Homeಕರ್ನಾಟಕಬಡತನ ಮತ್ತು ಆರ್ಥಿಕ ಸಂಕಷ್ಟ: ಒಂದು ವರ್ಷದೊಳಗೆ ರಾಜ್ಯದಲ್ಲಿ 850 ಆತ್ಮಹತ್ಯೆ ಪ್ರಕರಣ

ಬಡತನ ಮತ್ತು ಆರ್ಥಿಕ ಸಂಕಷ್ಟ: ಒಂದು ವರ್ಷದೊಳಗೆ ರಾಜ್ಯದಲ್ಲಿ 850 ಆತ್ಮಹತ್ಯೆ ಪ್ರಕರಣ

- Advertisement -
- Advertisement -

ಕೊರೊನಾದಿಂದಾಗಿ ಎದುರಾಗಿರುವ ಬಡತನ, ಆರ್ಥಿಕ ಸಂಕಷ್ಟ ಹಾಗೂ ಇತರ ಸಮಸ್ಯೆಯಿಂದಾಗಿ ರಾಜ್ಯದಲ್ಲಿ 850 ಜನರು ಆತ್ಮಹತ್ಯೆ ಮತ್ತು ಆತ್ಮಹತ್ಯೆಗೆ ಪ್ರಯತ್ನಿಸಿದ ಪ್ರಕರಣಗಳು ವರದಿಯಾಗಿವೆ. ಶನಿವಾರವಷ್ಟೇ, ಮೈಸೂರಿನಲ್ಲಿ 20 ವರ್ಷದ ಯುವತಿಯೊಬ್ಬರು ಆತ್ಮಹತ್ಯೆಯ ಹಾದಿ ಹಿಡಿದು, ತಮ್ಮ ಜೀವನವನ್ನು ಕೊನೆಗೊಳಿಸಿದ್ದರು.

ಜಿಲ್ಲೆಯ ಹೆಚ್‌ಡಿ ಕೋಟೆ ತಾಲ್ಲೂಕಿನ ಕಟ್ಟೇಮನುಗನಹಳ್ಳಿಯ 20 ವರ್ಷಕ್ಕಿಂತ ಒಳಗಿನ ಇಬ್ಬರು ಸಹೋದರರೂ ಕೂಡ ಇದೇ ರೀತಿಯ ಹೆಜ್ಜೆಯನ್ನು ಅನುಸರಿಸಿದ್ದರು. ಈ ಇಬ್ಬರೂ ಸಹೋದರರು ನಿರುದ್ಯೋಗದಿಂದಾಗಿ ಖಿನ್ನತೆಗೆ ಒಳಗಾಗಿದ್ದರು ಎಂದು ವರದಿಯಾಗಿತ್ತು. ಕೆಲವು ತಿಂಗಳ ಹಿಂದೆ, ಚಾಮರಾಜನಗರದ ಎಚ್ ಮೂಕಹಳ್ಳಿಯ ನಾಲ್ವರ ಕುಟುಂಬವೊಂದು ಆರ್ಥಿಕ ಸಂಕಷ್ಟದಿಂದಾಗಿ ಆತ್ಮಹತ್ಯೆಗೆ ಬಲಿಯಾಗಿದೆ.

ಇದನ್ನೂ ಓದಿ: ಕೊರೊನಾ ರೋಗಿಗಳ ಸಮಸ್ಯೆಯನ್ನು ಸ್ವಯಂಪ್ರೇರಿತವಾಗಿ ಕೈಗೆತ್ತಿಕೊ೦ಡ ಕರ್ನಾಟಕ ಹೈಕೋರ್ಟ್

ಇತ್ತೀಚಿನ ದಿನಗಳಲ್ಲಿ ರಾಜ್ಯದಲ್ಲಿ ವರದಿಯಾಗಿರುವ ಇಂತಹ ಅನೇಕ ಆತ್ಮಹತ್ಯೆ ಪ್ರಕರಣಗಳಲ್ಲಿ ಇವು ಕೆಲವು ಮಾತ್ರ. ಬಡತನ, ಆರ್ಥಿಕ ಸಂಕಷ್ಟ, ನಿರುದ್ಯೋಗ ಮತ್ತು ವ್ಯಾಪಾರದಲ್ಲಿನ ನಷ್ಟ, ಈ ಪ್ರಕರಣಗಳ ಹಿಂದಿನ ಕೆಲವು ಪ್ರಮುಖ ಕಾರಣಗಳಾಗಿವೆ. ರಾಜ್ಯಾದ್ಯಂತ ಈ ಕಾರಣಗಳಿಂದ ಆತ್ಮಹತ್ಯೆಗಳು ಪ್ರತಿನಿತ್ಯ ವರದಿಯಾಗುತ್ತಿವೆ.

ಕರ್ನಾಟಕ ಸರ್ಕಾರವು ಹೆಚ್ಚಿನ ಜನಸಂಖ್ಯೆಗೆ ಲಸಿಕೆ ಹಾಕಿದ್ದೇವೆ ಎಂದು ಹೆಮ್ಮೆ ಪಡುತ್ತಿದೆ. ಆದರೂ, ಆರ್ಥಿಕ ಸಂಕಷ್ಟ ಮತ್ತು ಬಡತನದ ಸಮಸ್ಯೆಯು ಜನರನ್ನು ತಮ್ಮ ಜೀವನವನ್ನೇ ಅಂತ್ಯಗೊಳಿಸಿಕೊಳ್ಳುವಂತಹ ತೀವ್ರತೆಗೆ ದೂಡುತ್ತಿದೆ. ಇದಕ್ಕೆ ಸರ್ಕಾರದ ಬಳಿ ಉತ್ತರವಿಲ್ಲ.

