Homeಕರ್ನಾಟಕಬಡತನ ಮತ್ತು ಆರ್ಥಿಕ ಸಂಕಷ್ಟ: ಒಂದು ವರ್ಷದೊಳಗೆ ರಾಜ್ಯದಲ್ಲಿ 850 ಆತ್ಮಹತ್ಯೆ ಪ್ರಕರಣ

ಬಡತನ ಮತ್ತು ಆರ್ಥಿಕ ಸಂಕಷ್ಟ: ಒಂದು ವರ್ಷದೊಳಗೆ ರಾಜ್ಯದಲ್ಲಿ 850 ಆತ್ಮಹತ್ಯೆ ಪ್ರಕರಣ

- Advertisement -
- Advertisement -

ಕೊರೊನಾದಿಂದಾಗಿ ಎದುರಾಗಿರುವ ಬಡತನ, ಆರ್ಥಿಕ ಸಂಕಷ್ಟ ಹಾಗೂ ಇತರ ಸಮಸ್ಯೆಯಿಂದಾಗಿ ರಾಜ್ಯದಲ್ಲಿ 850 ಜನರು ಆತ್ಮಹತ್ಯೆ ಮತ್ತು ಆತ್ಮಹತ್ಯೆಗೆ ಪ್ರಯತ್ನಿಸಿದ ಪ್ರಕರಣಗಳು ವರದಿಯಾಗಿವೆ. ಶನಿವಾರವಷ್ಟೇ, ಮೈಸೂರಿನಲ್ಲಿ 20 ವರ್ಷದ ಯುವತಿಯೊಬ್ಬರು ಆತ್ಮಹತ್ಯೆಯ ಹಾದಿ ಹಿಡಿದು, ತಮ್ಮ ಜೀವನವನ್ನು ಕೊನೆಗೊಳಿಸಿದ್ದರು.

ಜಿಲ್ಲೆಯ ಹೆಚ್‌ಡಿ ಕೋಟೆ ತಾಲ್ಲೂಕಿನ ಕಟ್ಟೇಮನುಗನಹಳ್ಳಿಯ 20 ವರ್ಷಕ್ಕಿಂತ ಒಳಗಿನ ಇಬ್ಬರು ಸಹೋದರರೂ ಕೂಡ ಇದೇ ರೀತಿಯ ಹೆಜ್ಜೆಯನ್ನು ಅನುಸರಿಸಿದ್ದರು. ಈ ಇಬ್ಬರೂ ಸಹೋದರರು ನಿರುದ್ಯೋಗದಿಂದಾಗಿ ಖಿನ್ನತೆಗೆ ಒಳಗಾಗಿದ್ದರು ಎಂದು ವರದಿಯಾಗಿತ್ತು. ಕೆಲವು ತಿಂಗಳ ಹಿಂದೆ, ಚಾಮರಾಜನಗರದ ಎಚ್ ಮೂಕಹಳ್ಳಿಯ ನಾಲ್ವರ ಕುಟುಂಬವೊಂದು ಆರ್ಥಿಕ ಸಂಕಷ್ಟದಿಂದಾಗಿ ಆತ್ಮಹತ್ಯೆಗೆ ಬಲಿಯಾಗಿದೆ.

ಇದನ್ನೂ ಓದಿ: ಕೊರೊನಾ ರೋಗಿಗಳ ಸಮಸ್ಯೆಯನ್ನು ಸ್ವಯಂಪ್ರೇರಿತವಾಗಿ ಕೈಗೆತ್ತಿಕೊ೦ಡ ಕರ್ನಾಟಕ ಹೈಕೋರ್ಟ್

