Homeಅಂತರಾಷ್ಟ್ರೀಯಪ್ಯಾಲೆಸ್ತೀನ್‌ ಪ್ರಾಂತ್ಯಗಳ ಬಡತನ ಈ ವರ್ಷ ದ್ವಿಗುಣ; 74.3% ಕ್ಕೆ ಏರಿಕೆ - ವಿಶ್ವಸಂಸ್ಥೆ

ಪ್ಯಾಲೆಸ್ತೀನ್‌ ಪ್ರಾಂತ್ಯಗಳ ಬಡತನ ಈ ವರ್ಷ ದ್ವಿಗುಣ; 74.3% ಕ್ಕೆ ಏರಿಕೆ – ವಿಶ್ವಸಂಸ್ಥೆ

- Advertisement -
- Advertisement -

ಗಾಜಾದಲ್ಲಿ ಆಕ್ರಮಣಕಾರ ಇಸ್ರೇಲ್ ಹಲವು ತಿಂಗಳಿನಿಂದ ನಡೆಸುತ್ತಿರುವ ವಿನಾಶದ ನಂತರ ಪ್ಯಾಲೇಸ್ತೀನಿನ ಪ್ರಾಂತ್ಯಗಳಾದ್ಯಂತ ಬಡತನದ ಪ್ರಮಾಣವು ಈ ವರ್ಷ ಸುಮಾರು ದ್ವಿಗುಣಗೊಳ್ಳಲಿದ್ದು 74.3%ಕ್ಕೆ ತಲುಪಲಿದೆ ಎಂದು ಮಂಗಳವಾರ ಬಿಡುಗಡೆಯಾದ ವಿಶ್ವಸಂಸ್ಥೆಯ ಅಭಿವೃದ್ಧಿ ಕಾರ್ಯಕ್ರಮ (ಯುಎನ್‌ಡಿಪಿ) ವರದಿಯೊಂದು ತಿಳಿಸಿದೆ. ಪ್ಯಾಲೆಸ್ತೀನ್‌ ಪ್ರಾಂತ್ಯಗಳ ಬಡತನ

“ಯುದ್ಧದ ತಕ್ಷಣದ ಪರಿಣಾಮವೆಂದರೆ ಕೇವಲ ಭೌತಿಕ ಮೂಲಸೌಕರ್ಯ ವಿನಾಶ ಮಾತ್ರವಲ್ಲ. ಬದಲಾಗಿ ಬಡತನ, ಜೀವನೋಪಾಯ ಮತ್ತು ಜೀವನೋಪಾಯದ ನಷ್ಟದ ವಿಷಯದಲ್ಲಿಯೂ ಅಗಾಧ ನಾಶವಾಗಿದೆ” ಎಂದು ಯುಎನ್‌ಡಿಪಿ ಮುಖ್ಯಸ್ಥ ಅಚಿಮ್ ಸ್ಟೈನರ್ ಅವರು ತಿಳಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ

2023 ರ ಅಂತ್ಯದ ವೇಳೆಗೆ ಪ್ಯಾಲೆಸ್ತೀನ್‌ನಲ್ಲಿ ಬಡತನದ ಪ್ರಮಾಣವು 38.8% ದಷ್ಟಿತ್ತು. ಆದರೆ ಈ ವರ್ಷ ಇನ್ನೂ 26 ಲಕ್ಷ ಪ್ಯಾಲೆಸ್ತೀನಿಯನ್ನರು ಬಡತನಕ್ಕೆ ಸಿಲುಕಿದ್ದಾರೆ, ಒಟ್ಟು 41 ಲಕ್ಷ ಪ್ಯಾಲೆಸ್ತೀನಿಯನ್ನರು ಬಡತನಕ್ಕೆ ಸಿಲುಕಿದ್ದಾರೆ ಎಂದು ಅವರು ಹೇಳಿದ್ದಾರೆ. ಪ್ಯಾಲೆಸ್ತೀನ್‌ ಪ್ರಾಂತ್ಯಗಳ ಬಡತನ

“ಈ ಸಾಮಾಜಿಕ-ಆರ್ಥಿಕ ಮೌಲ್ಯಮಾಪನದ ಮೂಲಕ, ವಿನಾಶದ ಮಟ್ಟವು ಪ್ಯಾಲೆಸ್ತೀನ್‌ ರಾಷ್ಟ್ರದ ಅಭಿವೃದ್ಧಿಯ ಹಾದಿಯಯನ್ನು ವರ್ಷಗಳಷ್ಟು ಅಲ್ಲ, ದಶಕಗಳಷ್ಟು ಹಿಮ್ಮೆಟ್ಟಿಸಿದೆ ಎಂದು ಸ್ಪಷ್ಟವಾಗಿದೆ ತಿಳಿಯುತ್ತದೆ” ಎಂದು ಸ್ಟೈನರ್ ಹೇಳಿದ್ದಾರೆ.

