Homeಮುಖಪುಟ'ಅಧಿಕಾರ ಶಾಶ್ವತವಲ್ಲ; ನಮ್ಮ ಸಿದ್ಧಾಂತ ಶಾಶ್ವತ..'; ಅಜಿತ್ ವಿರುದ್ಧ ಶರದ್ ಪವಾರ್‌ ಕಿಡಿ

‘ಅಧಿಕಾರ ಶಾಶ್ವತವಲ್ಲ; ನಮ್ಮ ಸಿದ್ಧಾಂತ ಶಾಶ್ವತ..’; ಅಜಿತ್ ವಿರುದ್ಧ ಶರದ್ ಪವಾರ್‌ ಕಿಡಿ

- Advertisement -
- Advertisement -

ತಮ್ಮ ಸಹೋದರನ ಪುತ್ರ ಅಜಿತ್ ಪವಾರ್‌ಗೆ ಪಕ್ಷದ ಹೆಸರು ಮತ್ತು ಚಿಹ್ನೆಯನ್ನು ನೀಡುವ ಭಾರತದ ಚುನಾವಣಾ ಆಯೋಗ (ಇಸಿಐ) ಮತ್ತು ಮಹಾರಾಷ್ಟ್ರ ವಿಧಾನಸಭಾ ಸ್ಪೀಕರ್ ರಾಹುಲ್ ನಾರ್ವೇಕರ್ ಅವರ ನಿರ್ಧಾರದ ಬಗ್ಗೆ ನ್ಯಾಷನಲಿಸ್ಟ್ ಕಾಂಗ್ರೆಸ್ ಪಕ್ಷದ (ಎನ್‌ಸಿಪಿ) ಸಂಸ್ಥಾಪಕ ಶರದ್ ಪವಾರ್ ಅವರು ಶನಿವಾರ ಪ್ರತಿಕ್ರಿಯಿಸಿದ್ದಾರೆ. ‘ರಾಜಕೀಯ ಪಕ್ಷ ಕಟ್ಟಿದವರನ್ನು ಪಕ್ಷದಿಂದಲೇ ತೆಗೆದುಹಾಕುವಂಥ ಘಟನೆ ಹಿಂದೆಂದೂ ನಡೆದಿರಲಿಲ್ಲ’ ಎಂದು ಶರದ್ ಪವಾರ್ ಆಕ್ರೋಶ ಹೊರಹಾಕಿದ್ದಾರೆ.

‘ಈ ನಿರ್ಧಾರವು ಕಾನೂನಿಗೆ ವಿರುದ್ಧವಾಗಿದೆ’ ಎಂದು ಪ್ರತಿಪಾದಿಸಿದ ಎನ್‌ಸಿಪಿ ಸಂಸ್ಥಾಪಕರು, ಇಸಿಐ ಆದೇಶದ ವಿರುದ್ಧ ಸುಪ್ರೀಂ ಕೋರ್ಟ್‌ಗೆ ಮೊರೆ ಹೋಗಿರುವುದಾಗಿ ಹೇಳಿದರು.

‘ರಾಜಕೀಯ ಪಕ್ಷ ಕಟ್ಟಿದವರನ್ನು ಪಕ್ಷದಿಂದ ತೆಗೆದು ಹಾಕಿರುವ ಘಟನೆ ಹಿಂದೆಂದೂ ನಡೆದಿರಲಿಲ್ಲ. ಅಷ್ಟೇ ಅಲ್ಲ ಪಕ್ಷದ ಚಿಹ್ನೆಯನ್ನೂ ಕಸಿದುಕೊಳ್ಳಲಾಗಿದೆ. ಈ ನಿರ್ಧಾರ ಕಾನೂನಿಗೆ ಅನುಗುಣವಾಗಿಲ್ಲ. ಈ ವಿಚಾರದಲ್ಲಿ ನಾವು ಸುಪ್ರೀಂ ಕೋರ್ಟ್‌ ಮೆಟ್ಟಿಲೇರಿದ್ದೇವೆ. ನಾವು ನಮ್ಮ ಸಾರ್ವಜನಿಕ ಸಂಪರ್ಕವನ್ನು ಮತ್ತಷ್ಟು ಹೆಚ್ಚಿಸಬೇಕಾಗಿದೆ’ ಎಂದು ಶರದ್ ಪವಾರ್ ಹೇಳಿದ್ದಾರೆ.

