Homeಮುಖಪುಟವಿದ್ಯುತ್ ಖರೀದಿ ಹಗರಣ | ಜಗನ್ ಮೋಹನ್ ರೆಡ್ಡಿಗೆ ₹1,750 ಕೋಟಿ ಲಂಚದ ಭರವಸೆ ನೀಡಿದ್ದ...

ವಿದ್ಯುತ್ ಖರೀದಿ ಹಗರಣ | ಜಗನ್ ಮೋಹನ್ ರೆಡ್ಡಿಗೆ ₹1,750 ಕೋಟಿ ಲಂಚದ ಭರವಸೆ ನೀಡಿದ್ದ ಗೌತಮ್ ಅದಾನಿ : ಆರೋಪ

- Advertisement -
- Advertisement -

ಸೌರ ವಿದ್ಯುತ್ ಗುತ್ತಿಗೆಗೆ ಸಂಬಂಧಿಸಿದ ಶತಕೋಟಿ ಡಾಲರ್ ಲಂಚ ಹಾಗೂ ವಂಚನೆ ಪ್ರಕರಣದಲ್ಲಿ ಅದಾನಿ ಗ್ರೀನ್ ಎನರ್ಜಿ ಕಂಪನಿಯ ಅಧ್ಯಕ್ಷ ಗೌತಮ್ ಅದಾನಿ ಹಾಗೂ ಇತರರ ವಿರುದ್ದ ಯುಎಸ್‌ ಫೆಡರಲ್ ನ್ಯಾಯಾಲಯ ಗುರುವಾರ (ನ.21) ಬಂಧನ ವಾರೆಂಟ್ ಜಾರಿಗೊಳಿಸಿದೆ.

ಗೌತಮ್ ಅದಾನಿ, ಅವರ ಸೋದರಳಿಯ ಸಾಗರ್ ಅದಾನಿ ಸೇರಿದಂತೆ ಇತರ ಏಳು ಆರೋಪಿಗಳು 20 ವರ್ಷಗಳಲ್ಲಿ 2 ಶತಕೋಟಿ ಡಾಲರ್ ಲಾಭವನ್ನು ನಿರೀಕ್ಷಿಸುವ ಸೌರಶಕ್ತಿ ಪೂರೈಕೆ ಒಪ್ಪಂದಗಳನ್ನು ಪಡೆಯಲು ಭಾರತೀಯ ಸರ್ಕಾರಿ ಅಧಿಕಾರಿಗಳಿಗೆ ಸುಮಾರು 265 ಮಿಲಿಯನ್ ಡಾಲರ್ ಲಂಚ ನೀಡಲು ಒಪ್ಪಂದ ಮಾಡಿಕೊಂಡಿರುವ ಗಂಭೀರ ಆರೋಪವಿದೆ.

ಯುನೈಟೆಡ್ ಸ್ಟೇಟ್ಸ್ ಸೆಕ್ಯುರಿಟೀಸ್ ಅಂಡ್ ಎಕ್ಸ್ಚೇಂಜ್ ಕಮಿಷನ್ (ಯುಎಸ್ಇಸಿ) ದೂರಿಗೆ ಸಂಬಂಧಿಸಿದಂತೆ ತನಿಖೆ ನಡೆಸಿದ್ದ ಫೆಡರಲ್ ಪ್ಯಾಸಿಕ್ಯೂಟರ್, ನ್ಯಾಯಾಲಯಕ್ಕೆ ದೋಷಾರೋಪ ಪಟ್ಟಿ ಸಲ್ಲಿಸಿದ್ದರು. ಅದನ್ನು ಪರಿಗಣಿಸಿದ ನ್ಯಾಯಾಲಯ ಬಂಧನ ವಾರೆಂಟ್ ಹೊರಡಿಸಿದೆ.

