Homeಕರ್ನಾಟಕಬಡತನ ಮತ್ತು ಆರ್ಥಿಕ ಸಂಕಷ್ಟ: ಒಂದು ವರ್ಷದೊಳಗೆ ರಾಜ್ಯದಲ್ಲಿ 850 ಆತ್ಮಹತ್ಯೆ ಪ್ರಕರಣ

ಬಡತನ ಮತ್ತು ಆರ್ಥಿಕ ಸಂಕಷ್ಟ: ಒಂದು ವರ್ಷದೊಳಗೆ ರಾಜ್ಯದಲ್ಲಿ 850 ಆತ್ಮಹತ್ಯೆ ಪ್ರಕರಣ

- Advertisement -
- Advertisement -

ಕೊರೊನಾದಿಂದಾಗಿ ಎದುರಾಗಿರುವ ಬಡತನ, ಆರ್ಥಿಕ ಸಂಕಷ್ಟ ಹಾಗೂ ಇತರ ಸಮಸ್ಯೆಯಿಂದಾಗಿ ರಾಜ್ಯದಲ್ಲಿ 850 ಜನರು ಆತ್ಮಹತ್ಯೆ ಮತ್ತು ಆತ್ಮಹತ್ಯೆಗೆ ಪ್ರಯತ್ನಿಸಿದ ಪ್ರಕರಣಗಳು ವರದಿಯಾಗಿವೆ. ಶನಿವಾರವಷ್ಟೇ, ಮೈಸೂರಿನಲ್ಲಿ 20 ವರ್ಷದ ಯುವತಿಯೊಬ್ಬರು ಆತ್ಮಹತ್ಯೆಯ ಹಾದಿ ಹಿಡಿದು, ತಮ್ಮ ಜೀವನವನ್ನು ಕೊನೆಗೊಳಿಸಿದ್ದರು.

ಜಿಲ್ಲೆಯ ಹೆಚ್‌ಡಿ ಕೋಟೆ ತಾಲ್ಲೂಕಿನ ಕಟ್ಟೇಮನುಗನಹಳ್ಳಿಯ 20 ವರ್ಷಕ್ಕಿಂತ ಒಳಗಿನ ಇಬ್ಬರು ಸಹೋದರರೂ ಕೂಡ ಇದೇ ರೀತಿಯ ಹೆಜ್ಜೆಯನ್ನು ಅನುಸರಿಸಿದ್ದರು. ಈ ಇಬ್ಬರೂ ಸಹೋದರರು ನಿರುದ್ಯೋಗದಿಂದಾಗಿ ಖಿನ್ನತೆಗೆ ಒಳಗಾಗಿದ್ದರು ಎಂದು ವರದಿಯಾಗಿತ್ತು. ಕೆಲವು ತಿಂಗಳ ಹಿಂದೆ, ಚಾಮರಾಜನಗರದ ಎಚ್ ಮೂಕಹಳ್ಳಿಯ ನಾಲ್ವರ ಕುಟುಂಬವೊಂದು ಆರ್ಥಿಕ ಸಂಕಷ್ಟದಿಂದಾಗಿ ಆತ್ಮಹತ್ಯೆಗೆ ಬಲಿಯಾಗಿದೆ.

ಇದನ್ನೂ ಓದಿ: ಕೊರೊನಾ ರೋಗಿಗಳ ಸಮಸ್ಯೆಯನ್ನು ಸ್ವಯಂಪ್ರೇರಿತವಾಗಿ ಕೈಗೆತ್ತಿಕೊ೦ಡ ಕರ್ನಾಟಕ ಹೈಕೋರ್ಟ್