‘ಎನ್‌ಸಿಪಿ ಹೆಸರು ಮತ್ತು ಚಿಹ್ನೆಯನ್ನು ಕಳೆದುಕೊಳ್ಳುವ ಬಗ್ಗೆ ನಾವು ಚಿಂತಿಸುವುದಿಲ್ಲ’ ಎಂದು ಹೇಳುವ ಮೂಲಕ ಶರದ್ ಪವಾರ್ ಅವರು  ಅವರು ಜೂನಿಯರ್ ಪವಾರ್ ಅವರನ್ನು ತರಾಟೆಗೆ ತೆಗೆದುಕೊಂಡರು. ‘ಆದರೆ, ಜನರು ಬೇರೆ ದಾರಿಯಲ್ಲಿ ಹೋಗಲು ಆಯ್ಕೆ ಮಾಡಿದವರನ್ನು ಒಪ್ಪುವುದಿಲ್ಲ’ ಎಂದು ಪ್ರತಿಪಾದಿಸಿದರು.

ಸತಾರಾದಲ್ಲಿ ಸಾರ್ವಜನಿಕ ಸಭೆಯನ್ನುದ್ದೇಶಿಸಿ ಮಾತನಾಡಿದ ಶರದ್ ಪವಾರ್, ‘ಅಧಿಕಾರ ಬರುತ್ತದೆ ಮತ್ತು ಹೋಗುತ್ತದೆ ಆದರೆ ಸಿದ್ಧಾಂತ, ನೀತಿಗಳು ಮತ್ತು ದೇಶವನ್ನು ಮುನ್ನಡೆಸುವ ಚಿಂತನೆ ಶಾಶ್ವತ’ ಎಂದು ತಿರುಗೇಟು ಕೊಟ್ಟರು.

‘ಈ ಬೆಳವಣಿಗೆಯಿಂದ ನಮ್ಮ ಕೆಲವು ಸಹೋದ್ಯೋಗಿಗಳು ವಿಚಲಿತರಾದರು, ಕೆಲವರು ಪಕ್ಷವನ್ನು ಕಿತ್ತುಕೊಂಡರು, ಕೆಲವರು ಚಿಹ್ನೆಯನ್ನು ಕಿತ್ತುಕೊಂಡರು, ಇದೆಲ್ಲದರ ಬಗ್ಗೆ ನಾನು ಎಂದಿಗೂ ಚಿಂತಿಸುವುದಿಲ್ಲ. ಕೆಲವರು ಸಿದ್ಧಾಂತವನ್ನು ತೊರೆದು ಬೇರೆ ದಾರಿಯಲ್ಲಿ ಹೋಗಲು ಆಯ್ಕೆ ಮಾಡಿದರು. ಆದರೆ, ಜನರು ಈ ಕ್ರಮವನ್ನು ಮೆಚ್ಚಲಿಲ್ಲ’ ಎಂದರು.

ಅಜಿತ್ ಪವಾರ್ ಬಣವನ್ನು ‘ನೈಜ’ ಎನ್‌ಸಿಪಿ ಎಂದು ಅಧಿಕೃತವಾಗಿ ಗುರುತಿಸುವ ಇಸಿಐ ಆದೇಶದ ವಿರುದ್ಧದ ಅರ್ಜಿಯ ತುರ್ತು ವಿಚಾರಣೆಯನ್ನು ಅವರು ಸುಪ್ರೀಂ ಕೋರ್ಟ್‌ನಲ್ಲಿ ಕೋರಿದ್ದಾರೆ. ಅರ್ಜಿಯ ಆರಂಭಿಕ ಪಟ್ಟಿಯನ್ನು ಸಹ ಉನ್ನತ ನ್ಯಾಯಾಲಯ ಪರಿಗಣಿಸಿದೆ.

ಶರದ್ ಪವಾರ್ ನೇತೃತ್ವದ ಎನ್‌ಸಿಪಿಯಿಂದ ಜುಲೈ 2023 ರಲ್ಲಿ ಎರಡು ಬಣಗಳಾಗಿ ಬೇರ್ಪಟ್ಟಾಗ, ಅಜಿತ್ ಪವಾರ್ ನೇತೃತ್ವದ ಗುಂಪು ನಿಜವಾದ ಎನ್‌ಸಿಪಿ ಎಂದು ನಾರ್ವೇಕರ್ ಹೇಳಿದ್ದಾರೆ.