ಇತ್ತೀಚಿನ ದಿನಗಳಲ್ಲಿ ರಾಜ್ಯದಲ್ಲಿ ವರದಿಯಾಗಿರುವ ಇಂತಹ ಅನೇಕ ಆತ್ಮಹತ್ಯೆ ಪ್ರಕರಣಗಳಲ್ಲಿ ಇವು ಕೆಲವು ಮಾತ್ರ. ಬಡತನ, ಆರ್ಥಿಕ ಸಂಕಷ್ಟ, ನಿರುದ್ಯೋಗ ಮತ್ತು ವ್ಯಾಪಾರದಲ್ಲಿನ ನಷ್ಟ, ಈ ಪ್ರಕರಣಗಳ ಹಿಂದಿನ ಕೆಲವು ಪ್ರಮುಖ ಕಾರಣಗಳಾಗಿವೆ. ರಾಜ್ಯಾದ್ಯಂತ ಈ ಕಾರಣಗಳಿಂದ ಆತ್ಮಹತ್ಯೆಗಳು ಪ್ರತಿನಿತ್ಯ ವರದಿಯಾಗುತ್ತಿವೆ.

ಕರ್ನಾಟಕ ಸರ್ಕಾರವು ಹೆಚ್ಚಿನ ಜನಸಂಖ್ಯೆಗೆ ಲಸಿಕೆ ಹಾಕಿದ್ದೇವೆ ಎಂದು ಹೆಮ್ಮೆ ಪಡುತ್ತಿದೆ. ಆದರೂ, ಆರ್ಥಿಕ ಸಂಕಷ್ಟ ಮತ್ತು ಬಡತನದ ಸಮಸ್ಯೆಯು ಜನರನ್ನು ತಮ್ಮ ಜೀವನವನ್ನೇ ಅಂತ್ಯಗೊಳಿಸಿಕೊಳ್ಳುವಂತಹ ತೀವ್ರತೆಗೆ ದೂಡುತ್ತಿದೆ. ಇದಕ್ಕೆ ಸರ್ಕಾರದ ಬಳಿ ಉತ್ತರವಿಲ್ಲ.

ಕರ್ನಾಟಕ ರಾಜ್ಯ ಪೊಲೀಸ್ ದತ್ತಾಂಶದ ಪ್ರಕಾರ, ಮಾರ್ಚ್ 2020ರಿಂದ (ರಾಜ್ಯದಲ್ಲಿ ಮೊದಲ ಕೊರೊನಾ ಪ್ರಕರಣ ವರದಿಯಾದ ಸಂದರ್ಭ) ಮೇ 2021ರ ಅವಧಿಯಲ್ಲಿ ವಿವಿಧ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ 850 ಕ್ಕೂ ಹೆಚ್ಚು ಆತ್ಮಹತ್ಯೆ ಮತ್ತು ಆತ್ಮಹತ್ಯೆಗೆ ಪ್ರಯತ್ನಿಸಿದ ಪ್ರಕರಣಗಳು ವರದಿಯಾಗಿವೆ ಎಂದು ತಿಳಿಸುತ್ತದೆ. ರಾಜ್ಯದ ಗ್ರಾಮೀಣ ಪ್ರದೇಶಗಳಲ್ಲಿ ಈ ಪ್ರಕರಣಗಳು ಕಡಿಮೆ ವರದಿಯಾಗಿವೆ.

ಇದನ್ನೂ ಓದಿ: ಮೋದಿ 2.1: ಆರ್ಥಿಕ ಸಮಸ್ಯೆಗೆ ಪರಿಹಾರ ಕಾಣದ ಕೇಂದ್ರ ಸರ್ಕಾರಕ್ಕೆ ಕೊರೊನಾ ನೆಪ!

