Homeಮುಖಪುಟವಿದ್ಯುತ್ ಖರೀದಿ ಹಗರಣ | ಜಗನ್ ಮೋಹನ್ ರೆಡ್ಡಿಗೆ ₹1,750 ಕೋಟಿ ಲಂಚದ ಭರವಸೆ ನೀಡಿದ್ದ...

ವಿದ್ಯುತ್ ಖರೀದಿ ಹಗರಣ | ಜಗನ್ ಮೋಹನ್ ರೆಡ್ಡಿಗೆ ₹1,750 ಕೋಟಿ ಲಂಚದ ಭರವಸೆ ನೀಡಿದ್ದ ಗೌತಮ್ ಅದಾನಿ : ಆರೋಪ

- Advertisement -
- Advertisement -

ಸೌರ ವಿದ್ಯುತ್ ಗುತ್ತಿಗೆಗೆ ಸಂಬಂಧಿಸಿದ ಶತಕೋಟಿ ಡಾಲರ್ ಲಂಚ ಹಾಗೂ ವಂಚನೆ ಪ್ರಕರಣದಲ್ಲಿ ಅದಾನಿ ಗ್ರೀನ್ ಎನರ್ಜಿ ಕಂಪನಿಯ ಅಧ್ಯಕ್ಷ ಗೌತಮ್ ಅದಾನಿ ಹಾಗೂ ಇತರರ ವಿರುದ್ದ ಯುಎಸ್‌ ಫೆಡರಲ್ ನ್ಯಾಯಾಲಯ ಗುರುವಾರ (ನ.21) ಬಂಧನ ವಾರೆಂಟ್ ಜಾರಿಗೊಳಿಸಿದೆ.

ಗೌತಮ್ ಅದಾನಿ, ಅವರ ಸೋದರಳಿಯ ಸಾಗರ್ ಅದಾನಿ ಸೇರಿದಂತೆ ಇತರ ಏಳು ಆರೋಪಿಗಳು 20 ವರ್ಷಗಳಲ್ಲಿ 2 ಶತಕೋಟಿ ಡಾಲರ್ ಲಾಭವನ್ನು ನಿರೀಕ್ಷಿಸುವ ಸೌರಶಕ್ತಿ ಪೂರೈಕೆ ಒಪ್ಪಂದಗಳನ್ನು ಪಡೆಯಲು ಭಾರತೀಯ ಸರ್ಕಾರಿ ಅಧಿಕಾರಿಗಳಿಗೆ ಸುಮಾರು 265 ಮಿಲಿಯನ್ ಡಾಲರ್ ಲಂಚ ನೀಡಲು ಒಪ್ಪಂದ ಮಾಡಿಕೊಂಡಿರುವ ಗಂಭೀರ ಆರೋಪವಿದೆ.

ಯುನೈಟೆಡ್ ಸ್ಟೇಟ್ಸ್ ಸೆಕ್ಯುರಿಟೀಸ್ ಅಂಡ್ ಎಕ್ಸ್ಚೇಂಜ್ ಕಮಿಷನ್ (ಯುಎಸ್ಇಸಿ) ದೂರಿಗೆ ಸಂಬಂಧಿಸಿದಂತೆ ತನಿಖೆ ನಡೆಸಿದ್ದ ಫೆಡರಲ್ ಪ್ಯಾಸಿಕ್ಯೂಟರ್, ನ್ಯಾಯಾಲಯಕ್ಕೆ ದೋಷಾರೋಪ ಪಟ್ಟಿ ಸಲ್ಲಿಸಿದ್ದರು. ಅದನ್ನು ಪರಿಗಣಿಸಿದ ನ್ಯಾಯಾಲಯ ಬಂಧನ ವಾರೆಂಟ್ ಹೊರಡಿಸಿದೆ.

