Homeಅಂತರಾಷ್ಟ್ರೀಯಪ್ಯಾಲೆಸ್ತೀನ್‌ ಪ್ರಾಂತ್ಯಗಳ ಬಡತನ ಈ ವರ್ಷ ದ್ವಿಗುಣ; 74.3% ಕ್ಕೆ ಏರಿಕೆ - ವಿಶ್ವಸಂಸ್ಥೆ

ಪ್ಯಾಲೆಸ್ತೀನ್‌ ಪ್ರಾಂತ್ಯಗಳ ಬಡತನ ಈ ವರ್ಷ ದ್ವಿಗುಣ; 74.3% ಕ್ಕೆ ಏರಿಕೆ – ವಿಶ್ವಸಂಸ್ಥೆ

- Advertisement -
- Advertisement -

ಗಾಜಾದಲ್ಲಿ ಆಕ್ರಮಣಕಾರ ಇಸ್ರೇಲ್ ಹಲವು ತಿಂಗಳಿನಿಂದ ನಡೆಸುತ್ತಿರುವ ವಿನಾಶದ ನಂತರ ಪ್ಯಾಲೇಸ್ತೀನಿನ ಪ್ರಾಂತ್ಯಗಳಾದ್ಯಂತ ಬಡತನದ ಪ್ರಮಾಣವು ಈ ವರ್ಷ ಸುಮಾರು ದ್ವಿಗುಣಗೊಳ್ಳಲಿದ್ದು 74.3%ಕ್ಕೆ ತಲುಪಲಿದೆ ಎಂದು ಮಂಗಳವಾರ ಬಿಡುಗಡೆಯಾದ ವಿಶ್ವಸಂಸ್ಥೆಯ ಅಭಿವೃದ್ಧಿ ಕಾರ್ಯಕ್ರಮ (ಯುಎನ್‌ಡಿಪಿ) ವರದಿಯೊಂದು ತಿಳಿಸಿದೆ. ಪ್ಯಾಲೆಸ್ತೀನ್‌ ಪ್ರಾಂತ್ಯಗಳ ಬಡತನ

“ಯುದ್ಧದ ತಕ್ಷಣದ ಪರಿಣಾಮವೆಂದರೆ ಕೇವಲ ಭೌತಿಕ ಮೂಲಸೌಕರ್ಯ ವಿನಾಶ ಮಾತ್ರವಲ್ಲ. ಬದಲಾಗಿ ಬಡತನ, ಜೀವನೋಪಾಯ ಮತ್ತು ಜೀವನೋಪಾಯದ ನಷ್ಟದ ವಿಷಯದಲ್ಲಿಯೂ ಅಗಾಧ ನಾಶವಾಗಿದೆ” ಎಂದು ಯುಎನ್‌ಡಿಪಿ ಮುಖ್ಯಸ್ಥ ಅಚಿಮ್ ಸ್ಟೈನರ್ ಅವರು ತಿಳಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ

2023 ರ ಅಂತ್ಯದ ವೇಳೆಗೆ ಪ್ಯಾಲೆಸ್ತೀನ್‌ನಲ್ಲಿ ಬಡತನದ ಪ್ರಮಾಣವು 38.8% ದಷ್ಟಿತ್ತು. ಆದರೆ ಈ ವರ್ಷ ಇನ್ನೂ 26 ಲಕ್ಷ ಪ್ಯಾಲೆಸ್ತೀನಿಯನ್ನರು ಬಡತನಕ್ಕೆ ಸಿಲುಕಿದ್ದಾರೆ, ಒಟ್ಟು 41 ಲಕ್ಷ ಪ್ಯಾಲೆಸ್ತೀನಿಯನ್ನರು ಬಡತನಕ್ಕೆ ಸಿಲುಕಿದ್ದಾರೆ ಎಂದು ಅವರು ಹೇಳಿದ್ದಾರೆ. ಪ್ಯಾಲೆಸ್ತೀನ್‌ ಪ್ರಾಂತ್ಯಗಳ ಬಡತನ

