Homeಮುಖಪುಟವಿದ್ಯುತ್ ಖರೀದಿ ಹಗರಣ | ಜಗನ್ ಮೋಹನ್ ರೆಡ್ಡಿಗೆ ₹1,750 ಕೋಟಿ ಲಂಚದ ಭರವಸೆ ನೀಡಿದ್ದ...

ವಿದ್ಯುತ್ ಖರೀದಿ ಹಗರಣ | ಜಗನ್ ಮೋಹನ್ ರೆಡ್ಡಿಗೆ ₹1,750 ಕೋಟಿ ಲಂಚದ ಭರವಸೆ ನೀಡಿದ್ದ ಗೌತಮ್ ಅದಾನಿ : ಆರೋಪ

- Advertisement -
- Advertisement -

ಸೌರ ವಿದ್ಯುತ್ ಗುತ್ತಿಗೆಗೆ ಸಂಬಂಧಿಸಿದ ಶತಕೋಟಿ ಡಾಲರ್ ಲಂಚ ಹಾಗೂ ವಂಚನೆ ಪ್ರಕರಣದಲ್ಲಿ ಅದಾನಿ ಗ್ರೀನ್ ಎನರ್ಜಿ ಕಂಪನಿಯ ಅಧ್ಯಕ್ಷ ಗೌತಮ್ ಅದಾನಿ ಹಾಗೂ ಇತರರ ವಿರುದ್ದ ಯುಎಸ್‌ ಫೆಡರಲ್ ನ್ಯಾಯಾಲಯ ಗುರುವಾರ (ನ.21) ಬಂಧನ ವಾರೆಂಟ್ ಜಾರಿಗೊಳಿಸಿದೆ.

ಗೌತಮ್ ಅದಾನಿ, ಅವರ ಸೋದರಳಿಯ ಸಾಗರ್ ಅದಾನಿ ಸೇರಿದಂತೆ ಇತರ ಏಳು ಆರೋಪಿಗಳು 20 ವರ್ಷಗಳಲ್ಲಿ 2 ಶತಕೋಟಿ ಡಾಲರ್ ಲಾಭವನ್ನು ನಿರೀಕ್ಷಿಸುವ ಸೌರಶಕ್ತಿ ಪೂರೈಕೆ ಒಪ್ಪಂದಗಳನ್ನು ಪಡೆಯಲು ಭಾರತೀಯ ಸರ್ಕಾರಿ ಅಧಿಕಾರಿಗಳಿಗೆ ಸುಮಾರು 265 ಮಿಲಿಯನ್ ಡಾಲರ್ ಲಂಚ ನೀಡಲು ಒಪ್ಪಂದ ಮಾಡಿಕೊಂಡಿರುವ ಗಂಭೀರ ಆರೋಪವಿದೆ.

ಯುನೈಟೆಡ್ ಸ್ಟೇಟ್ಸ್ ಸೆಕ್ಯುರಿಟೀಸ್ ಅಂಡ್ ಎಕ್ಸ್ಚೇಂಜ್ ಕಮಿಷನ್ (ಯುಎಸ್ಇಸಿ) ದೂರಿಗೆ ಸಂಬಂಧಿಸಿದಂತೆ ತನಿಖೆ ನಡೆಸಿದ್ದ ಫೆಡರಲ್ ಪ್ಯಾಸಿಕ್ಯೂಟರ್, ನ್ಯಾಯಾಲಯಕ್ಕೆ ದೋಷಾರೋಪ ಪಟ್ಟಿ ಸಲ್ಲಿಸಿದ್ದರು. ಅದನ್ನು ಪರಿಗಣಿಸಿದ ನ್ಯಾಯಾಲಯ ಬಂಧನ ವಾರೆಂಟ್ ಹೊರಡಿಸಿದೆ.