ಈ ವರ್ಷ ಪ್ಯಾಲೆಸ್ತೀನ್‌ ಪ್ರಾಂತ್ಯಗಳಲ್ಲಿ ನಿರುದ್ಯೋಗವು 49.9% ಕ್ಕೆ ಏರಬಹುದು ಮತ್ತು ಗಾಜಾದಲ್ಲಿ ಯುದ್ಧವಿಲ್ಲದೆ GDP 35.1% ಕಡಿಮೆ ಇರುತ್ತದೆ ಎಂದು ಅಧ್ಯಯನವು ಅಂದಾಜಿಸಿದೆ.

ಪ್ರತಿ ವರ್ಷ ಮಾನವೀಯ ನೆರವು ನೀಡಿದ್ದರೂ ಸಹ, ಪ್ಯಾಲೇಸ್ತೀನಿ ಆರ್ಥಿಕತೆಯು ಒಂದು ದಶಕ ಅಥವಾ ಅದಕ್ಕಿಂತ ಹೆಚ್ಚು ಕಾಲ ಬಿಕ್ಕಟ್ಟಿಗಿಂತ ಪೂರ್ವದಲ್ಲಿ ಇದ್ದ ಸ್ಥಿತಿಗೆ ಹಿಂತಿರುಗಲು ಸಾಧ್ಯವಿಲ್ಲ ಎಂದು ಅವರು ಹೇಳಿದ್ದಾರೆ.

ಆಕ್ರಮಣಕಾರ ಇಸ್ರೇಲ್‌ನ ಬಾಂಬ್ ದಾಳಿಯ ಕಾರ್ಯಾಚರಣೆಯಿಂದ ಗಾಜಾದಲ್ಲಿ 42 ಮಿಲಿಯನ್ ಟನ್‌ಗಳಷ್ಟು ಕಲ್ಲುಮಣ್ಣುಗಳನ್ನು ಸೃಷ್ಟಿಸಿದೆ ಎಂದು ಅಧ್ಯಯನವು ಹೇಳುತ್ತದೆ. ಇದು ಸೀಸ ಮತ್ತು ಇತರ ಲೋಹಗಳನ್ನು ಬಿಡುಗಡೆ ಮಾಡುವುದರಿಂದ ಆರೋಗ್ಯಕ್ಕೆ ಹಾನಿಕಾರಕವಾಗಿದೆ.

ಗಾಜಾದಲ್ಲಿ ಆಕ್ರಮಣಕಾರ ಇಸ್ರೇಲ್‌ ನಡೆಸುತ್ತಿರುವ ಬಾಂಬ್ ಮತ್ತು ಭೂ ಸೇನೆಯ ದಾಳಿಯಿಂದ ಸುಮಾರು 42,603 ​​ಜನರು ಮೃತಪಟ್ಟಿದ್ದಾರೆ. ಇದರಲ್ಲಿ ಬಹುಪಾಲು ನಾಗರಿಕರಾಗಿದ್ದು ಅದರಲ್ಲೂ ಮಹಿಳೆ ಮತ್ತು ಮಕ್ಕಳು ಹೆಚ್ಚಿದ್ದಾರೆ.

ಇದನ್ನೂ ಓದಿ: ಗೌರಿ ಹತ್ಯೆ ಆರೋಪಿಯನ್ನು ಹುದ್ದೆಯಿಂದ ಹೊರಗಿಟ್ಟ ಶಿವಸೇನೆ | ಚುನಾವಣೆಗಾಗಿ ನೈತಿಕತೆಯ ಮುಸುಕು : ಸುಪ್ರಿಯಾ ಸುಳೆ