“ಈ ಸಾಮಾಜಿಕ-ಆರ್ಥಿಕ ಮೌಲ್ಯಮಾಪನದ ಮೂಲಕ, ವಿನಾಶದ ಮಟ್ಟವು ಪ್ಯಾಲೆಸ್ತೀನ್‌ ರಾಷ್ಟ್ರದ ಅಭಿವೃದ್ಧಿಯ ಹಾದಿಯಯನ್ನು ವರ್ಷಗಳಷ್ಟು ಅಲ್ಲ, ದಶಕಗಳಷ್ಟು ಹಿಮ್ಮೆಟ್ಟಿಸಿದೆ ಎಂದು ಸ್ಪಷ್ಟವಾಗಿದೆ ತಿಳಿಯುತ್ತದೆ” ಎಂದು ಸ್ಟೈನರ್ ಹೇಳಿದ್ದಾರೆ.

ಈ ವರ್ಷ ಪ್ಯಾಲೆಸ್ತೀನ್‌ ಪ್ರಾಂತ್ಯಗಳಲ್ಲಿ ನಿರುದ್ಯೋಗವು 49.9% ಕ್ಕೆ ಏರಬಹುದು ಮತ್ತು ಗಾಜಾದಲ್ಲಿ ಯುದ್ಧವಿಲ್ಲದೆ GDP 35.1% ಕಡಿಮೆ ಇರುತ್ತದೆ ಎಂದು ಅಧ್ಯಯನವು ಅಂದಾಜಿಸಿದೆ.

ಪ್ರತಿ ವರ್ಷ ಮಾನವೀಯ ನೆರವು ನೀಡಿದ್ದರೂ ಸಹ, ಪ್ಯಾಲೇಸ್ತೀನಿ ಆರ್ಥಿಕತೆಯು ಒಂದು ದಶಕ ಅಥವಾ ಅದಕ್ಕಿಂತ ಹೆಚ್ಚು ಕಾಲ ಬಿಕ್ಕಟ್ಟಿಗಿಂತ ಪೂರ್ವದಲ್ಲಿ ಇದ್ದ ಸ್ಥಿತಿಗೆ ಹಿಂತಿರುಗಲು ಸಾಧ್ಯವಿಲ್ಲ ಎಂದು ಅವರು ಹೇಳಿದ್ದಾರೆ.

ಆಕ್ರಮಣಕಾರ ಇಸ್ರೇಲ್‌ನ ಬಾಂಬ್ ದಾಳಿಯ ಕಾರ್ಯಾಚರಣೆಯಿಂದ ಗಾಜಾದಲ್ಲಿ 42 ಮಿಲಿಯನ್ ಟನ್‌ಗಳಷ್ಟು ಕಲ್ಲುಮಣ್ಣುಗಳನ್ನು ಸೃಷ್ಟಿಸಿದೆ ಎಂದು ಅಧ್ಯಯನವು ಹೇಳುತ್ತದೆ. ಇದು ಸೀಸ ಮತ್ತು ಇತರ ಲೋಹಗಳನ್ನು ಬಿಡುಗಡೆ ಮಾಡುವುದರಿಂದ ಆರೋಗ್ಯಕ್ಕೆ ಹಾನಿಕಾರಕವಾಗಿದೆ.

ಗಾಜಾದಲ್ಲಿ ಆಕ್ರಮಣಕಾರ ಇಸ್ರೇಲ್‌ ನಡೆಸುತ್ತಿರುವ ಬಾಂಬ್ ಮತ್ತು ಭೂ ಸೇನೆಯ ದಾಳಿಯಿಂದ ಸುಮಾರು 42,603 ​​ಜನರು ಮೃತಪಟ್ಟಿದ್ದಾರೆ. ಇದರಲ್ಲಿ ಬಹುಪಾಲು ನಾಗರಿಕರಾಗಿದ್ದು ಅದರಲ್ಲೂ ಮಹಿಳೆ ಮತ್ತು ಮಕ್ಕಳು ಹೆಚ್ಚಿದ್ದಾರೆ.

