Homeಮುಖಪುಟಬಡತನ | ಬ್ಯಾಂಕ್ ಸಾಲ ತೀರಿಸಲು ಮಗುವನ್ನೆ ₹9000ಕ್ಕೆ ಮಾರಾಟ!

ಬಡತನ | ಬ್ಯಾಂಕ್ ಸಾಲ ತೀರಿಸಲು ಮಗುವನ್ನೆ ₹9000ಕ್ಕೆ ಮಾರಾಟ!

- Advertisement -
- Advertisement -

ಬಡತನದಿಂದ ಬಳಲುತ್ತಿರುವ ಮಹಿಳೆಯೊಬ್ಬರು ತನ್ನ ಬ್ಯಾಂಕ್ ಸಾವನ್ನು ತೀರಿಸಲು ಸ್ವಂತ ಮಗುವನ್ನೆ ಕೇವಲ 9 ಸಾವಿರಕ್ಕೆ ಮಾರಾಟ ಮಾಡಿರುವ ಘಟನೆ ಬಿಹಾರದ ಅರಾರಿಯಾ ಜಿಲ್ಲೆಯಲ್ಲಿ ನಡೆದಿದೆ. ಘಟನೆಯ ಬಗ್ಗೆ ಮಾಹಿತಿ ಪಡೆದ ಪೊಲೀಸರು ತಕ್ಷಣ ಕಾರ್ಯಪ್ರವೃತ್ತರಾಗಿದ್ದಾರೆ ಎಂದು ವರದಿಗಳು ಹೇಳಿವೆ. ಬಡತನ 

ಪೊಲೀಸರು ಮಗುವನ್ನು ಮಹಿಳೆಯ ಸಂಬಂಧಿಕರ ಮನೆಯಿಂದ ವಶಪಡಿಸಿಕೊಂಡಿದ್ದಾರೆ. ಮಗುವನ್ನು ಬೆಂಗಳೂರು ಮೂಲದ ಮಕ್ಕಳಿಲ್ಲದ ತಾಯಿಯೊಬ್ಬರಿಗೆ ಹಸ್ತಾಂತರಿಸುವ ಮೊದಲು ಅಲ್ಲಿ ಇರಿಸಲಾಗಿತ್ತು. ಮಗುವಿನ ಹುಡುಕಾಟದಲ್ಲಿದ್ದ ಅವರು ಮಗುವಿಗೆ ಬದಲಾಗಿ 2 ಲಕ್ಷ ರೂಪಾಯಿ ನೀಡುವುದಾಗಿ ಭರವಸೆ ನೀಡಿದ್ದರು ಎಂದು ವರದಿ ಹೇಳಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ

ಮಗುವಿನ ಪೋಷಕರಾದ ಮೊಹಮ್ಮದ್ ಹಾರೂನ್ ಮತ್ತು ರೆಹಾನಾ ಖಾತೂನ್ ಅವರು ವಿಚಾರಣೆಗಾಗಿ ಪೊಲೀಸರು ಕಸ್ಟಡಿಗೆ ಪಡೆದಿದ್ದಾರೆ. ಅವರ ಮಗುವನ್ನು ಶನಿವಾರ ಮಕ್ಕಳ ಕಲ್ಯಾಣ ಸಮಿತಿಗೆ ಹಸ್ತಾಂತರಿಸಲಾಗಿದೆ ಎಂದು ವರದಿಯಾಗಿದೆ.

ಮಗುವಿನ ತಾಯಿ ರೆಹಾನಾ ಖಾತೂನ್ ಅವರ ಸಹೋದರ ತನ್ವೀರ್ ಎಂಬಾತ ಮಗುವನ್ನು ಗ್ರಾಮಸ್ಥರಾದ ಮೊಹಮ್ಮದ್ ಆರಿಫ್‌ಗೆ ಮಾರಾಟ ಮಾಡಿದ್ದು, ಭಾನುವಾರ 9,000 ರೂ. ನೀಡಿದ್ದನು. ತನ್ವೀರ್ ತನ್ನ ಮಗನನ್ನು ಮಾರಾಟ ಮಾಡಿ ಆರೀಫ್‌ನಿಂದ ಎಷ್ಟು ಹಣ ಪಡೆದಿದ್ದಾನೆ ಎಂಬ ಬಗ್ಗೆ ತನಗೆ ತಿಳಿದಿಲ್ಲ ಎಂದು ಮಗುವಿನ ತಾಯಿ ಪೊಲೀಸರಿಗೆ ತಿಳಿಸಿದ್ದಾರೆ. ಅದಾಗ್ಯೂ, ಮಗುವನ್ನು ಪಡೆದ ಆರೀಫ್ ಅವರ ಸಂಬಂಧಿಕರು ಮಗುವಿಗಾಗಿ ಆತ 45 ಸಾವಿರ ನೀಡಿದ್ದಾಗಿ ವರದಿಯಾಗಿದೆ.

