Homeಕರ್ನಾಟಕವಿದ್ಯುತ್‌ ವ್ಯತ್ಯಯ: ಆಕ್ಸಿಜನ್‌ ಇಲ್ಲದೆ ಬಳ್ಳಾರಿ ವಿಮ್ಸ್‌ ಆಸ್ಪತ್ರೆಯ ಮೂವರು ರೋಗಿಗಳು ಸಾವು

ವಿದ್ಯುತ್‌ ವ್ಯತ್ಯಯ: ಆಕ್ಸಿಜನ್‌ ಇಲ್ಲದೆ ಬಳ್ಳಾರಿ ವಿಮ್ಸ್‌ ಆಸ್ಪತ್ರೆಯ ಮೂವರು ರೋಗಿಗಳು ಸಾವು

- Advertisement -
- Advertisement -

ಬಳ್ಳಾರಿ ಜಿಲ್ಲೆಯ ವಿಜಯನಗರ ಇನ್‌ಸ್ಟಿಟ್ಯೂಟ್ ಆಫ್ ಮೆಡಿಕಲ್ ಸೈನ್ಸಸ್(ವಿಮ್ಸ್) ಆಸ್ಪತ್ರೆಯಲ್ಲಿ ವಿದ್ಯುತ್‌ ವ್ಯತ್ಯಯದಿಂದಾಗಿ ಆಸ್ಪತ್ರೆಯಲ್ಲಿ ದಾಖಲಾಗಿದ್ದ ರೋಗಿಗಳಿಗೆ ಆಮ್ಲಜನಕ ಸರಬರಾಜು ಆಗದೆ ಮೂವರು ಸಾವನ್ನಪ್ಪಿರುವ ಘಟನೆ ಗುರುವಾರ ವರದಿಯಾಗಿದೆ. ಮೃತಪಟ್ಟವರನ್ನು ಮೌಲಾ ಹುಸೇನ್(35), ಚಿಟ್ಟೆಮ್ಮ(30) ಮತ್ತು 18 ವರ್ಷದ ಮನೋಜ್ ಎಂದು ಗುರುತಿಸಲಾಗಿದೆ.

ಮೌಲಾ ಹುಸೇನ್ ಅವರು ಮೂತ್ರಪಿಂಡ ಕಾಯಿಲೆಯಿಂದ ಬಳಲುತ್ತಿದ್ದು, ಸೆಪ್ಟೆಂಬರ್ 11 ರಂದು ದಾಖಲಾಗಿದ್ದರು. ಚೇತಮ್ಮ ಅವರು ಸೆಪ್ಟೆಂಬರ್ 13 ರಂದು ಹಾವು ಕಚ್ಚಿದ ಕಾರಣಕ್ಕೆ ಮತ್ತು ಅದೇ ದಿನ ಚೇಳು ಕಚ್ಚಿದ ಕಾರಣಕ್ಕೆ ಮನೋಜ್ ಅವರು ವಿಮ್ಸ್‌ಗೆ ದಾಖಲಾಗಿದ್ದರು.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಸುದ್ದಿಗಾರರೊಂದಿಗೆ ಮಾತನಾಡಿದ ಮನೋಜ್ ಅವರ ಸಹೋದರ ನರೇಶ್, ತನ್ನ ಸಹೋದರ ಆಸ್ಪತ್ರೆಗೆ ದಾಖಲಾದ ದಿನವೇ ಆಸ್ಪತ್ರೆಯಲ್ಲಿ ವಿದ್ಯುತ್ ವ್ಯತ್ಯಯವಾಗಿತ್ತು ಎಂದು ಹೇಳಿದ್ದಾರೆ.

ಇದನ್ನೂ ಓದಿ: BBMP ಶಾಲೆ ನಿರ್ಮಾಣಕ್ಕೆ ಮಂಜೂರಾದ ಜಾಗ BJP ಶಾಸಕನ ಪಾಲು: ದಾಖಲೆ ಬಿಡುಗಡೆ

“ಆಸ್ಪತ್ರೆಯಲ್ಲಿ ಸುಮಾರು ಎರಡು ಗಂಟೆಗಳ ಕಾಲ ವಿದ್ಯುತ್ ವ್ಯತ್ಯಯ ಉಂಟಾಗಿತ್ತು. ನಂತರ ನನ್ನ ಸಹೋದರನನ್ನು ಬೇರೆ ವಾರ್ಡ್‌ಗೆ ಸ್ಥಳಾಂತರಿಸಲಾಯಿತು. ಬುಧವಾರ ಬೆಳಿಗ್ಗೆ 6 ರಿಂದ 11.30 ರ ನಡುವೆ ಆಸ್ಪತ್ರೆಯಲ್ಲಿ ವಿದ್ಯುತ್ ಇರಲಿಲ್ಲ. ಈ ಸಮಯದಲ್ಲಿ, ಸಾವುಗಳು ಸಂಭವಿಸಿವೆ” ಎಂದು ಅವರು ಹೇಳಿದ್ದಾರೆ.

