Homeಮುಖಪುಟಬಡತನ | ಬ್ಯಾಂಕ್ ಸಾಲ ತೀರಿಸಲು ಮಗುವನ್ನೆ ₹9000ಕ್ಕೆ ಮಾರಾಟ!

ಬಡತನ | ಬ್ಯಾಂಕ್ ಸಾಲ ತೀರಿಸಲು ಮಗುವನ್ನೆ ₹9000ಕ್ಕೆ ಮಾರಾಟ!

- Advertisement -
- Advertisement -

ಬಡತನದಿಂದ ಬಳಲುತ್ತಿರುವ ಮಹಿಳೆಯೊಬ್ಬರು ತನ್ನ ಬ್ಯಾಂಕ್ ಸಾವನ್ನು ತೀರಿಸಲು ಸ್ವಂತ ಮಗುವನ್ನೆ ಕೇವಲ 9 ಸಾವಿರಕ್ಕೆ ಮಾರಾಟ ಮಾಡಿರುವ ಘಟನೆ ಬಿಹಾರದ ಅರಾರಿಯಾ ಜಿಲ್ಲೆಯಲ್ಲಿ ನಡೆದಿದೆ. ಘಟನೆಯ ಬಗ್ಗೆ ಮಾಹಿತಿ ಪಡೆದ ಪೊಲೀಸರು ತಕ್ಷಣ ಕಾರ್ಯಪ್ರವೃತ್ತರಾಗಿದ್ದಾರೆ ಎಂದು ವರದಿಗಳು ಹೇಳಿವೆ. ಬಡತನ 

ಪೊಲೀಸರು ಮಗುವನ್ನು ಮಹಿಳೆಯ ಸಂಬಂಧಿಕರ ಮನೆಯಿಂದ ವಶಪಡಿಸಿಕೊಂಡಿದ್ದಾರೆ. ಮಗುವನ್ನು ಬೆಂಗಳೂರು ಮೂಲದ ಮಕ್ಕಳಿಲ್ಲದ ತಾಯಿಯೊಬ್ಬರಿಗೆ ಹಸ್ತಾಂತರಿಸುವ ಮೊದಲು ಅಲ್ಲಿ ಇರಿಸಲಾಗಿತ್ತು. ಮಗುವಿನ ಹುಡುಕಾಟದಲ್ಲಿದ್ದ ಅವರು ಮಗುವಿಗೆ ಬದಲಾಗಿ 2 ಲಕ್ಷ ರೂಪಾಯಿ ನೀಡುವುದಾಗಿ ಭರವಸೆ ನೀಡಿದ್ದರು ಎಂದು ವರದಿ ಹೇಳಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ

ಮಗುವಿನ ಪೋಷಕರಾದ ಮೊಹಮ್ಮದ್ ಹಾರೂನ್ ಮತ್ತು ರೆಹಾನಾ ಖಾತೂನ್ ಅವರು ವಿಚಾರಣೆಗಾಗಿ ಪೊಲೀಸರು ಕಸ್ಟಡಿಗೆ ಪಡೆದಿದ್ದಾರೆ. ಅವರ ಮಗುವನ್ನು ಶನಿವಾರ ಮಕ್ಕಳ ಕಲ್ಯಾಣ ಸಮಿತಿಗೆ ಹಸ್ತಾಂತರಿಸಲಾಗಿದೆ ಎಂದು ವರದಿಯಾಗಿದೆ.

ಮಗುವಿನ ತಾಯಿ ರೆಹಾನಾ ಖಾತೂನ್ ಅವರ ಸಹೋದರ ತನ್ವೀರ್ ಎಂಬಾತ ಮಗುವನ್ನು ಗ್ರಾಮಸ್ಥರಾದ ಮೊಹಮ್ಮದ್ ಆರಿಫ್‌ಗೆ ಮಾರಾಟ ಮಾಡಿದ್ದು, ಭಾನುವಾರ 9,000 ರೂ. ನೀಡಿದ್ದನು. ತನ್ವೀರ್ ತನ್ನ ಮಗನನ್ನು ಮಾರಾಟ ಮಾಡಿ ಆರೀಫ್‌ನಿಂದ ಎಷ್ಟು ಹಣ ಪಡೆದಿದ್ದಾನೆ ಎಂಬ ಬಗ್ಗೆ ತನಗೆ ತಿಳಿದಿಲ್ಲ ಎಂದು ಮಗುವಿನ ತಾಯಿ ಪೊಲೀಸರಿಗೆ ತಿಳಿಸಿದ್ದಾರೆ. ಅದಾಗ್ಯೂ, ಮಗುವನ್ನು ಪಡೆದ ಆರೀಫ್ ಅವರ ಸಂಬಂಧಿಕರು ಮಗುವಿಗಾಗಿ ಆತ 45 ಸಾವಿರ ನೀಡಿದ್ದಾಗಿ ವರದಿಯಾಗಿದೆ.