ಈ ಅಪರಾಧಕ್ಕೆ ತನ್ನ ಬಡತನವನ್ನು ದೂಷಿಸಿರುವ ಮಗುವಿನ ತಾಯಿ ರೆಹನಾ, ಹಣಕಾಸಿನ ಅಡಚಣೆಯಿಂದಾಗಿ 50,000 ರೂ. ಬ್ಯಾಂಕ್ ಸಾಲವನ್ನು ಪಾವತಿಸಲು ಸಾಧ್ಯವಾಗದ ಕಾರಣ ತನ್ನ ಮಗುವನ್ನು ಮಾರಾಟ ಮಾಡಬೇಕಾಯಿತು ಎಂದು ಹೇಳಿದ್ದಾರೆ. ಬ್ಯಾಂಕ್ ಉದ್ಯೋಗಿಗಳು ತನಗೆ ಕಿರುಕುಳ ನೀಡಲು ಪ್ರಾರಂಭಿಸಿದ್ದರು ಎಂದು ಅವರು ಹೇಳಿದ್ದಾರೆ.

“ಖಾಸಗಿ ಫೈನಾನ್ಸ್ ಕಂಪನಿಯಿಂದ ನಾನು ಪಡೆದ ಸಾಲದ ಕಂತು ಕಳೆದ ಮೂರು ತಿಂಗಳಿಂದ ಬಾಕಿಯಿರುವುದರಿಂದ ನಾನು ತೀವ್ರ ಒತ್ತಡಕ್ಕೆ ಒಳಗಾಗಿದ್ದೆ. ಸಾಲ ನೀಡುವ ಕಂಪನಿಯ ಏಜೆಂಟರು ನಮಗೆ ಕಿರುಕುಳ ನೀಡುತ್ತಿದ್ದರು. ಸಾಲವನ್ನು ಮರುಪಾವತಿಸಲು ವಿಫಲವಾದ ಕಾರಣ ನನ್ನ ವಿರುದ್ಧ ಮೊಕದ್ದಮೆ ಹೂಡುವುದಾಗಿ ಬೆದರಿಕೆ ಹಾಕಿದ್ದರು. ಸಾಲವನ್ನು ಮರುಪಾವತಿಸಲು ನನ್ನ ಮಕ್ಕಳಲ್ಲಿ ಒಬ್ಬರನ್ನು ಮಾರಾಟ ಮಾಡುವಂತೆ ನನ್ನ ಸಹೋದರ ತನ್ವೀರ್ ನನಗೆ ಸಲಹೆ ನೀಡಿದ್ದಾನೆ” ಎಂದು ರೆಹಾನಾ ವಿಚಾರಣೆ ವೇಳೆ ತಿಳಿಸಿದ್ದಾರೆ.

ಅರಾರಿಯಾ ಜಿಲ್ಲೆಯ ರಾಣಿಗಂಜ್ ಬ್ಲಾಕ್‌ನ ಪಚಿರಾ ಪಂಚಾಯತ್‌ನಲ್ಲಿ ವಾಸಿಸುವ ದಂಪತಿಯ ಮಕ್ಕಳಲ್ಲಿ ಒಬ್ಬರಾದ ಒಂದೂವರೆ ವರ್ಷದ ಗುರ್ಫಾನ್ ಅವರನ್ನು ಮಾರಾಟ ಮಾಡುವ ಬಗ್ಗೆ ಯೋಜಿಸಿದ್ದರು. ಹಾಗಾಗಿ ಗುರ್ಫಾನ್ ಅವರನ್ನು ಭಾನುವಾರ ಅವರ ತಾಯಿಯ ಚಿಕ್ಕಪ್ಪ ತನ್ವೀರ್ ಅವರ ಮನೆಗೆ ಕಳುಹಿಸಲಾಯಿತು. ಅಲ್ಲಿಂದ ಮಗುವನ್ನು ದುಮಾರಿಯಾ ನಿವಾಸಿ ಮೊಹಮ್ಮದ್ ಆರಿಫ್ ಅವರಿಗೆ ಹಸ್ತಾಂತರಿಸಲಾಗಿದೆ.

