Homeಮುಖಪುಟಬಡತನ | ಬ್ಯಾಂಕ್ ಸಾಲ ತೀರಿಸಲು ಮಗುವನ್ನೆ ₹9000ಕ್ಕೆ ಮಾರಾಟ!

ಬಡತನ | ಬ್ಯಾಂಕ್ ಸಾಲ ತೀರಿಸಲು ಮಗುವನ್ನೆ ₹9000ಕ್ಕೆ ಮಾರಾಟ!

- Advertisement -
- Advertisement -

ಬಡತನದಿಂದ ಬಳಲುತ್ತಿರುವ ಮಹಿಳೆಯೊಬ್ಬರು ತನ್ನ ಬ್ಯಾಂಕ್ ಸಾವನ್ನು ತೀರಿಸಲು ಸ್ವಂತ ಮಗುವನ್ನೆ ಕೇವಲ 9 ಸಾವಿರಕ್ಕೆ ಮಾರಾಟ ಮಾಡಿರುವ ಘಟನೆ ಬಿಹಾರದ ಅರಾರಿಯಾ ಜಿಲ್ಲೆಯಲ್ಲಿ ನಡೆದಿದೆ. ಘಟನೆಯ ಬಗ್ಗೆ ಮಾಹಿತಿ ಪಡೆದ ಪೊಲೀಸರು ತಕ್ಷಣ ಕಾರ್ಯಪ್ರವೃತ್ತರಾಗಿದ್ದಾರೆ ಎಂದು ವರದಿಗಳು ಹೇಳಿವೆ. ಬಡತನ 

ಪೊಲೀಸರು ಮಗುವನ್ನು ಮಹಿಳೆಯ ಸಂಬಂಧಿಕರ ಮನೆಯಿಂದ ವಶಪಡಿಸಿಕೊಂಡಿದ್ದಾರೆ. ಮಗುವನ್ನು ಬೆಂಗಳೂರು ಮೂಲದ ಮಕ್ಕಳಿಲ್ಲದ ತಾಯಿಯೊಬ್ಬರಿಗೆ ಹಸ್ತಾಂತರಿಸುವ ಮೊದಲು ಅಲ್ಲಿ ಇರಿಸಲಾಗಿತ್ತು. ಮಗುವಿನ ಹುಡುಕಾಟದಲ್ಲಿದ್ದ ಅವರು ಮಗುವಿಗೆ ಬದಲಾಗಿ 2 ಲಕ್ಷ ರೂಪಾಯಿ ನೀಡುವುದಾಗಿ ಭರವಸೆ ನೀಡಿದ್ದರು ಎಂದು ವರದಿ ಹೇಳಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ

ಮಗುವಿನ ಪೋಷಕರಾದ ಮೊಹಮ್ಮದ್ ಹಾರೂನ್ ಮತ್ತು ರೆಹಾನಾ ಖಾತೂನ್ ಅವರು ವಿಚಾರಣೆಗಾಗಿ ಪೊಲೀಸರು ಕಸ್ಟಡಿಗೆ ಪಡೆದಿದ್ದಾರೆ. ಅವರ ಮಗುವನ್ನು ಶನಿವಾರ ಮಕ್ಕಳ ಕಲ್ಯಾಣ ಸಮಿತಿಗೆ ಹಸ್ತಾಂತರಿಸಲಾಗಿದೆ ಎಂದು ವರದಿಯಾಗಿದೆ.

ಮಗುವಿನ ತಾಯಿ ರೆಹಾನಾ ಖಾತೂನ್ ಅವರ ಸಹೋದರ ತನ್ವೀರ್ ಎಂಬಾತ ಮಗುವನ್ನು ಗ್ರಾಮಸ್ಥರಾದ ಮೊಹಮ್ಮದ್ ಆರಿಫ್‌ಗೆ ಮಾರಾಟ ಮಾಡಿದ್ದು, ಭಾನುವಾರ 9,000 ರೂ. ನೀಡಿದ್ದನು. ತನ್ವೀರ್ ತನ್ನ ಮಗನನ್ನು ಮಾರಾಟ ಮಾಡಿ ಆರೀಫ್‌ನಿಂದ ಎಷ್ಟು ಹಣ ಪಡೆದಿದ್ದಾನೆ ಎಂಬ ಬಗ್ಗೆ ತನಗೆ ತಿಳಿದಿಲ್ಲ ಎಂದು ಮಗುವಿನ ತಾಯಿ ಪೊಲೀಸರಿಗೆ ತಿಳಿಸಿದ್ದಾರೆ. ಅದಾಗ್ಯೂ, ಮಗುವನ್ನು ಪಡೆದ ಆರೀಫ್ ಅವರ ಸಂಬಂಧಿಕರು ಮಗುವಿಗಾಗಿ ಆತ 45 ಸಾವಿರ ನೀಡಿದ್ದಾಗಿ ವರದಿಯಾಗಿದೆ.

