Homeಮುಖಪುಟಬಿಜೆಪಿ-ಶಿವಸೇನೆ ಮಧ್ಯೆ ಅಧಿಕಾರಕ್ಕಾಗಿ ಗುದ್ದಾಟ: ರಾಜ್ಯಪಾಲರನ್ನು ಪ್ರತ್ಯೇಕವಾಗಿ ಭೇಟಿಯಾದ ಬಿಜೆಪಿ-ಶಿವಸೇನೆ ನಿಯೋಗ

ಬಿಜೆಪಿ-ಶಿವಸೇನೆ ಮಧ್ಯೆ ಅಧಿಕಾರಕ್ಕಾಗಿ ಗುದ್ದಾಟ: ರಾಜ್ಯಪಾಲರನ್ನು ಪ್ರತ್ಯೇಕವಾಗಿ ಭೇಟಿಯಾದ ಬಿಜೆಪಿ-ಶಿವಸೇನೆ ನಿಯೋಗ

- Advertisement -
- Advertisement -

ಮಹಾರಾಷ್ಟ್ರದಲ್ಲಿ ಚುನಾವಣಾ ಮೈತ್ರಿ ಮೂಲಕ ಸ್ಥಾನ ಹಂಚಿಕೆ ಮಾಡಿಕೊಂಡು ಚುನಾವಣೆ ಎದುರಿಸಿದ್ದ ಪಕ್ಷಗಳು ಈಗ ಅಧಿಕಾರಕ್ಕಾಗಿ ಮುಸುಕಿನ ಗುದ್ದಾಟ ನಡೆಸಿವೆ. ಅದಾಗ್ಯೂ ಚುನಾವಣೆಯಲ್ಲಿ 105 ಸ್ಥಾನ ಗಳಿಸುವ ಮೂಲಕ ಬಿಜೆಪಿ ಅತಿದೊಡ್ಡ ಪಕ್ಷವಾಗಿ ಹೊರಹೊಮ್ಮಿದೆ. ಆದರೆ ಅಧಿಕಾರ ಗದ್ದುಗೆ ಏರಲು ಮತ್ತೊಂದು ಪಕ್ಷದ ಬೆಂಬಲ ಅಗತ್ಯವಾಗಿದೆ. ಆದರೆ, ಸಿಎಂ ಖುರ್ಚಿಗಾಗಿ ಶಿವಸೇನೆ ಮತ್ತು ಬಿಜೆಪಿ ಹೊಡೆದಾಡುತ್ತಿರುವುದು ಈಗ ಜಗಜ್ಜಾಹೀರಾಗಿದೆ.

ಇದನ್ನೂ ಓದಿ: ಮಹಾರಾಷ್ಟ್ರ ಆಕರ್ಷಣೆಯ ಕೇಂದ್ರ ಬಿಂದುವಾದ ಠಾಕ್ರೆ ಕುಡಿ: ಸಿಎಂ ಆಗ್ತಾರಾ ಆದಿತ್ಯ ಠಾಕ್ರೆ..?

ಇಂದು ಶಿವಸೇನೆ ಪಕ್ಷದ ದಿವಾಕರ್ ರಾವೋಟೆ ನಿಯೋಗ ರಾಜ್ಯಪಾಲ ಭಗತ್ ಸಿಂಗ್ ಕೊಶ್ಯಾರಿ ಅವರನ್ನು ಭೇಟಿಯಾಗಿ ಮಾತುಕತೆ ನಡೆಸಿದೆ. ಈಗ ಬಿಜೆಪಿಯ ದೇವೇಂದ್ರ ಫಡ್ನವೀಸ್ ಕೂಡ ರಾಜ್ಯಪಾಲರನ್ನು ಭೇಟಿಯಾಗುವುದಾಗಿ ಹೊರಟಿದ್ದಾರೆ. ಮೈತ್ರಿ ಮೂಲಕ ಒಂದೇ ಎಂದು ಘೋಷಿಸಿದ್ದ ಪಕ್ಷಗಳೀಗ ಬೇರೆ, ಬೇರೆಯಾಗಿ ರಾಜ್ಯಪಾಲರನ್ನು ಭೇಟಿಯಾಗುತ್ತಿರುವುದು ಸಾಕಷ್ಟು ಕುತೂಹಲ ಕೆರಳಿಸಿದೆ.

