Homeಮುಖಪುಟ'ಅಧಿಕಾರ ಶಾಶ್ವತವಲ್ಲ; ನಮ್ಮ ಸಿದ್ಧಾಂತ ಶಾಶ್ವತ..'; ಅಜಿತ್ ವಿರುದ್ಧ ಶರದ್ ಪವಾರ್‌ ಕಿಡಿ

‘ಅಧಿಕಾರ ಶಾಶ್ವತವಲ್ಲ; ನಮ್ಮ ಸಿದ್ಧಾಂತ ಶಾಶ್ವತ..’; ಅಜಿತ್ ವಿರುದ್ಧ ಶರದ್ ಪವಾರ್‌ ಕಿಡಿ

- Advertisement -
- Advertisement -

ತಮ್ಮ ಸಹೋದರನ ಪುತ್ರ ಅಜಿತ್ ಪವಾರ್‌ಗೆ ಪಕ್ಷದ ಹೆಸರು ಮತ್ತು ಚಿಹ್ನೆಯನ್ನು ನೀಡುವ ಭಾರತದ ಚುನಾವಣಾ ಆಯೋಗ (ಇಸಿಐ) ಮತ್ತು ಮಹಾರಾಷ್ಟ್ರ ವಿಧಾನಸಭಾ ಸ್ಪೀಕರ್ ರಾಹುಲ್ ನಾರ್ವೇಕರ್ ಅವರ ನಿರ್ಧಾರದ ಬಗ್ಗೆ ನ್ಯಾಷನಲಿಸ್ಟ್ ಕಾಂಗ್ರೆಸ್ ಪಕ್ಷದ (ಎನ್‌ಸಿಪಿ) ಸಂಸ್ಥಾಪಕ ಶರದ್ ಪವಾರ್ ಅವರು ಶನಿವಾರ ಪ್ರತಿಕ್ರಿಯಿಸಿದ್ದಾರೆ. ‘ರಾಜಕೀಯ ಪಕ್ಷ ಕಟ್ಟಿದವರನ್ನು ಪಕ್ಷದಿಂದಲೇ ತೆಗೆದುಹಾಕುವಂಥ ಘಟನೆ ಹಿಂದೆಂದೂ ನಡೆದಿರಲಿಲ್ಲ’ ಎಂದು ಶರದ್ ಪವಾರ್ ಆಕ್ರೋಶ ಹೊರಹಾಕಿದ್ದಾರೆ.

‘ಈ ನಿರ್ಧಾರವು ಕಾನೂನಿಗೆ ವಿರುದ್ಧವಾಗಿದೆ’ ಎಂದು ಪ್ರತಿಪಾದಿಸಿದ ಎನ್‌ಸಿಪಿ ಸಂಸ್ಥಾಪಕರು, ಇಸಿಐ ಆದೇಶದ ವಿರುದ್ಧ ಸುಪ್ರೀಂ ಕೋರ್ಟ್‌ಗೆ ಮೊರೆ ಹೋಗಿರುವುದಾಗಿ ಹೇಳಿದರು.

‘ರಾಜಕೀಯ ಪಕ್ಷ ಕಟ್ಟಿದವರನ್ನು ಪಕ್ಷದಿಂದ ತೆಗೆದು ಹಾಕಿರುವ ಘಟನೆ ಹಿಂದೆಂದೂ ನಡೆದಿರಲಿಲ್ಲ. ಅಷ್ಟೇ ಅಲ್ಲ ಪಕ್ಷದ ಚಿಹ್ನೆಯನ್ನೂ ಕಸಿದುಕೊಳ್ಳಲಾಗಿದೆ. ಈ ನಿರ್ಧಾರ ಕಾನೂನಿಗೆ ಅನುಗುಣವಾಗಿಲ್ಲ. ಈ ವಿಚಾರದಲ್ಲಿ ನಾವು ಸುಪ್ರೀಂ ಕೋರ್ಟ್‌ ಮೆಟ್ಟಿಲೇರಿದ್ದೇವೆ. ನಾವು ನಮ್ಮ ಸಾರ್ವಜನಿಕ ಸಂಪರ್ಕವನ್ನು ಮತ್ತಷ್ಟು ಹೆಚ್ಚಿಸಬೇಕಾಗಿದೆ’ ಎಂದು ಶರದ್ ಪವಾರ್ ಹೇಳಿದ್ದಾರೆ.