ಇತ್ತೀಚಿನ ದಿನಗಳಲ್ಲಿ ರಾಜ್ಯದಲ್ಲಿ ವರದಿಯಾಗಿರುವ ಇಂತಹ ಅನೇಕ ಆತ್ಮಹತ್ಯೆ ಪ್ರಕರಣಗಳಲ್ಲಿ ಇವು ಕೆಲವು ಮಾತ್ರ. ಬಡತನ, ಆರ್ಥಿಕ ಸಂಕಷ್ಟ, ನಿರುದ್ಯೋಗ ಮತ್ತು ವ್ಯಾಪಾರದಲ್ಲಿನ ನಷ್ಟ, ಈ ಪ್ರಕರಣಗಳ ಹಿಂದಿನ ಕೆಲವು ಪ್ರಮುಖ ಕಾರಣಗಳಾಗಿವೆ. ರಾಜ್ಯಾದ್ಯಂತ ಈ ಕಾರಣಗಳಿಂದ ಆತ್ಮಹತ್ಯೆಗಳು ಪ್ರತಿನಿತ್ಯ ವರದಿಯಾಗುತ್ತಿವೆ.

ಕರ್ನಾಟಕ ಸರ್ಕಾರವು ಹೆಚ್ಚಿನ ಜನಸಂಖ್ಯೆಗೆ ಲಸಿಕೆ ಹಾಕಿದ್ದೇವೆ ಎಂದು ಹೆಮ್ಮೆ ಪಡುತ್ತಿದೆ. ಆದರೂ, ಆರ್ಥಿಕ ಸಂಕಷ್ಟ ಮತ್ತು ಬಡತನದ ಸಮಸ್ಯೆಯು ಜನರನ್ನು ತಮ್ಮ ಜೀವನವನ್ನೇ ಅಂತ್ಯಗೊಳಿಸಿಕೊಳ್ಳುವಂತಹ ತೀವ್ರತೆಗೆ ದೂಡುತ್ತಿದೆ. ಇದಕ್ಕೆ ಸರ್ಕಾರದ ಬಳಿ ಉತ್ತರವಿಲ್ಲ.

ಕರ್ನಾಟಕ ರಾಜ್ಯ ಪೊಲೀಸ್ ದತ್ತಾಂಶದ ಪ್ರಕಾರ, ಮಾರ್ಚ್ 2020ರಿಂದ (ರಾಜ್ಯದಲ್ಲಿ ಮೊದಲ ಕೊರೊನಾ ಪ್ರಕರಣ ವರದಿಯಾದ ಸಂದರ್ಭ) ಮೇ 2021ರ ಅವಧಿಯಲ್ಲಿ ವಿವಿಧ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ 850 ಕ್ಕೂ ಹೆಚ್ಚು ಆತ್ಮಹತ್ಯೆ ಮತ್ತು ಆತ್ಮಹತ್ಯೆಗೆ ಪ್ರಯತ್ನಿಸಿದ ಪ್ರಕರಣಗಳು ವರದಿಯಾಗಿವೆ ಎಂದು ತಿಳಿಸುತ್ತದೆ. ರಾಜ್ಯದ ಗ್ರಾಮೀಣ ಪ್ರದೇಶಗಳಲ್ಲಿ ಈ ಪ್ರಕರಣಗಳು ಕಡಿಮೆ ವರದಿಯಾಗಿವೆ.

ಇದನ್ನೂ ಓದಿ: ಮೋದಿ 2.1: ಆರ್ಥಿಕ ಸಮಸ್ಯೆಗೆ ಪರಿಹಾರ ಕಾಣದ ಕೇಂದ್ರ ಸರ್ಕಾರಕ್ಕೆ ಕೊರೊನಾ ನೆಪ!

