Homeಅಂತರಾಷ್ಟ್ರೀಯಪ್ಯಾಲೆಸ್ತೀನ್‌ ಪ್ರಾಂತ್ಯಗಳ ಬಡತನ ಈ ವರ್ಷ ದ್ವಿಗುಣ; 74.3% ಕ್ಕೆ ಏರಿಕೆ - ವಿಶ್ವಸಂಸ್ಥೆ

ಪ್ಯಾಲೆಸ್ತೀನ್‌ ಪ್ರಾಂತ್ಯಗಳ ಬಡತನ ಈ ವರ್ಷ ದ್ವಿಗುಣ; 74.3% ಕ್ಕೆ ಏರಿಕೆ – ವಿಶ್ವಸಂಸ್ಥೆ

- Advertisement -
- Advertisement -

ಗಾಜಾದಲ್ಲಿ ಆಕ್ರಮಣಕಾರ ಇಸ್ರೇಲ್ ಹಲವು ತಿಂಗಳಿನಿಂದ ನಡೆಸುತ್ತಿರುವ ವಿನಾಶದ ನಂತರ ಪ್ಯಾಲೇಸ್ತೀನಿನ ಪ್ರಾಂತ್ಯಗಳಾದ್ಯಂತ ಬಡತನದ ಪ್ರಮಾಣವು ಈ ವರ್ಷ ಸುಮಾರು ದ್ವಿಗುಣಗೊಳ್ಳಲಿದ್ದು 74.3%ಕ್ಕೆ ತಲುಪಲಿದೆ ಎಂದು ಮಂಗಳವಾರ ಬಿಡುಗಡೆಯಾದ ವಿಶ್ವಸಂಸ್ಥೆಯ ಅಭಿವೃದ್ಧಿ ಕಾರ್ಯಕ್ರಮ (ಯುಎನ್‌ಡಿಪಿ) ವರದಿಯೊಂದು ತಿಳಿಸಿದೆ. ಪ್ಯಾಲೆಸ್ತೀನ್‌ ಪ್ರಾಂತ್ಯಗಳ ಬಡತನ

“ಯುದ್ಧದ ತಕ್ಷಣದ ಪರಿಣಾಮವೆಂದರೆ ಕೇವಲ ಭೌತಿಕ ಮೂಲಸೌಕರ್ಯ ವಿನಾಶ ಮಾತ್ರವಲ್ಲ. ಬದಲಾಗಿ ಬಡತನ, ಜೀವನೋಪಾಯ ಮತ್ತು ಜೀವನೋಪಾಯದ ನಷ್ಟದ ವಿಷಯದಲ್ಲಿಯೂ ಅಗಾಧ ನಾಶವಾಗಿದೆ” ಎಂದು ಯುಎನ್‌ಡಿಪಿ ಮುಖ್ಯಸ್ಥ ಅಚಿಮ್ ಸ್ಟೈನರ್ ಅವರು ತಿಳಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ

2023 ರ ಅಂತ್ಯದ ವೇಳೆಗೆ ಪ್ಯಾಲೆಸ್ತೀನ್‌ನಲ್ಲಿ ಬಡತನದ ಪ್ರಮಾಣವು 38.8% ದಷ್ಟಿತ್ತು. ಆದರೆ ಈ ವರ್ಷ ಇನ್ನೂ 26 ಲಕ್ಷ ಪ್ಯಾಲೆಸ್ತೀನಿಯನ್ನರು ಬಡತನಕ್ಕೆ ಸಿಲುಕಿದ್ದಾರೆ, ಒಟ್ಟು 41 ಲಕ್ಷ ಪ್ಯಾಲೆಸ್ತೀನಿಯನ್ನರು ಬಡತನಕ್ಕೆ ಸಿಲುಕಿದ್ದಾರೆ ಎಂದು ಅವರು ಹೇಳಿದ್ದಾರೆ. ಪ್ಯಾಲೆಸ್ತೀನ್‌ ಪ್ರಾಂತ್ಯಗಳ ಬಡತನ

“ಈ ಸಾಮಾಜಿಕ-ಆರ್ಥಿಕ ಮೌಲ್ಯಮಾಪನದ ಮೂಲಕ, ವಿನಾಶದ ಮಟ್ಟವು ಪ್ಯಾಲೆಸ್ತೀನ್‌ ರಾಷ್ಟ್ರದ ಅಭಿವೃದ್ಧಿಯ ಹಾದಿಯಯನ್ನು ವರ್ಷಗಳಷ್ಟು ಅಲ್ಲ, ದಶಕಗಳಷ್ಟು ಹಿಮ್ಮೆಟ್ಟಿಸಿದೆ ಎಂದು ಸ್ಪಷ್ಟವಾಗಿದೆ ತಿಳಿಯುತ್ತದೆ” ಎಂದು ಸ್ಟೈನರ್ ಹೇಳಿದ್ದಾರೆ.