ಒಟ್ಟು 850 ಪ್ರಕರಣಗಳಲ್ಲಿ 10 ವರದಕ್ಷಿಣೆ, 344 ಬಡತನ ಮತ್ತು ಆರ್ಥಿಕ ಸಂಕಷ್ಟ ಸೇರಿದಂತೆ ಇತರ ಕಾರಣಗಳಿಂದ ಆತ್ಮಹತ್ಯೆ ಪ್ರಕರಣಗಳಾಗಿವೆ. 373 ಕ್ಕಿಂತ ಹೆಚ್ಚು ಆತ್ಮಹತ್ಯೆಗೆ ಪ್ರಚೋದನೆಯಿಂದಾಗಿ ಸಂಭವಿಸಿವೆ ಎಂದು ಪೊಲೀಸ್ ಡೇಟಾ ಬಹಿರಂಗಪಡಿಸಿದೆ. ಇದರ ಜೊತೆಗೆ, ವಿವಿಧ ಪೊಲೀಸ್ ಠಾಣೆಗಳಲ್ಲಿ ಸಂಬಂಧಿತ ಸೆಕ್ಷನ್ ಅಡಿಯಲ್ಲಿ 123 ಕ್ಕೂ ಹೆಚ್ಚು ಆತ್ಮಹತ್ಯೆಗೆ ಯತ್ನಿಸಿದ ಪ್ರಕರಣಗಳು ವರದಿಯಾಗಿವೆ.

ಆರ್ಥಿಕತೆಯ ಕುಸಿತವು ಜನರ ಮಾನಸಿಕ ಆರೋಗ್ಯದ ಮೇಲೆ ಹೆಚ್ಚಿನ ಪರಿಣಾಮ ಬೀರಿದೆ ಎಂದು ತಜ್ಞರು ಗಮನಸೆಳೆದಿದ್ದಾರೆ. ಜೀವನಶೈಲಿಯಲ್ಲಿ ಬದಲಾವಣೆ ಮತ್ತು ಅದರ ಮೇಲೆ ರಾಜಿ ಮಾಡಿಕೊಳ್ಳಲು ಅಸಮರ್ಥತೆ ಮತ್ತು ಭೌತಿಕ ಸೌಕರ್ಯಗಳ ಹಿಂದೆ ಓಡುವುದು ಕೂಡ ಇತರ ಕೆಲವು ಕಾರಣಗಳಾಗಿವೆ ಎಂದು ಅವರು ಹೇಳುತ್ತಾರೆ.

ಜೀವ ಅಮೂಲ್ಯವಾಗಿದ್ದು, ಸಮಸ್ಯೆಗಳಿಗೆ ಆತ್ಮಹತ್ಯೆ ಪರಿಹಾರವಲ್ಲ. ಯಾವುದೆ ಮಾನಸಿಕ ಸಮಸ್ಯೆಗಳಿಗೆ ವೈದ್ಯರನ್ನು ಸಂಪರ್ಕಿಸಿ.

ಬೆಂಗಳೂರು ಸಹಾಯವಾಣಿ 080-25497777, ಬೆಳಗ್ಗೆ 10ರಿಂದ ಸಂಜೆ 8ರವರೆಗೆ
ಆರೋಗ್ಯ ಸಹಾಯವಾಣಿ 104.

ಇದನ್ನೂ ಓದಿ: ಕೊರೊನಾ ಸಂಕಷ್ಟದಲ್ಲಿ ದೈಹಿಕ, ಮಾನಸಿಕವಾಗಿ ನಲುಗಿದ ಮಹಿಳೆಯರು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಂವಿಧಾನದ ಬುಡಕ್ಕೆ ಕೊಡಲಿ ಏಟು: ಆರ್‌ಎಸ್‌ಎಸ್-ಬಿಜೆಪಿಯ ಷಡ್ಯಂತ್ರ ಸೋಲಿಸಲು ಎರಡನೇ ಸ್ವಾತಂತ್ರ್ಯ ಸಂಗ್ರಾಮ ಅನಿವಾರ್ಯ – ಬಿ.ಕೆ. ಹರಿಪ್ರಸಾದ್

