Homeಕರ್ನಾಟಕವಿದ್ಯುತ್‌ ವ್ಯತ್ಯಯ: ಆಕ್ಸಿಜನ್‌ ಇಲ್ಲದೆ ಬಳ್ಳಾರಿ ವಿಮ್ಸ್‌ ಆಸ್ಪತ್ರೆಯ ಮೂವರು ರೋಗಿಗಳು ಸಾವು

ವಿದ್ಯುತ್‌ ವ್ಯತ್ಯಯ: ಆಕ್ಸಿಜನ್‌ ಇಲ್ಲದೆ ಬಳ್ಳಾರಿ ವಿಮ್ಸ್‌ ಆಸ್ಪತ್ರೆಯ ಮೂವರು ರೋಗಿಗಳು ಸಾವು

- Advertisement -
- Advertisement -

ಬಳ್ಳಾರಿ ಜಿಲ್ಲೆಯ ವಿಜಯನಗರ ಇನ್‌ಸ್ಟಿಟ್ಯೂಟ್ ಆಫ್ ಮೆಡಿಕಲ್ ಸೈನ್ಸಸ್(ವಿಮ್ಸ್) ಆಸ್ಪತ್ರೆಯಲ್ಲಿ ವಿದ್ಯುತ್‌ ವ್ಯತ್ಯಯದಿಂದಾಗಿ ಆಸ್ಪತ್ರೆಯಲ್ಲಿ ದಾಖಲಾಗಿದ್ದ ರೋಗಿಗಳಿಗೆ ಆಮ್ಲಜನಕ ಸರಬರಾಜು ಆಗದೆ ಮೂವರು ಸಾವನ್ನಪ್ಪಿರುವ ಘಟನೆ ಗುರುವಾರ ವರದಿಯಾಗಿದೆ. ಮೃತಪಟ್ಟವರನ್ನು ಮೌಲಾ ಹುಸೇನ್(35), ಚಿಟ್ಟೆಮ್ಮ(30) ಮತ್ತು 18 ವರ್ಷದ ಮನೋಜ್ ಎಂದು ಗುರುತಿಸಲಾಗಿದೆ.

ಮೌಲಾ ಹುಸೇನ್ ಅವರು ಮೂತ್ರಪಿಂಡ ಕಾಯಿಲೆಯಿಂದ ಬಳಲುತ್ತಿದ್ದು, ಸೆಪ್ಟೆಂಬರ್ 11 ರಂದು ದಾಖಲಾಗಿದ್ದರು. ಚೇತಮ್ಮ ಅವರು ಸೆಪ್ಟೆಂಬರ್ 13 ರಂದು ಹಾವು ಕಚ್ಚಿದ ಕಾರಣಕ್ಕೆ ಮತ್ತು ಅದೇ ದಿನ ಚೇಳು ಕಚ್ಚಿದ ಕಾರಣಕ್ಕೆ ಮನೋಜ್ ಅವರು ವಿಮ್ಸ್‌ಗೆ ದಾಖಲಾಗಿದ್ದರು.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಸುದ್ದಿಗಾರರೊಂದಿಗೆ ಮಾತನಾಡಿದ ಮನೋಜ್ ಅವರ ಸಹೋದರ ನರೇಶ್, ತನ್ನ ಸಹೋದರ ಆಸ್ಪತ್ರೆಗೆ ದಾಖಲಾದ ದಿನವೇ ಆಸ್ಪತ್ರೆಯಲ್ಲಿ ವಿದ್ಯುತ್ ವ್ಯತ್ಯಯವಾಗಿತ್ತು ಎಂದು ಹೇಳಿದ್ದಾರೆ.

