Homeಕರ್ನಾಟಕವಿದ್ಯುತ್‌ ವ್ಯತ್ಯಯ: ಆಕ್ಸಿಜನ್‌ ಇಲ್ಲದೆ ಬಳ್ಳಾರಿ ವಿಮ್ಸ್‌ ಆಸ್ಪತ್ರೆಯ ಮೂವರು ರೋಗಿಗಳು ಸಾವು

ವಿದ್ಯುತ್‌ ವ್ಯತ್ಯಯ: ಆಕ್ಸಿಜನ್‌ ಇಲ್ಲದೆ ಬಳ್ಳಾರಿ ವಿಮ್ಸ್‌ ಆಸ್ಪತ್ರೆಯ ಮೂವರು ರೋಗಿಗಳು ಸಾವು

- Advertisement -
- Advertisement -

ಬಳ್ಳಾರಿ ಜಿಲ್ಲೆಯ ವಿಜಯನಗರ ಇನ್‌ಸ್ಟಿಟ್ಯೂಟ್ ಆಫ್ ಮೆಡಿಕಲ್ ಸೈನ್ಸಸ್(ವಿಮ್ಸ್) ಆಸ್ಪತ್ರೆಯಲ್ಲಿ ವಿದ್ಯುತ್‌ ವ್ಯತ್ಯಯದಿಂದಾಗಿ ಆಸ್ಪತ್ರೆಯಲ್ಲಿ ದಾಖಲಾಗಿದ್ದ ರೋಗಿಗಳಿಗೆ ಆಮ್ಲಜನಕ ಸರಬರಾಜು ಆಗದೆ ಮೂವರು ಸಾವನ್ನಪ್ಪಿರುವ ಘಟನೆ ಗುರುವಾರ ವರದಿಯಾಗಿದೆ. ಮೃತಪಟ್ಟವರನ್ನು ಮೌಲಾ ಹುಸೇನ್(35), ಚಿಟ್ಟೆಮ್ಮ(30) ಮತ್ತು 18 ವರ್ಷದ ಮನೋಜ್ ಎಂದು ಗುರುತಿಸಲಾಗಿದೆ.

ಮೌಲಾ ಹುಸೇನ್ ಅವರು ಮೂತ್ರಪಿಂಡ ಕಾಯಿಲೆಯಿಂದ ಬಳಲುತ್ತಿದ್ದು, ಸೆಪ್ಟೆಂಬರ್ 11 ರಂದು ದಾಖಲಾಗಿದ್ದರು. ಚೇತಮ್ಮ ಅವರು ಸೆಪ್ಟೆಂಬರ್ 13 ರಂದು ಹಾವು ಕಚ್ಚಿದ ಕಾರಣಕ್ಕೆ ಮತ್ತು ಅದೇ ದಿನ ಚೇಳು ಕಚ್ಚಿದ ಕಾರಣಕ್ಕೆ ಮನೋಜ್ ಅವರು ವಿಮ್ಸ್‌ಗೆ ದಾಖಲಾಗಿದ್ದರು.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಸುದ್ದಿಗಾರರೊಂದಿಗೆ ಮಾತನಾಡಿದ ಮನೋಜ್ ಅವರ ಸಹೋದರ ನರೇಶ್, ತನ್ನ ಸಹೋದರ ಆಸ್ಪತ್ರೆಗೆ ದಾಖಲಾದ ದಿನವೇ ಆಸ್ಪತ್ರೆಯಲ್ಲಿ ವಿದ್ಯುತ್ ವ್ಯತ್ಯಯವಾಗಿತ್ತು ಎಂದು ಹೇಳಿದ್ದಾರೆ.

