Homeಮುಖಪುಟಬಡತನ | ಬ್ಯಾಂಕ್ ಸಾಲ ತೀರಿಸಲು ಮಗುವನ್ನೆ ₹9000ಕ್ಕೆ ಮಾರಾಟ!

ಬಡತನ | ಬ್ಯಾಂಕ್ ಸಾಲ ತೀರಿಸಲು ಮಗುವನ್ನೆ ₹9000ಕ್ಕೆ ಮಾರಾಟ!

- Advertisement -
- Advertisement -

ಬಡತನದಿಂದ ಬಳಲುತ್ತಿರುವ ಮಹಿಳೆಯೊಬ್ಬರು ತನ್ನ ಬ್ಯಾಂಕ್ ಸಾವನ್ನು ತೀರಿಸಲು ಸ್ವಂತ ಮಗುವನ್ನೆ ಕೇವಲ 9 ಸಾವಿರಕ್ಕೆ ಮಾರಾಟ ಮಾಡಿರುವ ಘಟನೆ ಬಿಹಾರದ ಅರಾರಿಯಾ ಜಿಲ್ಲೆಯಲ್ಲಿ ನಡೆದಿದೆ. ಘಟನೆಯ ಬಗ್ಗೆ ಮಾಹಿತಿ ಪಡೆದ ಪೊಲೀಸರು ತಕ್ಷಣ ಕಾರ್ಯಪ್ರವೃತ್ತರಾಗಿದ್ದಾರೆ ಎಂದು ವರದಿಗಳು ಹೇಳಿವೆ. ಬಡತನ 

ಪೊಲೀಸರು ಮಗುವನ್ನು ಮಹಿಳೆಯ ಸಂಬಂಧಿಕರ ಮನೆಯಿಂದ ವಶಪಡಿಸಿಕೊಂಡಿದ್ದಾರೆ. ಮಗುವನ್ನು ಬೆಂಗಳೂರು ಮೂಲದ ಮಕ್ಕಳಿಲ್ಲದ ತಾಯಿಯೊಬ್ಬರಿಗೆ ಹಸ್ತಾಂತರಿಸುವ ಮೊದಲು ಅಲ್ಲಿ ಇರಿಸಲಾಗಿತ್ತು. ಮಗುವಿನ ಹುಡುಕಾಟದಲ್ಲಿದ್ದ ಅವರು ಮಗುವಿಗೆ ಬದಲಾಗಿ 2 ಲಕ್ಷ ರೂಪಾಯಿ ನೀಡುವುದಾಗಿ ಭರವಸೆ ನೀಡಿದ್ದರು ಎಂದು ವರದಿ ಹೇಳಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ

ಮಗುವಿನ ಪೋಷಕರಾದ ಮೊಹಮ್ಮದ್ ಹಾರೂನ್ ಮತ್ತು ರೆಹಾನಾ ಖಾತೂನ್ ಅವರು ವಿಚಾರಣೆಗಾಗಿ ಪೊಲೀಸರು ಕಸ್ಟಡಿಗೆ ಪಡೆದಿದ್ದಾರೆ. ಅವರ ಮಗುವನ್ನು ಶನಿವಾರ ಮಕ್ಕಳ ಕಲ್ಯಾಣ ಸಮಿತಿಗೆ ಹಸ್ತಾಂತರಿಸಲಾಗಿದೆ ಎಂದು ವರದಿಯಾಗಿದೆ.

ಮಗುವಿನ ತಾಯಿ ರೆಹಾನಾ ಖಾತೂನ್ ಅವರ ಸಹೋದರ ತನ್ವೀರ್ ಎಂಬಾತ ಮಗುವನ್ನು ಗ್ರಾಮಸ್ಥರಾದ ಮೊಹಮ್ಮದ್ ಆರಿಫ್‌ಗೆ ಮಾರಾಟ ಮಾಡಿದ್ದು, ಭಾನುವಾರ 9,000 ರೂ. ನೀಡಿದ್ದನು. ತನ್ವೀರ್ ತನ್ನ ಮಗನನ್ನು ಮಾರಾಟ ಮಾಡಿ ಆರೀಫ್‌ನಿಂದ ಎಷ್ಟು ಹಣ ಪಡೆದಿದ್ದಾನೆ ಎಂಬ ಬಗ್ಗೆ ತನಗೆ ತಿಳಿದಿಲ್ಲ ಎಂದು ಮಗುವಿನ ತಾಯಿ ಪೊಲೀಸರಿಗೆ ತಿಳಿಸಿದ್ದಾರೆ. ಅದಾಗ್ಯೂ, ಮಗುವನ್ನು ಪಡೆದ ಆರೀಫ್ ಅವರ ಸಂಬಂಧಿಕರು ಮಗುವಿಗಾಗಿ ಆತ 45 ಸಾವಿರ ನೀಡಿದ್ದಾಗಿ ವರದಿಯಾಗಿದೆ.