“ಈ ವೇಳೆ ನಾವು ನಾವು ಇರಲಿಲ್ಲ. ಅದೇ ದಿನ ನಮ್ಮ ಸಹೋದರನ ಸಾವಿನ ಬಗ್ಗೆ ತಿಳಿಸಲಾಯಿತು. ಅವರು ನನ್ನ ಸಹೋದರನನ್ನು ಐಸಿಯು ವಾರ್ಡ್‌ಗೆ ಸ್ಥಳಾಂತರಿಸಿದ್ದಾರೆ ಎಂದು ನಮಗೆ ಹೇಳಿದ್ದರು. ಅಲ್ಲಿ ನಮ್ಮನ್ನು ಒಳಗೆ ಬಿಡಲಿಲ್ಲ” ಎಂದು ನರೇಶ್ ಹೇಳಿದ್ದಾರೆ.

ಆಸ್ಪತ್ರೆ ಆವರಣದಲ್ಲಿ ಟ್ರಾನ್ಸ್‌ಫಾರ್ಮರ್ ಬ್ಲಾಸ್ಟ್ ಆಗಿದ್ದರಿಂದ ವಿದ್ಯುತ್ ವ್ಯತ್ಯಯವಾಗಿದ್ದು, ಬ್ಯಾಕಪ್‌ಗೆ ಇದ್ದ ಜನರೇಟರ್ ವಿಫಲವಾಗಿತ್ತು ಎಂದು ಹೆಸರು ಹೇಳಲು ಇಚ್ಛಿಸದ ಆಸ್ಪತ್ರೆಯ ಗುತ್ತಿಗೆ ನೌಕರರು ಹೇಳಿದ್ದಾರೆ ಎಂದು ಎನ್‌ಡಿಟಿವಿ ವರದಿ ಮಾಡಿದೆ. ವಿದ್ಯುತ್ ವ್ಯತ್ಯಯವಾದೊಡನೆ ರೋಗಿಗಳನ್ನು ತಕ್ಷಣವೇ ಐಸಿಯುಗೆ ಸ್ಥಳಾಂತರಿಸಲಾಗಿದೆ ಎಂದು ಅವರು ಹೇಳಿದ್ದಾರೆ.

ಇದನ್ನೂ ಓದಿ: ವೇದಗಣಿತ ತರಬೇತಿಗೆ ತಲಾ ಒಂದು ಲಕ್ಷ ನೀಡುತ್ತಿರುವ ಗ್ರಾಮ ಪಂಚಾಯ್ತಿಗಳು: ದಲಿತರಿಗಾಗಿ ಮೀಸಲಾದ SCSP TSP ಹಣ ದುರ್ಬಳಕೆ

ಈ ಬಗ್ಗೆ ಸರ್ಕಾರ ತನಿಖೆಗೆ ಆದೇಶಿಸಿದ್ದರೂ, ಆಮ್ಲಜನಕದ ಕೊರತೆಯಿಂದ ರೋಗಿಗಳು ಸಾವನ್ನಪ್ಪಿದ್ದಾರೆ ಎಂಬ ಆರೋಪವನ್ನು ಆಸ್ಪತ್ರೆ ಅಧಿಕಾರಿಗಳು ತಳ್ಳಿಹಾಕಿದ್ದಾರೆ.

“ವಿದ್ಯುತ್ ಇಲ್ಲದೆ ಇರುವ ಕಾರಣಕ್ಕೆ ಚೆಟ್ಟೆಮ್ಮ ಮತ್ತು ಹುಸೇನ್ ಮೃತಪಟ್ಟಿರುವುದು ಕಾಕತಾಳೀಯ. ಇಬ್ಬರು ರೋಗಿಗಳ ಆರೋಗ್ಯ ಹದಗೆಟ್ಟಿತ್ತು. ಅವರ ಸಾವು ವಿದ್ಯುತ್ ಇದ್ದಾಗ ಸಂಭವಿಸಿದ್ದು, ಈ ಬಗ್ಗೆ ತನಿಖೆಗೆ ಆದೇಶಿಸಿದ್ದೇವೆ” ಎಂದು ವಿಮ್ಸ್ ನಿರ್ದೇಶಕ ಟಿ.ಗಂಗಾಧರ ಗೌಡ ತಿಳಿಸಿದ್ದಾರೆ.