ಇದನ್ನೂ ಓದಿ: BBMP ಶಾಲೆ ನಿರ್ಮಾಣಕ್ಕೆ ಮಂಜೂರಾದ ಜಾಗ BJP ಶಾಸಕನ ಪಾಲು: ದಾಖಲೆ ಬಿಡುಗಡೆ

“ಆಸ್ಪತ್ರೆಯಲ್ಲಿ ಸುಮಾರು ಎರಡು ಗಂಟೆಗಳ ಕಾಲ ವಿದ್ಯುತ್ ವ್ಯತ್ಯಯ ಉಂಟಾಗಿತ್ತು. ನಂತರ ನನ್ನ ಸಹೋದರನನ್ನು ಬೇರೆ ವಾರ್ಡ್‌ಗೆ ಸ್ಥಳಾಂತರಿಸಲಾಯಿತು. ಬುಧವಾರ ಬೆಳಿಗ್ಗೆ 6 ರಿಂದ 11.30 ರ ನಡುವೆ ಆಸ್ಪತ್ರೆಯಲ್ಲಿ ವಿದ್ಯುತ್ ಇರಲಿಲ್ಲ. ಈ ಸಮಯದಲ್ಲಿ, ಸಾವುಗಳು ಸಂಭವಿಸಿವೆ” ಎಂದು ಅವರು ಹೇಳಿದ್ದಾರೆ.

“ಈ ವೇಳೆ ನಾವು ನಾವು ಇರಲಿಲ್ಲ. ಅದೇ ದಿನ ನಮ್ಮ ಸಹೋದರನ ಸಾವಿನ ಬಗ್ಗೆ ತಿಳಿಸಲಾಯಿತು. ಅವರು ನನ್ನ ಸಹೋದರನನ್ನು ಐಸಿಯು ವಾರ್ಡ್‌ಗೆ ಸ್ಥಳಾಂತರಿಸಿದ್ದಾರೆ ಎಂದು ನಮಗೆ ಹೇಳಿದ್ದರು. ಅಲ್ಲಿ ನಮ್ಮನ್ನು ಒಳಗೆ ಬಿಡಲಿಲ್ಲ” ಎಂದು ನರೇಶ್ ಹೇಳಿದ್ದಾರೆ.

ಆಸ್ಪತ್ರೆ ಆವರಣದಲ್ಲಿ ಟ್ರಾನ್ಸ್‌ಫಾರ್ಮರ್ ಬ್ಲಾಸ್ಟ್ ಆಗಿದ್ದರಿಂದ ವಿದ್ಯುತ್ ವ್ಯತ್ಯಯವಾಗಿದ್ದು, ಬ್ಯಾಕಪ್‌ಗೆ ಇದ್ದ ಜನರೇಟರ್ ವಿಫಲವಾಗಿತ್ತು ಎಂದು ಹೆಸರು ಹೇಳಲು ಇಚ್ಛಿಸದ ಆಸ್ಪತ್ರೆಯ ಗುತ್ತಿಗೆ ನೌಕರರು ಹೇಳಿದ್ದಾರೆ ಎಂದು ಎನ್‌ಡಿಟಿವಿ ವರದಿ ಮಾಡಿದೆ. ವಿದ್ಯುತ್ ವ್ಯತ್ಯಯವಾದೊಡನೆ ರೋಗಿಗಳನ್ನು ತಕ್ಷಣವೇ ಐಸಿಯುಗೆ ಸ್ಥಳಾಂತರಿಸಲಾಗಿದೆ ಎಂದು ಅವರು ಹೇಳಿದ್ದಾರೆ.

ಇದನ್ನೂ ಓದಿ: ವೇದಗಣಿತ ತರಬೇತಿಗೆ ತಲಾ ಒಂದು ಲಕ್ಷ ನೀಡುತ್ತಿರುವ ಗ್ರಾಮ ಪಂಚಾಯ್ತಿಗಳು: ದಲಿತರಿಗಾಗಿ ಮೀಸಲಾದ SCSP TSP ಹಣ ದುರ್ಬಳಕೆ

ಈ ಬಗ್ಗೆ ಸರ್ಕಾರ ತನಿಖೆಗೆ ಆದೇಶಿಸಿದ್ದರೂ, ಆಮ್ಲಜನಕದ ಕೊರತೆಯಿಂದ ರೋಗಿಗಳು ಸಾವನ್ನಪ್ಪಿದ್ದಾರೆ ಎಂಬ ಆರೋಪವನ್ನು ಆಸ್ಪತ್ರೆ ಅಧಿಕಾರಿಗಳು ತಳ್ಳಿಹಾಕಿದ್ದಾರೆ.