ಯುಎಸ್ಇಸಿ ನೀಡಿದ್ದ ದೂರಿನಲ್ಲಿ, ಗೌತಮ್ ಅದಾನಿ ವೈಎಸ್‌ಆರ್‌ಸಿಪಿ ಮುಖ್ಯಸ್ಥ ಹಾಗೂ ಆಂಧ್ರ ಪ್ರದೇಶದ ಮಾಜಿ ಮುಖ್ಯಮಂತ್ರಿ ವೈಎಸ್‌ ಜಗನ್ ಮೋಹನ್ ರೆಡ್ಡಿ ಅವರಿಗೆ 2021ರ ಆಗಸ್ಟ್‌ನಲ್ಲಿ ಅಂದಾಜು ರೂ.1750 ಕೋಟಿ (ಸುಮಾರು $228 ಮಿಲಿಯನ್) ಲಂಚ ನೀಡಿದ್ದಾರೆ ಎಂದು ಆರೋಪಿಸಿದ್ದಾಗಿ ವರದಿಯಾಗಿದೆ.

ಯುಎಸ್‌ ಅಟಾರ್ನಿ ಕಚೇರಿಯ ಪ್ರಕಾರ, 2021 ಮತ್ತು 2022 ರಲ್ಲಿ ಗೌತಮ್ ಅದಾನಿಯವರು ಆಂಧ್ರ ಪ್ರದೇಶದ ಸಿಎಂ ಮತ್ತು ಸರ್ಕಾರಿ ಅಧಿಕಾರಿಗಳನ್ನು ವೈಯಕ್ತಿಕವಾಗಿ ಭೇಟಿ ಮಾಡಿದ್ದರು. ಈ ವೇಳೆ ಸೋಲಾರ್ ಎನರ್ಜಿ ಕಾರ್ಪೊರೇಷನ್ ಆಫ್ ಇಂಡಿಯಾ (ಎಸ್‌ಇಸಿಐ) ಯೊಂದಿಗೆ ವಿದ್ಯುತ್ ಮಾರಾಟ ಒಪ್ಪಂದಗಳಿಗೆ ಸಹಿ ಹಾಕಲು ಲಂಚ ನೀಡಿದ್ದರು.

ಯುಎಸ್ಇಸಿ ದೂರು ಮತ್ತು ಪ್ಯಾಸಿಕ್ಯೂಟರ್ ದೋಷಾರೋಪಪಟ್ಟಿಯ ಪ್ರಕಾರ, ಬೆಲೆ ಹೆಚ್ಚಾಗಿದ್ದರಿಂದ ಅನೇಕ ರಾಜ್ಯ ಸರ್ಕಾರಗಳು ಎಸ್‌ಇಸಿಐನಿಂದ ವಿದ್ಯುತ್ ಖರೀದಿಸಲು ನಿರಾಕರಿಸಿದ್ದವು. ಆ ಸಮಯದಲ್ಲಿ ಗೌತಮ್ ಅದಾನಿ ಮತ್ತು ಸಾಗರ್ ಅದಾನಿ ಮಧ್ಯಪ್ರವೇಶಿಸಿದ್ದರು. ದಾಖಲೆಗಳ ಪ್ರಕಾರ ದೊಡ್ಡ ಮೊತ್ತದ ಲಂಚವನ್ನು ಪಾವತಿಸಿದ್ದರು ಅಥವಾ ನೀಡುವುದಾಗಿ ಭರವಸೆ ನೀಡಿದ್ದರು.

“ಅಗತ್ಯ ಸೌಲಭ್ಯದ ಕೊರತೆ ಹಿನ್ನೆಲೆ ಆಂಧ್ರ ಪ್ರದೇಶ ಸರ್ಕಾರ ಎಸ್‌ಇಸಿಐನಿಂದ ವಿದ್ಯುತ್ ಖರೀದಿಸಲು ಒಪ್ಪಂದ ಮಾಡಿಕೊಂಡಿರಲಿಲ್ಲ. ಹಾಗಾಗಿ, ಆಗಸ್ಟ್ 2021ರಲ್ಲಿ, ಗೌತಮ್ ಅದಾನಿ ಜಗನ್ ಮೋಹನ್ ರೆಡ್ಡಿಯವರನ್ನು ವೈಯಕ್ತಿಕವಾಗಿ ಭೇಟಿಯಾಗಿದ್ದರು” ಎಂದು ಯುಎಸ್ಇಸಿ ತನ್ನ ದೂರಿನಲ್ಲಿ (Case 1:24-cv-08080)ಆರೋಪಿಸಿದೆ ಮತ್ತು ಆರೋಪಿಗಳಾದ ಗೌತಮ್ ಅದಾನಿ ಮತ್ತು ಸಾಗರ್ ಅದಾನಿ ವಿರುದ್ಧ ಜ್ಯೂರಿ ವಿಚಾರಣೆಗೆ ಒತ್ತಾಯಿಸಿದೆ.