ಕರ್ನಾಟಕ ರಾಜ್ಯ ಪೊಲೀಸ್ ದತ್ತಾಂಶದ ಪ್ರಕಾರ, ಮಾರ್ಚ್ 2020ರಿಂದ (ರಾಜ್ಯದಲ್ಲಿ ಮೊದಲ ಕೊರೊನಾ ಪ್ರಕರಣ ವರದಿಯಾದ ಸಂದರ್ಭ) ಮೇ 2021ರ ಅವಧಿಯಲ್ಲಿ ವಿವಿಧ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ 850 ಕ್ಕೂ ಹೆಚ್ಚು ಆತ್ಮಹತ್ಯೆ ಮತ್ತು ಆತ್ಮಹತ್ಯೆಗೆ ಪ್ರಯತ್ನಿಸಿದ ಪ್ರಕರಣಗಳು ವರದಿಯಾಗಿವೆ ಎಂದು ತಿಳಿಸುತ್ತದೆ. ರಾಜ್ಯದ ಗ್ರಾಮೀಣ ಪ್ರದೇಶಗಳಲ್ಲಿ ಈ ಪ್ರಕರಣಗಳು ಕಡಿಮೆ ವರದಿಯಾಗಿವೆ.

ಇದನ್ನೂ ಓದಿ: ಮೋದಿ 2.1: ಆರ್ಥಿಕ ಸಮಸ್ಯೆಗೆ ಪರಿಹಾರ ಕಾಣದ ಕೇಂದ್ರ ಸರ್ಕಾರಕ್ಕೆ ಕೊರೊನಾ ನೆಪ!

ಒಟ್ಟು 850 ಪ್ರಕರಣಗಳಲ್ಲಿ 10 ವರದಕ್ಷಿಣೆ, 344 ಬಡತನ ಮತ್ತು ಆರ್ಥಿಕ ಸಂಕಷ್ಟ ಸೇರಿದಂತೆ ಇತರ ಕಾರಣಗಳಿಂದ ಆತ್ಮಹತ್ಯೆ ಪ್ರಕರಣಗಳಾಗಿವೆ. 373 ಕ್ಕಿಂತ ಹೆಚ್ಚು ಆತ್ಮಹತ್ಯೆಗೆ ಪ್ರಚೋದನೆಯಿಂದಾಗಿ ಸಂಭವಿಸಿವೆ ಎಂದು ಪೊಲೀಸ್ ಡೇಟಾ ಬಹಿರಂಗಪಡಿಸಿದೆ. ಇದರ ಜೊತೆಗೆ, ವಿವಿಧ ಪೊಲೀಸ್ ಠಾಣೆಗಳಲ್ಲಿ ಸಂಬಂಧಿತ ಸೆಕ್ಷನ್ ಅಡಿಯಲ್ಲಿ 123 ಕ್ಕೂ ಹೆಚ್ಚು ಆತ್ಮಹತ್ಯೆಗೆ ಯತ್ನಿಸಿದ ಪ್ರಕರಣಗಳು ವರದಿಯಾಗಿವೆ.

ಆರ್ಥಿಕತೆಯ ಕುಸಿತವು ಜನರ ಮಾನಸಿಕ ಆರೋಗ್ಯದ ಮೇಲೆ ಹೆಚ್ಚಿನ ಪರಿಣಾಮ ಬೀರಿದೆ ಎಂದು ತಜ್ಞರು ಗಮನಸೆಳೆದಿದ್ದಾರೆ. ಜೀವನಶೈಲಿಯಲ್ಲಿ ಬದಲಾವಣೆ ಮತ್ತು ಅದರ ಮೇಲೆ ರಾಜಿ ಮಾಡಿಕೊಳ್ಳಲು ಅಸಮರ್ಥತೆ ಮತ್ತು ಭೌತಿಕ ಸೌಕರ್ಯಗಳ ಹಿಂದೆ ಓಡುವುದು ಕೂಡ ಇತರ ಕೆಲವು ಕಾರಣಗಳಾಗಿವೆ ಎಂದು ಅವರು ಹೇಳುತ್ತಾರೆ.

ಜೀವ ಅಮೂಲ್ಯವಾಗಿದ್ದು, ಸಮಸ್ಯೆಗಳಿಗೆ ಆತ್ಮಹತ್ಯೆ ಪರಿಹಾರವಲ್ಲ. ಯಾವುದೆ ಮಾನಸಿಕ ಸಮಸ್ಯೆಗಳಿಗೆ ವೈದ್ಯರನ್ನು ಸಂಪರ್ಕಿಸಿ.

ಬೆಂಗಳೂರು ಸಹಾಯವಾಣಿ 080-25497777, ಬೆಳಗ್ಗೆ 10ರಿಂದ ಸಂಜೆ 8ರವರೆಗೆ
ಆರೋಗ್ಯ ಸಹಾಯವಾಣಿ 104.

ಇದನ್ನೂ ಓದಿ: ಕೊರೊನಾ ಸಂಕಷ್ಟದಲ್ಲಿ ದೈಹಿಕ, ಮಾನಸಿಕವಾಗಿ ನಲುಗಿದ ಮಹಿಳೆಯರು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...