“ವಿದ್ಯುತ್ ಇಲ್ಲದೆ ಇರುವ ಕಾರಣಕ್ಕೆ ಚೆಟ್ಟೆಮ್ಮ ಮತ್ತು ಹುಸೇನ್ ಮೃತಪಟ್ಟಿರುವುದು ಕಾಕತಾಳೀಯ. ಇಬ್ಬರು ರೋಗಿಗಳ ಆರೋಗ್ಯ ಹದಗೆಟ್ಟಿತ್ತು. ಅವರ ಸಾವು ವಿದ್ಯುತ್ ಇದ್ದಾಗ ಸಂಭವಿಸಿದ್ದು, ಈ ಬಗ್ಗೆ ತನಿಖೆಗೆ ಆದೇಶಿಸಿದ್ದೇವೆ” ಎಂದು ವಿಮ್ಸ್ ನಿರ್ದೇಶಕ ಟಿ.ಗಂಗಾಧರ ಗೌಡ ತಿಳಿಸಿದ್ದಾರೆ.

ಆಸ್ಪತ್ರೆಯ ಸಿಬ್ಬಂದಿ ವಿರುದ್ಧ ಕಠಿಣ ಕ್ರಮಕ್ಕೆ ಆಗ್ರಹಿಸಿ ವಿಧಾನಸಭೆಯಲ್ಲಿ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಈ ವಿಷಯ ಪ್ರಸ್ತಾಪಿಸಿ, ಇಂತಹ ಘಟನೆಗಳು ನಡೆಯದಂತೆ ಸರ್ಕಾರ ಏನು ಮಾಡಿದೆ ಎಂದು ಪ್ರಶ್ನಿಸಿದ್ದಾರೆ.

ಆದರೆ ಸಮಾಜ ಕಲ್ಯಾಣ ಮತ್ತು ಸಾರಿಗೆ ಸಚಿವ ಬಿ.ಶ್ರೀರಾಮುಲು ವಿದ್ಯುತ್ ಕೈಕೊಟ್ಟಿದ್ದರಿಂದ ಅವಘಡ ಸಂಭವಿಸಿದೆ ಎಂಬ ಆರೋಪವನ್ನು ತಳ್ಳಿಹಾಕಿದ್ದಾರೆ.

ಇದನ್ನೂ ಓದಿ: ಬಿಎಸ್‌ವೈ ಕುಟುಂಬದ ವಿರುದ್ಧ ಭ್ರಷ್ಟಾಚಾರ ಪ್ರಕರಣ| ತನಿಖೆ ನಡೆಸಿ ವರದಿ ಸಲ್ಲಿಸಲು ಲೋಕಾಯುಕ್ತಕ್ಕೆ ಕೋರ್ಟ್ ಸೂಚನೆ

“ವಿದ್ಯುತ್ ಕಡಿತವು ಆಗಾಗ್ಗೆ ಆಗುತ್ತಿತ್ತು. ಆಸ್ಪತ್ರೆಯಲ್ಲಿ 1.5 ಗಂಟೆಗಳ ಬ್ಯಾಕಪ್ ಅನ್ನು ಒದಗಿಸುವ ಜನರೇಟರ್ ಮತ್ತು ಇನ್ನೊಂದು 1.5 ಗಂಟೆಗಳ ಬ್ಯಾಕಪ್ ಅನ್ನು ಒದಗಿಸುವ ಯುಪಿಎಸ್ ಇತ್ತು. ಸಾವುಗೆ ಆಸ್ಪತ್ರೆಯ ಅಧಿಕಾರಿಗಳ ನಿರ್ಲಕ್ಷ್ಯ ಕಾರಣವಲ್ಲ” ಎಂದು ಅವರು ಹೇಳಿದ್ದಾರೆ.