ಈ ಅಪರಾಧಕ್ಕೆ ತನ್ನ ಬಡತನವನ್ನು ದೂಷಿಸಿರುವ ಮಗುವಿನ ತಾಯಿ ರೆಹನಾ, ಹಣಕಾಸಿನ ಅಡಚಣೆಯಿಂದಾಗಿ 50,000 ರೂ. ಬ್ಯಾಂಕ್ ಸಾಲವನ್ನು ಪಾವತಿಸಲು ಸಾಧ್ಯವಾಗದ ಕಾರಣ ತನ್ನ ಮಗುವನ್ನು ಮಾರಾಟ ಮಾಡಬೇಕಾಯಿತು ಎಂದು ಹೇಳಿದ್ದಾರೆ. ಬ್ಯಾಂಕ್ ಉದ್ಯೋಗಿಗಳು ತನಗೆ ಕಿರುಕುಳ ನೀಡಲು ಪ್ರಾರಂಭಿಸಿದ್ದರು ಎಂದು ಅವರು ಹೇಳಿದ್ದಾರೆ.

“ಖಾಸಗಿ ಫೈನಾನ್ಸ್ ಕಂಪನಿಯಿಂದ ನಾನು ಪಡೆದ ಸಾಲದ ಕಂತು ಕಳೆದ ಮೂರು ತಿಂಗಳಿಂದ ಬಾಕಿಯಿರುವುದರಿಂದ ನಾನು ತೀವ್ರ ಒತ್ತಡಕ್ಕೆ ಒಳಗಾಗಿದ್ದೆ. ಸಾಲ ನೀಡುವ ಕಂಪನಿಯ ಏಜೆಂಟರು ನಮಗೆ ಕಿರುಕುಳ ನೀಡುತ್ತಿದ್ದರು. ಸಾಲವನ್ನು ಮರುಪಾವತಿಸಲು ವಿಫಲವಾದ ಕಾರಣ ನನ್ನ ವಿರುದ್ಧ ಮೊಕದ್ದಮೆ ಹೂಡುವುದಾಗಿ ಬೆದರಿಕೆ ಹಾಕಿದ್ದರು. ಸಾಲವನ್ನು ಮರುಪಾವತಿಸಲು ನನ್ನ ಮಕ್ಕಳಲ್ಲಿ ಒಬ್ಬರನ್ನು ಮಾರಾಟ ಮಾಡುವಂತೆ ನನ್ನ ಸಹೋದರ ತನ್ವೀರ್ ನನಗೆ ಸಲಹೆ ನೀಡಿದ್ದಾನೆ” ಎಂದು ರೆಹಾನಾ ವಿಚಾರಣೆ ವೇಳೆ ತಿಳಿಸಿದ್ದಾರೆ.

ಅರಾರಿಯಾ ಜಿಲ್ಲೆಯ ರಾಣಿಗಂಜ್ ಬ್ಲಾಕ್‌ನ ಪಚಿರಾ ಪಂಚಾಯತ್‌ನಲ್ಲಿ ವಾಸಿಸುವ ದಂಪತಿಯ ಮಕ್ಕಳಲ್ಲಿ ಒಬ್ಬರಾದ ಒಂದೂವರೆ ವರ್ಷದ ಗುರ್ಫಾನ್ ಅವರನ್ನು ಮಾರಾಟ ಮಾಡುವ ಬಗ್ಗೆ ಯೋಜಿಸಿದ್ದರು. ಹಾಗಾಗಿ ಗುರ್ಫಾನ್ ಅವರನ್ನು ಭಾನುವಾರ ಅವರ ತಾಯಿಯ ಚಿಕ್ಕಪ್ಪ ತನ್ವೀರ್ ಅವರ ಮನೆಗೆ ಕಳುಹಿಸಲಾಯಿತು. ಅಲ್ಲಿಂದ ಮಗುವನ್ನು ದುಮಾರಿಯಾ ನಿವಾಸಿ ಮೊಹಮ್ಮದ್ ಆರಿಫ್ ಅವರಿಗೆ ಹಸ್ತಾಂತರಿಸಲಾಗಿದೆ.