ಇದನ್ನೂ ಓದಿ: BBMP ಶಾಲೆ ನಿರ್ಮಾಣಕ್ಕೆ ಮಂಜೂರಾದ ಜಾಗ BJP ಶಾಸಕನ ಪಾಲು: ದಾಖಲೆ ಬಿಡುಗಡೆ

“ಆಸ್ಪತ್ರೆಯಲ್ಲಿ ಸುಮಾರು ಎರಡು ಗಂಟೆಗಳ ಕಾಲ ವಿದ್ಯುತ್ ವ್ಯತ್ಯಯ ಉಂಟಾಗಿತ್ತು. ನಂತರ ನನ್ನ ಸಹೋದರನನ್ನು ಬೇರೆ ವಾರ್ಡ್‌ಗೆ ಸ್ಥಳಾಂತರಿಸಲಾಯಿತು. ಬುಧವಾರ ಬೆಳಿಗ್ಗೆ 6 ರಿಂದ 11.30 ರ ನಡುವೆ ಆಸ್ಪತ್ರೆಯಲ್ಲಿ ವಿದ್ಯುತ್ ಇರಲಿಲ್ಲ. ಈ ಸಮಯದಲ್ಲಿ, ಸಾವುಗಳು ಸಂಭವಿಸಿವೆ” ಎಂದು ಅವರು ಹೇಳಿದ್ದಾರೆ.

“ಈ ವೇಳೆ ನಾವು ನಾವು ಇರಲಿಲ್ಲ. ಅದೇ ದಿನ ನಮ್ಮ ಸಹೋದರನ ಸಾವಿನ ಬಗ್ಗೆ ತಿಳಿಸಲಾಯಿತು. ಅವರು ನನ್ನ ಸಹೋದರನನ್ನು ಐಸಿಯು ವಾರ್ಡ್‌ಗೆ ಸ್ಥಳಾಂತರಿಸಿದ್ದಾರೆ ಎಂದು ನಮಗೆ ಹೇಳಿದ್ದರು. ಅಲ್ಲಿ ನಮ್ಮನ್ನು ಒಳಗೆ ಬಿಡಲಿಲ್ಲ” ಎಂದು ನರೇಶ್ ಹೇಳಿದ್ದಾರೆ.

ಆಸ್ಪತ್ರೆ ಆವರಣದಲ್ಲಿ ಟ್ರಾನ್ಸ್‌ಫಾರ್ಮರ್ ಬ್ಲಾಸ್ಟ್ ಆಗಿದ್ದರಿಂದ ವಿದ್ಯುತ್ ವ್ಯತ್ಯಯವಾಗಿದ್ದು, ಬ್ಯಾಕಪ್‌ಗೆ ಇದ್ದ ಜನರೇಟರ್ ವಿಫಲವಾಗಿತ್ತು ಎಂದು ಹೆಸರು ಹೇಳಲು ಇಚ್ಛಿಸದ ಆಸ್ಪತ್ರೆಯ ಗುತ್ತಿಗೆ ನೌಕರರು ಹೇಳಿದ್ದಾರೆ ಎಂದು ಎನ್‌ಡಿಟಿವಿ ವರದಿ ಮಾಡಿದೆ. ವಿದ್ಯುತ್ ವ್ಯತ್ಯಯವಾದೊಡನೆ ರೋಗಿಗಳನ್ನು ತಕ್ಷಣವೇ ಐಸಿಯುಗೆ ಸ್ಥಳಾಂತರಿಸಲಾಗಿದೆ ಎಂದು ಅವರು ಹೇಳಿದ್ದಾರೆ.

ಇದನ್ನೂ ಓದಿ: ವೇದಗಣಿತ ತರಬೇತಿಗೆ ತಲಾ ಒಂದು ಲಕ್ಷ ನೀಡುತ್ತಿರುವ ಗ್ರಾಮ ಪಂಚಾಯ್ತಿಗಳು: ದಲಿತರಿಗಾಗಿ ಮೀಸಲಾದ SCSP TSP ಹಣ ದುರ್ಬಳಕೆ

ಈ ಬಗ್ಗೆ ಸರ್ಕಾರ ತನಿಖೆಗೆ ಆದೇಶಿಸಿದ್ದರೂ, ಆಮ್ಲಜನಕದ ಕೊರತೆಯಿಂದ ರೋಗಿಗಳು ಸಾವನ್ನಪ್ಪಿದ್ದಾರೆ ಎಂಬ ಆರೋಪವನ್ನು ಆಸ್ಪತ್ರೆ ಅಧಿಕಾರಿಗಳು ತಳ್ಳಿಹಾಕಿದ್ದಾರೆ.

