Homeಮುಖಪುಟಆರ್ಥಿಕ ಕುಸಿತದಿಂದ ಬಡತನ ನಿವಾರಣೆಯ ಮೇಲೆ ಪ್ರತಿಕೂಲ ಪರಿಣಾಮ: ಅಭಿಜಿತ್‌ ಬ್ಯಾನರ್ಜಿ

ಆರ್ಥಿಕ ಕುಸಿತದಿಂದ ಬಡತನ ನಿವಾರಣೆಯ ಮೇಲೆ ಪ್ರತಿಕೂಲ ಪರಿಣಾಮ: ಅಭಿಜಿತ್‌ ಬ್ಯಾನರ್ಜಿ

- Advertisement -
- Advertisement -

ಆರ್ಥಿಕ ಕುಸಿತ ದೇಶಕ್ಕೆ ಹಲವಾರು ಗಂಭೀರ ಸವಾಲುಗಳನ್ನು ಒಡ್ಡಿದ್ದು, ಬಡತನ ನಿವಾರಣೆಯ ಮೇಲೆ ಪ್ರತಿಕೂಲ ಪರಿಣಾಮ ಬೀರಬಹುದು ಎಂದು ನೊಬೆಲ್‌ ವಿಜೇತ ಅರ್ಥಶಾಸ್ತ್ರಜ್ಞ ಅಭಿಜಿತ್‌ ಬ್ಯಾನರ್ಜಿ ಹೇಳಿದ್ದಾರೆ.

ಜೈಪುರ ಸಾಹಿತ್ಯೋತ್ಸವದಲ್ಲಿ “ಕಳಪೆ ಅರ್ಥಶಾಸ್ತ್ರ: ಜಾಗತಿಕ ಬಡತನದ ವಿರುದ್ಧ ಹೋರಾಡುವುದು” ಎಂಬ ವಿಷಯದ ಕುರಿತು ಮಾತನಾಡಿದ ಅವರು, ನಗರ ಮತ್ತು ಗ್ರಾಮೀಣ ವಲಯಗಳು ಉದ್ಯೋಗ ಸೃಷ್ಟಿಗೆ ಮತ್ತು ಕಡಿಮೆ ನುರಿತ ಕಾರ್ಮಿಕರ ಲಭ್ಯತೆಗಾಗಿ ಪರಸ್ಪರ ಅವಲಂಬಿಸಿವೆ. “ಭಾರತದಲ್ಲಿ ಆವರಿಸಿರುವ ಆರ್ಥಿಕ ಕುಸಿತ ಸದ್ಯದಲ್ಲಿ ಅಂತ್ಯವಾಗುವ ಲಕ್ಷಣಗಳಿಲ್ಲ” ಎಂದು ಹೇಳಿದ್ದಾರೆ.

ಆರ್ಥಿಕತೆಯನ್ನು ಸುಧಾರಿಸಲು ಸಾಕಷ್ಟು ಹಣವಿಲ್ಲದ ಕಾರಣ, ಕಷ್ಟಕರ ಪರಿಸ್ಥಿತಿಯಿಂದ ಹೊರಬರಲು ಬಹಳ ಸಮಯ ತೆಗೆದುಕೊಳ್ಳಬಹುದು. “ಕ್ರಮೇಣ ಹಲವಾರು ವಿಷಯಗಳಲ್ಲಿ ಕೆಲಸ ಮಾಡುವ ಅವಶ್ಯಕತೆಯಿದೆ. ನಮಗೆ ಹೆಚ್ಚಿನ ಬೇಡಿಕೆಯ ಕೊರತೆಯಿದೆ … ಜನರು ವಿಶ್ವಾಸ ಹೊಂದಿಲ್ಲದ ಕಾರಣ ಖರ್ಚು ಮಾಡದಿರುವುದೇ ಸಮಸ್ಯೆಗೆ ಕಾರಣವಾಗಿದೆ ಎಂದು ಹೇಳಿದ್ದಾರೆ.