ಯುಎಸ್ಇಸಿ ನೀಡಿದ್ದ ದೂರಿನಲ್ಲಿ, ಗೌತಮ್ ಅದಾನಿ ವೈಎಸ್‌ಆರ್‌ಸಿಪಿ ಮುಖ್ಯಸ್ಥ ಹಾಗೂ ಆಂಧ್ರ ಪ್ರದೇಶದ ಮಾಜಿ ಮುಖ್ಯಮಂತ್ರಿ ವೈಎಸ್‌ ಜಗನ್ ಮೋಹನ್ ರೆಡ್ಡಿ ಅವರಿಗೆ 2021ರ ಆಗಸ್ಟ್‌ನಲ್ಲಿ ಅಂದಾಜು ರೂ.1750 ಕೋಟಿ (ಸುಮಾರು $228 ಮಿಲಿಯನ್) ಲಂಚ ನೀಡಿದ್ದಾರೆ ಎಂದು ಆರೋಪಿಸಿದ್ದಾಗಿ ವರದಿಯಾಗಿದೆ.

ಯುಎಸ್‌ ಅಟಾರ್ನಿ ಕಚೇರಿಯ ಪ್ರಕಾರ, 2021 ಮತ್ತು 2022 ರಲ್ಲಿ ಗೌತಮ್ ಅದಾನಿಯವರು ಆಂಧ್ರ ಪ್ರದೇಶದ ಸಿಎಂ ಮತ್ತು ಸರ್ಕಾರಿ ಅಧಿಕಾರಿಗಳನ್ನು ವೈಯಕ್ತಿಕವಾಗಿ ಭೇಟಿ ಮಾಡಿದ್ದರು. ಈ ವೇಳೆ ಸೋಲಾರ್ ಎನರ್ಜಿ ಕಾರ್ಪೊರೇಷನ್ ಆಫ್ ಇಂಡಿಯಾ (ಎಸ್‌ಇಸಿಐ) ಯೊಂದಿಗೆ ವಿದ್ಯುತ್ ಮಾರಾಟ ಒಪ್ಪಂದಗಳಿಗೆ ಸಹಿ ಹಾಕಲು ಲಂಚ ನೀಡಿದ್ದರು.

ಯುಎಸ್ಇಸಿ ದೂರು ಮತ್ತು ಪ್ಯಾಸಿಕ್ಯೂಟರ್ ದೋಷಾರೋಪಪಟ್ಟಿಯ ಪ್ರಕಾರ, ಬೆಲೆ ಹೆಚ್ಚಾಗಿದ್ದರಿಂದ ಅನೇಕ ರಾಜ್ಯ ಸರ್ಕಾರಗಳು ಎಸ್‌ಇಸಿಐನಿಂದ ವಿದ್ಯುತ್ ಖರೀದಿಸಲು ನಿರಾಕರಿಸಿದ್ದವು. ಆ ಸಮಯದಲ್ಲಿ ಗೌತಮ್ ಅದಾನಿ ಮತ್ತು ಸಾಗರ್ ಅದಾನಿ ಮಧ್ಯಪ್ರವೇಶಿಸಿದ್ದರು. ದಾಖಲೆಗಳ ಪ್ರಕಾರ ದೊಡ್ಡ ಮೊತ್ತದ ಲಂಚವನ್ನು ಪಾವತಿಸಿದ್ದರು ಅಥವಾ ನೀಡುವುದಾಗಿ ಭರವಸೆ ನೀಡಿದ್ದರು.