“ವಿದ್ಯುತ್ ಇಲ್ಲದೆ ಇರುವ ಕಾರಣಕ್ಕೆ ಚೆಟ್ಟೆಮ್ಮ ಮತ್ತು ಹುಸೇನ್ ಮೃತಪಟ್ಟಿರುವುದು ಕಾಕತಾಳೀಯ. ಇಬ್ಬರು ರೋಗಿಗಳ ಆರೋಗ್ಯ ಹದಗೆಟ್ಟಿತ್ತು. ಅವರ ಸಾವು ವಿದ್ಯುತ್ ಇದ್ದಾಗ ಸಂಭವಿಸಿದ್ದು, ಈ ಬಗ್ಗೆ ತನಿಖೆಗೆ ಆದೇಶಿಸಿದ್ದೇವೆ” ಎಂದು ವಿಮ್ಸ್ ನಿರ್ದೇಶಕ ಟಿ.ಗಂಗಾಧರ ಗೌಡ ತಿಳಿಸಿದ್ದಾರೆ.

ಆಸ್ಪತ್ರೆಯ ಸಿಬ್ಬಂದಿ ವಿರುದ್ಧ ಕಠಿಣ ಕ್ರಮಕ್ಕೆ ಆಗ್ರಹಿಸಿ ವಿಧಾನಸಭೆಯಲ್ಲಿ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಈ ವಿಷಯ ಪ್ರಸ್ತಾಪಿಸಿ, ಇಂತಹ ಘಟನೆಗಳು ನಡೆಯದಂತೆ ಸರ್ಕಾರ ಏನು ಮಾಡಿದೆ ಎಂದು ಪ್ರಶ್ನಿಸಿದ್ದಾರೆ.

ಆದರೆ ಸಮಾಜ ಕಲ್ಯಾಣ ಮತ್ತು ಸಾರಿಗೆ ಸಚಿವ ಬಿ.ಶ್ರೀರಾಮುಲು ವಿದ್ಯುತ್ ಕೈಕೊಟ್ಟಿದ್ದರಿಂದ ಅವಘಡ ಸಂಭವಿಸಿದೆ ಎಂಬ ಆರೋಪವನ್ನು ತಳ್ಳಿಹಾಕಿದ್ದಾರೆ.

ಇದನ್ನೂ ಓದಿ: ಬಿಎಸ್‌ವೈ ಕುಟುಂಬದ ವಿರುದ್ಧ ಭ್ರಷ್ಟಾಚಾರ ಪ್ರಕರಣ| ತನಿಖೆ ನಡೆಸಿ ವರದಿ ಸಲ್ಲಿಸಲು ಲೋಕಾಯುಕ್ತಕ್ಕೆ ಕೋರ್ಟ್ ಸೂಚನೆ

“ವಿದ್ಯುತ್ ಕಡಿತವು ಆಗಾಗ್ಗೆ ಆಗುತ್ತಿತ್ತು. ಆಸ್ಪತ್ರೆಯಲ್ಲಿ 1.5 ಗಂಟೆಗಳ ಬ್ಯಾಕಪ್ ಅನ್ನು ಒದಗಿಸುವ ಜನರೇಟರ್ ಮತ್ತು ಇನ್ನೊಂದು 1.5 ಗಂಟೆಗಳ ಬ್ಯಾಕಪ್ ಅನ್ನು ಒದಗಿಸುವ ಯುಪಿಎಸ್ ಇತ್ತು. ಸಾವುಗೆ ಆಸ್ಪತ್ರೆಯ ಅಧಿಕಾರಿಗಳ ನಿರ್ಲಕ್ಷ್ಯ ಕಾರಣವಲ್ಲ” ಎಂದು ಅವರು ಹೇಳಿದ್ದಾರೆ.