ಒಟ್ಟು 850 ಪ್ರಕರಣಗಳಲ್ಲಿ 10 ವರದಕ್ಷಿಣೆ, 344 ಬಡತನ ಮತ್ತು ಆರ್ಥಿಕ ಸಂಕಷ್ಟ ಸೇರಿದಂತೆ ಇತರ ಕಾರಣಗಳಿಂದ ಆತ್ಮಹತ್ಯೆ ಪ್ರಕರಣಗಳಾಗಿವೆ. 373 ಕ್ಕಿಂತ ಹೆಚ್ಚು ಆತ್ಮಹತ್ಯೆಗೆ ಪ್ರಚೋದನೆಯಿಂದಾಗಿ ಸಂಭವಿಸಿವೆ ಎಂದು ಪೊಲೀಸ್ ಡೇಟಾ ಬಹಿರಂಗಪಡಿಸಿದೆ. ಇದರ ಜೊತೆಗೆ, ವಿವಿಧ ಪೊಲೀಸ್ ಠಾಣೆಗಳಲ್ಲಿ ಸಂಬಂಧಿತ ಸೆಕ್ಷನ್ ಅಡಿಯಲ್ಲಿ 123 ಕ್ಕೂ ಹೆಚ್ಚು ಆತ್ಮಹತ್ಯೆಗೆ ಯತ್ನಿಸಿದ ಪ್ರಕರಣಗಳು ವರದಿಯಾಗಿವೆ.

ಆರ್ಥಿಕತೆಯ ಕುಸಿತವು ಜನರ ಮಾನಸಿಕ ಆರೋಗ್ಯದ ಮೇಲೆ ಹೆಚ್ಚಿನ ಪರಿಣಾಮ ಬೀರಿದೆ ಎಂದು ತಜ್ಞರು ಗಮನಸೆಳೆದಿದ್ದಾರೆ. ಜೀವನಶೈಲಿಯಲ್ಲಿ ಬದಲಾವಣೆ ಮತ್ತು ಅದರ ಮೇಲೆ ರಾಜಿ ಮಾಡಿಕೊಳ್ಳಲು ಅಸಮರ್ಥತೆ ಮತ್ತು ಭೌತಿಕ ಸೌಕರ್ಯಗಳ ಹಿಂದೆ ಓಡುವುದು ಕೂಡ ಇತರ ಕೆಲವು ಕಾರಣಗಳಾಗಿವೆ ಎಂದು ಅವರು ಹೇಳುತ್ತಾರೆ.

ಜೀವ ಅಮೂಲ್ಯವಾಗಿದ್ದು, ಸಮಸ್ಯೆಗಳಿಗೆ ಆತ್ಮಹತ್ಯೆ ಪರಿಹಾರವಲ್ಲ. ಯಾವುದೆ ಮಾನಸಿಕ ಸಮಸ್ಯೆಗಳಿಗೆ ವೈದ್ಯರನ್ನು ಸಂಪರ್ಕಿಸಿ.

ಬೆಂಗಳೂರು ಸಹಾಯವಾಣಿ 080-25497777, ಬೆಳಗ್ಗೆ 10ರಿಂದ ಸಂಜೆ 8ರವರೆಗೆ
ಆರೋಗ್ಯ ಸಹಾಯವಾಣಿ 104.

ಇದನ್ನೂ ಓದಿ: ಕೊರೊನಾ ಸಂಕಷ್ಟದಲ್ಲಿ ದೈಹಿಕ, ಮಾನಸಿಕವಾಗಿ ನಲುಗಿದ ಮಹಿಳೆಯರು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಉತ್ತರ ಪ್ರದೇಶ| ರಸ್ತೆ ಗುಂಡಿಗೆ ಇಳಿದ ಆಂಬ್ಯುಲೆನ್ಸ್; ಮರುಜೀವ ಪಡೆದ ಮೆದುಳು ನಿಷ್ಕ್ರಿಯಗೊಂಡಿದ್ದ ಮಹಿಳೆ!