ಆದರೆ ಶಿವಸೇನೆ ರಾಜ್ಯಪಾಲರನ್ನು ಭೇಟಿಯಾಗಿರುವ ಬಗ್ಗೆ ಪ್ರತಿಕ್ರಿಯಿಸಿ, ದೀಪಾವಳಿ ಹಬ್ಬದ ಶುಭಾಶಯ ವಿನಿಮಯಕ್ಕಾಗಿ ರಾಜ್ಯಪಾಲರನ್ನು ಭೇಟಿಯಾಗಿದ್ದಾಗಿ ತಿಳಿಸಿದೆ. ಬಿಜೆಪಿ ಮತ್ತು ಶಿವಸೇನೆ ಮೈತ್ರಿ ಮೂಲಕ ಚುನಾವಣೆ ಎದುರಿಸಿದ್ದರೂ ಸಹ ಬಿಜೆಪಿ ಹೆಚ್ಚು ಸ್ಥಾನ ಗೆಲ್ಲುವ ಮೂಲಕ ಅತಿದೊಡ್ಡ ಪಕ್ಷವಾಗಿ ಹೊಮ್ಮಿದೆ. ಈಗ ಅಧಿಕಾರಕ್ಕಾಗಿ ಮಿತ್ರ ಪಕ್ಷಗಳ ಮಧ್ಯೆ ಒಡಕುಂಟಾಗಿದೆ. ಬಿಜೆಪಿ ಚುನಾವಣಾ ಪೂರ್ವ ಮೈತ್ರಿಯಲ್ಲಿ ನೀಡಿದ ವಾಗ್ದಾನವನ್ನು ಪೂರೈಸಬೇಕು. 50:50 ಸೂತ್ರಕ್ಕೆ ಬಿಜೆಪಿ ಬದ್ಧವಾಗಿರಬೇಕು ಎಂದು ಶಿವಸೇನೆ ಪಟ್ಟು ಹಿಡಿದಿದೆ.

ಇದನ್ನೂ ಓದಿ: ಬಿಜೆಪಿಯ ದುರಹಂಕಾರಕ್ಕೆ ಜನ ಪಾಠ ಕಲಿಸಿದ್ದಾರೆ: ’ಸಾಮ್ನಾ’ದಲ್ಲಿ ಮಿತ್ರನಿಗೆ ತಿವಿದ ಶಿವಸೇನೆ

ಶಿವಸೇನೆ ಮುಖ್ಯಸ್ಥ ಉದ್ಧವ್ ಠಾಕ್ರೆ, ಗೃಹ ಸಚಿವ ಅಮಿತ್ ಶಾ ಜತೆ ಈಗಾಗಲೇ ಚರ್ಚಿಸಿದ್ದಾರೆ. ಅಧಿಕಾರ ಹಂಚಿಕೆ ಸಂಬಂಧ ನಡೆದ ಸಭೆಯಲ್ಲಿ ಉದ್ಧವ್ ಠಾಕ್ರೆ, ಅಮಿತ್ ಶಾ, ಚಂದ್ರಕಾಂತ್ ಪಾಟೀಲ್, ದೇವೇಂದ್ರ ಫಡ್ನವೀಸ್ ಸೇರಿದಂತೆ ಎರಡೂ ಪಕ್ಷಗಳ ಪ್ರಮುಖರು ಭಾಗವಹಿಸಿದ್ದರು. ‘ನಮಗೂ ಪಕ್ಷದ ಬೆಳವಣಿಗೆ ಅತ್ಯಗತ್ಯ. ಪಕ್ಷದ ಸಂಘಟನೆ ಮತ್ತು ಬಲವರ್ಧನೆಗೆ ಶಿವಸೇನೆ ಪ್ರಾಮುಖ್ಯತೆ ನೀಡುತ್ತದೆ. ಲೋಕಸಭೆಯಲ್ಲೂ ಶಿವಸೇನೆ ಹೆಚ್ಚು ಸ್ಥಾನಗಳನ್ನು ಗೆದ್ದಿದೆ. ಎಲ್ಲಾ ಸಮಯದಲ್ಲಿ ಬಿಜೆಪಿಗೆ ಅಧಿಕಾರ ಬಿಟ್ಟು ಕೊಡಲು ಸಾಧ್ಯವಿಲ್ಲ. ಬಿಜೆಪಿ ಚುನಾವಣಾ ಪೂರ್ವ ಮೈತ್ರಿ ಒಪ್ಪಂದಕ್ಕೆ ಬದ್ಧವಾಗಿರಬೇಕು’ ಎಂದು ಹೇಳಿದ್ದಾರೆ ಎಂದು ಮೂಲಗಳು ತಿಳಿಸಿವೆ.