ಈ ವಾರದ ಆರಂಭದಲ್ಲಿ ಚುನಾವಣಾ ಆಯೋಗವು ಅಜಿತ್ ಪವಾರ್ ಅವರ ಬಣ ನಿಜವಾದ ಎನ್‌ಸಿಪಿ ಎಂದು ತೀರ್ಪು ನೀಡಿತು. ಅಜಿತ್ ಬಣಕ್ಕೆ ‘ಗಡಿಯಾರ’ ಚಿಹ್ನೆಯನ್ನು ನೀಡಿತು. ಮತ್ತೊಂದೆಡೆ, ರಾಜ್ಯಸಭಾ ಚುನಾವಣೆಯನ್ನು ಗಮನದಲ್ಲಿಟ್ಟುಕೊಂಡು ತನ್ನ ಹೊಸ ರಾಜಕೀಯ ರಚನೆಯನ್ನು ಹೆಸರಿಸಲು ಚುನಾವಣಾ ಸಂಸ್ಥೆ ಶರದ್ ಪವಾರ್ ಅವರ ಬಣಕ್ಕೆ ವಿಶೇಷ ರಿಯಾಯಿತಿಯನ್ನೂ ನೀಡಿತು.

ಅಜಿತ್ ಪವಾರ್ ಮತ್ತು ಎಂಟು ಶಾಸಕರು ಕಳೆದ ವರ್ಷ ಜುಲೈನಲ್ಲಿ ಏಕನಾಥ್ ಶಿಂಧೆ ಸರ್ಕಾರಕ್ಕೆ ಸೇರ್ಪಡೆಗೊಂಡರು, ಇದು ಶರದ್ ಪವಾರ್ ಸ್ಥಾಪಿಸಿದ ಎನ್‌ಸಿಪಿ ವಿಭಜನೆಗೆ ಕಾರಣವಾಯಿತು.

ಇದನ್ನೂ ಓದಿ; ‘ಮೈತ್ರಿ ಬಾಗಿಲು ತೆರೆದಿದೆ’ ಎಂಬ ಲಾಲೂ ಹೇಳಿಕೆ; ಸಿಎಂ ನಿತೀಶ್‌ಕುಮಾರ್ ಪ್ರತಿಕ್ರಿಯೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಂವಿಧಾನ ಬದಲಿಸಿ ಮನುಸ್ಮೃತಿ ತರಲು SIR ಷಡ್ಯಂತ್ರ: ನಟ ಕಿಶೋರ್

ದೇಶದ ಬಹುಕೋಟಿ ಉದ್ಯಮಿ ಗೌತಮ್ ಅದಾನಿಯದ್ದೇ ಇರಲಿ ಅಥವಾ ಒಬ್ಬ ಬಡ ರೈತನದ್ದೇ ಇರಲಿ, ಪ್ರಜಾಪ್ರಭುತ್ವದಲ್ಲಿ ಎಲ್ಲರ ಮತವೂ ಒಂದೇ ಸಮ. ಪ್ರಜೆಗಳನ್ನೆಲ್ಲ ಸಮಾನವಾಗಿ ಕಾಣುವ ಏಕೈಕ ಅಸ್ತ್ರ ಎಂದರೆ ಅದು ಮತದಾನದ...

Nepal: ಭೀಕರ ಪ್ರವಾಹಕ್ಕೆ ಸವಾಲೆಸೆದು ನಿಂತ ‘ಗ್ರೀನ್ ಹೌಸ್’ ಸ್ಟೋರಿ

'ನಮ್ಮ ಬದುಕು ಇಷ್ಟಕ್ಕೇ ಅಂತ್ಯವಾಯಿತು ಎನಿಸುವ ಕ್ಷಣಗಳು ಎದುರಾದಾಗ ಮನಸ್ಸಿನಲ್ಲಿ ಏನು ಓಡಬಹುದು? ಪ್ರವಾಹ ಬಂದಾಗ ನನಗೂ ಅದೇ ಅನಿಸಿತ್ತು' ಇದು ನೇಪಾಳದ ನುವಾಕೋಟ್ ಜಿಲ್ಲೆಯ ತ್ರಿಶೂಲಿ ನದಿಯಲ್ಲಿ ಹರಿದುಬಂದ ಭೀಕರ ಪ್ರವಾಹದಿಂದ...