ಆಸ್ಪತ್ರೆಯಲ್ಲಿ ಸಂಭವಿಸಿದ ಸಾವುಗಳ ಕುರಿತು ಪರಿಶೀಲಿಸಲು ಬೆಂಗಳೂರು ವೈದ್ಯಕೀಯ ಕಾಲೇಜು ಮತ್ತು ಸಂಶೋಧನಾ ಸಂಸ್ಥೆಯ ಪ್ರಾಧ್ಯಾಪಕಿ ಡಾ.ಸ್ಮಿತಾ ನೇತೃತ್ವದ ಸಮಿತಿಯನ್ನು ರಚಿಸಲಾಗಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಎಸ್‌ಎನ್‌ಡಿಪಿ ಪ್ರಧಾನ ಕಾರ್ಯದರ್ಶಿ ಹುದ್ದೆಯಿಂದ ವೆಳ್ಳಾಪ್ಪಳ್ಳಿ ನಟೇಶನ್ ಅನರ್ಹ

ಶ್ರೀ ನಾರಾಯಣ ಧರ್ಮ ಪರಿಪಾಲನ ಯೋಗಂ (ಎಸ್‌ಎನ್‌ಡಿಪಿ ಯೋಗಂ) ನ ಪ್ರಧಾನ ಕಾರ್ಯದರ್ಶಿ ಮತ್ತು ಮತ್ತು ಎಸ್‌ಎನ್ ಟ್ರಸ್ಟ್‌ನ ಕಾರ್ಯದರ್ಶಿ ಸ್ಥಾನದಿಂದ ವೆಳ್ಳಾಪ್ಪಳ್ಳಿ ನಟೇಶನ್ ಅವರನ್ನು ಕೇರಳ ಹೈಕೋರ್ಟ್ ಗುರುವಾರ (ಮಾ.12) ಅನರ್ಹಗೊಳಿಸಿದ್ದು,...

‘ಫಾರೂಕ್ ಅಬ್ದುಲ್ಲಾರನ್ನು ಕೊಲ್ಲುವುದು ಸರ್ಕಾರದ ಉದ್ದೇಶವೇ?’..ರಾಜ್ಯ ಸಭೆಯಲ್ಲಿ ಖರ್ಗೆ ಪ್ರಶ್ನೆ

ಜಮ್ಮು ಕಾಶ್ಮೀರದ ಮಾಜಿ ಮುಖ್ಯಮಂತ್ರಿ ಹಾಗೂ ನ್ಯಾಷನಲ್ ಕಾನ್ಫರೆನ್ಸ್ (ಎನ್‌ಸಿ) ಪಕ್ಷದ ಮುಖ್ಯಸ್ಥ ಫಾರೂಕ್ ಅಬ್ದುಲ್ಲಾ ಅವರ ಹತ್ಯೆ ಯತ್ನ ವಿಚಾರವನ್ನು ವಿಪಕ್ಷ ಸದಸ್ಯರು ಗುರುವಾರ (ಮಾ.12) ರಾಜ್ಯಸಭೆಯಲ್ಲಿ ಪ್ರಸ್ತಾಪಿಸಿದರು. ಘಟನೆ ಬಗ್ಗೆ...

56 ಸಾವಿರ ಹುದ್ದೆಗಳ ನೇಮಕಾತಿಯಲ್ಲಿ ಒಳಮೀಸಲಾತಿ ಅನ್ವಯಕ್ಕೆ ಆಗ್ರಹಿಸಿ ಎಡಗೈ ಸಮುದಾಯದಿಂದ ಬೃಹತ್ ಪ್ರತಿಭಟನೆ 

ಸರ್ಕಾರವು ಒಳ ಮೀಸಲಾತಿಯನ್ನು ತಪ್ಪಿಸುವ ಹುನ್ನಾರದಿಂದ ತರಾತುರಿಯಲ್ಲಿ 56,432 ಹುದ್ದೆಗಳ ನೇಮಕಾತಿಗೆ ಆದೇಶ ಹೊರಡಿಸಿದೆ. ನೇಮಕಾತಿಯಲ್ಲಿ ಒಳಮೀಸಲಾತಿ ಅಳವಡಿಸದೆ, ಎಡಗೈ ಸಮುದಾಯಗಳಿಗೆ ಸರ್ಕಾರ ಮತ್ತೆ ವಂಚಿಸುತ್ತಿದೆ ಎಂದು ‘ಒಳಮೀಸಲಾತಿ ಹೋರಾಟ ಸಮಿತಿ’ ಆರೋಪಿಸಿದೆ....