ಆಸ್ಪತ್ರೆಯಲ್ಲಿ ಸಂಭವಿಸಿದ ಸಾವುಗಳ ಕುರಿತು ಪರಿಶೀಲಿಸಲು ಬೆಂಗಳೂರು ವೈದ್ಯಕೀಯ ಕಾಲೇಜು ಮತ್ತು ಸಂಶೋಧನಾ ಸಂಸ್ಥೆಯ ಪ್ರಾಧ್ಯಾಪಕಿ ಡಾ.ಸ್ಮಿತಾ ನೇತೃತ್ವದ ಸಮಿತಿಯನ್ನು ರಚಿಸಲಾಗಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ವಂದೇ ಮಾತರಂ ಗೀತೆಯ 6 ಚರಣಕ್ಕೆ ಕರ್ನಾಟಕ ಸರ್ಕಾರದ ಬ್ರೇಕ್

ವಂದೇ ಮಾತರಂ ಗೀತೆಯ ಗಾಯನಕ್ಕೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರದ ನಿರ್ಧಾರ ಮತ್ತು ಕಡ್ಡಾಯ ನೀತಿಗೆ ಕರ್ನಾಟಕ ಸರ್ಕಾರ ನೇರವಾಗಿ ಸೆಡ್ಡು ಹೊಡೆದಿದೆ. ರಾಜ್ಯ ಸರ್ಕಾರದ ಅಧಿಕೃತ ಕಾರ್ಯಕ್ರಮಗಳಲ್ಲಿ ವಂದೇ ಮಾತರಂ ಗೀತೆಯ ಸಂಪೂರ್ಣ...

ಸಿಜೆಪಿ ಪ್ರತಿಭಟನೆಯಲ್ಲಿ ಬಾಲಕಿ ನಿಶು ಆಜಾದ್‌ಗೆ ಬೆದರಿಕೆ; ಕ್ರಮಕ್ಕೆ ಸುಪ್ರೀಂ ಕೋರ್ಟ್ ಸೂಚನೆ

ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ನೇತೃತ್ವದಲ್ಲಿ ನಡೆದ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ 14 ವರ್ಷದ ನಿಶು ಆಜಾದ್‌ಗೆ ಕಿಡಿಗೇಡಿಗಳು ಅತ್ಯಾಚಾರದ ಬೆದರಿಕೆ ಹಾಕಿದ್ದಾರೆ ಹಾಗೂ ಅವರ ಮನೆ ಮೇಲೆ ಕಲ್ಲು ತೂರಾಟ ನಡೆಸಿದ್ದಾರೆ ಎಂಬ...

ಜಾದವ್‌ಪುರ ವಿವಿ ವಿರುದ್ಧ ಸುವೇಂದು ಅಧಿಕಾರಿಯ ‘ಕೇಸರಿ ಯಾತ್ರೆ’: ‘ಆಜಾದಿ’, ‘ಲಾಲ್ ಸಲಾಂ’ ಕೂಗುವವರನ್ನು ಬೇರುಸಹಿತ ಕಿತ್ತುಹಾಕುತ್ತೇನೆ ಎಂದು ಬೆದರಿಕೆ

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಬಿಜೆಪಿ ನಾಯಕ ಹಾಗೂ ಮುಖ್ಯಮಂತ್ರಿ ಸುವೇಂದು ಅಧಿಕಾರಿ ನೇತೃತ್ವದಲ್ಲಿ ಕೋಲ್ಕತ್ತಾದ ಜಾದವ್‌ಪುರ ವಿಶ್ವವಿದ್ಯಾಲಯದತ್ತ ನಡೆದ ‘ಗೆರುವಾ ಸಮ್ಮಾನ್ ಯಾತ್ರೆ’ (ಕೇಸರಿ ಗೌರವ ಮೆರವಣಿಗೆ) ಇದೀಗ ರಾಜ್ಯದ ರಾಜಕೀಯ ವಲಯದಲ್ಲಿ...

