತ ಸಹಾಯಕನ ಪತ್ನಿ ಪ್ರಜ್ಞಾ ಸತವ್ ಕಾಂಗ್ರೆಸ್ ಎಂಎಲ್‌ಸಿ ಸ್ಥಾನಕ್ಕೆ ರಾಜೀನಾಮೆ; ಬಿಜೆಪಿ ಸೇರುವ ನಿರೀಕ್ಷೆ

ಕಾಂಗ್ರೆಸ್ಸಿಗ ಮತ್ತು ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿಯವರ ಆಪ್ತರಾಗಿದ್ದ ದಿವಂಗತ ರಾಜೀವ್ ಸತವ್ ಅವರ ಪತ್ನಿ ಸತವ್ ಬಿಜೆಪಿಗೆ ಸೇರುವ ನಿರೀಕ್ಷೆಯಿದೆ. ಮಹಾರಾಷ್ಟ್ರದ ಕಾಂಗ್ರೆಸ್ ನಾಯಕಿ ಪ್ರಜ್ಞಾ ಸತವ್ ಅವರು ಗುರುವಾರ...

ಭೂ ಕಬಳಿಕೆ ಆರೋಪ : ಸದನದಲ್ಲಿ ಚರ್ಚೆಗೆ ಸಿದ್ದ ಎಂದ ಸಚಿವ ಕೃಷ್ಣ ಬೈರೇಗೌಡ

"ಸದನದ ಸದಸ್ಯನಾಗಿ ನನ್ನ ಹಕ್ಕನ್ನು ಬಿಟ್ಟುಕೊಡಲು ಸಿದ್ದನಿದ್ದೇನೆ. ನನ್ನ ಬಗ್ಗೆ ಎತ್ತಿರುವ ವೈಯಕ್ತಿಕ ಆರೋಪದ ಬಗ್ಗೆ ಚರ್ಚೆಗೆ ಸಿದ್ದ" ಎಂದು ಸಚಿವ ಕೃಷ್ಣ ಬೈರೇಗೌಡ ಹೇಳಿದರು. ಗುರುವಾರ (ಡಿ.18) ವಿಧಾನಸಭೆಯ ಶೂನ್ಯ ವೇಳೆಯಲ್ಲಿ, ವಿಧಾನಪರಿಷತ್...

ಡಿಸೆಂಬರ್ 15 ರ ಪ್ರತಿಭಟನೆಯಲ್ಲಿ ಭಾಗವಹಿಸಿದ್ದಕ್ಕಾಗಿ ಜಾಮಿಯಾ ಮಿಲಿಯಾ ವಿದ್ಯಾರ್ಥಿಗಳಿಗೆ ವಿಶ್ವವಿದ್ಯಾಲಯದಿಂದ ಶೋಕಾಸ್ ನೋಟಿಸ್‌

2019 ರಲ್ಲಿ ವಿದ್ಯಾರ್ಥಿಗಳ ಮೇಲಿನ ಹಿಂಸಾಚಾರ ನಡೆದು ಆರು ವರ್ಷಗಳು ತುಂಬಿದ್ದು, ಅದರ ವಾರ್ಷಿಕ ನೆನಪಿನಲ್ಲಿ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿದ್ಯಾರ್ಥಿಗಳು ಡಿಸೆಂಬರ್ 15 ರಂದು ಕ್ಯಾಂಪಸ್ ಒಳಗೆ ದೊಡ್ಡ ಪ್ರತಿಭಟನೆ ನಡೆಸಿದ್ದರು....

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...