ಯುಎಸ್ಇಸಿ ನೀಡಿದ್ದ ದೂರಿನಲ್ಲಿ, ಗೌತಮ್ ಅದಾನಿ ವೈಎಸ್‌ಆರ್‌ಸಿಪಿ ಮುಖ್ಯಸ್ಥ ಹಾಗೂ ಆಂಧ್ರ ಪ್ರದೇಶದ ಮಾಜಿ ಮುಖ್ಯಮಂತ್ರಿ ವೈಎಸ್‌ ಜಗನ್ ಮೋಹನ್ ರೆಡ್ಡಿ ಅವರಿಗೆ 2021ರ ಆಗಸ್ಟ್‌ನಲ್ಲಿ ಅಂದಾಜು ರೂ.1750 ಕೋಟಿ (ಸುಮಾರು $228 ಮಿಲಿಯನ್) ಲಂಚ ನೀಡಿದ್ದಾರೆ ಎಂದು ಆರೋಪಿಸಿದ್ದಾಗಿ ವರದಿಯಾಗಿದೆ.

ಯುಎಸ್‌ ಅಟಾರ್ನಿ ಕಚೇರಿಯ ಪ್ರಕಾರ, 2021 ಮತ್ತು 2022 ರಲ್ಲಿ ಗೌತಮ್ ಅದಾನಿಯವರು ಆಂಧ್ರ ಪ್ರದೇಶದ ಸಿಎಂ ಮತ್ತು ಸರ್ಕಾರಿ ಅಧಿಕಾರಿಗಳನ್ನು ವೈಯಕ್ತಿಕವಾಗಿ ಭೇಟಿ ಮಾಡಿದ್ದರು. ಈ ವೇಳೆ ಸೋಲಾರ್ ಎನರ್ಜಿ ಕಾರ್ಪೊರೇಷನ್ ಆಫ್ ಇಂಡಿಯಾ (ಎಸ್‌ಇಸಿಐ) ಯೊಂದಿಗೆ ವಿದ್ಯುತ್ ಮಾರಾಟ ಒಪ್ಪಂದಗಳಿಗೆ ಸಹಿ ಹಾಕಲು ಲಂಚ ನೀಡಿದ್ದರು.

ಯುಎಸ್ಇಸಿ ದೂರು ಮತ್ತು ಪ್ಯಾಸಿಕ್ಯೂಟರ್ ದೋಷಾರೋಪಪಟ್ಟಿಯ ಪ್ರಕಾರ, ಬೆಲೆ ಹೆಚ್ಚಾಗಿದ್ದರಿಂದ ಅನೇಕ ರಾಜ್ಯ ಸರ್ಕಾರಗಳು ಎಸ್‌ಇಸಿಐನಿಂದ ವಿದ್ಯುತ್ ಖರೀದಿಸಲು ನಿರಾಕರಿಸಿದ್ದವು. ಆ ಸಮಯದಲ್ಲಿ ಗೌತಮ್ ಅದಾನಿ ಮತ್ತು ಸಾಗರ್ ಅದಾನಿ ಮಧ್ಯಪ್ರವೇಶಿಸಿದ್ದರು. ದಾಖಲೆಗಳ ಪ್ರಕಾರ ದೊಡ್ಡ ಮೊತ್ತದ ಲಂಚವನ್ನು ಪಾವತಿಸಿದ್ದರು ಅಥವಾ ನೀಡುವುದಾಗಿ ಭರವಸೆ ನೀಡಿದ್ದರು.

“ಅಗತ್ಯ ಸೌಲಭ್ಯದ ಕೊರತೆ ಹಿನ್ನೆಲೆ ಆಂಧ್ರ ಪ್ರದೇಶ ಸರ್ಕಾರ ಎಸ್‌ಇಸಿಐನಿಂದ ವಿದ್ಯುತ್ ಖರೀದಿಸಲು ಒಪ್ಪಂದ ಮಾಡಿಕೊಂಡಿರಲಿಲ್ಲ. ಹಾಗಾಗಿ, ಆಗಸ್ಟ್ 2021ರಲ್ಲಿ, ಗೌತಮ್ ಅದಾನಿ ಜಗನ್ ಮೋಹನ್ ರೆಡ್ಡಿಯವರನ್ನು ವೈಯಕ್ತಿಕವಾಗಿ ಭೇಟಿಯಾಗಿದ್ದರು” ಎಂದು ಯುಎಸ್ಇಸಿ ತನ್ನ ದೂರಿನಲ್ಲಿ (Case 1:24-cv-08080)ಆರೋಪಿಸಿದೆ ಮತ್ತು ಆರೋಪಿಗಳಾದ ಗೌತಮ್ ಅದಾನಿ ಮತ್ತು ಸಾಗರ್ ಅದಾನಿ ವಿರುದ್ಧ ಜ್ಯೂರಿ ವಿಚಾರಣೆಗೆ ಒತ್ತಾಯಿಸಿದೆ.