2019 ರಲ್ಲಿ ಇತರ ಇಬ್ಬರ ಜೊತೆಯಲ್ಲಿ ನೊಬೆಲ್ ಅರ್ಥಶಾಸ್ತ್ರ ಪ್ರಶಸ್ತಿಯನ್ನು ಗೆದ್ದ ಭಾರತೀಯ-ಅಮೆರಿಕನ್ ಅರ್ಥಶಾಸ್ತ್ರಜ್ಞ ಬ್ಯಾನರ್ಜಿ, ನಗರ ವಲಯದಲ್ಲಿನ ಮಂದಗತಿಯು ಇಡೀ ಆರ್ಥಿಕತೆಗೆ ಋಣಾತ್ಮಕ ಪರಿಣಾಮಗಳನ್ನು ಉಂಟುಮಾಡುತ್ತಿದೆ. ಅಲ್ಲದೆ, ಬ್ಯಾಂಕಿಂಗ್ ಕ್ಷೇತ್ರಕ್ಕೆ ಒತ್ತು ನೀಡಲಾಗಿದ್ದು, ಜಾಮೀನು ನೀಡುವ ಸ್ಥಿತಿಯಲ್ಲಿ ಸರ್ಕಾರ ಇಲ್ಲ ಎಂದು ಅವರು ಹೇಳಿದ್ದಾರೆ.

ಬಡತನ ನಿವಾರಣೆಗೆ ಬಹುಮುಖಿ ವಿಧಾನಕ್ಕೆ ಒತ್ತು ನೀಡಿದ ಡಾ. ಬ್ಯಾನರ್ಜಿ, ಈ ಸಮಸ್ಯೆಯನ್ನು ಎದುರಿಸಲು “ಒಂದೇ ಬೆಳ್ಳಿಯ ಗುಂಡಿಗೆ ಬದಲಾಗಿ ಅನೇಕ ಬೆಳ್ಳಿ ಹಲಗೆಗಳ” ಅಗತ್ಯವಿದೆ. ಬಡವರಿಗೆ ಸಹಾಯಧನ ಮುಖ್ಯವಾಗಿದೆ ಮತ್ತು ಅದನ್ನು ನಿಲ್ಲಿಸಬಾರದು. ಅಸಹ್ಯ ಬಡತನದಲ್ಲಿ ವಾಸಿಸುವ ಜನರಿಗೆ ಕೆಲವು ಸವಲತ್ತುಗಳನ್ನು ನೀಡಬೇಕು. ಇದು ಪ್ರಯತ್ನವನ್ನು ಮುಂದುವರಿಸಲು ಮತ್ತು ಹೆಚ್ಚು ಶ್ರಮಿಸಲು ಪ್ರೋತ್ಸಾಹಿಸುತ್ತದೆ. ಆದರೆ ಅಗತ್ಯವಿಲ್ಲದವರಿಗೆ ಸಬ್ಸಿಡಿ ನೀಡಿದಾಗ ಗೊಂದಲ ಉಂಟಾಗುತ್ತದೆ ಎಂದು ಅವರು ಹೇಳಿದ್ದಾರೆ.

ಪರಿಣಾಮಕಾರಿ ಆಡಳಿತಕ್ಕಾಗಿ ದೇಶಕ್ಕೆ “ಉತ್ತಮ ವಿರೋಧ” ಬೇಕು ಎಂದ ಅವರು “ಪ್ರತಿಪಕ್ಷಗಳು ದುರ್ಬಲವಾಗಿದ್ದಾಗ, ಏನು ಬೇಕಾದರೂ ಮಾಡಬಹುದು ಎಂದು ಸರ್ಕಾರ ಭಾವಿಸುವಂತಹ ಪರಿಸ್ಥಿತಿಗೆ ಕಾರಣವಾಗುತ್ತದೆ ಎಂದಿದ್ದಾರೆ.