ಮಗುವನ್ನು ದತ್ತು ಪಡೆಯಲು ಇಚ್ಛಿಸಿದ ಬೆಂಗಳೂರು ಮೂಲದ ಮಹಿಳೆಯೊಬ್ಬರಿಂದ ಆರಿಫ್ ಅಪಾರ ಹಣ ಪಡೆದಿದ್ದಾಗಿ ಪೊಲೀಸರಿಗೆ ಮಹಿಳೆ ತಿಳಿಸಿದ್ದಾರೆ. ಅರಾರಿಯಾ ನೇಪಾಳ ಗಡಿಗೆ ಸಮೀಪದಲ್ಲಿದ್ದು, ಬಿಹಾರದ ಈ ಗಡಿ ಜಿಲ್ಲೆಗಳಲ್ಲಿ ಮಕ್ಕಳ ಕಳ್ಳಸಾಗಣೆ ಘಟನೆಗಳು ಸಾಮಾನ್ಯವಾಗಿ ನಡೆಯುತ್ತಲೆ ಇರುತ್ತವೆ ಎನ್ನಲಾಗಿದೆ.

2016 ರಲ್ಲಿ ಪಾಟ್ನಾ ಜಿಲ್ಲೆಯ ಹಳ್ಳಿಯೊಂದರ ರುಕ್ಮಣಿ ಮತ್ತು ಸಂದೀಪ್ ಮೀನಾ ತಮ್ಮ ಒಂಬತ್ತು ವರ್ಷದ ಮಗನನ್ನು ಇಂದೋರ್‌ನ ಮಧ್ಯವರ್ತಿಯೊಬ್ಬರಿಗೆ 20,000 ರೂ ಸಾಲವನ್ನು ಮರುಪಾವತಿಸಲು ಮಾರಾಟ ಮಾಡಿದ್ದರು.

ಅದೇ ವರ್ಷ, ಮುಜಾಫರ್‌ಪುರ ಜಿಲ್ಲೆಯ ವ್ಯಕ್ತಿ ಹಿಮಾಂಶು ರಂಜನ್ ತನ್ನ ಹೆಂಡತಿ ಮತ್ತು ಸುಮಾರು ಐದು ವರ್ಷ ಮತ್ತು ಮೂರು ವರ್ಷ ವಯಸ್ಸಿನ ಇಬ್ಬರು ಹೆಣ್ಣುಮಕ್ಕಳನ್ನು 4 ಲಕ್ಷ ರೂಪಾಯಿ ಸಾಲವನ್ನು ಮರುಪಾವತಿಸಲು ಮಾರಾಟ ಮಾಡಿದ್ದರು.

2012ರಲ್ಲಿ ಸಮಸ್ತಿಪುರ ಜಿಲ್ಲೆಯಲ್ಲಿ ಪಾರ್ವತಿ ದೇವಿ ಎಂಬಾಕೆ ತನ್ನ 18 ತಿಂಗಳ ಮಗನನ್ನು 15,000 ರೂ.ಗಳ ಸಾಲ ತೀರಿಸಲು ಮಾರಾಟ ಮಾಡಿದ್ದ ಪ್ರಕರಣ ಬೆಳಕಿಗೆ ಬಂದಿತ್ತು. ಬಡತನ 

ಇದನ್ನೂ ಓದಿ: ವಕ್ಫ್‌ ಭೂಮಿ ವಿವಾದ | ರೈತರಿಗೆ ನೀಡಿದ ನೋಟಿಸ್‌ ತಕ್ಷಣವೆ ವಾಪಸ್‌ – ಸಿಎಂ ಸಿದ್ದರಾಮಯ್ಯ