ಉತ್ತರ ಪ್ರದೇಶದ ಬರೇಲಿಯ ಖಾಸಗಿ ಆಸ್ಪತ್ರೆಯೊಂದರ ವೈದ್ಯರು ಮೆದುಳು ನಿಷ್ಕ್ರಿಯ ಎಂದು ಘೋಷಿಸಿದ್ದು, ಮಹಿಳೆಯೊಬ್ಬರ ಮೃತದೇಹವನ್ನು ಅಂತ್ಯಕ್ರಿಯೆಗಾಗಿ ಮನೆಗೆ ಸಾಗಿಸುತ್ತಿದ್ದಾಗ ಆಂಬ್ಯುಲೆನ್ಸ್ ರಸ್ತೆಯ ಗುಂಡಿಗೆ ಇಳಿದ ನಂತರ ಆಕೆ ಜೀವಂತವಾಗಿರುವ ಲಕ್ಷಣಗಳು ಕಂಡುಬಂದು...

ಪಶ್ಚಿಮ ಏಷ್ಯಾ ಸಂಘರ್ಷ: ದುಬೈ ವಿಮಾನ ನಿಲ್ದಾಣದ ಮೇಲೆ ಇರಾನ್​ ಡ್ರೋನ್​ ದಾಳಿ; ಭಾರತೀಯ ಪ್ರಜೆ ಸೇರಿ ನಾಲ್ವರಿಗೆ ಗಾಯ

ದುಬೈ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಬಳಿ ಇರಾನಿನ ಎರಡು ಡ್ರೋಣಗಳಿಂದ ದಾಳಿ ನಡೆದಿದೆ. ಈ ದಾಳಿಯಲ್ಲಿ ಓರ್ವ ಭಾರತೀಯ ಸೇರಿದಂತೆ ನಾಲ್ವರು ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಅಲ್ಲಿನ ಸರ್ಕಾರದ ಪರವಾಗಿ ಪ್ರಕಟಣೆ ಹೊರಡಿಸಿರುವ...

ಜಾರ್ಖಂಡ್| ಆಂಬ್ಯುಲೆನ್ಸ್ ನಿರಾಕರಿಸಿದ ಆಸ್ಪತ್ರೆ ಸಿಬ್ಬಂದಿ; ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿದ ತಂದೆ

ಆಸ್ಪತ್ರೆ ಸಿಬ್ಬಂದಿ ಆಂಬ್ಯುಲೆನ್ಸ್ ನಿರಾಕರಿಸಿದ್ದರಿಂದ ಕೂಲಿಕಾರ ತಂದೆಯೊಬ್ಬ ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿರುವ ಹೃದಯವಿದ್ರಾವಕ ಘಟನೆಯೊಂದು ಜಾರ್ಖಂಡ್‌ನ ಪಶ್ಚಿಮ ಸಿಂಗ್ಭೂಮ್ ಜಿಲ್ಲೆಯಲ್ಲಿ ಬೆಳಕಿಗೆ ಬಂದಿದೆ. ಕಳೆದ ಶನಿವಾರ ನಡೆದಿದೆ ಎನ್ನಲಾದ...

ಮಧುರಾಂತಕಂ ಬಳಿ 14 ವರ್ಷದ ಬಾಲಕಿಯ ಮೇಲೆ ಸಾಮೂಹಿಕ ಅತ್ಯಾಚಾರ: ಪೋಕ್ಸೋ ಪ್ರಕರಣದಡಿ ಓರ್ವ ರೌಡಿ ಶೀಟರ್ ಬಂಧನ

ಚೆನ್ನೈ (ಚೆಂಗಲ್ಪಟ್ಟು): ಸೋಮವಾರ ರಾತ್ರಿ ಮಧುರಾಂಟಕಂ ಬಳಿಯ ಜಲಮೂಲದ ದಡದಲ್ಲಿ 14 ವರ್ಷದ ಬಾಲಕಿಯ ಮೇಲೆ ರೌಡಿ ಶೀಟರ್ ಮತ್ತು ಆತನ ಸಹಚರರು ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ ಎಂದು ವರದಿಯಾಗಿದೆ. ಪ್ರಕರಣ ಸಂಬಂಧ ಪೋಕ್ಸೋ...