ಈ ಅಪರಾಧಕ್ಕೆ ತನ್ನ ಬಡತನವನ್ನು ದೂಷಿಸಿರುವ ಮಗುವಿನ ತಾಯಿ ರೆಹನಾ, ಹಣಕಾಸಿನ ಅಡಚಣೆಯಿಂದಾಗಿ 50,000 ರೂ. ಬ್ಯಾಂಕ್ ಸಾಲವನ್ನು ಪಾವತಿಸಲು ಸಾಧ್ಯವಾಗದ ಕಾರಣ ತನ್ನ ಮಗುವನ್ನು ಮಾರಾಟ ಮಾಡಬೇಕಾಯಿತು ಎಂದು ಹೇಳಿದ್ದಾರೆ. ಬ್ಯಾಂಕ್ ಉದ್ಯೋಗಿಗಳು ತನಗೆ ಕಿರುಕುಳ ನೀಡಲು ಪ್ರಾರಂಭಿಸಿದ್ದರು ಎಂದು ಅವರು ಹೇಳಿದ್ದಾರೆ.

“ಖಾಸಗಿ ಫೈನಾನ್ಸ್ ಕಂಪನಿಯಿಂದ ನಾನು ಪಡೆದ ಸಾಲದ ಕಂತು ಕಳೆದ ಮೂರು ತಿಂಗಳಿಂದ ಬಾಕಿಯಿರುವುದರಿಂದ ನಾನು ತೀವ್ರ ಒತ್ತಡಕ್ಕೆ ಒಳಗಾಗಿದ್ದೆ. ಸಾಲ ನೀಡುವ ಕಂಪನಿಯ ಏಜೆಂಟರು ನಮಗೆ ಕಿರುಕುಳ ನೀಡುತ್ತಿದ್ದರು. ಸಾಲವನ್ನು ಮರುಪಾವತಿಸಲು ವಿಫಲವಾದ ಕಾರಣ ನನ್ನ ವಿರುದ್ಧ ಮೊಕದ್ದಮೆ ಹೂಡುವುದಾಗಿ ಬೆದರಿಕೆ ಹಾಕಿದ್ದರು. ಸಾಲವನ್ನು ಮರುಪಾವತಿಸಲು ನನ್ನ ಮಕ್ಕಳಲ್ಲಿ ಒಬ್ಬರನ್ನು ಮಾರಾಟ ಮಾಡುವಂತೆ ನನ್ನ ಸಹೋದರ ತನ್ವೀರ್ ನನಗೆ ಸಲಹೆ ನೀಡಿದ್ದಾನೆ” ಎಂದು ರೆಹಾನಾ ವಿಚಾರಣೆ ವೇಳೆ ತಿಳಿಸಿದ್ದಾರೆ.

ಅರಾರಿಯಾ ಜಿಲ್ಲೆಯ ರಾಣಿಗಂಜ್ ಬ್ಲಾಕ್‌ನ ಪಚಿರಾ ಪಂಚಾಯತ್‌ನಲ್ಲಿ ವಾಸಿಸುವ ದಂಪತಿಯ ಮಕ್ಕಳಲ್ಲಿ ಒಬ್ಬರಾದ ಒಂದೂವರೆ ವರ್ಷದ ಗುರ್ಫಾನ್ ಅವರನ್ನು ಮಾರಾಟ ಮಾಡುವ ಬಗ್ಗೆ ಯೋಜಿಸಿದ್ದರು. ಹಾಗಾಗಿ ಗುರ್ಫಾನ್ ಅವರನ್ನು ಭಾನುವಾರ ಅವರ ತಾಯಿಯ ಚಿಕ್ಕಪ್ಪ ತನ್ವೀರ್ ಅವರ ಮನೆಗೆ ಕಳುಹಿಸಲಾಯಿತು. ಅಲ್ಲಿಂದ ಮಗುವನ್ನು ದುಮಾರಿಯಾ ನಿವಾಸಿ ಮೊಹಮ್ಮದ್ ಆರಿಫ್ ಅವರಿಗೆ ಹಸ್ತಾಂತರಿಸಲಾಗಿದೆ.