ವಕ್ಫ್‌ ಭೂಮಿ ವಿವಾದ | ರೈತರಿಗೆ ನೀಡಿದ ನೋಟಿಸ್‌ ತಕ್ಷಣವೆ ವಾಪಸ್‌ – ಸಿಎಂ ಸಿದ್ದರಾಮಯ್ಯ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ವಿದ್ಯುತ್ ಖಾಸಗೀಕರಣ ವಿರುದ್ದದ ಹೋರಾಟಕ್ಕೆ ಗೆಲುವು: ಅರ್ಜಿ ಹಿಂಪಡೆದ ಟಾಟಾ ಪವರ್ ಕಂಪನಿ

ರಾಜ್ಯದಲ್ಲಿ ವಿದ್ಯುತ್ ಕ್ಷೇತ್ರದಲ್ಲಿ ಖಾಸಗೀಕರಣದ ಹೆಜ್ಜೆ ಇಡಲು ಮುಂದಾಗಿದ್ದ ಟಾಟಾ ಪವರ್ ಕಂಪನಿಗೆ ಭಾರಿ ಹಿನ್ನಡೆಯಾಗಿದೆ. ಕರ್ನಾಟಕ ವಿದ್ಯುತ್ ನಿಯಂತ್ರಣ ಆಯೋಗದ (KERC) ಮುಂದೆ ರಾಜ್ಯದ 19 ಕಂದಾಯ ಜಿಲ್ಲೆಗಳಿಗೆ ಸಂಬಂಧಿಸಿದಂತೆ ತಾನು...

SIR: ಮತದಾರರ ಮನೆಗೆ ಹೋಗದೆ ಕಚೇರಿಯಲ್ಲೇ ಕುಳಿತು ಫಾರ್ಮ್ ವಿತರಣೆ ಆರೋಪ, BLO ಗಳಿಗೆ ಎಚ್ಚರಿಕೆ ನೀಡಿದ ಆಯೋಗ

ರಾಜ್ಯದಲ್ಲಿ ಪ್ರಸ್ತುತ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಸಾರ್ವಜನಿಕರಿಂದ ವ್ಯಾಪಕ ದೂರುಗಳು ಕೇಳಿಬಂದ ಬೆನ್ನಲ್ಲೇ, ರಾಜ್ಯ ಚುನಾವಣಾ ಆಯೋಗವು ತೀವ್ರ ಆಕ್ಷೇಪ ವ್ಯಕ್ತಪಡಿಸಿದೆ. ಮತದಾರರ ಮನೆ-ಮನೆಗೆ ಭೇಟಿ...

ಅಳುವ ಕಂದಮ್ಮಗಳನ್ನು ವಾಷಿಂಗ್ ಮೆಷಿನ್‌ನಲ್ಲಿ ಕೂಡಿಹಾಕ್ತಿದ್ದ ಇಬ್ಬರು ಕೇರ್‌ಟೇಕರ್ ಅರೆಸ್ಟ್

ಸಿಲಿಕಾನ್ ಸಿಟಿಯ ಬ್ರೂಕ್‌ಫೀಲ್ಡ್‌ನಲ್ಲಿರುವ ಪ್ರಮುಖ ಐಟಿ ಸಂಸ್ಥೆ 'ಕ್ಯಾಪ್‌ಜೆಮಿನಿ' ಕ್ಯಾಂಪಸ್‌ನ ಡೇ-ಕೇರ್ ಸೆಂಟರ್‌ನಲ್ಲಿ ಪುಟ್ಟ ಕಂದಮ್ಮಗಳನ್ನು ಬಾತ್‌ರೂಮ್ ಹಾಗೂ ವಾಷಿಂಗ್ ಮೆಷಿನ್‌ಗಳಲ್ಲಿ ಕೂಡಿಹಾಕಿ ವಿಕೃತಿ ಮೆರೆದಿದ್ದ ಪ್ರಕರಣದಲ್ಲಿ ಪೊಲೀಸರು ಭರ್ಜರಿ ಬೇಟೆಯಾಡಿದ್ದಾರೆ. ಪ್ರಕರಣದ...