ಆಸ್ಪತ್ರೆಯ ಸಿಬ್ಬಂದಿ ವಿರುದ್ಧ ಕಠಿಣ ಕ್ರಮಕ್ಕೆ ಆಗ್ರಹಿಸಿ ವಿಧಾನಸಭೆಯಲ್ಲಿ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಈ ವಿಷಯ ಪ್ರಸ್ತಾಪಿಸಿ, ಇಂತಹ ಘಟನೆಗಳು ನಡೆಯದಂತೆ ಸರ್ಕಾರ ಏನು ಮಾಡಿದೆ ಎಂದು ಪ್ರಶ್ನಿಸಿದ್ದಾರೆ.

ಆದರೆ ಸಮಾಜ ಕಲ್ಯಾಣ ಮತ್ತು ಸಾರಿಗೆ ಸಚಿವ ಬಿ.ಶ್ರೀರಾಮುಲು ವಿದ್ಯುತ್ ಕೈಕೊಟ್ಟಿದ್ದರಿಂದ ಅವಘಡ ಸಂಭವಿಸಿದೆ ಎಂಬ ಆರೋಪವನ್ನು ತಳ್ಳಿಹಾಕಿದ್ದಾರೆ.

ಇದನ್ನೂ ಓದಿ: ಬಿಎಸ್‌ವೈ ಕುಟುಂಬದ ವಿರುದ್ಧ ಭ್ರಷ್ಟಾಚಾರ ಪ್ರಕರಣ| ತನಿಖೆ ನಡೆಸಿ ವರದಿ ಸಲ್ಲಿಸಲು ಲೋಕಾಯುಕ್ತಕ್ಕೆ ಕೋರ್ಟ್ ಸೂಚನೆ

“ವಿದ್ಯುತ್ ಕಡಿತವು ಆಗಾಗ್ಗೆ ಆಗುತ್ತಿತ್ತು. ಆಸ್ಪತ್ರೆಯಲ್ಲಿ 1.5 ಗಂಟೆಗಳ ಬ್ಯಾಕಪ್ ಅನ್ನು ಒದಗಿಸುವ ಜನರೇಟರ್ ಮತ್ತು ಇನ್ನೊಂದು 1.5 ಗಂಟೆಗಳ ಬ್ಯಾಕಪ್ ಅನ್ನು ಒದಗಿಸುವ ಯುಪಿಎಸ್ ಇತ್ತು. ಸಾವುಗೆ ಆಸ್ಪತ್ರೆಯ ಅಧಿಕಾರಿಗಳ ನಿರ್ಲಕ್ಷ್ಯ ಕಾರಣವಲ್ಲ” ಎಂದು ಅವರು ಹೇಳಿದ್ದಾರೆ.

ಆಸ್ಪತ್ರೆಯಲ್ಲಿ ಸಂಭವಿಸಿದ ಸಾವುಗಳ ಕುರಿತು ಪರಿಶೀಲಿಸಲು ಬೆಂಗಳೂರು ವೈದ್ಯಕೀಯ ಕಾಲೇಜು ಮತ್ತು ಸಂಶೋಧನಾ ಸಂಸ್ಥೆಯ ಪ್ರಾಧ್ಯಾಪಕಿ ಡಾ.ಸ್ಮಿತಾ ನೇತೃತ್ವದ ಸಮಿತಿಯನ್ನು ರಚಿಸಲಾಗಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಟ್ರಂಪ್ ಸಂಚಿಗೆ ತಿರುಗೇಟು : ನಾವು ಯಾರ ಅಡಿಯಾಳಾಗಲು ಸಿದ್ದರಿಲ್ಲ ಎಂದ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು

ವೆನೆಜುವೆಲಾ ಬಳಿಕ ಖನಿಜ-ಸಮೃದ್ಧ ಡ್ಯಾನಿಶ್ (ಡೆನ್ಮಾರ್ಕ್‌) ಸ್ವಾಯತ್ತ ಪ್ರದೇಶವಾದ ಗ್ರೀನ್‌ ಲ್ಯಾಂಡ್‌ ಮೇಲೆ ಬಲಪ್ರಯೋಗ ಮಾಡಲು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಯೋಜಿಸುತ್ತಿದ್ದಾರೆ. ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು...