ಆಡಳಿತ ಪಕ್ಷ ತಮ್ಮ ಆಡಳಿತವನ್ನು ದಕ್ಷವಾಗಿ ನಿರ್ವಹಿಸಬೇಕಾದರೆ ಉತ್ತಮ ವಿರೋಧ ಪಕ್ಷವಿರಬೇಕು. ಆಗ ಆಡಳಿತ ಪಕ್ಷ ತನ್ನ ಸರಿತಪ್ಪಗಳನ್ನು ಅರ್ಥ ಮಾಡಿಕೊಳ್ಳಲು ಸಹಾಯವಾಗುತ್ತದೆ.  ಸರ್ವಾಧಿಕಾರ ಮತ್ತು ಆರ್ಥಿಕ ಯಶಸ್ಸಿನ ನಡುವಿನ ಸಂಪರ್ಕವು ಅನೇಕವೇಳೆ ಭ್ರಮೆ ಎಂದ ಅವರು, ಸರ್ಕಾರವು ವಿಶ್ವಾಸಾರ್ಹ ಡೇಟಾವನ್ನು ಒದಗಿಸಲು ವಿಫಲವಾದರೆ ವಿದೇಶಿ ಹೂಡಿಕೆದಾರರು ಆತಂಕಕ್ಕೊಳಗಾಗುತ್ತಾರೆ. ವಿಶ್ವಾಸಾರ್ಹ ಡೇಟಾ ಕೊಟ್ಟಿದ್ದೇ ಆದರಲ್ಲಿ ಇದು ಹೆಚ್ಚಿನ ಹೂಡಿಕೆಗಳಿಗೆ ಸಹಾಯ ಮಾಡುತ್ತದೆ ಮತ್ತು ಜಾಗತಿಕ ಭಾಗವಹಿಸುವಿಕೆಯನ್ನು ಖಚಿತಪಡಿಸುತ್ತದೆ ಎಂದು ಅವರು ಹೇಳಿದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಹೊಸ ಕಾರ್ಮಿಕ ಕಾನೂನು ಶ್ರಮಿಕರ ಮೂಲಭೂತ ಹಕ್ಕುಗಳಿಗೆ ಕತ್ತರಿ!

"8 ಗಂಟೆ ಕೆಲಸ, 8 ಗಂಟೆ ಮನರಂಜನೆ, 8 ಗಂಟೆ ವಿಶ್ರಾಂತಿ" ಎಂಬ ತತ್ವವು ಸುಲಭವಾಗಿ ದೊರೆತದ್ದಲ್ಲ, ಇದು ದೀರ್ಘಕಾಲದ ಹೋರಾಟ, ತ್ಯಾಗ ಮತ್ತು ಏಕತೆಯ ಫಲವಾಗಿದೆ. ಕೆಲಸದ ಹೊರೆ ಅತಿಯಾಗಿ ಇದ್ದ...

ಮನರೇಗಾ ಯಶೋಗಾಥೆ: ಭಾಗ-1 ದಲಿತರು-ಮಹಿಳೆಯರಿಗೆ ಆರ್ಥಿಕ ಭದ್ರತೆ; ಗ್ರಾಮ ಸಬಲೀಕರಣಕ್ಕೆ ಮನರೇಗಾ ಕೊಟ್ಟ ಕೊಡುಗೆ ಅಪಾರ

2001-2004 ರವರೆಗಿನ ನಿರಂತರ ಬರ ಕರ್ನಾಟಕದ ಬಹುತೇಕ ಹಳ್ಳಿಗಳನ್ನು ಕಂಗಾಲಾಗಿಸಿದ್ದಂತೂ ನಿಜ. ಎಲ್ಲ ಕೆರೆಗಳು ಬತ್ತಿಹೋಗಿದ್ದರಿಂದ ದನಕರುಗಳಿಗೆ ನೀರು ಕುಡಿಸಲೂ ಜನ ಅಲೆದಾಡುತ್ತಿದ್ದರು. ಜನರಿಗೆ ಕುಡಿಯುವ ನೀರು ಪೂರೈಕೆ ಸಹ ಆ ಸಂದರ್ಭದಲ್ಲಿ...

ಮಣಿಪುರ: ಬುಡಕಟ್ಟು ಚರ್ಚ್ ನಾಯಕರ ಮೇಲೆ ಉಗ್ರ ದಾಳಿ:  ಹಲವೆಡೆ ಮೇಣದ ಬತ್ತಿಯ ಜೊತೆಗೆ ಶೋಕ ವ್ಯಕ್ತ ಪಡಿಸಿದ ಕುಕಿ ಸಮುದಾಯ 

ಇಂಫಾಲ್: ಮಣಿಪುರದ ಕಾಂಗ್‌ಪೋಕ್ಪಿ ಜಿಲ್ಲೆಯಲ್ಲಿ ಮೂವರು ಪ್ರಮುಖ ಕುಕಿ ಚರ್ಚ್ ನಾಯಕರನ್ನು ಹೊಂಚು ಹಾಕಿ ದಾಳಿ ನಡೆಸಿ ಕೊಲ್ಲಲಾಗಿದೆ. ಈ ಘಟನೆಯು ರಾಜ್ಯದಲ್ಲಿ ಜನಾಂಗೀಯ ಉದ್ವಿಗ್ನತೆಯನ್ನು ಮತ್ತಷ್ಟು ತೀವ್ರಗೊಳಿಸಿದೆ.  ಮೇ 13ರಂದು ಬೆಳಿಗ್ಗೆ ಚುರಾಚಂದ್‌ಪುರನಲ್ಲಿ...