ಈ ವರ್ಷ ಪ್ಯಾಲೆಸ್ತೀನ್‌ ಪ್ರಾಂತ್ಯಗಳಲ್ಲಿ ನಿರುದ್ಯೋಗವು 49.9% ಕ್ಕೆ ಏರಬಹುದು ಮತ್ತು ಗಾಜಾದಲ್ಲಿ ಯುದ್ಧವಿಲ್ಲದೆ GDP 35.1% ಕಡಿಮೆ ಇರುತ್ತದೆ ಎಂದು ಅಧ್ಯಯನವು ಅಂದಾಜಿಸಿದೆ.

ಪ್ರತಿ ವರ್ಷ ಮಾನವೀಯ ನೆರವು ನೀಡಿದ್ದರೂ ಸಹ, ಪ್ಯಾಲೇಸ್ತೀನಿ ಆರ್ಥಿಕತೆಯು ಒಂದು ದಶಕ ಅಥವಾ ಅದಕ್ಕಿಂತ ಹೆಚ್ಚು ಕಾಲ ಬಿಕ್ಕಟ್ಟಿಗಿಂತ ಪೂರ್ವದಲ್ಲಿ ಇದ್ದ ಸ್ಥಿತಿಗೆ ಹಿಂತಿರುಗಲು ಸಾಧ್ಯವಿಲ್ಲ ಎಂದು ಅವರು ಹೇಳಿದ್ದಾರೆ.

ಆಕ್ರಮಣಕಾರ ಇಸ್ರೇಲ್‌ನ ಬಾಂಬ್ ದಾಳಿಯ ಕಾರ್ಯಾಚರಣೆಯಿಂದ ಗಾಜಾದಲ್ಲಿ 42 ಮಿಲಿಯನ್ ಟನ್‌ಗಳಷ್ಟು ಕಲ್ಲುಮಣ್ಣುಗಳನ್ನು ಸೃಷ್ಟಿಸಿದೆ ಎಂದು ಅಧ್ಯಯನವು ಹೇಳುತ್ತದೆ. ಇದು ಸೀಸ ಮತ್ತು ಇತರ ಲೋಹಗಳನ್ನು ಬಿಡುಗಡೆ ಮಾಡುವುದರಿಂದ ಆರೋಗ್ಯಕ್ಕೆ ಹಾನಿಕಾರಕವಾಗಿದೆ.

ಗಾಜಾದಲ್ಲಿ ಆಕ್ರಮಣಕಾರ ಇಸ್ರೇಲ್‌ ನಡೆಸುತ್ತಿರುವ ಬಾಂಬ್ ಮತ್ತು ಭೂ ಸೇನೆಯ ದಾಳಿಯಿಂದ ಸುಮಾರು 42,603 ​​ಜನರು ಮೃತಪಟ್ಟಿದ್ದಾರೆ. ಇದರಲ್ಲಿ ಬಹುಪಾಲು ನಾಗರಿಕರಾಗಿದ್ದು ಅದರಲ್ಲೂ ಮಹಿಳೆ ಮತ್ತು ಮಕ್ಕಳು ಹೆಚ್ಚಿದ್ದಾರೆ.

ಇದನ್ನೂ ಓದಿ: ಗೌರಿ ಹತ್ಯೆ ಆರೋಪಿಯನ್ನು ಹುದ್ದೆಯಿಂದ ಹೊರಗಿಟ್ಟ ಶಿವಸೇನೆ | ಚುನಾವಣೆಗಾಗಿ ನೈತಿಕತೆಯ ಮುಸುಕು : ಸುಪ್ರಿಯಾ ಸುಳೆ

ಗೌರಿ ಹತ್ಯೆ ಆರೋಪಿಯನ್ನು ಹುದ್ದೆಯಿಂದ ಹೊರಗಿಟ್ಟ ಶಿವಸೇನೆ | ಚುನಾವಣೆಗಾಗಿ ನೈತಿಕತೆಯ ಮುಸುಕು : ಸುಪ್ರಿಯಾ ಸುಳೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಮಗ ಬೇಗನೆ ಮನೆಗೆ ಬರಲಿ..’; ಭಾವುಕರಾದ ಅಭಿಜೀತ್ ದಿಪ್ಕೆ ಅವರ ಪೋಷಕರು