ಸಿಎಂ ಗಾದಿಯ ಮೇಲೆ ಕಣ್ಣಿಟ್ಟಿರುವ ಶಿವಸೇನೆ, ಅಧಿಕಾರಕ್ಕೇರುವ ತವಕದಲ್ಲಿದೆ. ಆದರೆ ಬಿಜೆಪಿ ಇದಕ್ಕೆ ಒಪ್ಪುತ್ತಿಲ್ಲ. ಹೀಗಾಗಿ ಚುನಾವಣಾ ಫಲಿತಾಂಶದ ನಂತರ ಎರಡೂ ಪಕ್ಷಗಳು ಹಾವು-ಮುಂಗುಸಿಯಂತೆ ಕಚ್ಚಾಟಕ್ಕಿಳಿದಿವೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ನಾಸಿಕ್‌| ಅಧಿಕಾರಿಯ ಮೇಜಿನ ಮೇಲೆ ಬೀದಿ ನಾಯಿಗಳನ್ನು ಬಿಟ್ಟ ಪ್ರತಿಭಟನಾಕಾರರು

ಮಹಾರಾಷ್ಟ್ರದ ನಾಸಿಕ್ ಜಿಲ್ಲೆಯ ನಿಫಾದ್ ನಗರ ಪಂಚಾಯತ್ ವ್ಯಾಪ್ತಿಯಲ್ಲಿ ಬೀದಿ ನಾಯಿಗಳ ಹಾವಳಿಯನ್ನು ಖಂಡಿಸಿ ಮತ್ತು ಅಧಿಕಾರಿಗಳ ನಿರ್ಲಕ್ಷ್ಯವನ್ನು ಖಂಡಿಸಿದ ಪ್ರತಿಭಟನಾಕಾರರ ಗುಂಪೊಂದು ನಗರ ಪಂಚಾಯತ್ ಅಧಿಕಾರಿಯ ಮೇಜಿನ ಮೇಲೆ ಬೀದಿ ನಾಯಿಗಳನ್ನು...

ವಿವಾಹಿತೆ ಮೇಲೆ ಅತ್ಯಾಚಾರ ಆರೋಪ : ಬಿಜೆಪಿ ಮಾಜಿ ಶಾಸಕನ ವಿರುದ್ಧ ಎಫ್‌ಐಆರ್

ಗನ್‌ ಪಾಯಿಂಟ್‌ ಇಟ್ಟು ಬೆದರಿಸಿ 22 ವರ್ಷದ ವಿವಾಹಿತ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿದ ಪ್ರಕರಣದಲ್ಲಿ ಮಹಾರಾಷ್ಟ್ರದ ಬಿಜೆಪಿ ಮಾಜಿ ಶಾಸಕ ಮತ್ತು ವಜಾಗೊಂಡಿರುವ ಪೊಲೀಸ್ ಸಿಬ್ಬಂದಿಯೊಬ್ಬರ ವಿರುದ್ಧ ಗುರುವಾರ (ಸೆ.17)...

ಬ್ರಿಕ್ಸ್ ಶೃಂಗಸಭೆಯಲ್ಲಿ ಸಂಪೂರ್ಣ ಸಸ್ಯಹಾರಿ ಮೆನು; ಶಿವಸೇನೆ ತೀವ್ರ ವಾಗ್ದಾಳಿ

ದೆಹಲಿಯಲ್ಲಿ ನಡೆದ 18ನೇ ಬ್ರಿಕ್ಸ್ ಶೃಂಗಸಭೆಯಲ್ಲಿ ವಿದೇಶಿ ಪ್ರತಿನಿಧಿಗಳಿಗೆ ಕೇವಲ ಸಸ್ಯಹಾರಿ ಆಹಾರವನ್ನು ಬಡಿಸಿರುವುದನ್ನು ಖಂಡಿಸಿರುವ ಶಿವಸೇನೆ (ಯುಬಿಟಿ) ಗುರುವಾರ ಕೇಂದ್ರ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದೆ. ಇದು ಅಂತರರಾಷ್ಟ್ರೀಯ ಅತಿಥಿಗಳ ಮೇಲೆ...