“ಅಗತ್ಯ ಸೌಲಭ್ಯದ ಕೊರತೆ ಹಿನ್ನೆಲೆ ಆಂಧ್ರ ಪ್ರದೇಶ ಸರ್ಕಾರ ಎಸ್‌ಇಸಿಐನಿಂದ ವಿದ್ಯುತ್ ಖರೀದಿಸಲು ಒಪ್ಪಂದ ಮಾಡಿಕೊಂಡಿರಲಿಲ್ಲ. ಹಾಗಾಗಿ, ಆಗಸ್ಟ್ 2021ರಲ್ಲಿ, ಗೌತಮ್ ಅದಾನಿ ಜಗನ್ ಮೋಹನ್ ರೆಡ್ಡಿಯವರನ್ನು ವೈಯಕ್ತಿಕವಾಗಿ ಭೇಟಿಯಾಗಿದ್ದರು” ಎಂದು ಯುಎಸ್ಇಸಿ ತನ್ನ ದೂರಿನಲ್ಲಿ (Case 1:24-cv-08080)ಆರೋಪಿಸಿದೆ ಮತ್ತು ಆರೋಪಿಗಳಾದ ಗೌತಮ್ ಅದಾನಿ ಮತ್ತು ಸಾಗರ್ ಅದಾನಿ ವಿರುದ್ಧ ಜ್ಯೂರಿ ವಿಚಾರಣೆಗೆ ಒತ್ತಾಯಿಸಿದೆ.

ಜಗನ್ ಮೋಹನ್ ರೆಡ್ಡಿಯವರನ್ನು ಗೌತಮ್ ಅದಾನಿ ಭೇಟಿಯಾದಾಗ 7,000 ಮೆಗಾ ವ್ಯಾಟ್ ಸಾಮರ್ಥ್ಯದ ವಿದ್ಯುತ್ ಖರೀದಿಗೆ ಸಂಬಂಧಿಸಿ ಎಸ್‌ಇಸಿಐನೊಂದಿಗೆ ಒಪ್ಪಂದ ಮಾಡಿಕೊಳ್ಳಲು ಆಂಧ್ರ ಪ್ರದೇಶದ ಸರ್ಕಾರಿ ಅಧಿಕಾರಿಗಳಿಗೆ ಲಂಚ ಪಾವತಿಸಿದ್ದಾರೆ ಅಥವಾ ಭರವಸೆ ನೀಡಿದ್ದಾರೆ” ಎಂದು ಯುಎಸ್ಇಸಿ ದೂರಿನಲ್ಲಿ ತಿಳಿಸಿದೆ.

ಅದಾನಿ ವಿರುದ್ದದ ದೋಷಾರೋಪ ಪಟ್ಟಿಯ ಪ್ರಕಾರ, ಆಂಧ್ರ ಪ್ರದೇಶ, ಒಡಿಶಾ, ಜಮ್ಮು ಮತ್ತು ಕಾಶ್ಮೀರ, ತಮಿಳುನಾಡು, ಛತ್ತೀಸ್‌ಗಢ ರಾಜ್ಯ ಸರ್ಕಾರಗಳಿಗೆ ನೀಡಲಾದ ಒಟ್ಟು ಲಂಚ ಸರಿಸುಮಾರು ರೂ.2029 ಕೋಟಿಗಳು (ಸುಮಾರು $265 ಮಿಲಿಯನ್), ಅದರಲ್ಲಿ ಸುಮಾರು 85 ಪ್ರತಿಶತ, ಅಂದರೆ ರೂ.1750 ಕೋಟಿಗಳು ($228 ಮಿಲಿಯನ್) ಆಂಧ್ರ ಪ್ರದೇಶಕ್ಕೆ ಪಾವತಿಸಲಾಗಿದೆ ಅಥವಾ ಪಾವತಿಸುವ ಭರವಸೆ ನೀಡಲಾಗಿದೆ

ಯುಎಸ್‌ಎಸ್‌ಇಸಿ ದೂರಿನ ಪ್ರಕಾರ, ಅದಾನಿ ಗ್ರೀನ್ ಎನರ್ಜಿ ಕಂಪನಿಯ ಕಾರ್ಯಕಾರಣಿಗಳು ಅಝೂರ್‌ನ ಕಾರ್ಯನಿರ್ವಾಹಕರಿಗೆ ಇನ್‌ಫ್ರಾ ಪ್ಯಾರಾಗ್ರಾಫ್‌ಗಳು 131 ರಿಂದ 135 ರಲ್ಲಿ ನೀಡಿದ ಹೇಳಿಕೆಗಳಿಂದ” ಈವಿಷಯ ಬಹಿರಂಗಗೊಂಡಿದೆ”. ಅದಾನಿ ಗ್ರೀನ್ ಆಂತರಿಕ ದಾಖಲೆಗಳಲ್ಲೂಇದನ್ನು ಉಲ್ಲೇಖಿಸಲಾಗಿದೆ.

