Homeಮುಖಪುಟವಿದ್ಯುತ್ ಖರೀದಿ ಹಗರಣ | ಜಗನ್ ಮೋಹನ್ ರೆಡ್ಡಿಗೆ ₹1,750 ಕೋಟಿ ಲಂಚದ ಭರವಸೆ ನೀಡಿದ್ದ...

ವಿದ್ಯುತ್ ಖರೀದಿ ಹಗರಣ | ಜಗನ್ ಮೋಹನ್ ರೆಡ್ಡಿಗೆ ₹1,750 ಕೋಟಿ ಲಂಚದ ಭರವಸೆ ನೀಡಿದ್ದ ಗೌತಮ್ ಅದಾನಿ : ಆರೋಪ

- Advertisement -
- Advertisement -

ಸೌರ ವಿದ್ಯುತ್ ಗುತ್ತಿಗೆಗೆ ಸಂಬಂಧಿಸಿದ ಶತಕೋಟಿ ಡಾಲರ್ ಲಂಚ ಹಾಗೂ ವಂಚನೆ ಪ್ರಕರಣದಲ್ಲಿ ಅದಾನಿ ಗ್ರೀನ್ ಎನರ್ಜಿ ಕಂಪನಿಯ ಅಧ್ಯಕ್ಷ ಗೌತಮ್ ಅದಾನಿ ಹಾಗೂ ಇತರರ ವಿರುದ್ದ ಯುಎಸ್‌ ಫೆಡರಲ್ ನ್ಯಾಯಾಲಯ ಗುರುವಾರ (ನ.21) ಬಂಧನ ವಾರೆಂಟ್ ಜಾರಿಗೊಳಿಸಿದೆ.

ಗೌತಮ್ ಅದಾನಿ, ಅವರ ಸೋದರಳಿಯ ಸಾಗರ್ ಅದಾನಿ ಸೇರಿದಂತೆ ಇತರ ಏಳು ಆರೋಪಿಗಳು 20 ವರ್ಷಗಳಲ್ಲಿ 2 ಶತಕೋಟಿ ಡಾಲರ್ ಲಾಭವನ್ನು ನಿರೀಕ್ಷಿಸುವ ಸೌರಶಕ್ತಿ ಪೂರೈಕೆ ಒಪ್ಪಂದಗಳನ್ನು ಪಡೆಯಲು ಭಾರತೀಯ ಸರ್ಕಾರಿ ಅಧಿಕಾರಿಗಳಿಗೆ ಸುಮಾರು 265 ಮಿಲಿಯನ್ ಡಾಲರ್ ಲಂಚ ನೀಡಲು ಒಪ್ಪಂದ ಮಾಡಿಕೊಂಡಿರುವ ಗಂಭೀರ ಆರೋಪವಿದೆ.

ಯುನೈಟೆಡ್ ಸ್ಟೇಟ್ಸ್ ಸೆಕ್ಯುರಿಟೀಸ್ ಅಂಡ್ ಎಕ್ಸ್ಚೇಂಜ್ ಕಮಿಷನ್ (ಯುಎಸ್ಇಸಿ) ದೂರಿಗೆ ಸಂಬಂಧಿಸಿದಂತೆ ತನಿಖೆ ನಡೆಸಿದ್ದ ಫೆಡರಲ್ ಪ್ಯಾಸಿಕ್ಯೂಟರ್, ನ್ಯಾಯಾಲಯಕ್ಕೆ ದೋಷಾರೋಪ ಪಟ್ಟಿ ಸಲ್ಲಿಸಿದ್ದರು. ಅದನ್ನು ಪರಿಗಣಿಸಿದ ನ್ಯಾಯಾಲಯ ಬಂಧನ ವಾರೆಂಟ್ ಹೊರಡಿಸಿದೆ.