ಮಗುವನ್ನು ದತ್ತು ಪಡೆಯಲು ಇಚ್ಛಿಸಿದ ಬೆಂಗಳೂರು ಮೂಲದ ಮಹಿಳೆಯೊಬ್ಬರಿಂದ ಆರಿಫ್ ಅಪಾರ ಹಣ ಪಡೆದಿದ್ದಾಗಿ ಪೊಲೀಸರಿಗೆ ಮಹಿಳೆ ತಿಳಿಸಿದ್ದಾರೆ. ಅರಾರಿಯಾ ನೇಪಾಳ ಗಡಿಗೆ ಸಮೀಪದಲ್ಲಿದ್ದು, ಬಿಹಾರದ ಈ ಗಡಿ ಜಿಲ್ಲೆಗಳಲ್ಲಿ ಮಕ್ಕಳ ಕಳ್ಳಸಾಗಣೆ ಘಟನೆಗಳು ಸಾಮಾನ್ಯವಾಗಿ ನಡೆಯುತ್ತಲೆ ಇರುತ್ತವೆ ಎನ್ನಲಾಗಿದೆ.

2016 ರಲ್ಲಿ ಪಾಟ್ನಾ ಜಿಲ್ಲೆಯ ಹಳ್ಳಿಯೊಂದರ ರುಕ್ಮಣಿ ಮತ್ತು ಸಂದೀಪ್ ಮೀನಾ ತಮ್ಮ ಒಂಬತ್ತು ವರ್ಷದ ಮಗನನ್ನು ಇಂದೋರ್‌ನ ಮಧ್ಯವರ್ತಿಯೊಬ್ಬರಿಗೆ 20,000 ರೂ ಸಾಲವನ್ನು ಮರುಪಾವತಿಸಲು ಮಾರಾಟ ಮಾಡಿದ್ದರು.

ಅದೇ ವರ್ಷ, ಮುಜಾಫರ್‌ಪುರ ಜಿಲ್ಲೆಯ ವ್ಯಕ್ತಿ ಹಿಮಾಂಶು ರಂಜನ್ ತನ್ನ ಹೆಂಡತಿ ಮತ್ತು ಸುಮಾರು ಐದು ವರ್ಷ ಮತ್ತು ಮೂರು ವರ್ಷ ವಯಸ್ಸಿನ ಇಬ್ಬರು ಹೆಣ್ಣುಮಕ್ಕಳನ್ನು 4 ಲಕ್ಷ ರೂಪಾಯಿ ಸಾಲವನ್ನು ಮರುಪಾವತಿಸಲು ಮಾರಾಟ ಮಾಡಿದ್ದರು.

2012ರಲ್ಲಿ ಸಮಸ್ತಿಪುರ ಜಿಲ್ಲೆಯಲ್ಲಿ ಪಾರ್ವತಿ ದೇವಿ ಎಂಬಾಕೆ ತನ್ನ 18 ತಿಂಗಳ ಮಗನನ್ನು 15,000 ರೂ.ಗಳ ಸಾಲ ತೀರಿಸಲು ಮಾರಾಟ ಮಾಡಿದ್ದ ಪ್ರಕರಣ ಬೆಳಕಿಗೆ ಬಂದಿತ್ತು. ಬಡತನ 

ಇದನ್ನೂ ಓದಿ: ವಕ್ಫ್‌ ಭೂಮಿ ವಿವಾದ | ರೈತರಿಗೆ ನೀಡಿದ ನೋಟಿಸ್‌ ತಕ್ಷಣವೆ ವಾಪಸ್‌ – ಸಿಎಂ ಸಿದ್ದರಾಮಯ್ಯ