ಇದನ್ನೂ ಓದಿ: ಗೌರಿ ಹತ್ಯೆ ಆರೋಪಿಯನ್ನು ಹುದ್ದೆಯಿಂದ ಹೊರಗಿಟ್ಟ ಶಿವಸೇನೆ | ಚುನಾವಣೆಗಾಗಿ ನೈತಿಕತೆಯ ಮುಸುಕು : ಸುಪ್ರಿಯಾ ಸುಳೆ

ಗೌರಿ ಹತ್ಯೆ ಆರೋಪಿಯನ್ನು ಹುದ್ದೆಯಿಂದ ಹೊರಗಿಟ್ಟ ಶಿವಸೇನೆ | ಚುನಾವಣೆಗಾಗಿ ನೈತಿಕತೆಯ ಮುಸುಕು : ಸುಪ್ರಿಯಾ ಸುಳೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ನನ್ನ ಮನೆ ಮೇಲೆ ದಾಳಿ ಮಾಡಿ… ಹೇಗೆ ಎದುರಿಸಬೇಕೆಂದು ಗೊತ್ತಿದೆ..’; ಬಿಜೆಪಿಗೆ ಮಮತಾ ಬ್ಯಾನರ್ಜಿ ಸವಾಲು

"ತಮ್ಮ ನಿವಾಸ ಮತ್ತು ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ನಾಯಕರ ನಿವಾಸವನ್ನು ಗುರಿಯಾಗಿಸಿಕೊಳ್ಳುವಂತೆ" ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಸೋಮವಾರ ಬಿಜೆಪಿಗೆ ಸವಾಲು ಹಾಕಿದರು. ರಾಜ್ಯದಲ್ಲಿ, ಟಿಎಂಸಿ ನಾಯಕರ ಮೇಲಿನ ದಾಳಿಗೆ...

ಬೆಂಗಳೂರು: ವಿಶೇಷ ಪೂಜೆ ಹೆಸರಿನಲ್ಲಿ ಐಟಿ ಅಧಿಕಾರಿಗೆ 35 ಲಕ್ಷ ವಂಚನೆ: 59 ವರ್ಷದ ‘ಗಿಳಿ ಶಾಸ್ತ್ರ’ ಹೇಳುವ ವ್ಯಕ್ತಿ ಬಂಧನ

ಬೆಂಗಳೂರು: ವಿಶೇಷ ಪೂಜೆ ಮಾಡುವುದಾಗಿ ಹೇಳಿಕೊಂಡು ಆದಾಯ ತೆರಿಗೆ ಅಧಿಕಾರಿಗೆ 35 ಲಕ್ಷ ರೂಪಾಯಿ ವಂಚಿಸಿದ ಆರೋಪದ ಮೇಲೆ ತಮಿಳುನಾಡು ಮೂಲದ 59 ವರ್ಷದ ವ್ಯಕ್ತಿಯನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಥೇಣಿಯ ಶೇಖರ್...

ಬಿಹಾರ| ರಾಜ್ಯಸಭಾ ಚುನಾವಣೆ ಮತದಾನದಿಂದ ಹೊರಗುಳಿದ ನಾಲ್ವರು ಶಾಸಕರು; ಮಹಾಘಟಬಂಧನ್‌ಗೆ ಹಿನ್ನಡೆ

ಸೋಮವಾರ ಸಂಜೆ 4 ಗಂಟೆಗೆ ಮುಕ್ತಾಯಗೊಂಡ ರಾಜ್ಯಸಭಾ ಚುನಾವಣೆಯಲ್ಲಿ ನಾಲ್ವರು ಶಾಸಕರು ಮತದಾನದಿಂದ ಹೊರಗುಳಿಯುವ ಮೂಲಕ ಬಿಹಾರದ ಮಹಾಘಟಬಂಧನ್‌ಗೆ ಭಾರಿ ಹಿನ್ನಡೆಯಾಗಿದೆ. ಐದನೇ ಸ್ಥಾನಕ್ಕಾಗಿ ನಡೆಯುವ ಸ್ಪರ್ಧೆಯಲ್ಲಿ ವಿರೋಧ ಮೈತ್ರಿಕೂಟದ ನಿರೀಕ್ಷೆಗೆ ಭಾರಿ...

ರಾಜ್ಯಸಭೆಯಲ್ಲಿ LPG ಕೊರತೆ ಪ್ರಸ್ತಾಪಿಸಿದ ಮಲ್ಲಿಕಾರ್ಜುನ ಖರ್ಗೆ; ಪ್ರತಿಪಕ್ಷ ಅರಾಜಕತೆ ಸೃಷ್ಟಿಸಲು ಯತ್ನಿಸುತ್ತಿದೆ ಎಂದ ಸರ್ಕಾರ !