ಜಗನ್ ಮೋಹನ್ ರೆಡ್ಡಿಯವರನ್ನು ಗೌತಮ್ ಅದಾನಿ ಭೇಟಿಯಾದಾಗ 7,000 ಮೆಗಾ ವ್ಯಾಟ್ ಸಾಮರ್ಥ್ಯದ ವಿದ್ಯುತ್ ಖರೀದಿಗೆ ಸಂಬಂಧಿಸಿ ಎಸ್‌ಇಸಿಐನೊಂದಿಗೆ ಒಪ್ಪಂದ ಮಾಡಿಕೊಳ್ಳಲು ಆಂಧ್ರ ಪ್ರದೇಶದ ಸರ್ಕಾರಿ ಅಧಿಕಾರಿಗಳಿಗೆ ಲಂಚ ಪಾವತಿಸಿದ್ದಾರೆ ಅಥವಾ ಭರವಸೆ ನೀಡಿದ್ದಾರೆ” ಎಂದು ಯುಎಸ್ಇಸಿ ದೂರಿನಲ್ಲಿ ತಿಳಿಸಿದೆ.

ಅದಾನಿ ವಿರುದ್ದದ ದೋಷಾರೋಪ ಪಟ್ಟಿಯ ಪ್ರಕಾರ, ಆಂಧ್ರ ಪ್ರದೇಶ, ಒಡಿಶಾ, ಜಮ್ಮು ಮತ್ತು ಕಾಶ್ಮೀರ, ತಮಿಳುನಾಡು, ಛತ್ತೀಸ್‌ಗಢ ರಾಜ್ಯ ಸರ್ಕಾರಗಳಿಗೆ ನೀಡಲಾದ ಒಟ್ಟು ಲಂಚ ಸರಿಸುಮಾರು ರೂ.2029 ಕೋಟಿಗಳು (ಸುಮಾರು $265 ಮಿಲಿಯನ್), ಅದರಲ್ಲಿ ಸುಮಾರು 85 ಪ್ರತಿಶತ, ಅಂದರೆ ರೂ.1750 ಕೋಟಿಗಳು ($228 ಮಿಲಿಯನ್) ಆಂಧ್ರ ಪ್ರದೇಶಕ್ಕೆ ಪಾವತಿಸಲಾಗಿದೆ ಅಥವಾ ಪಾವತಿಸುವ ಭರವಸೆ ನೀಡಲಾಗಿದೆ

ಯುಎಸ್‌ಎಸ್‌ಇಸಿ ದೂರಿನ ಪ್ರಕಾರ, ಅದಾನಿ ಗ್ರೀನ್ ಎನರ್ಜಿ ಕಂಪನಿಯ ಕಾರ್ಯಕಾರಣಿಗಳು ಅಝೂರ್‌ನ ಕಾರ್ಯನಿರ್ವಾಹಕರಿಗೆ ಇನ್‌ಫ್ರಾ ಪ್ಯಾರಾಗ್ರಾಫ್‌ಗಳು 131 ರಿಂದ 135 ರಲ್ಲಿ ನೀಡಿದ ಹೇಳಿಕೆಗಳಿಂದ” ಈವಿಷಯ ಬಹಿರಂಗಗೊಂಡಿದೆ”. ಅದಾನಿ ಗ್ರೀನ್ ಆಂತರಿಕ ದಾಖಲೆಗಳಲ್ಲೂಇದನ್ನು ಉಲ್ಲೇಖಿಸಲಾಗಿದೆ.