NEET: ದೇಶಾದ್ಯಂತ ಪ್ರತಿಭಟನಾಕಾರರ ವಿರುದ್ದ ದಾಖಲಾಗಿದ್ದ ಎಲ್ಲಾ FIRಗಳನ್ನು ರದ್ದುಗೊಳಿಸಿದ ಸುಪ್ರೀಂ ಕೋರ್ಟ್

ಮರುಪರೀಕ್ಷೆ ಮತ್ತು ಪ್ರಶ್ನೆ ಪತ್ರಿಕೆ ಸೋರಿಕೆ ವಿರೋಧಿ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ಯ (CJP) ಪ್ರತಿಭಟನಾಕಾರರ ವಿರುದ್ಧ ದಾಖಲಾಗಿದ್ದ ಎಲ್ಲಾ FIR ಗಳನ್ನು ಸುಪ್ರೀಂ ಕೋರ್ಟ್ ಮಂಗಳವಾರ ರದ್ದುಗೊಳಿಸಿದೆ. ಕೇಂದ್ರ ಸರ್ಕಾರವು ಈ...

ಚುನಾವಣಾ ಆಯೋಗ ಚಲೋ: ನಟ ಪ್ರಕಾಶ್ ರಾಜ್ ಸೇರಿದಂತೆ ನೂರಾರು SIR ಸಂತ್ರಸ್ತರು, ಹೋರಾಟಗಾರರನ್ನು ವಶಕ್ಕೆ ಪಡೆದ ಪೊಲೀಸರು

ಕರ್ನಾಟಕ ರಾಜ್ಯದ ಅರ್ಹ ಮತದಾರರ ‘ಮತಹರಣ’ ಖಂಡಿಸಿ ‘ಎಸ್‌ಐಆರ್ ವಿರೋಧಿ ಒಕ್ಕೂಟ’ ಹಮ್ಮಿಕೊಂಡಿದ್ದ ‘ಚುನಾವಣಾ ಆಯೋಗ ಚಲೋ’ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ ಬಹುಭಾಷಾ ನಟ ಪ್ರಕಾಶ್ ರಾಜ್, ಕಿಶೋರ್ ಹಾಗೂ ಪ್ರಮುಖ ನಾಯಕರು ಸೇರಿದಂತೆ...

‘ಚುನಾವಣಾ ಆಯೋಗ ಚಲೋ’: ‘ಮುಚ್ಚಿದ ಬಾಗಿಲಿನ ಮಾತುಕತೆ ಬೇಡ, ಎಲ್ಲವೂ ಸಾರ್ವಜನಿಕರ ಮುಂದೆಯೇ ಇತ್ಯರ್ಥವಾಗಬೇಕು’: ನೂರ್ ಶ್ರೀಧರ್ ಆಗ್ರಹ

ಬೆಂಗಳೂರು: ಕರ್ನಾಟಕದಲ್ಲಿ ನಡೆದ ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯು ರಾಜ್ಯದ ಪ್ರಜಾಸತ್ತಾತ್ಮಕ ವ್ಯವಸ್ಥೆಯಲ್ಲಿ ಬೃಹತ್ ಕಳವಳವನ್ನು ಸೃಷ್ಟಿಸಿದೆ. ಕೇಂದ್ರ ಚುನಾವಣಾ ಆಯೋಗವು ಬಿಡುಗಡೆ ಮಾಡಿರುವ ನೂತನ ಕರಡು ಮತದಾರರ...

SIR ಎಂಬುದು ಪ್ರಜಾಪ್ರಭುತ್ವವನ್ನು ಹಾಳುಮಾಡುವ ದೊಡ್ಡ ಸಂಚು ಮತ್ತು ಮೋಸ: ಪ್ರಕಾಶ್ ರಾಜ್

"ನಾನು ಸಣ್ಣವನಿದ್ದಾಗ ಮುಕ್ಕೂಟಿ ಕನ್ನಡಿಗರು ಎನ್ನುತ್ತಿದ್ದರು. ದಶಕಗಳ ನಂತರ ಪಂಚಕೋಟಿ ಕನ್ನಡಿಗರಾಗಿ, ಈಗ ಶತಕೋಟಿ ಆಗಬೇಕಿತ್ತು. ಆದರೆ ಮತದಾರರ ಪಟ್ಟಿ ವಿಶೇಷ ಸಾಂದ್ರ ಪರಿಷ್ಕರಣೆ (SIR) ಹೆಸರಿನಲ್ಲಿ ಮತ್ತೆ ಮುಕ್ಕೂಟಿಗೆ ತಂದು ನಿಲ್ಲಿಸಲಾಗುತ್ತಿದೆ....