ಗೌತಮ್ ಅದಾನಿ ಅವರು ಜಗನ್ ಮೋಹನ್ ರೆಡ್ಡಿಯವರನ್ನು ಭೇಟಿಯಾಗಿ ಲಂಚ ಪಾವತಿಸಿದ ಅಥವಾ ಪಾವತಿಸುವ ಭರವಸೆ ನೀಡಿದ ಬೆನ್ನಲ್ಲೇ, ಆಂಧ್ರ ಪ್ರದೇಶ ಸರ್ಕಾರ ಎಸ್‌ಇಸಿಐನೊಂದಿಗೆ ವಿದ್ಯುತ್ ಖರೀದಿ ಒಪ್ಪಂದ ಮಾಡಿಕೊಳ್ಳಲು ತಾತ್ವಿಕ ಒಪ್ಪಿಗೆ ನೀಡಿತ್ತು. ಅದಾನಿ ಗ್ರೀನ್ ಮತ್ತು ಅಝೂರೆ ನಡುವಿನ ಆಂತರಿಕ ಸಂವಹನಗಳು ಕೂಡ ಆಂಧ್ರ ಪ್ರದೇಶ ಎಸ್ಇಸಿಐನಿಂದ ವಿದ್ಯುತ್ ಖರೀದಿಸಲು ಒಪ್ಪಿಕೊಂಡಿರುವುದನ್ನು ಹೇಳಿವೆ ಎಂದು ವರದಿಯಾಗಿದೆ.

ಅದಾನಿ ಅವರು ಜಗನ್ ಮೋಹನ್ ರೆಡ್ಡಿಯನ್ನು ಭೇಟಿಯಾದ ಒಂದು ವಾರದ ನಂತರ, ” ಕಳೆದ ತಿಂಗಳು ನಡೆದ ಸಚಿವ ಸಂಪುಟ ಸಭೆಯಲ್ಲಿ ವಿದ್ಯುತ್ ಖರೀದಿಸುವ ಎಸ್ಇಸಿಐ ಪ್ರಸ್ತಾಪವನ್ನು ಒಪ್ಪಿಕೊಂಡು ಮೊದಲ ಹಂತದಲ್ಲಿ 7,000 ಮೆ.ವ್ಯಾ ವಿದ್ಯುತ್ ಖರೀದಿಸಲು ತೀರ್ಮಾನಿಸಲಾಗಿದೆ” ಎಂದು ಸರ್ಕಾರ ಸಾರ್ವಜನಿಕವಾಗಿ ಹೇಳಿತ್ತು. ‘ಇದನ್ನು ಬೇರೆ ರೀತಿಯಲ್ಲಿ ಹೇಳುವುದಾದರೆ, ಪಾವತಿಸಿದ ಅಥವಾ ಭರವಸೆ ನೀಡಿದ ಲಂಚವು ಕೆಲಸ ಮಾಡಿದೆ” ಎಂದರ್ಥ ಎಂದು ಯುಎಸ್‌ಎಸ್‌ಇಸಿ ದೂರಿನಲ್ಲಿ ಹೇಳಿದೆ.