ಗೌತಮ್ ಅದಾನಿ ಅವರು ಜಗನ್ ಮೋಹನ್ ರೆಡ್ಡಿಯವರನ್ನು ಭೇಟಿಯಾಗಿ ಲಂಚ ಪಾವತಿಸಿದ ಅಥವಾ ಪಾವತಿಸುವ ಭರವಸೆ ನೀಡಿದ ಬೆನ್ನಲ್ಲೇ, ಆಂಧ್ರ ಪ್ರದೇಶ ಸರ್ಕಾರ ಎಸ್‌ಇಸಿಐನೊಂದಿಗೆ ವಿದ್ಯುತ್ ಖರೀದಿ ಒಪ್ಪಂದ ಮಾಡಿಕೊಳ್ಳಲು ತಾತ್ವಿಕ ಒಪ್ಪಿಗೆ ನೀಡಿತ್ತು. ಅದಾನಿ ಗ್ರೀನ್ ಮತ್ತು ಅಝೂರೆ ನಡುವಿನ ಆಂತರಿಕ ಸಂವಹನಗಳು ಕೂಡ ಆಂಧ್ರ ಪ್ರದೇಶ ಎಸ್ಇಸಿಐನಿಂದ ವಿದ್ಯುತ್ ಖರೀದಿಸಲು ಒಪ್ಪಿಕೊಂಡಿರುವುದನ್ನು ಹೇಳಿವೆ ಎಂದು ವರದಿಯಾಗಿದೆ.

ಅದಾನಿ ಅವರು ಜಗನ್ ಮೋಹನ್ ರೆಡ್ಡಿಯನ್ನು ಭೇಟಿಯಾದ ಒಂದು ವಾರದ ನಂತರ, ” ಕಳೆದ ತಿಂಗಳು ನಡೆದ ಸಚಿವ ಸಂಪುಟ ಸಭೆಯಲ್ಲಿ ವಿದ್ಯುತ್ ಖರೀದಿಸುವ ಎಸ್ಇಸಿಐ ಪ್ರಸ್ತಾಪವನ್ನು ಒಪ್ಪಿಕೊಂಡು ಮೊದಲ ಹಂತದಲ್ಲಿ 7,000 ಮೆ.ವ್ಯಾ ವಿದ್ಯುತ್ ಖರೀದಿಸಲು ತೀರ್ಮಾನಿಸಲಾಗಿದೆ” ಎಂದು ಸರ್ಕಾರ ಸಾರ್ವಜನಿಕವಾಗಿ ಹೇಳಿತ್ತು. ‘ಇದನ್ನು ಬೇರೆ ರೀತಿಯಲ್ಲಿ ಹೇಳುವುದಾದರೆ, ಪಾವತಿಸಿದ ಅಥವಾ ಭರವಸೆ ನೀಡಿದ ಲಂಚವು ಕೆಲಸ ಮಾಡಿದೆ” ಎಂದರ್ಥ ಎಂದು ಯುಎಸ್‌ಎಸ್‌ಇಸಿ ದೂರಿನಲ್ಲಿ ಹೇಳಿದೆ.

ಅದಾನಿ ಗ್ರೀನ್‌ ಎನರ್ಜಿಯ ಆಂತರಿಕ ದಾಖಲೆಗಳಲ್ಲಿ ಈ ಲಂಚದ ಬಗ್ಗೆ ವಿವರಗಳನ್ನು ಉಲ್ಲೇಖಿಸಲಾಗಿದೆ ಎಂದು ಯುನೈಟೆಡ್ ಸ್ಟೇಟ್ಸ್‌ನ ದೋಷಾರೋಪಣೆ ಪಟ್ಟಿಯಲ್ಲಿ ಪದೇ ಪದೇ ಉಲ್ಲೇಖಿಸಲ್ಪಟ್ಟಿದೆ ಎಂದು ವರದಿಯಾಗಿದೆ.