ಗುಜರಾತ್| ಮದುವೆ ಮೆರವಣಿಗೆಯಲ್ಲಿ ಕುದುರೆ ಸವಾರಿ ಮಾಡಿದ ದಲಿತ ವರನ ಮೇಲೆ ಹಲ್ಲೆ

ಗುಜರಾತ್‌ನ ಮೆಹ್ಸಾನಾ ಜಿಲ್ಲೆಯ ಮಡಿ ಗ್ರಾಮದಲ್ಲಿ ಮದುವೆ ಮೆರವಣಿಗೆಯಲ್ಲಿ ಕುದುರೆ ಸವಾರಿ ಮಾಡುತ್ತಿದ್ದ ದಲಿತ ವರನ ಮೇಲೆ ಮೇಲ್ಜಾತಿಯ ಪುರುಷರ ಗುಂಪೊಂದು ಜಾತಿ ನಿಂದನೆ ಮಾಡಿ ನಿಂದಿಸಿದ್ದಾರೆ ಎಂದು ಆರೋಪಿಸಲಾಗಿದೆ. ಮೇ 10 ರಂದು...

ಆತಂಕಕಾರಿಯಾದ ಆನೆ ದಾಳಿ

ಆನೆ ದಾಳಿ ಹಿಂದೆಂದಿಗಿಂತಲೂ ದುಪ್ಪಟ್ಟಾಗಿದೆ. ಅರಣ್ಯಮಂತ್ರಿ ಈಶ್ವರ್ ಖಂಡ್ರೆಯವರ ಪ್ರಕಾರ ಆನೆಗಳ ಸಂಖ್ಯೆ ದುಪ್ಪಟ್ಟಾಗಿದೆ. ಕಾಡಿನ ಪ್ರಮಾಣ ಅಷ್ಟೆ ಇದೆ. ಅಂದರೆ ಕಾಡಿನ ಪ್ರಮಾಣ ಹೆಚ್ಚು ಮಾಡಬೇಕೆಂದರೆ ಮನುಷ್ಯರ ಆವಾಸ ಇಲ್ಲದೆ ಆನೆಗಳಿಗಾಗಿ...

ವೈದ್ಯಕೀಯ ಸೀಟುಗಳ ಹಂಚಿಕೆ ಕೇಂದ್ರೀಕರಣಕ್ಕೆ ದಕ್ಷಿಣದ ವಿರೋಧ; ನೀಟ್ ಪರೀಕ್ಷೆಯನ್ನೇ ರದ್ದುಗೊಳಿಸಲು ಇದು ಸಕಾಲ

ರಾಜ್ಯಪಟ್ಟಿಯಲ್ಲಿದ್ದ ಶಿಕ್ಷಣದ ಹಕ್ಕನ್ನು ನೀಟ್‌ ಹೆಸರಿನಲ್ಲಿ ಕೇಂದ್ರದ ಜಂಟಿ ಪಟ್ಟಿಗೆ ಸೇರಿಸುವ ಒಕ್ಕೂಟ ಸರ್ಕಾರದ ನಿರ್ಧಾರದಿಂದ ದಕ್ಷಿಣದ ರಾಜ್ಯಗಳು ಭಾರಿ ನಷ್ಟ ಅನುಭವಿಸುತ್ತಿವೆ. ಜೊತೆಗೆ, ನೀಟ್ ಪಾಸ್‌ ಮಾಡುವ ಒತ್ತಡ ತಾಳಲಾರದೆ ದೇಶದಾದ್ಯಂತ...

