Homeಮುಖಪುಟಬಡತನ | ಬ್ಯಾಂಕ್ ಸಾಲ ತೀರಿಸಲು ಮಗುವನ್ನೆ ₹9000ಕ್ಕೆ ಮಾರಾಟ!

ಬಡತನ | ಬ್ಯಾಂಕ್ ಸಾಲ ತೀರಿಸಲು ಮಗುವನ್ನೆ ₹9000ಕ್ಕೆ ಮಾರಾಟ!

- Advertisement -
- Advertisement -

ಬಡತನದಿಂದ ಬಳಲುತ್ತಿರುವ ಮಹಿಳೆಯೊಬ್ಬರು ತನ್ನ ಬ್ಯಾಂಕ್ ಸಾವನ್ನು ತೀರಿಸಲು ಸ್ವಂತ ಮಗುವನ್ನೆ ಕೇವಲ 9 ಸಾವಿರಕ್ಕೆ ಮಾರಾಟ ಮಾಡಿರುವ ಘಟನೆ ಬಿಹಾರದ ಅರಾರಿಯಾ ಜಿಲ್ಲೆಯಲ್ಲಿ ನಡೆದಿದೆ. ಘಟನೆಯ ಬಗ್ಗೆ ಮಾಹಿತಿ ಪಡೆದ ಪೊಲೀಸರು ತಕ್ಷಣ ಕಾರ್ಯಪ್ರವೃತ್ತರಾಗಿದ್ದಾರೆ ಎಂದು ವರದಿಗಳು ಹೇಳಿವೆ. ಬಡತನ 

ಪೊಲೀಸರು ಮಗುವನ್ನು ಮಹಿಳೆಯ ಸಂಬಂಧಿಕರ ಮನೆಯಿಂದ ವಶಪಡಿಸಿಕೊಂಡಿದ್ದಾರೆ. ಮಗುವನ್ನು ಬೆಂಗಳೂರು ಮೂಲದ ಮಕ್ಕಳಿಲ್ಲದ ತಾಯಿಯೊಬ್ಬರಿಗೆ ಹಸ್ತಾಂತರಿಸುವ ಮೊದಲು ಅಲ್ಲಿ ಇರಿಸಲಾಗಿತ್ತು. ಮಗುವಿನ ಹುಡುಕಾಟದಲ್ಲಿದ್ದ ಅವರು ಮಗುವಿಗೆ ಬದಲಾಗಿ 2 ಲಕ್ಷ ರೂಪಾಯಿ ನೀಡುವುದಾಗಿ ಭರವಸೆ ನೀಡಿದ್ದರು ಎಂದು ವರದಿ ಹೇಳಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ

ಮಗುವಿನ ಪೋಷಕರಾದ ಮೊಹಮ್ಮದ್ ಹಾರೂನ್ ಮತ್ತು ರೆಹಾನಾ ಖಾತೂನ್ ಅವರು ವಿಚಾರಣೆಗಾಗಿ ಪೊಲೀಸರು ಕಸ್ಟಡಿಗೆ ಪಡೆದಿದ್ದಾರೆ. ಅವರ ಮಗುವನ್ನು ಶನಿವಾರ ಮಕ್ಕಳ ಕಲ್ಯಾಣ ಸಮಿತಿಗೆ ಹಸ್ತಾಂತರಿಸಲಾಗಿದೆ ಎಂದು ವರದಿಯಾಗಿದೆ.

ಮಗುವಿನ ತಾಯಿ ರೆಹಾನಾ ಖಾತೂನ್ ಅವರ ಸಹೋದರ ತನ್ವೀರ್ ಎಂಬಾತ ಮಗುವನ್ನು ಗ್ರಾಮಸ್ಥರಾದ ಮೊಹಮ್ಮದ್ ಆರಿಫ್‌ಗೆ ಮಾರಾಟ ಮಾಡಿದ್ದು, ಭಾನುವಾರ 9,000 ರೂ. ನೀಡಿದ್ದನು. ತನ್ವೀರ್ ತನ್ನ ಮಗನನ್ನು ಮಾರಾಟ ಮಾಡಿ ಆರೀಫ್‌ನಿಂದ ಎಷ್ಟು ಹಣ ಪಡೆದಿದ್ದಾನೆ ಎಂಬ ಬಗ್ಗೆ ತನಗೆ ತಿಳಿದಿಲ್ಲ ಎಂದು ಮಗುವಿನ ತಾಯಿ ಪೊಲೀಸರಿಗೆ ತಿಳಿಸಿದ್ದಾರೆ. ಅದಾಗ್ಯೂ, ಮಗುವನ್ನು ಪಡೆದ ಆರೀಫ್ ಅವರ ಸಂಬಂಧಿಕರು ಮಗುವಿಗಾಗಿ ಆತ 45 ಸಾವಿರ ನೀಡಿದ್ದಾಗಿ ವರದಿಯಾಗಿದೆ.