ಈ ಅಪರಾಧಕ್ಕೆ ತನ್ನ ಬಡತನವನ್ನು ದೂಷಿಸಿರುವ ಮಗುವಿನ ತಾಯಿ ರೆಹನಾ, ಹಣಕಾಸಿನ ಅಡಚಣೆಯಿಂದಾಗಿ 50,000 ರೂ. ಬ್ಯಾಂಕ್ ಸಾಲವನ್ನು ಪಾವತಿಸಲು ಸಾಧ್ಯವಾಗದ ಕಾರಣ ತನ್ನ ಮಗುವನ್ನು ಮಾರಾಟ ಮಾಡಬೇಕಾಯಿತು ಎಂದು ಹೇಳಿದ್ದಾರೆ. ಬ್ಯಾಂಕ್ ಉದ್ಯೋಗಿಗಳು ತನಗೆ ಕಿರುಕುಳ ನೀಡಲು ಪ್ರಾರಂಭಿಸಿದ್ದರು ಎಂದು ಅವರು ಹೇಳಿದ್ದಾರೆ.

“ಖಾಸಗಿ ಫೈನಾನ್ಸ್ ಕಂಪನಿಯಿಂದ ನಾನು ಪಡೆದ ಸಾಲದ ಕಂತು ಕಳೆದ ಮೂರು ತಿಂಗಳಿಂದ ಬಾಕಿಯಿರುವುದರಿಂದ ನಾನು ತೀವ್ರ ಒತ್ತಡಕ್ಕೆ ಒಳಗಾಗಿದ್ದೆ. ಸಾಲ ನೀಡುವ ಕಂಪನಿಯ ಏಜೆಂಟರು ನಮಗೆ ಕಿರುಕುಳ ನೀಡುತ್ತಿದ್ದರು. ಸಾಲವನ್ನು ಮರುಪಾವತಿಸಲು ವಿಫಲವಾದ ಕಾರಣ ನನ್ನ ವಿರುದ್ಧ ಮೊಕದ್ದಮೆ ಹೂಡುವುದಾಗಿ ಬೆದರಿಕೆ ಹಾಕಿದ್ದರು. ಸಾಲವನ್ನು ಮರುಪಾವತಿಸಲು ನನ್ನ ಮಕ್ಕಳಲ್ಲಿ ಒಬ್ಬರನ್ನು ಮಾರಾಟ ಮಾಡುವಂತೆ ನನ್ನ ಸಹೋದರ ತನ್ವೀರ್ ನನಗೆ ಸಲಹೆ ನೀಡಿದ್ದಾನೆ” ಎಂದು ರೆಹಾನಾ ವಿಚಾರಣೆ ವೇಳೆ ತಿಳಿಸಿದ್ದಾರೆ.

ಅರಾರಿಯಾ ಜಿಲ್ಲೆಯ ರಾಣಿಗಂಜ್ ಬ್ಲಾಕ್‌ನ ಪಚಿರಾ ಪಂಚಾಯತ್‌ನಲ್ಲಿ ವಾಸಿಸುವ ದಂಪತಿಯ ಮಕ್ಕಳಲ್ಲಿ ಒಬ್ಬರಾದ ಒಂದೂವರೆ ವರ್ಷದ ಗುರ್ಫಾನ್ ಅವರನ್ನು ಮಾರಾಟ ಮಾಡುವ ಬಗ್ಗೆ ಯೋಜಿಸಿದ್ದರು. ಹಾಗಾಗಿ ಗುರ್ಫಾನ್ ಅವರನ್ನು ಭಾನುವಾರ ಅವರ ತಾಯಿಯ ಚಿಕ್ಕಪ್ಪ ತನ್ವೀರ್ ಅವರ ಮನೆಗೆ ಕಳುಹಿಸಲಾಯಿತು. ಅಲ್ಲಿಂದ ಮಗುವನ್ನು ದುಮಾರಿಯಾ ನಿವಾಸಿ ಮೊಹಮ್ಮದ್ ಆರಿಫ್ ಅವರಿಗೆ ಹಸ್ತಾಂತರಿಸಲಾಗಿದೆ.