ಜಗನ್ ಮೋಹನ್ ರೆಡ್ಡಿಯವರನ್ನು ಗೌತಮ್ ಅದಾನಿ ಭೇಟಿಯಾದಾಗ 7,000 ಮೆಗಾ ವ್ಯಾಟ್ ಸಾಮರ್ಥ್ಯದ ವಿದ್ಯುತ್ ಖರೀದಿಗೆ ಸಂಬಂಧಿಸಿ ಎಸ್‌ಇಸಿಐನೊಂದಿಗೆ ಒಪ್ಪಂದ ಮಾಡಿಕೊಳ್ಳಲು ಆಂಧ್ರ ಪ್ರದೇಶದ ಸರ್ಕಾರಿ ಅಧಿಕಾರಿಗಳಿಗೆ ಲಂಚ ಪಾವತಿಸಿದ್ದಾರೆ ಅಥವಾ ಭರವಸೆ ನೀಡಿದ್ದಾರೆ” ಎಂದು ಯುಎಸ್ಇಸಿ ದೂರಿನಲ್ಲಿ ತಿಳಿಸಿದೆ.

ಅದಾನಿ ವಿರುದ್ದದ ದೋಷಾರೋಪ ಪಟ್ಟಿಯ ಪ್ರಕಾರ, ಆಂಧ್ರ ಪ್ರದೇಶ, ಒಡಿಶಾ, ಜಮ್ಮು ಮತ್ತು ಕಾಶ್ಮೀರ, ತಮಿಳುನಾಡು, ಛತ್ತೀಸ್‌ಗಢ ರಾಜ್ಯ ಸರ್ಕಾರಗಳಿಗೆ ನೀಡಲಾದ ಒಟ್ಟು ಲಂಚ ಸರಿಸುಮಾರು ರೂ.2029 ಕೋಟಿಗಳು (ಸುಮಾರು $265 ಮಿಲಿಯನ್), ಅದರಲ್ಲಿ ಸುಮಾರು 85 ಪ್ರತಿಶತ, ಅಂದರೆ ರೂ.1750 ಕೋಟಿಗಳು ($228 ಮಿಲಿಯನ್) ಆಂಧ್ರ ಪ್ರದೇಶಕ್ಕೆ ಪಾವತಿಸಲಾಗಿದೆ ಅಥವಾ ಪಾವತಿಸುವ ಭರವಸೆ ನೀಡಲಾಗಿದೆ

ಯುಎಸ್‌ಎಸ್‌ಇಸಿ ದೂರಿನ ಪ್ರಕಾರ, ಅದಾನಿ ಗ್ರೀನ್ ಎನರ್ಜಿ ಕಂಪನಿಯ ಕಾರ್ಯಕಾರಣಿಗಳು ಅಝೂರ್‌ನ ಕಾರ್ಯನಿರ್ವಾಹಕರಿಗೆ ಇನ್‌ಫ್ರಾ ಪ್ಯಾರಾಗ್ರಾಫ್‌ಗಳು 131 ರಿಂದ 135 ರಲ್ಲಿ ನೀಡಿದ ಹೇಳಿಕೆಗಳಿಂದ” ಈವಿಷಯ ಬಹಿರಂಗಗೊಂಡಿದೆ”. ಅದಾನಿ ಗ್ರೀನ್ ಆಂತರಿಕ ದಾಖಲೆಗಳಲ್ಲೂಇದನ್ನು ಉಲ್ಲೇಖಿಸಲಾಗಿದೆ.