‘ಎನ್‌ಸಿಪಿ ಹೆಸರು ಮತ್ತು ಚಿಹ್ನೆಯನ್ನು ಕಳೆದುಕೊಳ್ಳುವ ಬಗ್ಗೆ ನಾವು ಚಿಂತಿಸುವುದಿಲ್ಲ’ ಎಂದು ಹೇಳುವ ಮೂಲಕ ಶರದ್ ಪವಾರ್ ಅವರು  ಅವರು ಜೂನಿಯರ್ ಪವಾರ್ ಅವರನ್ನು ತರಾಟೆಗೆ ತೆಗೆದುಕೊಂಡರು. ‘ಆದರೆ, ಜನರು ಬೇರೆ ದಾರಿಯಲ್ಲಿ ಹೋಗಲು ಆಯ್ಕೆ ಮಾಡಿದವರನ್ನು ಒಪ್ಪುವುದಿಲ್ಲ’ ಎಂದು ಪ್ರತಿಪಾದಿಸಿದರು.

ಸತಾರಾದಲ್ಲಿ ಸಾರ್ವಜನಿಕ ಸಭೆಯನ್ನುದ್ದೇಶಿಸಿ ಮಾತನಾಡಿದ ಶರದ್ ಪವಾರ್, ‘ಅಧಿಕಾರ ಬರುತ್ತದೆ ಮತ್ತು ಹೋಗುತ್ತದೆ ಆದರೆ ಸಿದ್ಧಾಂತ, ನೀತಿಗಳು ಮತ್ತು ದೇಶವನ್ನು ಮುನ್ನಡೆಸುವ ಚಿಂತನೆ ಶಾಶ್ವತ’ ಎಂದು ತಿರುಗೇಟು ಕೊಟ್ಟರು.

‘ಈ ಬೆಳವಣಿಗೆಯಿಂದ ನಮ್ಮ ಕೆಲವು ಸಹೋದ್ಯೋಗಿಗಳು ವಿಚಲಿತರಾದರು, ಕೆಲವರು ಪಕ್ಷವನ್ನು ಕಿತ್ತುಕೊಂಡರು, ಕೆಲವರು ಚಿಹ್ನೆಯನ್ನು ಕಿತ್ತುಕೊಂಡರು, ಇದೆಲ್ಲದರ ಬಗ್ಗೆ ನಾನು ಎಂದಿಗೂ ಚಿಂತಿಸುವುದಿಲ್ಲ. ಕೆಲವರು ಸಿದ್ಧಾಂತವನ್ನು ತೊರೆದು ಬೇರೆ ದಾರಿಯಲ್ಲಿ ಹೋಗಲು ಆಯ್ಕೆ ಮಾಡಿದರು. ಆದರೆ, ಜನರು ಈ ಕ್ರಮವನ್ನು ಮೆಚ್ಚಲಿಲ್ಲ’ ಎಂದರು.

ಅಜಿತ್ ಪವಾರ್ ಬಣವನ್ನು ‘ನೈಜ’ ಎನ್‌ಸಿಪಿ ಎಂದು ಅಧಿಕೃತವಾಗಿ ಗುರುತಿಸುವ ಇಸಿಐ ಆದೇಶದ ವಿರುದ್ಧದ ಅರ್ಜಿಯ ತುರ್ತು ವಿಚಾರಣೆಯನ್ನು ಅವರು ಸುಪ್ರೀಂ ಕೋರ್ಟ್‌ನಲ್ಲಿ ಕೋರಿದ್ದಾರೆ. ಅರ್ಜಿಯ ಆರಂಭಿಕ ಪಟ್ಟಿಯನ್ನು ಸಹ ಉನ್ನತ ನ್ಯಾಯಾಲಯ ಪರಿಗಣಿಸಿದೆ.

ಶರದ್ ಪವಾರ್ ನೇತೃತ್ವದ ಎನ್‌ಸಿಪಿಯಿಂದ ಜುಲೈ 2023 ರಲ್ಲಿ ಎರಡು ಬಣಗಳಾಗಿ ಬೇರ್ಪಟ್ಟಾಗ, ಅಜಿತ್ ಪವಾರ್ ನೇತೃತ್ವದ ಗುಂಪು ನಿಜವಾದ ಎನ್‌ಸಿಪಿ ಎಂದು ನಾರ್ವೇಕರ್ ಹೇಳಿದ್ದಾರೆ.