ಮಗುವನ್ನು ದತ್ತು ಪಡೆಯಲು ಇಚ್ಛಿಸಿದ ಬೆಂಗಳೂರು ಮೂಲದ ಮಹಿಳೆಯೊಬ್ಬರಿಂದ ಆರಿಫ್ ಅಪಾರ ಹಣ ಪಡೆದಿದ್ದಾಗಿ ಪೊಲೀಸರಿಗೆ ಮಹಿಳೆ ತಿಳಿಸಿದ್ದಾರೆ. ಅರಾರಿಯಾ ನೇಪಾಳ ಗಡಿಗೆ ಸಮೀಪದಲ್ಲಿದ್ದು, ಬಿಹಾರದ ಈ ಗಡಿ ಜಿಲ್ಲೆಗಳಲ್ಲಿ ಮಕ್ಕಳ ಕಳ್ಳಸಾಗಣೆ ಘಟನೆಗಳು ಸಾಮಾನ್ಯವಾಗಿ ನಡೆಯುತ್ತಲೆ ಇರುತ್ತವೆ ಎನ್ನಲಾಗಿದೆ.

2016 ರಲ್ಲಿ ಪಾಟ್ನಾ ಜಿಲ್ಲೆಯ ಹಳ್ಳಿಯೊಂದರ ರುಕ್ಮಣಿ ಮತ್ತು ಸಂದೀಪ್ ಮೀನಾ ತಮ್ಮ ಒಂಬತ್ತು ವರ್ಷದ ಮಗನನ್ನು ಇಂದೋರ್‌ನ ಮಧ್ಯವರ್ತಿಯೊಬ್ಬರಿಗೆ 20,000 ರೂ ಸಾಲವನ್ನು ಮರುಪಾವತಿಸಲು ಮಾರಾಟ ಮಾಡಿದ್ದರು.

ಅದೇ ವರ್ಷ, ಮುಜಾಫರ್‌ಪುರ ಜಿಲ್ಲೆಯ ವ್ಯಕ್ತಿ ಹಿಮಾಂಶು ರಂಜನ್ ತನ್ನ ಹೆಂಡತಿ ಮತ್ತು ಸುಮಾರು ಐದು ವರ್ಷ ಮತ್ತು ಮೂರು ವರ್ಷ ವಯಸ್ಸಿನ ಇಬ್ಬರು ಹೆಣ್ಣುಮಕ್ಕಳನ್ನು 4 ಲಕ್ಷ ರೂಪಾಯಿ ಸಾಲವನ್ನು ಮರುಪಾವತಿಸಲು ಮಾರಾಟ ಮಾಡಿದ್ದರು.

2012ರಲ್ಲಿ ಸಮಸ್ತಿಪುರ ಜಿಲ್ಲೆಯಲ್ಲಿ ಪಾರ್ವತಿ ದೇವಿ ಎಂಬಾಕೆ ತನ್ನ 18 ತಿಂಗಳ ಮಗನನ್ನು 15,000 ರೂ.ಗಳ ಸಾಲ ತೀರಿಸಲು ಮಾರಾಟ ಮಾಡಿದ್ದ ಪ್ರಕರಣ ಬೆಳಕಿಗೆ ಬಂದಿತ್ತು. ಬಡತನ 

ಇದನ್ನೂ ಓದಿ: ವಕ್ಫ್‌ ಭೂಮಿ ವಿವಾದ | ರೈತರಿಗೆ ನೀಡಿದ ನೋಟಿಸ್‌ ತಕ್ಷಣವೆ ವಾಪಸ್‌ – ಸಿಎಂ ಸಿದ್ದರಾಮಯ್ಯ