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧದ ಅವಿಶ್ವಾಸ ನಿರ್ಣಯಕ್ಕೆ ಸೋಲು

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧ ವಿರೋಧ ಪಕ್ಷಗಳು ಮಂಡಿಸಿದ್ದ ಅವಿಶ್ವಾಸ ನಿರ್ಣಯವು ಬುಧವಾರ (ಮಾ.11) ಧ್ವನಿ ಮತದ ಮೂಲಕ ತಿರಸ್ಕಾರಗೊಂಡಿದೆ. ಸದನದಲ್ಲಿ ವಿರೋಧ ಪಕ್ಷಗಳ ತೀವ್ರ ಗದ್ದಲ ಮತ್ತು ಘೋಷಣೆಗಳ ನಡುವೆಯೇ ಸ್ಪೀಕರ್...

ಉತ್ತರ ಪ್ರದೇಶ| ರಸ್ತೆ ಗುಂಡಿಗೆ ಇಳಿದ ಆಂಬ್ಯುಲೆನ್ಸ್; ಮರುಜೀವ ಪಡೆದ ಮೆದುಳು ನಿಷ್ಕ್ರಿಯಗೊಂಡಿದ್ದ ಮಹಿಳೆ!

ಉತ್ತರ ಪ್ರದೇಶದ ಬರೇಲಿಯ ಖಾಸಗಿ ಆಸ್ಪತ್ರೆಯೊಂದರ ವೈದ್ಯರು ಮೆದುಳು ನಿಷ್ಕ್ರಿಯ ಎಂದು ಘೋಷಿಸಿದ್ದು, ಮಹಿಳೆಯೊಬ್ಬರ ಮೃತದೇಹವನ್ನು ಅಂತ್ಯಕ್ರಿಯೆಗಾಗಿ ಮನೆಗೆ ಸಾಗಿಸುತ್ತಿದ್ದಾಗ ಆಂಬ್ಯುಲೆನ್ಸ್ ರಸ್ತೆಯ ಗುಂಡಿಗೆ ಇಳಿದ ನಂತರ ಆಕೆ ಜೀವಂತವಾಗಿರುವ ಲಕ್ಷಣಗಳು ಕಂಡುಬಂದು...

ಪಶ್ಚಿಮ ಏಷ್ಯಾ ಸಂಘರ್ಷ: ದುಬೈ ವಿಮಾನ ನಿಲ್ದಾಣದ ಮೇಲೆ ಇರಾನ್​ ಡ್ರೋನ್​ ದಾಳಿ; ಭಾರತೀಯ ಪ್ರಜೆ ಸೇರಿ ನಾಲ್ವರಿಗೆ ಗಾಯ

ದುಬೈ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಬಳಿ ಇರಾನಿನ ಎರಡು ಡ್ರೋಣಗಳಿಂದ ದಾಳಿ ನಡೆದಿದೆ. ಈ ದಾಳಿಯಲ್ಲಿ ಓರ್ವ ಭಾರತೀಯ ಸೇರಿದಂತೆ ನಾಲ್ವರು ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಅಲ್ಲಿನ ಸರ್ಕಾರದ ಪರವಾಗಿ ಪ್ರಕಟಣೆ ಹೊರಡಿಸಿರುವ...

ಜಾರ್ಖಂಡ್| ಆಂಬ್ಯುಲೆನ್ಸ್ ನಿರಾಕರಿಸಿದ ಆಸ್ಪತ್ರೆ ಸಿಬ್ಬಂದಿ; ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿದ ತಂದೆ

ಆಸ್ಪತ್ರೆ ಸಿಬ್ಬಂದಿ ಆಂಬ್ಯುಲೆನ್ಸ್ ನಿರಾಕರಿಸಿದ್ದರಿಂದ ಕೂಲಿಕಾರ ತಂದೆಯೊಬ್ಬ ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿರುವ ಹೃದಯವಿದ್ರಾವಕ ಘಟನೆಯೊಂದು ಜಾರ್ಖಂಡ್‌ನ ಪಶ್ಚಿಮ ಸಿಂಗ್ಭೂಮ್ ಜಿಲ್ಲೆಯಲ್ಲಿ ಬೆಳಕಿಗೆ ಬಂದಿದೆ. ಕಳೆದ ಶನಿವಾರ ನಡೆದಿದೆ ಎನ್ನಲಾದ...