ಎಸ್‌ಐಆರ್ (SIR) ವಿರೋಧಿ ಹೋರಾಟದಲ್ಲಿ ನಮ್ಮ ಪಕ್ಷ ನಿಮ್ಮ ಜೊತೆಗಿದೆ ಎಂದು ಹೇಳಲು ಸರ್ಕಾರದ ಪ್ರತಿನಿಧಿಯಾಗಿ ನಾನು ಇಲ್ಲಿ ಬಂದಿದ್ದೇನೆ. ನೀವು ಮಂಡಿಸಿರುವ ಹಕ್ಕೊತ್ತಾಯಗಳ ಕುರಿತು ನೂತನ ಮುಖ್ಯಮಂತ್ರಿಗಳು, ಸಿದ್ದರಾಮಯ್ಯ ಸೇರಿದಂತೆ ಪಕ್ಷದ...

ಮತದಾರರ ಪಟ್ಟಿಯಿಂದ 65 ಲಕ್ಷ ಜನರನ್ನು ಹೊರಹಾಕಿದ್ದು ಯಾರು? ಈ ಅಕ್ರಮಕ್ಕೆ ಚುನಾವಣಾ ಆಯೋಗವೇ ಉತ್ತರಿಸಬೇಕು: ಮೊಹಮ್ಮದ್ ಯೂಸುಫ್ ಕನ್ನಿ

"ಬ್ರಿಟಿಷರ ವಿರುದ್ಧ ಹೋರಾಡಿ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟಿದ್ದೇವೆ. 1952ರ ಮೊದಲ ಚುನಾವಣೆಯ ಸಂದರ್ಭದಲ್ಲಿ ಸುಮಾರು 17.32 ಕೋಟಿ ಮತದಾರರಿದ್ದರು. 1955ರಲ್ಲಿ ಸಿಟಿಜನ್‌ಶಿಪ್ ಆಕ್ಟ್ ಜಾರಿಯಾದ ಬಳಿಕ ನಡೆದ 1957ರ ಚುನಾವಣೆಯಲ್ಲಿ ಈ ಸಂಖ್ಯೆ...

ಸರ್ಕಾರ-ನ್ಯಾಯಾಂಗ ವ್ಯವಸ್ಥೆ ಕೈಬಿಟ್ಟರೆ ರಾಜ್ಯದ ಜನ ಅನಾಥರಾಗುತ್ತಾರೆ : ಹಿರಿಯ ಸಾಹಿತಿ ಬಿ.ಟಿ. ಲಲಿತಾ ನಾಯ್ಕ್

ಎಸ್‌ಐಆರ್‌ ವಿಚಾರದಲ್ಲಿ ಇಂದು ನಾಡಿನ ಜನತೆ ಭೀಕರ ಸಂಕಷ್ಟದಲ್ಲಿದ್ದಾರೆ. ಈ ಗೊಂದಲವನ್ನು ಉಂಟು ಮಾಡಿದವರು ಯಾರು? ಕೇಂದ್ರ ಸರ್ಕಾರವೋ ಅಥವಾ ಕರ್ನಾಟಕ ಸರ್ಕಾರದ ಅಲಕ್ಷ್ಯ ಇದಕ್ಕೆ ಕಾರಣವೇ? ಅಥವಾ ನಮಗೆ ಸಂಬಂಧವೇ ಇಲ್ಲ...

ಎಸ್ಐಆರ್ ಹೆಸರಿನಲ್ಲಿ ನಡೆಯುತ್ತಿರುವ ಜನವಿರೋಧಿ ಹುನ್ನಾರಗಳನ್ನು ಸೋಲಿಸಬೇಕಿದೆ: ಎಸ್. ವರಲಕ್ಷ್ಮಿ