ಗೌತಮ್ ಅದಾನಿ ಅವರು ಜಗನ್ ಮೋಹನ್ ರೆಡ್ಡಿಯವರನ್ನು ಭೇಟಿಯಾಗಿ ಲಂಚ ಪಾವತಿಸಿದ ಅಥವಾ ಪಾವತಿಸುವ ಭರವಸೆ ನೀಡಿದ ಬೆನ್ನಲ್ಲೇ, ಆಂಧ್ರ ಪ್ರದೇಶ ಸರ್ಕಾರ ಎಸ್‌ಇಸಿಐನೊಂದಿಗೆ ವಿದ್ಯುತ್ ಖರೀದಿ ಒಪ್ಪಂದ ಮಾಡಿಕೊಳ್ಳಲು ತಾತ್ವಿಕ ಒಪ್ಪಿಗೆ ನೀಡಿತ್ತು. ಅದಾನಿ ಗ್ರೀನ್ ಮತ್ತು ಅಝೂರೆ ನಡುವಿನ ಆಂತರಿಕ ಸಂವಹನಗಳು ಕೂಡ ಆಂಧ್ರ ಪ್ರದೇಶ ಎಸ್ಇಸಿಐನಿಂದ ವಿದ್ಯುತ್ ಖರೀದಿಸಲು ಒಪ್ಪಿಕೊಂಡಿರುವುದನ್ನು ಹೇಳಿವೆ ಎಂದು ವರದಿಯಾಗಿದೆ.

ಅದಾನಿ ಅವರು ಜಗನ್ ಮೋಹನ್ ರೆಡ್ಡಿಯನ್ನು ಭೇಟಿಯಾದ ಒಂದು ವಾರದ ನಂತರ, ” ಕಳೆದ ತಿಂಗಳು ನಡೆದ ಸಚಿವ ಸಂಪುಟ ಸಭೆಯಲ್ಲಿ ವಿದ್ಯುತ್ ಖರೀದಿಸುವ ಎಸ್ಇಸಿಐ ಪ್ರಸ್ತಾಪವನ್ನು ಒಪ್ಪಿಕೊಂಡು ಮೊದಲ ಹಂತದಲ್ಲಿ 7,000 ಮೆ.ವ್ಯಾ ವಿದ್ಯುತ್ ಖರೀದಿಸಲು ತೀರ್ಮಾನಿಸಲಾಗಿದೆ” ಎಂದು ಸರ್ಕಾರ ಸಾರ್ವಜನಿಕವಾಗಿ ಹೇಳಿತ್ತು. ‘ಇದನ್ನು ಬೇರೆ ರೀತಿಯಲ್ಲಿ ಹೇಳುವುದಾದರೆ, ಪಾವತಿಸಿದ ಅಥವಾ ಭರವಸೆ ನೀಡಿದ ಲಂಚವು ಕೆಲಸ ಮಾಡಿದೆ” ಎಂದರ್ಥ ಎಂದು ಯುಎಸ್‌ಎಸ್‌ಇಸಿ ದೂರಿನಲ್ಲಿ ಹೇಳಿದೆ.

ಅದಾನಿ ಗ್ರೀನ್‌ ಎನರ್ಜಿಯ ಆಂತರಿಕ ದಾಖಲೆಗಳಲ್ಲಿ ಈ ಲಂಚದ ಬಗ್ಗೆ ವಿವರಗಳನ್ನು ಉಲ್ಲೇಖಿಸಲಾಗಿದೆ ಎಂದು ಯುನೈಟೆಡ್ ಸ್ಟೇಟ್ಸ್‌ನ ದೋಷಾರೋಪಣೆ ಪಟ್ಟಿಯಲ್ಲಿ ಪದೇ ಪದೇ ಉಲ್ಲೇಖಿಸಲ್ಪಟ್ಟಿದೆ ಎಂದು ವರದಿಯಾಗಿದೆ.

ಆರೋಪ ಅಲ್ಲಗಳೆದ ವೈಎಸ್‌ಆರ್‌ಸಿಪಿ

ತಮ್ಮ ವಿರುದ್ದದ ಆರೋಪಗಳಿಗೆ ಪ್ರತಿಕ್ರಿಯಿಸಿರುವ ವೈಎಸ್‌ಆರ್‌ಸಿಪಿ, ಅದಾನಿ ಜೊತೆ ಯಾವುದೇ ನೇರ ಒಪ್ಪಂದ ಮಾಡಿಕೊಂಡಿಲ್ಲ ಎಂದು ಗುರುವಾರ (ನ.21) ಹೇಳಿದೆ.