ದೆಹಲಿ ಎಸ್‌ಐಆರ್: ಮತದಾರರ ಪಟ್ಟಿಯಿಂದ ಹೆಸರುಗಳ ಡಿಲೀಟ್ ಪ್ರಶ್ನಿಸಿ ಅರ್ಜಿ; ವಿಚಾರಣೆಗೆ ಸುಪ್ರೀಂ ಕೋರ್ಟ್ ಒಪ್ಪಿಗೆ

ದೆಹಲಿಯಲ್ಲಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಅಭಿಯಾನದಡಿ ಮತದಾರರ ಪಟ್ಟಿಯಿಂದ ಹೆಸರುಗಳನ್ನು ಕೈಬಿಟ್ಟಿರುವುದನ್ನು ಪ್ರಶ್ನಿಸಿ ಸಲ್ಲಿಕೆಯಾಗಿರುವ ಅರ್ಜಿಯ ವಿಚಾರಣೆಯನ್ನು ಸೆಪ್ಟೆಂಬರ್ 21ರಂದು ನಡೆಸಲು ಸುಪ್ರೀಂ ಕೋರ್ಟ್ ಗುರುವಾರ ಒಪ್ಪಿಗೆ ಸೂಚಿಸಿದೆ. ಮುಖ್ಯ ನ್ಯಾಯಮೂರ್ತಿ ಸೂರ್ಯಕಾಂತ್...

ಕೇರಳ | ಮಿತಿಗಿಂತ ಹೆಚ್ಚು ಮದ್ಯ ಸಂಗ್ರಹ ಆರೋಪ : ರಿಪೋರ್ಟರ್ ಟಿವಿ ಎಂಡಿ ಆಂಟೋ ಆಗಸ್ಟಿನ್ ಬಂಧನ

ಕೇರಳ ಅಬಕಾರಿ ಇಲಾಖೆಯು ಮಲಯಾಳಂ ಸುದ್ದಿ ವಾಹಿನಿ 'ರಿಪೋರ್ಟರ್ ಟಿವಿ'ಯ ವ್ಯವಸ್ಥಾಪಕ ನಿರ್ದೇಶಕ (ಎಂಡಿ) ಆಂಟೋ ಆಗಸ್ಟಿನ್ ಅವರನ್ನು ಗುರುವಾರ (ಸೆ.17) ಮುಂಜಾನೆ ಬಂಧಿಸಿದೆ. ಎರ್ನಾಕುಲಂನಲ್ಲಿರುವ ಸುದ್ದಿ ವಾಹಿನಿಯ ಕಚೇರಿಯಿಂದ ಮುಂಜಾನೆ ಸುಮಾರು...

ದೆಹಲಿ: ಜಾಮೀನು ಸಿಕ್ಕ ಬೆನ್ನಲ್ಲೇ ಸ್ವತಂತ್ರ ಭಾರದ್ವಾಜ್ ವಿಡಿಯೋ ವೈರಲ್; ಷರತ್ತು ಉಲ್ಲಂಘನೆ ಆರೋಪ!

ಜಂತರ್ ಮಂತರ್‌ನಲ್ಲಿ ದಲಿತ ವಿದ್ಯಾರ್ಥಿ ಹೋರಾಟಗಾರ್ತಿ ನಿಶು ಆಜಾದ್ ಅವರ ತಂದೆಯ ಮೇಲೆ ಹಲ್ಲೆ ನಡೆಸಿದ ಆರೋಪದಲ್ಲಿ ಬಂಧಿತರಾಗಿದ್ದ ಹಿಂದುತ್ವ ಪ್ರಭಾವಿ ಸ್ವತಂತ್ರ ಭಾರದ್ವಾಜ್ ಅವರಿಗೆ ದೆಹಲಿ ನ್ಯಾಯಾಲಯ ಮೂರು ವಾರಗಳ ಮಧ್ಯಂತರ...

ಸರ್ಕಾರದ ಹಸ್ತಕ್ಷೇಪದಿಂದ ಕ್ಯಾಂಪಸ್ ನಿರ್ಬಂಧದವರೆಗೆ: ಭಾರತದಲ್ಲಿ ಶೈಕ್ಷಣಿಕ ಸ್ವಾತಂತ್ರ್ಯದ ಕುಸಿತ ಬಯಲಿಗೆಳೆದ ಜಾಗತಿಕ ವರದಿ 

ಭಾರತದಲ್ಲಿ ಶೈಕ್ಷಣಿಕ ಸ್ವಾತಂತ್ರ್ಯವು ತೀವ್ರವಾಗಿ ನಿರ್ಬಂಧಿತವಾಗಿದ್ದು, ಉನ್ನತ ಶಿಕ್ಷಣ ಸಂಸ್ಥೆಗಳ ಮೇಲೆ ಸರ್ಕಾರದ ಹೆಚ್ಚುತ್ತಿರುವ ಹಸ್ತಕ್ಷೇಪ, ಕ್ಯಾಂಪಸ್‌ಗಳಲ್ಲಿ ಶೈಕ್ಷಣಿಕ ಮತ್ತು ರಾಜಕೀಯ ಅಭಿವ್ಯಕ್ತಿಯ ಮೇಲಿನ ನಿರ್ಬಂಧಗಳು, ವಿದ್ವಾಂಸರು ಹಾಗೂ ವಿದ್ಯಾರ್ಥಿಗಳ ವಿರುದ್ಧದ ಕ್ರಮಗಳು...