ವಕ್ಫ್‌ ಭೂಮಿ ವಿವಾದ | ರೈತರಿಗೆ ನೀಡಿದ ನೋಟಿಸ್‌ ತಕ್ಷಣವೆ ವಾಪಸ್‌ – ಸಿಎಂ ಸಿದ್ದರಾಮಯ್ಯ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತೂತುಕುಡಿ ಸಾತನ್‌ಕುಳಂ ತಂದೆ-ಮಗನ ಕಸ್ಟಡಿ ಸಾವು ಪ್ರಕರಣ : ಅಪರಾಧಿಗಳಾದ ಎಲ್ಲಾ 9 ಪೊಲೀಸರಿಗೆ ಮರಣದಂಡನೆ ವಿಧಿಸಿದ ನ್ಯಾಯಾಲಯ

ತಮಿಳುನಾಡಿನ ತೂತುಕುಡಿ ಜಿಲ್ಲೆಯ ಸಾತನ್‌ಕುಳಂ ಪೊಲೀಸ್ ಠಾಣೆಯಲ್ಲಿ ಕೋವಿಡ್-19 ಲಾಕ್‌ಡೌನ್ ಸಮಯದಲ್ಲಿ ಸಂಭವಿಸಿದ, ವ್ಯಾಪಾರಿ ಪಿ. ಜಯರಾಜ್ (58) ಮತ್ತು ಅವರ ಮಗ ಜೆ. ಬೆನಿಕ್ಸ್ (31) ಅವರ ಕಸ್ಟಡಿ ಸಾವು ಪ್ರಕರಣದ...

ದಾವಣಗೆರೆ ದಕ್ಷಿಣ ಉಪ-ಸಮರ: ಶಾಮನೂರು ಸಾಮ್ರಾಜ್ಯದಲ್ಲಿ ಅಹಿಂದ ಬಂಡಾಯ!

ತುಂಗಭದ್ರಾ ನದಿ ಪರ‍್ವಕ್ಕೆ ಎತ್ತರದ ಪ್ರದೇಶದಲ್ಲಿರುವ ದಾವಣಗೆರೆ ಮಧ್ಯ ಕರ್ನಾಟಕದ ಪ್ರಮುಖ ವಾಣಿಜ್ಯ ನಗರಿ. ಬೆಣ್ಣೆ ದೋಸೆಯ ಘಮಲಿನ ದಾವಣಗೆರೆಯ ರಾಜಕಾರಣ ಮಾತ್ರ ಮಿರ್ಚಿ-ಮಂಡಕ್ಕಿಯ ಖಡಕ್ ಖಾರಾ ಕುರುಕುಲಿನಂತೆ! ದಾವಣಗೆರೆ ಮತ್ತದರ ಸುತಮುತ್ತಲಿನ...

‘Dr. Nimo Yadav’, ‘Nehr Who’ ಎಕ್ಸ್‌ ಖಾತೆಗಳನ್ನು ತಕ್ಷಣ ಮರುಸ್ಥಾಪಿಸಲು ದೆಹಲಿ ಹೈಕೋರ್ಟ್ ಆದೇಶ

'Dr. Nimo Yadav' ಮತ್ತು 'Nehr Who' ಎಂಬ ಎರಡು ಪರೋಡಿ ಎಕ್ಸ್‌ ಖಾತೆಗಳನ್ನು ತಕ್ಷಣ ಮರು ಸ್ಥಾಪಿಸುವಂತೆ ದೆಹಲಿ ಹೈಕೋರ್ಟ್ ಸೋಮವಾರ (ಏ.6) ಎಕ್ಸ್ ಸಂಸ್ಥೆಗೆ (X Corp) ಆದೇಶಿಸಿದೆ. 'Dr....