“ಎಸ್‌ಇಸಿಐ ಭಾರತ ಸರ್ಕಾರದ ಉದ್ಯಮ ಎಂದು ನಮೂದಿಸುವುದು ಅವಶ್ಯಕ. ಆಂಧ್ರ ಪ್ರದೇಶ ವಿದ್ಯುತ್ ನಿಗಮ ಮತ್ತು ಅದಾನಿ ಸಮೂಹಕ್ಕೆ ಸೇರಿದ ಇತರ ಯಾವುದೇ ಸಂಸ್ಥೆಗಳ ನಡುವೆ ಯಾವುದೇ ನೇರ ಒಪ್ಪಂದಗಳು ನಡೆದಿಲ್ಲ. ಆದ್ದರಿಂದ, ದೋಷಾರೋಪ ಪಟ್ಟಿಯಲ್ಲಿ ರಾಜ್ಯ ಸರ್ಕಾರದ ಮೇಲೆ ಮಾಡಿದ ಆರೋಪಗಳು ಸುಳ್ಳಾಗಿವೆ” ಎಂದು ವೈಎಸ್‌ಆರ್‌ಸಿಪಿ ಹೇಳಿಕೆಯಲ್ಲಿ ತಿಳಿಸಿದೆ.

ಈ ಹಿಂದಿನ ಆಂಧ್ರ ಪ್ರದೇಶ ಸರ್ಕಾರ, ಎಸ್‌ಇಸಿಐಯಿಂದ 25 ವರ್ಷಗಳ ಅವಧಿಗೆ ಕಿಲೋ ವ್ಯಾಟ್‌ಗೆ 2.49 ರೂ.ನಂತೆ 7,000 ಮೆ.ವ್ಯಾ ವಿದ್ಯುತ್ ಖರೀದಿಗೆ ಒಪ್ಪಂದ ಮಾಡಿಕೊಂಡಿದೆ. ಈ ಪೈಕಿ 2024-25 ಆರ್ಥಿಕ
ವರ್ಷದಲ್ಲಿ 3,000 ಮೆ.ವ್ಯಾ, 2025-26 ಆರ್ಥಿಕ ವರ್ಷದಲ್ಲಿ 3,000 ಮೆ.ವ್ಯಾ ಮತ್ತು ಆರ್ಥಿಕ ವರ್ಷ 2026-27ರಲ್ಲಿ 1,000 ಮೆ.ವ್ಯಾ ಅನ್ನು ಐಎಸ್‌ಟಿಎಸ್ (ಇಂಟರ್ ಸ್ಟೇಟ್ ಟ್ರಾನ್ಸ್ಮಿಷನ್ ಸಿಸ್ಟಮ್) ಶುಲ್ಕಗಳನ್ನು ಮನ್ನಾ ಮಾಡುವ ಮೂಲಕ ಖರೀದಿಸಲಿದೆ ಎಂದು ವೈಎಸ್‌ಆರ್‌ಸಿಪಿ ಹೇಳಿದೆ.

ಈ ಅಗ್ಗದ ದರದ ವಿದ್ಯುತ್ ಖರೀದಿಯು ವಾರ್ಷಿಕವಾಗಿ 3,700 ಕೋಟಿ ರೂಪಾಯಿಗಳ ಉಳಿತಾಯದೊಂದಿಗೆ ರಾಜ್ಯಕ್ಕೆ ದೊಡ್ಡ ಲಾಭ ಮಾಡಿಕೊಡುತ್ತದೆ. ಈ ಒಪ್ಪಂದವು 25 ವರ್ಷಗಳ ಅವಧಿಯದ್ದು, ಆದ್ದರಿಂದ 25 ವರ್ಷಗಳಲ್ಲಿ ರಾಜ್ಯವು ಹೆಚ್ಚಿನ ಲಾಭ ಮಾಡಿಕೊಳ್ಳಬಹುದು ಎಂದಿದೆ.