ಮಗುವನ್ನು ದತ್ತು ಪಡೆಯಲು ಇಚ್ಛಿಸಿದ ಬೆಂಗಳೂರು ಮೂಲದ ಮಹಿಳೆಯೊಬ್ಬರಿಂದ ಆರಿಫ್ ಅಪಾರ ಹಣ ಪಡೆದಿದ್ದಾಗಿ ಪೊಲೀಸರಿಗೆ ಮಹಿಳೆ ತಿಳಿಸಿದ್ದಾರೆ. ಅರಾರಿಯಾ ನೇಪಾಳ ಗಡಿಗೆ ಸಮೀಪದಲ್ಲಿದ್ದು, ಬಿಹಾರದ ಈ ಗಡಿ ಜಿಲ್ಲೆಗಳಲ್ಲಿ ಮಕ್ಕಳ ಕಳ್ಳಸಾಗಣೆ ಘಟನೆಗಳು ಸಾಮಾನ್ಯವಾಗಿ ನಡೆಯುತ್ತಲೆ ಇರುತ್ತವೆ ಎನ್ನಲಾಗಿದೆ.

2016 ರಲ್ಲಿ ಪಾಟ್ನಾ ಜಿಲ್ಲೆಯ ಹಳ್ಳಿಯೊಂದರ ರುಕ್ಮಣಿ ಮತ್ತು ಸಂದೀಪ್ ಮೀನಾ ತಮ್ಮ ಒಂಬತ್ತು ವರ್ಷದ ಮಗನನ್ನು ಇಂದೋರ್‌ನ ಮಧ್ಯವರ್ತಿಯೊಬ್ಬರಿಗೆ 20,000 ರೂ ಸಾಲವನ್ನು ಮರುಪಾವತಿಸಲು ಮಾರಾಟ ಮಾಡಿದ್ದರು.

ಅದೇ ವರ್ಷ, ಮುಜಾಫರ್‌ಪುರ ಜಿಲ್ಲೆಯ ವ್ಯಕ್ತಿ ಹಿಮಾಂಶು ರಂಜನ್ ತನ್ನ ಹೆಂಡತಿ ಮತ್ತು ಸುಮಾರು ಐದು ವರ್ಷ ಮತ್ತು ಮೂರು ವರ್ಷ ವಯಸ್ಸಿನ ಇಬ್ಬರು ಹೆಣ್ಣುಮಕ್ಕಳನ್ನು 4 ಲಕ್ಷ ರೂಪಾಯಿ ಸಾಲವನ್ನು ಮರುಪಾವತಿಸಲು ಮಾರಾಟ ಮಾಡಿದ್ದರು.

2012ರಲ್ಲಿ ಸಮಸ್ತಿಪುರ ಜಿಲ್ಲೆಯಲ್ಲಿ ಪಾರ್ವತಿ ದೇವಿ ಎಂಬಾಕೆ ತನ್ನ 18 ತಿಂಗಳ ಮಗನನ್ನು 15,000 ರೂ.ಗಳ ಸಾಲ ತೀರಿಸಲು ಮಾರಾಟ ಮಾಡಿದ್ದ ಪ್ರಕರಣ ಬೆಳಕಿಗೆ ಬಂದಿತ್ತು. ಬಡತನ 

ಇದನ್ನೂ ಓದಿ: ವಕ್ಫ್‌ ಭೂಮಿ ವಿವಾದ | ರೈತರಿಗೆ ನೀಡಿದ ನೋಟಿಸ್‌ ತಕ್ಷಣವೆ ವಾಪಸ್‌ – ಸಿಎಂ ಸಿದ್ದರಾಮಯ್ಯ