ಈ ವಾರದ ಆರಂಭದಲ್ಲಿ ಚುನಾವಣಾ ಆಯೋಗವು ಅಜಿತ್ ಪವಾರ್ ಅವರ ಬಣ ನಿಜವಾದ ಎನ್‌ಸಿಪಿ ಎಂದು ತೀರ್ಪು ನೀಡಿತು. ಅಜಿತ್ ಬಣಕ್ಕೆ ‘ಗಡಿಯಾರ’ ಚಿಹ್ನೆಯನ್ನು ನೀಡಿತು. ಮತ್ತೊಂದೆಡೆ, ರಾಜ್ಯಸಭಾ ಚುನಾವಣೆಯನ್ನು ಗಮನದಲ್ಲಿಟ್ಟುಕೊಂಡು ತನ್ನ ಹೊಸ ರಾಜಕೀಯ ರಚನೆಯನ್ನು ಹೆಸರಿಸಲು ಚುನಾವಣಾ ಸಂಸ್ಥೆ ಶರದ್ ಪವಾರ್ ಅವರ ಬಣಕ್ಕೆ ವಿಶೇಷ ರಿಯಾಯಿತಿಯನ್ನೂ ನೀಡಿತು.

ಅಜಿತ್ ಪವಾರ್ ಮತ್ತು ಎಂಟು ಶಾಸಕರು ಕಳೆದ ವರ್ಷ ಜುಲೈನಲ್ಲಿ ಏಕನಾಥ್ ಶಿಂಧೆ ಸರ್ಕಾರಕ್ಕೆ ಸೇರ್ಪಡೆಗೊಂಡರು, ಇದು ಶರದ್ ಪವಾರ್ ಸ್ಥಾಪಿಸಿದ ಎನ್‌ಸಿಪಿ ವಿಭಜನೆಗೆ ಕಾರಣವಾಯಿತು.

ಇದನ್ನೂ ಓದಿ; ‘ಮೈತ್ರಿ ಬಾಗಿಲು ತೆರೆದಿದೆ’ ಎಂಬ ಲಾಲೂ ಹೇಳಿಕೆ; ಸಿಎಂ ನಿತೀಶ್‌ಕುಮಾರ್ ಪ್ರತಿಕ್ರಿಯೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ದೆಹಲಿಗೆ ಬಂದಿಳಿದ ಕಾಕ್ರೋಚ್ ಪಾರ್ಟಿ ಸಂಸ್ಥಾಪಕ ಅಭಿಜೀತ್ ದೀಪ್ಕೆ : ಜಂತರ್‌ ಮಂತರ್‌ನಲ್ಲಿ ಪ್ರತಿಭಟಿಸಲು ಪೊಲೀಸರಿಂದ ಅನುಮತಿ

ಶನಿವಾರ (ಜೂ.6) ಬೆಳಿಗ್ಗೆ ದೆಹಲಿಗೆ ಆಗಮಿಸಿದ ಕಾಕ್ರೋಚ್ ಜನತಾ ಪಾರ್ಟಿಯ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದೀಪ್ಕೆ, ಪ್ರತಿಭಟನೆಗೆ ದೆಹಲಿ ಪೊಲೀಸರು ಅನುಮತಿ ನೀಡಿದ್ದಾರೆ ಎಂದು ತಿಳಿಸಿದ್ದು, ಯೋಜಿತ ಆಂದೋಲನಕ್ಕಾಗಿ ನೇರವಾಗಿ ಜಂತರ್ ಮಂತರ್‌ನಲ್ಲಿ...

ಜಾಗತಿಕವಾಗಿ ಮೂರು ವರ್ಷಗಳಲ್ಲಿ 600 ಪರಿಸರ ರಕ್ಷಕರ ಹತ್ಯೆ: ವಿಶ್ವಸಂಸ್ಥೆ ತೀವ್ರ ಕಳವಳ: ಜಾಗತಿಕ ತಾಪಮಾನಕ್ಕೆ ಸಾಕ್ಷಿಯಾಗುತ್ತಿರುವ ಭಾರತ

ಜೂನ್ 5 ವಿಶ್ವ ಪರಿಸರ ದಿನ. ಜಗತ್ತಿನಾದ್ಯಂತ ಗಿಡ ನೆಡುವ, ಹಸಿರು ಭಾಷಣ ಬಿಗಿಯುವ ಮತ್ತು ಪರಿಸರ ಕಾಳಜಿಯ ಸಡಗರದ ಆಚರಣೆಗಳು ಎಲ್ಲೆಡೆ ವಿಭಿನ್ನ ರೀತಿಗಳಲ್ಲಿ ವಿಜೃಂಭಿಸುತ್ತಿವೆ. ಆದರೆ, ಇದೇ ಹೊತ್ತಿನಲ್ಲಿ ವಿಶ್ವಸಂಸ್ಥೆಯು...