ನವದೆಹಲಿ: ರಾಜ್ಯಸಭೆಯಲ್ಲಿ ಸೋಮವಾರ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಎಲ್‌ಪಿಜಿ ಕೊರತೆಯ ವಿಷಯವನ್ನು ಪ್ರಸ್ತಾಪಿಸಿದರು ಮತ್ತು ಅಡುಗೆ ಅನಿಲದ ಬಿಕ್ಕಟ್ಟು ಮತ್ತು ಕಾಳಸಂತೆಕೋರತನವನ್ನು ತಡೆಯಲು ಸರ್ಕಾರ ಮುನ್ನೆಚ್ಚರಿಕೆ ಕ್ರಮಗಳನ್ನು ತೆಗೆದುಕೊಂಡಿಲ್ಲ ಎಂದು...

ಬೆಂಗಳೂರು| ಹಣ ನೀಡಲು ನಿರಾಕರಿಸಿದ ವ್ಯಕ್ತಿಯನ್ನು ಮಕ್ಕಳ ಮುಂದೆಯೇ ಥಳಿಸಿ ಕೊಂದ ಗುಂಪು

ಹಣ ನೀಡಲು ನಿರಾಕರಿಸಿದ ತಂದೆಯನ್ನು ಮಕ್ಕಳ ಮುಂದೆಯೇ ಗುಂಪೊಂದು ಥಳಿಸಿ ಕೊಂದಿರುವ ಘಟನೆ ಬೆಂಗಳೂರಿನ ವಿಲ್ಸನ್ ಗಾರ್ಡನ್‌ನಲ್ಲಿ ಭಾನುವಾರ ರಾತ್ರಿ ನಡೆದಿದೆ. ವಿಲ್ಸನ್ ಗಾರ್ಡನ್‌ನ ಬಡಾ ಮಕನ್ ರಸ್ತೆ ಬಳಿ ರಶೀದ್ ಪಾಷಾ ಎಂದು...

ಅಬಕಾರಿ ನೀತಿ ಪ್ರಕರಣದಲ್ಲಿ ಖುಲಾಸೆ ಪ್ರಶ್ನಿಸಿ ಸಿಬಿಐ ಅರ್ಜಿ; ಪ್ರತಿಕ್ರಿಯಿಸಲು ಕೇಜ್ರಿವಾಲ್-ಸಿಸೋಡಿಯಾಗೆ ಸಮಯ ನೀಡಿದ ದೆಹಲಿ ಹೈಕೋರ್ಟ್

ದೆಹಲಿ ಅಬಕಾರಿ ನೀತಿ ಪ್ರಕರಣದಲ್ಲಿ ಮಾಜಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್, ಮಾಜಿ ಉಪಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಮತ್ತು ಇತರ 21 ಜನರ ತಮ್ಮ ಬಿಡುಗಡೆಯನ್ನು ಪ್ರಶ್ನಿಸಿ ಸಿಬಿಐ ಅರ್ಜಿಗೆ ಪ್ರತಿಕ್ರಿಯೆಗಳನ್ನು ಸಲ್ಲಿಸಲು ದೆಹಲಿ...

ಪ್ರಶ್ನೆಗಳಿಗೆ ಉತ್ತರಿಸದ ಸಚಿವರು: ಸದನ ಮುಂದೂಡಿದ ಸ್ಪೀಕರ್ ಯು.ಟಿ ಖಾದರ್

ಶಾಸಕರು ಕೇಳುವ ಪ್ರಶ್ನೆಗಳಿಗೆ ಉತ್ತರ ಒದಗಿಸದ ಸಚಿವರು ಮತ್ತು ಅಧಿಕಾರಿಗಳ ವಿರುದ್ದ ಸೋಮವಾರ (ಮಾ.16) ತೀವ್ರ ಅಸಮಾಧಾನ ವ್ಯಕ್ತಪಡಿಸಿದ ವಿಧಾನಸಭೆಯ ಸ್ಪೀಕರ್ ಯು.ಟಿ ಖಾದರ್, ಸದನವನ್ನು ಮುಂದೂಡಿಕೆ ಮಾಡಿ ಸರ್ಕಾರಕ್ಕೆ ಬಿಸಿ ಮುಟ್ಟಿಸಿದರು. ವಿಧಾನಸಭೆಯಲ್ಲಿ...