ಬಂಗಾಳ| ಮತದಾರರ ಪಟ್ಟಿಯಿಂದ ಹೆಸರು ತೆಗೆದ ಬಳಿಕ ಸಾವಿಗೆ ಶರಣಾದ ಮುಸ್ಲಿಂ ವ್ಯಕ್ತಿ

ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆಯ ನಂತರ ಪಶ್ಚಿಮ ಬಂಗಾಳದಲ್ಲಿ ಮತದಾರರ ಪಟ್ಟಿಯಿಂದ ತನ್ನ ಹೆಸರನ್ನು ತೆಗೆದುಹಾಕಿದ್ದರಿಂದ ಮನನೊಂದ ಮುಸ್ಲಿಂ ವ್ಯಕ್ತಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಪೊಲೀಸರು ಸೋಮವಾರ ತಿಳಿಸಿದ್ದಾರೆ. ಮೃತನನ್ನು ಬಿರ್ಭುಮ್...

‘ಯೋಜನೆಯು ಕೇರಳಕ್ಕೆ ಜೀವನಾಡಿಯಾಗಲಿದೆ’: ವಯನಾಡ್ ಸುರಂಗ ಮಾರ್ಗ ವಿರುದ್ದದ ಅರ್ಜಿ ವಜಾಗೊಳಿಸಿದ ಸುಪ್ರೀಂ ಕೋರ್ಟ್

ಕೇರಳದ ಕೋಝಿಕ್ಕೋಡ್-ವಯನಾಡ್ ಸುರಂಗ ಮಾರ್ಗ ನಿರ್ಮಾಣಕ್ಕೆ ನೀಡಲಾದ ಪರಿಸರ ಅನುಮತಿ (ಇಸಿ) ಪ್ರಶ್ನಿಸಿ ಸಲ್ಲಿಸಲಾದ ಅರ್ಜಿಯನ್ನು ಸುಪ್ರೀಂ ಕೋರ್ಟ್ ಸೋಮವಾರ (ಏ.6) ವಜಾಗೊಳಿಸಿದೆ. ಸುರಂಗ ನಿರ್ಮಾಣದ ಸಮಯದಲ್ಲಿ ಪರಿಸರ ಅನುಮತಿಯ ಷರತ್ತುಗಳ ಉಲ್ಲಂಘನೆಯಾದರೆ, ಅರ್ಜಿದಾರರು...

651 ಕೋಟಿ ರೂ. ಮೌಲ್ಯದ ನಗದು, ಮದ್ಯ, ಮಾದಕ ವಸ್ತು ವಶಪಡಿಸಿಕೊಂಡ ಚುನಾವಣಾ ಆಯೋಗ

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದಲ್ಲಿ ನಡೆಯುತ್ತಿರುವ ವಿಧಾನಸಭಾ ಚುನಾವಣೆಗೆ ಸಂಬಂಧಿಸಿದಂತೆ ಅಧಿಕಾರಿಗಳು 651.51 ಕೋಟಿ ರೂ.ಗೂ ಹೆಚ್ಚು ಮೌಲ್ಯದ ನಗದು, ಮದ್ಯ, ಮಾದಕ ವಸ್ತುಗಳು ಮತ್ತು ಇತರ ಉಚಿತ ವಸ್ತುಗಳನ್ನು...

ಪೇರಳೆ ಹಣ್ಣು ಕದ್ದಿದ್ದಾಳೆಂದು ಆರೋಪಿಸಿ ಬಾಲಕಿಯನ್ನು ಸರಪಳಿಯಿಂದ ಕಟ್ಟಿ ಥಳಿಸಿದ ಮಾಜಿ ಸೇನಾಧಿಕಾರಿ

ಪೇರಳೆ ಹಣ್ಣು ಕದ್ದಿದ್ದಾಳೆಂದು ಆರೋಪಿಸಿ ನಾಲ್ಕು ವರ್ಷದ ಬಾಲಕಿಯನ್ನು ನಿವೃತ್ತ ಸೇನಾಧಿಕಾರಿಯೊಬ್ಬರು ಸರಪಳಿಯಿಂದ ಕಟ್ಟಿಹಾಕಿ ಕ್ರೂರವಾಗಿ ಥಳಿಸಿರುವ ಆಘಾತಕಾರಿ ಘಟನೆ ಹಿಮಾಚಲ ಪ್ರದೇಶದ ಉನಾ ಜಿಲ್ಲೆಯ ಬೆಹಡಾಲ ಗ್ರಾಮದಲ್ಲಿ ನಡೆದಿದೆ. ಬಾಲಕಿಯು ನಿವೃತ್ತ ಸೇನಾಧಿಕಾರಿಯ ತೋಟದ...