ಯುಎಸ್ಇಸಿ ನೀಡಿದ್ದ ದೂರಿನಲ್ಲಿ, ಗೌತಮ್ ಅದಾನಿ ವೈಎಸ್‌ಆರ್‌ಸಿಪಿ ಮುಖ್ಯಸ್ಥ ಹಾಗೂ ಆಂಧ್ರ ಪ್ರದೇಶದ ಮಾಜಿ ಮುಖ್ಯಮಂತ್ರಿ ವೈಎಸ್‌ ಜಗನ್ ಮೋಹನ್ ರೆಡ್ಡಿ ಅವರಿಗೆ 2021ರ ಆಗಸ್ಟ್‌ನಲ್ಲಿ ಅಂದಾಜು ರೂ.1750 ಕೋಟಿ (ಸುಮಾರು $228 ಮಿಲಿಯನ್) ಲಂಚ ನೀಡಿದ್ದಾರೆ ಎಂದು ಆರೋಪಿಸಿದ್ದಾಗಿ ವರದಿಯಾಗಿದೆ.

ಯುಎಸ್‌ ಅಟಾರ್ನಿ ಕಚೇರಿಯ ಪ್ರಕಾರ, 2021 ಮತ್ತು 2022 ರಲ್ಲಿ ಗೌತಮ್ ಅದಾನಿಯವರು ಆಂಧ್ರ ಪ್ರದೇಶದ ಸಿಎಂ ಮತ್ತು ಸರ್ಕಾರಿ ಅಧಿಕಾರಿಗಳನ್ನು ವೈಯಕ್ತಿಕವಾಗಿ ಭೇಟಿ ಮಾಡಿದ್ದರು. ಈ ವೇಳೆ ಸೋಲಾರ್ ಎನರ್ಜಿ ಕಾರ್ಪೊರೇಷನ್ ಆಫ್ ಇಂಡಿಯಾ (ಎಸ್‌ಇಸಿಐ) ಯೊಂದಿಗೆ ವಿದ್ಯುತ್ ಮಾರಾಟ ಒಪ್ಪಂದಗಳಿಗೆ ಸಹಿ ಹಾಕಲು ಲಂಚ ನೀಡಿದ್ದರು.

ಯುಎಸ್ಇಸಿ ದೂರು ಮತ್ತು ಪ್ಯಾಸಿಕ್ಯೂಟರ್ ದೋಷಾರೋಪಪಟ್ಟಿಯ ಪ್ರಕಾರ, ಬೆಲೆ ಹೆಚ್ಚಾಗಿದ್ದರಿಂದ ಅನೇಕ ರಾಜ್ಯ ಸರ್ಕಾರಗಳು ಎಸ್‌ಇಸಿಐನಿಂದ ವಿದ್ಯುತ್ ಖರೀದಿಸಲು ನಿರಾಕರಿಸಿದ್ದವು. ಆ ಸಮಯದಲ್ಲಿ ಗೌತಮ್ ಅದಾನಿ ಮತ್ತು ಸಾಗರ್ ಅದಾನಿ ಮಧ್ಯಪ್ರವೇಶಿಸಿದ್ದರು. ದಾಖಲೆಗಳ ಪ್ರಕಾರ ದೊಡ್ಡ ಮೊತ್ತದ ಲಂಚವನ್ನು ಪಾವತಿಸಿದ್ದರು ಅಥವಾ ನೀಡುವುದಾಗಿ ಭರವಸೆ ನೀಡಿದ್ದರು.

“ಅಗತ್ಯ ಸೌಲಭ್ಯದ ಕೊರತೆ ಹಿನ್ನೆಲೆ ಆಂಧ್ರ ಪ್ರದೇಶ ಸರ್ಕಾರ ಎಸ್‌ಇಸಿಐನಿಂದ ವಿದ್ಯುತ್ ಖರೀದಿಸಲು ಒಪ್ಪಂದ ಮಾಡಿಕೊಂಡಿರಲಿಲ್ಲ. ಹಾಗಾಗಿ, ಆಗಸ್ಟ್ 2021ರಲ್ಲಿ, ಗೌತಮ್ ಅದಾನಿ ಜಗನ್ ಮೋಹನ್ ರೆಡ್ಡಿಯವರನ್ನು ವೈಯಕ್ತಿಕವಾಗಿ ಭೇಟಿಯಾಗಿದ್ದರು” ಎಂದು ಯುಎಸ್ಇಸಿ ತನ್ನ ದೂರಿನಲ್ಲಿ (Case 1:24-cv-08080)ಆರೋಪಿಸಿದೆ ಮತ್ತು ಆರೋಪಿಗಳಾದ ಗೌತಮ್ ಅದಾನಿ ಮತ್ತು ಸಾಗರ್ ಅದಾನಿ ವಿರುದ್ಧ ಜ್ಯೂರಿ ವಿಚಾರಣೆಗೆ ಒತ್ತಾಯಿಸಿದೆ.