ಗೌರಿ ಹತ್ಯೆ ಆರೋಪಿಯನ್ನು ಹುದ್ದೆಯಿಂದ ಹೊರಗಿಟ್ಟ ಶಿವಸೇನೆ | ಚುನಾವಣೆಗಾಗಿ ನೈತಿಕತೆಯ ಮುಸುಕು : ಸುಪ್ರಿಯಾ ಸುಳೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜ್ಯ ಸರ್ಕಾರದ ಸಮೀಕ್ಷೆಯಲ್ಲಿ ಇವಿಎಂ ಮೇಲೆ ಜನ ವಿಶ್ವಾಸ ವ್ಯಕ್ತಪಡಿಸಿದ್ದಾರೆ ಎಂದ ವರದಿ : ಅಲ್ಲಗಳೆದ ಸಚಿವ ಪ್ರಿಯಾಂಕ್ ಖರ್ಗೆ

ಹೆಚ್ಚಿನ ನಾಗರಿಕರು ಭಾರತದಲ್ಲಿ ಚುನಾವಣೆಗಳು ಮುಕ್ತ ಮತ್ತು ನ್ಯಾಯಯುತವಾಗಿ ನಡೆಯುತ್ತಿವೆ ಎಂದು ನಂಬುತ್ತಾರೆ ಹಾಗೂ ವಿದ್ಯುನ್ಮಾನ ಮತಯಂತ್ರಗಳ (ಇವಿಎಂ) ಮೇಲಿನ ನಂಬಿಕೆ ಹೆಚ್ಚಾಗಿದೆ ಎಂದು ಕರ್ನಾಟಕದ ಕಾಂಗ್ರೆಸ್ ಸರ್ಕಾರ ಪ್ರಕಟಿಸಿದ ರಾಜ್ಯವ್ಯಾಪಿ ಸಮೀಕ್ಷೆಯ...

ಉಡುಗೊರೆಯಾಗಿ ನೀಡಿದ್ದ ಮೊಬೈಲ್ ಫೋನ್‌ಗಳನ್ನು ಅಸ್ಸಾಂ ಸರ್ಕಾರಕ್ಕೆ ಹಿಂದಿರುಗಿಸಿದ ಪತ್ರಕರ್ತರು

ಅಸ್ಸಾಂ ಸರ್ಕಾರದಿಂದ ಹೊಸ ವರ್ಷದ ಉಡುಗೊರೆಯಾಗಿ ಪಡೆದ ಮೊಬೈಲ್ ಫೋನ್‌ಗಳನ್ನು ಕನಿಷ್ಠ ಇಬ್ಬರು ಪತ್ರಕರ್ತರು ಗುರುವಾರ ಹಿಂದಿರುಗಿಸಿದ್ದಾರೆ ಎಂದು 'ಸ್ಕ್ರೋಲ್' ವರದಿ ಮಾಡಿದೆ. ಅಸ್ಸಾಂನ ಮಾಹಿತಿ ಮತ್ತು ಸಾರ್ವಜನಿಕ ಸಂಪರ್ಕ ನಿರ್ದೇಶನಾಲಯದಲ್ಲಿ ನೋಂದಾಯಿಸಲಾದ 2,200...

ಕೋಗಿಲು ಬಡಾವಣೆ ಮನೆಗಳ ತೆರವು : ಸರ್ಕಾರದ ಕ್ರಮ ಪ್ರಶ್ನಿಸಿ ಹೈಕೋರ್ಟ್‌ಗೆ ಅರ್ಜಿ

ಬೆಂಗಳೂರಿನ ಕೋಗಿಲು ಬಡಾವಣೆಯ ವಾಸಿಂ ಹಾಗೂ ಫಕೀರ್ ಕಾಲೊನಿಗಳ ಸುಮಾರು ‌300 ಮನೆಗಳನ್ನು ನೆಲಸಮ ಮಾಡಿ, ಮೂರು ಸಾವಿರಕ್ಕೂ ಹೆಚ್ಚು ಜನರನ್ನು ಬೀದಿಗೆ ತಳ್ಳಿರುವ ರಾಜ್ಯ ಸರ್ಕಾರದ ಕ್ರಮ ಪ್ರಶ್ನಿಸಿ ಹೈಕೋರ್ಟ್​ಗೆ ಸಾರ್ವಜನಿಕ...