ವಕ್ಫ್‌ ಭೂಮಿ ವಿವಾದ | ರೈತರಿಗೆ ನೀಡಿದ ನೋಟಿಸ್‌ ತಕ್ಷಣವೆ ವಾಪಸ್‌ – ಸಿಎಂ ಸಿದ್ದರಾಮಯ್ಯ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

SIR: 2ಲಕ್ಷ ಮತದಾರರಲ್ಲಿ ಬಸವನಗುಡಿಯಲ್ಲಿ ಉಳಿಯುವುದು 88 ಸಾವಿರ ಮಾತ್ರಾ?: SIR ಪರಿಷ್ಕರಣೆಯ ಆಘಾತಕಾರಿ ಲೆಕ್ಕಾಚಾರ

2023ರ ಚುನಾವಣೆಯಲ್ಲಿ ಬಸವನಗುಡಿಯಲ್ಲಿ 1.28 ಲಕ್ಷ ಮತಗಳು ಚಲಾಯಿಸಲ್ಪಟ್ಟಿದ್ದವು. ಆದರೆ ಪ್ರಸ್ತುತ SIR ಪ್ರಕ್ರಿಯೆಯಲ್ಲಿ 1.13 ಲಕ್ಷ ಜನರನ್ನು ಹೊರಗಿಟ್ಟು, ಕರಡು ಪಟ್ಟಿಯಲ್ಲಿ ಕೇವಲ 1.35 ಲಕ್ಷ ಮತದಾರರನ್ನು ಮಾತ್ರ ಉಳಿಸಿಕೊಳ್ಳಲಾಗಿದೆ. ಇದರ...

ಕರ್ನಾಟಕ ಎಸ್ಐಆರ್: 43.81 ಲಕ್ಷ ಜನರಿಗೆ SIR ನೋಟಿಸ್: ಗಣ್ಯರ ಹೆಸರು ಸರಿಪಡಿಸುವ ಚುನಾವಣಾ ಆಯೋಗಕ್ಕೆ ಜನ-ಸಾಮಾನ್ಯರ ನೋವು ಕಾಣುತ್ತಿಲ್ಲವೇ?

ಕರ್ನಾಟಕದಲ್ಲಿ SIR ವೇಳೆ 43.81 ಲಕ್ಷ ಮತದಾರರ ಪ್ರಕರಣಗಳಿಗೆ ನೋಟಿಸ್‌ಗಳನ್ನು ಸೃಷ್ಟಿಸಲಾಗಿದ್ದು, ಅವರ ದಾಖಲೆಗಳ ಪರಿಶೀಲನೆಗೆ ಕ್ರಮ ಕೈಗೊಳ್ಳಲಾಗಿದೆ. ಈ ಪೈಕಿ 23.45 ಲಕ್ಷ ಪ್ರಕರಣಗಳಲ್ಲಿ 2002ರ ಮತದಾರರ ಪಟ್ಟಿಯೊಂದಿಗೆ ಮ್ಯಾಪಿಂಗ್ ಆಗದಿರುವುದು...

ಪಿಣರಾಯಿ ವಿಜಯನ್ ವಿರುದ್ಧ ಎಫ್‌ಐಆರ್‌ಗೆ ಇಡಿ ಪತ್ರ: ಕಾನೂನು ಪರಿಶೀಲನೆ ನಡೆಸಲಾಗುವುದು ಎಂದ ಸಿಎಂ ವಿ.ಡಿ. ಸತೀಶನ್

ಆರೋಪಿತ ಸಿಎಂಆರ್‌ಎಲ್ ಲಂಚ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಪಿಐ(ಎಂ) ಹಿರಿಯ ನಾಯಕ ಪಿಣರಾಯಿ ವಿಜಯನ್ ಮತ್ತು ಇತರರ ವಿರುದ್ಧ ಎಫ್‌ಐಆರ್ ದಾಖಲಿಸಲು ಜಾರಿ ನಿರ್ದೇಶನಾಲಯ (ಇಡಿ) ನೀಡಿರುವ ಪತ್ರವನ್ನು ಕಾನೂನುಬದ್ಧವಾಗಿ ಪರಿಶೀಲಿಸಲಾಗುವುದು, ಅದರ ನಂತರ...