SIR : ಒಂದೇ ಮತಗಟ್ಟೆಯ 729 ಮತದಾರರಲ್ಲಿ 728 ಮಂದಿಯ ಹೆಸರು ಡಿಲೀಟ್!

ದೆಹಲಿಯ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆಗೆ (ಎಸ್‌ಐಆರ್‌) ಮುನ್ನ, ಯಮುನಾ ನದಿ ಪಾತ್ರದ ಕೊಳಗೇರಿ ಪ್ರದೇಶವಾದ ಬೇಲಾ ಎಸ್ಟೇಟ್‌ನ ಭಾಗವೊಂದನ್ನು ಒಳಗೊಂಡಿರುವ ಮತಗಟ್ಟೆಯಲ್ಲಿ 729 ನೋಂದಾಯಿತ ಮತದಾರರಿದ್ದರು. ಆದರೆ, ಆಗಸ್ಟ್‌ನಲ್ಲಿ ಕರಡು...

ಬಂಗಾಳದ ನಾನ್‌ವೆಜ್ ವಿವಾದ: ಬಾಗೇಶ್ವರ್ ಬಾಬಾ ಹೇಳಿಕೆಗೆ ಹಿಂದೂ ವಲಯದಲ್ಲೇ ವಿರೋಧ; ‘ಹಿಂದೂ ಧರ್ಮ ಆಹಾರದ ಕೋಡ್ ಅಲ್ಲ!

ದುರ್ಗಾ ಪೂಜೆಯ ಸಂದರ್ಭದಲ್ಲಿ ಮೀನು, ಮಾಂಸ ಸೇವನೆ ಹಾಗೂ ಮಾರಾಟದ ವಿರುದ್ಧ ಬಾಗೇಶ್ವರ್ ಧಾಮದ ಮುಖ್ಯಸ್ಥ ಧೀರೇಂದ್ರ ಕೃಷ್ಣ ಶಾಸ್ತ್ರಿ ನೀಡಿದ್ದ ಹೇಳಿಕೆ ಪಶ್ಚಿಮ ಬಂಗಾಳದಲ್ಲಿ ರಾಜಕೀಯ ವಿವಾದ ಹುಟ್ಟುಹಾಕಿದ ಬೆನ್ನಲ್ಲೇ, ಇದೀಗ...

SIR: ಪಂಜಾಬ್‌ ಮತದಾರರ ಪಟ್ಟಿಯಿಂದ ಡಿಲೀಟ್ ಆಗಿದ್ದ ರಾಘವ್ ಚಡ್ಡಾ ಹೆಸರು ದೆಹಲಿಯಲ್ಲಿ ಎಂಟ್ರಿ!

ರಾಜ್ಯಸಭಾ ಸಂಸದ ರಾಘವ್ ಚಡ್ಡಾ ಅವರ ಹೆಸರು ಪಂಜಾಬ್‌ನ ಕರಡು ಮತದಾರರ ಪಟ್ಟಿಯಿಂದ ತೆಗೆದುಹಾಕಲ್ಪಟ್ಟ ಕೆಲವೇ ದಿನಗಳಲ್ಲಿ, ದೆಹಲಿಯ ಮತದಾರರ ಪಟ್ಟಿಯಲ್ಲಿ ದಿಢೀರನೆ ಪ್ರತ್ಯಕ್ಷವಾಗಿರುವುದು ದೇಶಾದ್ಯಂತ ಭಾರಿ ರಾಜಕೀಯ ಚರ್ಚೆಗೆ ಕಾರಣವಾಗಿದೆ. ಈ...

ರಾಜ್ಯ ಕಾಂಗ್ರೆಸ್‌ಗೆ 35 ನೂತನ ಜಿಲ್ಲಾಧ್ಯಕ್ಷರ ನೇಮಕ; ಹೈಕಮಾಂಡ್ ಪಟ್ಟಿಯಲ್ಲಿ ಮಹಿಳೆಯರಿಗಿಲ್ಲ ಪ್ರಾತಿನಿಧ್ಯ!