ಬೆಂಗಳೂರು: ರಾಜ್ಯಾದ್ಯಂತ ಎಸ್ಐಆರ್ (SIR) ವಿರುದ್ಧ ನಡೆಯುತ್ತಿರುವ ಸಮಾವೇಶವು ಆಕ್ರಮಣಕಾರಿ ಧೋರಣೆಯ ವಿರುದ್ಧದ ಬೃಹತ್ ಪ್ರತಿರೋಧವಾಗಿದೆ ಎಂದು ಸಿಐಟಿಯು ರಾಜ್ಯ ಪ್ರಧಾನ ಕಾರ್ಯದರ್ಶಿ ಎಸ್. ವರಲಕ್ಷ್ಮಿ ತಿಳಿಸಿದರು. ಎಸ್ಐಆರ್ ಸಮಸ್ಯೆಯಲ್ಲ ಎಂದು ಬಿಂಬಿಸುವ ಸಂಘಪರಿವಾರದವರ...

ಮತದಾನ ನಮ್ಮ ಜನ್ಮಸಿದ್ದ ಹಕ್ಕು, ಎಸ್‌ಐಆರ್ ಕುರಿತು ಜನ ಜಾಗೃತಿ ಅಗತ್ಯ: ಪೀಟರ್ ಮಚಾಡೋ

'ಮತದಾನ ನಮ್ಮ ಜನ್ಮಸಿದ್ದ ಹಕ್ಕು ಅದನ್ನು ನಾವು ಬಿಟ್ಟು ಕೊಡುವುದಿಲ್ಲ' ಎಂದು ಕರ್ನಾಟಕ ಕ್ರೈಸ್ತ ಸಮುದಾಯದ ಮಹಾ ಧರ್ಮಾಧ್ಯಕ್ಷ ರೆವೆಂಡರ್ ಫಾದರ್ ಪೀಟರ್ ಮಚಾಡೋ ಹೇಳಿದರು. ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ...

ಸುರಿವ ಮಳೆಯಲ್ಲಿಯೂ ಎಸ್‌ಐಆರ್ ವಿರೋಧಿ ಜಾಥಾಕ್ಕೆ ಜೊತೆಯಾದ ಮಳವಳ್ಳಿ, ಮದ್ದೂರು, ಮಂಡ್ಯ ಜನತೆ

ಮಂಡ್ಯ: ಮಳವಳ್ಳಿಯ ಬಸ್ ನಿಲ್ದಾಣದ ಬಳಿ ಸುರಿವ ಮಳೆಯಲ್ಲಿಯೂ 'ಎಸ್‌ಐಆರ್ (SIR) ವಿರೋಧಿ ಕರ್ನಾಟಕ' ಜಾಥಾಕ್ಕೆ ಹೋರಾಟಗಾರರು, ಬರಹಗಾರರು, ಜನಚಳವಳಿಗಳ ಮುಖಂಡರು ಹಾಗೂ ಪ್ರಗತಿಪರರು ಬೆಂಬಲ ವ್ಯಕ್ತಪಡಿಸಿದರು‌. ಈ ವೇಳೆ ಎಸ್‌ಐಆರ್ ಕುರಿತು ಮಾತನಾಡಿದ...

ಚಿತ್ರದುರ್ಗದಲ್ಲಿ ಸಮಾರೋಪಗೊಂಡ ಮಾರ್ಗ -3 SIR ವಿರೋಧಿ ಜನಜಾಗೃತಿ ಜಾಥ: ಜೂನ್ 20ರ ಸಮಾವೇಶದ ಯಶಸ್ಸಿಗೆ ಕರೆ

ಚುನಾವಣಾ ಆಯೋಗ ಜಾರಿಗೆ ತರಲು ಹೊರಟಿರುವ ಎಸ್‌ಐಆರ್ (SIR) ವ್ಯವಸ್ಥೆಯನ್ನು ವಿರೋಧಿಸಿ ಹಮ್ಮಿಕೊಳ್ಳಲಾಗಿದ್ದ ‘ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾ’ವು ದಾವಣಗೆರೆಯಲ್ಲಿ ಪ್ರಚಾರ ಮುಗಿಸಿ ಚಿತ್ರದುರ್ಗವನ್ನು ತಲುಪಿದ್ದು, ಇಲ್ಲಿ ಯಶಸ್ವಿಯಾಗಿ ಸಮಾರೋಪಗೊಂಡಿದೆ. ಎದ್ದೇಳು ಕರ್ನಾಟಕ,...