‘ಆಪರೇಷನ್ ಸಿಂಧೂರ್’ ಕುರಿತ ಪೋಸ್ಟ್: ಪ್ರೊಫೆಸರ್ ಅಲಿ ಖಾನ್ ಮಹ್ಮದಾಬಾದ್ ವಿರುದ್ಧದ ಪ್ರಕರಣಗಳನ್ನು ಕೈಬಿಟ್ಟ ಹರಿಯಾಣ ಸರ್ಕಾರ

'ಆಪರೇಷನ್ ಸಿಂಧೂರ್' ಕುರಿತು ಸಾಮಾಜಿಕ ಮಾಧ್ಯಮದಲ್ಲಿ ಪೋಸ್ಟ್ ಮಾಡಿದ್ದಕ್ಕಾಗಿ ಅಶೋಕ ವಿಶ್ವವಿದ್ಯಾಲಯದ ಪ್ರಾಧ್ಯಾಪಕ ಅಲಿ ಖಾನ್ ಮಹ್ಮದಾಬಾದ್ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಪ್ರಕರಣ ದಾಖಲಾಗಿತ್ತು. ಅವರ ವಿರುದ್ಧದ ಈ ಪ್ರಕರಣಗಳನ್ನು ಕೈಬಿಟ್ಟಿರುವುದಾಗಿ ಹರಿಯಾಣ...

ಎಲ್‌ಪಿಜಿ ಬಿಕ್ಕಟ್ಟಿನ ನಡುವೆ ಆಧಾರ್ ಮೂಲಕ ‘ಇ-ಕೆವೈಸಿ’ ಮಾಡಿಸಿಕೊಳ್ಳುವಂತೆ ಸರ್ಕಾರದ ಸೂಚನೆ

ದ್ರವೀಕೃತ ಪೆಟ್ರೋಲಿಯಂ ಅನಿಲ (ಎಲ್‌ಪಿಜಿ) ಬಳಸುವ 330 ಮಿಲಿಯನ್‌ಗಿಂತಲೂ ಹೆಚ್ಚು ಗ್ರಾಹಕರು ತಮ್ಮ ಎಲೆಕ್ಟ್ರಾನಿಕ್ ನೋ ಯುವರ್ ಕಸ್ಟಮರ್ (ಇ-ಕೆವೈಸಿ) ಅನ್ನು ಬಯೋಮೆಟ್ರಿಕ್ ಆಧಾರ್ ದೃಢೀಕರಣ ವ್ಯವಸ್ಥೆಯ ಮೂಲಕ ಮಾಡಿಸಿಕೊಳ್ಳಬೇಕು ಎಂದು ಸರ್ಕಾರ...

ಚುನಾವಣೆ ಘೋಷಣೆಯಾದ ಬೆನ್ನಲ್ಲೇ ಪಶ್ಚಿಮ ಬಂಗಾಳದ ಮುಖ್ಯ ಕಾರ್ಯದರ್ಶಿ, ಗೃಹ ಕಾರ್ಯದರ್ಶಿ, ಉನ್ನತ ಪೊಲೀಸ್ ಅಧಿಕಾರಿಗಳನ್ನು ಬದಲಾಯಿಸಿದ ಚು. ಆಯೋಗ

ನಿರೀಕ್ಷೆಯಂತೆ ಚುನಾವಣೆ ಘೋಷಣೆಯಾದ ಬೆನ್ನಲ್ಲೇ ಚುನಾವಣಾ ಆಯೋಗ ಪಶ್ಚಿಮ ಬಂಗಾಳದಲ್ಲಿ ತನ್ನ ಆಟ ಶುರು ಮಾಡಿದೆ. ರಾಜ್ಯದ ಸರ್ಕಾದ ಮುಖ್ಯ ಕಾರ್ಯದರ್ಶಿ, ಗೃಹ ಕಾರ್ಯದರ್ಶಿ ಮತ್ತು ಉನ್ನತ ಪೊಲೀಸ್ ಅಧಿಕಾರಿಗಳನ್ನು ಬದಲಾಯಿಸಿದೆ. ಪಶ್ಚಿಮ ಬಂಗಾಳ...