ಕರ್ನಾಟಕ ಕಾಂಗ್ರೆಸ್‌ನ ಬಹುನಿರೀಕ್ಷಿತ ಜಿಲ್ಲಾ ಪುನರ್‌ರಚನೆಗೆ ಕೊನೆಗೂ ಚಾಲನೆ ದೊರೆತಿದ್ದು, ರಾಜ್ಯದ 35 ಸಾಂಸ್ಥಿಕ ಜಿಲ್ಲಾ ಕಾಂಗ್ರೆಸ್ ಸಮಿತಿಗಳಿಗೆ (DCC) ನೂತನ ಅಧ್ಯಕ್ಷರನ್ನು ನೇಮಕ ಮಾಡಲಾಗಿದೆ. ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ....

ತ್ರಿಪುರ| ಬಿಜೆಪಿ ಬೇಡಿಕೆಗೆ ಸ್ಪಂದಿಸಿದ ಇಸಿಐ; ಗ್ರಾಮ ಸಮಿತಿ ಚುನಾವಣೆ ಹಿನ್ನೆಲೆಯಲ್ಲಿ ಎಸ್‌ಐಆರ್ ಪ್ರಕ್ರಿಯೆ ಮುಂದೂಡಿಕೆ

ಆಡಳಿತರೂಢ ಭಾರತೀಯ ಜನತಾ ಪಕ್ಷ (ಬಿಜೆಪಿ) ಸೇರಿದಂತೆ ವಿವಿಧ ರಾಜಕೀಯ ಪಕ್ಷಗಳ ಬೇಡಿಕೆಗೆ ಸ್ಪಂದಿಸಿರುವ ಭಾರತೀಯ ಚುನಾವಣಾ ಆಯೋಗ (ಇಸಿಐ), ರಾಜ್ಯದ ಬುಡಕಟ್ಟು ಪ್ರದೇಶಗಳಲ್ಲಿ ಸೆಪ್ಟೆಂಬರ್ 28 ರಂದು ನಡೆಯಲಿರುವ ಗ್ರಾಮ ಸಮಿತಿ...

SIR: ಸ್ವತಃ BLO ಗೆ ನೋಟಿಸ್ ನೀಡಿದ ಚುನಾವಣಾ ಆಯೋಗ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯ ತಾಂತ್ರಿಕ ಎಡವಟ್ಟುಗಳು ಮತ್ತು ಗೊಂದಲಗಳು ಪ್ರತಿದಿನವೂ ಒಂದಲ್ಲ ಒಂದು ವಿಲಕ್ಷಣ ಘಟನೆಗಳಿಗೆ ಕಾರಣವಾಗುತ್ತಿದ್ದು, ಇದೀಗ ಸ್ವತಃ ಮತದಾರರ ಪಟ್ಟಿ ಪರಿಷ್ಕರಣೆ...

‘ಎಸ್‌ಐಆರ್ ಪ್ರಜಾಪ್ರಭುತ್ವಕ್ಕೆ ವಂಚನೆ’: 2025ಕ್ಕೆ ಹೋಲಿಸಿದರೆ ದೆಹಲಿಯ 58.60 ಲಕ್ಷ ಮತದಾರರ ಹೆಸರುಗಳು ಮಾಯ: ನಾಗರೀಕ ಸಂಘಟನೆಗಳ ಆಕ್ರೋಶ

ನವದೆಹಲಿ: ದೆಹಲಿಯಲ್ಲಿ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆ ಮತದಾರರ ಪಟ್ಟಿಯ ಶುದ್ಧೀಕರಣದ ಸಾಮಾನ್ಯ ಆಡಳಿತಾತ್ಮಕ ಕ್ರಮವಲ್ಲ, ಬದಲಾಗಿ ನಾಗರಿಕರ ಮತದಾನದ ಹಕ್ಕಿನ ಮೇಲೆ ಗಂಭೀರ ಪರಿಣಾಮ ಬೀರುವ...