ಈ ಅಪರಾಧಕ್ಕೆ ತನ್ನ ಬಡತನವನ್ನು ದೂಷಿಸಿರುವ ಮಗುವಿನ ತಾಯಿ ರೆಹನಾ, ಹಣಕಾಸಿನ ಅಡಚಣೆಯಿಂದಾಗಿ 50,000 ರೂ. ಬ್ಯಾಂಕ್ ಸಾಲವನ್ನು ಪಾವತಿಸಲು ಸಾಧ್ಯವಾಗದ ಕಾರಣ ತನ್ನ ಮಗುವನ್ನು ಮಾರಾಟ ಮಾಡಬೇಕಾಯಿತು ಎಂದು ಹೇಳಿದ್ದಾರೆ. ಬ್ಯಾಂಕ್ ಉದ್ಯೋಗಿಗಳು ತನಗೆ ಕಿರುಕುಳ ನೀಡಲು ಪ್ರಾರಂಭಿಸಿದ್ದರು ಎಂದು ಅವರು ಹೇಳಿದ್ದಾರೆ.

“ಖಾಸಗಿ ಫೈನಾನ್ಸ್ ಕಂಪನಿಯಿಂದ ನಾನು ಪಡೆದ ಸಾಲದ ಕಂತು ಕಳೆದ ಮೂರು ತಿಂಗಳಿಂದ ಬಾಕಿಯಿರುವುದರಿಂದ ನಾನು ತೀವ್ರ ಒತ್ತಡಕ್ಕೆ ಒಳಗಾಗಿದ್ದೆ. ಸಾಲ ನೀಡುವ ಕಂಪನಿಯ ಏಜೆಂಟರು ನಮಗೆ ಕಿರುಕುಳ ನೀಡುತ್ತಿದ್ದರು. ಸಾಲವನ್ನು ಮರುಪಾವತಿಸಲು ವಿಫಲವಾದ ಕಾರಣ ನನ್ನ ವಿರುದ್ಧ ಮೊಕದ್ದಮೆ ಹೂಡುವುದಾಗಿ ಬೆದರಿಕೆ ಹಾಕಿದ್ದರು. ಸಾಲವನ್ನು ಮರುಪಾವತಿಸಲು ನನ್ನ ಮಕ್ಕಳಲ್ಲಿ ಒಬ್ಬರನ್ನು ಮಾರಾಟ ಮಾಡುವಂತೆ ನನ್ನ ಸಹೋದರ ತನ್ವೀರ್ ನನಗೆ ಸಲಹೆ ನೀಡಿದ್ದಾನೆ” ಎಂದು ರೆಹಾನಾ ವಿಚಾರಣೆ ವೇಳೆ ತಿಳಿಸಿದ್ದಾರೆ.

ಅರಾರಿಯಾ ಜಿಲ್ಲೆಯ ರಾಣಿಗಂಜ್ ಬ್ಲಾಕ್‌ನ ಪಚಿರಾ ಪಂಚಾಯತ್‌ನಲ್ಲಿ ವಾಸಿಸುವ ದಂಪತಿಯ ಮಕ್ಕಳಲ್ಲಿ ಒಬ್ಬರಾದ ಒಂದೂವರೆ ವರ್ಷದ ಗುರ್ಫಾನ್ ಅವರನ್ನು ಮಾರಾಟ ಮಾಡುವ ಬಗ್ಗೆ ಯೋಜಿಸಿದ್ದರು. ಹಾಗಾಗಿ ಗುರ್ಫಾನ್ ಅವರನ್ನು ಭಾನುವಾರ ಅವರ ತಾಯಿಯ ಚಿಕ್ಕಪ್ಪ ತನ್ವೀರ್ ಅವರ ಮನೆಗೆ ಕಳುಹಿಸಲಾಯಿತು. ಅಲ್ಲಿಂದ ಮಗುವನ್ನು ದುಮಾರಿಯಾ ನಿವಾಸಿ ಮೊಹಮ್ಮದ್ ಆರಿಫ್ ಅವರಿಗೆ ಹಸ್ತಾಂತರಿಸಲಾಗಿದೆ.