‘ಚುನಾವಣಾ ಆಯೋಗ ಚಲೋ’: ಎಸ್ಐಆರ್ ಅನ್ಯಾಯವನ್ನು ಪ್ರಶ್ನಿಸಲು ನಾವು ಚುನಾವಣಾ ಆಯೋಗಕ್ಕೆ ಮುತ್ತಿಗೆ ಹಾಕುತ್ತಿದ್ದೇವೆ: ಯೂಸುಫ್ ಕನ್ನಿ

ಬೆಂಗಳೂರು: ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಹೆಸರಿನಲ್ಲಿ ಅರ್ಹ ನಾಗರಿಕರ ಮತದಾನದ ಹಕ್ಕನ್ನು ಕಸಿದುಕೊಳ್ಳಲಾಗುತ್ತಿದೆ ಎಂದು ಆರೋಪಿಸಿ ‘ಎಸ್‌ಐಆರ್ ವಿರೋಧಿ ಕರ್ನಾಟಕ’ ವೇದಿಕೆಯು 2026 ಸೆಪ್ಟಂಬರ್ 01, ಮಂಗಳವಾರ ಹಮ್ಮಿಕೊಂಡಿದ್ದ...

SIR:‘ನಾವು ಕಳ್ಳರಲ್ಲ, ಈ ದೇಶದ ಮೂಲ ನಿವಾಸಿಗಳು’ SIR ಸಂತ್ರಸ್ತರ ಜೊತೆ ಪ್ರಕಾಶ್ ರಾಜ್ ಸಂವಾದ

"ನಾವು ಈ ದೇಶದ ನಾಗರಿಕರು, ಕಳ್ಳರಲ್ಲ. ಮತದಾರರ ಪಟ್ಟಿಯಿಂದ ಹೆಸರು ಡಿಲೀಟ್ ಮಾಡಿ ನಮ್ಮ ಸ್ವಾಭಿಮಾನಕ್ಕೆ ಧಕ್ಕೆ ತರಲಾಗುತ್ತಿದೆ. ನಮ್ಮ ಹಕ್ಕನ್ನು ಉಳಿಸಿಕೊಳ್ಳಲು ನಾವು ಹೋರಾಟ ನಡೆಸುತ್ತಿದ್ದೇವೆ," ಎಂದು ಬಹುಭಾಷಾ ನಟ ಹಾಗೂ...

‘ವಿದೇಶದಲ್ಲಿ ಚಿನ್ನ ಖರೀದಿಸಬೇಡಿ, ವಿವಾಹವಾಗಬೇಡಿ’: ಭಾರತೀಯರಿಗೆ ಮೋದಿ ಮನವಿ

ಭಾರತೀಯರು ಅನಗತ್ಯವಾಗಿ ವಿದೇಶಿ ಪ್ರವಾಸ ಕೈಗೊಳ್ಳುವುದನ್ನು, ವಿದೇಶಗಳಲ್ಲಿ ವಿವಾಹವಾಗುವುದನ್ನು ಹಾಗೂ ಅಗತ್ಯವಿಲ್ಲದಿದ್ದರೆ ವಿದೇಶದಿಂದ ಚಿನ್ನ ಖರೀದಿಸುವುದನ್ನು ಸಂಪೂರ್ಣವಾಗಿ ತಪ್ಪಿಸಬೇಕು ಎಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಮನವಿ ಮಾಡಿದ್ದಾರೆ. ಸ್ವಾವಲಂಬನೆಗೆ ಉತ್ತೇಜನ ನೀಡುವುದರ...

ಧಾರವಾಡ | ಪ್ರಕಾಶ್ ರಾಜ್ ಭಾಗವಹಿಸಿದ್ದ ಸಮುದಾಯ ಕಾರ್ಯಕ್ರಮಕ್ಕೆ ಅಡ್ಡಿಪಡಿಸಲು ಯತ್ನ : ದೂರು ದಾಖಲು

ಭಾನುವಾರ (ಆ.30) ಧಾರವಾಡದ ಕರ್ನಾಟಕ ವಿದ್ಯಾವರ್ಧಕ ಸಂಘದ ಸಭಾ ಭವನದಲ್ಲಿ ಆಯೋಜಿಸಿದ್ದ ಸಮುದಾಯ ಸಂಘಟನೆಯ ಕಾರ್ಯಕ್ರಮಕ್ಕೆ ಅಡ್ಡಿಪಡಿಸಲು ಯತ್ನಿಸಿ ಗಲಾಟೆ ಎಬ್ಬಿಸಿದ ಬಿಜೆಪಿ-ಸಂಘಪರಿವಾರದ ಬೆಂಬಲಿಗರ ವಿರುದ್ಧ ದೂರು ದಾಖಲಿಸಲಾಗಿದೆ. ಸಮುದಾಯ ಸಂಘಟನೆಯ ಧಾರವಾಡದ...