ಮತ್ತೆ ಒಂದಾದ ಎನ್‌ಸಿಪಿ ಬಣಗಳು : ಸುಪ್ರಿಯಾ ಸುಳೆ ಜೊತೆ ವೇದಿಕೆ ಹಂಚಿಕೊಂಡ ಅಜಿತ್ ಪವಾರ್, ಜಂಟಿ ಪ್ರಣಾಳಿಕೆ ಬಿಡುಗಡೆ

ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಅಜಿತ್ ಪವಾರ್ ನೇತೃತ್ವದ ಎನ್‌ಸಿಪಿ ಮತ್ತು ಅವರ ಚಿಕ್ಕಪ್ಪ ಶರದ್ ಪವಾರ್ ನೇತೃತ್ವದ ಎನ್‌ಸಿಪಿ (ಎಸ್‌ಪಿ) ಶನಿವಾರ (ಜ.10) ಪುಣೆ ಮಹಾನಗರ ಪಾಲಿಕೆಗೆ ನಡೆಯಲಿರುವ ಚುನಾವಣೆಗೆ ಜಂಟಿ ಪ್ರಣಾಳಿಕೆಯನ್ನು ಬಿಡುಗಡೆ...

ಮಹಾರಾಷ್ಟ್ರ : ಲೈಂಗಿಕ ದೌರ್ಜನ್ಯ ಪ್ರಕರಣದ ಆರೋಪಿಯನ್ನು ಕೌನ್ಸಿಲರ್ ಮಾಡಿದ ಬಿಜೆಪಿ

ಬದ್ಲಾಪುರ ಲೈಂಗಿಕ ದೌರ್ಜನ್ಯ ಪ್ರಕರಣದ ಸಹ ಆರೋಪಿ ಮತ್ತು ಶಾಲೆಯೊಂದರ ಮಾಜಿ ಕಾರ್ಯದರ್ಶಿ ತುಷಾರ್ ಆಪ್ಟೆ ಎಂಬಾತನನ್ನು ಥಾಣೆ ಜಿಲ್ಲೆಯ ಕುಲ್ಗಾಂವ್-ಬದ್ಲಾಪುರ ಮುನ್ಸಿಪಲ್ ಕೌನ್ಸಿಲ್‌ಗೆ ಬಿಜೆಪಿ ನಾಮನಿರ್ದೇಶನ ಮಾಡಿದೆ. ಮುನ್ಸಿಪಲ್ ಕೌನ್ಸಿಲ್ ಅಧ್ಯಕ್ಷೆ ರುಚಿತಾ...

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಜೈಲಿಗಟ್ಟಿದ ಪೊಲೀಸರು : ಸಂತ್ರಸ್ತಗೆ 14 ಲಕ್ಷ ರೂ. ಪರಿಹಾರ ನೀಡಲು ಕೋರ್ಟ್ ಆದೇಶ

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಪೊಲೀಸರು ಜೈಲಿಗಟ್ಟಿದ ವ್ಯಕ್ತಿಗೆ 14 ಲಕ್ಷ ರೂಪಾಯಿ ಪರಿಹಾರ ಒದಗಿಸುವಂತೆ ಕೇರಳ ಸರ್ಕಾರಕ್ಕೆ ಹೈಕೋರ್ಟ್ ಆದೇಶಿಸಿದೆ. ಕಣ್ಣೂರು ಮೂಲದ ವಿ.ಕೆ ತಾಜುದ್ದೀನ್ ಕಾನೂನು ಹೋರಾಟದಲ್ಲಿ ಗೆದ್ದು ಪರಿಹಾರ ಪಡೆದ ವ್ಯಕ್ತಿ....

ಇರಾನ್‌ನಲ್ಲಿ ತೀವ್ರಗೊಂಡ ಆಡಳಿತ ವಿರೋಧಿ ಪ್ರತಿಭಟನೆ : ಟ್ರಂಪ್ ಮಧ್ಯಪ್ರವೇಶ ಕೋರಿದ ಮಾಜಿ ದೊರೆಯ ಮಗ

ಇರಾನ್‌ನಲ್ಲಿ ಭುಗಿಲೆದ್ದಿರುವ ಆಡಳಿತ ವಿರೋಧಿ ಪ್ರತಿಭಟನೆ ತೀವ್ರ ಸ್ವರೂಪ ಪಡೆದುಕೊಂಡಿದೆ. 2025ರ ಡಿಸೆಂಬರ್ 28ರಂದು ಪ್ರಾರಂಭಗೊಂಡ ಪ್ರತಿಭಟನೆಗಳು ಹಿಂಸಾಚಾರ ರೂಪ ಪಡೆದುಕೊಂಡು 13ನೇ ದಿನವೂ ಮುಂದುವರಿದಿದೆ. ಆರ್ಥಿಕ ಬಿಕ್ಕಟ್ಟಿನ ವಿರುದ್ದ (ರಿಯಾಲ್ ಕರೆನ್ಸಿ ಮೌಲ್ಯ...