ವಕ್ಫ್‌ ಭೂಮಿ ವಿವಾದ | ರೈತರಿಗೆ ನೀಡಿದ ನೋಟಿಸ್‌ ತಕ್ಷಣವೆ ವಾಪಸ್‌ – ಸಿಎಂ ಸಿದ್ದರಾಮಯ್ಯ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕಾಂಗ್ರೆಸ್ ವಿರುದ್ಧದ ‘ಟರ್ಕಿ ಕಚೇರಿ’ ಹೇಳಿಕೆ: ಅರ್ನಾಬ್ ಗೋಸ್ವಾಮಿಗೆ ₹2 ಕೋಟಿ ಮಾನನಷ್ಟ ಮೊಕದ್ದಮೆ ಹೂಡಲು ಸಮನ್ಸ್ ಜಾರಿ ಮಾಡಿದ ದೆಹಲಿ ಹೈಕೋರ್ಟ್

ಕಾಂಗ್ರೆಸ್ ವಿರುದ್ಧದ "ಟರ್ಕಿ ಕಚೇರಿ" ಆರೋಪಕ್ಕೆ ಸಂಬಂಧಿಸಿದಂತೆ ಅರ್ನಾಬ್ ಗೋಸ್ವಾಮಿಗೆ ₹2 ಕೋಟಿ ಮಾನನಷ್ಟ ಮೊಕದ್ದಮೆ ಹೂಡಲು ದೆಹಲಿ ಹೈಕೋರ್ಟ್ ಸಮನ್ಸ್ ಜಾರಿ ಮಾಡಿದೆ. ಟರ್ಕಿಯಲ್ಲಿ ಭಾರತೀಯ ರಾಷ್ಟ್ರೀಯ ಕಾಂಗ್ರೆಸ್ ಅಂತರರಾಷ್ಟ್ರೀಯ ಕಚೇರಿಯನ್ನು ನಡೆಸುತ್ತಿದೆ...

ಚುನಾವಣಾ ಆಯೋಗ ಬಿಜೆಪಿ ಆಜ್ಞೆಯ ಮೇರೆಗೆ ಕೆಲಸ ಮಾಡುತ್ತಿದೆ: ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ

ವಿಧಾನಸಭಾ ಚುನಾವಣೆಗೂ ಮುನ್ನ, ಭಾರತದ ಚುನಾವಣಾ ಆಯೋಗ (ಇಸಿಐ) ಪ್ರಸ್ತುತ ಡಿಜಿಪಿ, ಕೋಲ್ಕತ್ತಾ ಪೊಲೀಸ್ ಆಯುಕ್ತರು, ಮುಖ್ಯ ಮತ್ತು ಗೃಹ ಕಾರ್ಯದರ್ಶಿಗಳನ್ನು ಬದಲಿಸುವ ಮೂಲಕ ಪ್ರಮುಖ ಪುನರ್ರಚನೆಯನ್ನು ಮಾಡಿದೆ. ಪಶ್ಚಿಮ ಬಂಗಾಳದ ಹೊಸ ಡಿಜಿ...

‘ಶಾಂತಿಗೆ ಇದು ಸಮಯವಲ್ಲ’: ‘ಕದನ ವಿರಾಮ’ ಪ್ರಸ್ತಾಪಗಳನ್ನು ತಿರಸ್ಕರಿಸಿದ ಇರಾನ್ ಸರ್ವೋಚ್ಚ ನಾಯಕ ಮೊಜ್ತಾಬಾ ಖಮೇನಿ 

ಇರಾನ್‌ನ ನೂತನ ಸರ್ವೋಚ್ಚ ನಾಯಕ ಅಯತೊಲ್ಲಾ ಮೊಜ್ತಬಾ ಖಮೇನಿ ಅವರು ಉದ್ವಿಗ್ನತೆಯನ್ನು ಕಡಿಮೆ ಮಾಡುವ ಅಥವಾ ಎರಡು ಮಧ್ಯವರ್ತಿ ರಾಷ್ಟ್ರಗಳು ಟೆಹ್ರಾನ್‌ಗೆ ತಲುಪಿಸಿದ ಯುನೈಟೆಡ್ ಸ್ಟೇಟ್ಸ್‌ನೊಂದಿಗೆ ಕದನ ವಿರಾಮದ ಪ್ರಸ್ತಾಪಗಳನ್ನು ತಿರಸ್ಕರಿಸಿದರು ಎಂದು...