ಮುಸ್ಲಿಂ ಮಹಿಳೆಯರ ವಿರುದ್ಧದ ಷರಿಯಾ ಕಾನೂನಿಗೆ ಏಕರೂಪ ನಾಗರಿಕ ಸಂಹಿತೆ ಪರಿಹಾರ: ಸುಪ್ರೀಂ ಕೋರ್ಟ್

"ಮುಸ್ಲಿಂ ವೈಯಕ್ತಿಕ ಕಾನೂನಿನಡಿಯಲ್ಲಿ ತಾರತಮ್ಯದ ಆನುವಂಶಿಕ ನಿಬಂಧನೆಗಳನ್ನು ಪರಿಹರಿಸಲು ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಅತ್ಯಂತ ಪರಿಣಾಮಕಾರಿ ಪರಿಹಾರ ಎಂದು ಸುಪ್ರೀಂ ಕೋರ್ಟ್ ಮಂಗಳವಾರ (ಮಾ.20) ಹೇಳಿದೆ. ಮುಖ್ಯ ನ್ಯಾಯಮೂರ್ತಿ ಸೂರ್ಯ...

ಮುಂಬೈ: ಬಜೆಟ್ ಅಧಿವೇಶನದ ನಡುವೆ ವಿಧಾನ ಭವನದ ಬಳಿ ವ್ಯಕ್ತಿಯೊಬ್ಬನಿಂದ ಆತ್ಮಹತ್ಯೆಗೆ ಯತ್ನ: ವಶಕ್ಕೆ ಪಡೆದ ಪೊಲೀಸರು

ಮುಂಬೈ: ಮಾರ್ಚ್ 11, ಬುಧವಾರ ಮಹಾರಾಷ್ಟ್ರ ವಿಧಾನ ಭವನದ ಹೊರಗೆ ವ್ಯಕ್ತಿಯೊಬ್ಬರು ಆತ್ಮಾಹುತಿ ಮಾಡಿಕೊಳ್ಳಲು ಯತ್ನಿಸಿರುವುದಾಗಿ ವರದಿಯಾಗಿದೆ. ತಕ್ಷಣವೇ ಮುಂಬೈ ಪೊಲೀಸರು ಆತನನ್ನು ಬಂಧಿಸಿದ್ದಾರೆ.  2026 ರ ಮಹಾರಾಷ್ಟ್ರ ಬಜೆಟ್ ಅಧಿವೇಶನ ವಿಧಾನ ಭವನದಲ್ಲಿ...

ಕೋವಿಡ್ ಲಸಿಕೆ ಕೆಲ ಸಾವುಗಳಿಗೆ ಕಾರಣವಾಗಿದೆ ಎಂದು ಅಧಿಕೃತ ದತ್ತಾಂಶ ತೋರಿಸಿದೆ, ಸರ್ಕಾರ ಜವಾಬ್ದಾರಿಯಿಂದ ನುಣುಚಿಕೊಳ್ಳಲು ಸಾಧ್ಯವಿಲ್ಲ : ಸುಪ್ರೀಂ ಕೋರ್ಟ್

ಸರ್ಕಾರದ ಅಧೀನದ ಸಾರ್ವಜನಿಕ ಆರೋಗ್ಯ ವ್ಯವಸ್ಥೆಯ ಮೂಲಕ ಕೋವಿಡ್ ಲಸಿಕೆಯನ್ನು ವಿತರಿಸಲಾಗಿದೆ. ಕೋವಿಡ್ ಲಸಿಕೆ ಪಡೆದ ಬಳಿಕ ಕೆಲ ಸಾವುಗಳು ಸಂಭವಿಸಿರುವುದನ್ನು ಅಧಿಕೃತ ದತ್ತಾಂಶಗಳೇ ದೃಢಪಡಿಸಿವೆ. ಹೀಗಿರುವಾಗ, ಲಸಿಕೆ ಹಾಕಿಸಿಕೊಂಡ ನಂತರ ಸಾವು...