ಮಗುವನ್ನು ದತ್ತು ಪಡೆಯಲು ಇಚ್ಛಿಸಿದ ಬೆಂಗಳೂರು ಮೂಲದ ಮಹಿಳೆಯೊಬ್ಬರಿಂದ ಆರಿಫ್ ಅಪಾರ ಹಣ ಪಡೆದಿದ್ದಾಗಿ ಪೊಲೀಸರಿಗೆ ಮಹಿಳೆ ತಿಳಿಸಿದ್ದಾರೆ. ಅರಾರಿಯಾ ನೇಪಾಳ ಗಡಿಗೆ ಸಮೀಪದಲ್ಲಿದ್ದು, ಬಿಹಾರದ ಈ ಗಡಿ ಜಿಲ್ಲೆಗಳಲ್ಲಿ ಮಕ್ಕಳ ಕಳ್ಳಸಾಗಣೆ ಘಟನೆಗಳು ಸಾಮಾನ್ಯವಾಗಿ ನಡೆಯುತ್ತಲೆ ಇರುತ್ತವೆ ಎನ್ನಲಾಗಿದೆ.

2016 ರಲ್ಲಿ ಪಾಟ್ನಾ ಜಿಲ್ಲೆಯ ಹಳ್ಳಿಯೊಂದರ ರುಕ್ಮಣಿ ಮತ್ತು ಸಂದೀಪ್ ಮೀನಾ ತಮ್ಮ ಒಂಬತ್ತು ವರ್ಷದ ಮಗನನ್ನು ಇಂದೋರ್‌ನ ಮಧ್ಯವರ್ತಿಯೊಬ್ಬರಿಗೆ 20,000 ರೂ ಸಾಲವನ್ನು ಮರುಪಾವತಿಸಲು ಮಾರಾಟ ಮಾಡಿದ್ದರು.

ಅದೇ ವರ್ಷ, ಮುಜಾಫರ್‌ಪುರ ಜಿಲ್ಲೆಯ ವ್ಯಕ್ತಿ ಹಿಮಾಂಶು ರಂಜನ್ ತನ್ನ ಹೆಂಡತಿ ಮತ್ತು ಸುಮಾರು ಐದು ವರ್ಷ ಮತ್ತು ಮೂರು ವರ್ಷ ವಯಸ್ಸಿನ ಇಬ್ಬರು ಹೆಣ್ಣುಮಕ್ಕಳನ್ನು 4 ಲಕ್ಷ ರೂಪಾಯಿ ಸಾಲವನ್ನು ಮರುಪಾವತಿಸಲು ಮಾರಾಟ ಮಾಡಿದ್ದರು.

2012ರಲ್ಲಿ ಸಮಸ್ತಿಪುರ ಜಿಲ್ಲೆಯಲ್ಲಿ ಪಾರ್ವತಿ ದೇವಿ ಎಂಬಾಕೆ ತನ್ನ 18 ತಿಂಗಳ ಮಗನನ್ನು 15,000 ರೂ.ಗಳ ಸಾಲ ತೀರಿಸಲು ಮಾರಾಟ ಮಾಡಿದ್ದ ಪ್ರಕರಣ ಬೆಳಕಿಗೆ ಬಂದಿತ್ತು. ಬಡತನ 

ಇದನ್ನೂ ಓದಿ: ವಕ್ಫ್‌ ಭೂಮಿ ವಿವಾದ | ರೈತರಿಗೆ ನೀಡಿದ ನೋಟಿಸ್‌ ತಕ್ಷಣವೆ ವಾಪಸ್‌ – ಸಿಎಂ ಸಿದ್ದರಾಮಯ್ಯ