‘ಸಿಇಸಿ ಜ್ಞಾನೇಶ್ ಕುಮಾರ್ ಮಗಳು’ : ನೋಯ್ಡಾ ಜಿಲ್ಲಾಧಿಕಾರಿಗೆ ಅಲಹಾಬಾದ್ ಹೈಕೋರ್ಟ್ ತಪರಾಕಿ ಬೆನ್ನಲ್ಲೇ ವಿಪಕ್ಷ ನಾಯಕರ ವಾಗ್ದಾಳಿ

ರಾಷ್ಟ್ರೀಯ ಭದ್ರತಾ ಕಾಯ್ದೆಯಡಿ (NSA) ದೆಹಲಿ ವಿಶ್ವವಿದ್ಯಾಲಯದ ವಿದ್ಯಾರ್ಥಿನಿಯೊಬ್ಬರನ್ನು ಮುನ್ನೆಚ್ಚರಿಕೆ ಕ್ರಮವಾಗಿ ವಶಕ್ಕೆ ಪಡೆದಿದ್ದಕ್ಕಾಗಿ, ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಅವರ ಮಗಳು ಹಾಗೂ ನೋಯ್ಡಾ ಜಿಲ್ಲಾಧಿಕಾರಿ ಮೇಧಾ ರೂಪಮ್ ಅವರನ್ನು...

ಮಲ್ಲಿಕಾರ್ಜುನ ಖರ್ಗೆ ಸಭೆಯ ನಂತರ ‘ಶುದ್ಧೀಕರಣ’ ವಿವಾದ: ಅಪರಿಚಿತರ ವಿರುದ್ಧ ಎಫ್‌ಐಆರ್, ತೀವ್ರ ಆಕ್ರೋಶ ವ್ಯಕ್ತಪಡಿಸಿದ ಕಾಂಗ್ರೆಸ್!

ಉತ್ತರಾಖಂಡದ ಹಲ್ದ್ವಾನಿಯ ರಾಮಲೀಲಾ ಮೈದಾನದಲ್ಲಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ಸಾರ್ವಜನಿಕ ಸಭೆ ನಡೆದ ನಂತರ, ಆ ಮೈದಾನವನ್ನು 'ಶುದ್ಧೀಕರಣ' (ಶುದ್ಧೀಕರಣ ಯಜ್ಞ) ಗೊಳಿಸಿದ ವಿವಾದಾತ್ಮಕ ಪ್ರಕರಣಕ್ಕೆ ಸಂಬಂಧಿಸಿದಂತೆ ಹಲ್ದ್ವಾನಿಯ ಕೊತ್ವಾಲಿ...

ದೆಹಲಿ ಮತದಾರರ ಪಟ್ಟಿಗೆ ರಾಘವ್ ಚಡ್ಡಾ ಹೆಸರು ಸೇರ್ಪಡೆ; ಸೂಕ್ತ ಪ್ರಕ್ರಿಯೆ ಅನುಸರಿಸಿಲ್ಲ ಎಂದು ಎಎಪಿ ಆರೋಪ

ರಾಷ್ಟ್ರ ರಾಜಧಾನಿಯ ಮತದಾರರ ಪಟ್ಟಿಯ ಪ್ರಸ್ತುತ ನಡೆಯುತ್ತಿರುವ ವಿಶೇಷ ಪರಿಷ್ಕರಣೆ (ಎಸ್‌ಐಆರ್) ಅಡಿಯಲ್ಲಿ, ಪಂಜಾಬ್‌ನ ಬಿಜೆಪಿ ರಾಜ್ಯಸಭಾ ಸಂಸದ ರಾಘವ್ ಚಡ್ಡಾ ಅವರ ಹೆಸರನ್ನು ದೆಹಲಿಯ ಮತದಾರರ ಪಟ್ಟಿಗೆ ಸೇರಿಸಲಾಗಿದೆ ಎಂದು ಚುನಾವಣಾ...