ಸಿಜೆಪಿ ಸಂಸ್ಥಾಪಕ ಅಭಿಜೀತ್ ದಿಪ್ಕೆ ನೇತೃತ್ವದಲ್ಲಿ ನಡೆದ ಅಸಾಧಾರಣ ಹೋರಾಟವು ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜಿನಾಮೆಯಲ್ಲಿ ಅಂತಿಮವಾಗಿದೆ. ಈ ಕುರಿತು ಮಾಧ್ಯಮಗಳಿಗೆ ಪ್ರತಿಕ್ರಿಯಿಸಿರುವ ಅವರ ಪೋಷಕರು ಭಾವುಕರಾಗಿದ್ದಾರೆ. "ಮಗ ಬೇಗನೆ ಮನೆಗೆ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆ: ಕಾಕ್ರೋಚ್‌ಗಳಿಗೆ ಅಭಿನಂದಿಸಿದ ಸೋನಮ್ ವಾಂಗ್‌ಚುಕ್ – ಪ್ರಕಾಶ್‌ ರಾಜ್

ದೇಶದ ಯುವಜನರ ಹಲವು ದಿನಗಳ ಹೋರಾಟದ ಬಳಿಕ ಮೋದಿ ನೇತೃತ್ವದ ಕೇಂದ್ರ ಸರ್ಕಾರ ವಿದ್ಯಾರ್ಥಿಗಳ ಮುಂದೆ ಮಂಡಿಯೂರಿದೆ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಿದ್ದಾರೆ. ಈ ಗೆಲುವಿಗೆ ಕಾಕ್ರೋಚ್ ಜನತಾ ಪಕ್ಷದ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಜಿರಳೆಗಳ ಹರ್ಷೋದ್ಗಾರ: ದೆಹಲಿ ಪೊಲೀಸರಿಂದ ಸಾರ್ವಜನಿಕ ಕ್ಷಮೆಯಾಚನೆಗೆ ಆಗ್ರಹ

ದೇಶಾದ್ಯಂತ ನಡೆಯುತ್ತಿರುವ ಸಿಜೆಪಿ ಪ್ರತಿಭಟನೆಗಳ ನಡುವೆ ನೀಟ್ ಪತ್ರಿಕೆ ಸೋರಿಕೆಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ರಾಜೀನಾಮೆ ನೀಡಿದ್ದು, ದೆಹಲಿಯ ಜಂತರ್‌ ಮಂತರ್‌ನಲ್ಲಿ ಪ್ರತಿಭಟನೆ ನಡೆಸುತ್ತಿರುವ ಕಾಕ್ರೋಚ್‌ ಜನತಾ...

ಕಾಕ್ರೋಚ್‌ಗಳಿಗೆ ಮಣಿದ ಮೋದಿ ಸರ್ಕಾರ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್‌ ರಾಜೀನಾಮೆ

ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ನೇತೃತ್ವದಲ್ಲಿ ದೇಶಾದ್ಯಂತ ನಡೆಯುತ್ತಿರುವ ಪ್ರತಿಭಟನೆಗಳ ಮಧ್ಯೆ, ನೀಟ್ ಅಕ್ರಮಗಳಿಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ಇಂದು (ಜುಲೈ 25) ಪ್ರಧಾನ ಮಂತ್ರಿಗಳಿಗೆ ತಮ್ಮ...

ಅಭಿಜೀತ್ ದಿಪ್ಕೆಗೆ ಟೈಫಾಯ್ಡ್; ಪ್ರತಿಭಟನೆ ಮುಂದುವರಿಯಲಿದೆ ಎಂದ ಸಿಜೆಪಿ ಸಂಸ್ಥಾಪಕ

ತನಗೆ ಟೈಫಾಯ್ಡ್ ಇರುವುದು ಪತ್ತೆಯಾಗಿದೆ ಎಂದು ಕಾಕ್ರೋಚ್‌ ಜನತಾ ಪಕ್ಷದ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದಿಪ್ಕೆ ಅವರು ಇಂದು ಹೇಳಿದ್ದಾರೆ. "ನನ್ನ ಅನಾರೋಗ್ಯವು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ...

ಮುಸ್ಲಿಮರ ಬಗ್ಗೆ ನಿಂದನಾತ್ಮಕ, ಪ್ರಚೋದನಕಾರಿ ಹೇಳಿಕೆ : ಸಿ.ಟಿ ರವಿ ವಿರುದ್ಧ FIR

ಮುಸ್ಲಿಮರ ವಿರುದ್ಧ ನಿಂದನಾತ್ಮಕ ಹಾಗೂ ಪ್ರಚೋದನಕಾರಿ ಹೇಳಿಕೆ ನೀಡಿದ ವಿಧಾನಪರಿಷತ್ ಸದಸ್ಯ ಸಿ.ಟಿ ರವಿ ವಿರುದ್ಧ ಚಿಕ್ಕಮಗಳೂರು ನಗರ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ. ನಗರದ ಜಾಮಿಯಾ ಮಸೀದಿಯ ಅಧ್ಯಕ್ಷ ಮುದಸ್ಸಿರ್ ಪಾಷಾ ಅವರು...