ಇದನ್ನೂ ಓದಿ : ಲಂಚ, ವಂಚನೆ ಪ್ರಕರಣ : ಅದಾನಿ ವಿರುದ್ದ ಅಮೆರಿಕದಲ್ಲಿ ದೋಷಾರೋಪ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ನನ್ನ ಮನೆ ಮೇಲೆ ದಾಳಿ ಮಾಡಿ… ಹೇಗೆ ಎದುರಿಸಬೇಕೆಂದು ಗೊತ್ತಿದೆ..’; ಬಿಜೆಪಿಗೆ ಮಮತಾ ಬ್ಯಾನರ್ಜಿ ಸವಾಲು

"ತಮ್ಮ ನಿವಾಸ ಮತ್ತು ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ನಾಯಕರ ನಿವಾಸವನ್ನು ಗುರಿಯಾಗಿಸಿಕೊಳ್ಳುವಂತೆ" ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಸೋಮವಾರ ಬಿಜೆಪಿಗೆ ಸವಾಲು ಹಾಕಿದರು. ರಾಜ್ಯದಲ್ಲಿ, ಟಿಎಂಸಿ ನಾಯಕರ ಮೇಲಿನ ದಾಳಿಗೆ...

ಬೆಂಗಳೂರು: ವಿಶೇಷ ಪೂಜೆ ಹೆಸರಿನಲ್ಲಿ ಐಟಿ ಅಧಿಕಾರಿಗೆ 35 ಲಕ್ಷ ವಂಚನೆ: 59 ವರ್ಷದ ‘ಗಿಳಿ ಶಾಸ್ತ್ರ’ ಹೇಳುವ ವ್ಯಕ್ತಿ ಬಂಧನ

ಬೆಂಗಳೂರು: ವಿಶೇಷ ಪೂಜೆ ಮಾಡುವುದಾಗಿ ಹೇಳಿಕೊಂಡು ಆದಾಯ ತೆರಿಗೆ ಅಧಿಕಾರಿಗೆ 35 ಲಕ್ಷ ರೂಪಾಯಿ ವಂಚಿಸಿದ ಆರೋಪದ ಮೇಲೆ ತಮಿಳುನಾಡು ಮೂಲದ 59 ವರ್ಷದ ವ್ಯಕ್ತಿಯನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಥೇಣಿಯ ಶೇಖರ್...

ಬಿಹಾರ| ರಾಜ್ಯಸಭಾ ಚುನಾವಣೆ ಮತದಾನದಿಂದ ಹೊರಗುಳಿದ ನಾಲ್ವರು ಶಾಸಕರು; ಮಹಾಘಟಬಂಧನ್‌ಗೆ ಹಿನ್ನಡೆ

ಸೋಮವಾರ ಸಂಜೆ 4 ಗಂಟೆಗೆ ಮುಕ್ತಾಯಗೊಂಡ ರಾಜ್ಯಸಭಾ ಚುನಾವಣೆಯಲ್ಲಿ ನಾಲ್ವರು ಶಾಸಕರು ಮತದಾನದಿಂದ ಹೊರಗುಳಿಯುವ ಮೂಲಕ ಬಿಹಾರದ ಮಹಾಘಟಬಂಧನ್‌ಗೆ ಭಾರಿ ಹಿನ್ನಡೆಯಾಗಿದೆ. ಐದನೇ ಸ್ಥಾನಕ್ಕಾಗಿ ನಡೆಯುವ ಸ್ಪರ್ಧೆಯಲ್ಲಿ ವಿರೋಧ ಮೈತ್ರಿಕೂಟದ ನಿರೀಕ್ಷೆಗೆ ಭಾರಿ...

ರಾಜ್ಯಸಭೆಯಲ್ಲಿ LPG ಕೊರತೆ ಪ್ರಸ್ತಾಪಿಸಿದ ಮಲ್ಲಿಕಾರ್ಜುನ ಖರ್ಗೆ; ಪ್ರತಿಪಕ್ಷ ಅರಾಜಕತೆ ಸೃಷ್ಟಿಸಲು ಯತ್ನಿಸುತ್ತಿದೆ ಎಂದ ಸರ್ಕಾರ !