ಬಿಹಾರ| ದಲಿತ ಯುವಕನ ವಿವಾಹವಾದ ಯುವತಿ; ಮಗಳ ಸಾಂಕೇತಿಕ ಅಂತ್ಯಕ್ರಿಯೆ ನಡೆಸಿದ ಪೋಷಕರು

ತಮ್ಮ 18 ವರ್ಷದ ಮಗಳು ಅಂತರ್ಜಾತಿ ವಿವಾಹವಾಗಿದ್ದಕ್ಕೆ ತೀವ್ರ ಆಕ್ರೋಶ ವ್ಯಕ್ತಪಡಿಸಿರುವ ಪೋಷಕರು, ಆಕೆಗೆ ಸಾಂಕೇತಿಕವಾಗಿ ಅಂತ್ಯಕ್ರಿಯೆ ನಡೆಸಿದ ಘಟನೆ ಬಿಹಾರದ ಪೂರ್ಣಿಯಾದಲ್ಲಿ ಬೆಳಕಿಗೆ ಬಂದಿದೆ. ಯುವತಿಯ ಫೋಟೋವಿರುವ ಪ್ರತಿಕೃತಿಯನ್ನು ಸಿದ್ಧಪಡಿಸಿ ಊರಿನಲ್ಲಿ ಶವಯಾತ್ರೆ...

ಸ್ವಇಚ್ಛೆಯಿಂದ ಇಸ್ಲಾಂ ಸ್ವೀಕಾರ : ಆಯುಷ್ ಮಲಿಕ್‌ರನ್ನು ಗೃಹಬಂಧನದಿಂದ ಬಿಡುಗಡೆಗೊಳಿಸಿದ ಅಲಹಾಬಾದ್ ಹೈಕೋರ್ಟ್

ತಾನು ಸ್ವಇಚ್ಛೆಯಿಂದ ಇಸ್ಲಾಂ ಧರ್ಮವನ್ನು ಸ್ವೀಕರಿಸಿರುವುದಾಗಿ ಮತ್ತು ಆ ನಂತರ ತನ್ನ ತಂದೆಯೇ ತನಗೆ ಬೆದರಿಕೆ ಹಾಕಿ, ಕಾನೂನುಬಾಹಿರವಾಗಿ ಗೃಹಬಂಧನದಲ್ಲಿ ಇರಿಸಿದ್ದರು ಎಂದು ಆರೋಪಿಸಿದ್ದ ಆಯುಷ್ ಮಲಿಕ್ ಎಂಬ 31 ವರ್ಷದ ಯುವಕನನ್ನು...

ಬಿಜ್ನೋರ್‌ನಲ್ಲಿ ಮುಸ್ಲಿಂ ಶಿಕ್ಷಕನ ಗುಂಡಿಕ್ಕಿ ಹತ್ಯೆ: ‘ಲವ್ ಜಿಹಾದ್’ ಆರೋಪ; ವೈಯಕ್ತಿಕ ದ್ವೇಷದ ಬಗ್ಗೆಯೂ ಪೊಲೀಸರಿಂದ ತನಿಖೆ 

ಬಿಜ್ನೋರ್: ಉತ್ತರ ಪ್ರದೇಶದ ಬಿಜ್ನೋರ್ ಜಿಲ್ಲೆಯಲ್ಲಿ 43 ವರ್ಷದ ಮುಸ್ಲಿಂ ಸರ್ಕಾರಿ ಪ್ರಾಥಮಿಕ ಶಾಲಾ ಶಿಕ್ಷಕನೊಬ್ಬರನ್ನು ರೈತನೊಬ್ಬ ಗುಂಡಿಕ್ಕಿ ಹತ್ಯೆ ಮಾಡಿರುವ ಘಟನೆ ನಡೆದಿದೆ. ಶಿಕ್ಷಕ ನೌಶಾದ್ ಅಹ್ಮದ್ ಅವರು ‘ಲವ್ ಜಿಹಾದ್’...