ಮಧುರಾಂತಕಂ ಬಳಿ 14 ವರ್ಷದ ಬಾಲಕಿಯ ಮೇಲೆ ಸಾಮೂಹಿಕ ಅತ್ಯಾಚಾರ: ಪೋಕ್ಸೋ ಪ್ರಕರಣದಡಿ ಓರ್ವ ರೌಡಿ ಶೀಟರ್ ಬಂಧನ

ಚೆನ್ನೈ (ಚೆಂಗಲ್ಪಟ್ಟು): ಸೋಮವಾರ ರಾತ್ರಿ ಮಧುರಾಂಟಕಂ ಬಳಿಯ ಜಲಮೂಲದ ದಡದಲ್ಲಿ 14 ವರ್ಷದ ಬಾಲಕಿಯ ಮೇಲೆ ರೌಡಿ ಶೀಟರ್ ಮತ್ತು ಆತನ ಸಹಚರರು ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ ಎಂದು ವರದಿಯಾಗಿದೆ. ಪ್ರಕರಣ ಸಂಬಂಧ ಪೋಕ್ಸೋ...

ಮುಸ್ಲಿಂ ಮಹಿಳೆಯರ ವಿರುದ್ಧದ ಷರಿಯಾ ಕಾನೂನಿಗೆ ಏಕರೂಪ ನಾಗರಿಕ ಸಂಹಿತೆ ಪರಿಹಾರ: ಸುಪ್ರೀಂ ಕೋರ್ಟ್

"ಮುಸ್ಲಿಂ ವೈಯಕ್ತಿಕ ಕಾನೂನಿನಡಿಯಲ್ಲಿ ತಾರತಮ್ಯದ ಆನುವಂಶಿಕ ನಿಬಂಧನೆಗಳನ್ನು ಪರಿಹರಿಸಲು ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಅತ್ಯಂತ ಪರಿಣಾಮಕಾರಿ ಪರಿಹಾರ ಎಂದು ಸುಪ್ರೀಂ ಕೋರ್ಟ್ ಮಂಗಳವಾರ (ಮಾ.20) ಹೇಳಿದೆ. ಮುಖ್ಯ ನ್ಯಾಯಮೂರ್ತಿ ಸೂರ್ಯ...

ಮುಂಬೈ: ಬಜೆಟ್ ಅಧಿವೇಶನದ ನಡುವೆ ವಿಧಾನ ಭವನದ ಬಳಿ ವ್ಯಕ್ತಿಯೊಬ್ಬನಿಂದ ಆತ್ಮಹತ್ಯೆಗೆ ಯತ್ನ: ವಶಕ್ಕೆ ಪಡೆದ ಪೊಲೀಸರು

ಮುಂಬೈ: ಮಾರ್ಚ್ 11, ಬುಧವಾರ ಮಹಾರಾಷ್ಟ್ರ ವಿಧಾನ ಭವನದ ಹೊರಗೆ ವ್ಯಕ್ತಿಯೊಬ್ಬರು ಆತ್ಮಾಹುತಿ ಮಾಡಿಕೊಳ್ಳಲು ಯತ್ನಿಸಿರುವುದಾಗಿ ವರದಿಯಾಗಿದೆ. ತಕ್ಷಣವೇ ಮುಂಬೈ ಪೊಲೀಸರು ಆತನನ್ನು ಬಂಧಿಸಿದ್ದಾರೆ.  2026 ರ ಮಹಾರಾಷ್ಟ್ರ ಬಜೆಟ್ ಅಧಿವೇಶನ ವಿಧಾನ ಭವನದಲ್ಲಿ...