ಆರೋಪ ಅಲ್ಲಗಳೆದ ವೈಎಸ್‌ಆರ್‌ಸಿಪಿ

ತಮ್ಮ ವಿರುದ್ದದ ಆರೋಪಗಳಿಗೆ ಪ್ರತಿಕ್ರಿಯಿಸಿರುವ ವೈಎಸ್‌ಆರ್‌ಸಿಪಿ, ಅದಾನಿ ಜೊತೆ ಯಾವುದೇ ನೇರ ಒಪ್ಪಂದ ಮಾಡಿಕೊಂಡಿಲ್ಲ ಎಂದು ಗುರುವಾರ (ನ.21) ಹೇಳಿದೆ.

“ಎಸ್‌ಇಸಿಐ ಭಾರತ ಸರ್ಕಾರದ ಉದ್ಯಮ ಎಂದು ನಮೂದಿಸುವುದು ಅವಶ್ಯಕ. ಆಂಧ್ರ ಪ್ರದೇಶ ವಿದ್ಯುತ್ ನಿಗಮ ಮತ್ತು ಅದಾನಿ ಸಮೂಹಕ್ಕೆ ಸೇರಿದ ಇತರ ಯಾವುದೇ ಸಂಸ್ಥೆಗಳ ನಡುವೆ ಯಾವುದೇ ನೇರ ಒಪ್ಪಂದಗಳು ನಡೆದಿಲ್ಲ. ಆದ್ದರಿಂದ, ದೋಷಾರೋಪ ಪಟ್ಟಿಯಲ್ಲಿ ರಾಜ್ಯ ಸರ್ಕಾರದ ಮೇಲೆ ಮಾಡಿದ ಆರೋಪಗಳು ಸುಳ್ಳಾಗಿವೆ” ಎಂದು ವೈಎಸ್‌ಆರ್‌ಸಿಪಿ ಹೇಳಿಕೆಯಲ್ಲಿ ತಿಳಿಸಿದೆ.

ಈ ಹಿಂದಿನ ಆಂಧ್ರ ಪ್ರದೇಶ ಸರ್ಕಾರ, ಎಸ್‌ಇಸಿಐಯಿಂದ 25 ವರ್ಷಗಳ ಅವಧಿಗೆ ಕಿಲೋ ವ್ಯಾಟ್‌ಗೆ 2.49 ರೂ.ನಂತೆ 7,000 ಮೆ.ವ್ಯಾ ವಿದ್ಯುತ್ ಖರೀದಿಗೆ ಒಪ್ಪಂದ ಮಾಡಿಕೊಂಡಿದೆ. ಈ ಪೈಕಿ 2024-25 ಆರ್ಥಿಕ
ವರ್ಷದಲ್ಲಿ 3,000 ಮೆ.ವ್ಯಾ, 2025-26 ಆರ್ಥಿಕ ವರ್ಷದಲ್ಲಿ 3,000 ಮೆ.ವ್ಯಾ ಮತ್ತು ಆರ್ಥಿಕ ವರ್ಷ 2026-27ರಲ್ಲಿ 1,000 ಮೆ.ವ್ಯಾ ಅನ್ನು ಐಎಸ್‌ಟಿಎಸ್ (ಇಂಟರ್ ಸ್ಟೇಟ್ ಟ್ರಾನ್ಸ್ಮಿಷನ್ ಸಿಸ್ಟಮ್) ಶುಲ್ಕಗಳನ್ನು ಮನ್ನಾ ಮಾಡುವ ಮೂಲಕ ಖರೀದಿಸಲಿದೆ ಎಂದು ವೈಎಸ್‌ಆರ್‌ಸಿಪಿ ಹೇಳಿದೆ.

ಈ ಅಗ್ಗದ ದರದ ವಿದ್ಯುತ್ ಖರೀದಿಯು ವಾರ್ಷಿಕವಾಗಿ 3,700 ಕೋಟಿ ರೂಪಾಯಿಗಳ ಉಳಿತಾಯದೊಂದಿಗೆ ರಾಜ್ಯಕ್ಕೆ ದೊಡ್ಡ ಲಾಭ ಮಾಡಿಕೊಡುತ್ತದೆ. ಈ ಒಪ್ಪಂದವು 25 ವರ್ಷಗಳ ಅವಧಿಯದ್ದು, ಆದ್ದರಿಂದ 25 ವರ್ಷಗಳಲ್ಲಿ ರಾಜ್ಯವು ಹೆಚ್ಚಿನ ಲಾಭ ಮಾಡಿಕೊಳ್ಳಬಹುದು ಎಂದಿದೆ.