ಮಲ್ಲಿಕಾರ್ಜುನ ಖರ್ಗೆ ಭಾಷಣ ಮಾಡಿದ ವೇದಿಕೆ ‘ಶುದ್ಧೀಕರಣ’ : 29 ದಿನಗಳ ನಂತರ ಎಫ್‌ಐಆರ್ ದಾಖಲು

ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಸಾರ್ವಜನಿಕ ಸಭೆಯನ್ನುದ್ದೇಶಿಸಿ ಮಾತನಾಡಿದ್ದ ಉತ್ತರಾಖಂಡದ ಹಲ್ದ್ವಾನಿಯ ವೇದಿಕೆಯೊಂದರಲ್ಲಿ 'ಶುದ್ಧೀಕರಣ' ನಡೆದ ಇಪ್ಪತ್ತೊಂಬತ್ತು ದಿನಗಳ ನಂತರ, ಪೊಲೀಸರು ಮಂಗಳವಾರ (ಸೆಪ್ಟೆಂಬರ್ 8) ಎಸ್‌ಸಿ/ಎಸ್‌ಟಿ ಕಾಯ್ದೆಯ ನಿಬಂಧನೆಗಳ ಅಡಿಯಲ್ಲಿ...

‘ಪ್ರೊ. ಸಿಎನ್ಆರ್ ರಾವ್‌ ಅವರಿಗೆ ನೋಟಿಸ್ ಕೊಟ್ಟಿಲ್ಲ..’; ಚುನಾವಣಾ ಆಯೋಗದ ಸ್ಪಷ್ಟನೆ

ಕರ್ನಾಟಕದ ಮತದಾರರ ಪಟ್ಟಿಯ ವಿಶೇಷ ಪರಿಷ್ಕರಣೆ (ಎಸ್‌ಐಆರ್) ವೇಳೆ ಹೆಸರಿನ ಕಾಗುಣಿತದಲ್ಲಿನ ವ್ಯತ್ಯಾಸ ಕಂಡುಬಂದ ಹಿನ್ನೆಲೆಯಲ್ಲಿ, ದೇಶದ ಪ್ರಸಿದ್ಧ ವಿಜ್ಞಾನಿಗಳಲ್ಲಿ ಒಬ್ಬರಾದ ಭಾರತರತ್ನ ಪ್ರೊ. ಸಿ.ಎನ್.ಆರ್. ರಾವ್ ಅವರಿಗೆ ತಮ್ಮ ಗುರುತನ್ನು ಸಾಬೀತುಪಡಿಸಲು...

‘ಬಂಗಾಳಿಗಳು ಮೀನು ಇಲ್ಲದೆ ಬದುಕಲು ಸಾಧ್ಯವಿಲ್ಲ’; ಆಹಾರ ಪದ್ಧತಿ ನಿರ್ಧಾರ ಬಿಜೆಪಿ ಕೆಲಸವಲ್ಲ: ಬಿಜೆಪಿ ಮುಖ್ಯಸ್ಥ ಸಮಿಕ್ ಭಟ್ಟಾಚಾರ್ಯ 

ಕೊಲ್ಕತ್ತಾ/ನವದೆಹಲಿ: ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದ ಕೆಲವೇ ತಿಂಗಳುಗಳಲ್ಲಿ ದುರ್ಗಾ ಪೂಜೆ ಮತ್ತು ನವರಾತ್ರಿ ಆಚರಣೆಗಳ ಸಂದರ್ಭದಲ್ಲಿ ಆಹಾರ ಪದ್ಧತಿಯ ಕುರಿತು ಕೆಲವು ಧಾರ್ಮಿಕ ನಾಯಕರು ಹಾಗೂ ವಿಶ್ವ ಹಿಂದೂ...

ಮತದಾರ ಇರುವುದು ವಿದೇಶದಲ್ಲಿ, ಆದರೆ ವಿಚಾರಣೆ ನಡೆಯುತ್ತಿರುವುದು ಇಲ್ಲಿ: ಕರ್ನಾಟಕ SIR ತಂದಿಟ್ಟ ಧರ್ಮಸಂಕಟ

ಕರ್ನಾಟಕದಲ್ಲಿ ಪ್ರಸ್ತುತ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ, ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಿದ್ದ ಅನೇಕ ಅನಿವಾಸಿ ಕನ್ನಡಿಗರಿಗೆ ಬಿಸಿ ತುಪ್ಪವಾಗಿ ಪರಿಣಮಿಸಿದೆ. ಹೆಸರಿನಲ್ಲಿನ ವ್ಯತ್ಯಾಸ, ವಯಸ್ಸಿನ ವ್ಯತ್ಯಾಸ...