“ನಾಗರಿಕರು ಸರ್ಕಾರದ ಗುಲಾಮರಲ್ಲ”: ಸಿಎಎ, ಜ್ಞಾನವಾಪಿ ವಿರೋಧಿ ಪ್ರತಿಭಟನೆ ಸಂಬಂಧ ಎಸ್‌ಡಿಪಿಐ ನಾಯಕನ ಗಡಿಪಾರು ಪ್ರಶ್ನಿಸಿದ ಬಾಂಬೆ ಹೈಕೋರ್ಟ್

“ದೇಶದ ನಾಗರಿಕರು ಸರ್ಕಾರದ ಗುಲಾಮರಲ್ಲ. ಕೇವಲ ಸರ್ಕಾರದ ನಿರ್ಧಾರಗಳನ್ನು ವಿರೋಧಿಸುವುದು ಅಥವಾ ಆಡಳಿತ ವ್ಯವಸ್ಥೆಯ ವಿರುದ್ಧ ಘೋಷಣೆಗಳನ್ನು ಕೂಗುವುದು ಒಬ್ಬ ನಾಗರಿಕನನ್ನು ಗಡಿಪಾರು ಮಾಡಲು ಕಾನೂನಾತ್ಮಕ ಕಾರಣವಾಗಲಾರದು,” ಎಂದು ಬಾಂಬೆ ಹೈಕೋರ್ಟ್‌ ಐತಿಹಾಸಿಕ...

ಗೌರಿಯಕ್ಕ, ಸುರೇಶ್ ಭಟ್ರ ಬಗ್ಗೆ ತಿಳಿಯಲು ಎಕ್ಸ್ ಆರೆಸ್ಸೆಸ್‌ನವರ ಪ್ರಮಾಣ ಪತ್ರ ಬೇಕಿಲ್ಲ

ಕರ್ನಾಟಕ ಕೋಮು ಸೌಹಾರ್ದ ವೇದಿಕೆಯಲ್ಲಿ ನಮ್ಮ ಒಡನಾಡಿಯಾಗಿದ್ದ ಎ‌ಐಸಿಸಿ ಕಾರ್ಯದರ್ಶಿಯೂ ಆಗಿರುವ ಪಿ.ವಿ.ಮೋಹನ್‌ರಿಗೆ ವಿಧಾನ ಪರಿಷತ್ ಸದಸ್ಯತ್ವ ಸಿಕ್ಕಿದ್ದು ಸಹಜವಾಗಿಯೇ ನಮಗೆ ಖುಷಿಯಾಗಿತ್ತು. ಈ ನಿಟ್ಟಿನಲ್ಲಿ ಮಂಗಳೂರಿನ ವುಡ್‌ಲ್ಯಾಂಡ್ಸ್ ಹೋಟೆಲಲ್ಲಿ ಕೋಮು ಸೌಹಾರ್ದ...

ಡ್ರಗ್ಸ್ ಮುಕ್ತ ಕರ್ನಾಟಕ ನಮ್ಮ ಗುರಿ: ‘ಆಪರೇಷನ್ RISE’ ಮತ್ತು ‘ಬೇಡ BRO’ ಅಭಿಯಾನಕ್ಕೆ ಸಚಿವ ಪ್ರಿಯಾಂಕ್ ಖರ್ಗೆ ಕರೆ

ಬೆಂಗಳೂರು: ಮಾದಕ ದ್ರವ್ಯ ಮುಕ್ತ ಕರ್ನಾಟಕವನ್ನು ನಿರ್ಮಿಸುವ ನಿಟ್ಟಿನಲ್ಲಿ ರಾಜ್ಯ ಸರ್ಕಾರ ಮಹತ್ವದ ಹೆಜ್ಜೆ ಇಟ್ಟಿದ್ದು, ಮಾದಕ ವ್ಯಸನದ ವಿರುದ್ಧ ಯುವಜನತೆ ಮತ್ತು ಸಾರ್ವಜನಿಕರು ಕೈಜೋಡಿಸಬೇಕು ಎಂದು ಗೃಹ ಸಚಿವ ಪ್ರಿಯಾಂಕ್ ಖರ್ಗೆ...