ಇದನ್ನೂ ಓದಿ : ಲಂಚ, ವಂಚನೆ ಪ್ರಕರಣ : ಅದಾನಿ ವಿರುದ್ದ ಅಮೆರಿಕದಲ್ಲಿ ದೋಷಾರೋಪ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸತೀಶ್‌ ಜಾರಕಿಹೊಳಿ ಮೇಲಿನ ಇಡಿ ದಾಳಿಯನ್ನು ‘ಚಾರಿತ್ರ್ಯ ಹರಣ’ ಎಂದ ವಿಜಯ್ ಮಲ್ಯ

ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಅವರ ಮನೆ ಹಾಗೂ ಕಚೇರಿಗಳ ಮೇಲೆ ಜಾರಿ ನಿರ್ದೇಶನಾಲಯವು (ಇಡಿ) ನಡೆಸಿದ ದಾಳಿಯನ್ನು ಮಾಜಿ ಸಂಸದ ಮತ್ತು ದೇಶದಿಂದ ಪರಾರಿಯಾಗಿರುವ ಉದ್ಯಮಿ ವಿಜಯ್ ಮಲ್ಯ, "ಸಾರ್ವಜನಿಕವಾಗಿ ಚಾರಿತ್ರ್ಯ...

ಒಗ್ಗಟ್ಟಿನ ಮಾತುಗಳಷ್ಟೇ ಸಾಲದು, ಕೃತಿಯಲ್ಲಿರಲಿ ದಿಟ್ಟತನ : ಬ್ರಿಕ್ಸ್ ವಿಚಾರದಲ್ಲಿ ಕೇಂದ್ರಕ್ಕೆ ಕಾಂಗ್ರೆಸ್ ಚಾಟಿ

ಜಾಗತಿಕ ಮಟ್ಟದಲ್ಲಿ ಬ್ರಿಕ್ಸ್ (BRICS) ಒಕ್ಕೂಟದ ಪ್ರಭಾವ ಹೆಚ್ಚುತ್ತಿರುವುದನ್ನು ಸ್ವಾಗತಿಸಿರುವ ಕಾಂಗ್ರೆಸ್, ಈ ಒಕ್ಕೂಟದ ಅಧ್ಯಕ್ಷತೆಯನ್ನು ವಹಿಸಿರುವ ಭಾರತವು ‘ಗ್ಲೋಬಲ್ ಸೌತ್’ (Global South) ರಾಷ್ಟ್ರಗಳ ನಡುವೆ ತನ್ನ ರಾಜತಾಂತ್ರಿಕ ಸ್ಥಾನಮಾನವನ್ನು ಮರುಸ್ಥಾಪಿಸಲು...

9/11 ರ ಹಿಂದಿನ ದಾಳಿಯನ್ನು ಇರಾನ್ ಜೊತೆಗಿನ ಇಂದಿನ ಯುದ್ಧಕ್ಕೆ ಜೋಡಿಸಿದ ಡೊನಾಲ್ಡ್‌ ಟ್ರಂಪ್

"ಸೆಪ್ಟೆಂಬರ್ 11, 2001 ರ ದಾಳಿಯನ್ನು ಯುನೈಟೆಡ್ ಸ್ಟೇಟ್ಸ್ ಎಂದಿಗೂ ಮರೆಯುವುದಿಲ್ಲ. 25 ವರ್ಷಗಳ ನಂತರವೂ ಇರಾನ್ ಮೇಲೆ ದಾಳಿ ಮಾಡುವ ಮೂಲಕ ದೇಶವು ಭಯೋತ್ಪಾದನೆ ವಿರುದ್ಧದ ಯುದ್ಧವನ್ನು ಮುಂದುವರೆಸಿದೆ" ಎಂದು ಅಧ್ಯಕ್ಷ...