ಅದಾನಿ ಗ್ರೀನ್‌ ಎನರ್ಜಿಯ ಆಂತರಿಕ ದಾಖಲೆಗಳಲ್ಲಿ ಈ ಲಂಚದ ಬಗ್ಗೆ ವಿವರಗಳನ್ನು ಉಲ್ಲೇಖಿಸಲಾಗಿದೆ ಎಂದು ಯುನೈಟೆಡ್ ಸ್ಟೇಟ್ಸ್‌ನ ದೋಷಾರೋಪಣೆ ಪಟ್ಟಿಯಲ್ಲಿ ಪದೇ ಪದೇ ಉಲ್ಲೇಖಿಸಲ್ಪಟ್ಟಿದೆ ಎಂದು ವರದಿಯಾಗಿದೆ.

ಆರೋಪ ಅಲ್ಲಗಳೆದ ವೈಎಸ್‌ಆರ್‌ಸಿಪಿ

ತಮ್ಮ ವಿರುದ್ದದ ಆರೋಪಗಳಿಗೆ ಪ್ರತಿಕ್ರಿಯಿಸಿರುವ ವೈಎಸ್‌ಆರ್‌ಸಿಪಿ, ಅದಾನಿ ಜೊತೆ ಯಾವುದೇ ನೇರ ಒಪ್ಪಂದ ಮಾಡಿಕೊಂಡಿಲ್ಲ ಎಂದು ಗುರುವಾರ (ನ.21) ಹೇಳಿದೆ.

“ಎಸ್‌ಇಸಿಐ ಭಾರತ ಸರ್ಕಾರದ ಉದ್ಯಮ ಎಂದು ನಮೂದಿಸುವುದು ಅವಶ್ಯಕ. ಆಂಧ್ರ ಪ್ರದೇಶ ವಿದ್ಯುತ್ ನಿಗಮ ಮತ್ತು ಅದಾನಿ ಸಮೂಹಕ್ಕೆ ಸೇರಿದ ಇತರ ಯಾವುದೇ ಸಂಸ್ಥೆಗಳ ನಡುವೆ ಯಾವುದೇ ನೇರ ಒಪ್ಪಂದಗಳು ನಡೆದಿಲ್ಲ. ಆದ್ದರಿಂದ, ದೋಷಾರೋಪ ಪಟ್ಟಿಯಲ್ಲಿ ರಾಜ್ಯ ಸರ್ಕಾರದ ಮೇಲೆ ಮಾಡಿದ ಆರೋಪಗಳು ಸುಳ್ಳಾಗಿವೆ” ಎಂದು ವೈಎಸ್‌ಆರ್‌ಸಿಪಿ ಹೇಳಿಕೆಯಲ್ಲಿ ತಿಳಿಸಿದೆ.

ಈ ಹಿಂದಿನ ಆಂಧ್ರ ಪ್ರದೇಶ ಸರ್ಕಾರ, ಎಸ್‌ಇಸಿಐಯಿಂದ 25 ವರ್ಷಗಳ ಅವಧಿಗೆ ಕಿಲೋ ವ್ಯಾಟ್‌ಗೆ 2.49 ರೂ.ನಂತೆ 7,000 ಮೆ.ವ್ಯಾ ವಿದ್ಯುತ್ ಖರೀದಿಗೆ ಒಪ್ಪಂದ ಮಾಡಿಕೊಂಡಿದೆ. ಈ ಪೈಕಿ 2024-25 ಆರ್ಥಿಕ
ವರ್ಷದಲ್ಲಿ 3,000 ಮೆ.ವ್ಯಾ, 2025-26 ಆರ್ಥಿಕ ವರ್ಷದಲ್ಲಿ 3,000 ಮೆ.ವ್ಯಾ ಮತ್ತು ಆರ್ಥಿಕ ವರ್ಷ 2026-27ರಲ್ಲಿ 1,000 ಮೆ.ವ್ಯಾ ಅನ್ನು ಐಎಸ್‌ಟಿಎಸ್ (ಇಂಟರ್ ಸ್ಟೇಟ್ ಟ್ರಾನ್ಸ್ಮಿಷನ್ ಸಿಸ್ಟಮ್) ಶುಲ್ಕಗಳನ್ನು ಮನ್ನಾ ಮಾಡುವ ಮೂಲಕ ಖರೀದಿಸಲಿದೆ ಎಂದು ವೈಎಸ್‌ಆರ್‌ಸಿಪಿ ಹೇಳಿದೆ.