ಬೆಂಗಳೂರಿನ 3 ಪ್ರಮುಖ ಮಾರ್ಗಗಳಲ್ಲಿ ಟೋಲ್ ದರ ಭಾರಿ ಹೆಚ್ಚಳ: ಇಂದಿನಿಂದಲೇ ಜಾರಿ 

ಬೆಂಗಳೂರು: ಸಿಲಿಕಾನ್ ಸಿಟಿಯ ವಾಹನ ಸವಾರರಿಗೆ ಜುಲೈ ಒಂದರಿಂದಲೇ ಅನ್ವಯವಾಗುವಂತೆ ಬೆಲೆ ಏರಿಕೆಯ ಭಾರಿ ಬಿಸಿ ತಟ್ಟಿದೆ. ಬೆಂಗಳೂರಿನ ಪ್ರಮುಖ ಸಂಪರ್ಕ ರಸ್ತೆಗಳಾದ ನೈಸ್ ರಸ್ತೆ (NICE Road), ಎಲೆಕ್ಟ್ರಾನಿಕ್ಸ್ ಸಿಟಿ ಎಲಿವೇಟೆಡ್...

ಕೊಪ್ಪಳದ ಬೋಚನಹಳ್ಳಿಯಲ್ಲಿ ದಲಿತರ ಮೇಲೆ ಹಲ್ಲೆ: ದೂರು-ಪ್ರತಿದೂರು; ಹೋರಾಟಕ್ಕೆ ಸಂಘಟನೆಗಳ ನಿರ್ಧಾರ

ಮೊಹರಂ ಮೆರವಣಿಗೆ ವೇಳೆ ನಡೆದ ಗಲಾಟೆಗೆ ಸಂಬಂಧಿಸಿದಂತೆ ದಲಿತರ ಮನೆಗಳಿಗೆ ನುಗ್ಗಿ ಮಾರಣಾಂತಿಕ ಹಲ್ಲೆ ನಡೆಸಿದ ಘಟನೆ ಕೊಪ್ಪಳ ತಾಲೂಕಿನ ಅಳವಂಡಿ ಬಳಿಯ ಬೋಚನಹಳ್ಳಿ ಗ್ರಾಮದಲ್ಲಿ ನಡೆದಿದೆ. ಜೂನ್ 25ರಂದು ಗ್ರಾಮದಲ್ಲಿ ಮೊಹರಂ ಮೆರವಣಿಗೆ...

ಎನ್ಯೂಮರೇಷನ್ ಫಾರಂ ಭರ್ತಿ ಮಾಡುವ ಮೂಲಕ SIR ಗೆ ಚಾಲನೆ ನೀಡಿದ ಸಿಎಂ ಡಿ.ಕೆ ಶಿವಕುಮಾರ್

ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಇಂದು (ಜೂನ್ 30) ಮಂಗಳವಾರ ತಮ್ಮ ಸದಾಶಿವನಗರ ನಿವಾಸದಲ್ಲಿ ದಾಖಲಾತಿ ನಮೂನೆಯನ್ನು ಭರ್ತಿ ಮಾಡಿ ಸಲ್ಲಿಸುವ ಮೂಲಕ ಮತದಾರರ ಪಟ್ಟಿಯ 'ವಿಶೇಷ ತೀವ್ರ ಪರಿಷ್ಕರಣೆ' (SIR) ಅಭಿಯಾನಕ್ಕೆ ಅಧಿಕೃತವಾಗಿ...

‘ಆಪರೇಷನ್ ಸಿಂಧೂರ್‌’ ಕುರಿತು ಸಂಸತ್ತಿಗೆ ಸುಳ್ಳು ಮಾಹಿತಿ: ರಾಜನಾಥ್ ಸಿಂಗ್ ವಿರುದ್ಧ ಕಾಂಗ್ರೆಸ್‌ನಿಂದ ಹಕ್ಕುಚ್ಯುತಿ ನೋಟಿಸ್

ಕೇಂದ್ರ ರಕ್ಷಣಾ ಸಚಿವ ರಾಜ್‌ನಾಥ್ ಸಿಂಗ್ ವಿರುದ್ಧ ಕಾಂಗ್ರೆಸ್ ಪಕ್ಷ ಲೋಕಸಭೆಯಲ್ಲಿ ಹಕ್ಕುಚ್ಯುತಿ ನೋಟಿಸ್ ನೀಡಿದೆ. ಕಾಂಗ್ರೆಸ್ ಸಂಸದ ಕೆ. ಸಿ. ವೇಣುಗೋಪಾಲ್ ಅವರು ಲೋಕಸಭಾ ಸ್ಪೀಕರ್ ಓಂ ಬಿರ್ಲಾ ಅವರಿಗೆ ಈ ಕುರಿತು ಪತ್ರ ಬರೆದಿದ್ದು,...