ಲೋಕಸಭೆ | 8 ವಿಪಕ್ಷ ಸಂಸದರ ಅಮಾನತು ರದ್ದು

ಲೋಕಸಭೆಯ ಎಂಟು ವಿಪಕ್ಷ ಸಂಸದರ ಅಮಾನತನ್ನು ತಕ್ಷಣಕ್ಕೆ ಜಾರಿಗೆ ಬರುವಂತೆ ಸ್ಪೀಕರ್ ಓಂ ಬಿರ್ಲಾ ಮಂಗಳವಾರ (ಮಾ.17) ವಾಪಸ್ ಪಡೆದಿದ್ದಾರೆ. ಅಶಿಸ್ತಿನ ಕಾರಣ ನೀಡಿ ಫೆಬ್ರವರಿ 8ರಂದು ಸಂಸದರನ್ನು ಅಮಾನತು ಮಾಡಲಾಗಿತ್ತು. ಅಮಾನತು...

ಪಿತೃತ್ವ ರಜೆಗೆ ಕಾನೂನು ತನ್ನಿ : ಕೇಂದ್ರಕ್ಕೆ ಸುಪ್ರೀಂ ಕೋರ್ಟ್ ಸೂಚನೆ

ಪಿತೃತ್ವ ರಜೆಯನ್ನು (paternity leave) ಸಾಮಾಜಿಕ ಭದ್ರತಾ ಸೌಲಭ್ಯವೆಂದು ಪರಿಗಣಿಸಿ ಕಾನೂನು ರೂಪಿಸುವಂತೆ ಸುಪ್ರೀಂ ಕೋರ್ಟ್ ಮಂಗಳವಾರ (ಮಾ.17) ಕೇಂದ್ರ ಸರ್ಕಾರಕ್ಕೆ ಸೂಚಿಸಿದೆ. ಈ ರಜೆಯ ಅವಧಿಯು ಪೋಷಕರು ಮತ್ತು ಮಗು ಇಬ್ಬರ...

‘ಕಾಲ ಎಲ್ಲಕ್ಕೂ ಉತ್ತರಿಸುತ್ತದೆ’; ಟಿವಿಕೆ ನಾಯಕನ ‘ಡಿಎಂಕೆ ಬೆದರಿಕೆ’ ಆರೋಪ ‘ಸತ್ಯಕ್ಕೆ ದೂರವಾದ ಮಾತು’ ಎಂದ ರಜನಿಕಾಂತ್

ರಾಜಕೀಯ ಪ್ರವೇಶಕ್ಕೆ ಯತ್ನಿಸಿದಾಗ ಡಿಎಂಕೆಯಿಂದ ಬೆದರಿಕೆ ಇತ್ತು ಎಂಬ ಟಿವಿಕೆ ನಾಯಕ ಆಧವ್ ಅರ್ಜುನ ಅವರ ಆರೋಪವನ್ನು ಸೂಪರ್‌ಸ್ಟಾರ್ ರಜನಿಕಾಂತ್ ಮಂಗಳವಾರ ನಿರಾಕರಿಸಿದ್ದಾರೆ ಮತ್ತು "ಕಾಲವೇ ಉತ್ತರ ನೀಡುತ್ತದೆ" ಎಂದು ಹೇಳಿದ್ದಾರೆ. ತಮ್ಮ ಅಧಿಕೃತ...

ಕಾಂಗ್ರೆಸ್‌ ಮಾನನಷ್ಟ ಪ್ರಕರಣ : ಅರ್ನಾಬ್ ಗೋಸ್ವಾಮಿ, ರಿಪಬ್ಲಿಕ್ ಟಿವಿಗೆ ದೆಹಲಿ ಹೈಕೋರ್ಟ್ ಸಮನ್ಸ್

ಟರ್ಕಿ ದೇಶದಲ್ಲಿ ಕಾಂಗ್ರೆಸ್‌ ಪಕ್ಷವು ಅಂತಾರಾಷ್ಟ್ರೀಯ ಕಚೇರಿ ಹೊಂದಿದೆ ಎಂಬ ವರದಿಗೆ ಸಂಬಂಧಿಸಿದಂತೆ, ಅರ್ನಾಬ್ ಗೋಸ್ವಾಮಿ ಮತ್ತು ರಿಪಬ್ಲಿಕ್ ಟಿವಿ ವಿರುದ್ಧ ಕಾಂಗ್ರೆಸ್ ಹೂಡಿರುವ ಮಾನನಷ್ಟ ಮೊಕದ್ದಮೆಯಲ್ಲಿ ದೆಹಲಿ ಹೈಕೋರ್ಟ್ ಮಂಗಳವಾರ (ಮಾ.17)...