ರ‍್ಯಾಗಿಂಗ್ ದೈಹಿಕ ಹಿಂಸೆ; ಎರಡು ತಿಂಗಳ ಬಳಿಕ 19 ವರ್ಷದ ವಿದ್ಯಾರ್ಥಿನಿ ಸಾವು

ಹಿಮಾಚಲ ಪ್ರದೇಶದ ಧರ್ಮಶಾಲಾದ ಸರ್ಕಾರಿ ಪದವಿ ಕಾಲೇಜಿನಲ್ಲಿ ನಡೆದ ಘಟನೆಯು ಇಡೀ ರಾಜ್ಯವನ್ನೇ ಆಘಾತಕ್ಕೆ ದೂಡಿದೆ. 19 ವರ್ಷದ ಬಾಲಕಿಯ ಸಾವಿನ ಗಂಭೀರ ಪ್ರಕರಣಗಳಲ್ಲಿ ಕಾಲೇಜಿನ ಅಧ್ಯಾಪಕರು ಮತ್ತು ಮೂವರು ವಿದ್ಯಾರ್ಥಿನಿಯರ ಹೆಸರಿದೆ....

ಮುಸ್ಲಿಂ ಲೀಗ್‌ ಚಂದ್ರಿಕಾದ ಸಂಪಾದಕೀಯ ಪ್ರಕಟಿಸಿದ ಜನ್ಮಭೂಮಿ ಪತ್ರಿಕೆ : ಮುಜುಗರಕ್ಕೊಳಗಾದ ಬಿಜೆಪಿಯ ಮುಖವಾಣಿ

ವರ್ಷದ ಆರಂಭದಲ್ಲಿ ಅಚ್ಚರಿ ಎಂಬಂತೆ, ಕೇರಳ ಬಿಜೆಪಿಯ ಮುಖವಾಣಿಯಾದ ಮಲಯಾಳಂ ದಿನಪತ್ರಿಕೆ 'ಜನ್ಮಭೂಮಿ', ಪ್ರತಿಸ್ಪರ್ಧಿ ಪತ್ರಿಕೆಯಾದ ಇಂಡಿಯನ್‌ ಯೂನಿಯನ್ ಮುಸ್ಲಿಂ ಲೀಗ್ (ಐಯುಎಂಎಲ್‌) ಪಕ್ಷದ ಮುಖವಾಣಿ 'ಚಂದ್ರಿಕಾ'ದ ಸಂಪಾದಕೀಯ ಪ್ರಕಟಿಸಿ ಮುಜುಗರಕ್ಕೀಡಾಗಿದೆ. 'ಜನ್ಮಭೂಮಿ' ಪತ್ರಿಕೆಯ...

ಕೆಕೆಆರ್ ತಂಡಕ್ಕೆ ಬಾಂಗ್ಲಾ ಕ್ರಿಕೆಟಿಗ ಮುಸ್ತಾಫಿಜುರ್ ರೆಹಮಾನ್ ಖರೀದಿ; ಶಾರುಖ್ ಖಾನ್ ಅವರನ್ನು ‘ದೇಶದ್ರೋಹಿ’ ಎಂದ ರಾಮಭದ್ರಾಚಾರ್ಯ

ಇಂಡಿಯನ್ ಪ್ರೀಮಿಯರ್ ಲೀಗ್ 2026 ರ ಸೀಸನ್‌ಗಾಗಿ ಕೋಲ್ಕತ್ತಾ ನೈಟ್ ರೈಡರ್ಸ್ ಬಾಂಗ್ಲಾದೇಶದ ಕ್ರಿಕೆಟಿಗ ಮುಸ್ತಾಫಿಜುರ್ ರೆಹಮಾನ್ ಅವರನ್ನು ಖರೀದಿ ಮಾಡಿದ್ದಕ್ಕಾಗಿ ಬಾಲಿವುಡ್ ನಟ ಶಾರುಖ್ ಖಾನ್ ಅವರನ್ನು ಹಿಂದೂ ಆಧ್ಯಾತ್ಮಿಕ ನಾಯಕ...

“ನಾವೆಲ್ಲರೂ ನಿಮ್ಮ ಬಗ್ಗೆ ಯೋಚಿಸುತ್ತಿದ್ದೇವೆ”: ನ್ಯೂಯಾರ್ಕ್‌ನ ನೂತನ ಮೇಯರ್ ಝೊಹ್ರಾನ್ ಮಮ್ದಾನಿಯಿಂದ ಉಮರ್ ಖಾಲಿದ್‌ಗೆ ಪತ್ರ