ಈ ಅಗ್ಗದ ದರದ ವಿದ್ಯುತ್ ಖರೀದಿಯು ವಾರ್ಷಿಕವಾಗಿ 3,700 ಕೋಟಿ ರೂಪಾಯಿಗಳ ಉಳಿತಾಯದೊಂದಿಗೆ ರಾಜ್ಯಕ್ಕೆ ದೊಡ್ಡ ಲಾಭ ಮಾಡಿಕೊಡುತ್ತದೆ. ಈ ಒಪ್ಪಂದವು 25 ವರ್ಷಗಳ ಅವಧಿಯದ್ದು, ಆದ್ದರಿಂದ 25 ವರ್ಷಗಳಲ್ಲಿ ರಾಜ್ಯವು ಹೆಚ್ಚಿನ ಲಾಭ ಮಾಡಿಕೊಳ್ಳಬಹುದು ಎಂದಿದೆ.

ಇದನ್ನೂ ಓದಿ : ಲಂಚ, ವಂಚನೆ ಪ್ರಕರಣ : ಅದಾನಿ ವಿರುದ್ದ ಅಮೆರಿಕದಲ್ಲಿ ದೋಷಾರೋಪ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಮಗ ಬೇಗನೆ ಮನೆಗೆ ಬರಲಿ..’; ಭಾವುಕರಾದ ಅಭಿಜೀತ್ ದಿಪ್ಕೆ ಅವರ ಪೋಷಕರು

ಸಿಜೆಪಿ ಸಂಸ್ಥಾಪಕ ಅಭಿಜೀತ್ ದಿಪ್ಕೆ ನೇತೃತ್ವದಲ್ಲಿ ನಡೆದ ಅಸಾಧಾರಣ ಹೋರಾಟವು ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜಿನಾಮೆಯಲ್ಲಿ ಅಂತಿಮವಾಗಿದೆ. ಈ ಕುರಿತು ಮಾಧ್ಯಮಗಳಿಗೆ ಪ್ರತಿಕ್ರಿಯಿಸಿರುವ ಅವರ ಪೋಷಕರು ಭಾವುಕರಾಗಿದ್ದಾರೆ. "ಮಗ ಬೇಗನೆ ಮನೆಗೆ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆ: ಕಾಕ್ರೋಚ್‌ಗಳಿಗೆ ಅಭಿನಂದಿಸಿದ ಸೋನಮ್ ವಾಂಗ್‌ಚುಕ್ – ಪ್ರಕಾಶ್‌ ರಾಜ್

ದೇಶದ ಯುವಜನರ ಹಲವು ದಿನಗಳ ಹೋರಾಟದ ಬಳಿಕ ಮೋದಿ ನೇತೃತ್ವದ ಕೇಂದ್ರ ಸರ್ಕಾರ ವಿದ್ಯಾರ್ಥಿಗಳ ಮುಂದೆ ಮಂಡಿಯೂರಿದೆ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಿದ್ದಾರೆ. ಈ ಗೆಲುವಿಗೆ ಕಾಕ್ರೋಚ್ ಜನತಾ ಪಕ್ಷದ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಜಿರಳೆಗಳ ಹರ್ಷೋದ್ಗಾರ: ದೆಹಲಿ ಪೊಲೀಸರಿಂದ ಸಾರ್ವಜನಿಕ ಕ್ಷಮೆಯಾಚನೆಗೆ ಆಗ್ರಹ

ದೇಶಾದ್ಯಂತ ನಡೆಯುತ್ತಿರುವ ಸಿಜೆಪಿ ಪ್ರತಿಭಟನೆಗಳ ನಡುವೆ ನೀಟ್ ಪತ್ರಿಕೆ ಸೋರಿಕೆಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ರಾಜೀನಾಮೆ ನೀಡಿದ್ದು, ದೆಹಲಿಯ ಜಂತರ್‌ ಮಂತರ್‌ನಲ್ಲಿ ಪ್ರತಿಭಟನೆ ನಡೆಸುತ್ತಿರುವ ಕಾಕ್ರೋಚ್‌ ಜನತಾ...