ನಾಗಾಲ್ಯಾಂಡ್‌| ಕೇಂದ್ರದ ‘ವಂದೇ ಮಾತರಂ’ ಕಡ್ಡಾಯ ನಿರ್ದೇಶನ ವಿರೋಧಿಸಿ ನಾಗಾ ವಿದ್ಯಾರ್ಥಿ ಒಕ್ಕೂಟದಿಂದ ಪ್ರತಿಭಟನೆ

ಸರ್ಕಾರದ ಅಧಿಕೃತ ಕಾರ್ಯಕ್ರಮಗಳ ಸಮಯದಲ್ಲಿ ಮತ್ತು ಶಿಕ್ಷಣ ಸಂಸ್ಥೆಗಳಲ್ಲಿ ವಂದೇ ಮಾತರಂ ಹಾಡುವುದನ್ನು ಕಡ್ಡಾಯಗೊಳಿಸುವ ರಾಜ್ಯ ಸರ್ಕಾರಕ್ಕೆ ಕೇಂದ್ರ ಸರ್ಕಾರ ನೀಡಿರುವ ನಿರ್ದೇಶನವನ್ನು ವಿರೋಧಿಸಿ ಸೋಮವಾರ ನಾಗಾ ವಿದ್ಯಾರ್ಥಿ ಒಕ್ಕೂಟದ (ಎನ್‌ಎಸ್‌ಎಫ್) ಬ್ಯಾನರ್...

‘ಹೇಡಿತನದ, ಅವಿವೇಕದ ಹಿಂಸಾಚಾರ’: 400 ಜನರನ್ನು ಬಲಿತೆಗೆದುಕೊಂಡ ಕಾಬೂಲ್ ಆಸ್ಪತ್ರೆಯ ಮೇಲಿನ ಪಾಕ್ ದಾಳಿ ಖಂಡಿಸಿದ ಭಾರತ 

ಕಾಬೂಲ್‌ನ ಆಸ್ಪತ್ರೆಯ ಮೇಲೆ ಪಾಕಿಸ್ತಾನ ನಡೆಸಿದ ವಾಯುದಾಳಿಯನ್ನು ಭಾರತ ಮಂಗಳವಾರ ಖಂಡಿಸಿದೆ. ಈ ದಾಳಿಯಲ್ಲಿ ಕನಿಷ್ಠ 400 ಜನರು ಅಸ್ವಸ್ಥರಾಗಿ 250 ಜನರು ಗಾಯಗೊಂಡಿದ್ದರು. ಈ ಬಗ್ಗೆ ವಿದೇಶಾಂಗ ವ್ಯವಹಾರಗಳ ಸಚಿವಾಲಯ (MEA)...

ಮೂಡುಬಿದಿರೆ ಠಾಣೆ ಇನ್‌ಸ್ಪೆಕ್ಟರ್ ವಿರುದ್ಧ ಲೈಂಗಿಕ ಕಿರುಕುಳದ ಆರೋಪ: ತನಿಖೆಗೆ ಕಮಿಷನರ್ ಆದೇಶ

ದಕ್ಷಿಣ ಕನ್ನಡ ಜಿಲ್ಲೆಯ ಮೂಡುಬಿದಿರೆ ಪೊಲೀಸ್ ಠಾಣೆಯ ಇನ್‌ಸ್ಪೆಕ್ಟರ್ ಸಂದೇಶ್ ಬಿ.ಜಿ ವಿರುದ್ಧ ಮಹಿಳೆಯರಿಗೆ ಲೈಂಗಿಕ, ಮಾನಸಿಕ ಕಿರುಕುಳ ನೀಡಿದ್ದಲ್ಲದೆ, ಹಣ ಕೊಡುವಂತೆ ಪೀಡಿಸಿ ಬೆದರಿಕೆ ಹಾಕಿರುವ ಆರೋಪ ಕೇಳಿ ಬಂದಿದ್ದು, ಈ...