ಗದಗ | ಮನುವಾದದ ಜಾರಿಗೆ ಎಸ್‌ಐಆರ್‌ ಹೇರಿಕೆ : ಡಾ.ಇಸಾಬೆಲ್ಲ ಝೇವಿಯರ್

ದೇಶದಲ್ಲಿ ಮನುವಾದ ಜಾರಿಗೆ ತರುವುದು ಆರ್‌ಎಸ್‌ಎಸ್‌-ಸಂಘಪರಿವಾರದ ಮೂಲ ಉದ್ದೇಶ, ಅದಕ್ಕಾಗಿ ಜನರ ಮೇಲೆ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಯಂತಹ ಹೊಸ ಹೊಸ ಪ್ರಕ್ರಿಯೆಗಳನ್ನು ಹೇರಲಾಗುತ್ತಿದೆ ಎಂದು ಸಾಮಾಜಿಕ ಹೋರಾಟಗಾರ್ತಿ...

ಸಂವಿಧಾನ ವಿರೋಧಿ ‘SIR’ಗೆ ಹರಿಹರದಲ್ಲಿ ತೀವ್ರ ವಿರೋಧ: ಜನಜಾಗೃತಿ ಜಾಥಾದ ಮೂಲಕ ಕೇಂದ್ರ ಸರ್ಕಾರದ ವಿರುದ್ಧ ನಾಗರಿಕರ ಆಕ್ರೋಶ

ದಾವಣಗೆರೆ ಜಿಲ್ಲೆಯ ಹರಿಹರ ತಾಲ್ಲೂಕಿನಲ್ಲಿ ಇತ್ತೀಚೆಗೆ ಕೇಂದ್ರ ಚುನಾವಣಾ ಆಯೋಗದ 'SIR' (ವಿಶೇಷ ಗುರುತಿನ ಪರಿಶೀಲನೆ/ಮರುಪರಿಶೀಲನಾ ಕ್ರಮ) ಯೋಜನೆ ವಿರುದ್ಧ ಬೃಹತ್ ಜನಜಾಗೃತಿ ಜಾಥಾ ಯಶಸ್ವಿಯಾಗಿ ಸಂಚರಿಸಿತು. ಸಾರ್ವಜನಿಕರಲ್ಲಿ ಈ ಯೋಜನೆಯ ಕುರಿತು...

“ಎಸ್ಐಆರ್ ಮೂಲಕ ಮನುವಾದದ ಜಾರಿಗೆ ಕುತಂತ್ರ ರೂಪಿಸುತ್ತಿರುವ ಬಿಜೆಪಿ ಗೆಲ್ಲಲು ಬಿಡುವುದಿಲ್ಲ”:  ಮೈಸೂರಿನಲ್ಲಿ ಜನಾಕ್ರೋಶ

2026 ಜೂನ್ 16 ರಂದು ಹುಣುಸೂರು, ಹೆಚ್.ಡಿ ಕೋಟೆ, ಮೈಸೂರಿನಲ್ಲಿ ಸಾಗಿದ ಎಸ್ಐಆರ್ ವಿರೋಧಿ ಕರ್ನಾಟಕ ಜಾಥಾಕ್ಕೆ ಹುಣುಸೂರಿನ ಸಂವಿಧಾನ ಸರ್ಕಲ್ ನಿಂದ ಅಭೂತಪೂರ್ವ ಬೆಂಬಲ ಸಿಕ್ಕಿತು. ಬೆಳಗ್ಗೆ 8 ಗಂಟೆ ಸುಮಾರಿಗೆ ಎಸ್ಐಆರ್...