ಮತದಾರರ ಹೆಸರು ಅಳಿಸಲು ಯತ್ನ : ಬಿಜೆಪಿ ವಿರುದ್ಧ 5 ವಿಪಕ್ಷಗಳಿಂದ ದೂರು ದಾಖಲು

ಅಸ್ಸಾಂನ ಐದು ವಿರೋಧ ಪಕ್ಷಗಳು ಶುಕ್ರವಾರ (ಜ.9) ಪೊಲೀಸ್ ದೂರು ದಾಖಲಿಸಿದ್ದು, ಆಡಳಿತಾರೂಢ ಭಾರತೀಯ ಜನತಾ ಪಾರ್ಟಿ (ಬಿಜೆಪಿ) ರಾಜ್ಯದ ಮತದಾರರ ಪಟ್ಟಿಯಿಂದ ಹೆಚ್ಚಿನ ಸಂಖ್ಯೆಯ ನಿಜವಾದ ಮತದಾರರ ಹೆಸರನ್ನು ಅಳಿಸಲು ಸಂಚು...

ಐ-ಪ್ಯಾಕ್ ಮೇಲೆ ದಾಳಿ ಪ್ರಕರಣ: ಮಮತಾ ಬ್ಯಾನರ್ಜಿ ದೂರಿನ ಬೆನ್ನಲ್ಲೇ ಜಾರಿ ನಿರ್ದೇಶನಾಲಯದ ವಿರುದ್ಧ ಎಫ್‌ಐಆರ್

ಕೋಲ್ಕತ್ತಾ: ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ ನಡೆಸಿದ ದಾಳಿಗೆ ಸಂಬಂಧಿಸಿದಂತೆ ಟಿಎಂಸಿ ಅಧ್ಯಕ್ಷೆ ಮಮತಾ ಬ್ಯಾನರ್ಜಿ...

‘ಭ್ರಷ್ಟ ಜನತಾ ಪಾರ್ಟಿ’: ಬಿಜೆಪಿ ಡಬಲ್ ಎಂಜಿನ್ ಆಡಳಿತದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

ನವದೆಹಲಿ: ವಿವಿಧ ರಾಜ್ಯಗಳಲ್ಲಿ ಬಿಜೆಪಿಯ ಡಬಲ್ ಎಂಜಿನ್ ಸರ್ಕಾರಗಳ ವಿರುದ್ಧ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.  ತಮ್ಮ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ರಾಹುಲ್, ಉತ್ತರಾಖಂಡದಲ್ಲಿ ಅಂಕಿತ...

ಇಂದೋರ್‌ನಲ್ಲಿ ಕಲುಷಿತ ನೀರಿಗೆ 8 ಮಂದಿ ಬಲಿ: ಆರ್‌ಎಸ್‌ಎಸ್ ಕಚೇರಿಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್: ಭುಗಿಲೆದ್ದ ವಿವಾದ

ಇಂದೋರ್: ಆರ್‌ಎಸ್‌ಎಸ್ ಕಚೇರಿಯಲ್ಲಿ ಬುಧವಾರ ತಡರಾತ್ರಿ ನಡೆದ ಸಭೆಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್ ಭಾಗವಹಿಸಿದ್ದು ಕಂಡುಬಂದ ನಂತರ ಗುರುವಾರ ಇಂದೋರ್‌ನಲ್ಲಿ ರಾಜಕೀಯ ವಿವಾದ ಭುಗಿಲೆದ್ದಿದೆ.  ಕನಿಷ್ಠ ಎಂಟು ಮಂದಿ ಜೀವಗಳನ್ನು ಬಲಿ ಪಡೆದಿರುವ ಕಲುಷಿತ...

ಐ-ಪ್ಯಾಕ್ ಮೇಲೆ ಇಡಿ ದಾಳಿ: ಕೋಲ್ಕತ್ತಾದಲ್ಲಿ ಮಮತಾ ಪ್ರತಿಭಟನೆ: ಅಮಿತ್ ಶಾ ಕಚೇರಿಯ ಹೊರಗೆ ಪ್ರತಿಭಟಿಸುತ್ತಿದ್ದ ಟಿಎಂಸಿ ಶಾಸಕರ ಬಂಧನ

ಗುರುವಾರ (ಜ.8) ಬೆಳಿಗ್ಗೆ ಕೋಲ್ಕತ್ತಾದ ಸಾಲ್ಟ್ ಲೇಕ್‌ನಲ್ಲಿರುವ ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ನಡೆಸಿದ...