ಕಾಕ್ರೋಚ್‌ಗಳಿಗೆ ಮಣಿದ ಮೋದಿ ಸರ್ಕಾರ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್‌ ರಾಜೀನಾಮೆ

ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ನೇತೃತ್ವದಲ್ಲಿ ದೇಶಾದ್ಯಂತ ನಡೆಯುತ್ತಿರುವ ಪ್ರತಿಭಟನೆಗಳ ಮಧ್ಯೆ, ನೀಟ್ ಅಕ್ರಮಗಳಿಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ಇಂದು (ಜುಲೈ 25) ಪ್ರಧಾನ ಮಂತ್ರಿಗಳಿಗೆ ತಮ್ಮ...

ಅಭಿಜೀತ್ ದಿಪ್ಕೆಗೆ ಟೈಫಾಯ್ಡ್; ಪ್ರತಿಭಟನೆ ಮುಂದುವರಿಯಲಿದೆ ಎಂದ ಸಿಜೆಪಿ ಸಂಸ್ಥಾಪಕ

ತನಗೆ ಟೈಫಾಯ್ಡ್ ಇರುವುದು ಪತ್ತೆಯಾಗಿದೆ ಎಂದು ಕಾಕ್ರೋಚ್‌ ಜನತಾ ಪಕ್ಷದ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದಿಪ್ಕೆ ಅವರು ಇಂದು ಹೇಳಿದ್ದಾರೆ. "ನನ್ನ ಅನಾರೋಗ್ಯವು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ...

ಮುಸ್ಲಿಮರ ಬಗ್ಗೆ ನಿಂದನಾತ್ಮಕ, ಪ್ರಚೋದನಕಾರಿ ಹೇಳಿಕೆ : ಸಿ.ಟಿ ರವಿ ವಿರುದ್ಧ FIR

ಮುಸ್ಲಿಮರ ವಿರುದ್ಧ ನಿಂದನಾತ್ಮಕ ಹಾಗೂ ಪ್ರಚೋದನಕಾರಿ ಹೇಳಿಕೆ ನೀಡಿದ ವಿಧಾನಪರಿಷತ್ ಸದಸ್ಯ ಸಿ.ಟಿ ರವಿ ವಿರುದ್ಧ ಚಿಕ್ಕಮಗಳೂರು ನಗರ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ. ನಗರದ ಜಾಮಿಯಾ ಮಸೀದಿಯ ಅಧ್ಯಕ್ಷ ಮುದಸ್ಸಿರ್ ಪಾಷಾ ಅವರು...

ಹತ್ಯಾಕಾಂಡಕ್ಕೆ ಸಮನಾದ NEET ಹಗರಣ ನಡೆಯಲು ಬಿಟ್ಟ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ಕೊಡಲಿ

ನೀಟ್ ಪರೀಕ್ಷೆಯ ಪ್ರಶ್ನೆ ಪತ್ರಿಕೆಗಳು ಲೀಕ್ ಆದ ನಂತರದ ಬೆಳವಣಿಗೆಗಳನ್ನು ಇಡೀ ದೇಶ ಗಮನಿಸುತ್ತಿದೆ. ಅದರಲ್ಲೂ ವಿಶೇಷವಾಗಿ ಜೂನ್ ಆರಂಭದಿಂದ ಇಲ್ಲಿಯವರೆಗೆ ದೇಶದ ವಿದ್ಯಾರ್ಥಿಗಳು ನಡೆಸುತ್ತಿರುವ ಆಂದೋಲನವನ್ನು ದೇಶದ ಜನತೆ ನೋಡುತ್ತಿದ್ದಾರೆ. ದೇಶದ...

