Homeಕರ್ನಾಟಕಬಡತನ ಮತ್ತು ಆರ್ಥಿಕ ಸಂಕಷ್ಟ: ಒಂದು ವರ್ಷದೊಳಗೆ ರಾಜ್ಯದಲ್ಲಿ 850 ಆತ್ಮಹತ್ಯೆ ಪ್ರಕರಣ

ಬಡತನ ಮತ್ತು ಆರ್ಥಿಕ ಸಂಕಷ್ಟ: ಒಂದು ವರ್ಷದೊಳಗೆ ರಾಜ್ಯದಲ್ಲಿ 850 ಆತ್ಮಹತ್ಯೆ ಪ್ರಕರಣ

- Advertisement -
- Advertisement -

ಕೊರೊನಾದಿಂದಾಗಿ ಎದುರಾಗಿರುವ ಬಡತನ, ಆರ್ಥಿಕ ಸಂಕಷ್ಟ ಹಾಗೂ ಇತರ ಸಮಸ್ಯೆಯಿಂದಾಗಿ ರಾಜ್ಯದಲ್ಲಿ 850 ಜನರು ಆತ್ಮಹತ್ಯೆ ಮತ್ತು ಆತ್ಮಹತ್ಯೆಗೆ ಪ್ರಯತ್ನಿಸಿದ ಪ್ರಕರಣಗಳು ವರದಿಯಾಗಿವೆ. ಶನಿವಾರವಷ್ಟೇ, ಮೈಸೂರಿನಲ್ಲಿ 20 ವರ್ಷದ ಯುವತಿಯೊಬ್ಬರು ಆತ್ಮಹತ್ಯೆಯ ಹಾದಿ ಹಿಡಿದು, ತಮ್ಮ ಜೀವನವನ್ನು ಕೊನೆಗೊಳಿಸಿದ್ದರು.

ಜಿಲ್ಲೆಯ ಹೆಚ್‌ಡಿ ಕೋಟೆ ತಾಲ್ಲೂಕಿನ ಕಟ್ಟೇಮನುಗನಹಳ್ಳಿಯ 20 ವರ್ಷಕ್ಕಿಂತ ಒಳಗಿನ ಇಬ್ಬರು ಸಹೋದರರೂ ಕೂಡ ಇದೇ ರೀತಿಯ ಹೆಜ್ಜೆಯನ್ನು ಅನುಸರಿಸಿದ್ದರು. ಈ ಇಬ್ಬರೂ ಸಹೋದರರು ನಿರುದ್ಯೋಗದಿಂದಾಗಿ ಖಿನ್ನತೆಗೆ ಒಳಗಾಗಿದ್ದರು ಎಂದು ವರದಿಯಾಗಿತ್ತು. ಕೆಲವು ತಿಂಗಳ ಹಿಂದೆ, ಚಾಮರಾಜನಗರದ ಎಚ್ ಮೂಕಹಳ್ಳಿಯ ನಾಲ್ವರ ಕುಟುಂಬವೊಂದು ಆರ್ಥಿಕ ಸಂಕಷ್ಟದಿಂದಾಗಿ ಆತ್ಮಹತ್ಯೆಗೆ ಬಲಿಯಾಗಿದೆ.

ಇದನ್ನೂ ಓದಿ: ಕೊರೊನಾ ರೋಗಿಗಳ ಸಮಸ್ಯೆಯನ್ನು ಸ್ವಯಂಪ್ರೇರಿತವಾಗಿ ಕೈಗೆತ್ತಿಕೊ೦ಡ ಕರ್ನಾಟಕ ಹೈಕೋರ್ಟ್

ಇತ್ತೀಚಿನ ದಿನಗಳಲ್ಲಿ ರಾಜ್ಯದಲ್ಲಿ ವರದಿಯಾಗಿರುವ ಇಂತಹ ಅನೇಕ ಆತ್ಮಹತ್ಯೆ ಪ್ರಕರಣಗಳಲ್ಲಿ ಇವು ಕೆಲವು ಮಾತ್ರ. ಬಡತನ, ಆರ್ಥಿಕ ಸಂಕಷ್ಟ, ನಿರುದ್ಯೋಗ ಮತ್ತು ವ್ಯಾಪಾರದಲ್ಲಿನ ನಷ್ಟ, ಈ ಪ್ರಕರಣಗಳ ಹಿಂದಿನ ಕೆಲವು ಪ್ರಮುಖ ಕಾರಣಗಳಾಗಿವೆ. ರಾಜ್ಯಾದ್ಯಂತ ಈ ಕಾರಣಗಳಿಂದ ಆತ್ಮಹತ್ಯೆಗಳು ಪ್ರತಿನಿತ್ಯ ವರದಿಯಾಗುತ್ತಿವೆ.

ಕರ್ನಾಟಕ ಸರ್ಕಾರವು ಹೆಚ್ಚಿನ ಜನಸಂಖ್ಯೆಗೆ ಲಸಿಕೆ ಹಾಕಿದ್ದೇವೆ ಎಂದು ಹೆಮ್ಮೆ ಪಡುತ್ತಿದೆ. ಆದರೂ, ಆರ್ಥಿಕ ಸಂಕಷ್ಟ ಮತ್ತು ಬಡತನದ ಸಮಸ್ಯೆಯು ಜನರನ್ನು ತಮ್ಮ ಜೀವನವನ್ನೇ ಅಂತ್ಯಗೊಳಿಸಿಕೊಳ್ಳುವಂತಹ ತೀವ್ರತೆಗೆ ದೂಡುತ್ತಿದೆ. ಇದಕ್ಕೆ ಸರ್ಕಾರದ ಬಳಿ ಉತ್ತರವಿಲ್ಲ.