SIR ನೋಟಿಸ್ ಮತ್ತು ವಿಚಾರಣೆಯಲ್ಲಿ ಅಕ್ರಮ : ಚು. ಆಯೋಗದ ವಿರುದ್ಧ ನಾಗರಿಕ ಸಂಘಟನೆಗಳಿಂದ 2ನೇ ಎಫ್‌ಐಆರ್

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಭಾಗವಾಗಿ, ಆಗಸ್ಟ್ 24ರಂದು ರಾಜ್ಯ ಚುನಾವಣಾ ಆಯೋಗ ಬಿಡುಗಡೆ ಮಾಡಿದ್ದ ಕರಡು ಮತದಾರರ ಪಟ್ಟಿಯನ್ನು ತಿರಸ್ಕರಿಸಿ ಕೇಂದ್ರ ಚುನಾವಣಾ ಆಯೋಗದ ವಿರುದ್ಧ ಎಫ್‌ಐಆರ್ ಬಿಡುಗಡೆ...

‘ಕೊಂಕಣಿ – ಮಾಲ್ವಣಿ ಸಮುದಾಯಗಳು ಹಿಂದುತ್ವದ ಬೆಂಬಲಿಗರು..’; ಮಹಾರಾಷ್ಟ್ರ ಬಿಜೆಪಿ ನಾಯಕ ಅಮೀತ್ ಸತಮ್

ಮುಂಬೈನಲ್ಲಿ ವಾಸಿಸುತ್ತಿರುವ ಕೊಂಕಣಿ ಮತ್ತು ಮಾಲ್ವಣಿ ಸಮುದಾಯಗಳು ಸೇರಿದಂತೆ ಕೊಂಕಣ ಪ್ರದೇಶದ ಜನರು ಹಿಂದುತ್ವವನ್ನು ಬೆಂಬಲಿಸುತ್ತಾರೆ ಎಂದು ಬಿಜೆಪಿ ನಾಯಕ ಅಮೀತ್ ಸತಮ್ ಹೇಳಿದ್ದಾರೆ. ಮಹಾರಾಷ್ಟ್ರದ ಕೊಂಕಣ ಪ್ರದೇಶದ ಸಾವಂತವಾಡಿಗೆ ಗಣಪತಿ ಭಕ್ತರಿಗಾಗಿ ಛತ್ರಪತಿ...

SIR! ಸಾಮಾನ್ಯರಿಗೆ ಸಂಕಷ್ಟ; ಗಣ್ಯರಿಗೆ ಮನೆ ಬಾಗಿಲಲ್ಲೇ ಸೇವೆ?

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆ ಕರ್ನಾಟಕದಲ್ಲಿ ಮುಂದುವರೆದಿರುವ ನಡುವೆಯೇ, ಅದರ ಜಾರಿಯಲ್ಲಿ ಸಾಮಾನ್ಯ ಮತದಾರರು ಮತ್ತು ಪ್ರಭಾವಿ ವ್ಯಕ್ತಿಗಳ ಅನುಭವದ ನಡುವಿನ ವ್ಯತ್ಯಾಸದ ಕುರಿತು ಪ್ರಶ್ನೆಗಳು ಎದ್ದಿವೆ. ಮತದಾರರ ಪಟ್ಟಿಯಲ್ಲಿನ...

ದಲಿತ ಬಾಲಕಿ ನಿಶು ಆಜಾದ್ ಕುಟುಂಬಕ್ಕೆ ನಿಲ್ಲದ ಕಿರುಕುಳ; ಅಸಭ್ಯ ಭಾಷೆ – ಬೆದರಿಕೆ ಸಂದೇಶ ರವಾನೆ

ಸಿಜೆಪಿ ಪ್ರತಿಭಟನೆಯಲ್ಲಿ ಗಮನ ಸೆಳೆದಿದ್ದ ಹದಿನಾಲ್ಕು ವರ್ಷ ವಯಸ್ಸಿನ ದಲಿತ ಸಮುದಾಯದ ಕಂಟೆಂಟ್ ಕ್ರಿಯೇಟರ್ ನಿಶು ಆಜಾದ್ ಮತ್ತು ಅವರ ಕುಟುಂಬಕ್ಕೆ ಮೊಬೈಲ್‌ ಫೋನ್‌ ಮೂಲಕ ನಿರಂತರ ಕಿರುಕುಳ ಸಂದೇಶ ಬರುತ್ತಿವೆ ಎಂದು...