ಜಗನ್ ಮೋಹನ್ ರೆಡ್ಡಿಯವರನ್ನು ಗೌತಮ್ ಅದಾನಿ ಭೇಟಿಯಾದಾಗ 7,000 ಮೆಗಾ ವ್ಯಾಟ್ ಸಾಮರ್ಥ್ಯದ ವಿದ್ಯುತ್ ಖರೀದಿಗೆ ಸಂಬಂಧಿಸಿ ಎಸ್‌ಇಸಿಐನೊಂದಿಗೆ ಒಪ್ಪಂದ ಮಾಡಿಕೊಳ್ಳಲು ಆಂಧ್ರ ಪ್ರದೇಶದ ಸರ್ಕಾರಿ ಅಧಿಕಾರಿಗಳಿಗೆ ಲಂಚ ಪಾವತಿಸಿದ್ದಾರೆ ಅಥವಾ ಭರವಸೆ ನೀಡಿದ್ದಾರೆ” ಎಂದು ಯುಎಸ್ಇಸಿ ದೂರಿನಲ್ಲಿ ತಿಳಿಸಿದೆ.

ಅದಾನಿ ವಿರುದ್ದದ ದೋಷಾರೋಪ ಪಟ್ಟಿಯ ಪ್ರಕಾರ, ಆಂಧ್ರ ಪ್ರದೇಶ, ಒಡಿಶಾ, ಜಮ್ಮು ಮತ್ತು ಕಾಶ್ಮೀರ, ತಮಿಳುನಾಡು, ಛತ್ತೀಸ್‌ಗಢ ರಾಜ್ಯ ಸರ್ಕಾರಗಳಿಗೆ ನೀಡಲಾದ ಒಟ್ಟು ಲಂಚ ಸರಿಸುಮಾರು ರೂ.2029 ಕೋಟಿಗಳು (ಸುಮಾರು $265 ಮಿಲಿಯನ್), ಅದರಲ್ಲಿ ಸುಮಾರು 85 ಪ್ರತಿಶತ, ಅಂದರೆ ರೂ.1750 ಕೋಟಿಗಳು ($228 ಮಿಲಿಯನ್) ಆಂಧ್ರ ಪ್ರದೇಶಕ್ಕೆ ಪಾವತಿಸಲಾಗಿದೆ ಅಥವಾ ಪಾವತಿಸುವ ಭರವಸೆ ನೀಡಲಾಗಿದೆ

ಯುಎಸ್‌ಎಸ್‌ಇಸಿ ದೂರಿನ ಪ್ರಕಾರ, ಅದಾನಿ ಗ್ರೀನ್ ಎನರ್ಜಿ ಕಂಪನಿಯ ಕಾರ್ಯಕಾರಣಿಗಳು ಅಝೂರ್‌ನ ಕಾರ್ಯನಿರ್ವಾಹಕರಿಗೆ ಇನ್‌ಫ್ರಾ ಪ್ಯಾರಾಗ್ರಾಫ್‌ಗಳು 131 ರಿಂದ 135 ರಲ್ಲಿ ನೀಡಿದ ಹೇಳಿಕೆಗಳಿಂದ” ಈವಿಷಯ ಬಹಿರಂಗಗೊಂಡಿದೆ”. ಅದಾನಿ ಗ್ರೀನ್ ಆಂತರಿಕ ದಾಖಲೆಗಳಲ್ಲೂಇದನ್ನು ಉಲ್ಲೇಖಿಸಲಾಗಿದೆ.