ನವದೆಹಲಿ: ರಾಜ್ಯಸಭೆಯಲ್ಲಿ ಸೋಮವಾರ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಎಲ್‌ಪಿಜಿ ಕೊರತೆಯ ವಿಷಯವನ್ನು ಪ್ರಸ್ತಾಪಿಸಿದರು ಮತ್ತು ಅಡುಗೆ ಅನಿಲದ ಬಿಕ್ಕಟ್ಟು ಮತ್ತು ಕಾಳಸಂತೆಕೋರತನವನ್ನು ತಡೆಯಲು ಸರ್ಕಾರ ಮುನ್ನೆಚ್ಚರಿಕೆ ಕ್ರಮಗಳನ್ನು ತೆಗೆದುಕೊಂಡಿಲ್ಲ ಎಂದು...

ಬೆಂಗಳೂರು| ಹಣ ನೀಡಲು ನಿರಾಕರಿಸಿದ ವ್ಯಕ್ತಿಯನ್ನು ಮಕ್ಕಳ ಮುಂದೆಯೇ ಥಳಿಸಿ ಕೊಂದ ಗುಂಪು

ಹಣ ನೀಡಲು ನಿರಾಕರಿಸಿದ ತಂದೆಯನ್ನು ಮಕ್ಕಳ ಮುಂದೆಯೇ ಗುಂಪೊಂದು ಥಳಿಸಿ ಕೊಂದಿರುವ ಘಟನೆ ಬೆಂಗಳೂರಿನ ವಿಲ್ಸನ್ ಗಾರ್ಡನ್‌ನಲ್ಲಿ ಭಾನುವಾರ ರಾತ್ರಿ ನಡೆದಿದೆ. ವಿಲ್ಸನ್ ಗಾರ್ಡನ್‌ನ ಬಡಾ ಮಕನ್ ರಸ್ತೆ ಬಳಿ ರಶೀದ್ ಪಾಷಾ ಎಂದು...

ಅಬಕಾರಿ ನೀತಿ ಪ್ರಕರಣದಲ್ಲಿ ಖುಲಾಸೆ ಪ್ರಶ್ನಿಸಿ ಸಿಬಿಐ ಅರ್ಜಿ; ಪ್ರತಿಕ್ರಿಯಿಸಲು ಕೇಜ್ರಿವಾಲ್-ಸಿಸೋಡಿಯಾಗೆ ಸಮಯ ನೀಡಿದ ದೆಹಲಿ ಹೈಕೋರ್ಟ್

ದೆಹಲಿ ಅಬಕಾರಿ ನೀತಿ ಪ್ರಕರಣದಲ್ಲಿ ಮಾಜಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್, ಮಾಜಿ ಉಪಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಮತ್ತು ಇತರ 21 ಜನರ ತಮ್ಮ ಬಿಡುಗಡೆಯನ್ನು ಪ್ರಶ್ನಿಸಿ ಸಿಬಿಐ ಅರ್ಜಿಗೆ ಪ್ರತಿಕ್ರಿಯೆಗಳನ್ನು ಸಲ್ಲಿಸಲು ದೆಹಲಿ...

ಪ್ರಶ್ನೆಗಳಿಗೆ ಉತ್ತರಿಸದ ಸಚಿವರು: ಸದನ ಮುಂದೂಡಿದ ಸ್ಪೀಕರ್ ಯು.ಟಿ ಖಾದರ್

ಶಾಸಕರು ಕೇಳುವ ಪ್ರಶ್ನೆಗಳಿಗೆ ಉತ್ತರ ಒದಗಿಸದ ಸಚಿವರು ಮತ್ತು ಅಧಿಕಾರಿಗಳ ವಿರುದ್ದ ಸೋಮವಾರ (ಮಾ.16) ತೀವ್ರ ಅಸಮಾಧಾನ ವ್ಯಕ್ತಪಡಿಸಿದ ವಿಧಾನಸಭೆಯ ಸ್ಪೀಕರ್ ಯು.ಟಿ ಖಾದರ್, ಸದನವನ್ನು ಮುಂದೂಡಿಕೆ ಮಾಡಿ ಸರ್ಕಾರಕ್ಕೆ ಬಿಸಿ ಮುಟ್ಟಿಸಿದರು. ವಿಧಾನಸಭೆಯಲ್ಲಿ...