ಕರ್ನಾಟಕ ರಾಜ್ಯ ಪೊಲೀಸ್ ದತ್ತಾಂಶದ ಪ್ರಕಾರ, ಮಾರ್ಚ್ 2020ರಿಂದ (ರಾಜ್ಯದಲ್ಲಿ ಮೊದಲ ಕೊರೊನಾ ಪ್ರಕರಣ ವರದಿಯಾದ ಸಂದರ್ಭ) ಮೇ 2021ರ ಅವಧಿಯಲ್ಲಿ ವಿವಿಧ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ 850 ಕ್ಕೂ ಹೆಚ್ಚು ಆತ್ಮಹತ್ಯೆ ಮತ್ತು ಆತ್ಮಹತ್ಯೆಗೆ ಪ್ರಯತ್ನಿಸಿದ ಪ್ರಕರಣಗಳು ವರದಿಯಾಗಿವೆ ಎಂದು ತಿಳಿಸುತ್ತದೆ. ರಾಜ್ಯದ ಗ್ರಾಮೀಣ ಪ್ರದೇಶಗಳಲ್ಲಿ ಈ ಪ್ರಕರಣಗಳು ಕಡಿಮೆ ವರದಿಯಾಗಿವೆ.

ಇದನ್ನೂ ಓದಿ: ಮೋದಿ 2.1: ಆರ್ಥಿಕ ಸಮಸ್ಯೆಗೆ ಪರಿಹಾರ ಕಾಣದ ಕೇಂದ್ರ ಸರ್ಕಾರಕ್ಕೆ ಕೊರೊನಾ ನೆಪ!

ಒಟ್ಟು 850 ಪ್ರಕರಣಗಳಲ್ಲಿ 10 ವರದಕ್ಷಿಣೆ, 344 ಬಡತನ ಮತ್ತು ಆರ್ಥಿಕ ಸಂಕಷ್ಟ ಸೇರಿದಂತೆ ಇತರ ಕಾರಣಗಳಿಂದ ಆತ್ಮಹತ್ಯೆ ಪ್ರಕರಣಗಳಾಗಿವೆ. 373 ಕ್ಕಿಂತ ಹೆಚ್ಚು ಆತ್ಮಹತ್ಯೆಗೆ ಪ್ರಚೋದನೆಯಿಂದಾಗಿ ಸಂಭವಿಸಿವೆ ಎಂದು ಪೊಲೀಸ್ ಡೇಟಾ ಬಹಿರಂಗಪಡಿಸಿದೆ. ಇದರ ಜೊತೆಗೆ, ವಿವಿಧ ಪೊಲೀಸ್ ಠಾಣೆಗಳಲ್ಲಿ ಸಂಬಂಧಿತ ಸೆಕ್ಷನ್ ಅಡಿಯಲ್ಲಿ 123 ಕ್ಕೂ ಹೆಚ್ಚು ಆತ್ಮಹತ್ಯೆಗೆ ಯತ್ನಿಸಿದ ಪ್ರಕರಣಗಳು ವರದಿಯಾಗಿವೆ.

ಆರ್ಥಿಕತೆಯ ಕುಸಿತವು ಜನರ ಮಾನಸಿಕ ಆರೋಗ್ಯದ ಮೇಲೆ ಹೆಚ್ಚಿನ ಪರಿಣಾಮ ಬೀರಿದೆ ಎಂದು ತಜ್ಞರು ಗಮನಸೆಳೆದಿದ್ದಾರೆ. ಜೀವನಶೈಲಿಯಲ್ಲಿ ಬದಲಾವಣೆ ಮತ್ತು ಅದರ ಮೇಲೆ ರಾಜಿ ಮಾಡಿಕೊಳ್ಳಲು ಅಸಮರ್ಥತೆ ಮತ್ತು ಭೌತಿಕ ಸೌಕರ್ಯಗಳ ಹಿಂದೆ ಓಡುವುದು ಕೂಡ ಇತರ ಕೆಲವು ಕಾರಣಗಳಾಗಿವೆ ಎಂದು ಅವರು ಹೇಳುತ್ತಾರೆ.

ಜೀವ ಅಮೂಲ್ಯವಾಗಿದ್ದು, ಸಮಸ್ಯೆಗಳಿಗೆ ಆತ್ಮಹತ್ಯೆ ಪರಿಹಾರವಲ್ಲ. ಯಾವುದೆ ಮಾನಸಿಕ ಸಮಸ್ಯೆಗಳಿಗೆ ವೈದ್ಯರನ್ನು ಸಂಪರ್ಕಿಸಿ.

ಬೆಂಗಳೂರು ಸಹಾಯವಾಣಿ 080-25497777, ಬೆಳಗ್ಗೆ 10ರಿಂದ ಸಂಜೆ 8ರವರೆಗೆ
ಆರೋಗ್ಯ ಸಹಾಯವಾಣಿ 104.

ಇದನ್ನೂ ಓದಿ: ಕೊರೊನಾ ಸಂಕಷ್ಟದಲ್ಲಿ ದೈಹಿಕ, ಮಾನಸಿಕವಾಗಿ ನಲುಗಿದ ಮಹಿಳೆಯರು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...