ಗೌತಮ್ ಅದಾನಿ ಅವರು ಜಗನ್ ಮೋಹನ್ ರೆಡ್ಡಿಯವರನ್ನು ಭೇಟಿಯಾಗಿ ಲಂಚ ಪಾವತಿಸಿದ ಅಥವಾ ಪಾವತಿಸುವ ಭರವಸೆ ನೀಡಿದ ಬೆನ್ನಲ್ಲೇ, ಆಂಧ್ರ ಪ್ರದೇಶ ಸರ್ಕಾರ ಎಸ್‌ಇಸಿಐನೊಂದಿಗೆ ವಿದ್ಯುತ್ ಖರೀದಿ ಒಪ್ಪಂದ ಮಾಡಿಕೊಳ್ಳಲು ತಾತ್ವಿಕ ಒಪ್ಪಿಗೆ ನೀಡಿತ್ತು. ಅದಾನಿ ಗ್ರೀನ್ ಮತ್ತು ಅಝೂರೆ ನಡುವಿನ ಆಂತರಿಕ ಸಂವಹನಗಳು ಕೂಡ ಆಂಧ್ರ ಪ್ರದೇಶ ಎಸ್ಇಸಿಐನಿಂದ ವಿದ್ಯುತ್ ಖರೀದಿಸಲು ಒಪ್ಪಿಕೊಂಡಿರುವುದನ್ನು ಹೇಳಿವೆ ಎಂದು ವರದಿಯಾಗಿದೆ.

ಅದಾನಿ ಅವರು ಜಗನ್ ಮೋಹನ್ ರೆಡ್ಡಿಯನ್ನು ಭೇಟಿಯಾದ ಒಂದು ವಾರದ ನಂತರ, ” ಕಳೆದ ತಿಂಗಳು ನಡೆದ ಸಚಿವ ಸಂಪುಟ ಸಭೆಯಲ್ಲಿ ವಿದ್ಯುತ್ ಖರೀದಿಸುವ ಎಸ್ಇಸಿಐ ಪ್ರಸ್ತಾಪವನ್ನು ಒಪ್ಪಿಕೊಂಡು ಮೊದಲ ಹಂತದಲ್ಲಿ 7,000 ಮೆ.ವ್ಯಾ ವಿದ್ಯುತ್ ಖರೀದಿಸಲು ತೀರ್ಮಾನಿಸಲಾಗಿದೆ” ಎಂದು ಸರ್ಕಾರ ಸಾರ್ವಜನಿಕವಾಗಿ ಹೇಳಿತ್ತು. ‘ಇದನ್ನು ಬೇರೆ ರೀತಿಯಲ್ಲಿ ಹೇಳುವುದಾದರೆ, ಪಾವತಿಸಿದ ಅಥವಾ ಭರವಸೆ ನೀಡಿದ ಲಂಚವು ಕೆಲಸ ಮಾಡಿದೆ” ಎಂದರ್ಥ ಎಂದು ಯುಎಸ್‌ಎಸ್‌ಇಸಿ ದೂರಿನಲ್ಲಿ ಹೇಳಿದೆ.

ಅದಾನಿ ಗ್ರೀನ್‌ ಎನರ್ಜಿಯ ಆಂತರಿಕ ದಾಖಲೆಗಳಲ್ಲಿ ಈ ಲಂಚದ ಬಗ್ಗೆ ವಿವರಗಳನ್ನು ಉಲ್ಲೇಖಿಸಲಾಗಿದೆ ಎಂದು ಯುನೈಟೆಡ್ ಸ್ಟೇಟ್ಸ್‌ನ ದೋಷಾರೋಪಣೆ ಪಟ್ಟಿಯಲ್ಲಿ ಪದೇ ಪದೇ ಉಲ್ಲೇಖಿಸಲ್ಪಟ್ಟಿದೆ ಎಂದು ವರದಿಯಾಗಿದೆ.

ಆರೋಪ ಅಲ್ಲಗಳೆದ ವೈಎಸ್‌ಆರ್‌ಸಿಪಿ

ತಮ್ಮ ವಿರುದ್ದದ ಆರೋಪಗಳಿಗೆ ಪ್ರತಿಕ್ರಿಯಿಸಿರುವ ವೈಎಸ್‌ಆರ್‌ಸಿಪಿ, ಅದಾನಿ ಜೊತೆ ಯಾವುದೇ ನೇರ ಒಪ್ಪಂದ ಮಾಡಿಕೊಂಡಿಲ್ಲ ಎಂದು ಗುರುವಾರ (ನ.21) ಹೇಳಿದೆ.