‘ಆಪರೇಷನ್ ಸಿಂಧೂರ್’ ಕುರಿತ ಪೋಸ್ಟ್: ಪ್ರೊಫೆಸರ್ ಅಲಿ ಖಾನ್ ಮಹ್ಮದಾಬಾದ್ ವಿರುದ್ಧದ ಪ್ರಕರಣಗಳನ್ನು ಕೈಬಿಟ್ಟ ಹರಿಯಾಣ ಸರ್ಕಾರ

'ಆಪರೇಷನ್ ಸಿಂಧೂರ್' ಕುರಿತು ಸಾಮಾಜಿಕ ಮಾಧ್ಯಮದಲ್ಲಿ ಪೋಸ್ಟ್ ಮಾಡಿದ್ದಕ್ಕಾಗಿ ಅಶೋಕ ವಿಶ್ವವಿದ್ಯಾಲಯದ ಪ್ರಾಧ್ಯಾಪಕ ಅಲಿ ಖಾನ್ ಮಹ್ಮದಾಬಾದ್ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಪ್ರಕರಣ ದಾಖಲಾಗಿತ್ತು. ಅವರ ವಿರುದ್ಧದ ಈ ಪ್ರಕರಣಗಳನ್ನು ಕೈಬಿಟ್ಟಿರುವುದಾಗಿ ಹರಿಯಾಣ...

ಎಲ್‌ಪಿಜಿ ಬಿಕ್ಕಟ್ಟಿನ ನಡುವೆ ಆಧಾರ್ ಮೂಲಕ ‘ಇ-ಕೆವೈಸಿ’ ಮಾಡಿಸಿಕೊಳ್ಳುವಂತೆ ಸರ್ಕಾರದ ಸೂಚನೆ

ದ್ರವೀಕೃತ ಪೆಟ್ರೋಲಿಯಂ ಅನಿಲ (ಎಲ್‌ಪಿಜಿ) ಬಳಸುವ 330 ಮಿಲಿಯನ್‌ಗಿಂತಲೂ ಹೆಚ್ಚು ಗ್ರಾಹಕರು ತಮ್ಮ ಎಲೆಕ್ಟ್ರಾನಿಕ್ ನೋ ಯುವರ್ ಕಸ್ಟಮರ್ (ಇ-ಕೆವೈಸಿ) ಅನ್ನು ಬಯೋಮೆಟ್ರಿಕ್ ಆಧಾರ್ ದೃಢೀಕರಣ ವ್ಯವಸ್ಥೆಯ ಮೂಲಕ ಮಾಡಿಸಿಕೊಳ್ಳಬೇಕು ಎಂದು ಸರ್ಕಾರ...

ಚುನಾವಣೆ ಘೋಷಣೆಯಾದ ಬೆನ್ನಲ್ಲೇ ಪಶ್ಚಿಮ ಬಂಗಾಳದ ಮುಖ್ಯ ಕಾರ್ಯದರ್ಶಿ, ಗೃಹ ಕಾರ್ಯದರ್ಶಿ, ಉನ್ನತ ಪೊಲೀಸ್ ಅಧಿಕಾರಿಗಳನ್ನು ಬದಲಾಯಿಸಿದ ಚು. ಆಯೋಗ

ನಿರೀಕ್ಷೆಯಂತೆ ಚುನಾವಣೆ ಘೋಷಣೆಯಾದ ಬೆನ್ನಲ್ಲೇ ಚುನಾವಣಾ ಆಯೋಗ ಪಶ್ಚಿಮ ಬಂಗಾಳದಲ್ಲಿ ತನ್ನ ಆಟ ಶುರು ಮಾಡಿದೆ. ರಾಜ್ಯದ ಸರ್ಕಾದ ಮುಖ್ಯ ಕಾರ್ಯದರ್ಶಿ, ಗೃಹ ಕಾರ್ಯದರ್ಶಿ ಮತ್ತು ಉನ್ನತ ಪೊಲೀಸ್ ಅಧಿಕಾರಿಗಳನ್ನು ಬದಲಾಯಿಸಿದೆ. ಪಶ್ಚಿಮ ಬಂಗಾಳ...