ಮಣಿಪುರ ಎಸ್‌ಐಆರ್ ವಿರೋಧಿಸಿದ ಕುಕಿ-ಝೋ ಗುಂಪುಗಳು

ಮಣಿಪುರ ರಾಜ್ಯದಲ್ಲಿ ಪ್ರಸ್ತುತ ನಡೆಯುತ್ತಿರುವ ಮತದಾರರ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆ ವಿರುದ್ಧ ಪ್ರತಿಭಟನೆ ವ್ಯಕ್ತವಾಗಿದೆ. ಕುಕಿ-ಝೋ ಬುಡಕಟ್ಟು ಜನಾಂಗದ ಸಾಂಪ್ರದಾಯಿಕ ಗುಂಪಾದ ಕುಕಿ ಇನ್ಪಿ ಮಣಿಪುರ (ಕೆಐಎಂ) ಮತದಾರರ ಪಟ್ಟಿ...

ಹೇಗಿತ್ತು ‘ಕಾಕ್ರೋಚ್ ಜನತಾ ಪಕ್ಷ’ದ ಮೊದಲ ಸುದ್ದಿಗೋಷ್ಠಿ…? ಧರ್ಮೇಂದ್ರ ಪ್ರಧಾನ್‌ ರಾಜೀನಾಮೆಗೆ ಕರೆ

ಜೂನ್ 6, 2026 ರಂದು ಜಂತರ್ ಮಂತರ್‌ನಲ್ಲಿ ನಡೆಯಲಿರುವ 'ಶಾಂತಿಯುತ ಪ್ರತಿಭಟನೆ'ಗೆ ಮುನ್ನ ಜಿರಳೆ ಜನತಾ ಪಕ್ಷ (ಸಿಜೆಪಿ) ತನ್ನ ಮೊದಲ ಪತ್ರಿಕಾಗೋಷ್ಠಿಯನ್ನು ನಡೆಸಿದೆ. ಬುಧವಾರ ಸಂಜೆ (ಜೂ.3) ಸಿಜೆಪಿಯ ಮೂವರು ವಕ್ತಾರರು...

‘ಇದು ಆತ್ಮಹತ್ಯೆಯಲ್ಲ, ಮೋದಿ ಸರ್ಕಾರದ ಭ್ರಷ್ಟ ವ್ಯವಸ್ಥೆ ಮಾಡಿದ ಕೊಲೆ’: ನೀಟ್ ಆಕಾಂಕ್ಷಿಯ ಸಾವಿಗೆ ರಾಹುಲ್ ಗಾಂಧಿ ಆಕ್ರೋಶ

ದೇಶದ ವೈದ್ಯಕೀಯ ಪ್ರವೇಶ ಪರೀಕ್ಷೆಯಾದ ‘ನೀಟ್-ಯುಜಿ’ (NEET-UG) ವಿವಾದ ಮತ್ತು ವಿದ್ಯಾರ್ಥಿಗಳ ಸಾವುಗಳು ಭಾರತದ ಒಟ್ಟಾರೆ ಶಿಕ್ಷಣ ವ್ಯವಸ್ಥೆಯ ದಯನೀಯ ಸ್ಥಿತಿಗೆ ಕನ್ನಡಿ ಹಿಡಿದಿವೆ. ಪರೀಕ್ಷಾ ಅಕ್ರಮಗಳು, ಪ್ರಶ್ನೆ ಪತ್ರಿಕೆ ಸೋರಿಕೆ ಮತ್ತು...

ತಕ್ಷಣವೇ ‘SIR ಹೆಲ್ಪ್‌ ಡೆಸ್ಕ್‌’ ಸ್ಥಾಪಿಸುವಂತೆ ಅಧಿಕಾರಿಗಳಿಗೆ ಸಿಎಂ ಸೂಚನೆ

ರಾಜ್ಯದಲ್ಲಿ ಭಾರತೀಯ ಚುನಾವಣಾ ಆಯೋಗದಿಂದ ನಡೆಯುತ್ತಿರುವ ಎಸ್‌ಐಆರ್ (Special Electoral Roll Purification) ಪ್ರಕ್ರಿಯೆ ಸಂದರ್ಭದಲ್ಲಿ ರಾಜ್ಯದ ಯಾವುದೇ ಪ್ರಜೆಯೂ ತನ್ನ ಅತ್ಯಮೂಲ್ಯವಾದ ಮತದಾನದ ಹಕ್ಕನ್ನು ಕಳೆದುಕೊಳ್ಳಬಾರದು ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್...

ವಿಷಾಹಾರಕ್ಕೆ ಜಾಗತಿಕವಾಗಿ ವರ್ಷಕ್ಕೆ 15 ಲಕ್ಷ ಜನರು ಬಲಿ: ಮಕ್ಕಳಿಗೆ ಹೆಚ್ಚಿನ ಅಪಾಯ: ಭಾರತದ ಸ್ಥಿತಿಯೂ ಆತಂಕಕಾರಿ! 