“ಎಸ್‌ಇಸಿಐ ಭಾರತ ಸರ್ಕಾರದ ಉದ್ಯಮ ಎಂದು ನಮೂದಿಸುವುದು ಅವಶ್ಯಕ. ಆಂಧ್ರ ಪ್ರದೇಶ ವಿದ್ಯುತ್ ನಿಗಮ ಮತ್ತು ಅದಾನಿ ಸಮೂಹಕ್ಕೆ ಸೇರಿದ ಇತರ ಯಾವುದೇ ಸಂಸ್ಥೆಗಳ ನಡುವೆ ಯಾವುದೇ ನೇರ ಒಪ್ಪಂದಗಳು ನಡೆದಿಲ್ಲ. ಆದ್ದರಿಂದ, ದೋಷಾರೋಪ ಪಟ್ಟಿಯಲ್ಲಿ ರಾಜ್ಯ ಸರ್ಕಾರದ ಮೇಲೆ ಮಾಡಿದ ಆರೋಪಗಳು ಸುಳ್ಳಾಗಿವೆ” ಎಂದು ವೈಎಸ್‌ಆರ್‌ಸಿಪಿ ಹೇಳಿಕೆಯಲ್ಲಿ ತಿಳಿಸಿದೆ.

ಈ ಹಿಂದಿನ ಆಂಧ್ರ ಪ್ರದೇಶ ಸರ್ಕಾರ, ಎಸ್‌ಇಸಿಐಯಿಂದ 25 ವರ್ಷಗಳ ಅವಧಿಗೆ ಕಿಲೋ ವ್ಯಾಟ್‌ಗೆ 2.49 ರೂ.ನಂತೆ 7,000 ಮೆ.ವ್ಯಾ ವಿದ್ಯುತ್ ಖರೀದಿಗೆ ಒಪ್ಪಂದ ಮಾಡಿಕೊಂಡಿದೆ. ಈ ಪೈಕಿ 2024-25 ಆರ್ಥಿಕ
ವರ್ಷದಲ್ಲಿ 3,000 ಮೆ.ವ್ಯಾ, 2025-26 ಆರ್ಥಿಕ ವರ್ಷದಲ್ಲಿ 3,000 ಮೆ.ವ್ಯಾ ಮತ್ತು ಆರ್ಥಿಕ ವರ್ಷ 2026-27ರಲ್ಲಿ 1,000 ಮೆ.ವ್ಯಾ ಅನ್ನು ಐಎಸ್‌ಟಿಎಸ್ (ಇಂಟರ್ ಸ್ಟೇಟ್ ಟ್ರಾನ್ಸ್ಮಿಷನ್ ಸಿಸ್ಟಮ್) ಶುಲ್ಕಗಳನ್ನು ಮನ್ನಾ ಮಾಡುವ ಮೂಲಕ ಖರೀದಿಸಲಿದೆ ಎಂದು ವೈಎಸ್‌ಆರ್‌ಸಿಪಿ ಹೇಳಿದೆ.

ಈ ಅಗ್ಗದ ದರದ ವಿದ್ಯುತ್ ಖರೀದಿಯು ವಾರ್ಷಿಕವಾಗಿ 3,700 ಕೋಟಿ ರೂಪಾಯಿಗಳ ಉಳಿತಾಯದೊಂದಿಗೆ ರಾಜ್ಯಕ್ಕೆ ದೊಡ್ಡ ಲಾಭ ಮಾಡಿಕೊಡುತ್ತದೆ. ಈ ಒಪ್ಪಂದವು 25 ವರ್ಷಗಳ ಅವಧಿಯದ್ದು, ಆದ್ದರಿಂದ 25 ವರ್ಷಗಳಲ್ಲಿ ರಾಜ್ಯವು ಹೆಚ್ಚಿನ ಲಾಭ ಮಾಡಿಕೊಳ್ಳಬಹುದು ಎಂದಿದೆ.