‘ಮತ’ ವ್ಯರ್ಥ ಮಾಡದ ಮತದಾರ: 2026ರಲ್ಲಿ ಕುಸಿಯಿತು ‘ನೋಟಾ’ ಅಬ್ಬರ

2026ರ ವಿಧಾನಸಭಾ ಚುನಾವಣೆಯಲ್ಲಿ ಅಸ್ಸಾಂ, ಕೇರಳ, ಪುದುಚೇರಿ, ತಮಿಳುನಾಡು ಮತ್ತು ಪಶ್ಚಿಮ ಬಂಗಾಳದಾದ್ಯಂತ ಸುಮಾರು 10.9 ಲಕ್ಷ ಮತಗಳು 'ನೋಟಾ' (ಯಾರಿಗೂ ಮತವಿಲ್ಲ) ಪಾಲಾಗಿವೆ. ಆದರೆ, 2016 ಮತ್ತು 2021ರ ಚುನಾವಣೆಗಳಿಗೆ ಹೋಲಿಸಿದರೆ...

ಕೇರಳದ 13ನೇ ಮುಖ್ಯಮಂತ್ರಿ ವಿ.ಡಿ. ಸತೀಶನ್: ವಿದ್ಯಾರ್ಥಿ ನಾಯಕನಿಂದ ಸಿಎಂ ಸ್ಥಾನದವರೆಗೆ ಸತೀಶನ್ ಪಯಣ

ತಿರುವನಂತಪುರಂ: ಕೇರಳಂನ ನೂತನ ಮುಖ್ಯಮಂತ್ರಿಯಾಗಿ ವಿ.ಡಿ. ಸತೀಶನ್ ಅವರನ್ನು ಕಾಂಗ್ರೆಸ್ ಹೈಕಮಾಂಡ್ ಆಯ್ಕೆ ಮಾಡಿದೆ. ಆ ಮೂಲಕ ಹಲವು ದಿನಗಳಿಂದ ಈ ಬಗ್ಗೆ ನಡೆಯುತ್ತಿದ್ದ ಕುತೂಹಲ ಮತ್ತು ಚರ್ಚೆಗಳಿಗೆ ತೆರೆ ಬಿದ್ದಿದೆ.  ಅಖಿಲ ಭಾರತ...

ದಲಿತರ ನ್ಯಾಯಕ್ಕೆ ಹೊಸ ಅಡ್ಡಿಯಾಗಲಿದೆಯೇ ‘ಸಾರ್ವಜನಿಕ ವೀಕ್ಷಣೆ’ ನಿಯಮ? ಪರಿಶಿಷ್ಟರನ್ನು ಆತಂಕಕ್ಕೆ ತಳ್ಳಿದ ಸುಪ್ರೀಂ ತೀರ್ಪು

ಸಾರ್ವಜನಿಕರು ನೋಡದ ಜಾಗದಲ್ಲಿ, ಅಂದರೆ ಯಾರೂ ನೋಡದ ಜಾಗದಲ್ಲಿ ಜಾತಿ ನಿಂದನೆ ಅಥವಾ ಅವಮಾನ ನಡೆದರೆ, ಅದು ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ (ದೌರ್ಜನ್ಯ ತಡೆ) ಕಾಯ್ದೆ 1989ರ ಅಡಿಯಲ್ಲಿ ಅಪರಾಧ...

ಪಶ್ಚಿಮ ಬಂಗಾಳ: “ಇದು ಬುಲ್ಡೋಜರ್ ರಾಜ್ಯವಲ್ಲ”: ಚುನಾವಣೋತ್ತರ ಹಿಂಸಾಚಾರದ ವಿರುದ್ಧ ಹೈಕೋರ್ಟ್ ಮೆಟ್ಟಿಲೇರಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳದ ಮಾಜಿ ಮುಖ್ಯಮಂತ್ರಿ ಮತ್ತು ತೃಣಮೂಲ ಕಾಂಗ್ರೆಸ್ ಮುಖ್ಯಸ್ಥೆ ಮಮತಾ ಬ್ಯಾನರ್ಜಿ ಚುನಾವಣೋತ್ತರ ಹಿಂಸಾಚಾರದ ವಿರುದ್ಧ ಹೈಕೋರ್ಟ್ ಮೆಟ್ಟಿಲೇರಿದ್ದಾರೆ. ಗುರುವಾರ ವಕೀಲರ ನಿಲುವಂಗಿಯನ್ನು ಧರಿಸಿ ಕಲ್ಕತ್ತಾ ಹೈಕೋರ್ಟ್‌ಗೆ ಬಂದ ಅವರು ವಿಧಾನಸಭಾ...