ಆಂಧ್ರ ವಿಧಾನಸಭಾ ಸ್ಪೀಕರ್ ಅಯ್ಯಣ್ಣ ಪಾತ್ರುಡು ಅವರಿಂದ ದಲಿತ ವ್ಯಕ್ತಿಗೆ ಕಪಾಳಮೋಕ್ಷ: ವೈಎಸ್‌ಆರ್‌ಸಿಪಿ ವಾಗ್ದಾಳಿ

ಏಪ್ರಿಲ್ 3 ರ ಗುರುವಾರ ನರಸಿಪಟ್ಟಣದಲ್ಲಿ ದಲಿತ ವ್ಯಕ್ತಿಯೊಬ್ಬರಿಗೆ ಕಪಾಳಮೋಕ್ಷ ಮಾಡಿದ್ದಕ್ಕಾಗಿ ಆಂಧ್ರಪ್ರದೇಶ ವಿಧಾನಸಭಾ ಸ್ಪೀಕರ್ ಮತ್ತು ತೆಲುಗು ದೇಶಂ ಪಕ್ಷದ (ಟಿಡಿಪಿ) ನಾಯಕ ಅಯ್ಯಣ್ಣ ಪಾತ್ರುಡು ಅವರ ವಿರುದ್ಧ ವೈಎಸ್‌ಆರ್ ಕಾಂಗ್ರೆಸ್...

ಪ. ಬಂಗಾಳ | ಬಿಜೆಪಿ ಪ್ರಚಾರ ಸಾಮಗ್ರಿ ಸಜ್ಜುಗೊಳಿಸಿದ ವಿಡಿಯೋ ವೈರಲ್ : ಚುನಾವಣಾ ಕರ್ತವ್ಯದಲ್ಲಿದ್ದ ಅಧಿಕಾರಿ ಅಮಾನತು

ಬಿಜೆಪಿ ಪ್ರಚಾರ ಸಾಮಗ್ರಿಗಳನ್ನು ತಯಾರಿಸಲು ಸಹಾಯ ಮಾಡಿದ ಆರೋಪದ ಮೇಲೆ ಪಶ್ಚಿಮ ಬಂಗಾಳದ ಉತ್ತರ 24 ಪರಗಣ ಜಿಲ್ಲೆಯ ಪಾಣಿಹಟಿ ವಿಧಾನಸಭಾ ಕ್ಷೇತ್ರದ ಅಧಿಕಾರಿಯೊಬ್ಬರನ್ನು ಚುನಾವಣಾ ಆಯೋಗ ಅಮಾನತುಗೊಳಿಸಿದೆ ಎಂದು ದಿ ಇಂಡಿಯನ್...

ಮುಸ್ಲಿಮರ ವಿರುದ್ಧ ದ್ವೇಷ ಕಾರುವ ಅಸ್ಸಾಂ ಸಿಎಂ ಪತ್ನಿ ಬಳಿ 2 ಮುಸ್ಲಿಂ ದೇಶಗಳ ಪಾಸ್‌ಪೋರ್ಟ್ ಇದೆ : ಕಾಂಗ್ರೆಸ್ ಆರೋಪ

ಮತದಾನಕ್ಕೆ ಇನ್ನೇನು ಮೂರು ದಿನಗಳು ಬಾಕಿ ಇರುವಾಗ, ಅಸ್ಸಾಂನಲ್ಲಿ ಕಾಂಗ್ರೆಸ್‌-ಬಿಜೆಪಿ ನಡುವೆ ವೈಯಕ್ತಿಕ ವಿಚಾರಗಳ ಕುರಿತ ವಾಗ್ಯುದ್ಧ ತಾರಕಕ್ಕೇರಿದೆ. ಸಿಎಂ ಹಿಮಂತ ಬಿಸ್ವಾ ಶರ್ಮಾ ಮತ್ತು ಅವರ ಪತ್ನಿ ರಿನಿಕಿ ಭುಯಾನ್ ಶರ್ಮಾ...