ಇದನ್ನೂ ಓದಿ : ಲಂಚ, ವಂಚನೆ ಪ್ರಕರಣ : ಅದಾನಿ ವಿರುದ್ದ ಅಮೆರಿಕದಲ್ಲಿ ದೋಷಾರೋಪ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ನಿರುದ್ಯೋಗಿ ಯುವಕರನ್ನು ಜಿರಳೆಗಳು ಎಂದ ಸಿಜೆಐ: ಇದೆಂತಾ ಮಾತು ನ್ಯಾಯಮೂರ್ತಿಗಳೇ!

‘ಕೆಲವು ನಿರುದ್ಯೋಗಿ ಯುವಕರು ಜಿರಳೆಗಳಂತೆ ಸಮಾಜವನ್ನು ಕಾಡುತ್ತಾರೆ. ಉದ್ಯೋಗ, ಸ್ಥಾನಮಾನ ಸಿಗದೆ ಇದ್ದಾಗ ಅವರು ಎಲ್ಲರ ಮೇಲೆ ದಾಳಿ ಆರಂಭಿಸುತ್ತಾರೆ’ ಇದು ಯಾವುದೋ ರಾಜಕೀಯ ರ‍್ಯಾಲಿಯ ಭಾಷಣವಲ್ಲ ಅಥವಾ ಟಿವಿ ಚಾನೆಲ್‌ಗಳ ಜಗಳವಲ್ಲ,...

ಮುಸ್ಲಿಮರು ಕೇವಲ ವೋಟು ಹಾಕಿಕೊಂಡೇ ಇರಬೇಕಾ..ಹಕ್ಕುಗಳನ್ನು ಕೇಳಬಾರದಾ?: ಕಾಂಗ್ರೆಸ್‌ಗೆ ಮುಸ್ಲಿಂ ಸಮಾವೇಶ ಪ್ರಶ್ನೆ

"ಮುಸ್ಲಿಮರು ಕೇವಲ ವೋಟು ಹಾಕಿಕೊಂಡೇ ಇರಬೇಕಾ? ಯಾವ ಹಕ್ಕನ್ನೂ ಕೇಳಬಾರದು ಎಂದು ನೀವು (ಕಾಂಗ್ರೆಸ್‌ನವರು) ಬಯಸುತ್ತಿದ್ದೀರಾ?" ಎಂದು ಕರ್ನಾಟಕ ಮುಸ್ಲಿಂ ಸಮಾವೇಶ ಖಾರವಾಗಿ ಪ್ರಶ್ನಿಸಿತು. ಬೆಂಗಳೂರಿನ ಪುರಭವನದಲ್ಲಿ ಇಂದು (ಮೇ 16, ಶನಿವಾರ) ನಡೆದ...

“ಸನಾತನ ಬೇರುಗಳಲ್ಲಿರುವ ಅಸಮಾನತೆಗೆ ದ್ರಾವಿಡ ನೆಲದ ಪ್ರತಿರೋಧ”: ಉದಯನಿಧಿ ಹೇಳಿಕೆ ವಿವಾದವಾಗಿದ್ದೇಗೆ..?

ಸನಾತನ ಸಂಸ್ಥೆಗಳನ್ನು ಮತ್ತು ಸನಾತನ ಧರ್ಮವನ್ನು ನಿರ್ಮೂಲನೆ ಮಾಡುವ ಬಗ್ಗೆ ಉದಯನಿಧಿ ಸ್ಟಾಲಿನ್ ಅವರ ಹೇಳಿಕೆಗಳು ಸದ್ಯ ದೇಶಾದ್ಯಂತ ಸಂಚಲನ ಮೂಡಿಸಿವೆ.  ತಮಿಳುನಾಡು ವಿಧಾನಸಭೆಯಲ್ಲಿ ನೂತನ ಮುಖ್ಯಮಂತ್ರಿಯಾಗಿ ಸಿ. ಜೋಸೆಫ್ ವಿಜಯ್ ಅವರು ಅಧಿಕಾರ...

ನೇತ್ರಾವತಿ ತೀರದಲ್ಲಿ ‘ಅಂತರಗಂಗೆ’ಯಂತೆ ಹರಿಯುತ್ತಿರುವ ಪ್ರತಿರೋಧ: ವೇದವಲ್ಲಿಯಿಂದ ಸೌಜನ್ಯಳವರೆಗೆ ಪ್ರತಿಧ್ವನಿಸುತ್ತಿರುವ ಪ್ರಶ್ನೆ-‘ಕೊಂದವರು ಯಾರು?’