ಹತ್ಯಾಕಾಂಡಕ್ಕೆ ಸಮನಾದ NEET ಹಗರಣ ನಡೆಯಲು ಬಿಟ್ಟ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ಕೊಡಲಿ

ನೀಟ್ ಪರೀಕ್ಷೆಯ ಪ್ರಶ್ನೆ ಪತ್ರಿಕೆಗಳು ಲೀಕ್ ಆದ ನಂತರದ ಬೆಳವಣಿಗೆಗಳನ್ನು ಇಡೀ ದೇಶ ಗಮನಿಸುತ್ತಿದೆ. ಅದರಲ್ಲೂ ವಿಶೇಷವಾಗಿ ಜೂನ್ ಆರಂಭದಿಂದ ಇಲ್ಲಿಯವರೆಗೆ ದೇಶದ ವಿದ್ಯಾರ್ಥಿಗಳು ನಡೆಸುತ್ತಿರುವ ಆಂದೋಲನವನ್ನು ದೇಶದ ಜನತೆ ನೋಡುತ್ತಿದ್ದಾರೆ. ದೇಶದ...

ಸಿಜೆಪಿ ಮತ್ತು ಜೆನ್‌ ಜಿಫಿಕೇಶನ್: ಪ್ರಸ್ತುತ ಬೆಳವಣಿಗೆ, ಭವಿಷ್ಯದ ಸಾಧ್ಯತೆ

ಇತ್ತೀಚಿನ ಬೆಳವಣಿಗೆಗಳು ಕಳೆದ ಒಂದು ತಿಂಗಳಿಂದ ನಡೆಯುತ್ತಿರುವ ಸಿಜೆಪಿ (ಕಾಕ್ರೋಚ್‌ ಜನತಾ ಪಕ್ಷ) ಪ್ರತಿಭಟನೆ ಈಗ ತಾರ್ಕಿಕ ಹಂತಕ್ಕೆ ತಲಪುತ್ತಿದೆ. ಪ್ರಶ್ನೆಪತ್ರಿಕೆ ಸೋರಿಕೆಯ ಕಾರಣಕ್ಕೆ ನೀಟ್‌ನ (ರಾಷ್ಟ್ರೀಯ ಅರ್ಹತಾ ಹಾಗೂ ಪ್ರವೇಶ ಪರೀಕ್ಷೆ) ಮೊದಲ...

SIR ಕರ್ತವ್ಯದ ವೇಳೆ ಶಿಕ್ಷಕಿಗೆ ಹಾರ್ಟ್ ಅಟ್ಯಾಕ್: ಚಿಕಿತ್ಸೆ ಫಲಿಸದೇ ಸಾವು

ಕೇಂದ್ರ ಚುನಾವಣಾ ಆಯೋಗವು ರಾಜ್ಯದಲ್ಲಿ ನಡೆಸುತ್ತಿರುವ ಮತದಾರರ ಪಟ್ಟಿಯ 'ವಿಶೇಷ ಸಮಗ್ರ ಪರಿಷ್ಕರಣೆ' (SIR) ಕೆಲಸದ ಹೆಸರಿನಲ್ಲಿ ಶಿಕ್ಷಕರ ಮೇಲೆ ಹೇರುತ್ತಿರುವ ಅತಿಯಾದ ಮಾನಸಿಕ ಹಾಗೂ ದೈಹಿಕ ಒತ್ತಡಕ್ಕೆ ಮತ್ತೊಬ್ಬ ಶಿಕ್ಷಕಿ ಬಲಿಯಾಗಿದ್ದಾರೆ. ಬೆಂಗಳೂರಿನ...

ಎದೆ ಸೀಳಿದರೆ ಮೂರು ಅಕ್ಷರ ಬರಲ್ಲ, ಮುಲ್ಲಾನಿಗೂ ನೀಟ್‌ಗೂ ಏನು ಸಂಬಂಧ: ಸಿ.ಟಿ ರವಿ ವಿವಾದಾತ್ಮಕ ಹೇಳಿಕೆ

ದೇಶಾದ್ಯಂತ ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ಹಾಗೂ ಪರೀಕ್ಷಾ ಅಕ್ರಮಗಳ ವಿರುದ್ಧ ವಿದ್ಯಾರ್ಥಿ ಮತ್ತು ಯುವಜನ ಸಂಘಟನೆಗಳು ಬೃಹತ್ ಪ್ರತಿಭಟನೆ ನಡೆಸುತ್ತಿವೆ. ಈ ನಡುವೆ ವಿದ್ಯಾರ್ಥಿಗಳ ಹೋರಾಟವನ್ನು ಕುಹಕವಾಡಿರುವ ವಿಧಾನ ಪರಿಷತ್ ಬಿಜೆಪಿ...