ಉತ್ತರ ಪ್ರದೇಶ| 8ನೇ ತರಗತಿಯ ದಲಿತ ವಿದ್ಯಾರ್ಥಿಗೆ ಶಿಕ್ಷಕಿಯಿಂದ ಜಾತಿ ತಾರತಮ್ಯ

ಉತ್ತರ ಪ್ರದೇಶದ ಲಖಿಂಪುರ ಖೇರಿ ಜಿಲ್ಲೆಯ ಸರ್ಕಾರಿ ಉನ್ನತ ಪ್ರಾಥಮಿಕ ಶಾಲೆಯ 8ನೇ ತರಗತಿಯ ವಿದ್ಯಾರ್ಥಿಯೊಬ್ಬರು ಶಿಕ್ಷಕಿಯಿಂದ ಜಾತಿ ಆಧಾರಿತ ತಾರತಮ್ಯ ಎಸಗಲಾಗಿದೆ ಎಂದು ಆರೋಪಿಸಿದ್ದಾನೆ. ಕೃಷ್ಣ ಎಂದು ಗುರುತಿಸಲ್ಪಟ್ಟ ಈ ವಿದ್ಯಾರ್ಥಿ ಪರಿಶಿಷ್ಟ...

ಯೆಮನ್ | ಸಂಪೂರ್ಣ ರೆಡ್ ಸೀ ಕರಾವಳಿಯನ್ನು ನಿಯಂತ್ರಣಕ್ಕೆ ತೆಗೆದುಕೊಂಡ ಹೌತಿ ಪಡೆ : ಮಂದೇಬ್ ಜಲಸಂಧಿ ಮೇಲೆಯೂ ಹಿಡಿತ ಸಾಧಿಸಿರುವುದಾಗಿ ವರದಿ

ಮಹತ್ವದ ಬೆಳವಣಿಗೆಯಲ್ಲಿ, ಹೌತಿ ಬಂಡುಕೋರರು ಯೆಮನ್‌ನ ಇಡೀ ಕೆಂಪು ಸಮುದ್ರದ (ರೆಡ್ ಸೀ) ಕರಾವಳಿಯನ್ನು ತಮ್ಮ ನಿಯಂತ್ರಣಕ್ಕೆ ತೆಗೆದುಕೊಂಡಿದ್ದಾರೆ ಎಂದು ವರದಿಯಾಗಿದೆ. ಇರಾನ್ ಬೆಂಬಲಿತ ಹೌತಿ ಸಶಸ್ತ್ರ ಪಡೆಗಳು ಯೆಮನ್ ಸರ್ಕಾರದ ನಿಯಂತ್ರಣದಲ್ಲಿದ್ದ...

ಭಾರತದ ಚುನಾವಣಾ ಪ್ರಕ್ರಿಯೆಯು ಅತ್ಯಂತ ಪಾರದರ್ಶಕವಾಗಿದೆ: ಸಿಇಸಿ ಜ್ಞಾನೇಶ್ ಕುಮಾರ್

ಭಾರತದ ಚುನಾವಣಾ ಪ್ರಕ್ರಿಯೆಯು ವಿಶ್ವದಲ್ಲೇ ಅತ್ಯಂತ ಪಾರದರ್ಶಕವಾದದ್ದು ಎಂದು ಮುಖ್ಯ ಚುನಾವಣಾ ಆಯುಕ್ತ (ಸಿಇಸಿ) ಜ್ಞಾನೇಶ್ ಕುಮಾರ್ (ಸೆ.11) ಹೇಳಿದ್ದಾರೆ. ಗುಜರಾತ್ ವಿಶ್ವವಿದ್ಯಾಲಯದ ಅಟಲ್ ಕಲಾಂ ಸಭಾಂಗಣದಲ್ಲಿ ನಡೆದ 'ಮತಗಟ್ಟೆ ಮಟ್ಟದ ಅಧಿಕಾರಿಗಳೊಂದಿಗೆ...