ಪ್ರಪಂಚದಾದ್ಯಂತ ಪಿತೃಪ್ರಧಾನ ವ್ಯವಸ್ಥೆ ಮತ್ತು ಪ್ರಭುತ್ವಗಳು ಹಲವು ರೀತಿಗಳಲ್ಲಿ ಮಹಿಳೆಯರನ್ನು ದಮನಿಸುವ ವಿಧಾನಗಳನ್ನು ಕಂಡುಕೊಂಡು ಕರಗತ ಮಾಡಿಕೊಂಡಿವೆ. ಅದರಲ್ಲಿ ಅತ್ಯಂತ ಪರಿಣಾಮಕಾರಿಯಾದುದು, ದೇವರು, ಭಕ್ತಿ ಮತ್ತು ಧರ್ಮದ ಹೆಸರಿನಲ್ಲಿ ಮಹಿಳೆಯರನ್ನು ದಮನಕ್ಕೊಳಪಡಿಸುವ ತಂತ್ರ....

ರೂ. 170 ಕೋಟಿ ದಂಡ ಪಾವತಿಸಲು ಮುಂದಾದ ಅದಾನಿ : ಏನಿದು ಪ್ರಕರಣ?

ಅಮೆರಿಕದ ನ್ಯಾಯಾಲಯದಲ್ಲಿ ದಾಖಲಾಗಿದ್ದ ವಂಚನೆ ಮತ್ತು ಲಂಚದ ಪ್ರಕರಣಕ್ಕೆ ಸಂಬಂಧಿಸಿದಂತೆ, ಉದ್ಯಮಿ ಗೌತಮ್ ಅದಾನಿ ಮತ್ತು ಅವರ ಸೋದರಳಿಯ ಸಾಗರ್ ಅದಾನಿ ಒಟ್ಟು 18 ಮಿಲಿಯನ್ ಡಾಲರ್ (ಸುಮಾರು 170 ಕೋಟಿ ರೂಪಾಯಿ) ದಂಡ ಪಾವತಿಸಲು ಒಪ್ಪಿಕೊಳ್ಳುವ ಮೂಲಕ...

ಭೋಜಶಾಲಾ-ಕಮಲ್ ಮೌಲಾ ಪ್ರಕರಣದಲ್ಲಿ ಹಿಂದೂಗಳ ಪರ ತೀರ್ಪು…ಮಸೀದಿಯಲ್ಲ ದೇವಸ್ಥಾನವೆಂದ ಕೋರ್ಟ್ : ಏನಿದು ವಿವಾದ?

ಸುಮಾರು 100 ವರ್ಷಗಳ ಹಳೆಯ ವಿವಾದವಾದ ಭೋಜಶಾಲಾ-ಕಮಲ್ ಮೌಲಾ ಮಸೀದಿ ಪ್ರಕರಣದಲ್ಲಿ ಶುಕ್ರವಾರ (ಮೇ 15) ಮಧ್ಯಪ್ರದೇಶ ಹೈಕೋರ್ಟ್ ತೀರ್ಪು ನೀಡಿದ್ದು, ಭೋಜಶಾಲಾದಲ್ಲಿರುವ ಐತಿಹಾಸಿಕ ಸ್ಥಳವು ಸರಸ್ವತಿ ದೇವಿಗೆ ಸಮರ್ಪಿತವಾದ ದೇವಾಲಯವಾಗಿದೆ ಎಂದು...

“ಮಹಿಳಾ ಮೀಸಲಾತಿ ಮುಖವಾಡದಲ್ಲಿ ಡಿಲಿಮಿಟೇಷನ್ ಕುತಂತ್ರ ವಿಫಲ” ಬಿಜೆಪಿಗೆ ದಕ್ಷಿಣ ಭಾರತದ ಎಚ್ಚರಿಕೆ

ಮೋದಿ ನೇತೃತ್ವದ ಕೇಂದ್ರ ಸರ್ಕಾರವು 2026ರ ಏಪ್ರಿಲ್ 16ರಂದು ಸಂಸತ್ತಿನ ವಿಶೇಷ ಅಧಿವೇಶನ ಕರೆದು, ಮಹಿಳಾ ಮೀಸಲಾತಿ ಅನುಷ್ಠಾನವನ್ನು ತ್ವರಿತಗೊಳಿಸುವ ನೆಪವನ್ನು ಮುಂದುಮಾಡಿ ಮೂರು ಮಸೂದೆಗಳನ್ನು ಮಂಡಿಸಿತು. ಇವುಗಳಲ್ಲಿ ಪ್ರಮುಖವಾದ ಸಂವಿಧಾನ (131ನೇ...