ವಕ್ಫ್‌ ಭೂಮಿ ವಿವಾದ | ರೈತರಿಗೆ ನೀಡಿದ ನೋಟಿಸ್‌ ತಕ್ಷಣವೆ ವಾಪಸ್‌ – ಸಿಎಂ ಸಿದ್ದರಾಮಯ್ಯ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಹೊತ್ತಿ ಉರಿಯುತ್ತಿರುವ ಮಣಿಪುರ’: ಶತಮಾನದ ಬೆಂಕಿಗೆ ತುಪ್ಪ ಸುರಿದ ಬಿಜೆಪಿಯ ಕೋಮುರಾಜಕಾರಣ

ಭಾರತದ ಈಶಾನ್ಯ ರಾಜ್ಯ ಮಣಿಪುರ ಅಕ್ಷರಶಃ ಹೊತ್ತಿ ಉರಿಯುತ್ತಿದೆ. ಶತಮಾನಗಳಿಂದ ಹೊಗೆಯಾಡುತ್ತಿದ್ದ ಹಗೆತನಕ್ಕೆ ಕೋಮುರಾಜಕಾರಣದ ಬಣ್ಣ ಬಳಿದ ಬಿಜೆಪಿ ಮತ್ತು ಕೇಂದ್ರ ಸರ್ಕಾರ ಮಣಿಪುರದ ಜನರತ್ತ ತಿರುಗಿಯೂ ನೋಡುತ್ತಿಲ್ಲ. 2023ರಲ್ಲಿ ಭುಗಿಲೆದ್ದ ಉದ್ವಿಗ್ನತೆ...

ಮಧ್ಯಪ್ರದೇಶ| ದಲಿತ ದಂಪತಿಗೆ ಹನುಮಾನ್ ದೇಗುಲ ಪ್ರವೇಶ ನಿರಾಕರಣೆ; ಸಾಮಾಜಿಕ ಬಹಿಷ್ಕಾರ

ಮಧ್ಯಪ್ರದೇಶದ ಖಾರ್ಗೋನ್ ಜಿಲ್ಲೆಯ ಹನುಮಾನ್ ದೇವಸ್ಥಾನಕ್ಕೆ ನವವಿವಾಹಿತ ದಲಿತ ದಂಪತಿಗೆ ಪ್ರವೇಶ ನಿರಾಕರಿಸಲಾಗಿದೆ ಎಂಬ ಆರೋಪ ಕೇಳಿಬಂದಿದ್ದು, ಇದು ಗ್ರಾಮದಲ್ಲಿ ಉದ್ವಿಗ್ನತೆಯನ್ನು ಉಂಟುಮಾಡಿದೆ. ಈ ಘಟನೆಯು ಜಾತಿ ಆಧಾರಿತ ತಾರತಮ್ಯದ ಕುರಿತು ಕಳವಳ...

ಬಂಗಾಳ SIR : ನ್ಯಾಯಮಂಡಳಿಗಳಿಂದ ಪರಿಹಾರ ಪಡೆದವರು ಕೇವಲ 0.01% ಜನ

ಪಶ್ಚಿಮ ಬಂಗಾಳದಲ್ಲಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಲ್ಲಿ ಉಂಟಾದ ವಿವಾದಗಳನ್ನು ಬಗೆಹರಿಸಲು ಮೇಲ್ಮನವಿ ನ್ಯಾಯಮಂಡಳಿಗಳನ್ನು ಸ್ಥಾಪಿಸಲಾಗಿದೆ. ಎಸ್‌ಐಆರ್ ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಿಂದ ಹೆಸರುಗಳನ್ನು ಕೈಬಿಟ್ಟಿರುವುದರ ಅಥವಾ...

ಪ.ಬಂಗಾಳ ಎಸ್‌ಐಆರ್‌ : ದೇಶ ಕಾದ ಯೋಧನಿಂದ ತೀರ್ಪು ಕೊಟ್ಟ ನ್ಯಾಯಾಧೀಶರವರೆಗೆ.. ಮತ ಹಕ್ಕು ಕಳೆದುಕೊಂಡ ಲಕ್ಷಾಂತರ ಜನರು

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್‌ ಪೂರ್ತಿಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...