ನಾವು ದಿನನಿತ್ಯ ಸೇವಿಸುವ ಆಹಾರವೇ ನಮ್ಮ ಜೀವಕ್ಕೆ ಕಂಟಕವಾಗುತ್ತಿದೆಯೇ? ಹೌದು ಎನ್ನುತ್ತದೆ ವಿಶ್ವ ಆರೋಗ್ಯ ಸಂಸ್ಥೆಯ (WHO) ಇತ್ತೀಚಿನ ಆಘಾತಕಾರಿ ವರದಿ. ಜಾಗತಿಕವಾಗಿ ಅಸುರಕ್ಷಿತ ಮತ್ತು ಕಲುಷಿತ ಆಹಾರದ ಸೇವನೆಯಿಂದಾಗಿ ಪ್ರತಿ ವರ್ಷ...

ಡಿಕೆಶಿ ಸಂಪುಟದಲ್ಲಿ ಅಲ್ಪಸಂಖ್ಯಾತರಿಗೆ ಸಿಗುತ್ತಾ ಸೂಕ್ತ ಪ್ರಾತಿನಿಧ್ಯ?

ಮಹತ್ವದ ರಾಜಕೀಯ ಬೆಳವಣಿಗೆಯಲ್ಲಿ ರಾಜ್ಯದ ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ಅವರು ರಾಜೀನಾಮೆ ನೀಡಿ, ಡಿ.ಕೆ ಶಿವಕುಮಾರ್ ಹೊಸ ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಂಡಾಗಿದೆ. ಈ ಮೂಲಕ ಕಳೆದ ಒಂದು ವರ್ಷದಿಂದ ನಡೆಯುತ್ತಿದ್ದ ಸಿಎಂ ಬದಲಾವಣೆಯ...

‘ಕರ್ನಾಟಕದಲ್ಲಿ SIR’ ಮತ ಉಳಿಸಿಕೊಳ್ಳುವಂತೆ ಕಾರ್ಯಕರ್ತರಿಗೆ CM ಡಿ.ಕೆ ಶಿವಕುಮಾರ್ ಕರೆ!

ಕರ್ನಾಟಕ ರಾಜಕಾರಣದಲ್ಲಿ ಹೊಸ ಯುಗ ಆರಂಭವಾಗಿದೆ. ರಾಜ್ಯದ 25ನೇ ಮುಖ್ಯಮಂತ್ರಿಯಾಗಿ ಡಿ.ಕೆ. ಶಿವಕುಮಾರ್ ಅವರು ಪ್ರಮಾಣವಚನ ಸ್ವೀಕರಿಸಿದ್ದಾರೆ. ಅಧಿಕಾರ ವಹಿಸಿಕೊಂಡ ಬೆನ್ನಲ್ಲೇ ಕೆಲಸ ಮಾಡದಿರುವ ಸಚಿವ ಮತ್ತು ಶಾಸಕರನ್ನು ಸುಮ್ಮನೆ ಬಿಡುವುದಿಲ್ಲ ಎಂದು...

ವೋಟರ್ ಐಡಿ, ಆಧಾರ್ ಇದ್ದರೂ ನೆಮ್ಮದಿ ಇಲ್ಲ, ಪಶ್ಚಿಮ ಬಂಗಾಳದಲ್ಲಿ ಶುರುವಾಯ್ತು ‘ಹೋಲ್ಡಿಂಗ್ ಸೆಂಟರ್’ಗಳ ಭಯ

ಪಶ್ಚಿಮ ಬಂಗಾಳದಲ್ಲಿ "ಯಾರು ಈಗಾಗಲೇ ಮತದಾರರ ಪಟ್ಟಿಯಿಂದ ಹೊರಗುಳಿದಿದ್ದಾರೋ ಮತ್ತು ಟ್ರಿಬ್ಯೂನಲ್‌ನ (ನ್ಯಾಯಮಂಡಳಿ) ಅನುಮೋದನೆಗಾಗಿ ಕಾಯುತ್ತಿದ್ದಾರೋ, ಅಂತಹವರಲ್ಲಿ ಹೊಸ ಪೊಲೀಸ್ ವ್ಯವಸ್ಥೆ ಮತ್ತು ಬಂಧನ ಕೇಂದ್ರಗಳು (ಡಿಟೆಂಷನ್ ಸೆಂಟರ್) ತಮ್ಮನ್ನು ವಿದೇಶಿಯರಂತೆ ನಡೆಸಿಕೊಳ್ಳಲ್ಪಡಬಹುದು...