ಹೊಸ ಕಾರ್ಮಿಕ ಕಾನೂನು ಶ್ರಮಿಕರ ಮೂಲಭೂತ ಹಕ್ಕುಗಳಿಗೆ ಕತ್ತರಿ!

"8 ಗಂಟೆ ಕೆಲಸ, 8 ಗಂಟೆ ಮನರಂಜನೆ, 8 ಗಂಟೆ ವಿಶ್ರಾಂತಿ" ಎಂಬ ತತ್ವವು ಸುಲಭವಾಗಿ ದೊರೆತದ್ದಲ್ಲ, ಇದು ದೀರ್ಘಕಾಲದ ಹೋರಾಟ, ತ್ಯಾಗ ಮತ್ತು ಏಕತೆಯ ಫಲವಾಗಿದೆ. ಕೆಲಸದ ಹೊರೆ ಅತಿಯಾಗಿ ಇದ್ದ...

ಮನರೇಗಾ ಯಶೋಗಾಥೆ: ಭಾಗ-1 ದಲಿತರು-ಮಹಿಳೆಯರಿಗೆ ಆರ್ಥಿಕ ಭದ್ರತೆ; ಗ್ರಾಮ ಸಬಲೀಕರಣಕ್ಕೆ ಮನರೇಗಾ ಕೊಟ್ಟ ಕೊಡುಗೆ ಅಪಾರ

2001-2004 ರವರೆಗಿನ ನಿರಂತರ ಬರ ಕರ್ನಾಟಕದ ಬಹುತೇಕ ಹಳ್ಳಿಗಳನ್ನು ಕಂಗಾಲಾಗಿಸಿದ್ದಂತೂ ನಿಜ. ಎಲ್ಲ ಕೆರೆಗಳು ಬತ್ತಿಹೋಗಿದ್ದರಿಂದ ದನಕರುಗಳಿಗೆ ನೀರು ಕುಡಿಸಲೂ ಜನ ಅಲೆದಾಡುತ್ತಿದ್ದರು. ಜನರಿಗೆ ಕುಡಿಯುವ ನೀರು ಪೂರೈಕೆ ಸಹ ಆ ಸಂದರ್ಭದಲ್ಲಿ...

ಮಣಿಪುರ: ಬುಡಕಟ್ಟು ಚರ್ಚ್ ನಾಯಕರ ಮೇಲೆ ಉಗ್ರ ದಾಳಿ:  ಹಲವೆಡೆ ಮೇಣದ ಬತ್ತಿಯ ಜೊತೆಗೆ ಶೋಕ ವ್ಯಕ್ತ ಪಡಿಸಿದ ಕುಕಿ ಸಮುದಾಯ 

ಇಂಫಾಲ್: ಮಣಿಪುರದ ಕಾಂಗ್‌ಪೋಕ್ಪಿ ಜಿಲ್ಲೆಯಲ್ಲಿ ಮೂವರು ಪ್ರಮುಖ ಕುಕಿ ಚರ್ಚ್ ನಾಯಕರನ್ನು ಹೊಂಚು ಹಾಕಿ ದಾಳಿ ನಡೆಸಿ ಕೊಲ್ಲಲಾಗಿದೆ. ಈ ಘಟನೆಯು ರಾಜ್ಯದಲ್ಲಿ ಜನಾಂಗೀಯ ಉದ್ವಿಗ್ನತೆಯನ್ನು ಮತ್ತಷ್ಟು ತೀವ್ರಗೊಳಿಸಿದೆ.  ಮೇ 13ರಂದು ಬೆಳಿಗ್ಗೆ ಚುರಾಚಂದ್‌ಪುರನಲ್ಲಿ...