ಸಿಜೆಪಿ ಮತ್ತು ಜೆನ್‌ ಜಿಫಿಕೇಶನ್: ಪ್ರಸ್ತುತ ಬೆಳವಣಿಗೆ, ಭವಿಷ್ಯದ ಸಾಧ್ಯತೆ

ಇತ್ತೀಚಿನ ಬೆಳವಣಿಗೆಗಳು ಕಳೆದ ಒಂದು ತಿಂಗಳಿಂದ ನಡೆಯುತ್ತಿರುವ ಸಿಜೆಪಿ (ಕಾಕ್ರೋಚ್‌ ಜನತಾ ಪಕ್ಷ) ಪ್ರತಿಭಟನೆ ಈಗ ತಾರ್ಕಿಕ ಹಂತಕ್ಕೆ ತಲಪುತ್ತಿದೆ. ಪ್ರಶ್ನೆಪತ್ರಿಕೆ ಸೋರಿಕೆಯ ಕಾರಣಕ್ಕೆ ನೀಟ್‌ನ (ರಾಷ್ಟ್ರೀಯ ಅರ್ಹತಾ ಹಾಗೂ ಪ್ರವೇಶ ಪರೀಕ್ಷೆ) ಮೊದಲ...

SIR ಕರ್ತವ್ಯದ ವೇಳೆ ಶಿಕ್ಷಕಿಗೆ ಹಾರ್ಟ್ ಅಟ್ಯಾಕ್: ಚಿಕಿತ್ಸೆ ಫಲಿಸದೇ ಸಾವು

ಕೇಂದ್ರ ಚುನಾವಣಾ ಆಯೋಗವು ರಾಜ್ಯದಲ್ಲಿ ನಡೆಸುತ್ತಿರುವ ಮತದಾರರ ಪಟ್ಟಿಯ 'ವಿಶೇಷ ಸಮಗ್ರ ಪರಿಷ್ಕರಣೆ' (SIR) ಕೆಲಸದ ಹೆಸರಿನಲ್ಲಿ ಶಿಕ್ಷಕರ ಮೇಲೆ ಹೇರುತ್ತಿರುವ ಅತಿಯಾದ ಮಾನಸಿಕ ಹಾಗೂ ದೈಹಿಕ ಒತ್ತಡಕ್ಕೆ ಮತ್ತೊಬ್ಬ ಶಿಕ್ಷಕಿ ಬಲಿಯಾಗಿದ್ದಾರೆ. ಬೆಂಗಳೂರಿನ...

ಎದೆ ಸೀಳಿದರೆ ಮೂರು ಅಕ್ಷರ ಬರಲ್ಲ, ಮುಲ್ಲಾನಿಗೂ ನೀಟ್‌ಗೂ ಏನು ಸಂಬಂಧ: ಸಿ.ಟಿ ರವಿ ವಿವಾದಾತ್ಮಕ ಹೇಳಿಕೆ

ದೇಶಾದ್ಯಂತ ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ಹಾಗೂ ಪರೀಕ್ಷಾ ಅಕ್ರಮಗಳ ವಿರುದ್ಧ ವಿದ್ಯಾರ್ಥಿ ಮತ್ತು ಯುವಜನ ಸಂಘಟನೆಗಳು ಬೃಹತ್ ಪ್ರತಿಭಟನೆ ನಡೆಸುತ್ತಿವೆ. ಈ ನಡುವೆ ವಿದ್ಯಾರ್ಥಿಗಳ ಹೋರಾಟವನ್ನು ಕುಹಕವಾಡಿರುವ ವಿಧಾನ ಪರಿಷತ್ ಬಿಜೆಪಿ...