ಜೈಲಿನಲ್ಲಿರುವ ಜವಾಹರಲಾಲ್ ನೆಹರು ವಿಶ್ವವಿದ್ಯಾಲಯದ (ಜೆಎನ್‌ಯು) ಮಾಜಿ ವಿದ್ಯಾರ್ಥಿ ಉಮರ್ ಖಾಲಿದ್ ಅವರಿಗೆ ನ್ಯೂಯಾರ್ಕ್‌ ನಗರದ ನೂತನ ಮೇಯರ್ ಝೊಹ್ರಾನ್ ಮಮ್ದಾನಿ ಅವರು ಕೈಬರಹದ ಪತ್ರವೊಂದನ್ನು ಬರೆದಿದ್ದಾರೆ ಎಂದು, ಖಾಲಿದ್ ಸ್ನೇಹಿತೆ ಬನೋಜ್ಯೋತ್ಸ್ನಾ...

ಮಧ್ಯಪ್ರದೇಶ| ಹಸು ಮೇಯಿಸುವ ವಿಚಾರಕ್ಕೆ ಜಗಳ; ದಲಿತ ಕುಟುಂಬದ ಮೇಲೆ ಗುಂಡು ಹಾರಿಸಿದ ಗುಂಪು

ದಲಿತ ಕುಟುಂಬವೊಂದರ ಹೊಲದಲ್ಲಿ ಪ್ರಬಲ ಜಾತಿ ಜನರ ಹಸುಗಳು ಮೇಯಿಸುವುದನ್ನು ವಿರೋಧಿಸದ್ದಕ್ಕೆ ದಲಿತ ಕುಟುಂಬದ ಮೇಲೆ ಗುಂಡು ಹಾರಿಸಿ ಹಲ್ಲೆ ನಡೆಸಿದ್ದಾರೆ ಎಂದು ಆರೋಪಿಸಲಾಗಿದೆ. ದಾಳಿಕೋರರು ಮನಬಂದಂತೆ ಗುಂಡು ಹಾರಿಸಿ ನಂತರ ದಲಿತ...

ಬಳ್ಳಾರಿ | ರೆಡ್ಡಿ ಬಣಗಳ ನಡುವೆ ಘರ್ಷಣೆ : ಗುಂಡಿನ ದಾಳಿಗೆ ಕಾಂಗ್ರೆಸ್ ಕಾರ್ಯಕರ್ತ ಬಲಿ

ವಾಲ್ಮೀಕಿ ಪುತ್ಥಳಿ ಅನಾವರಣ ಕಾರ್ಯಕ್ರಮದ ಅಂಗವಾಗಿ ಗುರುವಾರ (ಜ.1) ರಾತ್ರಿ ಬ್ಯಾನರ್ ಕಟ್ಟುವ ವಿಚಾರಕ್ಕೆ ಸಂಬಂಧಿಸಿ ರೆಡ್ಡಿ ಬಣಗಳ ನಡುವೆ ಘರ್ಷಣೆ ಉಂಟಾಗಿದ್ದು, ಈ ವೇಳೆ ಕಾಂಗ್ರೆಸ್ ಕಾರ್ಯಕರ್ತನೋರ್ವ ಗುಂಡು ತಗುಲಿ ಮೃತಪಟ್ಟ...

ಮರ್ಯಾದೆಗೇಡು ಹತ್ಯೆ | ಮಾನ್ಯಾ ಹೆಸರಿನಲ್ಲಿ ಪ್ರತ್ಯೇಕ ಕಾಯ್ದೆಗೆ ಚಿಂತನೆ : ಸಚಿವ ಹೆಚ್‌.ಸಿ ಮಹದೇವಪ್ಪ

ಮರ್ಯಾದೆಗೇಡು ಹತ್ಯೆ ತಡೆಗೆ ಮಾನ್ಯಾ ಹೆಸರಿನಲ್ಲಿ ಪ್ರತ್ಯೇಕ ಕಾಯ್ದೆ ತರುವ ಬಗ್ಗೆ ಚಿಂತನೆ ನಡೆಸಲಾಗುವುದು ಎಂದು ಸಮಾಜ ಕಲ್ಯಾಣ ಸಚಿವ ಹೆಚ್‌.ಸಿ ಮಹದೇವಪ್ಪ ಹೇಳಿದರು. ಮರ್ಯಾದೆಗೇಡು ಹತ್ಯೆ ನಡೆದ ಹುಬ್ಬಳ್ಳಿಯ ಇನಾಂ ವೀರಾಪುರ ಗ್ರಾಮಕ್ಕೆ...