ತಮಿಳುನಾಡು| ಪೊಲೀಸ್ ದೌರ್ಜನ್ಯದಿಂದ ಎರಡು ತಿಂಗಳಲ್ಲಿ ನಾಲ್ವರು ದಲಿತರು ಸಾವು

ವಿಧಾನಸಭೆ ಚುನಾವಣೆ ಹೊಸ್ತಿಲಲ್ಲಿರುವ ತಮಿಳುನಾಡಿನಲ್ಲಿ ಕಾನೂನು ಸುವ್ಯವಸ್ಥೆ ಹದಗೆಡುತ್ತಿರುವುದನ್ನು ಪ್ರತಿಬಿಂಬಿಸುವ ಆತಂಕಕಾರಿ ವಿಚಾರವೊಂದು ಮುನ್ನಲೆಗೆ ಬಂದಿದ್ದು, ಪೊಲೀಸ್ ಹಿಂಸಾಚಾರದಿಂದಾಗಿ ಎರಡು ತಿಂಗಳ ಅವಧಿಯಲ್ಲಿ ನಾಲ್ವರು ದಲಿತರು ಸಾವನ್ನಪ್ಪಿದ್ದಾರೆ. ಈ ಸಾವುಗಳಲ್ಲಿ, ಎರಡು ಪ್ರಕರಣಗಳನ್ನು...

ಪಶ್ಚಿಮ ಏಷ್ಯಾ ಸಂಘರ್ಷ| ಹಾರ್ಮುಜ್ ಜಲಸಂಧಿಯಲ್ಲಿ ಇರಾನಿನ 16 ಹಡಗುಗಳನ್ನು ನಾಶಪಡಿಸಿದ್ದಾಗಿ ವಿಡಿಯೋ ಹಂಚಿಕೊಂಡ ಅಮೆರಿಕ ಸೇನೆ

ಪಶ್ಚಿಮ ಏಷ್ಯಾದಿಂದ ತೈಲ ರಫ್ತನ್ನು ತಡೆಯಲು ಇರಾನ್ ಪ್ರಯತ್ನಿಸುತ್ತಿರುವುದರಿಂದ ಹಾರ್ಮುಜ್ ಜಲಸಂಧಿಯಲ್ಲಿ ಇರಾನಿನ 16 ಹಡಗುಗಳನ್ನು ನಾಶಪಡಿಸಿರುವುದಾಗಿ ಅಮೆರಿಕ ಸೇನೆ ಹೇಳಿಕೊಂಡಿದೆ.  ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಈ ಹಿಂದೆ ಇರಾನ್ ಜಲಸಂಧಿಯಲ್ಲಿ ಗಣಿಗಳನ್ನು...

13 ವರ್ಷಗಳಿಂದ ಕೋಮಾದಲ್ಲಿರುವ ಯುವಕನ ದಯಾಮರಣಕ್ಕೆ ಸುಪ್ರೀಂ ಕೋರ್ಟ್ ಅನುಮತಿ

ಕಳೆದ 13 ವರ್ಷಗಳಿಂದ ಕೋಮಾದಲ್ಲಿರುವ 32 ವರ್ಷದ ಹರೀಶ್ ರಾಣಾ ಎಂಬ ಯುವಕನ ಪರೋಕ್ಷ (ನಿಷ್ಕ್ರಿಯ) ದಯಾಮರಣಕ್ಕೆ ಸುಪ್ರೀಂ ಕೋರ್ಟ್ ಬುಧವಾರ (ಮಾ.11) ಅನುಮತಿ ನೀಡಿದೆ ಎಂದು livelaw.in ವರದಿ ಮಾಡಿದೆ. ದೆಹಲಿ ಮೂಲದ ಹರೀಶ್...